ಲೇಖಕ: admin

ಮಡಿಕೇರಿ ಏ.18 NEWS DESK : ಗೋಣಿಕೊಪ್ಪ ಮತ್ತು ಪೊನ್ನಂಪೇಟೆ ಠಾಣಾ ವ್ಯಾಪ್ತಿಯ ಗ್ರಾಮ ಗಸ್ತು ಸದಸ್ಯರ ಸಭೆ ನಡೆಯಿತು. ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾದಕ ದ್ರವ್ಯ, ಸಂಚಾರ ಸುರಕ್ಷತೆ, ಗ್ರಾಮ ಸುರಕ್ಷತೆ, ಅಪರಾಧ ತಡೆಗಟ್ಟುವಿಕೆಯಲ್ಲಿ ಗ್ರಾಮಸ್ಥರ ಪಾತ್ರ, ಮಹಿಳೆಯರ ಸುರಕ್ಷತೆ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿದರು.   

Read More

ಮಡಿಕೇರಿ ಏ.18 NEWS DESK : ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಶಾರ್ಪ್‍ಶೂಟರ್‍ಗಳಿಗೆ ರೋಮಾಂಚಕಾರಿ ಓಪನ್ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಏ.20 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮೂರು ವಿಭಾಗಗಳಲ್ಲಿ ಬೊಡಿ ನಮ್ಮೆ ಸ್ಪರ್ಧೆ ನಡೆಯಲಿದೆ. ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ.22 (50ಮೀ), 12″ ಬೋರ್ ತೆಂಗಿನಕಾಯಿ ಶೂಟಿಂಗ್ (30ಮೀ) ಹಾಗೂ ಏರ್ ರೈಫಲ್ ಎಗ್ ಶೂಟಿಂಗ್ (15ಮೀ) ವಿಭಾಗದಲ್ಲಿ ಮುಕ್ತ ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 94487 96947, 94488 95969 ಸಂಪರ್ಕಿಸಬಹುದಾಗಿದೆ ಎಂದು ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ.

Read More

ನಾಪೋಕ್ಲು ಏ.18 NEWS DESK : ಬಲ್ಲಮಾವಟಿ ಪಂಚಾಯತಿಯ ಪೇರೂರು ಗ್ರಾಮದ ಪೇರೂರಿಯನ್ಸ್ ಕ್ಲಬ್ ವತಿಯಿಂದ 7ನೇ ವರ್ಷದ ಉಚಿತ ಬೇಸಿಗೆ ಹಾಕಿ ಶಿಬಿರ ಉದ್ಘಾಟನೆಗೊಂಡಿತು. ಪೇರೂರು ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ಉಚಿತ ಬೇಸಿಗೆ ಹಾಕಿ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಬಲ್ಲಮಾವಟಿ ಗ್ರಾಮ ಪಂಚಾಯತ್ ಸದಸ್ಯರಾದ ಮಚ್ಚುರ ಎಂ.ರವೀಂದ್ರ, ಆರೋಗ್ಯಯುತ ಸಮಾಜಕ್ಕಾಗಿ ಕ್ರೀಡೆ ಮುಖ್ಯ, ಕೊಡಗು ಪುಟ್ಟ ಜಿಲ್ಲೆಯಾದರೂ ಅನೇಕ ಕ್ರೀಡಾಪಟುಗಳನ್ನು ರಾಷ್ಟ್ರಕ್ಕೆ ನೀಡಿದೆ ಎಂದರು. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಯುವ ಪೀಳಿಗೆ ಮಾರ್ಗದರ್ಶನ ನೀಡಿ ಸದೃಢ ಸಮಾಜ ನಿರ್ಮಾಣಕ್ಕೆ ಶ್ರಮಿಸುವಂತಾಗಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಶಿಬಿರಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಖ್ಯಾತ ತರಬೇತುದಾರರಾದ ಮಣವಟ್ಟಿರ ಮಧು ಅಯ್ಯಪ್ಪ ಮಾತನಾಡಿ, ಕ್ರೀಡೆಯಲ್ಲಿ ಶಿಸ್ತಿನಿಂದ ಮುನ್ನಡೆದರೆ ಉತ್ತಮ ಆಟಗಾರನಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು. ಚೀಯಕಪೂವಂಡ ಮಿಥುನ್ ಚಂಗಪ್ಪ ಮಾತನಾಡಿ, ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಮೊಬೈಲ್ ಮತ್ತು ಟಿವಿಯ…

Read More

ನಾಪೋಕ್ಲು ಏ.18 NEWS DESK : ಹಿಂದೂ ಮಲಯಾಳಿ ಸಂಘದ ವತಿಯಿಂದ ವಿಷು ಕಣಿ ಹಾಗೂ ವಿಷು ಕೈನೀಟಂ ಸಂಭ್ರಮದಿಂದ ನಡೆಯಿತು. ಸಂಘದ ಕಛೇರಿಯಲ್ಲಿ ವರ್ಷಂಪ್ರತಿಯಂತೆ ಈ ವರ್ಷವೂ ವಿಷು ಹಬ್ಬದ ಪ್ರಯುಕ್ತ ಆಯೋಜಿಸಿದ ವಿಷು ಹಬ್ಬಕ್ಕೆ ಮುಖ್ಯವಾಗಿ ಬೇಕಾದಂತಹ (ಕೊನ್ನ ಪೂ) ಹೊನ್ನೇ ಹೂ ವನ್ನು ಜನಾಂಗಬಾಂಧವರಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷರು ಅನಿಲ್ ಮಹಿಳಾ ಅಧ್ಯಕ್ಷರಾದ ಸುಮಿತ್ರಾ, ಕಾರ್ಯದರ್ಶಿ ರಾಮು, ಉಪಾಧ್ಯಕ್ಷ ಅಭಿಲಾಷ್, ಖಜಂಚಿ ಮಣಿ, ಸಂಘಟನಾ ಕಾರ್ಯದರ್ಶಿ ಸತೀಶ್, ಚೇತನ್, ಮುಖ್ಯ ಅತಿಥಿಗಳಾಗಿ ಮುತ್ತಪ್ಪ ದೇವಾಲಯದ ಅಧ್ಯಕ್ಷರು ಚಂದ್ರ, ಮತ್ತು ವಿನಿಲ್, ಮನ್ಮದನ್ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಮಲಯಾಳಿ ಬಾಂಧವರು ಪಾಲ್ಗೊಂಡಿದ್ದರು.

Read More

ನಾಪೋಕ್ಲು ಏ.18 NEWS DESK : ಕೈಕಾಡು ಗ್ರಾಮದ ಮಕ್ಕೋಟು ಮಹಾಲಕ್ಷ್ಮಿ ದೇವರ ವಾರ್ಷಿಕ ಉತ್ಸವವು ಶ್ರದ್ಧಭಕ್ತಿಯಿಂದ ನಡೆಯಿತು. ಎರಡು ವರ್ಷಕೊಮ್ಮೆ ನಡೆಯುವ ಹಬ್ಬದಲ್ಲಿ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ರಾತ್ರಿ ಹದಿನೆಂಟು ತರಹದ ದೇವರ ಕುಣಿತವನ್ನು ದೇವರ ಹೆಸರನ್ನು ಹೇಳುತ್ತಾ ಕೈಕಾಡು ಗ್ರಾಮದ, ಮಕ್ಕೋಟು ಕೇರಿಯ ವಿವಿಧ ಕುಟುಂಬದ 18 ವರ್ಷ ಮೇಲ್ಪಟ್ಟ ಸದಸ್ಯರು ಕುಣಿದರು. ಬಳಿಕ ಆ ನೃತ್ಯಗಳನ್ನು ಮಂಗಳವಾರ ದೇವಾಲಯದಲ್ಲಿ ಪ್ರದರ್ಶಿಸಲಾಯಿತು. ಮಂಗಳವಾರ ಬೆಳಿಗ್ಗೆ ದೇವತಕ್ಕರಾದ ಚೊಟ್ಟೆಯಂಡ, ಭಂಡಾರ ತಕ್ಕರ ನೆರೆಯಂಡಮ್ಮಂಡ ಕುಟುಂಬದಿಂದ ಹಾಗೂ ಪಾಡೆಯಂಡ, ಬಟ್ಟಿಯಂಡ, ಕದ್ದಣಿಯಂಡ, ನಾಯಕಂಡ ಆರು ಕುಟುಂಬದವರು ಎತ್ತುಪೊರಾಟದೊಂದಿಗೆ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಪ್ರವೇಶವಾಗಿ ಬಳಿಕ ಸಾಂಪ್ರದಾಯಕವಾಗಿ ದೇವರ ವಿವಿಧ ಬಗೆಯ ಕುಣಿತಗಳನ್ನು ಒಂದೊಂದಾಗಿ ಕುಣಿಯುತ್ತಾ ಸಂಪನ್ನಗೊಂಡಿತು. ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಪ್ರತೀ ಎರಡು ವರ್ಷಗಳಿಗೊಮ್ಮೆ ನಡೆಸಲ್ಪಡುವ ಹಬ್ಬ ಇದಾಗಿದೆ. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು, ತಕ್ಕ ಮುಖ್ಯಸ್ಥರು ಸೇರಿದಂತೆ ಊರ ಮತ್ತು ಪರ ಊರಿನ ಭಕ್ತಾದಿಗಳು ಅಧಿಕ…

Read More

ನಾಪೋಕ್ಲು ಏ.18 NEWS DESK : ಕೊಳಕೇರಿ ಗ್ರಾಮದ ಮೂಟೇರಿ ಶ್ರೀ ಉಮಾಮಹೇಶ್ವರಿ ದೇವರ ವಾರ್ಷಿಕ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ಉತ್ಸವದ ಪ್ರಯುಕ್ತ  ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರಪೂಜೆ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿತರಣೆ ನೆರವೇರಿತು. ಉತ್ಸವದ ಅಂಗವಾಗಿ  ಪಟ್ಟಣಿ ಹಬ್ಬದಂದು ಭಕ್ತರು ದೇವಾಲಯದಲ್ಲಿ ದೇವರ ಪ್ರದರ್ಶನ ನೃತ್ಯ ಬಲಿಯನ್ನು ವೀಕ್ಷಿಸಿ ಕಣ್ತುಂಬಿಕೊಂಡು ತಮ್ಮ ಇಷ್ಟಾರ್ಥ ಸೇವೆ ಹರಕೆ ಕಾಣಿಕೆ ಒಪ್ಪಿಸಿ ಪ್ರಸಾದವನ್ನು ಸ್ವೀಕರಿಸಿದರು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ, ತಕ್ಕ ಮುಖ್ಯಸ್ಥರು ಹಾಗೂ ವಿವಿಧ ಗ್ರಾಮದ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಏ.18 NEWS DESK  : ದುಬೈ ಒಕ್ಕಲಿಗರ ಸಂಘದ ವತಿಯಿಂದ ದುಬೈ ನಲ್ಲಿ ಆಯೋಜಿಸಲಾಗಿರುವ “ಕುವೆಂಪು ವಿಶ್ವ ಒಕ್ಕಲಿಗರ ಉತ್ಸವ ವೈಭವ ” ಸಮ್ಮೇಳನದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ದಿವ್ಯಾ ಮಂತರ್ ಅವರನ್ನು ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಯೋಜಕರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

Read More

ಮಡಿಕೇರಿ ಏ.18 NEWS DESK : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಹಾಕಿ ಪಂದ್ಯಾವಳಿಯ 25 ವಷ೯ಗಳ ಇತಿಹಾಸವನ್ನು ದಾಖಲಿಸುವ ಸ್ಟಿಕ್ ವಕ್೯ ಮ್ಯಾಜಿಕ್ – ಸಾಗಾ ಆಫ್ ಕೊಡವ ಫ್ಯಾಮಿಲಿ ಹಾಕಿ ಹೆಸರಿನ ಇಂಗ್ಲೀಷ್ ಕೃತಿಯು ಏ.22 ರಂದು ಲೋಕಾಪ೯ಣೆಯಾಗಲಿದೆ. ಹಿರಿಯ ಪತ್ರಕತ೯, ಲೇಖಕ ಕೊಟ್ಟಿಯಂಡ ಜೀವನ್ ಚಿಣ್ಣಪ್ಪ ರಚಿಸಿರುವ ಈ ಪುಸ್ತಕವನ್ನು ಮಡಿಕೇರಿಯ ವಾತಾ೯ ಕಮ್ಯೂನಿಕೇಷನ್ಸ್ ಪ್ರಕಾಶನದಲ್ಲಿ ಹೊರತರಲಾಗುತ್ತಿದೆ. 25 ವಷ೯ಗಳ ಕೊಡವ ಹಾಕಿ ಪಂದ್ಯಾವಳಿಯ ಇತಿಹಾಸದ ದಾಖಲೆಯ ಲೇಖನಗಳು, ಛಾಯಾಚಿತ್ರಗಳನ್ನು ಹೊಂದಿರುವ ಪುಸ್ತಕದಲ್ಲಿ ಕೊಡಗಿನ ಹಾಕಿ ಇತಿಹಾಸದ ಮೆಲಕು ಕೂಡ ಇದೆ.  ಏ.22 ರಂದು ಮಂಗಳವಾರ ಸಂಜೆ 6 ಗಂಟೆಗೆ ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ಸ್ಟಿಕ್ ವಕ್೯ ಮ್ಯಾಜಿಕ್ – ಸಾಗಾ ಆಫ್ ಕೊಡವ ಫ್ಯಾಮಿಲಿ ಹಾಕಿ ಕೖತಿಯನ್ನು ಮಾಜಿ ಕಾನೂನು ಸಚಿವ ಮೇರಿಯಂಡ ಸಿ. ನಾಣಯ್ಯ ಲೋಕಾಪ೯ಣೆ ಮಾಡಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ .ಎ.ಎಸ್. ಪೊನ್ನಣ್ಣ, ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ, ಕೊಡವ…

Read More

ಮಡಿಕೇರಿ ಏ.18 NEWS DESK : ಸಿದ್ದಾಪುರ- ಪಾಲಿಬೆಟ್ಟ ರಸ್ತೆಯ ತೂಪನಕೊಲ್ಲಿ ಎಂಬಲ್ಲಿ ಮುಂಜಾನೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿತು. ನಡು ರಸ್ತೆಯಲ್ಲೇ ವಾಯು ವಿಹಾರ ಮಾಡುತ್ತಿದ್ದ 10ಕ್ಕೂ ಹೆಚ್ಚು ಕಾಡಾನೆಗಳನ್ನು ಕಂಡು ವಾಹನ ಚಾಲಕರು ಮಾರ್ಗ ಬದಲಾಯಿಸಿದರು. ಅಕ್ಕಪಕ್ಕದ ತೋಟ ಅಥವಾ ಕಾಡಿಗೆ ತೆರಳದ ಗಜಪಡೆ ರಸ್ತೆಯ ಮೂಲಕವೇ ಸಂಚರಿಸಿದವು. ಈ ಮಾರ್ಗವಾಗಿ ಬಂದ ವಾಹನ ಚಾಲಕರು ಮುಂದೆ ಸಾಗದೆ ಆತಂಕದಿಂದ ಬೇರೆ ರಸ್ತೆಯ ಮೂಲಕ ತೆರಳಿದರು. ತೂಪನಕೊಲ್ಲಿ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಸುತ್ತಮುತ್ತಲಿನ ತೋಟಗಳಲ್ಲಿದ್ದ 2-3 ವರ್ಷದ ಅಡಿಕೆ ಗಿಡಗಳನ್ನು ಸಂಪೂರ್ಣ ನಾಶ ಮಾಡಿದೆ. ಯಾವುದೇ ಕೃಷಿ ಫಸಲು ಕೈಗೆ ಸಿಗುತ್ತಿಲ್ಲ, ಬದಲಿಗೆ ಕಾಡಾನೆಗಳ ಪಾಲಾಗುತ್ತಿದೆ. ಕಾರ್ಮಿಕರು ತೋಟದಲ್ಲಿ ಕೆಲಸ ಮಾಡಲು ಹಿಂಜರಿಯುತ್ತಿದ್ದಾರೆ ಎಂದು ಸ್ಥಳೀಯ ಕೃಷಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ತಕ್ಷಣ ಸೂಕ್ತ ಕ್ರಮ ಕೈಗೊಂಡು ಕಾಡಾನೆಗಳನ್ನು ಕಾಡಿಗಟ್ಟಬೇಕು ಮತ್ತು ಬೆಳೆನಷ್ಟ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಏ.18 NEWS DESK : ಕೊಡಗು ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಸಭೆ ನಡೆಯಿತು. ಸಭೆಯಲ್ಲಿ  ವಿವಿಧ ವಿಷಯಗಳ ಕುರಿತು ಚರ್ಚಿಸಿ, ಫೆಡರೇಶನ್ ಆಫ್ ವೈನ್ ಮರ್ಚೆಂಟ್ ಅಸೋಸಿಯೇಷನ್ ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳು :: ನೂತನ ಪದಾಧಿಕಾರಿಗಳಾಗಿ  ನವೀನ್ ಉತ್ತಯ್ಯ, ಬಿದ್ದಪ್ಪ, ಪ್ರಸಾದ್, ಗಣೇಶ್, ಉಣ್ಣಿಕೃಷ್ಣ. ಗೋಕುಲ್ ಉತ್ತಯ್ಯ, ಬಾಬು ನಾಯ್ದು, ಬಿ.ಎ.ಮಹಾಬಲ ಆಯ್ಕೆಯಾದರು. ಫೆಡರೇಶನ್ ಆಫ್ ವೈನ್ ಮರ್ಚೆಂಟ್ ಅಸೋಸಿಯೇಶನ್ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪೈಕೇರ ಮನೋಹರ, ಕಾರ್ಯದರ್ಶಿ  ವೇಣು, ಜಿಲ್ಲಾಧ್ಯಕ್ಷ ಗುಮ್ಮಟ್ಟೀರ ಕೀಲನ್ ಗಣಪತಿ, ಪ್ರಧೀಪ್ ಹಿರಿಯರಾದ ಮಾಚಯ್ಯ, ರಮೇಶ್ ಹಾಗೂ ಎಲ್ಲಾ ಸನ್ನದಾರ  ಮಿತ್ರರರು ಹಾಜರಾಗಿದ್ದರು.

Read More