ಲೇಖಕ: admin

ಮಡಿಕೇರಿ NEWS DESK ಏ.22 : ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ-2025 ಅನ್ನು ವಿರೋಧಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಪಕ್ಷದ ಅಲ್ಪಸಂಖ್ಯಾತರ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಾಮೀಯ ಮಸೀದಿ ಮುಂಭಾಗದಿಂದ ಗಾಂಧಿ ಮೈದಾನದವರೆಗೆ ಘೋಷಣೆಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಕೇಂದ್ರದ ಧೋರಣೆಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಗಾಂಧಿ ಮೈದಾನದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು, ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಕಾನೂನಾತ್ಮಕ ಹೋರಾಟ ರೂಪಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ವಕ್ಫ್ಗೆ ಸಂಬಂಧಿಸಿದ ಸುಮಾರು 6.50 ಲಕ್ಷ ಏಕರೆ ಜಾಗವಿದ್ದರೆ, ದೇಶದಾದ್ಯಂತ ಸುಮಾರು 37 ಲಕ್ಷ ಏಕರೆ ಜಾಗವಿದೆ. ಇದರ ಒಟ್ಟು ಮೌಲ್ಯ 20 ಲಕ್ಷ ಕೋಟಿ…

Read More

*ಮೈದಾನ 2* ನಾಟೋಳಂಡ ಮತ್ತು ಮುದ್ದಂಡ ನಡುವಿನ ಪಂದ್ಯದಲ್ಲಿ ನಿಗಧಿತ ಅವಧಿಯಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 2-1 ಗೋಲುಗಳ ಅಂತರದಲ್ಲಿ ನಾಟೋಳಂಡ ಜಯ ಸಾಧಿಸಿತು. ಮುದ್ದಂಡ ಮಿಶಿಕಾ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಆದೇಂಗಡ ಮತ್ತು ಬೊಳ್ಳೇರ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಆದೇಂಗಡ ಗೆಲುವು ದಾಖಲಿಸಿತು. ಆದೇಂಗಡ ಪರ ತಶ್ವಿಕ 2 ಗೋಲು ದಾಖಲಿಸಿದರು. ಬೊಳ್ಳೇರ ಜ್ಯೋತಿ 1 ಗೋಲು ಬಾರಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಂಬೀರಂಡ ಮತ್ತು ಮಚ್ಚಮಾಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಕಂಬೀರಂಡ ತಂಡ ಜಯ ಸಾಧಿಸಿತು. ಕಂಬೀರಂಡ ಪರ ಮಿಲನಾ ಹಾಗೂ ಪೊನ್ನಮ್ಮ ತಲಾ 1 ಗೋಲು ದಾಖಲಿಸಿದರು. ಮಚ್ಚಮಾಡ ಪರ ಪಾಯಲ್ 1 ಗೋಲು ಬಾರಿಸಿದರು. ಮಚ್ಚಮಾಡ ವಿದ್ಯಾ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ತೀತಿರ ಮತ್ತು ಕೂತಂಡ ನಡುವಿನ ಪಂದ್ಯದಲ್ಲಿ 3-0…

Read More

*ಮೈದಾನ 2* ಬೆಳಿಗ್ಗೆ 9 ಗಂಟೆಗೆ ತೀತಿರ ಮತ್ತು ಚೆಯ್ಯಂಡ, 9.30 ಗಂಟೆಗೆ ಚೇನಂಡ ಮತ್ತು ಕಂಬೀರಂಡ, 10 ಗಂಟೆಗೆ ಆದೇಂಗಡ ಮತ್ತು ತೆಕ್ಕಡ, 10.30 ಗಂಟೆಗೆ ಅಚ್ಚಪಂಡ ಮತ್ತು ಕುಟ್ಟಂಡ (ಮಾದಾಪುರ), 11 ಗಂಟೆಗೆ ಚೌರೀರ (ಹೊದವಾಡ) ಮತ್ತು ಮೇವಡ, 11.30 ಗಂಟೆಗೆ ಚೇಂದಿರ ಮತ್ತು ಕುಪ್ಪಂಡ (ಕೈಕೇರಿ), ಮಧ್ಯಾಹ್ನ 12 ಗಂಟೆಗೆ ನಾಪಂಡ ಮತ್ತು ನಾಟೋಳಂಡ, 12.30 ಗಂಟೆಗೆ ಕೇಚೆಟ್ಟಿರ ಮತ್ತು ಚೋಯಮಾಡಂಡ, 1 ಗಂಟೆಗೆ ಚೆಪ್ಪುಡಿರ ಮತ್ತು ಮಾಳೇಟಿರ (ಕೆದಮುಳ್ಳೂರು), 1.30 ಗಂಟೆಗೆ ಪಾಂಡಿರ (ಹೆಬ್ಬೆಟ್ಟಿಗೇರಿ) ಮತ್ತು ಕಾಂಡಂಡ, 2 ಗಂಟೆಗೆ ಬಾಚಿನಾಡಂಡ ಮತ್ತು ಮುಕ್ಕಾಟಿರ (ದೊಡ್ಡಪುಲಿಕೋಟು), 2.30 ಗಂಟೆಗೆ ಶಿವಚಾಳಿಯಂಡ ಮತ್ತು ಕಲಿಯಂಡ, 3 ಗಂಟೆಗೆ ತೀತಿರ/ ಚೆಯ್ಯಂಡ ಮತ್ತು ಸಣ್ಣುವಂಡ, 3.20ಕ್ಕೆ ಚೇನಂಡ/ಕಂಬೀರಂಡ ಮತ್ತು ಆದೇಂಗ/ ತೆಕ್ಕಡ, 3.40ಕ್ಕೆ ಕುಪ್ಪಂಡ(ಕೈಕೇರಿ), ಚೇಂದಿರ ಮತ್ತು ಚೌರೀರ (ಹೊದವಾಡ)/ ಮೇವಡ, ಸಂಜೆ 4 ಗಂಟೆಗೆ ನಾಪಂಡ/ ನಾಟೋಳಂಡ ಮತ್ತು ಕೇಚೆಟ್ಟಿರ/ ಚೋಯಮಾಡಂಡ, 4.30 ಗಂಟೆಗೆ ಪಾಂಡಿರ (ಹೆಬೆಟ್ಟಿಗೇರಿ)…

Read More

ಮಡಿಕೇರಿ ಏ.22 NEWS DESK : ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣವನ್ನು ಖಂಡಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ ಪ್ರಮುಖರು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಕ್ರಮ ಖಂಡನೀಯ, ಈ ತಪ್ಪೆಸಗಿದ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಜನಿವಾರವನ್ನು ಉಪನಯನದ ಕಾರ್ಯಕ್ರಮದಲ್ಲಿ ತಂದೆಯು ಪವಿತ್ರವಾದ ಗಾಯತ್ರಿ ಮಂತ್ರವನ್ನು ಉಪದೇಶಿಸಿ ನೆರೆದ ಗುರುಹಿರಿಯರ ಆರ್ಶೀವಾದದೊಂದಿಗೆ ವಟುವಿಗೆ ಹಾಕುತ್ತಾರೆ. ಜನಿವಾರದಲ್ಲಿ ಗಾಯತ್ರಿ ದೇವಿ ಹಾಗೂ ಸೂರ್ಯನ ಆವಾಹನೆ ಮಾಡಲಾಗಿರುತ್ತದೆ. ಜನಿವಾರ ಧಾರಣೆಯು ರಾಮಯಣದ ಕಾಲದಿಂದಲೇ ರೂಢಿಯಲ್ಲಿದೆ. ಜನಿವಾರ ಧಾರಣಿಯು ಸನಾತನ ಧರ್ಮದ ಪದ್ಧತಿಯಾಗಿದ್ದು, ಸಂವಿಧಾನದಲ್ಲೂ ಈ ಕುರಿತು ಆಕ್ಷೇಪ ಇಲ್ಲದಿರುವಾಗ ವಿದ್ಯಾರ್ಥಿಗಳ ಮಾನಸಿಕತೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡ ಸಿಬ್ಬಂದಿಯ ವರ್ತನೆ ಕ್ಷಮಾರ್ಹವಲ್ಲ. ಜನ ಪ್ರತಿನಿಧಿಗಳು, ಸಾಮಾಜಿಕ ಮುಖಂಡರು, ಧಾರ್ಮಿಕ…

Read More

*ಮೈದಾನ 1* ಮೇಚಿಯಂಡ ಮತ್ತು ಚೇಂದಂಡ 6-0 ಗೋಲುಗಳ ಅಂತರದಲ್ಲಿ ಚೇಂದಂಡ ತಂಡ ಜಯ ಸಾಧಿಸಿತು. ಚೇಂದಂಡ ಪರ ಸುಬ್ಬಿ ಸುಬ್ಬಯ್ಯ 4 ಹಾಗೂ ನಿಖಿನ್ ತಿಮ್ಮಯ್ಯ ಹಾಗೂ ಬಿಪಿನ್ ಬೋಪಣ್ಣ ತಲಾ 1 ಗೋಲು ದಾಖಲಿಸಿದರು. ಮೇಚಿಯಂಡ ವಿನಿತ್ ನಾಚಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಂಜಪರವಂಡ ಮತ್ತು ಚೆಪ್ಪುಡಿರ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ಜಯ ಸಾಧಿಸಿತು. ಚೆಪ್ಪುಡಿರ ಪರ ಚೇತನ್ ಚಿಣ್ಣಪ್ಪ, ವಚನ್ ಚಿಣ್ಣಪ್ಪ, ನರನ್ ಕಾರ್ಯಪ್ಪ ಹಾಗೂ ಪ್ರಣವ್ ತಿಮ್ಮಯ್ಯ ತಲಾ 1 ಗೋಲು ದಾಖಲಿಸಿದರು. ಅಂಜಪರವಂಡ ಜತನ್ ಅಪ್ಪಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಸಣ್ಣುವಂಡ ಮತ್ತು ಮಂಡೇಪಂಡ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ಮಂಡೇಪಂಡ ಗೆಲುವು ಸಾಧಿಸಿತು. ಮಂಡೇಪಂಡ ಪರ ಕವನ್ ಮುತ್ತಪ್ಪ 2, ಚಂಗಪ್ಪ ಹಾಗೂ ನಂಜಪ್ಪ ತಲಾ 1 ಗೋಲು ದಾಖಲಿಸಿದರು. ಸಣ್ಣುವಂಡ ಪರ ಯತಿನ್ ಅಯ್ಯಪ್ಪ 1 ಗೋಲು…

Read More

*ಮೈದಾನ 1* ಬೆಳಿಗ್ಗೆ 9 ಗಂಟೆಗೆ ನೆಲ್ಲಮಕ್ಕಡ ಮತ್ತು ಕೋಳೇರ, 10 ಗಂಟೆಗೆ ಕೂತಂಡ ಮತ್ತು ಅಮ್ಮಣಿಚಂಡ, ಮಧ್ಯಾಹ್ನ 12 ಗಂಟೆಗೆ ನಾಳಿಯಂಡ ಮತ್ತು ಪುದಿಯೊಕ್ಕಡ, 1.30 ಗಂಟೆಗೆ ಕರವಂಡ ಮತ್ತು ಕಾಂಡಂಡ

Read More

ಮಡಿಕೇರಿ ಏ.22 NEWS DESK : ಜಿಲ್ಲೆಯ ಕೂಲಿ ಕಾರ್ಮಿಕರು ಹಾಗೂ ವಸತಿ ರಹಿತರಿಗೆ ನಿವೇಶನ ಮತ್ತು ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಏ.25 ರಂದು ಮಡಿಕೇರಿಯಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಅವರ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಮೆರವಣಿಗೆಯಲ್ಲಿ ಸಾಗಿ ನಂತರ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.   ಆಕರ್ಷಕ ಪ್ರವಾಸಿತಾಣಗಳ ಮೂಲಕ ವಿಶ್ವದಲ್ಲೇ ಖ್ಯಾತಿಯನ್ನು ಗಳಿಸಿರುವ ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ದುಡಿಯುತ್ತಿರುವ ಪರಿಶಿಷ್ಟರು, ಹಿಂದುಳಿದವರು ಹಾಗೂ ಕಡು ಬಡವರು ಸ್ವಂತ ಮನೆ, ಕೃಷಿಭೂಮಿ ಮತ್ತು ಸ್ಮಶಾನದಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಆರೋಪಿಸಿರು. ಕಾಫಿ…

Read More

ಪುತ್ತೂರು ಏ.22 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ. ಮೈಸೂರಿನ ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿಂಗ್‍ನಲ್ಲಿ ಮ್ಯಾಟ್ ಅಂಕಣದಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡವು ರನ್ನರ್ ಅಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಮಂಗಳೂರಿನಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ದ್ವಿತೀಯ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು. ತಂಡದಲ್ಲಿ ಅಂತಿಮ ವರ್ಷದ ಎಂಬಿಎ ವಿಭಾಗದ ಬಬಿತ್‍ರಾಜ್, ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ನಿತ್ಯ.ಎನ್, ಪ್ರಥಮ ಎಲೆಕ್ಟ್ರಾನಿಕ್ಸ್ ವಿಭಾಗದ ತೇಜಸ್ ಪ್ರಥಮ ಮೆಕ್ಯಾನಿಕಲ್ ವಿಭಾಗದ ಹಿತೇಶ್, ವಿಜೇತ್, ಗೌರವ್, ಪ್ರತೀಕ್, ಯಶಸ್, ಪ್ರಥಮ ಎಲೆಕ್ಟ್ರಾನಿಕ್ಸ್ ವಿಭಾಗದ ವಂಶಿಕ್, ದ್ವಿತೀಯ ಮೆಕ್ಯಾನಿಕಲ್ ವಿಭಾಗದ ಭುವನ್‍ರಾಮ್, ಅಂತಿಮ ಎಲೆಕ್ಟ್ರಾನಿಕ್ಸ್ ವಿಭಾಗದ…

Read More

ವಿರಾಜಪೇಟೆ ಏ.22 NEWS DESK :  ಬೆಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪ್ರತಿಷ್ಠಾ ವರ್ಧಂತಿ ಮಹೋತ್ಸವ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾ ಚಂಡಿಕಾ ಹೋಮವು ಶ್ರದ್ಧಾಭಕ್ತಿಯಿಂದ ಜರುಗಿತು. ಪ್ರತಿಷ್ಠಾ ಮಹೋತ್ಸವದ ಹಿಂದಿನ ದಿವಸ ಪುರೋಹಿತರು ಪಾರಾಯಣವನ್ನು ಮಾಡಿದರು. ಮುಂಜಾನೆ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ನಾಗ, ಶ್ರೀ ವನದುರ್ಗಾ ದೇವರುಗಳಿಗೆ ಪ್ರಾರ್ಥನೆಯನ್ನು ಸಲ್ಲಿಸುವುದರ ಮೂಲಕ ಧಾರ್ಮಿಕ ಕಾರ್ಯಗಳನ್ನು ಆರಂಭಿಸಲಾಯಿತು. ಮಹಾಗಣಪತಿ ಹೋಮದ ನಂತರ ಪುರೋಹಿತರು ಸಂಕಲ್ಪ ಮಾಡಿದರು. ಶ್ರೀ ಲಕ್ಷ್ಮಿ ಸತ್ಯನಾರಾಯಣ ಪೂಜೆಯು ಶಾಸ್ತ್ರೋಕ್ತವಾಗಿ ನಡೆಯಿತು. ಅರ್ಚಕರು ಮಹಾ ಚಂಡಿಕಾ ಹವನದ ಪ್ರಯುಕ್ತ ಸಂಕಲ್ಪ ಪೂಜೆಯನ್ನು ಮಾಡಿ ಪ್ರಾರ್ಥಿಸಿದರು. ಶ್ರೀ ಲಕ್ಷ್ಮಿ ಸತ್ಯನಾರಾಯಣ ಸ್ವಾಮಿಗೆ ಹಾಗೂ ಶ್ರೀ ದೇವಿಗೆ ಅಲಂಕಾರ ಸೇವೆ, ಅಷ್ಟೋತ್ತರ ಪಠಣ, ಕುಂಕುಮಾರ್ಚನೆ, ನೈವೇದ್ಯ ಅಭಿಷೇಕ ಸೇವೆಗಳು ನಡೆದವು. ಮಹಾ ಚಂಡಿಕಾ ಯಾಗದ ಸಂದರ್ಭ  ಅಷ್ಟಾ ವದನ ಸೇವೆ ನಡೆದು ಚಂಡೆ ಬಳಗದವರಿಂದ ಚಂಡೆ ಸೇವೆ, ಭರತನಾಟ್ಯ, ಭಜನೆ,…

Read More

ಮಡಿಕೇರಿ ಏ.22 NEWS DESK : ವನ್ಯಜೀವಿ-ಮಾನವ ಸಂಘರ್ಷ ಶಾಶ್ವತವಾಗಿ ತಡೆಗಟ್ಟುವ ಹಿನ್ನೆಲೆಯಲ್ಲಿ ಅತ್ಯಂತ ಗಂಭೀರವಾಗಿ ಕಾರ್ಯಸೂಚಿಗಳನ್ನು ರೂಪಿಸುತ್ತಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಇಂದು ಅರಣ್ಯ ಇಲಾಖೆ ವತಿಯಿಂದ ನಡೆಯುತ್ತಿರುವ ಹುಲಿ ಸೆರೆ ಕಾರ್ಯಾಚರಣೆಯ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಿದರು. ಪೊನ್ನಂಪೇಟೆ ತಾಲೂಕು ಬಿರುನಾಣಿ ಗ್ರಾಮದ, ತೆರಾಲು ಭಾಗದಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಸೆರೆ ಕಾರ್ಯಾಚರಣೆಯ ನೇತೃತ್ವ ವಹಿಸಿದ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನವನ್ನು ಬಳಸಿ ಅತ್ಯಂತ ಶೀಘ್ರದಲ್ಲಿ ಕಾರ್ಯಾಚರಣೆಯನ್ನು ಮುಗಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷ ಪ್ರಶಾಂತ್, ಬಿರುನಾಣಿ ವಲಯ ಅಧ್ಯಕ್ಷ ಪ್ರೀತಮ್, ಕಾಂಗ್ರೆಸ್…

Read More