ಮಡಿಕೇರಿ ಏ.21 NEWS DESK : ವಿರಾಜಪೇಟೆ ತಾಲ್ಲೂಕು ಆರ್ಜಿ ಗ್ರಾಮದ ಅನ್ವಾರುಲ್ ಉದಾ ಶಾಲೆಯ ಸಮೀಪ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯರು ಹಾಗೂ ಶಾಲಾ ಮಕ್ಕಳ ಅನುಕೂಲಕ್ಕಾಗಿ ನಿರ್ಮಿಸಿದ ಈ ರಸ್ತೆಯ ಸದುಪಯೋಗವನ್ನು ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,ಪುರಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಲೇಖಕ: admin
ಸುಂಟಿಕೊಪ್ಪ ಏ.21 NEWS DESK : ಸುಂಟಿಕೊಪ್ಪದ ಸಂತ ಅಂತೋಣಿ ದೇವಾಲಯದ ವತಿಯಿಂದ ಸಂತ ಮೇರಿ ಶಾಲಾವರಣದಲ್ಲಿ ವಿವಿಧ ಸಾಂಘ್ಯಗಳ ಮೂಲಕ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್, ಕನ್ಯಾಸ್ತ್ರೀಯರು ಹಾಗೂ ಕ್ರೈಸ್ತ ಭಾಂದವರು ಶ್ರದ್ಧಾಭಕ್ತಿಯಿಂದ ನೆರವೇರಿಸುವ ಮೂಲಕ ಪರಸ್ಪರ ಶುಭಾಶಯಗಳನ್ನು ವಿನಿವiಯ ಮಾಡಿಕೊಂಡು ಈಸ್ಟರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಪುನರುತ್ಥಾನ ಹಬ್ಬದ ಅಂಗವಾಗಿ ಶನಿವಾರ ರಾತ್ರಿ ಸಂತ ಮೇರಿ ಶಾಲಾವರಣದಲ್ಲಿ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಪಾ.ವಿಜಯಕುಮಾರ್ ನೂತನ ಬೆಂಕಿಯನ್ನು ಆರ್ಶಿವಚಿಸಿ, ಜೇನುಮೇಣದಿಂದ ತಯಾರಿಸಲಾದ ದೊಡ್ಡ ಮೊಂಬತ್ತಿಯನ್ನು ಆರ್ಶಿವಚಿಸಿ ಸಂತ ಮೇರಿ ಶಾಲಾವರಣದಿಂದ ಅದನ್ನು ಬೆಳಗಿಸಿಕೊಂಡು ಮೆರವಣಿಗೆಯೊಂದಿಗೆ ಪೀಠದಲ್ಲಿ ತಂದು ಗುರುಗಳು ಪ್ರತಿಷ್ಠಾಪಿಸಿ ಆಚರಣೆಗೆ ಮುನ್ನುಡಿಯನ್ನು ಇಡಲಾಯಿತು. ನಂತರ ನಡೆದ ಪ್ರಾರ್ಥನಾ ಕೂಟ ಹಾಗೂ ಆಡಂಬರ ದಿವ್ಯ ಬಲಿಪೂಜೆಯಲ್ಲಿ ಮರಣಹೊಂದಿದ ಸಮಾಧಿಗೊಳಿಸಲಾದ ಯೇಸುವು ಸಮಾಧಿಯಿಂದ ಪುನರ್ತ್ಥಾನಗೊಂಡಿರುವ ರೂಪಕ ದೃಶ್ಯದ ಅಂಗವಾಗಿ ಪ್ರಭು ಕ್ರಿಸ್ತರ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಬಲಿಪೂಜೆಯನ್ನು ಸಮರ್ಪಿಸಿದರು.
ವಿರಾಜಪೇಟೆ ಏ.21 NEWS DESK : ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್ ನಲ್ಲಿ ಈಸ್ಟರ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶುಕ್ರವಾರದಂದು ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಆಚರಣೆಗಳು ಹಾಗೂ ಸಾಂಗ್ಯ ದ ಆಚರಣೆಗಳ ಮೂಲಕ ಪ್ರಭು ಯೇಸು ಕ್ರಿಸ್ತರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಶಿಲುಬೆಗೆ ಭಕ್ತರು ನಮಿಸಿ ಗೌರವಿಸಿದರು. ರಾತ್ರಿ ಚರ್ಚ್ ನಲ್ಲಿ ವಿಶೇಷ ಪೂಜೆ ನಡೆಯಿತು. ದೇವರ ಪುನಃರುತನದ ಸಂಕೇತವಾದ ಈಸ್ಟರ್ ಸಂಡೆ ಹಬ್ಬದ ಪ್ರಯುಕ್ತ ಬೆಳಿಗ್ಗೆ ವಿಶೇಷ ಬಲಿಪೂಜೆಯನ್ನು ನಡೆಸಲಾಯಿತು. ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ರೆ. ಫಾ. ಜೇಮ್ಸ್ ಡೊಮಿನಿಕ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಧಾನ ಧರ್ಮಗುರುಗಳು ಆಶೀರ್ವಚನ ನೀಡಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಮತ್ತೋರ್ವ ಧರ್ಮಗುರುಗಳು ಹಾಗೂ ಸಂತ ಅನ್ನಮ್ಮ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಪ್ರಾರ್ಥಿಸಿ ತ್ಯಾಗ, ಬಲಿದಾನದ ಹಬ್ಬ ಇದಾಗಿದ್ದು, ಪ್ರಭು ಯೇಸು ಕ್ರಿಸ್ತರು ಮನುಕುಲದ ಉದ್ದಾರಕ್ಕೆ ಜನಿಸಿದರು ಎಂದರು.…
ಸುಂಟಿಕೊಪ್ಪ ಏ.21 NEWS DESK : ಪನ್ಯದಉದ್ದಿಬಾಣೆ ಮಠದಲ್ಲಿ ಶ್ರದ್ಧಾಭಕ್ತಿಯಿಂದ ದೈವಗಳ ನೇಮೋತ್ಸವ ನಡೆಯಿತು. ಬೆಳಿಗ್ಗೆ ಗಣಹೋಮ, ಸತ್ಯ ನಾರಾಯಣ ಪೂಜೆಯೊಂದಿಗೆ ಆರಂಭಗೊಂಡು ರಾತ್ರಿ ಭಂಡಾರ ತೆಗೆಯಲಾಯಿತು. ಪ್ರಮುಖ ಧರ್ಮ ಶಕ್ತಿ ದೈವಗಳಾದ ಪಾಷಾಣ ಮೂರ್ತಿ(ಕಲ್ಲರ್ಟಿ) ಮತ್ತು ಪಂಜುರ್ಲಿ ಗುಳಿಗ ದೈವಗಳ ಕೋಲ ನಡೆಯಿತು. ಮರುದಿನ ಗುಳಿಗ ಮತ್ತು ಕೊರಗಜ್ಜನ ನೇಮ, ಅಗೇಲು ಸೇವೆ ನಡೆಯಿತು. ನೆರೆದಿದ್ದ ಸುತ್ತಮುತ್ತಲಿನ ನೂರಾರು ಭಕ್ತರು ದೈವಗಳಿಗೆ ಹರಕೆ ಒಪ್ಪಿಸಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಸುಂಟಿಕೊಪ್ಪ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಮುಖ್ಯಸ್ಥರಾದ ಮೋಣಪ್ಪ ಪೂಜಾರಿ, ಜಿನ್ನಪ್ಪ ಪೂಜಾರಿ, ಮಣಿ ಮುಖೇಶ್, ಕೆ.ಪಿ.ಜಗನ್ನಾಥ್, ನಾಗೇಶ್ ಪೂಜಾರಿ, ರಮೇಶ್ ಪೂಜಾರಿ, ಪದ್ಮನಾಭ, ಬಿ.ಕೆ.ಮೋಹನ್ ದೇಜಪ್ಪ ಇತರರು ಇದ್ದರು.
ಮಡಿಕೇರಿ NEWS DESK ಏ.20 : ಗೌಡ ಪ್ರೀಮಿಯರ್ ಲೀಗ್ ಜಿಪಿಎಲ್ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಮಡಿಕೇರಿಯಲ್ಲಿ ಉದ್ಘಾಟನೆಗೊಂಡಿದ್ದು, 10 ತಂಡಗಳ ನಡುವೆ ಪ್ರಶಸ್ತಿಗಾಗಿ ಸೆಣಸಾಟ ನಡೆಯಲಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಒಗ್ಗಟ್ಟನ್ನು ಕಾಯ್ದುಕೊಳ್ಳುವಂತೆ ಕರೆ ನೀಡಿದರು. ಕೊಡಗು ಗೌಡ ಯುವ ವೇದಿಕೆ ವತಿಯಿಂದ 15 ದಿನಗಳ ಕಾಲ ನಡೆಯುವ ‘ಗೌಡ ಪ್ರೀಮಿಯರ್ ಲೀಗ್'(ಜಿಪಿಎಲ್) ಲೆದರ್ ಬಾಲ್ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ವಿದ್ಯುಕ್ತ ಚಾಲನೆ ದೊರೆಯಿತು. ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಗೌಡ ಜನಾಂಗ ಬಾಂಧವರು ಪರಸ್ಪರ ಪ್ರೀತಿ ವಿಶ್ವಾಸದೊಂದಿಗೆ ಒಗ್ಗಟ್ಟನ್ನು ಕಾಯ್ದುಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಕರೆ ನೀಡಿದರು. ಗ್ರಾಮೀಣ ಭಾಗಗಳಲ್ಲಿ ಸಾಕಷ್ಟು ಕ್ರೀಡಾ ಪ್ರತಿಭೆೆಗಳಿದ್ದು, ಪ್ರತಿಭಾವಂತರನ್ನು ಗುರುತಿಸಿ, ಅವರಿಗೆ ಅಗತ್ಯ ಅವಕಾಶಗಳನ್ನು ಕಲ್ಪಿಸಲು ಈ ರೀತಿಯ ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು. ಪಂದ್ಯಾಟಕ್ಕೆ ಚಾಲನೆ ನೀಡಿದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಜಿಲ್ಲಾಧ್ಯಕ್ಷ…
ಮಡಿಕೇರಿ NEWS DESK ಏ.20 : ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಇಂದು ನಡೆದ ರೋಮಾಂಚಕಾರಿ ಓಪನ್ ಶೂಟಿಂಗ್ ಸ್ಪರ್ಧೆ ‘ಬೊಡಿನಮ್ಮೆ’ ಯಲ್ಲಿ ಶಾರ್ಪ್ ಶೂಟರ್ ಗಳು ಗುರಿ ಸಾಧಿಸುವ ಮೂಲಕ ಗಮನ ಸೆಳೆದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ .22 (50ಮೀ), 12″ ಬೋರ್ (30ಮೀ) ಹಾಗೂ ಏರ್ ರೈಫಲ್ ಎಗ್ ಶೂಟಿಂಗ್ (15ಮೀ) ಸೇರಿದಂತೆ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ಸುಮಾರು 50, 30 ಮೀ ದೂರದಲ್ಲಿದ್ದ ತೆಂಗಿನಕಾಯಿಗೆ ಗುರಿಯಿಟ್ಟು ಗುಂಡು ಹೊಡೆಯುವಲ್ಲಿ ಹಲವು ಮಂದಿ ಯಶಸ್ವಿಯಾದರು. ಜಿಲ್ಲೆಯ ವಿವಿಧೆಡೆಯಿಂದ ಬಂದ ಸುಮಾರು 396ಕ್ಕೂ ಹೆಚ್ಚು ಮಂದಿ ಹೆಸರು ನೋಂದಾಯಿಸಿಕೊಂಡು ಗುರಿ ಪರೀಕ್ಷೆಯಲ್ಲಿ ತೊಡಗಿಸಿಕೊಂಡರು. ಮಹಿಳೆಯರು ಕೂಡ ಬಂದೂಕು ಹಿಡಿದು ಗುರಿ ಪ್ರದರ್ಶನ ಮಾಡಿದರು. ಬೊಡಿ ನಮ್ಮೆ ಸ್ಪರ್ಧೆಗೆ ಕುಟುಂಬದ ಹಿರಿಯರಾದ ಎಂ.ಬಿ.ಪೊನ್ನಪ್ಪ ಹಾಗೂ ಹಾಕಿ ಉತ್ಸವದ ಮುಖ್ಯ ವೀಕ್ಷಕ ವಿವರಣೆಗಾರ ಮಾಳೇಟಿರ ಶ್ರೀನಿವಾಸ್ ಆಯುಧಗಳಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಕೋವಿಯನ್ನು ಎಚ್ಚರಿಕೆ ಮತ್ತು ಜವಾಬ್ದಾರಿಯುತವಾಗಿ ಬಳಸುವಂತೆ…
*ಮೈದಾನ 1* ಬೆಳಿಗ್ಗೆ 9 ಗಂಟೆಗೆ – ನಾಳಿಯಂಡ ಮತ್ತು ಕೊಂಗೇಟಿರ 10 ಗಂಟೆಗೆ – ಕೋಟೇರ ಮತ್ತು ಪುದಿಯೊಕ್ಕಡ 11 ಗಂಟೆಗೆ – ಚೆಪ್ಪುಡಿರ ಮತ್ತು ಅಟ್ರಂಗಡ ಮಧ್ಯಾಹ್ನ 1 ಗಂಟೆಗೆ – ಮೇಕೇರಿರ ಮತ್ತು ಅಂಜಪರವಂಡ 2 ಗಂಟೆಗೆ- ಚಂಗುಲಂಡ ಮತ್ತು ಮೇಚಿಯಂಡ 3 ಗಂಟೆಗೆ – ಬೊಟ್ಟೋಳಂಡ ಮತ್ತು ಚೇಂದಂಡ
*ಮೈದಾನ 2* ಬೆಳಿಗ್ಗೆ 9:30 ಗಂಟೆಗೆ – ತಾತಂಡ ಮತ್ತು ಪಾಂಡಿರ (ಹೆಬ್ಬೆಟ್ಟಗೇರಿ) 10 ಗಂಟೆಗೆ – ಕಾಂಡಂಡ ಮತ್ತು ಬೋವೇರಿಯಂಡ 10:30 ಚೆಪ್ಪುಡಿರ ಮತ್ತು ಪಾಳೆಯಂಡ 11 ಗಂಟೆಗೆ ಮಾಳೇಟಿರ (ಕೆದಮುಳ್ಳೂರು) ಮತ್ತು ಅಮ್ಮಾಟಂಡ 11:30 – ಮುಕ್ಕಾಟಿರ (ಹರಿಹರ) ಮತ್ತು ಕೇಚೇಟಿರ ಮಧ್ಯಾಹ್ನ 12 ಗಂಟೆಗೆ – ಬಿದ್ದಾಟಂಡ ಮತ್ತು ಚೋಯಮಾಡಂಡ 12:30 – ಕೊಟ್ಟಂಗಡ ಮತ್ತು ನಾಪಂಡ 1:30 – ಚಂದಂಗಡ ಮತ್ತು ಕುಪ್ಪಂಡ (ಕೈಕೆರ) 2 ಗಂಟೆಗೆ – ಮಾಚಿಮಂಡ ಮತ್ತು ಚೇಂದಿರ 2:30 – ಚೌರಿರ (ಹೊದವಾಡ) ಮತ್ತು ಮನೆಯಪಂಡ 3 ಗಂಟೆಗೆ – ಮೇವಡ ಮತ್ತು ಕಾಯಪಂಡ 3:30 – ಮುರುವಂಡ ಮತ್ತು ಅಚ್ಚಪಂಡ 4 ಗಂಟೆಗೆ – ತೆಕ್ಕಡ ಮತ್ತು ಕುಟ್ಟಂಡ (ಕಾರ್ಮಾಡ್) 4:30 – ಬಲ್ಲಂಡ ಮತ್ತು ಚೇನಂಡ 5 ಗಂಟೆಗೆ ಕುಟ್ಟಂಡ (ಮಾದಾಪುರ) ಮತ್ತು ಬೈರಾಜಂಡ 5:30 – ಪರದಂಡ ಮತ್ತು ಪಾಲಂದಿರ
ಮೈದಾನ 1 : ಕೂತಂಡ ಮತ್ತು ಪೆಮ್ಮಂಡ ತಂಡಗಳ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕೂತಂಡ ತಂಡ ಜಯ ಸಾಧಿಸಿತು. ಕೂತಂಡ ಪರ ಸಂತೋಷ್ ಮೇದಪ್ಪ 1 ಗೋಲು ದಾಖಲಿಸಿದರು. ಪೆಮ್ಮಂಡ ಸುಹಾನ್ ಮಂದಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಮ್ಮಣಿಚಂಡ ಮತ್ತು ಬೊವ್ವೇರಿಯಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಅಮ್ಮಣಿಚಂಡ ಜಯ ಸಾಧಿಸಿತು. ಅಮ್ಮಣಿಚಂಡ ಪರ ವಿಘ್ನೇಶ್ ಬೋಪಣ್ಣ 1 ಗೋಲು ದಾಖಲಿಸಿದರು. ಬೊವ್ವೇರಿಯಂಡ ಗ್ಯಾನ್ ಉತ್ತಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನೆರವಂಡ ಮತ್ತು ಮಂಡೇಪಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್ನಲ್ಲಿ 4-3 ಗೋಲುಗಳ ಅಂತರದಲ್ಲಿ ಮಂಡೇಪಂಡ ಗೆಲುವು ದಾಖಲಿಸಿತು. ನೆರವಂಡ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಸಣ್ಣುವಂಡ ಮತ್ತು ಸೋಮೆಯಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ತಲಾ 1 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ…
ಮಡಿಕೇರಿ ಏ.20 NEWS DESK : ವಿರಾಜಪೇಟೆ ಪುರಸಭೆಯ ಕಾಂಗ್ರೆಸ್ ಸದಸ್ಯರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವಿಶೇಷ ಸಭೆ ನಡೆಸಿದರು. ಸಭೆಯಲ್ಲಿ ಪುರಸಭೆಯ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರುಗಳನ್ನು ಆಯ್ಕೆ ಮಾಡುವ ಕುರಿತು ಚರ್ಚಿಸಿ, ಒಮ್ಮತದ ಇಬ್ಬರನ್ನು ಸ್ಥಾಯಿ ಸಮಿತಿಗಳಿಗೆ ಆಯ್ಕೆ ಮಾಡಲು ತೀರ್ಮಾನಿಸಲಾಯಿತು. ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಶಾಸಕರು ಸದಸ್ಯರುಗಳೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ವಿರಾಜಪೇಟೆ ನಗರದ ಜನತೆಗೆ ಅನುಕೂಲ ಆಗುವ ನಿಟ್ಟಿನಲ್ಲಿ, ಪುರಸಭೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸದಸ್ಯರುಗಳೊಂದಿಗೆ ಚರ್ಚಿಸಿದರು. ಸಭೆಯಲ್ಲಿ ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಸದಸ್ಯರುಗಳು ಉಪಸ್ಥಿತರಿದ್ದರು.






