ಮಡಿಕೇರಿ NEWS DESK ಏ.23 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಯುವ ವೇದಿಕೆಯ ಅಧ್ಯಕ್ಷ ಸುರೇಶ್ ಚಕ್ರವರ್ತಿ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರವಾಸಿಗರನ್ನು ಗುರಿ ಮಾಡಿ ಹತ್ಯೆಗೈದಿರುವ ಪಾಕಿಸ್ತಾನಿ ಪ್ರೇರಿತ ದಾಳಿಯನ್ನು ತೀವ್ರವಾಗಿ ಖಂಡಿಸುವುದಲ್ಲದೆ, ಮೃತರ ಆತ್ಮಕ್ಕೆ ಶಾಂತಿ ಕೋರುವುದಾಗಿ ತಿಳಿಸಿದ್ದಾರೆ. ಅಮಾಯಕರ ಮೇಲೆ ಉಗ್ರರು ನಡೆಸಿರುವ ದಾಳಿ ಹೇಡಿತನದಿಂದ ಕೂಡಿದೆ, ಈ ಘಟನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ದೇಶದ ಭದ್ರತೆಯನ್ನು ಹೆಚ್ಚಿಸಬೇಕು. ಭಯೋತ್ಪಾದಕರ ನಿಗ್ರಹದೊಂದಿಗೆ ದೇಶದ್ರೋಹಿಗಳಿಗೆ ಆಶ್ರಯ ನೀಡುವ ಮತ್ತು ಬೆಂಬಲಕ್ಕೆ ನಿಲ್ಲುವವರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ದೇಶದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಾಗಿ ಉಗ್ರರ ಕೃತ್ಯವನ್ನು ಖಂಡಿಸಬೇಕು ಮತ್ತು ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳಿಗೆ ಬೆಂಬಲ ಸೂಚಿಸಬೇಕು ಎಂದು ಸುರೇಶ್ ಚಕ್ರವರ್ತಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಏ.23 NEWS DESK : ಕೊಡವ ಕೌಟುಂಬಿಕ ಹಾಕಿ ಹಬ್ಬವು ಕ್ರೀಡೆಯ ಜತೆಗೇ ತನ್ನ ವೈವಿಧ್ಯತೆಯ ಕಾಯ೯ಕ್ರಮಗಳ ಮೂಲಕ ಜಗತ್ತಿನ ಗಮನವನ್ನೇ ಸೆಳೆದಿದ್ದು, ಇಂಥ ಕ್ರೀಡಾ ಹಬವನ್ನು ಮುಂದಿನ ವಷ೯ಗಳಲ್ಲಿ ಮತ್ತಷ್ಟು ವೈಭವದಿಂದ ಆಯೋಜಿಸುವ ನಿಟ್ಟಿನಲ್ಲಿ ಸವ೯ ಸಮುದಾಯವರೂ ಕೈಜೋಡಿಸಬೇಕೆಂದು ಹಿರಿಯ ರಾಜಕಾರಣಿ ಎಂ.ಸಿ.ನಾಣಯ್ಯ ಕರೆ ನೀಡಿದ್ದಾರೆ. ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಪತ್ರಕತ೯ ಕೊಟ್ಟಿಯಂಡ ಜೀವನ್ ಚಿಣ್ಣಪ್ಪ ಬರೆದು ಪತ್ರಕತ೯ ಅನಿಲ್ ಹೆಚ್.ಟಿ. ಹೊರತಂದಿರುವ ಸ್ಟಿಕ್ ವಕ್೯ ಮ್ಯಾಜಿಕ್ – ಸಾಗಾ ಆಫ್ ಕೊಡವ ಫ್ಯಾಮಿಲಿ ಹಾಕಿ ಎಂಬ ಕೊಡವ ಹಾಕಿ ಪಂದ್ಯಾಟದ 25 ವಷ೯ಗಳ ಇತಿಹಾಸದ ಮಾಹಿತಿಯುಳ್ಳ ಇಂಗ್ಲೀಷ್ ಪುಸ್ತಕವನ್ನು ಲೋಕಾಪ೯ಣೆಗೊಳಿಸಿ ಅವರು ಮಾತನಾಡಿದರು. 5 ಸಾವಿರ ಹಾಕಿ ಆಟಗಾರರು ಪಂದ್ಯಾಟದಲ್ಲಿ ಪಾಲ್ಗೊಳ್ಳುವುದೇ ಚರಿತ್ರಾಹ೯ ವಿಚಾರ. ಲಿಮ್ಕಾ ಬುಕ್ ಆಫ್ ರೆಕಾಡ್ಸ್೯, ಗಿನ್ನೀಸ್ ರೆಕಾಡ್೯ಗೂ ಕೂಡ ಸೇರಿರುವ ಹಾಕಿ ಪಂದ್ಯಾವಳಿ ಮುಂದಿನ ದಿನಗಳಲ್ಲಿ ವಿಶ್ವದಾಖಲೆಯನ್ನು ನಿರಂತರ ಉಳಿಸಿಕೊಳ್ಳುವಂತಾಗಲಿ ಎಂದು ನಾಣಯ್ಯ ಹಾರೈಸಿದರು. ಪಾಂಡಂಡ…
ಮಡಿಕೇರಿ ಏ.23 NEWS DESK : ಬೀದರ್ ನಲ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿರುವುದು, ಕೊಡವ, ಕೊಡವತಿಯರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯ ಪ್ರವೇಶಿಸದಂತೆ ತಡೆಯೊಡ್ಡಿರುವುದು ಮತ್ತು ಕೊಡವ ಧಾರ್ಮಿಕ ಸಂಸ್ಕಾರದ ಬಂದೂಕಿನ ಹಕ್ಕುಗಳಿಗೆ ಅಡ್ಡಿಪಡಿಸಿರುವುದು, ಈ ಮೂರು ಪ್ರಕರಣಗಳು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಇಟಿ ಪರೀಕ್ಷೆ ಸಂದರ್ಭ ಸಿಬ್ಬಂದಿಗಳು ಬಲವಂತವಾಗಿ ಬ್ರಾಹ್ಮಣ ವಿದ್ಯಾರ್ಥಿಯ ಪವಿತ್ರ ಜನಿವಾರವನ್ನು ತೆಗೆಸಿದ್ದಾರೆ. ದೇವಾಲಯ ಪ್ರವೇಶಿಸದಂತೆ ತಡೆದು ಕೊಡವರ ಸಾಂಪ್ರದಾಯಿಕ ಉಡುಪಿಗೆ ಅಗೌರವ ತೋರಲಾಗಿದೆ. ಕೊಡವ ಧಾರ್ಮಿಕ ಸಂಸ್ಕಾರದ ಬಂದೂಕಿನ ಹಕ್ಕುಗಳಿಗೆ ಅಡ್ಡಿಪಡಿಸಿದರು. ಈ ಬೆಳವಣಿಗೆಗಳು ಅತ್ಯಂತ ಸೂಕ್ಷ್ಮ ಸಮುದಾಯಗಳ ಧಾರ್ಮಿಕ ಹಕ್ಕುಗಳಿಗೆ ಒಡ್ಡಿರುವ ಸವಾಲಾಗಿದೆ ಮತ್ತು ಸಂವಿಧಾನದ ಉಲ್ಲಂಘನೆಯಾಗಿದೆ. ಇದು ತಾಲಿಬಾನಿಸಂ ಸಂಸ್ಕೃತಿಯಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಕ್ಷಾರ್ಹವಾಗಿದೆ ಎಂದು ಆರೋಪಿಸಿದ್ದಾರೆ.…
ಮಡಿಕೇರಿ ಏ.23 NEWS DESK :: ಪ್ರತಿ ವರ್ಷ ಜಗತ್ತಿನ ಎಲ್ಲ ದೇಶಗಳಲ್ಲಿ ಏಪ್ರಿಲ್ 22 ರಂದು ವಿಶ್ವ ಭೂ ದಿನ (ಅರ್ಥ್-ಡೇ) ವನ್ನು ಆಚರಿಸಲಾಗುತ್ತಿದೆ. ಅರ್ಥ್-ಡೇ ಅಂದರೆ ಭೂಮಿಯ ಬರ್ಥ್- ಡೇ ! ಅಂದರೆ ಭೂಮಿಯ ಹುಟ್ಟುಹಬ್ಬ. ಅಂದರೆ ಅಮ್ಮನ ಹುಟ್ಟುಹಬ್ಬದ ದಿನ ಅವಳು ತುಂಬ ಸುಂದರವಾಗಿ, ನಗುನಗುತ್ತ ಓಡಾಡುವ ಹಾಗೂ ಭೂಮಾತೆಯ ಮಡಿಲ್ಲಲ್ಲೂ ಈ ದಿನಗಳಲ್ಲಿ ಪರಿಸರದಲ್ಲಿ ಗಿಡಮರ, ಹೂ ಬಳ್ಳಿ, ಪಶು-ಪಕ್ಷಿಗಳಿಗೂ ಸಡಗರ -ಸಂಭ್ರಮ. ನಾವೀಗ ಬಾಹ್ಯಾಕಾಶ ಯುಗದಲ್ಲಿದ್ದೇವೆ. ಹಾಗೆಂದು ಭೂಮಿಯ ಯುಗವನ್ನು ಮರೆತುಬಿಟ್ಟರೆ ಹೇಗೆ ? ಮನುಕುಲ ಸೇರಿದಂತೆ ಸಕಲ ಜೀವಿಗಳ ಸಂರಕ್ಷಣೆಗೆ ಭೂಮಿಯ ಸಂರಕ್ಷಣೆ ಕೂಡ ಅಗತ್ಯವಲ್ಲವೇ ? ಆದ್ದರಿಂದ, ನಾವು ಈ ಭೂ ದಿನದ ಸಂದರ್ಭ ಭೂಮಿಯ ಸಂರಕ್ಷಣೆ ಮತ್ತು ಭೂ ಮಂಡಲದ ಎಲ್ಲಾ ಜೀವಿಗಳ ಸಂರಕ್ಷಣೆ, ನೀರು ಮತ್ತು ವಾಯುಮಂಡಲದ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವ ಮೂಲಕ ಭೂ ಸಂರಕ್ಷಣೆಗಾಗಿ ಈ ದಿನವನ್ನು ಆಚರಿಸಲೇಬೇಕಾಗಿದೆ. ಈಗಾಗಲೇ ಬೇಸಿಗೆ ಆರಂಭವಾಗಿದೆ. ಬೇಸಿಗೆಯ ವಸಂತ…
ಮಡಿಕೇರಿ NEWS DESK ಏ.23 : ಕಾವೇರಿ ಮಾತೆಯ ಉಗಮ ಸ್ಥಾನ ತಲಕಾವೇರಿಯಲ್ಲಿ ಪ್ರಪ್ರಥಮ ಬಾರಿಗೆ ಅತಿರುದ್ರ ಜಪಯಜ್ಞ ಹಮ್ಮಿಕೊಳ್ಳಲಾಗಿದೆ ಎಂದು ಜಪಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ಕೆ.ಎಸ್.ರಮೇಶ್ ಹೊಳ್ಳ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೇ 11ರಿಂದ 21ರವರೆಗೆ ನಡೆಯುವ ಜಪಯಜ್ಞಕ್ಕೆ ರಾಜ್ಯಾದ್ಯಾಂತದಿಂದ 50ಕ್ಕೂ ಅಧಿಕ ಋತ್ವಿಜರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಅವಧೂತರಾದ ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಸಂಕಲ್ಪಿಸಿರುವ ಕೋಟ್ಯಧಿಕ ಶ್ರೀ ರುದ್ರ ಜಪ ಕೈಂಕರ್ಯವು ಕಳೆದ ಐದು ವರ್ಷಗಳಿಂದ ರಾಜ್ಯದ ಎಲ್ಲೆಡೆ ನಡೆಯುತ್ತಿದ್ದು, 50ಲಕ್ಷ ರುದ್ರ ಜಪ ಪೂರ್ಣವಾಗಿದೆ. 2030ರ ಜನವರಿ 18ಕ್ಕೆ ಶಿವಮೊಗ್ಗದಲ್ಲಿ ಜಪಯಜ್ಞ ಸಾಂಗತವಾಗಲಿದೆ. ಲೋಕಕಲ್ಯಾಣಾರ್ಥವಾಗಿ ನಡೆಯುತ್ತಿರುವ ಈ ಜಪಯಜ್ಞಕ್ಕೆ ಜಿಲ್ಲೆಯ ಆಸ್ತಿಕ ಬಂಧುಗಳು ಮುಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಮೇ 11ರಿಂದ 19ರವರೆಗೆ ತಲಕಾವೇರಿ ಸನ್ನಿಧಿಯಲ್ಲಿ 9ದಿನಗಳು ಪ್ರತಿದಿನ ಮೂರು ಆವರ್ತ ಶ್ರೀ ರುದ್ರ ಜಪ ಜರುಗಲಿದೆ. ಋತ್ವಿಜರಿಗೆ ಊಟೋಪಹಾರ ಹಾಗೂ ಉಳಿದುಕೊಳ್ಳುವ ವ್ಯವಸ್ಥೆಯನ್ನು ಕೈಲಾಸಾಶ್ರಮದಲ್ಲಿ ಮಾಡಲಾಗಿದೆ. ಮೇ 20ರಂದು…
ಮಡಿಕೇರಿ NEWS DESK ಏ.23 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸುತ್ತದೆ ಮತ್ತು ಭಯೋತ್ಪಾದಕರ ದಾಳಿಯಿಂದ ಅಸುನೀಗಿದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತದೆ ಎಂದು ಸಂಘದ ತಾಲ್ಲೂಕು ಅಧ್ಯಕ್ಷ ವಿ.ಜಿ.ಮೋಹನ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಮ್ಮು ಕಾಶ್ಮೀರದಲ್ಲಿ ಮತ್ತೆ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವ ಪಾಕ್ ಬೆಂಬಲಿತ ಭಯೋತ್ಪಾದಕರ ಹೆಡೆಮುರಿ ಕಟ್ಟಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಜಮ್ಮು ಕಾಶ್ಮೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಕೇಂದ್ರ ಸರ್ಕಾರ ಉಗ್ರರಿಗೆ ನೆರವು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಬೇಕು ಎಂದು ಆಗ್ರಹಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಉಗ್ರರು ನಡೆಸಿದ ಹೇಯ ಕೃತ್ಯವನ್ನು ಯಾರೂ ಕ್ಷಮಿಸಲು ಸಾಧ್ಯವಿಲ್ಲ. ಈ ದಾಳಿಯನ್ನು…
ಮಡಿಕೇರಿ NEWS DESK ಏ.23 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡನೀಯವಾಗಿದ್ದು, ದೇಶದ್ರೋಹಿಗಳನ್ನು ಮಟ್ಟ ಹಾಕುವ ಕಾಲ ಸನ್ನಿಹಿತವಾಗಿದೆ ಎಂದು ಮಡಿಕೇರಿ ನಗರ ಮಂಡಲ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ ಅವರು, ಪ್ರವಾಸಿಗರನ್ನು ಹತ್ಯೆ ಮಾಡಿ ಅಮಾನವೀಯವಾಗಿ ನಡೆದುಕೊಂಡ ಪಾಕಿಸ್ತಾನಿ ಬೆಂಬಲಿತ ಭಯೋತ್ಪಾದಕರನ್ನು ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನಾಶ ಮಾಡಲಿದೆ ಎಂದು ತಿಳಿಸಿದ್ದಾರೆ. ಮೋದಿಯವರು ಪ್ರಧಾನಿಯಾದ ನಂತರ ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ನಿಯಂತ್ರಿಸಿದ್ದಾರೆ. ಮೊದಲಿದ್ದ ಆತಂಕದ ವಾತಾವರಣ ದೂರವಾಗಿರುವುದರಿಂದ ಇಲ್ಲಿಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ. 370ನೇ ವಿಧಿ ರದ್ದುಪಡಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ. ಜನರು ಶಾಂತಿಯುತ ಜೀವನವನ್ನು ನಡೆಸುತ್ತಿದ್ದಾರೆ ಮತ್ತು ಯಾವುದೇ ಭಯವಿಲ್ಲದೆ ಮುಕ್ತವಾಗಿ ಓಡಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯೂ ಶಾಂತಿಯುತವಾಗಿ ನಡೆದಿದೆ. ಇಲ್ಲಿನ ಎಲ್ಲಾ ವ್ಯವಸ್ಥೆಗಳು ಸುಧಾರಣೆಯ ಹಂತದಲ್ಲಿರುವುದನ್ನು ಸಹಿಸದ ಭಯೋತ್ಪಾದಕರು ಪೈಶಾಚಿಕ…
ಮಡಿಕೇರಿ ಏ.23 NEWS DESK : ಅನಿರ್ದಿಷ್ಟಾವಧಿಗೆ ಲಾರಿ ಮುಷ್ಕರ ನಡೆಯುತ್ತಿರುವುದರಿಂದ ಸಾರಿಗೆ ಇಲಾಖೆ ವತಿಯಿಂದ ಕಂಟ್ರೋಲ್ ರೂಂ ಸ್ಥಾಪನೆಯಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ 24*7 ಕಚೇರಿಯಲ್ಲಿ ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಕಚೇರಿ ದೂ.ಸಂ.08272-225785 ನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಏ.24 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಹಕಾರದಲ್ಲಿ ಡಾ.ರಾಜ್ ಕುಮಾರ್ ಅವರ 97ನೇ ಜನ್ಮ ದಿನಾಚರಣೆಯು ಏಪ್ರಿಲ್, 24 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಏ.23 NEWS DESK : ದ್ವಿತೀಯ ಪಿಯುಸಿ ಪರೀಕ್ಷೆ-2 ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನ್ನು ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಪರೀಕ್ಷೆ-1 ನಡೆಸಿದಂತೆ ಪರೀಕ್ಷೆ-2 ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಅವರು ಮಾತನಾಡಿ ಏ.24 ರಿಂದ ಮೇ 8 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಯು ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಇಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3470 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು. ವೆಬ್ಕಾಸ್ಟಿಂಗ್ ಸಹ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಪ್ರಾಂಶುಪಾಲರು ಇತರರು ಇದ್ದರು.






