ಲೇಖಕ: admin

ಸುಂಟಿಕೊಪ್ಪ ಮೇ 20 NEWS DESK : ಕೊಡಗು ಹಿಂದೂ ಮಲಯಾಳಿ ಕ್ರಿಕೆಟ್ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಯಂಗ್ ಚಾಲೆಂಜರ್ ಐಗೂರು ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಮಾದಾಪುರ ಹಿಂದೂ ಮಾಲಯಾಳಿ ಕುಟುಂಬದ ವತಿಯಿಂದ ಮಾದಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಕೊಡಗು ಹಿಂದೂ ಮಲಯಾಳಿ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ಐಗೂರು ಯಂಗ್ ಚಾಲೆಂಜರ್ಸ್ ಹಾಗೂ ಇಲೆವನ್ ಸ್ಟಾರ್ ಕಂಬಿಬಾಣೆ ತಂಡಗಳ ರೋಚಕ ಪಂದ್ಯಾವಳಿಯು ನಡೆದು ಮೊದಲು ಬ್ಯಾಟ್ ಕಂಬಿಬಾಣೆ ತಂಡ 6 ಓವರ್‍ಗಳ ಸಿಮೀತ ಪಂದ್ಯಾವಳಿಯಲ್ಲಿ 48 ರನ್‍ಗಳಿಗೆ ತನ್ನೆಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡಿತು. ನಂತರ ಬ್ಯಾಂಟಿಗ್‍ಗೆ ಇಳಿದ ಯಂಗ್ ಚಾಲೆಂಜರ್ಸ್ ತಂಡವು 5 ವಿಕೆಟ್‍ಗಳನ್ನು ಕಳೆದುಕೊಂಡು ಇನ್ನು 3 ಎಸೆತ ಬಾಕಿ ಇರುವಂತೆ 49 ರನ್‍ಗಳಿಸಿ ಗೆಲುವು ಸಾಧಿಸುವ ಮೂಲಕ 33,000 ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ರನ್ರ್ಸ್ ತಂಡವು ರೂ 22,000 ಹಾಗೂ ಟ್ರೋಫಿಯನ್ನು ಪಡೆದುಕೊಂಡರು. ಐಗೂರು ತಂಡದ ಅಭಿಜಿತ್…

Read More

ಸುಂಟಿಕೊಪ್ಪ ಮೇ 19 NEWS DESK : 7ನೇ ಹೊಸಕೋಟೆ ಸಂತ ಸೆಬಾಸ್ಟಿನ್ ದೇವಾಲಯದ ಧರ್ಮಗುರುಗಳಾಗಿ ಸೇವೆಸಲ್ಲಿಸುತ್ತಿದ್ದ ರೆ.ಫಾ.ಸಬಾಸ್ಟಿನ್ ಪೂವತ್ತಗಲ್ (ಸುನಿಲ್) ಅವರನ್ನು 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಹಾಗೂ ಗ್ರಾಮಸ್ಥರು ಬೋಳ್ಕೊಟ್ಟರು. ಕಳೆದ 11 ವರ್ಷಗಳಿಂದ ಸಂತ ಸೆಬಾಸ್ಟೀನ್ ದೇವಾಲಯದ ಧರ್ಮಗುರುಗಳಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುವ ಮೂಲಕ ಗ್ರಾಮಸ್ಥರೊಂದಿಗೆ ಉತ್ತಮ ಒಡನಾಟ ಹಾಗೂ ಬಾಂಧವ್ಯ ಹೊಂದಿದ್ದ ರೆ.ಫಾ.ಸಬಾಸ್ಟಿನ್ ಪೂವತ್ತಗಲ್ (ಸುನಿಲ್) ಇದೀಗ ವರ್ಗಾವಣೆಗೊಂಡೊದ್ದರಿಂದ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು 7ನೇ ಹೊಸಕೋಟೆ ದೇವಾಲಯದಲ್ಲಿ ಧರ್ಮಗುರುವನ್ನು ಸನ್ಮಾನಿಸಿ ಗೌರವಿಸಿ, ಬೋಳ್ಕೊಟ್ಟರು. ಈ ಸಂದರ್ಭ 7ನೇ ಹೊಸಕೋಟೆ ಗ್ರಾ.ಪಂ ಅಧ್ಯಕ್ಷ ಇ.ಬಿ.ಜೋಸೆಫ್, ಸದಸ್ಯರುಗಳಾದ ಮುಸ್ತಾಫ, ಸಿದ್ಧಿಕ್, ಮಾಜಿ ಅಧ್ಯಕ್ಷ ರಮೇಶ್, ಸೌಮ್ಯಶ್ರೀ, ಚಂದ್ರವತಿ, ಮಾಜಿ ಸದಸ್ಯ ರಮೇಶ್, ಸಂಜಿವಿನಿ ಒಕ್ಕೂಟದ ಅಧ್ಯಕ್ಷೆ ಲತಾ ಬಸವರಾಜ್, ಒಕ್ಕೂಟದ ಎಲ್‍ಸಿಆರ್‍ಪಿ ಉಷಾ, 7ನೇ ಹೊಸಕೋಟೆ ಎಸ್.ಹೆಚ್. ಕನ್ಯಾಸ್ತ್ರೀ ಮಠದ ಮದರ್ ಟೆಸ್ಸಿ ಮ್ಯಾನುವೆಲ್, ಸಿಸ್ಟರ್‍ಗಳಾದ ಸೂಪಿರಿಯರ್ ಲೀಸಾ…

Read More

ಸೋಮವಾರಪೇಟೆ ಮೇ 20 NEWS DESK : ನಗರಾಭೀವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‍ನನ್ನು ಶಾಸಕ ಡಾ.ಮಂತರ್‍ಗೌಡ ಉದ್ಘಾಟಿಸಿದರು. ಸೋಮವಾರಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ ಬಡವರು, ಕಾರ್ಮಿಕರು, ರೈತರು, ಗ್ರಾಮೀಣ ಜನರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಜನತೆ ಇಂದಿರಾ ಕ್ಯಾಂಟೀನ್ ಸೌಲಭ್ಯ ಪಡೆದುಕೊಳ್ಳಬೇಕು. ನನ್ನ ಕ್ಷೇತ್ರ ಹಸಿವು ಮುಕ್ತವಾಗಬೇಕು ಎಂಬ ಬದ್ದತೆಯಿಂದ ಮೂರು ಇಂದಿರಾ ಕಾಂಟೀನ್‍ನನ್ನು ತಂದಿದ್ದೇನೆ. ಬೆಳಿಗ್ಗೆ ಒಬ್ಬರು ಸೇವಿಸುವ ತಿಂಡಿಗೆ ಸರ್ಕಾರ 45 ರೂ.ಗಳನ್ನು ಖರ್ಚು ಮಾಡುತ್ತಿದೆ. ಗ್ರಾಹಕರು ಕೇವಲ 5 ರೂ.ಗಳನ್ನು ನೀಡಿದರೆ ಸಾಕು. ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ 55 ರೂ.ಗಳನ್ನು ನೀಡುತ್ತದೆ ಕೇವಲ 10 ರೂ.ಗಳನ್ನು ನೀಡಿ ಊಟ ಮಾಡಬಹುದು. ಇಂತಹ ಜನಕಲ್ಯಾಣ ಯೋಜನೆಗಳು ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಯಾಂಟೀನ್ ನಡೆಸುವವರು ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಚತೆಯನ್ನು ಕಾಪಾಡದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.…

Read More

ನಾಪೋಕ್ಲು ಮೇ 20 NEWS DESK : ಮಡಿಕೇರಿಯಲ್ಲಿ ನಡೆಯುವ ಸಿಂಧೂರ ವಿಜಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಂಪರ್ಕ ಸಭೆ ಸೋಮವಾರ ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ಜರುಗಿತು. ನಾಪೋಕ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಪೂರ್ವಭಾವಿ ಸಂಪರ್ಕ ಸಭಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಭಾಗವಹಿಸಿದ್ದು ಈ ಸಂದರ್ಭ ಸಿಂಧೂರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಒಗ್ಗೂಡಿಸಿ ಕಾರ್ಯಕ್ರಮದ ಯಶಸ್ವಿಗೆ ಕಾರ್ಯತಂತ್ರದ ಬಗ್ಗೆ ಚರ್ಚಿಸಿ ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮದಲ್ಲಿ ಶೀವಚಾಳಿಯಂಡ ಅಂಬಿ ಕಾರ್ಯಪ್ಪ, ಜಗದೀಶ್, ಕಂಗಂಡ ಜಾಲಿ ಪೂವಪ್ಪ, ಕನ್ನಂಬೀರ ಸುಧಿ ತಿಮ್ಮಯ್ಯ, ಪಾಡಿಯಮ್ಮಂಡ ಮನು ಮಹೇಶ್, ಚಂದ್ರ ಉಡೋತ್, ಪ್ರಕಾಶ್, ಪಟ್ರಪಂಡ ನಿರನ್, ಚೋಕಿರ ಸಜಿತ್, ಅರೆಯಡ ನಂದ, ರವಿ ಮಕ್ಕಿ ,ಉದಯ ಶಂಕರ್ ಇನ್ನಿತರರು ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಮೇ 20 NEWS DESK : ಪ್ರಸಕ್ತ (2025-26) ಸಾಲಿಗೆ ಮಡಿಕೇರಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ,3ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆ ರೂ.1 ಲಕ್ಷ ಆಗಿರುತ್ತದೆ. ಅರ್ಜಿಯನ್ನು https://shp.karnataka.gov.in/bcwd ನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 16 ಕೊನೆಯ ದಿನವಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/…

Read More

ಮಡಿಕೇರಿ ಮೇ 19 NEWS DESK : 2024-25ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಪದವಿ, ಕೃಷಿ, ಪಶು ಸಂಗೋಪನೆ ಹಾಗೂ ವೈದ್ಯಕೀಯ ವಿಭಾಗದ ಪರೀಕ್ಷೆಯಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಲ್ಲಿ ಪ್ರೋತ್ಸಾಹ ಧನಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಪಡೆಯಲು ಇಲಾಖೆಯ ವೆಬ್‍ಸೈಟ್ ವಿಳಾಸ https://swdservices.karnataka.gov.in/PrizeMoneyClientApp/ ರಲ್ಲಿ ಅರ್ಜಿ ಸಲ್ಲಿಸಿ ಆನ್‍ಲೈನ್ ಸ್ವೀಕೃತಿ ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅಂಕಪಟ್ಟಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿರತಕ್ಕದ್ದು) ಈ ದಾಖಲೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ https://swdservices.karnataka.gov.in/PrizeMoneyClientApp/ವೆಬ್‍ಸೈಟ್  ಹಾಗೂ ಸಹಾಯಕ ನಿರ್ದೇಶಕರು, (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ,…

Read More

ಮಡಿಕೇರಿ ಮೇ 19 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ಸರ್ಕಾರವು ಎರಡು ವರ್ಷ ಪೂರೈಸಿ, ನುಡಿದಂತೆ ನಡೆಯುತ್ತಿದ್ದು, ಸರ್ವ ಜನರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ ಹಿತ ಕಾಪಾಡುವಲ್ಲಿ ಸರ್ಕಾರ ಯಶಸ್ಸಿನತ್ತ ಸಾಗಿದೆ. 2023 ರ ಮೇ 20 ಕ್ಕೆ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷ ಪೂರ್ಣಗೊಂಡು, ಹಲವು ‘ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲರ ಮನಃ ಗೆದ್ದಿದೆ. ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಪ್ರಮುಖವಾಗಿದೆ. ಜನವರಿ ತಿಂಗಳಿಗೂ ಮುಂಚೆ ಪಿಡಿಎಸ್‍ನ ಎನ್‍ಎಫ್‍ಎಸ್‍ಎ ಯೋಜನೆಯಡಿ (ಪಿಎಚ್‍ಎಚ್) (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತೀ ಯೂನಿಟ್ ಸದಸ್ಯರಿಗೆ 5 ಕೆ.ಜಿ. ಅಕ್ಕಿಯಂತೆ ಉಚಿತವಾಗಿ ವಿತರಿಸಲಾಗುತ್ತಿತ್ತು. ಹಾಗೂ ಆದ್ಯತಾ (ಎಎವೈ) ಪಡಿತರ ಚೀಟಿದಾರರಿಗೆ ಪ್ರತೀ ಪಡಿತರ ಚೀಟಿಗೆ 35 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿತ್ತು. ಜಿಲ್ಲೆಯಲ್ಲಿ 1,10,473 ಪಡಿತರ ಚೀಟಿದಾರರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಸರ್ಕಾರದ ಆದೇಶದಂತೆ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ…

Read More

ಮಡಿಕೇರಿ ಮೇ 19 NEWS DESK : ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭವು ಮೇ, 21 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ನಗರಾಭಿವೃದ್ಧಿ ಸಚಿವರು ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್, ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ…

Read More

ಮಡಿಕೇರಿ ಮೇ 19 NEWS DESK : ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳ ಅರ್ಜಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಅನುಮೋದನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳಿಗೆ ಅನುಮೋದನೆ ನೀಡಲಾಯಿತು. ಈ ಕುರಿತು ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಪರಿಶಿಷ್ಟ ಪಂಗಡದ 8 ವೈಯಕ್ತಿಕ ಹಾಗೂ 8 ಸಮುದಾಯ ಸಂಪನ್ಮೂಲ ಅರ್ಜಿಗಳಿಗೆ ಉಪ ವಿಭಾಗ ಮಟ್ಟದಲ್ಲಿ ಅನುಮೋದನೆ ದೊರೆತಿದ್ದು, ಜಿಲ್ಲಾ ಮಟ್ಟದಲ್ಲಿ ಅನುಮೋದಿಸಬೇಕಿದೆ ಎಂದು ಕೋರಿದರು. ಪೊನ್ನಂಪೇಟೆ ತಾಲ್ಲೂಕಿನ ಪರಿಶಿಷ್ಟ ಪಂಗಡದ ಕಾಡುಕುರುಬ ಸಮಾಜದ ತಿತಿಮತಿಯ ದೊಡ್ಡರೇಷ್ಮೆ ಹಡ್ಲುವಿನ ಸ್ವಾಮಿ ಬಿ.ಕೆ ಬಿನ್ ಕಾಳ, ನಾಲ್ಕೇರಿ ಗ್ರಾ.ಪಂ.ನ ಗೋಳಿಗದ್ದೆಯ ಪರಿಶಿಷ್ಟ ಪಂಗಡದ ಜೇನುಕುರುಬ ಜೆ.ಬೋಜಿ, ಜೆ.ಆರ್.ಸಣ್ಣಪ್ಪ ಬಿನ್ ಪೌತಿ…

Read More

ಮಡಿಕೇರಿ ಮೇ 19 NEWS DESK : ಕೊಡಗು ವಿಶ್ವವಿದ್ಯಾಲಯ ಸಂಯೋಜಿತ ಕಾಲೇಜುಗಳಲ್ಲಿ 2025-26ನೇ ಸಾಲಿನಲ್ಲಿ ವಿವಿಧ ಪದವಿ ಕಾರ್ಯಕ್ರಮಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಜಿಲ್ಲೆಯ ಮತ್ತು ನೆರೆಯ ಜಿಲ್ಲೆ, ರಾಜ್ಯಗಳ ಆಸಕ್ತ ವಿದ್ಯಾರ್ಥಿಗಳು ಯಾವುದೇ ಗೊಂದಲ ಹಾಗೂ ಆತಂಕವಿಲ್ಲದೆ ಕೊಡಗು ವಿಶ್ವವಿದ್ಯಾಲಯದ ಪದವಿ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಬಹುದೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳು 4ನೇ ಸೆಮಿಸ್ಟರ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದು, ವಿಶ್ವವಿದ್ಯಾಲಯದ ಅಸ್ತಿತ್ವ ಹಾಗೂ ಮುಂದುವರೆಕೆಯಲ್ಲಿ ಯಾವುದೇ ಗೊಂದಲವಿಲ್ಲ. ತನ್ನ ಸ್ವಂತ ಸಂಪನ್ಮೂಲದಲ್ಲಿ ವಿಶ್ವವಿದ್ಯಾಲಯದ ಆಡಳಿತವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಯಾವುದೇ ಪ್ರಸ್ತಾವನೆ ರಾಜ್ಯ ಸರಕಾರದ ಮುಂದೆ ಇಲ್ಲ ಎಂಬುದನ್ನು ಹಲವು ಬಾರಿ ಸಂಬಂಧಿಸಿದ ಸರಕಾರ ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು. ಕೊಡಗು ಜಿಲ್ಲೆ ಚಾರಿತ್ರಿಕವಾಗಿ, ಸಾಂಸ್ಕೃತಿಕವಾಗಿ, ಭೌಗೋಳಿಕವಾಗಿ ವಿಶಿಷ್ಟ ಹಿನ್ನೆಲೆಯುಳ್ಳ ಜಿಲ್ಲೆಯಾಗಿದ್ದು, ಅತೀ ಹೆಚ್ಚು ಮಳೆ ಬೀಳುವ ಗುಡ್ಡಗಾಡು ಪ್ರದೇಶವಾಗಿದೆ.…

Read More