ವಿರಾಜಪೇಟೆ ಜೂ.24 NEWS DESK : ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸುವ ಸಲುವಾಗಿ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ರಚನೆ ಮಾಡಲು ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆಗಾಗಿ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ [ಇವಿಎಂ] ಮೂಲಕ ತಮ್ಮ ಮತವನ್ನು ಚಲಾಯಿಸಿದರು. ಈ ಸಂದರ್ಭದಲ್ಲಿ ಚುನಾವಣೆಯ ಮತಗಟ್ಟೆ ಅಧಿಕಾರಿಯಾಗಿ ಮುಖ್ಯ ಶಿಕ್ಷಕಿ ಪಿ.ಯು.ಪಾರ್ವತಿ, ಸಹ ಅಧಿಕಾರಿಯಾಗಿ ಬಿ.ಪಿ.ಉಷಾ ಹಾಗೂ ಸಿ ಲೀನಾ ದೇವಯ್ಯ ಕಾರ್ಯನಿರ್ವಹಿಸಿದ್ದರು. ಶಾಲಾ ಸಂಸತ್ತು ಚುನಾವಣೆಯಲ್ಲಿ ಶಾಲಾ ನಾಯಕನಾಗಿ ಬೋವ್ವೇರಿಯಂಡ ಹನ್ಸಿಕ ಪೊನ್ನಪ್ಪ, ಉಪ ನಾಯಕಿಯಾಗಿ ಪಟ್ಟಡ ಬಿ.ದೇಚಮ್ಮ ಕ್ರೀಡಾ ನಾಯಕಿ ಕರ್ನಂಡ ಎಸ್.ಕೃತಿಕಾ ಅಕ್ಕಮ್ಮಾ, ಉಪ ನಾಯಕಿಯಾಗಿ ಕರ್ನಂಡ ಎಸ್.ಶತಕ ಕಾವೇರಮ್ಮ, ಸಾಂಸ್ಕೃತಿಕ ನಾಯಕಿಯಾಗಿ ಕುಲ್ಲಚಂಡ ಎಸ್.ಭೂಮಿಕಾ ಬೋಜಮ್ಮ, ಉಪ ನಾಯಕಿಯಾಗಿ ಚೋಕಂಡ ದಿತಿ ದೇಚಮ್ಮ, ಆರೋಗ್ಯ ನಾಯಕಿಯಾಗಿ ಐ.ಎಂ.ಅಮಾನ ಮನ್ನ, ಉಪ ಆರೋಗ್ಯ ನಾಯಕಿಯಾಗಿ ಕಾಳಚಂಡ ಎಂ.ದೇಚಮ್ಮ, ಶಿಸ್ತಿನ ನಾಯಕಿಯಾಗಿ ಸನಾ ಕೆ.ಎಸ್, ಉಪ ಶಿಸ್ತಿನ ನಾಯಕಿಯಾಗಿ ಅಜಾನ್ ಎಂ.ಎ,…
ಲೇಖಕ: admin
ಮಡಿಕೇರಿ NEWS DESK ಜೂ.23 : ಕೊಡಗು ಜಿಲ್ಲೆಯ ಕೃಷಿಕರ ಬದುಕಿಗೆ ಸಂಕಷ್ಟವನ್ನು ತಂದೊಡ್ಡುತ್ತಿರುವ ಕಾಡಾನೆ ಸೇರಿದಂತೆ ವಿವಿಧ ವನ್ಯಜೀವಿಗಳ ಹಾವಳಿಯನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಭಾರತೀಯ ಕಿಸಾನ್ ಸಂಘದ ರಾಷ್ಟಿçÃಯ ಅಧ್ಯಕ್ಷ ಕೆ.ಸಾಯಿರೆಡ್ಡಿ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಿನಲ್ಲಿ ಕಳೆದೊಂದು ವರ್ಷದಲ್ಲಿ 17 ಮತ್ತು ಆರು ವರ್ಷಗಳ ಅವಧಿಯಲ್ಲಿ 78 ಮಂದಿ ಜೀವ ಕಳೆದುಕೊಂಡಿದ್ದಾರೆ. ಸಮಸ್ಯೆ ಗಂಭೀರ ಸ್ವರೂಪವನ್ನು ಪಡೆದುಕೊಂಡಿದ್ದು, ಸರಕಾರಗಳು ತುರ್ತು ಪರಿಹಾರೋಪಾಯಗಳನ್ನು ರೂಪಿಸಬೇಕು ಎಂದರು. ಸಂಘವು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಕೃಷಿಕರ ಸಂಕಷ್ಟಗಳನ್ನು ತಿಳಿದುಕೊಂಡಿದೆ. ಇದೀಗ ಕೊಡಗು ಜಿಲ್ಲೆಗೂ ಭೇಟಿ ನೀಡಿದ್ದು, ಇಲ್ಲಿನ ಮೂಲಭೂತವಾದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದರು. *ಟೌನ್ ಶಿಪ್ಗೆ ತೀವ್ರ ವಿರೋಧ* ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿಯಲ್ಲಿರುವ ಕೃಷಿಕರ ಫಲವತ್ತಾದ ಭೂಮಿಯನ್ನು ಟೌನ್ಶಿಪ್ಗೆ ಬಳಕೆ ಮಾಡುವುದನ್ನು ಭಾರತೀಯ ಕಿಸಾನ್ ಸಂಘ ತೀವ್ರವಾಗಿ ವಿರೋಧಿಸುವುದಾಗಿ ಸ್ಪಷ್ಟಪಡಿಸಿದರು. 2027 ರಲ್ಲಿ…
ಮಡಿಕೇರಿ ಜೂ.23 NEWS DESK : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ ಮತ್ತು ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ “ಆರೋಗ್ಯ ವಯೋವೃದ್ಧಿಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಕೆ.ಬಸವರಾಜು ಅವರು ಮಾತನಾಡಿ, ಯೋಗ ಮತ್ತು ಧ್ಯಾನ ಮನುಷ್ಯನ ಜೀವನಕ್ಕೆ ಮುಖ್ಯವಾಗಿದೆ. ದಿನನಿತ್ಯ ಒತ್ತಡದ ಬದುಕಿನಲ್ಲಿರುವ ನಮಗೆ ಯೋಗ ಅವಶ್ಯಕವಾಗಿದೆ. ಇದು ಇಂದಿಗೆ ಸೀಮಿತವಾಗದೆ ಪ್ರತಿದಿನ ಯೋಗಭ್ಯಾಸ ಮುಖ್ಯ ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಮಾತನಾಡಿ, ಮಾನಸಿಕ ಮತ್ತು ದೈಹಿಕ ಆರೋಗ್ಯವೇ ನಿಜವಾದ ಆರೋಗ್ಯ. ಒತ್ತಡ, ಕೋಪದ ನಿಗ್ರಹಕ್ಕೆ ಯೋಗ ಅವಶ್ಯಕ. ಅನಾರೋಗ್ಯ ಮುಕ್ತ ಜೀವನ ಆಗಬೇಕೆಂದರು. ಜೀವನದ ಪ್ರಮುಖ 10 ಸೂತ್ರಗಳ ಬಗ್ಗೆ ಮಾಹಿತಿ ನೀಡಿದರು.…
ಮಡಿಕೇರಿ NEWS DESK ಜೂ.23 : ಕೊಡವಲ್ಯಾಂಡ್, ಕೊಡವ ಸಂಸ್ಕೃತಿ, ಆಚಾರ ವಿಚಾರಗಳ ರಕ್ಷಣೆ ಮತ್ತು ಕೊಡವರ ಸಂವಿಧಾನಬದ್ಧ ಹಕ್ಕುಗಳ ಪ್ರತಿಪಾದನೆಯ ಮೂಲಕ ಕಳೆದ 36 ವರ್ಷಗಳಿಂದ ನಿರಂತರ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಜೂ.26ರಂದು “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ವಿಚಾರಗೋಷ್ಠಿ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ವಿಚಾರಗೋಷ್ಠಿ ನಡೆಯಲಿದ್ದು, ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ವಿಕ್ರಮ್ ಹೆಗಡೆ ಅವರು “ಕೊಡವ ಧಾರ್ಮಿಕ ಆಚರಣೆ, ‘ಕೋವಿ-ತೋಕ್” ವಿಧಿ 25 ಮತ್ತು 26ರ ಅಡಿಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆ” ಕುರಿತು ವಿಷಯ ಮಂಡಿಸಲಿದ್ದಾರೆ. ಸುಪ್ರೀo ಕೋರ್ಟ್ ಹಾಗೂ ನ್ಯೂಯಾರ್ಕ್ ನ ವಕೀಲರಾದ ಹಿಮಾ ಲಾರೆನ್ಸ್ ವಿಕ್ರಮ್ ಹೆಗಡೆ ಅವರು “ಅಂತರರಾಷ್ಟ್ರೀಯ ವಿಶ್ವಸಂಸ್ಥೆಯ ಕಾನೂನಿನಡಿ…
ಮಡಿಕೇರಿ NEWS DESK ಜೂ.23 : ಲವ್ ಜಿಹಾದ್ ಮತ್ತು ಮತಾಂತರ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಜೂ.30 ರಂದು ಕುಶಾಲನಗರದಲ್ಲಿ ಬೃಹತ್ ಜನಜಾಗೃತಿ ಜನಾಂದೋಲನ ನಡೆಯಲಿದೆ ಎಂದು ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಂಯೋಜಕ ಬೋಜೇಗೌಡ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಜನಾಂದೋಲನಕ್ಕೆ ಹಿಂದೂ ಜಾಗರಣಾ ವೇದಿಕೆ ಸಂಪೂರ್ಣ ಬೆಂಬಲವನ್ನು ನೀಡಲಿದೆ ಎಂದರು. ಕುಶಾಲನಗರದ ಹಿಂದೂ ಮಹಿಳೆ ಹಾಗೂ ಆಕೆಯ ಮಗನನ್ನು ಮತಾಂತರ ಮಾಡಲಾಗಿದೆ. ಪೊಲೀಸ್ ಇಲಾಖೆ ಈ ಸಂಬಂಧ ಎರಡು ಮಳಿಗೆೆಗಳನ್ನು ಮುಚ್ಚಿರುವುದನ್ನು ಹೊರತು ಪಡಿಸಿದರೆ ಸಮಗ್ರ ತನಿಖೆಗೆ ಮುಂದಾಗಿಲ್ಲವೆಂದು ಆರೋಪಿಸಿದರು. ಈ ಹಿಂದೆ ಗುಡ್ಡೆಹೊಸೂರು ವಿಭಾಗದ ಹಿಂದೂ ಮಹಿಳೆಯೊಬ್ಬರು ಲವ್ ಜಿಹಾದ್ ಗೆ ಸಿಲುಕಿ ಮತಾಂತರಗೊಂಡಿದ್ದಳು. ಬಳಿಕ ಎನ್ಐಎ ತನಿಖೆಯೊಂದರ ಸಂದರ್ಭ ಮಹಿಳೆ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿತ್ತು. ಲವ್ ಜಿಹಾದ್ ಮತ್ತು ಮತಾಂತರಗಳ ಬಗ್ಗೆ…
ಮಡಿಕೇರಿ ಜೂ.23 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯರೋಗ ವಿಭಾಗದಿಂದ ಪಾಲಿಬೆಟ್ಟ ಟಾಟಾ ಕಂಪನಿ ಲಿಮಿಟೆಡ್ ಪಾಲಿಬೆಟ್ಟ ಕ್ಯಾಂಪೇನ್ ನಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ 100 ದಿನಗಳ ಕ್ಷಯ ಮುಕ್ತ ಅಭಿಯಾನ ಸಂಬಂಧ ಶಿಬಿರ ನಡೆಯಿತು. ಕ್ಷಯ ಗುರುತಿಸುವ ಸಂಬಂಧ ಕಫ ಸಂಗ್ರಹಣೆ ಹಾಗೂ ಹ್ಯಾಂಡ್ ಹೆಲ್ಡ್ ಎಕ್ಸ್-ರೇ ಅಂದರೆ ಕ್ಷಯ ರೋಗಾಣುಗಳು ಸೋಂಕಿತ ವ್ಯಕ್ತಿಯು ಕೆಮ್ಮಿದಾಗ ಹೊರಬಂದ ರೋಗಾಣುಗಳು ಗಾಳಿಯ ಮುಖಾಂತರ ಆರೋಗ್ಯವಂತ ವ್ಯಕ್ತಿಯ ಮೂಗು ಮತ್ತು ಬಾಯಿಯ ಮುಖಾಂತರ ಶ್ವಾಸಕೋಶ ಕ್ಷಯ ಪ್ರವೇಶ ಮಾಡಿ ಸೋಂಕುಂಟು ಮಾಡುತ್ತದೆ ಎಂದರು. ಸೋಂಕನ್ನು ಪ್ರಾರಂಭಿಕ ಹಂತದಲ್ಲಿ ಗುರುತಿಸುವ ಒಂದು ಸುಲಭ ವಿಧಾನ ಹಾಗೂ ಸೋಂಕುಳ್ಳ ವ್ಯಕ್ತಿ ಆರೋಗ್ಯ ಸಂಸ್ಥೆಯಲ್ಲಿ ತಲುಪದೇ ವ್ಯಕ್ತಿಯ ವಾಸಸ್ಥಳ ಅಥವಾ ಅನುಕೂಲವಾಗುವ ನಿಗದಿತ ಜಾಗದಲ್ಲಿ ಎಕ್ಸರೇ ಮಾಡಿ ಕ್ಷಯ ಗುರುತಿಸಬಹುದಾಗಿದೆ ಎಂದು ಹೇಳಿದರು. ಆಡಳಿತ ವೈದ್ಯಾಧಿಕಾರಿ ಡಾ.ಶಿವಪ್ಪ ಹಾಗೂ ಟಾಟಾ ಕಂಪನಿಯ ಆರ್ಐಎಚ್ಪಿ ವೈದ್ಯಾಧಿಕಾರಿಗಳಾದ ಡಾ.ಚಂದ್ರು ಅವರು…
ಮಡಿಕೇರಿ ಜೂ.23 NEWS DESK : ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆಯ ನೂತನ ಅಧ್ಯಕ್ಷೆಯಾಗಿ ಪ್ರಮೀಳಾ ಶೆಟ್ಟಿ, ಕಾಯ೯ದಶಿ೯ಯಾಗಿ ಸ್ಮಿತಾ ಚಂಗಪ್ಪ ಮತ್ತು ವಲಯ ಸೇನಾನಿಯಾಗಿ ಕೆ.ವಸಂತ್ ಕುಮಾರ್ ನೇಮಕಗೊಂಡಿದ್ದಾರೆ. ರೋಟರಿ ವುಡ್ಸ್ ಸಂಸ್ಥೆಗೆ 5 ನೇ ವಷ೯ದ ಅಧ್ಯಕ್ಷೆಯಾಗಿ ಪ್ರಮೀಳಾ ಶೆಟ್ಟಿ ಕಾಯ೯ದಶಿ೯ಯಾಗಿ ಸ್ಮಿತಾ ಚಂಗಪ್ಪ ಆಯ್ಕೆ ಮೂಲಕ ರೋಟರಿ ವುಡ್ಸ್ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷೆ, ಕಾಯ೯ದಶಿ೯ಯನ್ನು ಪಡೆದುಕೊಂಡ ಹಿರಿಮೆಗೆ ಪಾತ್ರವಾಗಿದೆ. ರೋಟರಿ ವುಡ್ಸ್, ಮತ್ತು ಆಲೂರು ಸಿದ್ದಾಪುರ ರೋಟರಿ ಸಂಸ್ಥೆಗಳಿಗೆ ರೋಟರಿ ವುಡ್ಸ್ ಮಾಜಿ ಅಧ್ಯಕ್ಷ ಕೆ. ವಸಂತ್ ಕುಮಾರ್ ವಲಯ ಸೇನಾನಿಯಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ, ಕಾಯ೯ದಶಿ೯ ಹಾಗೂ ಆಡಳಿತ ಮಂಡಳಿ ನಿದೇ೯ಶಕರಿಗೆ ಪದಗ್ರಹಣ ಸಮಾರಂಭವು ಜೂನ್ 27 ರಂದು ಶನಿವಾರ ಸಂಜೆ 6.30 ಗಂಟೆಗೆ ಮಡಿಕೇರಿ ಕೊಡವ ಸಮಾಜದಲ್ಲಿ ಆಯೋಜಿತವಾಗಿದೆ. ಬೆಂಗಳೂರು ರೋಟರಿ ಸಂಸ್ಥೆಯ ಮಾಜಿ ಗವನ೯ರ್ ಎಲಿಜಬೆತ್ ಚೆರಿಯನ್ ಪದಗ್ರಹಣ ನೆರವೇರಿಸಲಿದ್ದು, ರೋಟರಿ ಸಹಾಯಕ ಗವನ೯ರ್ ಎಂ.ಡಿ. ರಂಗಸ್ವಾಮಿ, (2026-27) ಪಿ.ಎಂ.…
ಮಡಿಕೇರಿ ಜೂ.23 NEWS DESK : ಕುಶಾಲನಗರ ಸಮೀಪದ ಜ್ಞಾನಗಂಗಾ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಸೋಮವಾರಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಜ್ಯೋತಿ ಬೆಳಗಿಸಿ ಯೋಗದಿನವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ದೈಹಿಕ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು. ದೈಹಿಕ ಆರೋಗ್ಯ ಸದೃಢವಾಗಿಬೇಕಾದರೆ ದಿನನಿತ್ಯ ಯೋಗಾಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಿ ಕೃಷ್ಣಪ್ಪ ಎಂದು ಕರೆ ನೀಡಿದರು. ಕಾಯ೯ಕ್ರಮದ ಮುಖ್ಯ ಅತಿಥಿ ಡಾ.ಶಶಾಂಕ್ ಅತ್ವಾರ್ ಮಾತನಾಡಿ, , ಯೋಗದ ಮಹತ್ವ : ಯೋಗದ ಉಗಮದ ಬಗ್ಗೆ ಮಾಹಿತಿ ನೀಡಿದರಲ್ಲದೆ, ಗುರು ಪರಂಪರೆಯ ಬಗ್ಗೆಯೂ ತಿಳಿಸಿ, ವಿದ್ಯಾರ್ಥಿಗಳು ಶಿಸ್ತು, ಸಂಯ ಮ ಸಮಯ ಪಾಲನೆಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ ಸುಧೀರ್ ಮಾತನಾಡಿ, ಪ್ರಾಣಾಯಾಮ ಮತ್ತು ಸೂರ್ಯ ನಮಸ್ಕಾರವನ್ನು ದಿನನಿತ್ಯ ಮಾಡುವುದರಿಂದ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಹೇಳಿದರು. ಯೋಗ ದಿನದ ಅಂಗವಾಗಿ ಶಾಲೆಯ ಯೋಗ ಶಿಕ್ಷಕ ಶಿವರಾಮ ಯೋಗಾಭ್ಯಾಸ ಮಾಡಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ…
ಮಡಿಕೇರಿ NEWS DESK ಜೂ.23 : ಮಡಿಕೇರಿಯ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆ ತೀವ್ರ ತಪಾಸಣೆ ನಡೆಸಲಾಯಿತು. ಇ-ಮೇಲ್ ಗಮನಿಸಿದ ನ್ಯಾಯಾಲಯದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ನ್ಯಾಯಾಲಯದ ಕಟ್ಟಡಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿದರು. ಈ ಘಟನೆ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಸುರಕ್ಷತೆಯ ದೃಷ್ಟಿಯಿಂದ ನ್ಯಾಯಾಲಯಕ್ಕೆ ನ್ಯಾಯಾಧೀಶರು, ವಕೀಲರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಪ್ರವೇಶವನ್ನು ತಪಾಸಣೆ ಪೂರ್ಣಗೊಳ್ಳುವವರೆಗೆ ನಿರ್ಬಂಧಿಸಲಾಗಿತ್ತು. ನ್ಯಾಯಾಧೀಶರ ಕೊಠಡಿಗಳು, ನ್ಯಾಯಾಲಯ ಕೊಠಡಿಗಳು, ಆವರಣ, ವಾಹನ ಪಾರ್ಕಿಂಗ್ ಪ್ರದೇಶ, ಕಚೇರಿಗಳು, ಸಮೀಪದ ಕ್ಯಾಂಟೀನ್ನಲ್ಲೂ ಶೋಧ ಕಾರ್ಯ ನಡೆಸಲಾಯಿತು. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡು ಬರಲಿಲ್ಲ. ಆ ಬಳಿಕವೇ ನ್ಯಾಯಾಲಯಕ್ಕೆ ತೆರಳಲು ಪೊಲೀಸರು ಅನುಮತಿಸಿದರು. ಈ ಕುರಿತು ಪ್ರತಿಕ್ರಿಯೆ…
ಮಡಿಕೇರಿ NEWS DESK ಜೂ.23 : ಕೊಡವಲ್ಯಾಂಡ್, ಕೊಡವ ಸಂಸ್ಕೃತಿ, ಆಚಾರ ವಿಚಾರಗಳ ರಕ್ಷಣೆ ಮತ್ತು ಕೊಡವರ ಸಂವಿಧಾನಬದ್ಧ ಹಕ್ಕುಗಳ ಪ್ರತಿಪಾದನೆಯ ಮೂಲಕ ಕಳೆದ 36 ವರ್ಷಗಳಿಂದ ನಿರಂತರ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಜೂ.26ರಂದು “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ವಿಚಾರಗೋಷ್ಠಿ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ವಿಚಾರಗೋಷ್ಠಿ ನಡೆಯಲಿದ್ದು, ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ವಿಕ್ರಮ್ ಹೆಗಡೆ ಅವರು “ಕೊಡವ ಧಾರ್ಮಿಕ ಆಚರಣೆ, ‘ಕೋವಿ-ತೋಕ್” ವಿಧಿ 25 ಮತ್ತು 26ರ ಅಡಿಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆ” ಕುರಿತು ವಿಷಯ ಮಂಡಿಸಲಿದ್ದಾರೆ. ಸುಪ್ರೀo ಕೋರ್ಟ್ ಹಾಗೂ ನ್ಯೂಯಾರ್ಕ್ನ ವಕೀಲರಾದ ಹಿಮಾ ಲಾರೆನ್ಸ್ ವಿಕ್ರಮ್ ಹೆಗಡೆ ಅವರು “ಅಂತರರಾಷ್ಟ್ರೀಯ ವಿಶ್ವಸಂಸ್ಥೆಯ ಕಾನೂನಿನಡಿ ಕೊಡವಲ್ಯಾಂಡ್ ಭೂ-ರಾಜಕೀಯ…






