ಲೇಖಕ: admin

ಮಡಿಕೇರಿ ಜೂ.23 NEWS DESK : ವಿರಾಜಪೇಟೆ 66/33 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಜೂನ್, 24 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ 33/11 ಕೆವಿ ವಿದ್ಯುತ್ ಉಪಕೇಂದ್ರ ಮೂರ್ನಾಡುವಿನಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು, ಮರಗೋಡು ಫೀಡರ್‍ಗಳ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ. ಹಾಗೆಯೇ ವಿರಾಜಪೇಟೆ 66/33 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರ ಮಗ್ಗುಲದಲ್ಲಿ ಜೂನ್, 24 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.…

Read More

ಮಡಿಕೇರಿ ಜೂ.23 NEWS DESK : ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (ಐಟಿಡಿಪಿ) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ ಆರಂಭಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅರಣ್ಯ ಹಕ್ಕು ಕೋಶವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮಾರ್ಗದರ್ಶನದಲ್ಲಿ ನಗರದ ಜಿ.ಪಂ.ಭವನದ ಐಟಿಡಿಪಿ ಕಚೇರಿಯಲ್ಲಿ ಅರಣ್ಯಹಕ್ಕು ಕೋಶ ತೆರೆಯಲಾಗಿದೆ. ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಈ ಕೋಶ ಕಾರ್ಯನಿರ್ವಹಿಸಲಿದ್ದು, ಈಗಾಗಲೇ ಅರಣ್ಯ ಹಕ್ಕುಪತ್ರವನ್ನು ಪಡೆದಿರುವ ಕುಟುಂಬಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಮತ್ತು ಸಂಗ್ರಹವಾಗಿರುವ ದತ್ತಾಂಶಗಳನ್ನು ಡಿಜಿಟಲೀಕರಣಗೊಳಿಸುವುದು ಅರಣ್ಯ ಹಕ್ಕು ಕೋಶದ ಪ್ರಮುಖ ಕಾರ್ಯವಾಗಿರುತ್ತದೆ ಎಂದು ಎಸ್.ಹೊನ್ನೇಗೌಡ ಮಾಹಿತಿ ನೀಡಿದರು. ಅರಣ್ಯ ಹಕ್ಕು ಪತ್ರ ಹೊಂದಿಲ್ಲದವರ ಮತ್ತು ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿರುವ ಕುಟುಂಬಗಳ ಕುರಿತು ಪುನರ್ ಪರಿಶೀಲನೆ ನಡೆಸಿ ಅರ್ಹ ಅರಣ್ಯವಾಸಿಗಳಿಗೆ ಅಗತ್ಯ…

Read More

ಮಡಿಕೇರಿ ಜೂ.23 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ (ಮಕ್ಕಳ ವಿಭಾಗ) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಅತಿಸಾರ ಬೇಧಿ ತಡೆಗಟ್ಟುವಿಕೆ ಅಭಿಯಾನಕ್ಕೆ ಚಾಲನೆ ದೊರೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಉದ್ಘಾಟಿಸಿ ಮಾತನಾಡಿ, ಸ್ಟಾಪ್ ಡೈಯೇರಿಯ ಕ್ಯಾಂಪೇನ್ ಅನ್ನು ಜು.31 ರವರೆಗೆ ಆಯೋಜಿಸಲಾಗಿದೆ. ಎಲ್ಲಾ ಐದು ವರ್ಷದ ಒಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಒಂದು ಮಗುವಿಗೆ ಎರಡು ಪ್ಯಾಕೆಟ್ ಓಆರ್‍ಎಸ್ ಮತ್ತು ಒಂದು ಪ್ಯಾಕೆಟ್ ಜಿಂಕ್ ಮಾತ್ರೆಯನ್ನು ನೀಡಲಾಗುವುದು ಎಂದರು. ಭೇದಿ ಆದಲ್ಲಿ ಮಾತ್ರ ಜಿಂಕ್ ಮಾತ್ರೆಯನ್ನು 14 ದಿನಗಳವರೆಗೆ ಉಪಯೋಗಿಸುವುದು. ಈ ಬಗ್ಗೆ ಪ್ರತಿಯೊಬ್ಬ ಪೋಷಕರಿಗೂ ಮಾಹಿತಿ ತಿಳಿದಿರಬೇಕು. ಗುಣಮುಖವಾಗದಿದ್ದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೋರಿಸಬೇಕು. ಅತಿಸಾರ ಬೇಧಿಯಿಂದ ಉಂಟಾಗುವ…

Read More

ವಿರಾಜಪೇಟೆ ಜೂ.23 NEWS DESK : ಸಂತ ಅನ್ನಮ್ಮ ಪ್ರೌಢ ಶಾಲೆಯ ಎನ್‍ಸಿಸಿ ಘಟಕದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಜೇಮ್ಸ್ ಡೊಮಿನಿಕ್  ಉದ್ಘಾಟಿಸಿ, ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಯೋಗ ಗುರುಗಳಾದ ಸವಿತಾ ಉತ್ತಪ್ಪ ಹಾಗೂ ಉತ್ತಮನ್ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ಮಾಡಿಸಿ ಯೋಗದ ಪಾತ್ರವನ್ನು ವಿವರಿಸಿದರು. ವಿವಿಧ ಆಸನಗಳ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಈ ಸಂದರ್ಭ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಏರ್ ಫೋರ್ಸ್ ಎನ್ ಸಿ ಸಿ ಅಧಿಕಾರಿ ಅಬ್ದುಲ್ ಮುನೀರ್, ಆರ್ಮಿ ಎನ್ ಸಿ ಸಿ ಘಟಕದ ಅಧಿಕಾರಿ ಸಹನಾ, ಶಿಕ್ಷಕರಾದ ರೂಪ, ಲಕ್ಷ್ಮೀಶ ಇತರರು ಹಾಜರಿದ್ದರು.

Read More

ವಿರಾಜಪೇಟೆ ಜೂ.23 NEWS DESK : ಸಂತ ಅನ್ನಮ್ಮ ಪಿ.ಯು.ಕಾಲೇಜು,  ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ಸ್ನಾತಕೋತ್ತರ ವಿಭಾಗ, ಎನ್. ಎಸ್.ಎಸ್ ಘಟಕ ಹಾಗೂ  ಯುವ ರೆಡ್ ಕ್ರಾಸ್ ಘಟಕದ  ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪಿ.ಯು.ಕಾಲೇಜು ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಯೋಗವು ಪ್ರಾಚೀನ ಕಾಲದ ಇತಿಹಾಸವನ್ನು ಹೊಂದಿದೆ. ವಿಶ್ವಕ್ಕೆ ಭಾರತವು ನೀಡಿದ ಕೊಡುಗೆಯಾಗಿದೆ. ಪ್ರತಿನಿತ್ಯ ಯೋಗಾಭ್ಯಾಸವನ್ನು ಮಾಡುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಲು ಸಾಧ್ಯವಾಗುತ್ತದೆ. ಇಂದಿನ ಯುವ ಜನತೆಯು ಮೊಬೈಲ್ ಗೀಳಿಗೆ ಬೀಳದೆ ಯೋಗವನ್ನು ತಮ್ಮ ಜೀವನದ ಒಂದು ಭಾಗ ಎಂಬುದಾಗಿ ಅಳವಡಿಸಿಕೊಳ್ಳಿ ಎಂದು ಕಿವಿಮಾತನ್ನು ಹೇಳಿದರು. ಆ ಮೂಲಕ ಆರೋಗ್ಯವಂತ ಪರಿಸರ ನಿರ್ಮಿಸಿ ಎಂದು ಹೇಳಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಯೋಗಾಭ್ಯಾಸವು ಸುಂದರ ಬದುಕಿಗೆ ಅತ್ಯಗತ್ಯವಾಗಿದೆ. ಅದರಲ್ಲಿಯೂ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ತೊಡಗಬೇಕು. ನಕಾರಾತ್ಮಕ ಚಿಂತನೆಗಳನ್ನು ತೊಡೆದು ಹಾಕಿ ಜೀವನದಲ್ಲಿ ಸಕಾರಾತ್ಮಕ…

Read More

ನಾಪೋಕ್ಲು ಜೂ.23 NEWS DESK : ನಾಪೋಕ್ಲು ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಬಿ.ಎಂ.ಶಾರದ ಮಾತನಾಡಿ ಯೋಗದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳು ಸದೃಢ ಆಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ.ಕಲ್ಯಾಟಂಡ ಪೂಣಚ್ಚ, ಸಂಸ್ಥೆಯ ನಿರ್ದೇಶಕರು, ಶಿಕ್ಷಕ ವೃಂದದವರು ಹಾಜರಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಸರಿತ ವಿದ್ಯಾರ್ಥಿಗಳಿಂದ ವಿವಿಧ ಯೋಗಾಸನಗಳನ್ನು ನಡೆಸಿಕೊಟ್ಟರು. ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯ ಅಂಗವಾಗಿ ಯೋಗದ ಐತಿಹಾಸಿಕ ಹಿನ್ನಲೆ ಮತ್ತು ಯುವ ಪೀಳಿಗೆಗೆ ಯೋಗದ ಮಹತ್ವವನ್ನು ಸಂಸ್ಥೆಯ ಆಡಳಿತ ಮಂಡಳಿಯ ಸಂಚಾಲಕ ಎಂ.ಶಂಕರನಾರಾಯಣ ಭಟ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ದೈಹಿಕ ಶಿಕ್ಷಕ ಕುಶಾಲಪ್ಪ ನಡೆಸಿಕೊಟ್ಟರು. ಯೋಗದಿನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಸ್ಪರ್ಧೆಯ ಬಹುಮಾನಗಳ…

Read More

ನಾಪೋಕ್ಲು ಜೂ.23 NEWS DESK : ಮನೆ, ವ್ಯವಹಾರ, ಬೋಧನೆ ಮತ್ತು ಜೀವನದ ಎಲ್ಲ ಕ್ಷೇತ್ರಗಳಲ್ಲೂ ನಾವು ಸ್ವಚ್ಛ ಕನ್ನಡವನ್ನು ಬಳಸಬೇಕು. ಬಳಸಿದರೆ ಮಾತ್ರ ಕನ್ನಡ ಉಳಿದಿತು. ಮಾತೃಭಾಷೆಯ ಗೌರವ ಉಳಿಸುವಲ್ಲಿ ತಾಯಂದಿರ ಪಾತ್ರ ಮಹತ್ತ್ವಪೂರ್ಣವಾದುದು ಎಂದು ಮಡಿಕೇರಿ ಆಕಾಶವಾಣಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ನುಡಿದರು. ಕೊಡಗಿನ ಸಮರ್ಥ ಕನ್ನಡಿಗರು ಬಳಗದ ವತಿಯಿಂದ ಮಡಿಕೇರಿ ಲಯನ್ಸ್ ಸಭಾಂಗಣದಲ್ಲಿ ಬಾನುಲಿ ಸೇವೆಗಾಗಿ ತನಗೆ ನೀಡಿದ ಗೌರವ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು. “ಕನ್ನಡ ಇಂದು ಉಳಿದಿರುವುದು ತಾಯಂದಿರಿಂದ. ಇಂಥ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಮಹಿಳೆಯರು ತಮ್ಮ ಹಲವು ಬೇಸರಗಳನ್ನು ಮರೆಯುತ್ತಾರೆ. ಜೊತೆಗೆ ನಾಡು ನುಡಿಯ ಮಹತ್ತ್ವದ ಬಗ್ಗೆ ಅರಿವು ಬೆಳೆಸಿಕೊಳ್ಳಲು, ಅದು ಮನೆ ಮಕ್ಕಳಲ್ಲಿ ಹಂಚಿ ಮುಂದುವರಿಯಲು ಕಾರಣರಾಗುತ್ತಿದ್ದಾರೆ. ಇದು ಸಣ್ಣ ಕೆಲಸವಲ್ಲ ಎಂದು ಸುಬ್ರಯ ಸಂಪಾಜೆ ನುಡಿದರು. ಮೂರು ದಶಕಗಳ ರೇಡಿಯೋ ಸೇವೆಗಾಗಿ ಸುಬ್ರಾಯ ಸಂಪಾಜೆ ಅವರನ್ನು ಪತ್ನಿ ಸಹಿತ ಶಾಲು ಹೊದಿಸಿ ಸನ್ಮಾನಿಸಿದ ಹಿರಿಯರಾದ ಶ್ರೀಮತಿ…

Read More

ಮಡಿಕೇರಿ ಜೂ.23 NEWS DESK : ತನ್ನ ಕ್ಷೇತ್ರದ ಜನರ ಕೋರಿಕೆಗೆ ತಕ್ಷಣವೇ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ ಅವರ ಕಾರ್ಯಕ್ಷಮತೆಗೆ ಪಶ್ಚಿಮ ಘಟ್ಟ ಮೂಲ ನಿವಾಸಿಗಳ ಸಂಘದ ಪ್ರಧಾನ ಸಂಚಾಲಕ ಕಾಳಚಂಡ ರವಿ ತಮ್ಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎರಡು ದಿನದ ಹಿಂದೆ ಮಡಿಕೇರಿಯಲ್ಲಿ ಜರುಗಿದ ಕಾರ್ಯಕ್ರಮವೊಂದರಲ್ಲಿ ಮಡಿಕೇರಿ ಕ್ಷೇತ್ರದಶಾಸಕರಾದ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿದ ಸಾಮಾಜಿಕ ಹೋರಾಟದ ಮೂಲಕ ಗುರುತಿಸಿಕೊಂಡಿರುವ ರವಿ ತಮ್ಮಯ್ಯ ತಮ್ಮ ಗ್ರಾಮದ ಮೂಲಭೂತ ಸೌಕರ್ಯ ಕೊರತೆಯನ್ನು ನಿವಾರಿಸುವಂತೆ ವಿನಂತಿಸಿಕೊಂಡಿದ್ದರು. ಅದಕ್ಕೆ  ತಕ್ಷಣವೇ ಸ್ಪಂದಿಸಿದ ಶಾಸಕರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಂದಾಜು ಪಟ್ಟಿ ತಯಾರಿಸಿ ಸೂಕ್ತ ಕಾರ್ಯಕ್ರಮ ರೂಪಿಸುವಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಅಭಿಯಂತರಾದ ರಘು ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ  ತೆನ್ನಿರ ಮೈನಾ ಹಾಗೂ ಇತರ ಸಿಬ್ಬಂದಿಗಳೊಂದಿಗೆ ತೆರಳಿ ರವಿ ತಮ್ಮಯ್ಯ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಎರಡು ದಿನದಲ್ಲಿ ಅಂದಾಜು…

Read More

ನಾಪೋಕ್ಲು ಜೂ.23 NEWS DESK : ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಎನ್.ಸಿ.ಸಿ ಸಂಯುಕ್ತ ಆಶ್ರಯದಲ್ಲಿ “ಯೋಗ ಫಾರ್ ಒನ್ ಅರ್ಥ್, ಒನ್ ಹೆಲ್ತ್” ಎಂಬ ಘೋಷವಾಕ್ಯದೊಂದಿಗೆ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮೂರ್ನಾಡು ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ತೇಜಸ್ ಯೋಗಾಸನದ ಮಹತ್ವವನ್ನು ತಿಳಿಸಿ ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ, ಪ್ರಾಣಾಯಾಮ, ವೃಕ್ಷಾಸನ, ಚಕ್ರಾಸನ, ಶವಾಸನ ಮುಂತಾದ ಆಸನಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ, ಖಜಾಂಚಿ ಯತೀಶ್ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ರಶ್ಮಿ ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿ ಧಮಯಂತಿ, ಎನ್ ಸಿ ಸಿ ಅಧಿಕಾರಿ ಕಾವೇರಪ್ಪ ಹಾಗೂ ವಿದ್ಯಾಸಂಸ್ಥೆಯ ಎಲ್ಲಾ ವಿಭಾಗದ ಶಿಕ್ಷಕರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಜೂ.23 NEWS DESK : ಕೊಡಗಿನ ಸಂಸ್ಕೃತಿ, ಕ್ರೀಡೆ ಹಾಗೂ ಇತಿಹಾಸವನ್ನು ಪೋಷಿಸಿ ಬೆಳೆಸಲು ಸದಾ ಸಿದ್ಧ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಮನೆಯ ಮುಖ್ಯಸ್ಥರ ಕೋರಿಕೆ ಮೇರೆಗೆ ಕುಂಡ್ಯೋಳಂಡ ಐನ್ ಮನೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡು ಕುಟುಂಬಸ್ಥರ ಆತಿಥ್ಯವನ್ನು ಸ್ವೀಕರಿಸಿ ಮಾತನಾಡಿದ ಶಾಸಕರು, ಕೊಡವ ಜನಾಂಗದ ಆಚಾರ, ವಿಚಾರ, ಸಂಸ್ಕೃತಿ ವಿಭಿನ್ನವಾಗಿದೆ. ಅದರೊಂದಿಗೆ ಹಾಕಿಕ್ರೀಡೆಯು ಮಹತ್ವವನ್ನು ಹೊಂದಿದೆ. ಮುಂದಿನ ಸಾಲಿನಲ್ಲಿ ನಡೆಯುವ ಹಾಕಿ ಉತ್ಸವದ ಯಶಸ್ವಿಗೆ ಸಕಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು. 2024ರಲ್ಲಿ ಜರುಗಿದ ಕುಂಡ್ಯೋಳಂಡ ಕಪ್ ಹಾಕಿ ನಮ್ಮೆ ಅಭೂತಪೂರ್ವ ಯಶಸ್ಸು ಕಂಡಿತ್ತು. ಈ ಯಶಸ್ಸಿನ ಹಿಂದೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಕೊಡುಗೆ ಬಹು ದೊಡ್ಡದು. ಕುಂಡ್ಯೋಳಂಡ ಕುಟುಂಬಸ್ಥರ ಕೋರಿಕೆ ಮೇರೆಗೆ ಶಾಸಕರು ಈ ಹಾಕಿ ಪಂದ್ಯಾಟಕ್ಕೆ ವಿಶೇಷ ಅನುದಾನ ಒದಗಿಸುವಲ್ಲಿ ಶ್ರಮಿಸಿದರು. ಶಾಸಕರ ಈ ಪ್ರಯತ್ನಕ್ಕೆ ತಮ್ಮ ಕೃತಜ್ಞತೆಯನ್ನು…

Read More