ಮಡಿಕೇರಿ ಏ.23 NEWS DESK : ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.96.54 ರಷ್ಟು ಫಲಿತಾಂಶ ಪಡೆದು, ರಾಜ್ಯದಲ್ಲಿ 8 ನೇ ಸ್ಥಾನ ಹೊಂದಿದೆ. ಕೊಡಗು ಜಿಲ್ಲೆ ಕಳೆದ ಬಾರಿ ಶೇ.82 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 4ನೇ ಸ್ಥಾನ ಪಡೆದಿತ್ತು. ಆದರೆ ಈ ಬಾರಿ ಫಲಿತಾಂಶ ಹೆಚ್ಚಳವಾಗಿದ್ದರೂ ಸಹ, ಫಲಿತಾಂಶ ಸ್ಥಾನದಲ್ಲಿ ಪಲ್ಲಟವಾಗಿದೆ. ಸ್ಥಾನದಲ್ಲಿ ಬದಲಾವಣೆ ಕಂಡು ಬಂದಿದ್ದರೂ ಸಹ ಕಳೆದ ಬಾರಿಗಿಂತ ಈ ಬಾರಿ ಶೇ.14.54 ರಷ್ಟು ಫಲಿತಾಂಶ ವೃದ್ಧಿಯಾಗಿರುವುದು ಕಂಡು ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ 2904 ಬಾಲಕರಲ್ಲಿ 2776 ಉತ್ತೀರ್ಣರಾಗಿ ಶೇ.95.59 ರಷ್ಟು ಫಲಿತಾಂಶ ಪಡೆದಿದ್ದಾರೆ. ಹಾಗೆಯೇ ಪರೀಕ್ಷೆ ಬರೆದಿದ್ದ 3044 ಬಾಲಕಿಯರಲ್ಲಿ 2966 ಬಾಲಕಿಯರು ಉತ್ತೀರ್ಣರಾಗಿ ಶೇ.97.44 ರಷ್ಟು ಫಲಿತಾಂಶ ಪಡೆದಿದ್ದಾರೆ. ತಾಲ್ಲೂಕುವಾರು ಶೇಕಡ ಫಲಿತಾಂಶ ಗಮನಿಸಿದಾಗ ಮಡಿಕೇರಿ…
ಲೇಖಕ: admin
ಕೆ.ಆರ್ ಪೇಟೆ, ಮಂಡ್ಯ ಏ.23 : ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಪರಿವರ್ತನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೆ.ಆರ್ ಪೇಟೆಯ SSKC ಪಿಯು ಕಾಲೇಜು AI (ಕೃತಕ ಬುದ್ಧಿಮತ್ತೆ) ಆಧಾರಿತ ಹಾಜರಾತಿ ದಾಖಲಿಸುವ ವ್ಯವಸ್ಥೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ದಿನನಿತ್ಯದ ತರಗತಿ ಕಾರ್ಯಾಚರಣೆಯಲ್ಲಿ ಈ ಮಟ್ಟದ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಂಡಿರುವುದು ಈ ಪ್ರದೇಶದಲ್ಲೇ ಮೊದಲ ಪ್ರಯತ್ನವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಪರಿವರ್ತನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಎಜುಪೈ (EDUPI) ಸಂಸ್ಥೆಯ ವತಿಯಿಂದ ಕೃತಕ ಬುದ್ಧಿಮತ್ತೆ (ಎಐ) ಮೂಲಕ ಹಾಜರಾತಿ ದಾಖಲಿಸುವ ವಿನೂತನ ವ್ಯವಸ್ಥೆ ಇದಾಗಿದೆ. ಈ ಉಪಕ್ರಮವು ದೂರದೃಷ್ಟಿಯ ಶಿಕ್ಷಣತಜ್ಞ ಹಾಗೂ ವಕೀಲರಾದ ಕಿರಣ್ ಕುಮಾರ್ ಎಸ್ಸಿ ಅವರ ಮಾರ್ಗದರ್ಶನದಲ್ಲಿ ಜಾರಿಗೊಂಡಿದೆ. ಸಂಸ್ಥೆಯು ಶಿಕ್ಷಣ ವ್ಯವಸ್ಥೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಮತ್ತು ಅರ್ಥಪೂರ್ಣವಾಗಿ ಅಳವಡಿಸಿಕೊಳ್ಳುವ ಬದ್ಧತೆಯನ್ನು ಈ ಕ್ರಮ ಪ್ರತಿಬಿಂಬಿಸುತ್ತದೆ. AI ಆಧಾರಿತ ಈ ವ್ಯವಸ್ಥೆಯ ಮೂಲಕ ಹಾಜರಾತಿಯನ್ನು ತಕ್ಷಣ, ನಿಖರವಾಗಿ ಹಾಗೂ ಸ್ವಯಂಚಾಲಿತವಾಗಿ ದಾಖಲಿಸಬಹುದು. ಇದರಿಂದ ಕೈಯಾರೆ ನಡೆಸುವ ಪ್ರಕ್ರಿಯೆಗಳ ಅವಶ್ಯಕತೆ ಕಡಿಮೆಯಾಗಿದ್ದು, ಕಾರ್ಯಕ್ಷಮತೆ…
*ವಿಶ್ವ ಪುಸ್ತಕ ದಿನ : ಹೊತ್ತಿಗೆಯ ಜ್ಞಾನ ಬೇಕು ಹೊತ್ತು ಹೊತ್ತಿಗೆ : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ* ಬದುಕು ಬದಲಿಸುವ ಪುಸ್ತಕ ನೀ ಅಜ್ಞಾನ ನಿವಾರಕ ಸುಜ್ಞಾನಕೆ ದ್ಯೋತಕ ಜ್ಞಾನದ ಸಂರಕ್ಷಕ ಗೌರವದ ಪ್ರತೀಕ ವಿದ್ಯೆಯೊಡತಿ ಶಾರದೆಯ ಕೃಪಾಶೀರ್ವಾದದೊಂದಿಗೆ ಸೇರಿಕೋ ನಮ್ಮ ಮಸ್ತಕ !!!! ಪುಸ್ತಕಗಳು ಕೇವಲ ಅಕ್ಷರಗಳ ಸಂಕಲನವಲ್ಲ, ಅವು ಮಾನವ ಜೀವನದ ಅತ್ಯಂತ ಅಮೂಲ್ಯ ಸಂಪತ್ತಾಗಿವೆ. ಜ್ಞಾನ, ಅನುಭವ ಮತ್ತು ಭಾವನೆಗಳ ಜೀವಂತ ಭಂಡಾರ. ಒಂದು ಪುಸ್ತಕವನ್ನು ಓದುವುದು ಎಂದರೆ, ಅನೇಕ ಮನಸ್ಸುಗಳ ಚಿಂತನೆಗಳನ್ನು ಅರಿಯುವುದು ಅನೇಕ ಕಾಲಘಟ್ಟಗಳ ಅನುಭವವನ್ನು ಸ್ಪರ್ಶಿಸುವುದಾಗಿದೆ. ಮನುಷ್ಯನ ಜೀವನಕ್ಕೆ ಗಾಳಿ,ನೀರು,ಆಹಾರ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಜ್ಞಾನ ! ಜ್ಞಾನವಿಲ್ಲದಿದ್ದರೆ ಮನುಷ್ಯನಿಗೂ ಪ್ರಾಣಿಗಳಿಗೂ ವ್ಯತ್ಯಾಸವೆ ಇರುವುದಿಲ್ಲ ಅಂತಹ ಜ್ಞಾನವನ್ನು ಮನುಷ್ಯ ಸಂಪಾದಿಸಬೇಕೆಂದರೆ ಅದಕ್ಕೆ ಓದು ವಿದ್ಯೆಯೇ ಮೂಲ ಅಡಿಪಾಯ ಹಾಗಾಗಿ ಎಲ್ಲಾ ಜ್ಞಾನವನ್ನು ತನ್ನಲ್ಲೇ ಹಿಡಿದಿಟ್ಟು ಕೊಂಡಿರುವ ಪುಸ್ತಕಗಳ ಓದು ಜ್ಞಾನಕ್ಕೆ ಅತ್ಯವಶ್ಯಕ. ಜ್ಞಾನವನ್ನು ನೀಡುವ ಪುಸ್ತಕಗಳು ನಮಗೆ…. ಶಿಕ್ಷಣದ ಮೂಲಭೂತ ಆಧಾರ ಸ್ಥಂಭಗಳು…. ವಿಜ್ಞಾನ, ಇತಿಹಾಸ,…
ಮಡಿಕೇರಿ ಏ.22 NEWS DESK : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 5 ರಡಿ ಹಾಗೂ 308(ಇ)(ಎಫ್) ರ ಪ್ರಕರಣದಡಿ ದತ್ತವಾದ ಅಧಿಕಾರದಂತೆ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಕೊಡಗು ಜಿಲ್ಲೆಯ ಐದು ತಾಲ್ಲೂಕುಗಳಿಂದ ಆಯ್ಕೆಯಾಗುವ ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರ ಸಂಖ್ಯೆಯನ್ನು ಕೋಷ್ಟಕದಲ್ಲಿರುವಂತೆ ನಿಗದಿಪಡಿಸಿ. ಕೋಷ್ಟಕದ 2ನೇ ಅಂಕಣದಲ್ಲಿರುವ ಗ್ರಾಮ ಪಂಚಾಯಿತಿಯಿಂದ ಆಯ್ಕೆಯಾಗುವ ಚುನಾಯಿತ ಸದಸ್ಯರ ಸಂಖ್ಯೆಯನ್ನು 3ನೇ ಅಂಕಣದಲ್ಲಿ ನಿಗದಿಪಡಿಸಿದೆ. ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರ ಸಂಖ್ಯೆಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಯ ದಿನಾಂಕದಿಂದ 7 ದಿವಸಗಳ ಒಳಗೆ ಅಂದರೆ ಏಪ್ರಿಲ್, 24 ರ ಸಂಜೆ 5 ಗಂಟೆಯ ಒಳಗೆ ಸಲ್ಲಿಸಲು ತಿಳಿಸಿದೆ. ಆಕ್ಷೇಪಣೆಗಳನ್ನು ಆನ್ಲೈನ್ ಮೂಲಕ ಹಾಗೂ ಖುದ್ದಾಗಿ/ ಅಂಚೆಯ ಮೂಲಕ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ :222/ಎ, ಬಹುಮಹಡಿ ಕಟ್ಟಡ, ಅಂಬೇಡ್ಕರ್…
ಬೆಂಗಳೂರು NEWS DESK ಏ.22 : ಕೊಡಗು ಜಿಲ್ಲೆಯ ಕುಟ್ಟ ಪ್ರದೇಶದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ (𝗛𝗼𝗺𝗲𝘀𝘁𝗮𝘆) ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ಅವರು, ಈ ಕುರಿತು ಶೀಘ್ರವೇ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (𝗦𝗣) ಜೊತೆ ದೂರವಾಣಿ ಮಾತನಾಡಿದ ಸಚಿವರು, ಪ್ರಕರಣದ ವಿವರಗಳನ್ನು ಪಡೆದುಕೊಂಡರು. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್ಐಆರ್ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದೆ ತನಿಖೆ ಮುಂದುವರೆದಿದೆ. “ಕೊಡಗು ಜಿಲ್ಲೆಯು ಪ್ರವಾಸೋದ್ಯಮಕ್ಕೆ (𝗧𝗼𝘂𝗿𝗶𝘀𝗺) ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿದೆ. ಇಂತಹ ಅಹಿತಕರ ಘಟನೆಗಳಿಂದ ಜಿಲ್ಲೆಯ ಘನತೆ ಹಾಗೂ ಪ್ರವಾಸೋದ್ಯಮದ ಮೇಲೆ ಗಂಭೀರವಾದ ನಕಾರಾತ್ಮಕ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ…
ವಿರಾಜಪೇಟೆ ಏ.22 NEWS DESK : ವಿಷು ಹಬ್ಬದ ಪ್ರಯುಕ್ತ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಏ.26 ರಂದು ವಿರಾಜಪೇಟೆಯ ತಾಲ್ಲೂಕು ಮೈದಾನದಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ಅಧ್ಯಕ್ಷ ಪಿ.ಜಿ.ಸುಮೇಶ್ ತಿಳಿಸಿದ್ದಾರೆ. ಗ್ರಾಮೀಣ ಕ್ರೀಡಾಕೂಟದ ಅಂಗವಾಗಿ ಹಿಂದೂ ಮಹಿಳಾ ಮಲಯಾಳಿ ಬಂಧುಗಳಿಂದ ಮೆಗಾ(100ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿರುವ) ತಿರುವಾದಿರ ನೃತ್ಯವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ವಿಷು ಹಬ್ಬದ ಮಹತ್ವ ಸೇರಿದಂತೆ ಹಬ್ಬದ ವಿಷು ಕಣಿ ಮಡಗುವ ರೀತಿ, ಈ ಸಂದರ್ಭ ಹೇಗೆ ದೀಪವನ್ನು ಹಚ್ಚುವುದು, ಸಾಂಪ್ರಾದಾಯಿಕವಾಗಿ ವಿಷು ಕಣಿ ಇಡುವ ಮತ್ತು ಆಚರಿಸುವ ರೀತಿಯನ್ನು ಪ್ರಸ್ತುತ ಪಡಿಸಲಾಗುತ್ತದೆ. ಮತ್ತು ಇಂದಿನ ಯುವಜನತೆಗೆ ವಿಷು ಹಬ್ಬದ ಮಹತ್ವವನ್ನು ತಿಳಿಯಪಡಿಸಲಾಗುವುದು. ಬಳಿಕ ಮೆಗಾ ತಿರುವಾದಿರ ನೃತ್ಯ ಪ್ರದರ್ಶನ ಹಾಗೂ ಪುರುಷರಿಗೆ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ. ಮಧ್ಯಾಹ್ನದ ಊಟದ ನಂತರ ಮಹಿಳೆಯರಿಗೆ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಈ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಅಧ್ಯಕ್ಷ ಸುಮೇಶ್…
ಮಡಿಕೇರಿ NEWS DESK ಏ.22 : ಆಟೋ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಲ್ದಾರೆ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಅಂಚೆತಿಟ್ಟು ಹಾಡಿಯ ನಿವಾಸಿ ವೈ.ಎನ್.ಮಾದ ಮೃತ ಚಾಲಕನಾಗಿದ್ದು, ಸುನಿಲ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಮಾದ ಅವರ ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ತೀವ್ರತೆಗೆ ವೈ.ಎನ್.ಮಾದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಿದ್ದಾಪುರ ರಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಏ.22 NEWS DESK : ಸೋಮವಾರಪೇಟೆಯ ಖಾಸಗಿ ಕಲ್ಯಾಣ ಮಂಟದಲ್ಲಿ ಪರಿಶಿಷ್ಟ ಜನಾಂಗದವರ ಕುಂದುಕೊರತೆ ಆಲಿಸುವ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪರಿಶಿಷ್ಟ ಜನಾಂಗದವರ ಕುಂದುಕೊರತೆ ಸಭೆಯಲ್ಲಿ ಸುಮಾರು 48 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ದುರಸ್ತಿ, ಹಕ್ಕುಪತ್ರ ವಿತರಿಸುವುದು, ಮನೆ ದಾಖಲಾತಿ, ಅಕ್ರಮ ಸಕ್ರಮ, ಜಾಗ ಅತಿಕ್ರಮಣ ತೆರವುಗೊಳಿಸುವುದು, ಜಮೀನಿಗೆ ತೆರಳಲು ದಾರಿ ಬಿಡಿಸುವುದು, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪೊಲೀಸ್, ಕೃಷಿ, ಆಹಾರ, ಸೆಸ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹೀಗೆ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿ, ಹಕ್ಕುಪತ್ರ, ನಿವೇಶನ ಒದಗಿಸುವುದು, ಮನೆ ನಿರ್ಮಾಣ, ಕೃಷಿ ಭೂಮಿ ಅತಿಕ್ರಮಣ ಮಾಡಿಕೊಂಡಿರುವುದು ಇಂದಿನ ಕುಂದುಕೊರತೆ ಸಭೆಯಲ್ಲಿ ಹೆಚ್ಚಾಗಿ ಕೇಳಿಬಂದವು. ಈ ಸಂದರ್ಭದಲ್ಲಿ ಮಾತನಾಡಿದ ಕುಂಬೂರಿನ ಸೋಮಪ್ಪ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಲವು ಸಮಸ್ಯೆಗಳಿದ್ದು,…
ಸೋಮವಾರಪೇಟೆ ಏ.22 NEWS DESK : ತಣ್ಣೀರುಹಳ್ಳ ಗ್ರಾಮದ ಬಸವೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವ ಅಂಗವಾಗಿ ದೇವಾಲಯದಲ್ಲಿ ವಿಶೇಷ ಹೋಮಹವನಗಳು ಶ್ರದ್ಧಾಭಕ್ತಿಯಿಂದ ನಡೆಯಿತು. ಮೂಡಿಗೆರೆಯ ತಂತ್ರಿಗಳಾದ ಶಿವಪ್ರಸಾದ್, ದೇವಾಲಯ ಸಮಿತಿ ಅಧ್ಯಕ್ಷ ಕೆ.ರವಿ, ಉಪಾಧ್ಯಕ್ಷ ಭುವನೇಂದ್ರ, ಕಾರ್ಯದರ್ಶಿ ಅನಿಲ್ ಶೆಟ್ಟಿ, ಖಜಾಂಚಿ ಏಳುಮಲೈ ಇದ್ದರು.
ಮಡಿಕೇರಿ ಏ.22 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.23 ರ ಪಂದ್ಯಗಳು. *ಮೈದಾನ 1* ಬೆಳಿಗ್ಗೆ 9 ಗಂಟೆಗೆ ತಂಬುಕುತ್ತಿರ ಮತ್ತು ಚಿರಿಯಪಂಡ, 10ಕ್ಕೆ ಕನ್ನಂಡ ಮತ್ತು ಕರಿನೆರವಂಡ, 11ಕ್ಕೆ ಅಮ್ಮಾಟಂಡ ಮತ್ತು ನಂದಿನೆರವಂಡ, ಮಧ್ಯಾಹ್ನ 12ಕ್ಕೆ ಪೆಬ್ಬಟಿರ ಮತ್ತು ದಾಸಂಡ ಹಾಗೂ 1 ಗಂಟೆಗೆ ಅಳಮೇಂಗಡ ಮತ್ತು ಚೊಟ್ಟೆಯಂಡಮಾಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಮುಂಡಂಡ ಮತ್ತು ಪುದಿಯೊಕ್ಕಡ, 10ಕ್ಕೆ ಮುಕ್ಕಾಟಿರ (ಕುಂಜಲಗೇರಿ) ಮತ್ತು ಮೂಕೊಂಡ, 11ಕ್ಕೆ ಸಣ್ಣುವಂಡ ಮತ್ತು ಹಂಚೆಟ್ಟಿರ, ಮಧ್ಯಾಹ್ನ 12ಕ್ಕೆ ಕೊಟ್ಟಂಗಡ ಮತ್ತು ಕರವಂಡ, 1ಕ್ಕೆ ಮುಕ್ಕಾಟಿರ (ಕುಂಬಳದಾಳು) ಮತ್ತು ಸಿದ್ದಂಡ ಹಾಗೂ 2 ಗಂಟೆಗೆ ನೆರವಂಡ ಮತ್ತು ಬೊಳ್ಳೆರ *ಮೈದಾನ 3* ಮಹಿಳಾ ಕ್ರಿಕೆಟ್ ಬೆಳಿಗ್ಗೆ 10 ಗಂಟೆಗೆ ನಾಟೋಳಂಡ ಮತ್ತು ಮೇವಡ, 11ಕ್ಕೆ ಒಡಿಯಂಡ ಮತ್ತು ಮಂದನೆರವಂಡ, ಮಧ್ಯಾಹ್ನ 12ಕ್ಕೆ ಅರಮಣಮಾಡ ಮತ್ತು ಕಲಿಯಂಡ,…






