ಲೇಖಕ: admin

ವಿರಾಜಪೇಟೆ ಜ.21 NEWS DESK : ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಪ್ರಾಧ್ಯಾಪಕ ಪ್ರೊ.ಕೆ.ಬಸವರಾಜು ಅವರಿಗೆ ಕನ್ನಡ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಕನ್ನಂಬಾಡಿ ದಿನಪತ್ರಿಕೆ ಮಂಡ್ಯ ಸಂಯುಕ್ತ ಆಶ್ರಯದಲ್ಲಿ ಸಂಕ್ರಾಂತಿ ಅಂಗವಾಗಿ ನಡೆದ ಸುಗ್ಗಿ ಸಂಭ್ರಮದ ಪ್ರಯುಕ್ತ ಮಂಡ್ಯದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದ ಕರ್ನಾಟಕ ಸಂಘದಲ್ಲಿ ನಡೆದ 15ನೇ ಅಖಿಲ ಕರ್ನಾಟಕ ಕನ್ನಡ ಅಕ್ಷರ ಜಾತ್ರೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಪ್ರೊ.ಕೆ.ಬಸವರಾಜು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ, ಗೌರವಿಸಿದರು. ಮೂಲತ ಹುಣಸೂರಿನವರಾದ ಪ್ರೊ. ಬಸವರಾಜು ಅವರು ಪ್ರಸ್ತುತ ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Read More

ಸೋಮವಾರಪೇಟೆ ಜ.21 NEWS DESK : ಎಸ್.ಎಸ್.ಎಲ್.ಸಿ ಪರೀಕ್ಷೆ ಶೈಕ್ಷಣಿಕ ಜೀವನದ ಮಹತ್ತರಘಟ್ಟ ಎಂದು ತಹಸೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಕೃಷ್ಣಮೂರ್ತಿ ತಿಳಿಸಿದರು.  ಅನಘ ಫೌಂಡೇಶನ್, ತಪೋಕ್ಷೇತ್ರ ಮನೆಹಳ್ಳಿ ಮಠ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ  ಶನಿವಾರಸಂತೆಯ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಹೋಬಳಿಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ನಾನು ಮತ್ತು ಪರೀಕ್ಷೆ ಎಂಬ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನ ಚಿನ್ನದಂತಹ ಜೀವನ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದ ಅವರು ಒಂದನೇ ತರಗತಿಯಿಂದ 10ನೆ ತರಗತಿಯವರೆಗೆ ಒಂದು ಹಂತದ ಶಿಕ್ಷಣ ವ್ಯವಸ್ಥೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಿಮ್ಮ ವಿದ್ಯಾರ್ಥಿ ಜೀವನ ಬದಲಾವಣೆಯ ಮಹತ್ತರ ಘಟ್ಟವಾಗಿದೆ ಆದ್ದರಿಂದ ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯಿಂದ ಇರಬೇಕೆಂದರು.  ವಿದ್ಯಾರ್ಥಿಗಳು ತಂದೆ-ತಾಯಿಯರ ಗುರುಗಳ ಕನಸನ್ನು ನನಸು ಮಾಡಲು ಶಪಥ ಮಾಡಬೇಕು. ಶಿಕ್ಷಣ ಇಲಾಖೆ ಮತ್ತು ಸರ್ಕಾರದ ಉದ್ದೇಶ ಉತ್ತಮ ಫಲಿತಾಂಶವನ್ನು ಮತ್ತು ಉತ್ತಮ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವುದೇ ಆಗಿದೆ. ವಿದ್ಯಾರ್ಥಿಗಳು…

Read More

ಮಡಿಕೇರಿ ಜ.21 NEWS DESK : ಕೊಡವ ಮಕ್ಕಡ ಕೂಟ ಹೊರ ತಂದಿರುವ ಐಚಂಡ ರಶ್ಮಿ ಮೇದಪ್ಪ ಅವರು ರಚಿಸಿರುವ ನಾಲ್ಕನೇ ಪುಸ್ತಕ “ಪಳೆ ತಾಲೂಕ್” (ಕೊಡವ ಒಕ್ಕಡೊಕ್ಕಡ ಭೀರ್ಯ) ಅಧ್ಯಯನ ಕೃತಿ ಬಿಡುಗಡೆಗೊಂಡಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಫಿ ಬೆಳೆಗಾರರಾದ ಅರೆಯಡ ಕಾಂತಿ ಸೋಮಪ್ಪ ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. “ಪಳೆ ತಾಲೂಕ್” ಕೃತಿಯ ಲೇಖಕಿ ಐಚಂಡ ರಶ್ಮಿ ಮೇದಪ್ಪ ಅವರು ಮಾತನಾಡಿ, “ಪಳೆತಾಲೂಕ್” (ಕೊಡವ ಒಕ್ಕಡೊಕ್ಕಡ ಭೀರ್ಯ) ಪುಸ್ತಕವು ಪಳೆತಾಲೂಕು ಹಾಕಿ ತಂಡದ ಮಾಲೀಕರ ಕನಸಾಗಿದ್ದು, ಅವರ ಸಲಹೆ ಮೇರೆಗೆ ಪುಸ್ತಕವನ್ನು ಬರೆಯಲಾಗಿದೆ. ಈ ಪುಸ್ತಕದಲ್ಲಿ ಪಳೆ ತಾಲೂಕ್‍ನ ಇತಿಹಾಸ ಹಾಗೂ ಕೊಡವ ಒಕ್ಕದ ಬಗ್ಗೆ ವಿವರಿಸಲಾಗಿದೆ. ನಾಪೋಕ್ಲುವಿನಲ್ಲಿರುವ ಪಳೆತಾಲೂಕ್ ನಲ್ಲಿ ಮೂರು ಕೇರಿಗೆ ಸೇರಿದ ಕೊಡವ ಒಕ್ಕ, ಒಕ್ಕ ಕಾರೋಣ, ಮನೆ ಹೆಸರಿನ ಮೂಲ, ಊರ್ಮಂದ್, ನಮ್ಮೆನಾಳ್, ದೇವನೆಲೆ, ಐನ್‍ಮನೆ, ತಕ್ಕಾಮೆ, ದೇವಕಾಡ್, ಅಲ್ಲಿನ ಶಿಕ್ಷಣ ಸಂಸ್ಥೆ, ಹಾಕಿ ಆಟಕ್ಕೆ ಸಾಕ್ಷಿ ಸೇರಿದಂತೆ ಪ್ರತಿಯೊಂದು…

Read More

NEWS DESK *ಹಸಿದವನಿಗೆ ಅನ್ನ ಕೊಡುವುದೇ ದೇವರ ಪೂಜೆ* ನಾಡು ಕಂಡ ಮಹಾಯೋಗಿ ಮಹಾ ದಾಸೋಹಿ, ನೆಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ರಾಜ್ಯ ಸರ್ಕಾರವು ‘ದಾಸೋಹ ದಿನ’ ಎಂದು ಆಚರಿಸಲು ಘೋಷಿಸಿದೆ.! ಈ ದಾಸೋಹ ದಿನ ಒಂದು ಸ್ಮರಣೆ ಮತ್ತು ಉತ್ತಮ ಸೇವಾ ಸಂದೇಶದ ಆಚರಣೆ. ಹಾಗಾಗಿ ಸ್ವಾಮೀಜಿಯವರ ಅಮೂಲ್ಯ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಸೇವೆಯನ್ನು ಸ್ಮರಿಸುವ ದಿನವಾಗಿ ಈ ದಿನವನ್ನು ಕರುನಾಡಿನಾದ್ಯಂತ ದಾಸೋಹ ದಿನವನ್ನಾಗಿ ಆಚರಿಸುವ ಮೂಲಕ ಅಗಲಿದ ಆ ಮಹಾ ಚೈತನ್ಯಕ್ಕೆ ಧನ್ಯತಾ ನಮನವನ್ನು ಸಲ್ಲಿಸಲಾಗುತ್ತದೆ.!  ಬಸವಣ್ಣನವರ ಆದರ್ಶಗಳನ್ನು ನುಡಿಗಳಲ್ಲಿ ಮಾತ್ರವಲ್ಲದೆ ನಡೆಯಲ್ಲಿ ಅನುಸರಿಸಿದ ಡಾ. ಶಿವಕುಮಾರ ಸ್ವಾಮೀಜಿ ಅವರು ಒಬ್ಬ ವ್ಯಕ್ತಿಯಾಗಿ ಅಲ್ಲ ಸಮಾಜಕ್ಕೆ ದೊಡ್ಡ ಶಕ್ತಿಯಾಗಿ ನಿಂತು ತಮ್ಮ ಜೀವನ ಮತ್ತು ಅವರ ಸೇವಾ ತತ್ತ್ವದ ಮೂಲಕ ದಾಸೋಹ ಎಂಬ ಪದಕ್ಕೆ ಜೀವಂತ ರೂಪ ನೀಡಿದವರು.! ಸಿದ್ಧಗಂಗಾ ಮಠದ ಮೂಲಕ “ಹಸಿದವನಿಗೆ ಅನ್ನ ಕೊಡುವುದೇ ದೇವರ ಪೂಜೆ” ಎಂಬ…

Read More

ಪಾಲಿಬೆಟ್ಟ ಜ.21 NEWS DESK : ಭಾವೈಕ್ಯತೆಯ ಧಾರ್ಮಿಕ ಕೇಂದ್ರ ಎಂದೇ ಇತಿಹಾಸ ಪ್ರಸಿದ್ಧಿಯಾಗಿರುವ ಪಾಲಿಬೆಟ್ಟ ಆರ್ಕಾಡ್ ಪಟ್ಟಾಣ್ ಬಾಬ ಶಾಹ್ ವಲಿಯವರ ಉರೂಸ್ ಫೆ.13ರಿಂದ 16ರ ವರಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಪಿ.ಕೆ.ಇಸ್ಮಾಯಿಲ್ ಹಾಜಿ ತಿಳಿಸಿದ್ದಾರೆ.

Read More

ನಾಪೋಕ್ಲು  ಜ.21 NEWS DESK : ಎಮ್ಮೆಮಾಡು ಗ್ರಾಮದಲ್ಲಿ 35ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಎಮ್ಮೆಮಾಡು ಭಾಗದಲ್ಲಿ ಶಾಸಕರ ರೂ.35ಲಕ್ಷ ವೆಚ್ಚದ ಅನುದಾನದಲ್ಲಿ ಪ್ರಾರಂಭವಾಗಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿದ ಬಳಿಕ, ಈಗಾಗಲೇ ಈ ಭಾಗದಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಐಸಮ್ಮ, ಸದಸ್ಯರಾದ ಗಪುರ್, ಯೂಸಫ್, ಜಮಾಯತ್ ಅಧ್ಯಕ್ಷ ಹುಸೇನ್ ಸಖಾಫಿ ಹಾಗೂ ಆಡಳಿತ ಮಂಡಳಿ, ಶಾದುಲಿ ಹಾಜಿ, ಹಂಸ ಪಡಿಯಾನಿ, ಅಶ್ರಫ್ ಬಿ.ಯು, ಕೆ.ಎ.ಇಸ್ಮಾಯಿಲ್, ಡಿಸಿಸಿ ಉಪಾಧ್ಯಕ್ಷ ಎಂ.ಎಚ್.ಅಬ್ದುಲ್ ರೆಹಮಾನ್, ಮಚ್ಚುರ ರವೀಂದ್ರ, ಮಾಚೇಟೀರ ಕುಶಾಲಪ್ಪ, ಮನವಟ್ಟಿರ ದಯಾ ಕುಟ್ಟಪ್ಪ ಅಪ್ಪಚೆಟ್ಟೋಳಂಡ ಮಿಥುನ್, ಐಸ, ಮಾಚಯ್ಯ ಪಡಿಯಾನಿ ಜಮಾತ್ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಜ.21 NEWS DESK : ಸಂಕ್ರಾಂತಿ ಸಂಭ್ರಮ 2026 ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ದ್ವಿತೀಯ ಸ್ಥಾನ ತನ್ನದಾಗಿಸಿಕೊಂಡಿದೆ. ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಹಾಗೂ ಕಲ್ಲಪಳ್ಳಿ ಗ್ರಾಮ ಒಳಗೊಂಡ ಪುರುಷರ ಗ್ರಾಮವಾರು ಕಬ್ಬಡಿ ಪಂದ್ಯಾವಳಿ ಮತ್ತು ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ನಡೆದ ಸಂಕ್ರಾಂತಿ ಸಂಭ್ರಮ-2026. ಪೆರಾಜೆ ಕುಂಬಳಚೇರಿ ಸ.ಮಾ.ಪ್ರಾ ಶಾಲಾ ಮೈದಾನದಲ್ಲಿ ಜರುಗಿತ್ತು. ಕ್ರೀಡಾಕೂಟದಲ್ಲಿ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ನಾಗಬ್ರಹ್ಮ ಕೊಡಿಯಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ನಗದು ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಜ.21 NEWS DESK : ಜಿಲ್ಲಾ ಡಿಎಸ್‍ಬಿ ಘಟಕದಲ್ಲಿ ವೃತ್ತ ನಿರೀಕ್ಷಕರಾಗಿದ್ದ ಐಚಂಡ ಮೇದಪ್ಪ ಅವರು ಡಿವೈಎಸ್‍ಪಿಯಾಗಿ ಮುಂಬಡ್ತಿ ಪಡೆದಿದ್ದಾರೆ. 2005ರಲ್ಲಿ ಸರ್ಕಲ್ ಇನ್ಸ್‍ಪೆಕ್ಟರ್ ಹುದ್ದೆಗೆ ಬಡ್ತಿ ಪಡೆದು, 2020ರಿಂದ ಬಾಕಿ ಇದ್ದ ಡಿವೈಎಸ್‍ಪಿ ಹುದ್ದೆಯ ಮುಂಬಡ್ತಿ ಇದೀಗ ಅನುಷ್ಠಾಗೊಂಡಿದೆ. ಈ ಸಂಬಂಧ ಸರಕಾರ ಆದೇಶ ಹೊರಡಿಸಿದೆ.

Read More

ನಾಪೋಕ್ಲು ಜ.21 NEWS DESK : ಕೋರಂಗಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆ ಹಾಗೂ ಪುಟಾಣಿಗಳ ಛದ್ಮವೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಕ್ಕಳ ಸಂತೆಯಲ್ಲಿ ವಿವಿಧ ರೀತಿಯ ತರಕಾರಿಗಳು, ತಿಂಡಿ-ತಿನಿಸುಗಳ ಮಳಿಗೆಗಳು, ವಿವಿಧ ಬಗೆಯ ಹೂವಿನ ಗಿಡಗಳು ಹಾಗೂ ಅಲಂಕಾರಿಕ ಗಿಡಗಳ ಕುಂಡಗಳು ಮಾರಾಟಕ್ಕಿದ್ದವು. ಛದ್ಮವೇಷ ಸ್ಪರ್ಧೆಯಲ್ಲಿ ಅನೇಕ ಪುಟಾಣಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಮನಮೋಹಕ ವೇಷಭೂಷಣಗಳಿಂದ ಎಲ್ಲರ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಶಾಲೆ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಚೀಯಕ ಪೂವಂಡ ಮಿಥುನ್ ಚಂಗಪ್ಪ ಹಾಗೂ ಟ್ರಸ್ಟಿಗಳಾದ ಚೀಯಕಪೂವಂಡ ಸಚಿನ್ ಪೂವಯ್ಯ ಮುಖ್ಯ ಶಿಕ್ಷಕರಾದ ಶ್ವೇತನ್ ಚೆಂಗಪ್ಪ, ಮಕ್ಕಳ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು. ಶಿಕ್ಷಕರಾದ ಶ್ರುತಿ ಬಿ. ಪಿ ಅವರು ಸ್ವಾಗತಿಸಿದ ಕಾರ್ಯಕ್ರಮನ್ನು ಚಿತ್ರಾ ಎಂ.ಎ.ನಿರೂಸಿ, ವಂದಿಸಿದರು. ವರದಿ : ದುಗ್ಗಳ ಸದಾನಂದ  

Read More

ನಾಪೋಕ್ಲು ಜ.21 NEWS DESK : ಶೈಕ್ಷಣಿಕವಾಗಿ ಹಿಂದುಳಿದಿದ್ದ ನಾಪೋಕ್ಲುವಿನಲ್ಲಿ ಇದೀಗ ವಿವಿಧ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ನಾಪೋಕ್ಲು ಶೈಕ್ಷಣಿಕವಾಗಿ ಮುಂದುವರೆದಿದೆ ಎಂದು ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಪಟ್ಟಡ ಧನು ಉತ್ತಯ್ಯ ಹೇಳಿದರು. ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಹಿಂದೆ ವಿದ್ಯಾರ್ಥಿಗಳಿಗೆ ಇಷ್ಟು ಅವಕಾಶ ಇರಲಿಲ್ಲ ಈಗ ವಿಪುಲ ಅವಕಾಶ ಲಭಿಸಿದೆ. ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಜೊತೆ ಕೈಜೋಡಿಸಿ ಶಿಕ್ಷಣದಲ್ಲಿ ಮುಂದುವರಿಯಬೇಕು ಎಂದರು. ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಯಶಸ್ಸುಗಳಿಸಲು ಸಾಧ್ಯ. ವೇದಿಕೆಗಳನ್ನು ಸೂಕ್ತವಾಗಿ ಬಳಸಿಕೊಳ್ಳುವುದರಿಂದ ಧೈರ್ಯ ಹಾಗೂ ಆತ್ಮವಿಶ್ವಾಸ ಗಳಿಸಿಕೊಳ್ಳಲು ಸಾಧ್ಯ ಎಂದರು. ನೇತಾಜಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎಸ್.ಸುರೇಶ್ ಮಾತನಾಡಿ ಎಕ್ಸೆಲ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಉತ್ತಮ ಪ್ರಜೆಗಳಾಗಿ ಮೂಡಿಬರಲು ಸಾಧ್ಯವಾಗುತ್ತಿದೆ…

Read More