ಲೇಖಕ: admin

ಮಡಿಕೇರಿ ಏ.18 NEWS DESK : ಐನ್‍ಮನೆಗಳು ಕೊಡವ ಕುಟುಂಬಗಳ ಕೇಂದ್ರಸ್ಥಾನವಾಗಿದ್ದು, ಇಡೀ ಕುಟುಂಬದ ಸಾಂಸ್ಕೃತಿಕ ಶಕ್ತಿಯಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಭಿಪ್ರಾಯಪಟ್ಟರು. ಕಾಕೋಟುಪರಂಬು ಮಂಡೇಟಿರ ಕುಟುಂಬಸ್ಥರ ಗುರು-ಕಾರೋಣರಿಗೆ ಮೀದಿ ಹಾಗೂ ಮಂದಣಮೂರ್ತಿಗಳ ಭಾರಣಿ ನಡೆದ ಸಂದರ್ಭದಲ್ಲಿ ಕುಟುಂಬಸ್ಥರಿಂದ ವಿಶೇಷ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮುಂದ್‍ಮನೆ, ಬಲ್ಯಮನೆ, ಗುರುಮನೆ, ಐನ್‍ಮನೆಗಳೆಂದು ಕರೆಯಲ್ಪಡುವ ಇವುಗಳು ಕೊಡವ ಕುಟುಂಬಗಳಿಗೆ ದೇವನೆಲೆ ಇದ್ದಂತೆ. ಇವುಗಳಿಗೆ ದೇವಾಲಯಗಳಷ್ಟೇ ಪ್ರಾಮುಖ್ಯತೆ ಇದ್ದು, ಕುಟುಂಬ ಸದಸ್ಯರ ಆಧ್ಯಾತ್ಮಿಕ ಕೇಂದ್ರ ಇದಾಗಿದೆ. ಇಂತಹ ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನಲೆಯುಳ್ಳ ಐನ್‍ಮನೆಗಳನ್ನು ಕಾಪಾಡಿಕೊಂಡು ಹೋಗಬೇಕಾದದ್ದು ಪ್ರತಿಯೊಂದು ಕುಟುಂಬಸ್ಥರ ಕರ್ತವ್ಯವಾಗಿರಬೇಕಾಗಿದೆ ಎಂದರು. ಐನ್‍ಮನೆಗಳ ಪ್ರಾಮುಖ್ಯತೆ ಹಾಗೂ ದೈವಿಕ ಹಿನ್ನಲೆಯನ್ನು ಅರ್ಥೈಸಿಕೊಂಡಿರುವ ಪ್ರಸಕ್ತ ಸರ್ಕಾರ ಸಹಾಯಧನ ನೀಡುವುದರ ಮೂಲಕ ಐನ್‍ಮನೆ, ಮುಂದ್‍ಮನೆಗಳ ರಕ್ಷಣೆಗೆ ಮುಂದಾಗಿರುವುದು ಅಭಿನಂದನಾರ್ಹ. ಐನ್‍ಮನೆಗಳಿಲ್ಲದ ಕೊಡವ ಕುಟುಂಬಗಳಲ್ಲಿ ಒಂದೊಂದು ಐನ್‍ಮನೆಗಳನ್ನು ನಿರ್ಮಿಸಿಕೊಳ್ಳಬೇಕಾದ ಅನಿವಾರ್ಯತೆ ಕಾಣುತ್ತಿದೆ. ಪ್ರತಿಯೊಂದು ಕುಟುಂಬದ ಸದಸ್ಯರು ಹೊರನಾಡು, ವಿದೇಶದಲ್ಲಿದ್ದರೂ ವರ್ಷಕೊಮ್ಮೆಯಾದರೂ…

Read More

ವಿರಾಜಪೇಟೆ ಏ.18 NEWS DESK : ಹುಬ್ಬಳ್ಳಿಯ ಉಮಾ ಶಂಕರ ಪ್ರತಿಷ್ಠಾನದಿಂದ ನೀಡಲಾಗುವ ಅತ್ಯುತ್ತಮ ಪುಸ್ತಕ ಪ್ರಶಸ್ತಿಗೆ ಮಡಿಕೇರಿಯ ಕೆ.ಜಯಲಕ್ಷ್ಮಿ ಅವರ “ಮತ್ತೆ ವಸಂತ” ಕಥಾ ಸಂಕಲನ ಆಯ್ಕೆಯಾಗಿದ್ದು, ಹುಬ್ಬಳ್ಳಿಯಲ್ಲಿ ಮೇ 11 ರಂದು ನಡೆಯಲಿರುವ ವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆ.ಜಯಲಕ್ಷ್ಮಿ ಅವರು ಮಡಿಕೇರಿಯ ಸಂತ ಜೋಸೆಫರ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಮರ್ಥ ಕನ್ನಡಿಗರು ಸಂಸ್ಥೆಯ ಜಿಲ್ಲಾ ಪ್ರಧಾನ ಸಂಚಾಲಕಿ ಹಾಗೂ ಕೊಡಗು ಜಾನಪದ ಪರಿಷತ್‍ನ ನಿರ್ದೇಶಕಿಯಾಗಿದ್ದಾರೆ. ಇವರು ಮಡಿಕೇರಿಯ ಜೀವ ವಿಮಾ ನಿಗಮದ ಉದ್ಯೋಗಿ ವಿ.ಹೆಚ್.ಜಯಕುಮಾರ್ ಅವರ ಪತ್ನಿ.

Read More

ಸುಂಟಿಕೊಪ್ಪ,ಏ.18 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಪ್ರಾರ್ಥನಾ ಕೂಟ ನಡೆಯಿತು. ಪವಿತ್ರ ಗುರುವಾರದ ಸಂಜೆ ಕಡೆಯ ಭೋಜನ ವಿಶೇಷ ಬಲಿಪೂಜೆಯನ್ನು ಸಂತ ಮೇರಿ ಶಾಲಾವರಣದಲ್ಲಿ ದೇವಾಲಯದ ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ನೇರವೇರಿಸಿದರು. ಧರ್ಮಗುರುಗಳಾದ ವಂ.ಫಾ.ವಿಜಯಕುಮಾರ್ ಅವರು ದೇವಾಲಯದ ಹಿರಿಯರು ಕ್ರೈಸ್ತಭಾಂದವರ ಪಾದಗಳನ್ನು ತೊಳೆಯುವ ಮೂಲಕ ಪ್ರಭು ಕ್ರಿಸ್ತರ ನಡೆಸಿದ ಮಹತ್ಕಾರ್ಯವನ್ನು ನೆನಪಿಸಿದರು. ನಂತರ ಕನ್ಯಾಸ್ತ್ರೀಯರು, ಕ್ರೈಸ್ತ ಭಾಂದವರು ಮಧ್ಯರಾತ್ರಿಯವರೆಗೆ ವಿಶೇಷ ಪ್ರಾರ್ಥನೆ ದ್ಯಾನಗಳಲ್ಲಿ ತೊಡಗಿಸಿಕೊಂಡಿದ್ದರು. ನೂರಾರು ಸಂಖ್ಯೆಯಲ್ಲಿ ನೇರೆದಿದ್ದ ಕ್ರೈಸ್ತ ಭಾಂದವರು ಪ್ರಾರ್ಥನಾಕೂಟದಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಏ.18 NEWS DESK : ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಏ.28 ರಂದು 11 ಗಂಟೆಗೆ ನಡೆಯಲಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷರ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದೆ. ಏ.28 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ. ನಂತರ ಪರಿಶೀಲನಾ ಕಾರ್ಯ ನಡೆಯಲಿದ್ದು, ವಾಪಸ್ ತೆಗೆದುಕೊಳ್ಳಲು ಕಾಲಾವಕಾಶ ಕೊಡಲಾಗುವುದು. ನಂತರ ಕೈಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಬಹುದು ಎಂದು ಚುನಾವಣಾಧಿಕಾರಿ ವಿನಾಯಕ ನರ್ವಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Read More

ಸಿದ್ದಾಪುರ ಏ.18 NEWS DESK : ನೈಮ ಎಜುಕೇಶನಲ್ ಆಂಡ್ ವೆಲ್ಫೇರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೂರು ದಿನಗಳ ಉಚಿತ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ತರಗತಿಯನ್ನು ನೆಲ್ಲಿಹುದಿಕೇರಿ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಸಿವಿಲ್ ನ್ಯಾಯಾಧೀಶರು ಎ.ಎಸ್.ಸಲ್ಮಾ ಮತ್ತು ಜೆ ಎಂ ಎಪ್ ಸಿ ಆನೇಕಲ್  ಭಾಗವಹಿಸಿ ಮಾತನಾಡಿ, ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಪ್ರತಿಭಾನ್ವಿತರಾಗಿ ಸಮಾಜದ ಮುಖ್ಯ ವಾಹಿನಿಗೆ ಬಂದು ಉನ್ನತ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಕಾನೂನು ಪದವಿಯನ್ನು ಪಡೆದುಕೊಳ್ಳಬೇಕು. ಕಾನೂನಿನ ತಿಳುವಳಿಕೆಯಿಂದ ಸಮಾಜದ ತಪ್ಪುಗಳನ್ನು ತಿದ್ದಿಕೊಳ್ಳುವ ಅವಕಾಶಗಳಿರುತ್ತವೆ. ಅದರಲ್ಲೂ ವಿದ್ಯಾರ್ಥಿನಿಯರು ಕಾನೂನು ಪದವಿ ಪಡೆಯುವ ಮೂಲಕ ಗೌರವಯುತ ಬದುಕು ಸಾಗಿಸಲು ಸಹಾಯವಾಗುತ್ತದೆ. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಕಡ್ಡಾಯವಾಗಿ ಶಾಲಾ ಕಾಲೇಜಿಗೆ ಬರುವುದರ ಮೂಲಕ ಮುಂದಿನ ಶಿಕ್ಷಣದ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ನಿವೃತ ಹಿರಿಯ ನ್ಯಾಯಾಧೀಶರಾದ ಎ.ಎ.ಶಫೀರ್ ಮಾತನಾಡಿ ಕಾನೂನು ವೃತ್ತಿಯಲ್ಲಿರುವ ವಿವಿಧ ಅವಕಾಶಗಳ ಕುರಿತು ಮಾರ್ಗದರ್ಶನ ನೀಡಿ ಶಿಕ್ಷಣದೊಂದಿಗೆ ಕಾನೂನು ಅರಿವಿನ ಮೂಲಕ ಮುನ್ನಡದಲ್ಲಿ ಉತ್ತಮ ಭವಿಷ್ಯ…

Read More

ಮಡಿಕೇರಿ NEWS DESK ಏ.17 : ಕೊಡವ ಹೊಸ ವರ್ಷಾಚರಣೆ ಎಡ್ಮ್ಯಾರ್ ಒಂದ್ ರ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವ ನರಮೇಧದ ದೇವಟ್ ಪರಂಬು ಸ್ಮಾರಕ ಸ್ಥಳದಲ್ಲಿ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಹಿರಿಯರನ್ನು ಸ್ಮರಿಸಿ ಗೌರವ ಅರ್ಪಿಸಿದ ಸದಸ್ಯರು ದೇವಟ್ ಪರಂಬುವಿನಲ್ಲಿ ಅಂತರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿದರು. ಎನ್.ಯು.ನಾಚಪ್ಪ ಅವರು ಮಾತನಾಡಿ ಟಿಪ್ಪುವಿನ ಆಕ್ರಮಣಗಳಿಂದ ಕೊಡವ ವೀರ ಯೋಧರು ರಾಜ್ಯವನ್ನು 32 ಕ್ಕೂ ಹೆಚ್ಚು ಬಾರಿ ರಕ್ಷಿಸಿದರು. ತನ್ನ ಪುನರಾವರ್ತಿತ ಸೋಲುಗಳಿಗೆ ಸೇಡು ತೀರಿಸಿಕೊಳ್ಳುವ ಪ್ರಯತ್ನವಾಗಿ ಟಿಪ್ಪು ಶಾಂತಿಸಭೆಯ ಸಂಚು ಹೂಡಿ ಕೊಡವರ ನಾಶಕ್ಕೆ ಕಾರಣನಾದನು. ಇಂದು ಉಳಿದಿರುವ ಆದಿಮಸಂಜಾತ ಕೊಡವ ಜನಾಂಗದ ಸಮಗ್ರ ಸಬಲೀಕರಣಕ್ಕೆ ಮತ್ತು ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯನ್ನು ಪಡೆಯಲು ಹಿರಿಯರ ಆಶೀರ್ವಾದ ಪಡೆಯಲಾಯಿತು ಎಂದರು. ಕೊಡವ ನರಮೇಧದ ದೇವಟ್ ಪರಂಬುವಿನಲ್ಲಿ ಅಂತರಾಷ್ಟ್ರೀಯ ಸ್ಮಾರಕ, ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿ ಸ್ಮಾರಕಗಳನ್ನು…

Read More

*ಮೈದಾನ 1 ::  ಬೆಳಿಗ್ಗೆ 9 ಗಂಟೆಗೆ ಚೋಯಮಾಡಂಡ ಮತ್ತು ಕೋಟೇರ, 10 ಗಂಟೆಗೆ ಕುಮ್ಮಂಡ ಮತ್ತು ಪುದಿಯೊಕ್ಕಡ, 11 ಗಂಟೆಗೆ ಮುಕ್ಕಾಟಿರ (ಬೋಂದ) ಮತ್ತು ಚಂಗುಲಂಡ, ಮಧ್ಯಾಹ್ನ 1 ಗಂಟೆಗೆ ಅಟ್ರಂಗಡ ಮತ್ತು ಮಳವಂಡ, 2 ಗಂಟೆಗೆ ಕಾಯಪಂಡ ಮತ್ತು ಮೇಕೇರಿರ, 3 ಗಂಟೆಗೆ ನಂಬುಡುಮಾಡ ಮತ್ತು ಅಂಜಪರವಂಡ *ಮೈದಾನ 2 ::  ಬೆಳಿಗ್ಗೆ 9 ಗಂಟೆಗೆ ಅಮ್ಮಣಿಚಂಡ ಮತ್ತು ಅಜ್ಜಮಾಡ, 10 ಗಂಟೆಗೆ ಮೇರಿಯಂಡ ಮತ್ತು ಬೋವ್ವೆರಿಯಂಡ, 11 ಗಂಟೆಗೆ ನೆರವಂಡ ಮತ್ತು ಚೆರುಮಂದಂಡ, ಮಧ್ಯಾಹ್ನ 1 ಗಂಟೆಗೆ ಮುರುವಂಡ ಮತ್ತು ಮಂಡೇಪಂಡ, 2 ಗಂಟೆಗೆ ಪುಲ್ಲಂಗಡ ಮತ್ತು ಸಣ್ಣುವಂಡ, 3 ಗಂಟೆಗೆ ಸೋಮೆಯಂಡ ಮತ್ತು ಕಲಿಯಂಡ

Read More

ಮಡಿಕೇರಿ ಏ.17 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪತ್ರಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆ ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5419 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5411 ಪ್ರಕರಣಗಳು ಇತ್ಯರ್ಥ ಗೊಂಡಿದೆ. 2024-25 ನೇ ಆರ್ಥಿಕ ಸಾಲಿನಲ್ಲಿ 301 ಪ್ರಕರಣಗಳು ದಾಖಲಾಗಿ, 293 ಪ್ರರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 8 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ. 12,00,500 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ…

Read More

*ಮೈದಾನ 1 : ಕುಪ್ಪಂಡ (ಕೈಕೇರಿ) ಮತ್ತು ನಾಗಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಕುಪ್ಪಂಡ ತಂಡ ಗೆಲುವು ದಾಖಲಿಸಿತು. ಕುಪ್ಪಂಡ ಪರ ಸೋಮಯ್ಯ 2, ನಾಚಪ್ಪ, ಚಂಗಪ್ಪ ಹಾಗೂ ದ್ಯಾನ್ ತಲಾ 1 ಗೋಲು ದಾಖಲಿಸಿದರು. ನಾಗಂಡ ಪರ ದೀಕ್ಷಿ ಸುಬ್ಬಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮತ್ರಂಡ ಮತ್ತು ಅಮ್ಮಂಡ ನಡುವಿನ ಪಂದ್ಯದಲ್ಲಿ 2 ತಂಡಗಳು ನಿಗದಿತ ಸಮಯದಲ್ಲಿ ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಮತ್ರಂಡ ಜಯ ಸಾಧಿಸಿತು. ಅಮ್ಮಂಡ ಕಾರ್ಯಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.  ಅನ್ನಡಿಯಂಡ ಮತ್ತು ಪರದಂಡ ನಡುವಿನ ಪಂದ್ಯದಲ್ಲಿ 6-2 ಗೋಲುಗಳ ಅಂತದಲ್ಲಿ ಪರದಂಡ ಜಯ ಸಾಧಿಸಿತು. ಪರದಂಡ ಪರ ಕುಶಾಲಪ್ಪ ಹಾಗೂ ಅಯ್ಯಪ್ಪ ತಲಾ 2, ಉತ್ತಪ್ಪ ಹಾಗೂ ಪೂವಣ್ಣ ತಲಾ 1 ಗೋಲು ದಾಖಲಿಸಿದರು. ಅನ್ನಡಿಯಂಡ ಪರ ಪ್ರಕ್ಷಿತ್ ಪೊನ್ನಪ್ಪ ಹಾಗೂ ನವೀನ್…

Read More

ಮಡಿಕೇರಿ ಏ.17 NEWS DESK : ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಜ್ಯೋತಿ ಬೆಳಗಿ ಚಾಲನೆ ನೀಡಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿದರು. ಬಳಿಕ ಮಾತನಾಡಿದ ಶಾಸಕರು ಆರೋಗ್ಯಯುತ ಬದುಕಿಗೆ ಕ್ರೀಡೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟವು ಪ್ರತೀ ತಿಂಗಳು ನಡೆಯುವಂತಾಗಬೇಕು ಎಂದು ಸಲಹೆ ನೀಡಿದರು. ಸರ್ಕಾರಿ ನೌಕರರು ಪ್ರತೀ ನಿತ್ಯ ಕಚೇರಿ ಹಾಗೂ ಕುಟುಂಬದ ಒತ್ತಡ ನಡುವೆ ಕೆಲಸ ಮಾಡುತ್ತಾರೆ. ಆದ್ದರಿಂದ ಆರೋಗ್ಯ ಹಾಗೂ ಮನಃಶಾಂತಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ…

Read More