ಲೇಖಕ: admin

ಮಡಿಕೇರಿ ಜೂ.23 NEWS DESK : ರೋಟರಿ ಜಿಲ್ಲೆ 3181 ನ ಜಿಲ್ಲಾ ಯೋಜನಾ ಕಾಯ೯ದಶಿ೯ಯಾಗಿ ಮಡಿಕೇರಿ ರೋಟರಿ ಸಂಸ್ಥೆಯ ಕಿರಿಯಮಾಡ ರತನ್ ತಮ್ಮಯ್ಯ ನೇಮಕಗೊಂಡಿದ್ದಾರೆ. ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೊಳಪಡುವ 87 ರೋಟರಿ ಸಂಸ್ಥೆಗಳಿಗೆ ಜಿಲ್ಲಾ ಯೋಜನಾ ಕಾಯ೯ದಶಿ೯ಯಾಗಿ ರತನ್ ತಮ್ಮಯ್ಯ ಅವರನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಮುಂದಿನ ಸಾಲಿನ ರೋಟರಿ ಅವಧಿಗೆ ಆಯ್ಕೆ ಮಾಡಿ ಮುಂದಿನ ಅವಧಿಯ ರೋಟರಿ ಜಿಲ್ಲಾ ಗವನ೯ರ್ ರಾಮ್ಕಿ ನೇಮಕಾತಿ ನೀಡಿದ್ದಾರೆ. ಮಡಿಕೇರಿ ರೋಟರಿ ಸಂಸ್ಥೆಯಲ್ಲಿ ಅಧ್ಯಕ್ಷ, ವಲಯ ಸೇನಾನಿ, ರೋಟರಿ ವಲಯ 6 ರ ಸಹಾಯಕ ಗವನ೯ರ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾಯ೯ನಿವ೯ಹಿಸಿದ ಅನುಭವ ಹೊಂದಿರುವ ರತನ್ ತಮ್ಮಯ್ಯ ಮುಂದಿನ ರೋಟರಿ ಅವಧಿಗೆ ಸಂಧ್ಯಾ ಸುರಕ್ಷ, ಅಂಗನವಾಡಿಗಳಿಗೆ ಕಾಯಕಲ್ಪ, ರಕ್ತದಾನ ಅಭಿಯಾನ, ಮಹಿಳೆಯರ ಸ್ವಾವಲಂಭಿ ಜೀವನಕ್ಕಾಗಿ ಸ್ವಾವಲಂಭಿ ಸ್ತ್ರೀ , ಸಕಾ೯ರಿ ಶಾಲಾ ಮಕ್ಕಳಿಗೆ ಪ್ರೋತ್ಸಾಹ ಸೇರಿದಂತೆ 11 ವಿವಿಧ ಯೋಜನೆಗಳನ್ನು ರೋಟರಿ ಸಂಸ್ಥೆಗಳು ಅನುಷ್ಟಾನಗೊಳಿಸುವ ಹೊಣೆ…

Read More

ಮಡಿಕೇರಿ NEWS DESK ಜೂ.23 : ಗಾರೆ ಕೆಲಸಕ್ಕೆಂದು ಶ್ರೀಮಂಗಲಕ್ಕೆ ಬಂದಿದ್ದ ತಮಿಳುನಾಡು ರಾಜ್ಯದ ದಿಂಡಿಕ್ಕಲ್ ಜಿಲ್ಲೆಯ ನಾಗೂರು ಮೂಲದ ಕುಮಾರ ಕೆ. ಎಂಬುವವರು ನಾಪತ್ತೆಯಾಗಿರುವ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರ ಅವರ ಪತ್ನಿ ಪೇಚಿಯಮ್ಮ ಎಂಬುವವರು ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜೂ.1 ರಂದು ಪತಿ ಕುಮಾರ ಅವರು ಊರಿನಿಂದ ಸ್ನೇಹಿತರೊಂದಿಗೆ ಗಾರೆ ಕೆಲಸಕ್ಕೆಂದು ಹೋದವರು ಶ್ರೀಮಂಗಲದಲ್ಲಿ ತಂಗಿದ್ದರು. ಜೂ.15 ರಂದು ನನಗೆ ಕರೆ ಮಾಡಿ ನಾನು ಅನಾರೋಗ್ಯಕ್ಕೆ ಒಳಗಾಗಿದ್ದು, ಊರಿಗೆ ಮರಳುತ್ತೇನೆ ಎಂದು ಹಾಗೂ ಜೂ.16 ರಂದು ನಾನು ಊರಿಗೆ ಬರುತ್ತಿದ್ದು, ಬಸ್ ನಲ್ಲಿದ್ದೇನೆ ಎಂದು ತಿಳಿಸಿದ್ದರು. ಆದರೆ ಕುಮಾರ ಅವರು ಇಲ್ಲಿಯವರೆಗೆ ಮನೆಗೆ ಬಂದಿರುವುದಿಲ್ಲ, ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಬರುತ್ತಿದೆ ಎಂದು ಪೇಚಿಯಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಕುಮಾರ ಅವರು ಪತ್ತೆಯಾದರೆ ಶ್ರೀಮಂಗಲ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. *ಕಾಣೆಯಾದ ವ್ಯಕ್ತಿಯ ಚಹರೆ* ಹೆಸರು…

Read More

ವಿರಾಜಪೇಟೆ ಜೂ.23 NEWS DESK : ಪತ್ರಕರ್ತರು ಸಮಾಜದ ಎರಡು ಕಣ್ಣುಗಳಿದ್ದಂತೆ, ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಬಹುಮುಖ್ಯ ಎಂದು ಸಮಾಜ ಸೇವಕಿ ಕಾಣತಂಡ ಬೀನ ಜಗದೀಶ್ ಹೇಳಿದರು, ನಗರದ ಎ-ಜೆಡ್ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳು ಜನಸಾಮಾನ್ಯರಿಗೆ ತಲುಪಲು ಪತ್ರಕರ್ತರು ಪ್ರಮುಖ ಕಾರಣಕರ್ತರು. ತಮ್ಮ ವೈಯುಕ್ತಿಕ ಬದುಕನ್ನು ಬದಿಗೊತ್ತಿ ಸಮಾಜ ನಿರ್ಮಾಣದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಕೆಲಸ ಶ್ಲಾಘನೀಯ. ಮುಂದಿನ ದಿನಗಳಲ್ಲಿ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಪ್ರಶಸ್ತಿ ಸ್ಥಾಪಿಸುವುದಾಗಿ ಕಾಣತಂಡ ಬೀನ ಜಗದೀಶ್ ಇದೇ ಸಂದರ್ಭ ಭರವಸೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತಾನಾಡಿ, ಪತ್ರಕರ್ತರು ಬದಲಾದ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸಬೇಕಾಗಿದೆ. ಪ್ರಸ್ತುತ ದಿನಗಳಲ್ಲಿ…

Read More

ಕಾರ್ಕಳ ಜೂ.23 NEWS DESK : ಯೋಗ ದಿನಾಚರಣೆಯ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ‘ಮನಃಶಾಂತಿಗೆ ಯೋಗ’ ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ 2 ಗಿನ್ನಿಸ್ ದಾಖಲೆ ಸೃಷ್ಟಿಸಿ, 9 ವಿಶ್ವದಾಖಲೆ ನಿರ್ಮಿಸಿದ ಅದ್ಭುತ ಪ್ರತಿಭೆ ಉಡುಪಿಯ ಸೈಂಟ್ ಸಿಸಿಲಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನುಶ್ರೀ ‘ತನು ಯೋಗ ಭೂಮಿ’ ಮುಖಾಂತರ ಯೋಗ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್, ಯೋಗವು ಕೇವಲ ವ್ಯಾಯಾಮವಲ್ಲ. ಅದು ಬದುಕುವ ಒಂದು ಶೈಲಿ. ನಾವು ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಮತ್ತು ಸಂತುಷ್ಟ ಜೀವನವನ್ನು ಬದುಕಬಹುದು ಎಂದು ಯೋಗದ ಮಹತ್ವವನ್ನು ಕುರಿತು ತಿಳಿಸಿದರು. ಕಾರ್ಯಕ್ರಮದ ಕೊನೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ತನುಶ್ರೀಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಬೋಧಕ – ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.23 NEWS DESK : ಸುಂಟಿಕೊಪ್ಪ ಹೋಬಳಿಯ ಕಾನ್ ಬೈಲು ಬೈಚನಹಳ್ಳಿ ಗ್ರಾಮದಲ್ಲಿ ಮಳೆಯಿಂದ ಮನೆಯ ಗೋಡೆ ಕುಸಿತಗೊಂಡಿದೆ. ಗ್ರಾಮದ ನಿವಾಸಿ ಪಿ.ಬಿ.ಗುರುವ  ಎಂಬವರ ಮನೆಯ ಹಿಂಬದಿಯ ಗೋಡೆ ರಾತ್ರಿ ಸುರಿದ ಬಾರಿ ಮಳೆ ಗಾಳಿಯಿಂದ ಕುಸಿದು ಹಾನಿಯಾಗಿದೆ. ಸ್ಥಳಕ್ಕೆ ಸುಂಟಿಕೊಪ್ಪ ಹೋಬಳಿ  ಕಂದಾಯ ಪರೀವಿಕ್ಷಕರು ಹಾಗೂ ನಾಕೂರು ಶಿರಂಗಾಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಂಟಿ ಪರಿಶೀಲಿಸಿದರು. ಮಡಿಕೇರಿ ತಾಲ್ಲೂಕು ಕಾಟಕೇರಿ ಗ್ರಾಮದ ಅಶ್ವಥ್ ಭಟ್ ಎಂಬುವರ ವಾಸದ ಮನೆಯ ಗೋಡೆ ಮಳೆ ಗಾಳಿಯಿಂದಾಗಿ ಕುಸಿದು ಹಾನಿಯಾಗಿದೆ.

Read More

ಸೋಮವಾರಪೇಟೆ ಜೂ.23 NEWS DESK : ಭಾರತೀಯ ಪುರಾತನ ಪದ್ಧತಿಗಳಲ್ಲಿ ಯೋಗಕ್ಕೆ ವಿಶೇಷ ಸ್ಥಾನಮಾನವಿದೆ. ಯೋಗವನ್ನು ಇಂದು ವಿದೇಶೀಗರು ಹೆಚ್ಚು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಭಾರತೀಯರು ಮಹತ್ವ ಅರಿಯುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅಭಿಪ್ರಾಯಿಸಿದರು. ಶ್ರೀ ರವಿಶಂಕರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಸೋಮವಾರಪೇಟೆ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯೋಗವು ಮನಸ್ಸು, ದೇಹ, ಉಸಿರಿನ ಹೊಂದಾಣಿಕೆಯಾಗಿದೆ. ಇದರ ಅಭ್ಯಾಸದಿಂದ ಜೀವನ ಸುಗಮವಾಗುತ್ತದೆ ಎಂದು ಅಭಿಪ್ರಾಯಿಸಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ರಾಗಿಣಿ ಪ್ರಾಣಾಯಾಮದ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯಿಂದ ಪ್ರತಿನಿತ್ಯ ಯೋಗಾಭ್ಯಾಸ, ಆನಂದೋತ್ಸವ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ಯೋಗದ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಹಾನಗಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶಾಂತ್ ಕುಮಾರ್, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯೆ…

Read More

ಸೋಮವಾರಪೇಟೆ ಜೂ.23 NEWS DESK : ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ಉದ್ಯಮಿ ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಸಂಘದ ಅಧ್ಯಕ್ಷ ಹೆಚ್.ಎ.ನಾಗರಾಜ್, ರವೀಂದ್ರ, ಹೆಚ್.ಬಿ.ರಾಜಪ್ಪ, ಒಕ್ಕಲಿಗರ ಯುವವೇದಿಕೆ ಅಧ್ಯಕ್ಷ ಕೆ.ಬಿ.ಸುರೇಶ್ ಇದ್ದರು.

Read More

ಮಡಿಕೇರಿ NEWS DESK ಜೂ.23 : ಕೊಡಗು ಜಿಲ್ಲೆಯಾದ್ಯಂತ ಆರ್ದ್ರಾ ಮಳೆ ಉತ್ತಮವಾಗಿ ಸುರಿಯುತ್ತಿದೆ. ವಿವಿಧೆಡೆ ಗಾಳಿ ಸಹಿತ ಸಾಧಾರಣ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಕಳೆದ 24 ಗಂಟೆಗಳಲ್ಲಿ 4 ಇಂಚು ಮಳೆ ಸುರಿದಿದೆ. ಮಡಿಕೇರಿ ಸಮೀಪ ಕಗ್ಗೋಡ್ಲುವಿನಲ್ಲಿ ಮುಖ್ಯ ರಸ್ತೆಗೆ ಮರ ಬಿದ್ದು ಕೆಲಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇದೀಗ ಮರವನ್ನು ತೆರವುಗೊಳಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಗಾಳಿ ಮಳೆಯಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಮುಂದಿನ ದಿನಗಳಲ್ಲಿ ಮಳೆ ಬಿರುಸು ಪಡೆದುಕೊಳ್ಳುವ ಸಾಧ್ಯತೆಗಳಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಕಳೆದ 24 ಗಂಟೆಗಳಲ್ಲಿ 5 ಇಂಚು ಮಳೆಯಾಗಿದೆ. ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡAತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 68.54 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1142.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 529.05 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ…

Read More

ಸೋಮವಾರಪೇಟೆ ಜೂ.23 NEWS DESK : ಮಂಡಲ ಬಿಜೆಪಿ ವತಿಯಿಂದ ಕೊಡವ ಸಮಾಜದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗಶಿಕ್ಷಕರಾದ ದೊಡ್ಡಮಳ್ತೆ ಪ್ರದೀಪ್ ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಮಾಜಿ ಶಾಸಕ ಅಪ್ಪಚ್ಚು ರಂಜನ್, ಎಸ್.ಜಿ.ಮೇದಪ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ತಾಲ್ಲೂಕು ಅಧ್ಯಕ್ಷ ಮೋಹಿತ್, ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರುಪಾಕ್ಷ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಮಲ್ಲಜ್ಜಿರ ಪ್ರವೀಣ್, ಎಸ್‍ಸಿ ಮೋರ್ಚಾ ತಾಲ್ಲೂಕು ಕಾರ್ಯದರ್ಶಿ ಪ್ರವೀಣ್ ಮತ್ತು ಪಕ್ಷದ ಕಾರ್ಯಕರ್ತರು ಯೋಗ ಮಾಡಿದರು.

Read More

ಸೋಮವಾರಪೇಟೆ ಜೂ.23 NEWS DESK : ನಿರಂತರ ಯೋಗಕೇಂದ್ರ ಹಾಗೂ ಆಯುರ್ವೇದ ಆಸ್ಪತ್ರೆ ವತಿಯಿಂದ ಮಾನಸ ಹಾಲ್‍ನಲ್ಲಿ ಅಂತರರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು. ಯೋಗಶಿಕ್ಷಕ ಕಿಬ್ಬೆಟ್ಟ ಗಣೇಶ್, ಆಸ್ಪತ್ರೆಯ ವೈದ್ಯಾಧಿಕಾರಿ ಶ್ವೇತ ಇದ್ದರು. ಸಾರ್ವಜನಿಕರು ಯೋಗಾಭ್ಯಾಸ ಮಾಡಿದರು.

Read More