ಮಡಿಕೇರಿ ಏ.20 NEWS DESK : ಮಡಿಕೇರಿಯ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಕೇರಳದ ಶ್ರೀ ಈಶ್ವರ ನಂಬೂದರಿ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು. ಏ.18ರಂದು ಸಂಜೆ ಆಚಾರ್ಯರ ಆಗಮನ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ ನಡೆಯಿತು. ಮರುದಿನ ಶ್ರೀ ಮಹಾ ಗಣಪತಿ ಹೋಮ, ಐಕ್ಯಮತ್ಯ ಸುಕ್ರದ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಮತ್ತು ಮಹಾ ಮಂಗಳಾರತಿ ನೆರವೇರಿತು. ಬಳಿಕ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯ ಸಮಿತಿ ವತಿಯಿಂದ ಶ್ರೀ ಕಂಚಿ ಕಾಮಾಕ್ಷಿಯಮ್ಮ ಹಾಗೂ ಶ್ರೀ ಮುತ್ತು ಮಾರಿಯಮ್ಮ ದೇವಿಯ ಮೂಲ ವಿಗ್ರಹಗಳಿಗೆ ಸ್ವರ್ಣ…
ಲೇಖಕ: admin
ಮಡಿಕೇರಿ ಏ.20 NEWS DESK : ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ಕಾರ್ಯಕರ್ತ ಉಮ್ಮಣ ಕುಟ್ಟಡ ಸುರೇಶ್ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣ್ಣಚ್ಚ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕಣಿವೆ ಏ.20 NEWS DESK : ಉದ್ಘಾಟನೆಗೊಳ್ಳದೇ ಕಳೆದ ಎರಡು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕುಶಾಲನಗರ ಪುರಸಭಾ ವ್ಯಾಪ್ತಿಯ ಗುಮ್ಮನಕೊಲ್ಲಿಯಲ್ಲಿರುವ ಒಳಚರಂಡಿ ಕಾಮಗಾರಿಯ ಮಲಿನ ನೀರು ಶುದ್ಧೀಕರಣ ಘಟಕಕ್ಕೆ ಕೊಡಗು ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇತ್ತೀಚಿಗಷ್ಟೇ ಕುಶಾಲನಗರ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಯುಜಿಡಿ ಕಾಮಗಾರಿ ಪೂರ್ಣಗೊಳ್ಳದೇ ಇರುವ ಬಗ್ಗೆ ಹಾಗೂ ಪೂರ್ಣಗೊಂಡಿರುವ ಪ್ರದೇಶದ ಯುಜಿಡಿ ಜನರ ಬಳಕೆಗೆ ಲಭ್ಯವಾಗುವಂತೆ ಪುರಸಭೆ ಸದಸ್ಯರು ಜಲಮಂಡಳಿ ಅಧಿಕಾರಿಗಳಿಗೆ ಒತ್ತಾಯಿಸಿದ್ದರು. ಪುರಸಭೆ ಅಧಿಕಾರಿಗಳು ಹಾಗೂ ಜಲಮಂಡಳಿ ಅಧಿಕಾರಿಗಳ ಒತ್ತಾಸೆಗೆ ಒಗೊಟ್ಟ ಜಿಲ್ಲಾಧಿಕಾರಿ ವೆಂಕಟರಾಜ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ್ ಮೀನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೆ ಸ್ಥಳದಲ್ಲಿದ್ದ ಜಲಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನಕುಮಾರ್ ಅವರಲ್ಲಿ ಯುಜಿಡಿ ಕಾಮಗಾರಿ ಬಗ್ಗೆ ಸಂಪೂರ್ಣ ಸಾಧಕ ಬಾಧಕಗಳ ಮಾಹಿತಿ ಪಡೆದುಕೊಂಡರು. ಕುಶಾಲನಗರ ಪುರಸಭಾ ವ್ಯಾಪ್ತಿಯಲ್ಲಿ 71 ಕಿಮೀ ಯುಜಿಡಿ ಕಾಮಗಾರಿ ಪೂರ್ಣಗೊಂಡಿದ್ದು, 6000 ಮನೆಗಳಿಗೆ…
ನಾಪೋಕ್ಲು ಏ.20 NEWS DESK : ಕಾಂತೂರು ಗ್ರಾಮದ ಬೊಳ್ತಜೀರ ನೂತನ ಐನ್ ಮನೆಯಲ್ಲಿ ಶ್ರೀ ವೆಂಕಟರಮಣ ದೇವರ ಹರಿಸೇವೆ ಹಾಗೂ ದೈವಗಳ ಕೋಲ ಶ್ರದ್ಧಾ ಭಕ್ತಿಯಿಂದ ಜರುಗಿತು. ಐದು ವರ್ಷಕ್ಕೆ ಒಮ್ಮೆ ಜರುಗುವ ಹರಿಸೇವೆಯಲ್ಲಿ ಭಕ್ತಾದಿಗಳು ಹರಕೆ ಸೇವೆ ಸಲ್ಲಿಸಿದರು. ಬಳಿಕ ವಂಶಪರಂಪರೆಯಿಂದ ನಡೆಸಿಕೊಂಡು ಬರುತ್ತಿರುವ ಕೊರತ್ತಿ, ಪೊಟ್ಟ ದೈವ, ಗುಳಿಗ, ಅಂಗರೆ, ಚೌಂಡಿ ದೈವ ಕೋಲಗಳು ಸಾಂಪ್ರದಾಯಿಕವಾಗಿ ನೆರವೇರಿತು. ಈ ಸಂದರ್ಭ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಕಾರ್ಯಕ್ರಮ ಮುಖ್ಯಸ್ಥರಾದ ಸಿದ್ದಾರ್ಥ (ನಂದ) ಅವರ ಮಂದಾರತ್ವದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿತು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಏ.20 NEWS DESK : ಕೊಡಗಿನ ಸಾಹಿತಿ ಟಿ.ಶೆಟ್ಟಿಗೇರಿಯ ಉಳುವಂಗಡ ಕಾವೇರಿ ಉದಯ ಅವರಿಗೆ ದಾವಣಗೆರೆಯಲ್ಲಿ ಕನ್ನಡ ಬಹುಭಾಷಾ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾಧರ ಕನ್ನಡ ಪ್ರತಿಷ್ಠಾನ, ದಾವಣಗೆರೆ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಸ್ಫೂರ್ತಿ ಪ್ರಕಾಶನ ತೆಲಿಗಿ, ಜ್ಞಾನ ಪ್ರಕಾಶನ ಮತ್ತು ಜ್ಞಾನ ಪ್ರಕಾಶನ ಸಂಸ್ಥೆಯ ವತಿಯಿಂದ ಮಾತೋಶ್ರೀ ಜಾನಕಿಬಾಯಿ ರಂಗರಾವ ಮುತಾಲಿಕ ದೇಸಾಯಿ ಸಂಸ್ಮರಣೆಯ ಅಂಗವಾಗಿ ದಾವಣಗೆರೆಯ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ನಡೆದ ಕನ್ನಡ ನುಡಿತೇರು ಕಾರ್ಯಕ್ರಮದಲ್ಲಿ ವಿದ್ಯಾಧರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ವಿದ್ಯಾಧರ ಮುತಾಲಿಕ ದೇಸಾಯಿ ಅವರು ಉಳುವಂಗಡ ಕಾವೇರಿ ಉದಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ದಾವಣಗೆರೆಯ ಸ್ಫೂರ್ತಿ ಪ್ರಕಾಶನದ ಅಧ್ಯಕ್ಷ ಎಂ.ಬಸವರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ ಉದ್ಘಾಟಿಸಿದರು. *ಉಳುವಂಗಡ ಕಾವೇರಿ ಉದಯ* *ಕಿರುಪರಿಚಯ* ಟಿ.ಶೆಟ್ಟಿಗೇರಿ ನಿವಾಸಿ ಚಂಗುಲಂಡ ಸಿ ಮಾದಪ್ಪ ಸರಸ್ವತಿ ದಂಪತಿಗಳ…
ನಾಪೋಕ್ಲು ಏ.20 NEWS DESK : ಮೇರಿಮಾತೆಯ ದೇವಾಲಯದ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಪ್ರಾರ್ಥನೆ ಮತ್ತು ಉಪವಾಸದ ಮೂಲಕ ಗುಡ್ ಆಚರಿಸಿದರು. ಧರ್ಮಗಳಾದ ಜ್ಞಾನ ಪ್ರಕಾಶ್ ಮಾತಾಡಿ, ಈ ಶುಭ ಶುಕ್ರವಾರದಂದು ನಾವು ಪರರನ್ನು ಪ್ರೀತಿಸಿ, ಏಸುಕ್ರಿಸ್ತರ ಆದರ್ಶವನ್ನು ಅನುಸರಿಸಿ ಅವರ ಹಂಗಿನಲ್ಲಿ ಬದುಕಬೇಕು. ಕತ್ತಲೆಯಿಂದ ಬೆಳಕಿನೆಡೆಗೆ ನಡೆಯುವ ಕಾರ್ಯಕ್ಕೆ ನಾಂದಿ ಆಗಬೇಕೆಂದು ಹೇಳಿದರು. ಈ ಸಂದರ್ಭ ಪಾಲನಾ ಸಮಿತಿಯ ಸದಸ್ಯರು, ಯುವಕ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವರದಿ : ವರದಿ ದುಗ್ಗಳ ಸದಾನಂದ.
ಕುಶಾಲನಗರ ಏ.20 NEWS DESK : ಸಿಇಟಿ ಪರೀಕ್ಷೆ ಬರೆಯಲು ತೆರಳಿದ ಸಂದರ್ಭ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆದು ಅವಮಾನಿಸಿದ ಪ್ರಕರಣವನ್ನು ಖಂಡಿಸಿ ಕುಶಾಲನಗರದಲ್ಲಿ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.ಬೀದರ್ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿ ಧರಿಸಿದ್ದ ಜನಿವಾರವನ್ನು ತೆಗೆಯಲು ತಿಳಿಸಿದ್ದಲ್ಲದೆ ಅವರ ಮನಸ್ಸಿಗೆ ಆಘಾತ ಉಂಟು ಮಾಡಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪರೀಕ್ಷೆ ಬರೆಯಲು ಅವಕಾಶ ನೀಡದೆ ಭವಿಷ್ಯ ದ ಜೊತೆ ಚೆಲ್ಲಾಟ ಆಡಿರುವ ಅಧಿಕಾರಿ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗೆ ಮತ್ತೆ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು ಎಂದು ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಕೆ.ಎಸ್.ರಾಜಶೇಖರ್ ಒತ್ತಾಯಿಸಿದರು. ಕುಶಾಲನಗರ ಗಣಪತಿ ದೇವಾಲಯದ ಮುಂಭಾಗ ಸೇರಿದ ಸಂಘದ ಪ್ರಮುಖರು ಸದಸ್ಯರು ಹಾಗೂ ಪಟ್ಟಣದ ಅರ್ಚಕ ಸಮುದಾಯದ ಸದಸ್ಯರು ಹಿಂದೂ ಧರ್ಮದ ಮೇಲೆ ಧಾರ್ಮಿಕ ನಂಬಿಕೆಗೆ ಅಪಮಾನ ಎಸಗಿರುವ ವ್ಯಕ್ತಿಗಳ ವಿರುದ್ಧ ಘೋಷಣೆ ಕೂಗಿದರು. ಮುಂದೆ ಇಂತಹ ಘಟನೆ ನಡೆಯದಂತೆ…
ಮಡಿಕೇರಿ ಏ.20 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ಆಂಟಿಮೈಕ್ರೋಬಯಲ್ ರೆಸಿಸ್ಟೆನ್ಸ್: ಸ್ಟ್ರಾಟಜೀಸ್ ಫಾರ್ ಪ್ರಿವೆನ್ಸನ್ ಮತ್ತು ಅಲ್ಟಾರ್ನೇಟಿವ್ಸ್’ ವಿಷಯದ ಮೇಲೆ ಮೇ, 14 ರಿಂದ 16 ರವಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ರಿಸರ್ಚ್ ಪೇಪರ್ ಪ್ರೆಸೆಂಟೇಷನ್ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್ಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದ್ದು. ಆಸಕ್ತ ಪತ್ರಿನಿಧಿಗಳು ಮೇ, 6 ರಳೊಗಾಗಿ Google from- https://forms.gle/nphLXewAESvuPP5Y8 ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ಅಧಿಕಾರಿಗಳನ್ನು (ಮೊ.9845258894, 9743084194 ಮತ್ತು 9686449019) ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿಯ ವೆಬ್ಸೈಟ್ https//:kstacademy.in ವೀಕ್ಪಿಸಬಹುದು ಎಂದು ಕರ್ನಾಟಕ ವಿಜ್ಞಾನ…
ಮಡಿಕೇರಿ ಏ.20 NEWS DESK : ಸ್ಥಳೀಯ ಸಂಸ್ಥೆಗಳಿಂದ ರೆಡ್ ಕ್ರಾಸ್ ಗೆ ನಿಯಮ ಪ್ರಕಾರ ಸಲ್ಲಬೇಕಾದ ಅನುದಾನವನ್ನು ವಿಳಂಭರಹಿತವಾಗಿ ಪಡೆದುಕೊಂಡು ನಿಯಮಾನುಸಾರ ಜನರಿಗೆ ಪ್ರಯೋಜನಕಾರಿಯಾಗುವ ಯೋಜನೆಗಳಿಗೆ ಬಳಸಿಕೊಳ್ಳುವಂತೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕನಾ೯ಟಕ ರಾಜ್ಯದ ಅಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ ಸೂಚಿಸಿದ್ದಾರೆ. ನಗರದಲ್ಲಿನ ಕೊಡಗು ರೆಡ್ ಕ್ರಾಸ್ ಭವನಕ್ಕೆ ಭೇಟಿ ನೀಡಿದ ಬಳಿಕ ರೆಡ್ ಕ್ರಾಸ್ ನಿದೇ೯ಶಕರೊಂದಿಗೆ ಸಮಾಲೋಚನೆ ನಡೆಸಿ ಜಿಲ್ಲೆಯಲ್ಲಿ ರೆಡ್ ಕ್ರಾಸ್ ಕಾಯ೯ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ರಾಜೀವ್ ಶೆಟ್ಟಿ, ಸ್ಥಳೀಯ ಸಂಸ್ಥೆಗಳಾದ ಜಿ.ಪಂ. ಗ್ರಾ..ಪಂ. ತಾ.ಪಂ. ನಗರ ಮತ್ತು ಪುರಸಭೆ, ಪ.ಪಂ.ಗಳಿಂದ ಇನ್ನು ಕೂಡ ನಿಯಮಪ್ರಕಾರ ರೆಡ್ ಕ್ರಾಸ್ ಗೆ ಪಾವತಿಸಬೇಕಾದ ವಾಷಿ೯ಕ ಅನುದಾನ ಪಾವತಿಯಾಗದೇ ಇರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ವಿಳಂಭರಹಿತವಾಗಿ ಕಾಯ೯ಪ್ರವೖತ್ತವಾಗಿ ರಡ್ ಕ್ರಾಸ್ ಗೆ ಸಲ್ಲಿಸಬೇಕಾದ ಅನುದಾನವನ್ನು ನೀಡುವಂತೆಯೂ ಅವರು ಸೂಚಿಸಿದರು. ರಾಜ್ಯದ 31 ಜಿಲ್ಲೆಗಳಲ್ಲಿಯೂ ಮುಂದಿನ ದಿನಗಳಲ್ಲಿ ಯೂತ್ ರೆಡ್ ಕ್ರಾಸ್…
ಮಡಿಕೇರಿ ಏ.19 NEWS DESK : ಮಡಿಕೇರಿ ನಗರಸಭೆಗೆ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು, ಈಗಾಗಲೇ ಹಲವು ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಹಾಗೂ ನಗರಸಭೆಯ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುದಾನ ತಂದಿರುವ ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಪ್ರಯತ್ನ ಅಭಿನಂದನಾರ್ಹ, ಮುಂದಿನ ದಿನಗಳಲ್ಲಿಯೂ ಕೇಂದ್ರದಿಂದ ಮತ್ತಷ್ಟು ಅನುದಾನ ಬರಲಿದೆ ಎಂದರು. ಸ್ವಚ್ಛ ಭಾರತ ಮಿಷನ್ 1 (ಭಾಗ 1) 6.69 ಕೋಟಿ ಬಿಡುಗಡೆಯಾಗಿದ್ದು, ಇದರಲ್ಲಿ ಮಡಿಕೇರಿ ಸಭೆಯ ಪಾರಂಪರಿಕ ತ್ಯಾಜ್ಯವನ್ನು ವಿಲೇವಾರಿ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಇದರ ಕಾಮಗಾರಿ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಸ್ವಚ್ಚ ಭಾರತ ಮಿಷನ್ 1 (ಭಾಗ 2)ರಲ್ಲಿ 5.71 ಕೋಟಿ ನಿರ್ವಹಣೆಗೆ ಅನುದಾನ ಇರಿಸಲಾಗಿದೆ. ಈಗಾಗಲೇ ಇದರಲ್ಲಿ 4.98 ಕೋಟಿ ಘನ ತ್ಯಾಜ್ಯ ಕಾಮಗಾರಿಗಳ ಟೆಂಡರ್ ಕರೆಯಲಾಗಿದೆ ಮತ್ತು ಮಡಿಕೇರಿ ನಗರಸಭೆಗೆ…






