ಲೇಖಕ: admin

ಸುಂಟಿಕೊಪ್ಪ ಜ.21 NEWS DESK : ಮಕ್ಕಳು ಯಾವುದೇ ಉನ್ನತ ಶಿಕ್ಷಣಗಳಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ ಪರಿಗಣನೆಗೆ ಬರುವುದಿಲ್ಲ. ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ  ಪಡೆದ ಅಂಕಗಳೇ ನಿಮ್ಮ ಮುಂದಿನ ಭವಿಷ್ಯಕ್ಕೆ ಮುನ್ನುಡಿ ಅದುದ್ದರಿಂದ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ  ಶಿಕ್ಷಣಕ್ಕೆ ಆದ್ಯತೆ ನೀಡಿದಾಗ ಮಾತ್ರ ನಿಮ್ಮ ಗುರಿ ಸಾಧನೆಗೆ ಸಹಕಾರಿಯಾಗಲಿದೆ ಎಂದು ಪೋಷಕರಿಗೆ ಶಿಕ್ಷಕಿ ಹರ್ಷಿತಾ ಮಾಹಿತಿ ನೀಡಿದರು. ಮಂಜಿಕೆರೆ ಸಮುದಾಯ ಭವನದಲ್ಲಿ ಕಾನ್‍ಬೈಲ್  ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ಕಾನ್‍ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಮಾಹಿತಿ ಕಾರ್ಯಾಗಾರವನ್ನು ಉದ್ದೇಶಿಸಿ ಶಿಕ್ಷಕಿ ಹರ್ಷಿತ ಮಾತನಾಡಿದರು. ಮಕ್ಕಳು ಮೊಬೈಲ್ ಬಳಕೆಯ ಸಂದರ್ಭ ಪಠ್ಯ ಚಟುವಟಿಕೆಗೆ ಸಂಬಂಧಿಸಿದ ಅಥವಾ ಇತರೆ ವಿಚಾರಗಳ ಬಳಕೆ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನಿಗಾವಹಿಸಬೇಕು. ಮಕ್ಕಳು ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಅಂಕಗಳೇ ಮಕ್ಕಳ ಮುಂದಿನ ಭವಿಷ್ಯಕ್ಕೆ ಬೇಕಾಗಿರುವ ಅಂಕವಾಗಿದೆ. ಪದವಿ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ಪಡೆದರೂ ಯಾವುದೇ ಪ್ರಯೋಜನವಿಲ್ಲ…

Read More

  ಮಡಿಕೇರಿ ಜ.20 NEWS DESK : ಜಿಲ್ಲಾಡಳಿತ ವತಿಯಿಂದ ಜನವರಿ, 26 ರಂದು ಬೆಳಗ್ಗೆ 09 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್,…

Read More

ಮಡಿಕೇರಿ NEWS DESK ಜ.20 : ಕೇಂದ್ರ ಸರಕಾರ ರಾಜ್ಯ ಸರಕಾರಗಳ ಅಭಿಪ್ರಾಯವನ್ನು ಪಡೆಯದೆ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ‘ವಿಬಿ ರಾಮ್ ಜಿ’ ಯೋಜನೆಯನ್ನಾಗಿ ಪರಿವರ್ತಿಸಿ, ಸರ್ವಾಧಿಕಾರಿಯಂತೆ ವರ್ತಿಸುವ ಮೂಲಕ, ಗ್ರಾಮ ಪಂಚಾಯ್ತಿಗಳ ಅಧಿಕಾರವನ್ನು ಕಸಿದುಕೊಂಡಿರುವುದಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಆರೋಪಿಸಿದ್ದಾರೆ. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ್ಗದ ಮಂದಿಯ ಕೈಗೆ ಕೆಲಸವನ್ನು ಒದಗಿಸುತ್ತಿದ್ದ ನರೇಗಾ ಯೋಜನೆ ರಾಷ್ಟçವ್ಯಾಪಿ ಕೋಟ್ಯಂತರ ಬಡ ಮಂದಿಯ ಬದುಕಿಗೆ ಆಧಾರವಾಗಿತ್ತು. ಇಂತಹ ಯೋಜನೆಯನ್ನು ಯಾವುದೇ ಸಂಘ-ಸಂಸ್ಥೆ, ಜನಪ್ರತಿನಿಧಿಗಳು, ರಾಜ್ಯ ಸರ್ಕಾರಗಳೊಂದಿಗೆ ಚರ್ಚಿಸದೆ ಕೇವಲ 72 ಗಂಟೆಗಳಲ್ಲಿ ತರಾತುರಿಯಿಂದ ಬದಲಿಸಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿಬಿ ರಾಮ್ ಜಿ ಯೋಜನೆಯನ್ನು ಹಿಂಪಡೆಯುವವರೆಗೂ ರಾಷ್ಟ್ರವ್ಯಾಪಿ ಕಾಂಗ್ರೆಸ್ ಜನಜಾಗೃತಿಯನ್ನು ಮೂಡಿಸುವುದರೊಂದಿಗೆ ಹೋರಾಟಗಳನ್ನು ನಡೆಸಲಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಲು ರಾಜ್ಯ ಸರಕಾರ ಏಳು ದಿನಗಳ ವಿಶೇಷ ಅಧಿವೇಶನವನನ್ನು ಕರೆದಿರುವುದಾಗಿ ಹೇಳಿದರು. ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೇಂದ್ರ ಸರ್ಕಾರದ…

Read More

ಮಡಿಕೇರಿ ಜ.20 NEWS DESK : 2026-27ನೇ ಸಾಲಿನಲ್ಲಿ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ಸಂಬಂಧ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸುಮಾರು 1,27,191.24 ಲಕ್ಷ ರೂ. ಕ್ರಿಯಾಯೋಜನೆಯನ್ನು ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಂಡಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಥಮ ಸಭೆಯಲ್ಲಿ ಮುಂದಿನ ಆರ್ಥಿಕ ವರ್ಷದ ವಿವಿಧ ಇಲಾಖೆಗಳ ವಾರ್ಷಿಕ ಅಭಿವೃದ್ಧಿ ಕ್ರಿಯಾಯೋಜನೆ ಸಂಬಂಧ ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಸಚಿವರಾದ ಎನ್.ಎಸ್.ಭೋಸರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಬಾರಿ ಚರ್ಚಿಸಿದ ನಂತರ ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ನಡೆಸಿ ಸಲಹಾ ಸಮಿತಿಯಿಂದ ಸಲಹೆ ಮತ್ತು ಮಾರ್ಗದರ್ಶನ ಪಡೆಯುವಂತೆ ನಿರ್ದೇಶನ ನೀಡಿದ್ದಾರೆ ಎಂದರು. ಅದರಂತೆ ಕೊಡಗು ಜಿಲ್ಲೆಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಶಾಲಾ ಕಾಲೇಜು ಕಟ್ಟಡ,…

Read More

ವಿರಾಜಪೇಟೆ ಜ.20 NEWS DESK : ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ.ಎನ್.ಲಾವಣ್ಯ ಬೋರ್ಕರ್  ಅವರಿಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆ ಟ್ರಸ್ಟ್ ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವದ ಪ್ರಯುಕ್ತ ಜರುಗಿದ ಸಮಾರಂಭದಲ್ಲಿ ಲಾವಣ್ಯ ಬೋರ್ಕರ್ ಅವರ ಕಲಾ ಹಾಗೂ ಭರತನಾಟ್ಯದಲ್ಲಿನ ಸಾಧನೆಯನ್ನು ಪರಿಗಣಿಸಿ ಹಾಸನದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಿದ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಲಾವಣ್ಯ ಬೋರ್ಕರ್ ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ ಬಿ ಎ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ನ ಗುರುಗಳಾದ ಪ್ರೇಮಾಂಜಲಿ ಆಚಾರ್ಯ ಅವರ  ಶಿಷ್ಯೆ ಹಾಗೂ ವಿರಾಜಪೇಟೆ ಬೇಟೋಳಿ ಗ್ರಾಮದ ನಾಟಿ ವೈದ್ಯರು ಹಾಗೂ ಕೊಡಗು ಬಾಲವಲಿಕರ್ ಉತ್ತಮ ಜೀವನ ಸಹಕಾರ ಸಂಘದ ಅಧ್ಯಕ್ಷ ಬಿ.ಜಿ.ನಟರಾಜ್ ಬೋರ್ಕರ್ ಹಾಗೂ ಸುನಂದ ಬೋರ್ಕರ್ …

Read More

ಮಡಿಕೇರಿ ಜ.20 NEWS DESK : ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ “ಕೂರ್ಗ್ ಚಾಂಪಿಯನ್ ಶಿಪ್ ಕಪ್-2026” ಪಂದ್ಯಾವಳಿ ಸಮಾರೋಪಗೊಂಡಿತು. *ವಿಜೇತರ ವಿವರ*  16 ವರ್ಷದೊಳಗಿನ ಬಾಲಕಿಯರ ವಿಭಾಗದ ಸಿಂಗಲ್ಸ್ ನಲ್ಲಿ ಸುಂಟಿಕೊಪ್ಪದ ಸಂತಮೇರಿಸ್ ಶಾಲೆಯ ಅಹಲ್ಯ ಪ್ರಥಮ, ಪೊನ್ನಂಪೇಟೆಯ ಸರ್ವದೈವತ ಶಾಲೆಯ ಲಿಪಿಕಾ ದ್ವಿತೀಯ ಸ್ಥಾನ ಪಡೆದರು.  ಬಾಲಕರ ವಿಭಾಗದಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದ ಅವಿನಾಶ್ ಪ್ರಥಮ,  ಪೊನ್ನಂಪೇಟೆಯ ಸರ್ವದೈವತ ಶಾಲೆಯ ಲಿತೇಶ್ ದ್ವಿತೀಯ ಸ್ಥಾನ ಪಡೆದರು. 21 ವರ್ಷದೊಳಗಿನ ಬಾಲಕಿಯರ ವಿಭಾಗದ ಸಿಂಗಲ್ಸ್‍ನಲ್ಲಿ ಪೊನ್ನಂಪೇಟೆಯ ಸರ್ವದೈವತ ಶಾಲೆಯ ಲಿಪಿಕಾ ಪ್ರಥಮ, ಕೂಡಿಗೆಯ ಮೊರಾರ್ಜಿ ದೇಸಾಯಿ ಶಾಲೆಯ ಶೀತಲ್ ದ್ವಿತೀಯ ಸ್ಥಾನ ಪಡೆದರು. 21 ವರ್ಷದೊಳಗಿನ ಬಾಲಕಿಯರ ಡಬಲ್ಸ್‍ನಲ್ಲಿ ಸುಂಟಿಕೊಪ್ಪದ ಸಂತಮೇರಿಸ್ ಶಾಲೆಯ ಅಹಲ್ಯ ಹಾಗೂ ನಿಮ್ರಾ ಪ್ರಥಮ, ಅನುಷ್ಕಾ ಹಾಗೂ ಪೊನ್ನಂಪೇಟೆಯ ಸರ್ವದೈವತ ಶಾಲೆಯ ಲಿಪಿಕಾ ದ್ವಿತೀಯ…

Read More

ವಿರಾಜಪೇಟೆ ಜ.20 NEWS DESK : ಕನ್ನಡ ಸಾಹಿತ್ಯ, ಸಂಗೀತ, ಸಂಘಟನೆಯ ಕ್ಷೇತ್ರದಲ್ಲಿ ಸಾಧನೆಯನ್ನುಗೈದ ಲೇಖಕಿ ಪ್ರತಿಮಾ ಹರೀಶ್ ರೈ ಅವರಿಗೆ ಪಯಸ್ವಿನಿ ಅಚೀವ್ ಮೆಂಟ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕಾಸರಗೋಡು ಕನ್ನಡ ಭವನದ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ಕನ್ನಡ ಭವನದ ರಜತ ಸಂಭ್ರಮದ ಪ್ರಯುಕ್ತ ಕಾಸರಗೋಡಿನ ನುಳ್ಳಿಪ್ಪಾಡಿ ಕನ್ನಡ ಭವನದಲ್ಲಿ ಜರಗಿದ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮೂಲತ: ಮಡಿಕೇರಿಯವರಾದ ಪ್ರತಿಮಾ ಹರೀಶ್ ರೈ ಅವರು ಜಿಲ್ಲೆಯ ಪ್ರಮುಖ ಲೇಖಕಿ, ಬರಹಗಾರ್ತಿ ಹಾಗೂ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕನ್ನಡ ವಿಭಾಗದ ಪ್ರಾಧ್ಯಾಪಕಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Read More

ಕುಶಾಲನಗರ  ಜ.20 NEWS DESK : ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳ ಕಲಿಕಾ ಹಬ್ಬವು ಸಂತಸದ ಕಲಿಕೆ ಮತ್ತು ಸಂಭ್ರಮದ‌ ಕಲಿಕಾ ಹಬ್ಬ ಆಗಲಿ. ಮಕ್ಕಳ ಕ್ರಿಯಾತ್ಮಕ ಚಟುವಟಿಕೆಗೆ ಕಲಿಕಾ ಹಬ್ಬವು ಪೂರಕವಾಗಿದೆ ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು , ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕುಶಾಲನಗರ ಕ್ಲಸ್ಟರ್ ನ ಸಂಯುಕ್ತಾಶ್ರಯದಲ್ಲಿ ಮುಳ್ಳುಸೋಗೆ ಬಳಿಯ ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  1 ರಿಂದ 5 ನೇ ತರಗತಿಯವರೆಗಿನ ಮಕ್ಕಳಿಗೆ ಮೂಲಭೂತ – ಸಾಕ್ಷರತೆ- ಸಂಖ್ಯಾಶಾಸ್ತ್ರ (ಎಫ್ ಎಲ್ ಎನ್ ) ಸಂಬಂಧಿಸಿದಂತೆ ಏರ್ಪಡಿಸಿದ್ದ ಮಕ್ಕಳ ಕಲಿಕಾ ಹಬ್ಬ : 2026 ಸಂಭ್ರಮದ ಉತ್ಸವದಲ್ಲಿ ಕಲಿಕಾ ಗೋಪುರದಲ್ಲಿ ಮಕ್ಕಳ ಕಲಿಕಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲಿಕಾ ಹಬ್ಬವು ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು.  ವಿದ್ಯಾರ್ಥಿಗಳಲ್ಲಿ ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಸಂತಸದಾಯಕ ಕಲಿಕೆಗೆ…

Read More

ಗೋಣಿಕೊಪ್ಪ ಜ.20 NEWS DESK : ಪ್ರಗತಿ ಆಟೋಚಾಲಕರ ಮತ್ತು ಮಾಲೀಕರ ಸಂಘ ವತಿಯಿಂದ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಆಟೋ ಚಾಲಕರಿಗೆ ಕಾರ್ಮಿಕ ಕಾರ್ಡ್ ವಿತರಣೆ ಮಾಡಲಾಯಿತು. ಗೋಣಿಕೊಪ್ಪ ಪಂಚಾಯಿತಿ ಹಳೆ ಕಟ್ಟಡ ಸಂಭಾಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 90ಕ್ಕೂ ಹೆಚ್ಚು ಆಟೋಚಾಲಕರಿಗೆ ವಿತರಣೆ ನಡೆಯಿತು. ಮಡಿಕೇರಿ ಕಾರ್ಮಿಕ ಇಲಾಖೆ ಅಧಿಕಾರಿ ವಾಣಿ ಮಾತನಾಡಿ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಪಿಂಚಣಿ ಸವಲತ್ತು ಪಡೆಯಲು 40 ವರ್ಷದ ಒಳಗಿನವರು ಅರ್ಹರಾಗಿರುತ್ತಾರೆ. ಜೊತೆಗೆ ಮೋಟರು ಸಾರಿಗೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆತರಲಾಗಿದೆ. ಈ ಯೋಜನೆಗಳ ಸದುಪಯೋಗಕ್ಕೆ ಆಟೋಚಾಲಕರು ಗಮನ ಹರಿಸಬೇಕು ಎಂದು ಹೇಳಿದರು. ಕಾರ್ಮಿಕ ಇಲಾಖೆಯಲ್ಲಿ ಸಿಗುವ ಹಲವಾರು ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಸಾಹಿತಿ ಜಗದೀಶ್ ಜೋಡುಬೀಟಿ ಮಾತನಾಡಿ, ಆಟೋಚಾಲಕರು ಸಾಮಾಜಿಕ ಬದ್ಧತೆಯೊಂದಿಗೆತಮ್ಮಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನಾಡಿನ ನೆಲ-ಜಲ, ಸಂಸ್ಕøತಿ, ಭಾμÉಗಳ ಸಮೃದ್ಧಿ ಮತ್ತು ಮಹಿಳೆ, ಮಕ್ಕಳ, ವೃದ್ಧರ, ಅನಾರೋಗ್ಯ ಪೀಡಿತರ ಸುರಕ್ಷತೆಯೆಡೆಯ ಜವಾಬ್ದಾರಿಯು ಆಟೋಚಾಲಕರಾದ್ದಾಗಿದೆ.…

Read More

ಮಡಿಕೇರಿ ಜ.20 NEWS DESK : ಜನಪ್ರತಿನಿಧಿಗಳು ಹಾಗೂ ಗ್ರಾಹಕರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿತ್ತಿರುವ ಸಹಕಾರ ಸಂಘಗಳು ಭ್ರಷ್ಟಾಚಾರ ಮುಕ್ತವಾಗಿದ್ದಾಗ ಮಾತ್ರ ಸಹಕಾರಿ ಕ್ಷೇತ್ರದ ಬೆಳವಣಿಗೆ ಸಾಧ್ಯ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಕೆ.ಪಿ.ಗಣಪತಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಜಿಲ್ಲೆಯ ಪ್ಯಾಕ್ಸ್, ಪಿಕಾರ್ಡ್ ಬ್ಯಾಂಕ್, ಎ.ಪಿ.ಸಿ.ಎಂ.ಎಸ್ ಹಾಗೂ ಜೇನು ಸಹಕಾರ ಸಂಘಗಳ ಕಾರ್ಯನಿರ್ವಾಹಕರುಗಳಿಗೆ ಇತ್ತೀಚಿನ ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಮತ್ತು ಜಿ.ಎಸ್.ಟಿ, ಆದಾಯ ತೆರಿಗೆ ಕುರಿತು ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದೆ ಸಹಕಾರಿ ಕ್ಷೇತ್ರದಲ್ಲಿ ಕೊಡಗು ಇತರರಿಗೆ ಮಾದರಿಯಾಗಿತ್ತು, ಆದರೆ ಇಂದು ಅವ್ಯವಹಾರ ನುಸುಳಿದೆ. ಈ ಬಗ್ಗೆ ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕು, ಸಹಕಾರಿ ಕ್ಷೇತ್ರವನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು ಮತ್ತು ಸಹಕಾರ ಸಂಘಗಳ ಬೆಳವಣಿಗೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಸಹಕಾರ ಕ್ಷೇತ್ರದಲ್ಲಿ ಎಲ್ಲವನ್ನೂ…

Read More