ಲೇಖಕ: admin

ಮಡಿಕೇರಿ ಮೇ 19 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಮೇ 25 ರಂದು ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.  ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಉಪಾಧ್ಯಕ್ಷ ಶಂಕರ ನಾರಾಯಣ, ಕೊಡಗು ಜಿಲ್ಲಾ ಕಿವುಡರ ಸಂಘದ ವತಿಯಿಂದ ಕೊಡಗು ಕಿವುಡ ಜಾಗೃತಿ ದಿನವನ್ನು ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಹಣಕಾಸಿನ ನೆರವು ಅಗತ್ಯ ಇದೆ. ಅಂದಾಜು ವೆಚ್ಚ ರೂ.50,000 ಖರ್ಚಗುವ ಸಾಧ್ಯತೆ ಇದೆ ಆದ್ದರಿಂದ ಪ್ರಾಯೋಜಕತ್ವ ಅಥವಾ ದೇಣಿಗೆಯನ್ನು ಪಡೆಯಲು ನಿರ್ಧರಿಸಲಾಗಿದ್ದು, ಆಸಕ್ತರು “KODAGU DISTRICT DEAF ASSOCIATION” -Union Bank of India, SB ಖಾತೆ ಸಂಖ್ಯೆ 520101254608758, IFSC ಕೋಡ್ UBIN 0900087 ಸಹಕರಿಸುವಂತೆ ಮನವಿ ಮಾಡಿದರು.  ಸಾರ್ವಜನಿಕರ ಕೊಡುಗೆಯು ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಮಾತ್ರವಲ್ಲದೆ ಕೊಡಗಿನಲ್ಲಿ ಕಿವುಡ ಸಮುದಾಯ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿಯೂ ನಮಗೆ ಸಹಾಯ ಮಾಡುತ್ತದೆ. ಸಂಘದ ಉದ್ದೇಶವನ್ನು ಬೆಂಬಲಿಸುವಂತೆ ಶಂಕರ ನಾರಾಯಣ ಕೋರಿದ್ದಾರೆ.

Read More

ನಾಪೋಕ್ಲು ಮೇ 19 NEWS DESK : ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸವನ್ನು ನೆರವೇರಿಸಲಾಯಿತು. ಉಡುಪಿಯ ಸದಾಶಿವ ಉಪಾಧ್ಯಾಯ, ಕಾರ್ಕಳದ ರೋಹಿತ ಹಾಗೂ ಅರ್ಚಕ ಸುಧೀರ್ ಕುಮಾರ ಪೂಜಾ ವಿಧಿ ವಿಧಾನಗಳೊಂದಿಗೆ ಶಿಲನ್ಯಾಸವನ್ನು ನೆರವೇರಿಸಿದರು. ವಾಸ್ತು ವಿನ್ಯಾಸಕ್ಕೆ ಅನುಗುಣವಾಗಿ ಜೀರ್ಣೋದ್ಧಾರ ಮಾಡಿ ದೇವರ ಅನುಗ್ರಹ ಪಡೆಯುವ ಉದ್ದೇಶದಿಂದ ಕಕ್ಕುಂದ ಕಾಡಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯ ತತ್ಪರವಾಗಿದೆ. ತೀರ್ಥರೂಪಿಣಿಯಾದ ಕಾವೇರಿ ನದಿಯು ಹರಿಯುವ ನಾಪೋಕ್ಲು ಸಮೀಪದ ಕಕ್ಕುಂದಕಾಡು ಎಂಬಲ್ಲಿ 25 ವರ್ಷಗಳ ಹಿಂದೆ ಸತ್ಯನಾರಾಯಣ ಪೂಜೆಯೊಂದಿಗೆ ಆರಂಭವಾದ ಈ ಕ್ಷೇತ್ರ ನಂತರ ಸಂಕೀರ್ಣವಾದ ಸ್ಥಳದಲ್ಲಿ ವೆಂಕಟೇಶ್ವರ ದೇವರು, ಗಣಪತಿ ಹಾಗೂ ನವಗ್ರಹ ದೇವತೆಗಳ ಆರಾಧನೆ ನಡೆಯುತ್ತಿದೆ. ಈ ದೇವಾಲಯದ ನಿರ್ಮಾಣ ಕಾಲದಲ್ಲಿ ತತ್ಕಾಲಕ್ಕೆ ಬೇಕಾದ ಕನಿಷ್ಠ ಅವಶ್ಯಕತೆ ಯೋಜನೆಯಲ್ಲಿ ಗರ್ಭಗುಡಿ, ತೀರ್ಥ ಮಂಟಪ, ಗಣಪತಿ ದೇವರಗುಡಿ ಇತ್ಯಾದಿಗಳನ್ನು ನಿರ್ವಹಿಸಿದ್ದು ಇದು ದೇವಾಲಯಗಳ ವಾಸ್ತು ವಿನ್ಯಾಸಕ್ಕೆ ಹೊರತಾಗಿದೆ. ಅಂತೆಯೇ ವಾಸ್ತು ತಜ್ಞ ಉಡುಪಿ…

Read More

*ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ – 2025*  *ನೇರವಾಗಿ ಆನ್ ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಲು ಲಿಂಕ್ ಈ ಕೆಳಗಿನಂತಿದೆ :* https://schedulecastesurvey.karnataka.gov.in/selfdeclaration *ದಯವಿಟ್ಟು ಮುದ್ರಿಸಿ ಹಂಚಿಕೆ ಮಾಡಿ ಮತ್ತು ಎಲ್ಲೆಡೆ ಪ್ರಚುರಪಡಿಸಿ.*

Read More

ಮಡಿಕೇರಿ ಮೇ 19 NEWS DESK : ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದಕ್ಕಾಗಿ ಮಿತಿ ಮೀರಿ ಸಾಲ ಮಾಡಿ ವಿವಿಧ ಕ್ಷೇತ್ರಗಳನ್ನು ದಿವಾಳಿ ಮಾಡಿರುವುದೇ ರಾಜ್ಯ ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆಯಾಗಿದೆ ಎಂದು ಮೈಸೂರು- ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2013 ರಿಂದ 2018 ರವರೆಗೆ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು ಅತಿಹೆಚ್ಚು ಸಾಲ ಮಾಡಿದ್ದರು. ಇದೀಗ 2023 ರಲ್ಲಿ ಅಧಿಕಾರಕ್ಕೆ ಬಂದಿರುವ ಅವರು ಈ ಹಿಂದಿನ ಸಾಲವನ್ನು ಮೀರಿ ಸಾಲವನ್ನು ಮಾಡಿದ್ದು, ರಾಜ್ಯದ ಪ್ರತಿ ವ್ಯಕ್ತಿಯ ಮೇಲೆ ತಲಾ 12 ಸಾವಿರ ರೂ. ಸಾಲದ ಹೊರೆ ಇದೆ ಎಂದು ಟೀಕಿಸಿದರು. ಮೇ 20 ರಂದು ರಾಜ್ಯ ಸರ್ಕಾರಕ್ಕೆ ಎರಡು ವರ್ಷಗಳು ತುಂಬಿತು ಎನ್ನುವ ಕಾರಣಕ್ಕಾಗಿ ಕಾಂಗ್ರೆಸ್ ಸಾಧನಾ ಸಮಾವೇಶ ಮಾಡಲು ಮುಂದಾಗಿದೆ. ಯಾವ ಸಾಧನೆಯನ್ನು ಜನರ ಮುಂದಿಟ್ಟು ಸಮಾವೇಶ ನಡೆಸುತ್ತೀರಿ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ ಅನ್ನಭಾಗ್ಯದ ಅಕ್ಕಿಯನ್ನು ಕೇಂದ್ರದಿಂದ…

Read More

ಮಡಿಕೇರಿ ಮೇ 19 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ 2024-25ನೇ ಸಾಲಿನ ವಾರ್ಷಿಕೋತ್ಸವವು ಮೇ 20 ರಂದು ನಡೆಯಲಿದೆ. ಅಂದು ಪೂರ್ವಾಹ್ನ 10.30 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಅಲೂರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದು, ಕೊಡಗು ವಿಶ್ವವಿದ್ಯಾಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ.ಎಂ.ಸುರೇಶ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಪೋಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಜಯಂತಿ ರೈ ಘನ ಉಪಸ್ಥಿತರಿರಲಿದ್ದಾರೆ.

Read More

ಮಡಿಕೇರಿ ಮೇ 19 NEWS DESK : ಹುದಿಕೇರಿಯಲ್ಲಿ ನಡೆಯುತ್ತಿರುವ ಕೊಡವ ಕೌಟುಂಬಿಕ ಕ್ರಿಕೆಟ್ ನಮ್ಮೆಯ ಫೈನಲ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚೆಕ್ಕೇರ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ತಮ್ಮ ಅದ್ಭುತ ಬ್ಯಾಟಿಂಗ್ ಶೈಲಿ ಹಾಗೂ ಆಕರ್ಷಕ ಬೌಲಿಂಗ್ ಮೂಲಕ ಶಾಸಕರು ನೆರೆದ ಪ್ರೇಕ್ಷಕರ ಗಮನ ಸೆಳೆದರು. ಪುರುಷರ ವಿಭಾಗದಲ್ಲಿ ಅಚ್ಚಪಂಡ ಹಾಗೂ ನೆರವಂಡ, ಮಹಿಳಾ ವಿಭಾಗದಲ್ಲಿ ಓಡಿಯಂಡ ಮತ್ತು ಅರಮಣ ಮಾಡ ತಂಡಗಳ ನಡುವೆ ಹಣಾಹಣಿ ನಡೆಯಲಿದೆ.

Read More

ವಿರಾಜಪೇಟೆ ಮೇ 19 NEWS DESK : ವಿರಾಜಪೇಟೆಯ ಪೆರುಂಬಾಡಿ ಬಳಿ ಉನ್ನತೀಕರಣಗೊಳ್ಳುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿ ಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿದರು. ಕಾಮಗಾರಿಯ ಕುರಿತು ವಿವರಣೆ ನೀಡಿದ ಶಾಸಕರು ತಾನು ಹಾಗೂ ಇತರ ಜನಪ್ರತಿನಿಧಿಗಳು ಚರ್ಚೆ ಮಾಡಿ ಈ ಕಾಮಗಾರಿ ತರುವಲ್ಲಿ ಯಶಸ್ವಿಯಾಗಿದ್ದು, ಸುಮಾರು 34 ಸಾವಿರಕ್ಕೂ ಅಧಿಕ ಮೆಟ್ರಿಕ್ ಟನ್ ಘನತ್ಯಾಜ್ಯವನ್ನು ವಿಲೇವಾರಿ ಮಾಡುವಲ್ಲಿ ಈ ಘಟಕ ಸಹಕಾರಿಯಾಗಲಿದೆ. ಮಾತ್ರವಲ್ಲ ದೀರ್ಘಕಾಲದ ಘನತಾಜ್ಯ ಸಮಸ್ಯೆಗೆ ಇದು ಪರಿಹಾರ ಒದಗಿಸಲಿದೆ ಎಂದು ಹೇಳಿದರು. ಈ ಘಟಕವು ಮೂರು ಹಂತದಲ್ಲಿ ಕಾರ್ಯ ನಿರ್ವಹಿಸಲಿದ್ದು, ಘನತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಇದು ಶಾಶ್ವತ ಪರಿಹಾರ ಒದಗಿಸಲಿದೆ ಎಂದು ಹೇಳಿದರು. ಎಲ್ಲರೂ ತಮ್ಮ ಮನೆಗಳಲ್ಲಿಯೇ ಒಣಕಸ ಮತ್ತು ಹಸಿ ಕಸವನ್ನು ಪ್ರತ್ಯೇಕಿಸಿ ನೀಡಿದಲ್ಲಿ ಅತ್ಯಂತ ಸುಲಭವಾಗಲಿದೆ ಮತ್ತು ಸಾರ್ವಜನಿಕರು ಶುಚಿತ್ವದ ಬಗ್ಗೆ ಜಾಗೃತರಾಗಿ ನಮ್ಮ ಈ ಪ್ರಯತ್ನದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು. ಗುತ್ತಿಗೆದಾರರು ಮಳೆಗಾಲ ಪ್ರಾರಂಭವಾಗುವುದಕ್ಕೂ…

Read More

ಮಡಿಕೇರಿ ಮೇ 19 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಖಾಸಗಿ ಕಂಪನಿಯಾದ ಕಲ್ಯಾಣಿ ಮೋಟಾರ್ಸ್ ಇವರು ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಕಾರ್ಯಕ್ರಮವು ಮೇ, 21 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಕಲ್ಯಾಣಿ ಮೋಟರ್ಸ್ ನಲ್ಲಿ ನಡೆಯಲಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ 18 ರಿಂದ 40 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಅಭ್ಯರ್ಥಿಗಳು 1 ಸೆಟ್ ರೆಸ್ಯೂಮ್‍ಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ದೂ.ಸಂ. 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 19 NEWS DESK : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಡಿಕೇರಿ ಗಾಳಿಬೀಡಿನಲ್ಲಿರುವ ವಸತಿ ಶಾಲೆ, ಜವಾಹರ್ ನವೋದಯ ವಿದ್ಯಾಲಯದಲ್ಲಿ ಹೆಣ್ಣು ಮಕ್ಕಳನ್ನು ನೋಡಿಕೊಳ್ಳಲು ಅರ್ಹ ಅಭ್ಯರ್ಥಿಗಳನ್ನು ಸಂದರ್ಶಕ್ಕೆ ಕರೆಯಲಾಗಿದೆ. ಮೇ 27 ರಂದು ಬೆಳಗ್ಗೆ 10 ಗಂಟೆಗೆ ಗಾಳಿಬೀಡು ನವೋದಯ ವಿದ್ಯಾಲಯದಲ್ಲಿ ಸಂದರ್ಶನ ನಡೆಯಲಿದೆ. ಇದು ಕಾಂಟ್ರ್ಯಾಕ್ಟ್ ಹುದ್ದೆಯಾಗಿದ್ದು 10 ತಿಂಗಳವರೆಗೆ ಕಾರ್ಯ ನಿರ್ವಹಿಸಬಹುದಾಗಿದೆ. ವಯೋಮಿತಿ 35 ರಿಂದ 55 ವರ್ಷದೊಳಗಿನ ಹೆಣ್ಣು ಮಕ್ಕಳು, ಕನಿಷ್ಠ ಹತ್ತನೇ ತರಗತಿಯನ್ನು ಪಾಸಾಗಿರಬೇಕು. ಹೆಚ್ಚಿನ ವಿದ್ಯಾಭ್ಯಾಸಕ್ಕೆ ಪ್ರಾಮುಖ್ಯತೆ ನೀಡಲಾಗುವುದು. ವಿವಾಹ, ವಿವಾಹೇತರ, ಮದುವೆಯಾದ ಅಥವಾ ಮದುವೆಯಾಗದ ಅಥವಾ ವಿಧವೆಯರೂ ಸಂದರ್ಶನದಲ್ಲಿ ಭಾಗವಹಿಸಬಹುದು. ಕೌಶಲ್ಯ ರಹಿತ ಕಾರ್ಮಿಕರಿಗೆ ಸರಕಾರದಿಂದ ಕೊಡಮಾಡುವ ವೇತನವನ್ನು ನೀಡಲಾಗುವುದು, ಇತರ ಸೌಲಭ್ಯಗಳು ಊಟ, ವಸತಿ ಮತ್ತು ವಿದ್ಯಾಲಯದಲ್ಲಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳು ಉಚಿತವಾಗಿರುತ್ತವೆ ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಸುಂಟಿಕೊಪ್ಪ ಮೇ 19 NEWS DESK : ಡಿ.ಶಿವಪ್ಪ ಸ್ಮಾರಕ 26ನೇ ವರ್ಷದ ರಾಜ್ಯ ಮಟ್ಟದ ಗೋಲ್ಡ್ ಕಪ್ ಫುಟ್‍ಬಾಲ್ ಟೂರ್ನಿಯ 3ನೇ ದಿನ ನಡೆದ ಪಂದ್ಯಾವಳಿಯಲ್ಲಿ ಮೊಗ್ರಲ್ ಎಫ್.ಸಿ. ಕುಂಬ್ಳೆ ತಂಡ ಮುಂದಿನ ಸುತ್ತಿಗೆ ಪ್ರವೇಶಿಸಿತ್ತು. ಜಿಯಂಪಿ ಶಾಲಾ ಮೈದಾನದಲ್ಲಿ ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ 39ನೇ ವರ್ಷದ ಆಯೋಜಿಸಲಾಗಿರುವ ಪುಟ್ಬಾಲ್ ಮೊದಲನೇ ಪಂದ್ಯಾವಳಿಯು ಮೊಗ್ರಲ್ ಎಫ್.ಸಿ ಕುಂಬ್ಳೆ ಹಾಗೂ ಸ್ವರ್ಣ ಎಫ್.ಸಿ.ಮಂಡ್ಯ ತಂಡಗಳ ನಡುವೆ ನಡೆದ ಮೊಗ್ರಲ್ ಎಫ್.ಸಿ ಕುಂಬ್ಳೆ ತಂಡವು ಮೊದಲಾರ್ಧದಲ್ಲಿ 13ನೇ ನಿಮೀಷದಲ್ಲಿ ಅಬಿದ್ ಒಂದು ಗೋಲು ಬಾರಿಸುವ ಮೂಲಕ ತಂಡಕ್ಕೆ ಮುನ್ನಡೆ ಒದಗಿಸಿಕೊಟ್ಟರು. ದ್ವಿತೀಯಾರ್ಧದಲ್ಲಿ 2ನೇ ನಿಮಿಷದಲ್ಲಿ ಮೊಗ್ರಲ್ ಎಫ್.ಸಿ ಕುಂಬ್ಳೆ ಅಭೀದ್ ಮತ್ತೊಂದು ಗೋಲುಗಳಿಸುವ ಎದುರಾಳಿ ತಂಡಕ್ಕೆ ಒತ್ತಡವನ್ನು ಹೆಚ್ಚಿಸಿದರು. ಮತ್ತೇ ಮೊಗ್ರಲ್ ಎಫ್.ಸಿ ಕುಂಬ್ಳೆ ತಂಡದ ಆಟಗಾರ 13ನೇ ನಿಮಿಷದಲ್ಲಿ ನಿಶಾದ್ ಮತ್ತೊಂದು ಗೋಲುಗಳಿಸುವ ಮೂಲಕ ಎದುರಾಳಿ ತಂಡಕ್ಕೆ ಒತ್ತಡವನ್ನು ನೀಡಿದರು. 17ನೇ ನಿಮಿಷದಲ್ಲಿ ರಶೀದ್ 1 ಗೋಲುಗಳಿಸುವ ಮೂಲಕ ಎದುರಾಳಿ…

Read More