ಮೈಸೂರು NEWS DESK ಜೂ.20: ಮೈಸೂರಿನಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಡಲಾಗಿದ್ದು, ಈ ನಿಟ್ಟಿನಲ್ಲಿ ಸಾಂಸ್ಕೃತಿಕ ರಾಜಧಾನಿಯಲ್ಲಿ ಕೆಲವು ಮಹತ್ವದ ಯೋಜನೆಗಳಿಗೆ ನೆರವು ನೀಡಬೇಕು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ, ಮೈಸೂರು ಕ್ಷೇತ್ರದಲ್ಲಿ ಆಗಬೇಕಾಗಿರುವ ಯೋಜನೆಗಳ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಪಾರಂಪರಿಕ ಕಟ್ಟಡಗಳು ಹಾಗೂ ವಿಶೇಷವಾಗಿ ಕೃಷ್ಣರಾಜ ಬೌಲೆವಾರ್ಡ್ನಲ್ಲಿರುವ ಕಟ್ಟಡಗಳನ್ನು ಸಮಗ್ರವಾಗಿ ಪುನಃಸ್ಥಾಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ, ನೆರವು ಬೇಕಾಗಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು ಎಂದು ತಿಳಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯ ಪಾರಂಪರಿಕ ಕಟ್ಟಡಗಳು ಕರ್ನಾಟಕಕ್ಕೆ ಮಾತ್ರವಲ್ಲದೆ ಇಡೀ ರಾಷ್ಟ್ರಕ್ಕೆ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮೌಲ್ಯವನ್ನು ಕೊಟ್ಟಿದೆ. ಮೈಸೂರು ಸಂಸ್ಥಾನದ ಒಡೆಯರ್ ಆಳ್ವಿಕೆಯಲ್ಲಿ 20 ನೇ ಶತಮಾನದ ಆರಂಭದಲ್ಲಿ ನಿರ್ಮಿಸಲಾದ ಈ ಕಟ್ಟಡಗಳು…
ಲೇಖಕ: admin
ಮಡಿಕೇರಿ NEWS DESK ಜೂ.20 : ಮಡಿಕೇರಿಯ ಮುಂಜಾನೆ ಬ್ಯಾಡ್ಮಿಂಟನ್ ಆಟಗಾರರ ತಂಡ ಆಯೋಜಿಸಿದ್ದ ಗುಡ್ಮಿಂಟನ್ ಪ್ರೀಮಿಯಂ ಲೀಗ್-2025 ಸ್ಪರ್ಧೆಯಲ್ಲಿ ಸುಂಟಿಕೊಪ್ಪ ಸೂಪರ್ ಕಿಂಗ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಮಡಿಕೇರಿ ರಾಯಲ್ ಚಾಲೆಂಜ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಚೆಟ್ಟಿಮಾನಿ ಡೇರ್ ಡೆವಿಲ್ ತಂಡ ಮೂರನೇ ಸ್ಥಾನ ಹಾಗೂ ಭಾಗಮಂಡಲ ನೈಟ್ ರೈಡರ್ಸ್ ತಂಡ ನಾಲ್ಕನೇ ಸ್ಥಾನವನ್ನು ತನ್ನದಾಗಿಸಿಕೊಂಡಿತು. ಶ್ರೇಷ್ಠ ಆಟಗಾರಾಗಿ ಅರುಣ್ ಕುಮಾರ್ ಪ್ರಶಸ್ತಿ ಪಡೆದುಕೊಂಡರು. ಪಂದ್ಯಾವಳಿಯಲ್ಲಿ ನಾಲ್ಕು ತಂಡಗಳ ಒಟ್ಟು 24 ಆಟಗಾರರು ಸ್ಪರ್ಧಿಸಿದ್ದರು. ವಿನ್ನರ್ಸ್ ರೋಲಿಂಗ್ ಟ್ರೋಫಿಯನ್ನು ವೃಂದಾವನ ಕೂರ್ಗ್ ರೆಸಾರ್ಟ್ ಪ್ರಾಯೋಜಿಸಿತ್ತು. *ಸಮಾರೋಪ ಸಮಾರಂಭ* ಸಂಜೆ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಕೊಡವ ವೆಲ್ ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ನ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ಬ್ಯಾಡ್ಮಿಂಟನ್ ಆಟದ ಮಹತ್ವವನ್ನು ಹಂಚಿಕೊಂಡರು. ಕ್ರೀಡೆ ದೈಹಿಕ ಆರೋಗ್ಯ,…
ಮಡಿಕೇರಿ NEWS DESK ಜೂ.20 : ಮರದ ರೆಂಬೆಗಳನ್ನು ಕಡಿಯುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ನೆಲ್ಲಿಹುದಿಕೇರಿಯ ಬೆಟ್ಟದಕಾಡು ಗ್ರಾಮದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಮರಳಗಟ್ಟೆಯ ಮುತ್ತೂರು ಕಾಲೋನಿಯ ನಿವಾಸಿ ದಿನೇಶ್(59) ಸಾವನ್ನಪ್ಪಿರುವ ದುರ್ದೈವಿ. ಬೆಟ್ಟದಕಾಡು ಗ್ರಾಮದ ತೋಟದಲ್ಲಿ ದಿನೇಶ್ ಮರ ಕಪಾತ್ ಕೆಲಸದಲ್ಲಿ ತೊಡಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಯಿತು.
ಮಡಿಕೇರಿ ಜೂ.19 NEWS DESK : ಮಕ್ಕಳಲ್ಲಿ ಉಂಟಾಗುವ ಅತಿಸಾರ ಭೇದಿ ತಡೆಯುವಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ‘ಆರೋಗ್ಯ ಶಿಕ್ಷಣ’ ಮೂಲಕ ಜಿಲ್ಲೆಯಾದ್ಯಂತ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಅವರ ಕಚೇರಿ ಸಭಾಂಗಣದಲ್ಲಿ ಅತಿಸಾರ ಭೇದಿ ತಡೆಯುವಿಕೆ ಅಭಿಯಾನ ಕುರಿತು ಮಾಹಿತಿ ಪಡೆದು ಮಾತನಾಡಿದರು. ಚಿಕ್ಕ ಮಕ್ಕಳಲ್ಲಿ ಸಾಮಾನ್ಯವಾಗಿ ಪದೇ ಪದೇ ಅತಿಸಾರ ಭೇದಿ ಉಂಟಾಗುತ್ತದೆ. ಆದ್ದರಿಂದ ಅತಿಸಾರ ಭೇದಿ ತಡೆಯುವಲ್ಲಿ ಪ್ರತಿಯೊಬ್ಬರಲ್ಲಿಯೂ ಅರಿವು ಅಗತ್ಯ ಎಂದರು. ಅತಿಸಾರ ಭೇದಿಯ ನಿಯಂತ್ರಣ ಮತ್ತು ತಡೆಯುವಿಕೆ ಕುರಿತು ಸ್ವಚ್ಛತೆ, ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು. ಓಆರ್ಎಸ್ ಮತ್ತು ಜಿಂಕ್ ಲಭ್ಯತೆ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಅತಿಸಾರ ಭೇದಿ ತಡೆಗಟ್ಟುವಿಕೆ ಅಭಿಯಾನವು ಈಗಾಗಲೇ ಆರಂಭವಾಗಿದ್ದು, ಜುಲೈ, 31 ರವರೆಗೆ ಸಮುದಾಯ ಮತ್ತು ಗ್ರಾಮೀಣ ಮಟ್ಟದಲ್ಲಿ ಜರುಗಲಿದೆ ಎಂದು ತಿಳಿಸಿದರು.…
ಸುಂಟಿಕೊಪ್ಪ ಜೂ.20 NEWS DESK : ಯುವಜನತೆ ದುಶ್ಚಟಗಳಿಗೆ ದಾಸರಾಗದೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಹೇಳಿದರು. ಸುಂಟಿಕೊಪ್ಪ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಜಾಗೃತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆಯು ತಮ್ಮ ಇಳಿವಯಸ್ಸಿನಲ್ಲೇ ತಂಬಾಕು ಸೇರಿದಂತೆ ಇನ್ನಿತರ ದುಶ್ಚಟಗಳಿಗೆ ಆಕರ್ಷಿತರಾಗಿ ತಮ್ಮ ಆರೋಗ್ಯವನ್ನು ಕೆಡಿಸಿಕೊಳ್ಳುತ್ತಿದ್ದಾರೆ. ತಂಬಾಕು ಸೇರಿದಂತೆ ದುಶ್ಚಟಗಳಿಗೆ ಯುವಜನತೆಯು ಆಕರ್ಷಿತಗೊಳ್ಳದೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಜಾಗೃತಿ ಅಗತ್ಯ ಎಂದು ಹೇಳಿದರು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಎಎಸ್ಐ ಸುರೇಶ್ ಮಾತನಾಡಿ, ಅಪ್ರಾಪ್ತ ಮಕ್ಕಳು ತಂಬಾಕು ಖರೀದಿಸುವುದು ಮತ್ತು ಅಂಗಡಿಯವರು ಮಾರಾಟ ಮಾಡುವುದು ಕಾನೂನು ರೀತಿಯ ಅಪರಾಧ. ತಪ್ಪಿದ್ದಲ್ಲಿ ದಂಡದೊಂದಿಗೆ ಜೈಲು ಶಿಕ್ಷೆಗೂ ಒಳಗಾಗಬೇಕಾಗಿದೆ ಎಂದರು. ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾರಂಭದ ವೇದಿಕೆಯಲ್ಲಿ…
ಮಡಿಕೇರಿ ಜೂ.20 NEWS DESK : ಮಡಿಕೇರಿ-ಭಾಗಮಂಡಲ ರಸ್ತೆ ಗುಂಡಿಮಯವಾಗಿದ್ದು, ಸಾರಿಗೆ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ. ಸದ್ಯ ಮಳೆಯಾಗಿರುವುದಿರಿಂದ ‘ವೆಟ್ಮಿಕ್ಸ್’ ಅಳವಡಿಸುವಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಲಹೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 18 ಗ್ರಾ.ಪಂ.ಒಳಪಟ್ಟಂತೆ ಕಾರುಗುಂದದ ವಿಎಸ್ಎಸ್ಎಸ್ಎನ್ ಸಭಾಂಗಣದಲ್ಲಿ ನಡೆದ ಟಾಸ್ಕ್ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಸ್ತೆಗಳು ತುಂಬಾ ಹಳ್ಳ ಬಿದ್ದಿದ್ದು, ಇಂತಹ ಕಡೆಗಳಲ್ಲಿ ವೆಟ್ಮಿಕ್ಸ್ ಅಳವಡಿಸುವ್ಸ್ತಾಗಬೇಕು. ಮೇ ಕೊನೆ ವಾರ ಮತ್ತು ಜೂನ್ ಮಧ್ಯದ ವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂದ ಹೆಚ್ಚಿನ ಮಳೆಯಾಗಿದೆ. ಇದರಿಂದ ಮನೆ ಹಾನಿ, ವಿದ್ಯುತ್ ಅಡಚಣೆ ಮತ್ತಿತರ ಸಮಸ್ಯೆಗಳು ಉಂಟಾಗಿದೆ. ಮನೆಹಾನಿ ಸಂಬಂಧಿಸಿದಂತೆ 24 ಗಂಟೆಯೊಳಗೆ ಪರಿಹಾರ ವಿತರಿಸಬೇಕು ಎಂದು ನಿರ್ದೇಶನ ನೀಡಿದರು. ಬೆಟ್ಟಗೇರಿ, ಕಾರುಗುಂದ, ಚೇರಂಬಾಣೆ, ತಣ್ಣಿಮಾನಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆ ಸಂದರ್ಭದಲ್ಲಿ 5 ದಿನವಾದರೂ ವಿದ್ಯುತ್ ಸಂಪರ್ಕ ವಿಲ್ಲದೆ ಸಾರ್ವಜನಿಕರು ಪರಿತಪಿಸಿದ್ದಾರೆ. ಆದ್ದರಿಂದ ಆಯಾಯ ದಿನದಲ್ಲಿಯೇ…
ಮಡಿಕೇರಿ ಜೂ.20 NEWS DESK : ಬಡವರ ಮತ್ತು ಹಿಂದುಳಿದ ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ ಮತ್ತು ಧಾರ್ಮಿಕ ಅಭಿವೃದ್ಧಿಯನ್ನು ಗುರಿಯಾಗಿಸಿ ಸುಸ್ಥಿರ ಸಮಾಜ ಮತ್ತು ಸಬಲೀಕರಣ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಿದ್ರಾ ಫೌಂಡೇಶನ್ನ ವಾರ್ಷಿಕ ಸಭೆಯು ಮೇಕೇರಿಯಲ್ಲಿ ನಡೆಯಿತು. ಸಭೆಯಲ್ಲಿ ಖ್ಯಾತ ಚಿಂತಕ ಹಾಗೂ ವಾಗ್ಮಿ ಇಬ್ರಾಹಿಂ ಸಖಾಫಿ ಪುಝಕ್ಕಾಟ್ಟಿರಿ ಮಾತನಾಡಿ, ಆಧುನಿಕ ಕಾಲದಲ್ಲಿನ ಸಮಾಜ ಸೇವೆ ಮತ್ತು ನೈತಿಕ ಶಿಕ್ಷಣದ ಅವಶ್ಯಕತೆ ಹಾಗೂ ಮಹತ್ವಗಳ ಬಗ್ಗೆ ಆಳವಾಗಿ ಬೋಧಿಸಿದರು. ದಿನನಿತ್ಯ ಹಸಿವನ್ನು ನೀಗಿಸುವ ಸಿದ್ರಾ ಫೌಂಡೇಶನ್ ಶಿಕ್ಷಣವನ್ನು ಕೊಟ್ಟು ಪ್ರಬುದ್ಧ ಸಮಾಜವನ್ನು ನಿರ್ಮಿಸಿ ದೇಶ ಸೇವೆಯಲ್ಲಿ ತೊಡಗಿಕೊಂಡ ಬಗೆಯನ್ನು ಕೊಂಡಾಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿದ್ರಾ ಫೌಂಡೇಶನ್ ಸಂಸ್ಥಾಪಕ ಶಿಹಾಬುದ್ದೀನ್ ನೂರಾನಿ, ಸಿದ್ರಾ ಫೌಂಡೇಶನ್ ಅಧೀನದಲ್ಲಿ ಮಹಾರಾಷ್ಟ್ರದ ಪುಣೆ, ಹಿಂಗೋಳಿ, ಉಮರ್ಖೆಡ್ ಹಾಗೂ ಕರ್ನಾಟಕದ ಬಾಗಲಕೋಟೆ, ಬಾದಾಮಿ ಮುಂತಾದ ವಿವಿಧ ಭಾಗಗಳ ಒಟ್ಟು 6 ಸಮನ್ವಯ ವಿದ್ಯಾ ಸಂಸ್ಥೆಗಳು ಕಾರ್ಯಾಚರಿಸುತ್ತಿದ್ದು, ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಚಿತವಾಗಿ ಧಾರ್ಮಿಕ ಮತ್ತು…
ಬೆಂಗಳೂರು ಜೂ.20 NEWS DESK : ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಓPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು. 1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ.…
ಸೋಮವಾರಪೇಟೆ ಜೂ.20 NEWS DESK : ಪಟ್ಟಣದ ವಕ್ರ್ಸ್ಶಾಪ್ ಏರಿಯಾದಲ್ಲಿ ಪಂಚಾಯಿತಿ ಉದ್ದಿಮೆ ನಿಧಿಯಿಂದ 80ಲಕ್ಷ ರೂ.ಗಳ ವೆಚ್ಚದಲ್ಲಿ ಪೇ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ತೀರ್ಮಾನ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಬಾಕಿಯಿದ್ದು, ಇನ್ನು ಮೂರು ತಿಂಗಳಲ್ಲಿ ಕಾಮಗಾರಿ ಮುಗಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಧ್ಯಕ್ಷೆ ಜಯಂತಿ ಶಿವಕುಮಾರ್ ಹೇಳಿದರು. ಪ.ಪಂ.ಅಧ್ಯಕ್ಷರಾದ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಟ್ರಾಫಿಕ್ ಸಮಸ್ಯೆ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಪಟ್ಟಣದ ಪೊಲೀಸರ ಠಾಣೆಯ ಕಾರ್ಯವೈಖರಿ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಪಟ್ಟಣದಲ್ಲಿ ಪೊಲೀಸ್ ಠಾಣೆ ಇರುವುದರ ಬಗ್ಗೆಯೇ ಸಾರ್ವಜನಿಕ ವಲಯದಲ್ಲಿ ಸಂಶಯವಿದೆ. ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಜನರು ಬೇಸತ್ತಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಬಹುತೇಕ ಸದಸ್ಯರು ತಮ್ಮ ಅಸಮಾಧಾನ ಹೊರಹಾಕಿದರು. ಹಿಂದೆಲ್ಲಾ ಹೋಗಾಡ್ರ್ಸ್ಗಳು ಒಂದಷ್ಟು ಟ್ರಾಫಿಕ್ ಕಿರಿಯನ್ನು ಹೋಗಲಾಡಿಸಿದ್ದರು. ಈಗ ಠಾಣೆಯಲ್ಲಿ ಸಿಬ್ಬಂದಿಗಳ ಸಂಖ್ಯೆಯೂ ಹೆಚ್ಚಿದೆ. ಆದರೆ ಠಾಣೆ ಬಿಟ್ಟು ಹೊರಬರುತ್ತಿಲ್ಲ ಎಂದು…
ಸೋಮವಾರಪೇಟೆ ಜೂ.20 NEWS DESK : ಪಟ್ಟಣದ ವಕ್ರ್ಸ್ಶಾಪ್ ಏರಿಯಾದಲ್ಲಿ ಪಂಚಾಯಿತಿ ಉದ್ದಿಮೆ ನಿಧಿಯಿಂದ 80ಲಕ್ಷ ರೂ.ಗಳ ವೆಚ್ಚದಲ್ಲಿ ಪೇ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ತೀರ್ಮಾನ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಬಾಕಿಯಿದ್ದು, ಇನ್ನು ಮೂರು ತಿಂಗಳಲ್ಲಿ ಕಾಮಗಾರಿ ಮುಗಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಧ್ಯಕ್ಷೆ ಜಯಂತಿ ಶಿವಕುಮಾರ್ ಹೇಳಿದರು. ಪ.ಪಂ.ಅಧ್ಯಕ್ಷರಾದ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಟ್ರಾಫಿಕ್ ಸಮಸ್ಯೆ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಪಟ್ಟಣದ ಪೊಲೀಸರ ಠಾಣೆಯ ಕಾರ್ಯವೈಖರಿ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಪಟ್ಟಣದಲ್ಲಿ ಪೊಲೀಸ್ ಠಾಣೆ ಇರುವುದರ ಬಗ್ಗೆಯೇ ಸಾರ್ವಜನಿಕ ವಲಯದಲ್ಲಿ ಸಂಶಯವಿದೆ. ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಜನರು ಬೇಸತ್ತಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಬಹುತೇಕ ಸದಸ್ಯರು ತಮ್ಮ ಅಸಮಾಧಾನ ಹೊರಹಾಕಿದರು. ಹಿಂದೆಲ್ಲಾ ಹೋಗಾಡ್ರ್ಸ್ಗಳು ಒಂದಷ್ಟು ಟ್ರಾಫಿಕ್ ಕಿರಿಯನ್ನು ಹೋಗಲಾಡಿಸಿದ್ದರು. ಈಗ ಠಾಣೆಯಲ್ಲಿ ಸಿಬ್ಬಂದಿಗಳ ಸಂಖ್ಯೆಯೂ ಹೆಚ್ಚಿದೆ. ಆದರೆ ಠಾಣೆ ಬಿಟ್ಟು ಹೊರಬರುತ್ತಿಲ್ಲ ಎಂದು…






