ಮಡಿಕೇರಿ NEWS DESK ಏ.24 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ 26 ಮಂದಿಯ ಸಾವಿಗೆ ಕಾರಣಕರ್ತರಾದ ಭಯೋತ್ಪಾದಕರ ವಿರುದ್ಧ ಕಠಿಣ ಕಾರ್ಯಾಚರಣೆ ನಡೆಸುವ ಮೂಲಕ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯ ಕೆ.ಎ.ಯಾಕುಬ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿರುವ ಘಟನೆ ಅತೀವ ಬೇಸರವನ್ನುಂಟು ಮಾಡಿದೆ. ಹೇಡಿತನದ ಭಯೋತ್ಪಾದಕರು ನಡೆಸಿರುವ ಹೇಯ ಕೃತ್ಯವನ್ನು ಕಟುವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ. ಉಗ್ರರ ಬೇಟೆಗಾಗಿ ಭಾರತೀಯ ಸೇನೆ ಈಗಾಗಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಇದು ಸ್ವಾಗತಾರ್ಹ ಕ್ರಮವಾಗಿದೆ. ಕೇಂದ್ರ ಸರ್ಕಾರ ಕೂಡ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಕೇಂದ್ರ ಗುಪ್ತಚರ ಇಲಾಖೆ ಕಟ್ಟೆಚ್ಚರ ವಹಿಸಬೇಕು. ದೇಶದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ದುಷ್ಟಶಕ್ತಿಗಳ ವಿರುದ್ಧ ಜನರು ಕೂಡ ಜಾಗೃತರಾಗಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದು. ದೇಶದ…
ಲೇಖಕ: admin
ಮಡಿಕೇರಿ ಏ.24 NEWS DESK : ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏ.26 ರಂದು ಮಡಿಕೇರಿಯಲ್ಲಿ ನಮ್ಮ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಉಮ್ಮತ್ ಒನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ.ಬಿ.ಬಶೀರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ ನಗರದ ಮಹದೇವ ಪೇಟೆಯಲ್ಲಿಯಲ್ಲಿರುವ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿದ ನಂತರ 10.30 ಗಂಟೆಗೆ ಕಾವೇರಿ ಹಾಲ್ನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್, ಕಣಚೂರು ಗ್ರೂಫ್ ಆಫ್ ಇಂಡಸ್ಟ್ರಿಸ್ನ ಅಧ್ಯಕ್ಷ ಡಾ.ಯು.ಕೆ.ಮೋನುಹಾಜಿ, ದಕ್ಷಿಣ ಕನ್ನಡ ನಿವೃತ್ತ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ, ಭಾರಧಿಯಾರ್ ಯುನಿವರ್ಸಿಟಿಯ…
ಮಡಿಕೇರಿ NEWS DESK ಏ.24 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ನಡೆಸಿರುವ ಅಮಾನವೀಯ ಕೃತ್ಯ ಖಂಡನೀಯವೆಂದು ಮೇಕೇರಿ ಗ್ರಾ.ಪಂ ಸದಸ್ಯ ಹಾಗೂ ಹಾಕತ್ತೂರು ಗ್ರಾ.ಪಂ ಮಾಜಿ ಅಧ್ಯಕ್ಷ ಎಂ.ಯು.ಹನೀಫ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿರುವ ದಾಳಿ ಹೇಡಿತನದ ದುಷ್ಕೃತ್ಯವಾಗಿದೆ. ಕೇಂದ್ರ ಸರ್ಕಾರ ವಿಳಂಬ ಮಾಡದೆ ದುಷ್ಟರ ವಿರುದ್ಧ ಸಮರ ಸಾರಬೇಕು ಎಂದು ಒತ್ತಾಯಿಸಿದ್ದಾರೆ. ಉಗ್ರರ ಗುಂಡಿಗೆ ಬಲಿಯಾದವರ ಆತ್ಮಕ್ಕೆ ಶಾಂತಿ ಕೋರುತ್ತೇವೆ, ಪ್ರವಾಸಿಗರ ಸಾವಿಗೆ ನ್ಯಾಯ ಸಿಗಬೇಕಾದರೆ ದುಷ್ಕರ್ಮಿಗಳು ನಾಶವಾಗಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ಭಯೋತ್ಪಾದಕರನ್ನು ಸದೆಬಡಿಯಲು ರಾತ್ರಿ ಹಗಲೆನ್ನದೆ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತೀಯ ಯೋಧರ ಬಗ್ಗೆ ನಮಗೆ ಹೆಮ್ಮೆ ಇದೆ. ದೇಶದ್ರೋಹಿಗಳ ವಿರುದ್ಧ ಸರ್ಕಾರ ಮತ್ತು ಜನ ಎಚ್ಚೆತ್ತುಕೊಳ್ಳಬೇಕಾಗಿದೆ. ಎಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ದೇಶದ ಭದ್ರತೆಗೆ ಸಹಕರಿಸಬೇಕು ತಿಳಿಸಿದ್ದಾರೆ. ದೇಶದಲ್ಲಿ ನಿಯಮಬಾಹಿರವಾಗಿ ನೆಲೆಸಿರುವ ವಿದೇಶಿಯರ ಬಗ್ಗೆ ನಿಗಾ ವಹಿಸಬೇಕು ಮತ್ತು…
ಚಾಮರಾಜನಗರ ಏ.24: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಲೆ ಮಹದೇಶ್ವರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಉಗ್ರರನ್ನು ಮಟ್ಟಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ :: ನೆಲೆಸಿರುವ ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದರು. ಬಂದೋಬಸ್ತು ಸಡಿಲಗೊಳಿಸಬಾರದಿತ್ತು :: ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್ ಘಟನೆ ಅತ್ಯಂತ ಖಂಡನೀಯವಾದ ಹಾಗೂ ಅಮಾನುಷವಾದ ಘಟನೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತು ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎಂದರು. ಉಗ್ರರನ್ನು ಮಟ್ಟ ಹಾಕಲು ಎಲ್ಲ ಸಹಕಾರ :: ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ.…
ಕುಶಾಲನಗರ ಏ.24 NEWS DESK : ಹನ್ನೆರಡನೇ ಶತಮಾನದ ವಚನಗಾರ್ತಿ ಅಕ್ಕಾಮಹಾದೇವಿ ಈ ನಾಡು ಕಂಡ ಶ್ರೇಷ್ಟ ಶಿವಶರಣೆಯಾಗಿದ್ದು ಸೂರ್ಯ ಚಂದ್ರರು ಇರುವ ತನಕ ಅಕ್ಕನ ಆದರ್ಶಗಳು ಸಮಾಜಕ್ಕೆ ದಾರಿದೀಪವಾಗಲಿವೆ ಎಂದು ಕೆ.ಆರ್.ನಗರ ತಾಲ್ಲೂಕು ಲಾಳನಹಳ್ಳಿಯ ಗುರುಮಲ್ಲೇಶ್ವರ ದಾಸೋಹ ಮಠದ ಶರಣೆ ಜಯದೇವಿ ತಾಯಿ ಹೇಳಿದರು. ಕುಶಾಲನಗರದ ಅಕ್ಕನ ಬಳಗದ ವತಿಯಿಂದ ಸ್ಥಳೀಯ ಎಪಿಸಿಎಂಎಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿವ ಶರಣೆ ಅಕ್ಕಾಮಹಾದೇವಿ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಪ್ರವಚನ ನೀಡಿದ ಅವರು, ಮಹಾದೇವಿಯ ಸೌಂದರ್ಯಕ್ಕೆ ಮಾರು ಹೋದ ಕೌಶಿಕ ಮಹಾರಾಜ ಆಕೆಯನ್ನು ವರಿಸಲು ಎಷ್ಟೆಲ್ಲಾ ವಿಫಲ ಸಾಹಸಗಳನ್ನು ಮಾಡಿದಾಗ್ಯೂ ಚನ್ನಮಲ್ಲಿಕಾರ್ಜುನ ದೇವನೇ ಗಂಡ ಎಂದು ಇಷ್ಟದೈವವನ್ನು ಜೀವನ ಪೂರ್ತಿ ಆರಾಧಿಸಿದ ಮಹಾಚೇತನ. ಕೌಶಿಕ ಮಹಾರಾಜನ ದೌರ್ಜನ್ಯಕ್ಕೆ ಆಕ್ರೋಷ ವ್ಯಕ್ತಪಡಿಸಿ ತನ್ನೆಲ್ಲಾ ವಸ್ತ್ರ – ವೈಢೂರ್ಯಗಳನ್ನು ಕಿತ್ತೆಸೆದು ದಿಗಂಬರಳಾಗಿ ಕಲ್ಯಾಣಕ್ಕೆ ಹೋದಾಗ ಅಲ್ಲಿನ ಅನುಭವ ಮಂಟಪದ ಅಧ್ಯಕ್ಷ ಅಲ್ಲಮಪ್ರಭು ಕೂಡ ಮಹಾದೇವಿಯನ್ನು ಪರೀಕ್ಷಿಸಿದ ಬಳಿಕ ಅಕ್ಕಾ ಎಂಬ ಬಿರುದು ನೀಡಿದ್ದನ್ನು ಶಿವಶರಣೆ ಅಕ್ಕಾ ವಚನಗಳ…
ಮಡಿಕೇರಿ NEWS DESK ಏ.24 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕರ ಸಾವಿಗೆ ಕಾರಣಕರ್ತರಾಗಿರುವ ಪಾಕಿಸ್ತಾನಿ ಬೆಂಬಲಿತ ಭಯೋತ್ಪಾದಕರನ್ನು ಸದೆಬಡಿಯಲು ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರವಾಸಿಗರನ್ನು ಹತ್ಯೆಗೈದಿರುವ ಉಗ್ರರ ಹೇಯ ಕೃತ್ಯವನ್ನು ಕಠಿಣ ಶಬ್ಧಗಳಲ್ಲಿ ಖಂಡಿಸುತ್ತೇವೆ, ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇವೆ ಎಂದು ತಿಳಿಸಿದ್ದಾರೆ. ಪ್ರಜಾಪ್ರಭುತ್ವ ರಾಷ್ಟç ಭಾರತದ ಆತ್ಮಬಲ ಕುಗ್ಗಿಸುವ ಯತ್ನಕ್ಕೆ ದೇಶದ್ರೋಹಿಗಳು ಮುಂದಾಗಿದ್ದಾರೆ. ಉಗ್ರರ ಈ ಕೃತ್ಯವನ್ನು ಭಾರತೀಯರಾದ ನಾವೆಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು. ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜಮ್ಮು ಕಾಶ್ಮೀರದಲ್ಲಿ ನಾಗರೀಕರಿಗೆ ಹಾಗೂ ಪ್ರವಾಸಿಗರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ದೇಶದ ಸುರಕ್ಷತೆಯ ದೃಷ್ಟಿಯಿಂದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ…
*ಮೈದಾನ 1* ನೆಲ್ಲಮಕ್ಕಡ ಮತ್ತು ಕೋಳೇರ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ನೆಲ್ಲಮಕ್ಕಡ ಗೆಲುವು ದಾಖಲಿಸಿತು. ನೆಲ್ಲಮಕ್ಕಡ ಪರ ಸಚಿನ್, ರಾಕೇಶ್ ಸುಬ್ರಮಣಿ, ರೋಶನ್ ಬೋಪಣ್ಣ ಹಾಗೂ ಅಯ್ಯಪ್ಪ ತಲಾ 1 ಗೋಲು ದಾಖಲಿಸಿದರು. ಕೋಳೇರ ನಿಶಿಕ್ ನಾಚಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೂತಂಡ ಮತ್ತು ಅಮ್ಮಣಿಚಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಕೂತಂಡ ಜಯ ಸಾಧಿಸಿತು. ಕೂತಂಡ ಪರ ಬೋಪಣ್ಣ 4 ಗೋಲು ದಾಖಲಿಸಿ ಗಮನ ಸೆಳೆದರೆ, ಸುರೇಶ್ ಅಪ್ಪಯ್ಯ 1 ಗೋಲು ಬಾರಿಸಿದರು. ಅಮ್ಮಣಿಚಂಡ ಯಶ್ವಂತ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನಾಳಿಯಂಡ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ಜಯ ಸಾಧಿಸಿತು. ಪುದಿಯೊಕ್ಕಡ ಪರ ಮಿಥನ್ ಪೊನ್ನಪ್ಪ ಹಾಗೂ ವಿಪನ್ ಸೋಮಯ್ಯ ತಲಾ 1 ಗೋಲು ದಾಖಲಿಸಿದರು. ನಾಳಿಯಂಡ ಪರ ಚರಣ್ ಚಿಣ್ಣಪ್ಪ 1 ಗೋಲು ಬಾರಿಸಿದರು. ನಾಳಿಯಂಡ ರತ್ನ ಬೆಳ್ಯಪ್ಪ ಮ್ಯಾನ್…
*ಮೈದಾನ 2* ತೀತಿರ ಮತ್ತು ಚೆಯ್ಯಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಚೆಯ್ಯಂಡ ತಂಡ ಗೆಲುವು ಸಾಧಿಸಿತು. ಚೆಯ್ಯಂಡ ಪರ ಭಾಗ್ಯಶ್ರೀ 2 ಗೋಲು ದಾಖಲಿಸಿದರು. ತೀತಿರ ಸಿಂಚನ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೇನಂಡ ಮತ್ತು ಕಂಬೀರಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಕಂಬೀರಂಡ ಜಯ ಸಾಧಿಸಿತು. ಕಂಬೀರಂಡ ಪರ ಪೊನ್ನಮ್ಮ ಹ್ಯಾಟ್ರಿಕ್ ಗೋಲು ಬಾರಿಸಿದರೆ, ಮಿಲನ 2 ಗೋಲು ಬಾರಿಸಿದರು. ಚೇನಂದಡ ರಕ್ಷ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಆದೇಂಗಡ ಮತ್ತು ತೆಕ್ಕಡ ನಡುವಿನ ಪಂದ್ಯದಲ್ಲಿ ಎರಡೂ ತಂಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್ನಲ್ಲಿ 1-0 ಗೋಲುಗಳ ಅಂತರದಲ್ಲಿ ತೆಕ್ಕಡ ಗೆಲುವು ಸಾಧಿಸಿತು. ಆದೇಂಗಡ ತಶ್ವಿಕ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಚ್ಚಪಂಡ ಮತ್ತು ಕುಟ್ಟಂಡ (ಮಾದಾಪುರ) ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್ನಲ್ಲಿ 1-0 ಗೋಲುಗಳ…
*ಮೈದಾನ 2* :: ಕ್ವಾಟರ್ ಫೈನಲ್ :: ಬೆಳಿಗ್ಗೆ 10 ಗಂಟೆಗೆ ಕಾಂಡಂಡ ಮತ್ತು ಕೇಚೆಟ್ಟಿರ 11 ಗಂಟೆಗೆ ಕುಟ್ಟಂಡ ಮತ್ತು ಕುಪ್ಪಂಡ (ಕೈಕೇರಿ) ಮಧ್ಯಾಹ್ನ 12 ಗಂಟೆಗೆ ಕಂಬೀರಂಡ ಮತ್ತು ಚೆಯ್ಯಂಡ 1 ಗಂಟೆಗೆ ಕಲಿಯಂಡ ಮತ್ತು ಮುಕ್ಕಾಟಿರ (ದೊಡ್ಡಪುಲಿಕೋಟು) :: ಸೆಮಿ ಫೈನಲ್ :: 2 ಗಂಟೆಗೆ ಕಾಂಡಂಡ/ಕೇಚೆಟ್ಟೀರ ಮತ್ತು ಕುಟ್ಟಂಡ/ಕುಪ್ಪಂಡ (ಕೈಕೇರಿ) 3 ಗಂಟೆಗೆ ಕಂಬೀರಂಡ/ ಚೆಯ್ಯಂಡ ಮತ್ತು ಕಲಿಯಂಡ/ಮುಕ್ಕಾಟಿರ (ದೊಡ್ಡಪುಲಿಕೋಟು)
ಮಡಿಕೇರಿ ಏ.23 NEWS DESK : ಸರ್ಕಾರದಿಂದ ಕೊಡಗಿಗೆ ಒದಗಿಬಂದ ಸೌಲಭ್ಯವನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕೆ ಹೊರತು ಅದನ್ನು ಯಾವುದೇ ಕಾರಣಕ್ಕೂ ಕೈಬಿಡುವ ಕೆಲಸ ಆಗಬಾರದು ಎಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ ಸಾಧಕ-ಬಾಧಕ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ರಾಜ್ಯದಲ್ಲಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಚಿಂತನೆ ನಡೆಸಿದ್ದು, ಅದರಲ್ಲಿ ಕೊಡಗು ವಿಶ್ವವಿದ್ಯಾಲಯವೂ ಒಂದು. ನೂರಾರು ಎಕರೆ ಪ್ರದೇಶದಲ್ಲಿ ಈ ವಿವಿ ಸ್ಥಾಪನೆಯಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಿರುವ ಸುಸಜ್ಜಿತ ವ್ಯವಸ್ಥೆ ಹೊಂದಿರುವ ವಿವಿಯನ್ನು ಮುಚ್ಚಲು ಹೊರಟಿರುವುದು ಸರಿಯಲ್ಲ. ಈ ಹಿಂದೆ ಸರ್ಕಾರ ಎಲ್ಲಾ ವಿಶ್ವವಿದ್ಯಾಲಯಗಳಿಗೆ 2 ಕೋಟಿ ಅನುದಾನ ನೀಡವುದಾಗಿ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಅನುದಾನವನ್ನು ನೀಡದೆ ವಿವಿಯನ್ನು ಮುಚ್ಚುವ ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಆಂತಕ ಹೆಚ್ಚಾಗಲಿದೆ ಎಂದರು. ದೇಶ ಮುಂದಕ್ಕೆ ಬರಬೇಕಾದರೆ ಶಿಕ್ಷಣ ಮುಖ್ಯ. ಇಂತಹ…






