ಮಡಿಕೇರಿ, NEWS DESK ಮಾ.5 : ಕೊಡಗು ಮುಸ್ಲಿಂ ಸ್ಟೋಟ್ಸ್ ಟ್ರಸ್ಟ್ ವತಿಯಿಂದ 21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಮೇ 2ರಿಂದ 10 ರವರೆಗೆ ಆಯೋಜಿಸಲಾಗಿದೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಆದಂ ಎಸ್.ಕುಶಾಲನಗರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಶಾಲನಗರದ ಗುಂಡುರಾವ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಹಾಗೂ ಮೊದಲನೇ ವರ್ಷದ ಪುರುಷರ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿದೆ ಎಂದರು. ಈ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟವನ್ನು ಕೊಡಗು ಮುಸ್ಲಿಂ ಸ್ಪೋಟ್ಸ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗುತ್ತಿದೆ. ಕ್ರೀಡಾಕೂಟದಲ್ಲಿ ಸುಮಾರು 150 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಕ್ರಿಕೆಟ್ ಪಂದ್ಯಾಟದ ಪ್ರಥಮ ನಗದು ಬಹುಮಾನ ರೂ.1,11,111/- ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 66,666/- ಹಾಗೂ ಆಕರ್ಷಕ ಟ್ರೋಫಿ, ತೃತೀಯ ಬಹುಮಾನ 33,333/-ಹಾಗೂ ಆಕರ್ಷಕ ಟ್ರೋಫಿ, ಚತುರ್ಥ ಬಹುಮಾನ 22,222/- ಹಾಗೂ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಗುತ್ತದೆ. ಪುರುಷರ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ…
ಲೇಖಕ: admin
ಮಡಿಕೇರಿ, NEWS DESK ಮಾ.5 : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಬಳಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿದ್ದ 39 ಸಾವಿರ ಕೋಟಿ ರೂ.ಗಳನ್ನು ಹಿಂದಿರುಗಿಸಲು ಸರಕಾರ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಕೊಡಗಿನ ಗಡಿಭಾಗದ ಗೇಟ್ಗಳನ್ನು ಬಂದ್ ಮಾಡಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೋರ್ಚಾ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ರಾಜ್ಯದ ಕಾಂಗ್ರೆಸ್ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜಾತಿ ಉಪ ಯೋಜನೆಗಳಿಗೆ ಮೀಸಲಾಗಿದ್ದ ಹಣವನ್ನು ಪಂಚ ಗ್ಯಾರಂಟಿಗಳಿಗೆ ಬಳಕೆ ಮಾಡಿದೆ. ಅಲ್ಲದೆ ಮುಂಬರುವ ರಾಜ್ಯ ಬಜೆಟ್ನಲ್ಲಿ ಪರಿಶಿಷ್ಟರಿಗೆ ಮೀಸಲಾಗಿದ್ದ ಹಣದಲ್ಲಿ ಉಳಿಕೆಯಾಗಿರುವ 15 ಸಾವಿರ ಕೋಟಿ ರೂ.ಗಳನ್ನು ಬಳಸಿಕೊಳ್ಳಲು ಮುಂದಾಗುತ್ತಿದೆ ಎನ್ನುವ ಮಾಹಿತಿ ಇದೆ. ಯಾವುದೇ ಕಾರಣಕ್ಕೂ ಶೋಷಿತ ಸಮುದಾಯದ ಕಲ್ಯಾಣಕ್ಕೆ ಮೀಸಲಾದ ಹಣವನ್ನು ದುರ್ಬಳಕೆ ಮಾಡಬಾರದು. ಬಜೆಟ್ ಗೂ…
ಮಡಿಕೇರಿ, NEWS DESK ಮಾ.05:-ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮ ಕುರಿತು ಶಾಲಾ ಕಾಲೇಜು ಹಂತದಲ್ಲಿ ಮತ್ತಷ್ಟು ಹೆಚ್ಚಿನ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದರು. ವೈದ್ಯಕೀಯ ಶಿಕ್ಷಣ, ಎಂಜಿನಿಯರಿಂಗ್, ಡೆಂಟಲ್ ಸೇರಿದಂತೆ ಪದವಿ ಮತ್ತು ಸ್ಮಾತಕೋತ್ತರ ಕಾಲೇಜುಗಳಲ್ಲೂ ಸಹ ಅರಿವು ಮೂಡಿಸಬೇಕು. ರಜೆ ಅವಧಿಯಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ವಾರಕ್ಕೆ ಮೂರು ದಿನವಾದರೂ ವಿವಿಧ ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಬೇಕು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೂ ಮಾಹಿತಿ ನೀಡಿ ಅವರ ಸಲಹೆ ಮಾರ್ಗದರ್ಶನ ಪಡೆಯುವಂತಾಗಬೇಕು ಎಂದು…
ಮಡಿಕೇರಿ ಮಾಚ್೯ 05 – ನಗರದ ಶ್ರೀ ಕೋದಂಡ ರಾಮದೇವಾಲಯ ಸಮಿತಿ ವತಿಯಿಂದ ಮಾಚ್೯ 28 ರಂದು ಶನಿವಾರ ಆಯೋಜಿತ ಶ್ರೀ ರಾಮನವಮಿ ಮಹೋತ್ಸವದ ಅಂಗವಾಗಿನ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಸಕ್ತ ಕಲಾತಂಡಗಳಿಂದ ಅಜಿ೯ ಆಹ್ವಾನಿಸಲಾಗಿದೆ. ನಗರದ ಗಾಂಧಿ ಮೈದಾನದಲ್ಲಿ ಮಾಚ್೯ 28 ರಂದು ಶನಿವಾರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಆಯೋಜಿತ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಜಿಲ್ಲೆಯ ಕಲಾವಿದರು, ಕಲಾತಂಡಗಳು ಪ್ರದಶ೯ನಕ್ಕೆ ಅಜಿ೯ ಸಲ್ಲಿಸಬಹುದು. ಭಕ್ತಿ ಮತ್ತು ದೇಶ ಪ್ರೇಮ ಸಂಬಂಧಿತ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆದ್ಯತೆ. 1 ತಂಡಕ್ಕೆ ಕನಿಷ್ಟ 10 ನಿಮಿಷಗಳು ಮಾತ್ರ ಪ್ರದಶ೯ನಕ್ಕ ಅವಕಾಶ ಇರುತ್ತದೆ. ಸಾಂಸ್ಕೖತಿಕ ಸಮಿತಿಯ ಆಯ್ಕೆಯೇ ಅಂತಿಮವಾಗಿದ್ದು, ಅಜಿ೯ ಸಲ್ಲಿಸಲು ಮಾಚ್೯ 12 ಕೊನೇ ದಿನವಾಗಿದೆ. ಅಜಿ೯ಗಳನ್ನು ಶ್ರೀ ರಾಮೋತ್ಸವ ಸಾಂಸ್ಕೖತಿಕ ಕಾಯ೯ಕ್ರಮ ಸಮಿತಿ , ಕೇರಾಫ್ ಅಮೂಲ್ಯ ಎಂಟರ್ ಪ್ರೈಸರ್, ಶ್ರೀ ಓಂಕಾರೇಶ್ವರ ದೇವಾಲಯ ರಸ್ತೆ ಮಡಿಕೇರಿ – 571201 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್…
ಮಡಿಕೇರಿ, NEWS DESK ಮಾ.05:-ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಅಧ್ಯಕ್ಷರಾದ ಪರಶುರಾಮ್ ಸಂಪತ್ ಕುಮಾರ್ ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ನಗರದ ಹೊರವಲಯದಲ್ಲಿರುವ ದಿ ಕ್ಯಾಪಿಟಲ್ ವಿಲೇಜ್ ರೆಸಾರ್ಟ್ನಲ್ಲಿ ಗುರುವಾರ ಚಿತ್ರ ಬಿಡಿಸುವ ಮೂಲಕ ಚಾಲನೆ ನೀಡಿದರು. ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ಮಾರ್ಚ್, 08 ರವರೆಗೆ ನಡೆಯುವ ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಅಧ್ಯಕ್ಷರಾದ ಪ.ಸ.ಕುಮಾರ್ ಅವರು ಮುಂಬಯಿ ಅಲ್ಲಿರುವ ಜೆ.ಜೆ.ಚಿತ್ರಕಲೆ ಶಾಲೆಯ ಮಾದರಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಕಲಾ ಗ್ಯಾಲರಿ’ ಆರಂಭಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಮಹಾರಾಷ್ಟ್ರದ ಜೆಜೆ ಟಾಟಾ ಕಲಾಶಾಲೆಯಲ್ಲಿ ಕಲಿತಿರುವ ಕಲಾವಿದರ ಭಾವಚಿತ್ರ ರಚನಾ ಕ್ರಮವನ್ನು ರಾಜ್ಯದಲ್ಲಿಯೂ ಸಹ ಅಳವಡಿಸುವಂತಾಗಬೇಕು ಎಂದು ಅವರು ಕೋರಿದರು. ರಾಷ್ಟ್ರ ಮತ್ತು ಅಂತರರಾಷ್ಟ್ರ ಮಟ್ಟದಲ್ಲಿ ಚಿತ್ರಕಲೆಗಳಲ್ಲಿ ಆಸಕ್ತರು ತೊಡಗಿಸಿಕೊಳ್ಳುವಂತಾಗಬೇಕು. ಇದರಿಂದ ಪ್ರಾಚೀನದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಚಿತ್ರಕಲೆಗಳ ಮೂಲಕ…
ಮಡಿಕೇರಿ, NEWS DESK ಮಾ.5 : ವಿಶ್ವದ ಕ್ರೀಡಾಕ್ಷೇತ್ರದ ಗಮನ ಸೆಳೆದಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಉತ್ಸವವನ್ನು ಈ ಬಾರಿ ಕೋಕೇರಿ ಗ್ರಾಮದ ಚೇನಂಡ ಕುಟುಂಬಸ್ಥರು ಆಯೋಜಿಸಿದ್ದಾರೆ. ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಹಬ್ಬ ನಡೆಯಲಿದ್ದು, ತಂಡಗಳು ಹೆಸರು ನೋಂದಾಯಿಸಿಕೊಳ್ಳಲು ಮಾ.20 ಕೊನೆಯ ದಿನವಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಕಿ ಉತ್ಸವದ ಕಾರ್ಯದರ್ಶಿ ಸಿ.ಎಸ್.ಮಧು ಮಾದಯ್ಯ ನಾಪೋಕ್ಲುವಿನಲ್ಲಿ ಒಟ್ಟು ನಾಲ್ಕು ಮೈದಾನಗಳಲ್ಲಿ ವಿಜೃಂಭಣೆಯಿಂದ ನಡೆಯುವ 26ನೇ ವರ್ಷದ ಚೇನಂಡ ಕಪ್ ಹಾಕಿ ಉತ್ಸವದ ಕುರಿತು ಮಾಹಿತಿ ನೀಡಿದರು. ಈ ಬಾರಿಯ ಹಾಕಿ ಉತ್ಸವದಲ್ಲಿ 400 ಪುರುಷ ಹಾಗೂ 120 ಮಹಿಳಾ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮೂರು ಮೈದಾನಗಳ ತಯಾರಿ ಕಾರ್ಯ ಭರದಿಂದ ಸಾಗಿದ್ದು, 4ನೇ ಮೈದಾನವನ್ನು ಕುಂಡ್ಯೋಳಂಡ ಕುಟುಂಬಸ್ಥರು ನಿರ್ಮಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ 33 ನೋಂದಣಿ ಕೇಂದ್ರಗಳಲ್ಲಿ ತಂಡಗಳ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಆನ್ ಲೈನ್ ಮೂಲಕವೂ ನೋಂದಾಯಿಸಿಕೊಳ್ಳಬಹುದಾಗಿದ್ದು,…
ಬೆಂಗಳೂರು, ಮಾರ್ಚ್ 5, 2026: ರಾಜ್ಯದ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರಬಲ್ಲ ವಿದ್ಯುತ್ ದರ ಪರಿಷ್ಕರಣೆಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಬುಧವಾರ ಪ್ರಕಟಿಸಿದೆ. ಹೊಸ ಆದೇಶದ ಪ್ರಕಾರ, ವಾಣಿಜ್ಯ ಮತ್ತು ಕೈಗಾರಿಕಾ ಉದ್ದೇಶದ ವಿದ್ಯುತ್ ದರವನ್ನು ಏರಿಕೆ ಮಾಡಲಾಗಿದ್ದು, ಕೃಷಿ ಉದ್ದೇಶದ ಪಂಪ್ಸೆಟ್ಗಳ ದರವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದೆ. ಈ ಪರಿಷ್ಕೃತ ದರಗಳು ಏಪ್ರಿಲ್ 2025 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿವೆ. ರೈತರಿಗೆ ಸಿಹಿ ಸುದ್ದಿ: ಪಂಪ್ಸೆಟ್ ದರ ಇಳಿಕೆ ಕೃಷಿ ವಲಯಕ್ಕೆ ಆಸರೆಯಾಗುವ ನಿಟ್ಟಿನಲ್ಲಿ ಆಯೋಗವು ಕೃಷಿ ಪಂಪ್ಸೆಟ್ಗಳ (IP Sets) ವಿದ್ಯುತ್ ದರವನ್ನು ರಾಜ್ಯಾದ್ಯಂತ ಪ್ರತಿ ಯೂನಿಟ್ಗೆ 8.30 ರೂ.ಗಳಿಂದ 6.57 ರೂ.ಗಳಿಗೆ ಇಳಿಕೆ ಮಾಡಿದೆ. ವಿವಿಧ ಎಸ್ಕಾಂಗಳ ದರ ವಿವರ: * ಮೆಸ್ಕಾಂ (MESCOM): 7.40 ರೂ. ಚೆಸ್ಕಾಂ (CHESCOM): 7.70 ರೂ. ಹೆಸ್ಕಾಂ (HESCOM): 7.73 ರೂ. ಜೆಸ್ಕಾಂ (GESCOM): 7.79 ರೂ. ಬೆಸ್ಕಾಂ ಚಾಣಾಕ್ಷ ತಂತ್ರ: ಅತಿ ಹೆಚ್ಚು ಪಂಪ್ಸೆಟ್ಗಳನ್ನು ಹೊಂದಿರುವ…
ಟೆಹ್ರಾನ್, ಮಾರ್ಚ್ 1, 2026: ಇಸ್ರೇಲ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಯಲ್ಲಿ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾದ ಬೆನ್ನಲ್ಲೇ ಇರಾನ್ ತಲ್ಲಣಗೊಂಡಿದೆ. ಈ ಭೀಕರ ದಾಳಿಗೆ ಪ್ರತಿಯಾಗಿ “ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಆಕ್ರಮಣಕಾರಿ ಕಾರ್ಯಾಚರಣೆ” ನಡೆಸುವುದಾಗಿ ಇರಾನ್ನ ರೆವೆಲ್ಯೂಷನರಿ ಗಾರ್ಡ್ಸ್ (IRGC) ಪ್ರತಿಜ್ಞೆ ಮಾಡಿದೆ. ಅರಾಫಿ ಹೆಗಲಿಗೆ ನಾಯಕತ್ವದ ಜವಾಬ್ದಾರಿ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿ ಅಧಿಕಾರಕ್ಕೆ ಬರಲಿದ್ದಾರೆ ಎಂಬ ವದಂತಿಗಳ ನಡುವೆ, ಗಾರ್ಡಿಯನ್ ಕೌನ್ಸಿಲ್ನ ಪ್ರಭಾವಿ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ (67) ಅವರನ್ನು ಇರಾನ್ನ ಮಧ್ಯಂತರ ಸರ್ವೋಚ್ಚ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಸರಿಸಮಾನ ಹುದ್ದೆ: ಅರಾಫಿ ಅವರಿಗೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಮತ್ತು ಮುಖ್ಯ ನ್ಯಾಯಮೂರ್ತಿ ಘೋಲಮ್ ಹೊಸೇನ್ ಮೊಹ್ಸೆನಿ ಎಜೆಯ್ ಅವರಿಗೆ ಸಮನಾದ ಅಧಿಕಾರ ನೀಡಲಾಗಿದೆ. ವಿಶ್ವಾಸಾರ್ಹ ನಾಯಕ: 1959ರಲ್ಲಿ ಯಜ್ಡ್ ಪ್ರಾಂತ್ಯದಲ್ಲಿ ಜನಿಸಿದ ಅರಾಫಿ, ಖಮೇನಿ ಅವರ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದವರು. ಯಾರು ಈ ಅಲಿರೆಜಾ ಅರಾಫಿ?…
ಮಡಿಕೇರಿ NEWS DESK ಮಾ.1 : ದಲಿತರ ಸ್ವಾಭಿಮಾನಿ ಸಮಾವೇಶದ ಹೆಸರಿನಲ್ಲಿ ಫೆ.22ರಂದು ಮಡಿಕೇರಿ ನಗರದಲ್ಲಿ ಕಾರ್ಯಕ್ರಮ ಆಯೋಜಿಸಿದ ಸಂಘಟನೆ ಸಾರ್ವಜನಿಕವಾಗಿ ಲೆಕ್ಕಪತ್ರಗಳನ್ನು ಮಂಡಿಸಬೇಕೆಂದು ವಿ.ನಾಗರಾಜ್ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಹೆಚ್.ಎಸ್.ಕೃಷ್ಣಪ್ಪ, ಜಿಲ್ಲಾ ಸಂಘಟನಾ ಸಂಯೋಜಕರಾದ ರಜನಿಕಾಂತ್ ವಿ.ಆರ್, ಹೆಚ್.ಎನ್.ಯೋಗೇಶ್ ಕುಮಾರ್ ಹಾಗೂ ಜಿಲ್ಲಾ ಮಹಿಳಾ ಸಂಯೋಜಕಿ ಓಮನ ಜೆ.ಎಂ ಸ್ವಾಭಿಮಾನಿ ಸಮಾವೇಶದ ಹೆಸರಿನಲ್ಲಿ ಆಯೋಜಕರು ಹಣ ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹಾಗೂ ಕೊಡಗು ಜಿಲ್ಲೆಯ ಇಬ್ಬರು ಶಾಸಕರಿಗೆ ಪ್ರಶಸ್ತಿ ನೀಡುವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾವೇಶದಲ್ಲಿ 5 ಸಾವಿರ ಮಂದಿ ಸೇರಲಿದ್ದಾರೆ. ಸುಮಾರು ನೂರು ಬೈಕ್ ಗಳೊಂದಿಗೆ ಪೂರ್ವಿಕರ ಭಾವಚಿತ್ರವಿರುವ ಬೃಹತ್ ಮೆರವಣಿಗೆ ಸಾಗಲಿದೆ ಎಂದು ಪ್ರಚಾರ ಪಡೆದು ಹಣ ಸಂಗ್ರಹಿಸಿದ್ದಾರೆ. ಅಲ್ಲದೆ 37 ದಲಿತ ಸಂಘಟನೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ ಎಂದು ಸುಳ್ಳು ಹೇಳಿಕೆ…
ಮಡಿಕೇರಿ, NEWS DESK ಮಾ.1 : ನಾಪೋಕ್ಲುವಿನಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದಲ್ಲಿ ನನ್ನ ಪುತ್ರ ಭಾಗಿಯಾಗಿಲ್ಲ, ಆದರೆ, ನನ್ನ ಪುತ್ರ ಗೌತಮ್ ಗೆ ಹಲ್ಲೆ ಮಾಡಿದ್ದಾನೆ ಎಂದು ಕೆಲವು ವ್ಯಕ್ತಿಗಳು ಆರೋಪ ಮಾಡಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಕೆ.ಎ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನನ್ನ ಪುತ್ರನ ವಿರುದ್ಧ ಆರೋಪ ಮಾಡುತ್ತಿರುವವರು ದೇವಸ್ಥಾನದಲ್ಲಿ ಪ್ರಮಾಣ ಮಾಡಿ ‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಹೇಳಿದರೆ, ಶಿಕ್ಷೆಯನ್ನು ನಾನೇ ಕೊಡಿಸುತ್ತೇನೆ ಎಂದು ಸವಾಲೆಸೆದರು. ನಾಪೋಕ್ಲುವಿನಲ್ಲಿ ಪ್ರತಿಭಟನೆ ನಡೆಸುವ ಸಂದರ್ಭ ನನ್ನ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಘಟನೆಗೂ, ನನಗೂ ಏನು ಸಂಬಂಧವಿದೆ ಎಂದು ಪ್ರಶ್ನಿಸಿದರು. ರಾಜಕೀಯ ಲಾಭಕ್ಕಾಗಿ ಘಟನೆಯನ್ನು ಬಳಸುತ್ತಿರುವುದು ತಪ್ಪು, ನನ್ನ ರಾಜೀನಾಮೆ ಕೇಳಲು ಹೈಕಮಾಂಡ್ ಇದ್ದಾರೆ, ಬೇರೆಯವರು ಕೇಳುವ ಅಗತ್ಯವಿಲ್ಲ ಎಂದರು. ನಾಪೋಕ್ಲು ಜಮಾಅತ್ನ ಅಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ ಮಕ್ಕಳ ನಡುವಿನ ಜಗಳವನ್ನು ಧರ್ಮಧರ್ಮಗಳ ನಡುವೆ ತಂದು ಹಾಕಿ…






