ಮಡಿಕೇರಿ ಜೂ.26 NEWS DESK : ಮಲ್ಮ ಬೆಟ್ಟ ಸಮೀಪದ ಜಾಗದಲ್ಲಿ ನಡೆದಿರುವ ಮರಗಳ ಹನನ ಮತ್ತು ಪರಿಸರ ಹಾನಿಯ ವಿರುದ್ಧ ಅರಣ್ಯ ಇಲಾಖೆ ಹಾಗೂ ಗಣಿ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಬೃಹತ್ ಹೋರಾಟವನ್ನು ರೂಪಿಸುವುದಾಗಿ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ನ ಅಧ್ಯಕ್ಷ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಅವರು ಶ್ರೀ ಇಗ್ಗುತ್ತಪ್ಪ ದೇವರ ನೆಲೆ ಕೊಡವರ ಹಾಗೂ ಕೊಡವ ಮೂಲ ನಿವಾಸಿಗಳ ಆಸ್ಮಿತೆ, ನಂಬಿಕೆ ಮತ್ತು ಸಂಸ್ಕøತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಪವಿತ್ರ ಸ್ಥಳವಾಗಿದೆ. ದೇವಾಲಯ ವ್ಯಾಪ್ತಿಯ ಮಲ್ಮ ಬೆಟ್ಟ ಪ್ರದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ಕೊಡವ ಪರಂಪರೆಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಪ್ರದೇಶದಲ್ಲಿ ಈಗಾಗಲೇ ಸಾಕಷ್ಟು ಮರಗಳು, ಬೆತ್ತ ಮತ್ತಿತರ ಸಸ್ಯ ರಾಶಿಗಳನ್ನು ಕಡಿಯಲಾಗಿದ್ದು, ಅರಣ್ಯ ಇಲಾಖೆಯಿಂದ ಅಗತ್ಯ ಅನುಮತಿ ಪಡೆಯಲಾಗಿದೆಯೇ ಎಂಬ ಪ್ರಶ್ನೆ…
ಲೇಖಕ: admin
ಮಡಿಕೇರಿ ಜೂ.26 NEWS DESK : ಶಾಮಿಯಾನ ಮತ್ತು ಡೆಕೋರೇಶನ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡುವ ನಿಟ್ಟಿನಲ್ಲಿ “ಕೊಡಗು ಜಿಲ್ಲಾ ಸೌಂಡ್, ಲೈಟ್, ಶಾಮಿಯಾನ, ಡೆಕೋರೇಶನ್ ಅಸೋಸಿಯೇಷನ್” ಅಸ್ತಿತ್ವಕ್ಕೆ ಬಂದಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೂತನ ಸಂಘಟನೆಯ ಅಧ್ಯಕ್ಷ ಅಜ್ಜೆಟ್ಟಿರ ಲೋಕೇಶ್ ಅವರು, ಜಿಲ್ಲಾ ವ್ಯಾಪ್ತಿಯಲ್ಲಿ ಶಾಮಿಯಾನ ಮತ್ತು ಡೆಕೋರೇಶನ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರನ್ನು ಸಂಘಟಿಸುವ ಉದ್ದೇಶದಿಂದ ಸಂಘಟನೆಯನ್ನು ಆರಂಭಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿನ 80ಕ್ಕೂ ಹೆಚ್ಚು ಮಂದಿ ಈಗಾಗಲೇ ಸದಸ್ಯತ್ವವನ್ನು ಹೊಂದಿಕೊಂಡಿದ್ದಾರೆ ಎಂದರು. ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅವಿನ್ ಕುಮಾರ್ ಮಾತನಾಡಿ, ಶಾಮಿಯಾನ ಮತ್ತು ಡೆಕೋರೇಶನ್ ಗೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ಸುಮಾರು 150 ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಈ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸುವುದು ಮತ್ತು ಆರೋಗ್ಯ ರಕ್ಷಣೆಯ ಕಾರ್ಯಕ್ರಮ ಹಮ್ಮಿಕೊಳ್ಳುವುದು ಸಂಘಟನೆಯ ಉದ್ದೇಶವಾಗಿದೆ ಎಂದು ಹೇಳಿದರು. ಜಾಂಚಿ ಲೋಕೇಶ್ ಹೆಚ್.ಪಿ. ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿ ಪರವಾನಗಿ ಪಡೆದು ಕಾರ್ಯನಿರ್ವಹಿಸುತ್ತಿರುವ ಸೌಂಡ್, ಲೈಟ್, ಶಾಮಿಯಾನ ಸಂಸ್ಥೆಗಳಿಗಷ್ಟೆ…
ಮಡಿಕೇರಿ NEWS DESK ಜೂ.26 : ಭಾರತದ ಬಹುತ್ವವನ್ನು ಕಾಪಾಡಿಕೊಳ್ಳಲು ಕೊಡವರ ವಿಶಿಷ್ಟ ಗುರುತನ್ನು ರಕ್ಷಿಸುವುದು ಅತ್ಯಗತ್ಯ. ನಿಜವಾದ ಒಕ್ಕೂಟ ವ್ಯವಸ್ಥೆಯಲ್ಲಿ ಕೊಡವರಿಗೆ ಸಾಂವಿಧಾನಿಕ ರಕ್ಷಣೆಯನ್ನು ನೀಡುವ ಅಗತ್ಯವಿದೆ. ಇದು ಭಾರತೀಯ ಸಂವಿಧಾನದ ಚೌಕಟ್ಟಿನೊಳಗೆ ಒಂದು ಕಾನೂನುಬದ್ಧ ಬೇಡಿಕೆಯಾಗಿದೆ ಎಂದು ಸುಪ್ರೀಂ ಕೋರ್ಟ್ ವಕೀಲ ವಿಕ್ರಮ್ ಹೆಗ್ಡೆ ಅವರು ಪ್ರತಿಪಾದಿಸಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಆಶ್ರಯದಲ್ಲಿ ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ಶುಕ್ರವಾರ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು. ಕಾರ್ಯಕ್ರಮದಲ್ಲಿ “ಕೊಡವ ಧಾರ್ಮಿಕ ಆಚರಣೆ, ‘ಕೋವಿ-ತೋಕ್” ವಿಧಿ 25 ಮತ್ತು 26ರ ಅಡಿಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆ” ಕುರಿತು ವಿಷಯ ಮಂಡಿಸಿದ ವಿಕ್ರಮ್ ಹೆಗ್ಡೆ ಅವರು ಕೊಡಗನ್ನು ವ್ಯವಸ್ಥಿತವಾಗಿ ದೊಡ್ಡ ಕ್ಷೇತ್ರಗಳೊಂದಿಗೆ ವಿಲೀನಗೊಳಿಸಲಾಗಿದೆ. ಮುಂಬರುವ ಕ್ಷೇತ್ರ ಪುನರ್ವಿಂಗಡಣೆಯ ಸಂದರ್ಭ ಕೊಡಗಿಗೆ ಪ್ರತ್ಯೇಕ ಲೋಕಸಭಾ ಸ್ಥಾನವನ್ನು ಕಲ್ಪಿಸುವುದಕ್ಕೆ ಪೂರಕವಾಗಿ ಚುನಾವಣಾ ಆಯೋಗಕ್ಕೆ ದತ್ತಾಂಶ ಆಧಾರಿತ, ವಸ್ತುನಿಷ್ಠ…
ಮಡಿಕೇರಿ ಜೂ.25 NEWS DESK : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಜೂನ್, 30, ಜುಲೈ, 01 ಮತ್ತು 02 ರಂದು ಹಮ್ಮಿಕೊಂಡಿದ್ದ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ಮಾರುತಿ ವಿ.ಎಸ್. ಅವರು ತಿಳಿಸಿದ್ದಾರೆ.
ಮಡಿಕೇರಿ ಜೂ.25 NEWS DESK : ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಬಿ.ಐ.ಚಿತ್ರಾವತಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ಅವಾರ್ಡ್ (Florence Nightingale Award)- 2026 ಲಭಿಸಿದೆ. ನರ್ಸಿಂಗ್ ಕ್ಷೇತ್ರದಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಗೆ ಈ ಪ್ರಶಸ್ತಿ ಲಭಿಸಿದ್ದು, ಆರೋಗ್ಯ ಸಚಿವರಾದ ಯು.ಟಿ.ಖಾದರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬಿ.ಐ.ಚಿತ್ರಾವತಿ ಅವರ ಸಾಧನೆಗೆ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಶ್ಲಾಘನೆ ವ್ಯಕ್ತಪಡಿಸಿದೆ.
ವಿರಾಜಪೇಟೆ ಜೂ.25 NEWS DESK : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕು. ಅದಕ್ಕಾಗಿ ಮಾದಕ ದ್ರವ್ಯಗಳ ವಿರುದ್ಧ ಯುದ್ಧ ಸಾರಬೇಕಿದೆ ಎಂದು ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಅವರು ಹೇಳಿದರು. ಕೊಡಗು ಜಿಲ್ಲಾ ಪೋಲಿಸ್ ಇಲಾಖೆ, ವಿರಾಜಪೇಟೆ ಪೋಲಿಸ್ ಠಾಣೆ ಹಾಗೂ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾದಕ ವಸ್ತುಗಳ ಸೇವನೆಯ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳು ಉತ್ತಮ ಸ್ನೇಹಿತರ ಗೆಳೆತನವನ್ನು ಮಾಡಬೇಕು. ಭವ್ಯ ಭಾರತದಲ್ಲಿ ಯುವ ಜನತೆಯ ಮೇಲೆ ಅಪಾರ ನಿರೀಕ್ಷೆಯಿದ್ದು ಡ್ರಗ್ ನಿರ್ಮೂಲನೆಯನ್ನು ಮಾಡಿ ಎಂದು ಹೇಳಿದರು. ಡ್ರಗ್ಸ್ ಪ್ರಪಂಚದಲ್ಲಿ ಅತೀ ದೊಡ್ಡ ಸಾಮಾಜಿಕ ಪಿಡುಗು ಆಗಿದ್ದು ಅದರ ನಿರ್ಮೂಲನೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು. ಪೊಲೀಸ್ ಇಲಾಖೆಯ ವತಿಯಿಂದ ಸನ್ಮಿತ್ರ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದ್ದು ಡ್ರಗ್ಸ್ ನಿರ್ಮೂಲನೆಗೆ ಸಹಕಾರಿಯಾಗಿದೆ ಎಂದು ಹೇಳಿದರು. ಮಾದಕ ವಸ್ತುಗಳು ಸೇವನೆಯ ದಾಸರಾಗದೇ ನಿಮ್ಮ ಕನಸು,…
ಮಡಿಕೇರಿ ಜೂ.25 NEWS DESK : ತಾಲ್ಲೂಕಿನ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ವತಿಯಿಂದ 2026-27ನೇ ಶೈಕ್ಷಣಿಕ ವರ್ಷಕ್ಕೆ ಗುತ್ತಿಗೆ ಮತ್ತು ದಿನಗೂಲಿ ಆಧಾರದ ಮೇಲೆ ಪಿಜಿಟಿ ಭೂಗೋಳ, ಟಿಜಿಟಿ ಸಮಾಜ ವಿಜ್ಞಾನ, ಟಿಜಿಟಿ ಸಂಗೀತ, ಜೆಎಸ್ಎ, ಎಂಟಿಎಸ್, ಮೇಟ್ರನ್, ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಕೊಡಗು ಜಿಲ್ಲೆಯ ಮಡಿಕೇರಿಯ ಗಾಳಿಬೀಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಜುಲೈ, 04 ರಂದು ಬೆಳಗ್ಗೆ 10:30 ಕ್ಕೆ ವಾಕ್-ಇನ್ ಸಂದರ್ಶನಕ್ಕೆ ಹಾಜರಾಗಲು ಅಭ್ಯರ್ಥಿ ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳು: ಕೇಂದ್ರ ಸರ್ಕಾರದ ಶಿಕ್ಷಕರ ನೇಮಕಾತಿಯ ಪ್ರಕಾರ. ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಮಾನದಂಡಗಳ ಪ್ರಕಾರ. ಎನ್ವಿಎಸ್ನ ನೇಮಕಾತಿ ನಿಯಮಗಳ ಪ್ರಕಾರ. ಹೆಚ್ಚಿನ ಮಾಹಿತಿಗೆ ದೂ.ಸಂ. 9611862835, 9448215623 ಮತ್ತು 9449379654 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಜೂ.25 NEWS DESK : ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಶಕ್ತಿ ಯೋಜನೆ: ಶಕ್ತಿ ಯೋಜನೆಯಿಂದ ಕೆಲಸ ಮಾಡುವ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದ್ದು, ಗೋಣಿಕೊಪ್ಪದಿಂದ-ಮೈಸೂರು, ಬೆಂಗಳೂರು ಮಾರ್ಗವಾಗಿ ಚಲಿಸುವ ಬಸ್ಸುಗಳ ಸಂಖ್ಯೆಯನ್ನು ರಜಾ ದಿನಗಳಲ್ಲಿ ಹೆಚ್ಚುವರಿ ಮಾಡಿ, ಸಾರ್ವಜನಿಕರು ರಜಾ ದಿನಗಳಲ್ಲಿ ಈ ಮಾರ್ಗವಾಗಿ ಹೆಚ್ಚು ಪ್ರಯಾಣಿಸುತ್ತಾರೆ. ನೂಕು-ನುಗ್ಗಲುಗಳಂತಹ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು ಕೂಡಲೇ ಹೆಚ್ಚುವರಿ ಬಸ್ಸುಗಳನ್ನು ನಿಯೋಜಿಸಿ ಸಮಸ್ಯೆ ಬಗೆಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಬಸ್ಸುಗಳಲ್ಲಿ ಟಿಕೇಟ್ ಪಡೆಯಲು ಫೋನ್ ಪೇ ಮಾತ್ರ ಬಳಕೆಯಲಿದ್ದು, ಗೂಗಲ್ ಪೇ ತಾಂತ್ರಿಕ ಸಮಸ್ಯೆ ಎಂದು ಬರುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆಯನ್ನು ಕಲ್ಪಿಸಲು ತಿಳಿಸಲಾಯಿತು. ಯುವನಿಧಿ: ಪೊನ್ನಂಪೇಟೆ ತಾಲ್ಲೂಕಿನಲ್ಲಿ ಡಿಪ್ಲೋಮಾ ಹಾಗೂ ಐ.ಟಿ.ಐ.ಕಾಲೇಜುಗಳಿದ್ದು ಇಂತಹ ವಿದ್ಯಾರ್ಥಿಗಳನ್ನು ಹೆಚ್ಚು ನೊಂದಣಿ ಮಾಡಿಸಿ. ಇಲಾಖೆಯಿಂದ ಹೆಚ್ಚಿನ ಪ್ರಚಾರ ಮಾಡಬೇಕು,…
ಮಡಿಕೇರಿ NEWS DESK ಜೂ.25 : ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಹಣ ದುರುಪಯೋಗವಾಗಿದೆ ಮತ್ತು ಅನರ್ಹರ ಪಾಲಾಗಿದೆ ಎನ್ನುವುದು ಈಗಾಗಲೇ ಸಾಬೀತಾಗಿದೆ. ಕೊಡಗು ಜಿಲ್ಲೆಯಲ್ಲೂ ನಡೆದಿರಬಹುದಾದ ಇಂತಹ ಪ್ರಕರಣಗಳ ಬಗ್ಗೆ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಂಕಿ ಅಂಶ ಸಹಿತ ಸತ್ಯವನ್ನು ಜನರೆದುರು ಬಹಿರಂಗ ಪಡಿಸಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗೃಹಲಕ್ಷ್ಮಿ ಯೋಜನೆಗೆ ಸಂಬoಧಿಸಿದoತೆ ಸೋರಿಕೆ ತಡೆಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಷ್ಕರಣೆಯ ಅಸ್ತ್ರ ಬಳಸಿದ್ದಾರೆ. ಇದನ್ನು ಗಮನಿಸಿದರೆ ಅವರಿಗೆ ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಸಂದಾಯವಾದ ಹಣದ ಬಗ್ಗೆ ಸಂಶಯ ವ್ಯಕ್ತವಾದಂತೆ ಕಾಣುತ್ತಿದೆ ಎಂದು ಟೀಕಿಸಿದ್ದಾರೆ. ನೂತನ ಸಿಎಂ ಪರಿಷ್ಕರಣೆಯ ನಿರ್ಧಾರ ಕೈಗೊಂಡಿರುವುದನ್ನು ನೋಡಿದರೆ ಈ ಯೋಜನೆಯಡಿ ವ್ಯಾಪಕ ಭ್ರಷ್ಟಾಚಾರ ನಡೆದಂತೆ ಕಂಡು ಬರುತ್ತಿದೆ. ರಾಜ್ಯದ ವಿವಿಧೆಡೆ ಅಪಾರ ಹಣ ಅನರ್ಹರ ಪಾಲಾಗಿರುವುದು ಈಗಾಗಲೇ ಬಹಿರಂಗವಾಗಿದೆ. ಆದರೆ…
ಮಡಿಕೇರಿ ಜೂ.24 NEWS DESK : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಜೂನ್, 30, ಜುಲೈ, 01 ಮತ್ತು 02 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಧ್ಯಕ್ಷರು ಜೂನ್, 30 ರಂದು ಬೆಳಗ್ಗೆ 9.15 ಗಂಟೆಗೆ ಪೊನ್ನಂಪೇಟೆ ತಾಲ್ಲೂಕಿನ ನಾಗರಹೊಳೆಗೆ ಆಗಮಿಸಿ ನಾಗರಹೊಳೆ ಅರಣ್ಯ ವಾಸಿಗಳು ವಾಸಿಸುವ ಹಾಡಿಗೆ ಭೇಟಿ ನೀಡಲಿದ್ದಾರೆ. ನಂತರ ನಾಗರಹೊಳೆ ಗದ್ದೆಹಾಡಿ ಮತ್ತು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳಗ್ಗೆ 11.30 ಗಂಟೆಗೆ ತಿತಿಮತಿ ಗ್ರಾಮದ ಆನೆ ಮಾವುತರು ವಾಸಿಸುವ ಹಾಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ತಿತಿಮತಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 3.30 ಗಂಟೆಗೆ ವಿರಾಜಪೇಟೆಯಲ್ಲಿ ವಸತಿ ಶಾಲೆಗೆ ಭೇಟಿ ನೀಡಲಿದ್ದಾರೆ. ಸಂಜೆ 4.30 ಗಂಟೆಗೆ…






