ಕುಶಾಲನಗರ ಏ.17 NEWS DESK : ಹನ್ನೆರಡನೇ ಶತಮಾನದ ಮಹಾಶಿವಶರಣೆ ಅಕ್ಕಮಹಾದೇವಿ ಇಡೀ ಮನುಕುಲದ ಮಹಾಬೆಳಕು. ಮಹಿಳೆಯರ ಪಾಲಿಗೆ ಸದಾ ಹಿರಿಯಕ್ಕ ಎಂದು ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಕಾವೇರಿ ಪ್ರಕಾಶ್ ಹೇಳಿದರು. ಕುಶಾಲನಗರದ ಮಹಾತ್ಮಗಾಂಧಿ ಪದವಿ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ಕುರಿತು ಉಪನ್ಯಾಸ ನೀಡಿದ ಅವರು, ಮಹಾದೇವಿಯ ಸಹಜ ಸೌಂದರ್ಯಕ್ಕೆ ಮರುಳಾದ ಕೌಶಿಕ ಮಹಾರಾಜ ಮಹಾದೇವಿಯನ್ನು ವಿವಾಹ ವಾಗಲು ಪರಿತಪಿಸಿದಾಗ, ಮಹಾದೇವಿ ಒಡ್ಡಿದ್ದ ಷರತ್ತುಗಳನ್ನು ಧಿಕ್ಕರಿಸಿ ಲೈಂಗಿಕ ಕ್ರೌರ್ಯ ಮೆರೆಯಲು ಮುಂದಾದ ಕೌಶಿಕ ರಾಜನ ವಿರುದ್ಧ ಬಂಡೆದ್ದು ದಿಂಗಂಬರಳಾಗಿಯೇ ಕಲ್ಯಾಣಕ್ಕೆ ಹೆಜ್ಜೆ ಹಾಕುವ ಮಹಾದೇವಿ ತನ್ನ ಇಷ್ಟಾರ್ಥ ದೈವ ಶ್ರೀಚೆನ್ನಮಲ್ಲಿಕಾರ್ಜುನ ನನ್ನು ನೆನೆಯುತ್ತಾ ಇಡೀ ಜೀವನ ಕಳೆದು ಅಲ್ಲಮ ಪ್ರಭುಗಳಿಂದ ಅನುಭವ ಮಂಟಪದಲ್ಲಿ ಅಕ್ಕ ಮಹಾದೇವಿಯಾಗಿ ರೂಪುಗೊಂಡ ಬಗೆಯನ್ನು ಡಾ.ಕಾವೇರಿ ವಿಶ್ಲೇಷಿಸಿದರು. ಹುಟ್ಟು ಮತ್ತು ಮುಟ್ಟು ವಿಷಯದಲ್ಲಿ ಮೈಲಿಗೆಯ ಸೂತಕವನ್ನು ಆಚರಿಸುತ್ತಾ ಬಂದ ಕೆಟ್ಟ…
ಲೇಖಕ: admin
ಮಡಿಕೇರಿ ಏ.17 NEWS DESK : ಮಡಿಕೇರಿಯಲ್ಲಿ ನಡೆಯುತ್ತಿರುವ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಇಂದು ಶ್ವಾನ ಪ್ರದರ್ಶನ ಮೆರುಗು ನೀಡಿತು. ವಿವಿಧ ತಳಿಯ ಶ್ವಾನಗಳು ಹಾಕಿ ಮೈದಾನದಲ್ಲಿ ಆಕರ್ಷಣೆ ಮತ್ತು ಚಾಕಚಕ್ಯತೆಯಿಂದ ನೋಡುಗರ ಗಮನ ಸೆಳೆದವು. ಪಶುವೈದ್ಯಕೀಯ ಇಲಾಖೆಯ ಸಹಯೋಗದಲ್ಲಿ ನಡೆದ ಶ್ವಾನ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಮಾನವನ ವಿಶ್ವಾಸ, ನಂಬಿಕೆಗೆ ಅರ್ಹವಾದ ನಿಷ್ಠಾವಂತ ಸಾಕು ಪ್ರಾಣಿಗಳಲ್ಲಿ ಶ್ವಾನ ಅಗ್ರ ಸ್ಥಾನ ಪಡೆದಿದೆ. ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದರಿಂದ ನಿಷ್ಕಲ್ಮಶವಾದ ಪ್ರೀತಿ ಬೆಳೆಯುತ್ತದೆ. ಪ್ರತಿಯೊಬ್ಬರು ಪ್ರಾಣಿಗಳನ್ನು ಉತ್ತಮ ರೀತಿಯಲ್ಲಿ ಪೋಷಣೆ ಮಾಡಬೇಕು ಎಂದರು. ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಡಾ.ಲಿಂಗರಾಜು ಹಾ.ದೊಡ್ಡಮನಿ ಮಾತನಾಡಿ, ಪ್ರಾಣಿಗಳನ್ನು ರೇಬಿಸ್ ಕಾಯಿಲೆಯಿಂದ ರಕ್ಷಿಸಲು ಲಸಿಕೆ ಏಕೈಕ ಮಾರ್ಗವಾಗಿದ್ದು, ಜಿಲ್ಲೆಯ ಎಲ್ಲಾ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಉಚಿತ ಲಸಿಕೆ ನೀಡಲಾಗುತ್ತಿದೆ. ಸಾರ್ವಜನಿಕರು ತಮ್ಮ ಪ್ರಾಣಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ಮಾರಣಾಂತಿಕ ಕಾಯಿಲೆಯಿಂದ…
ಮಡಿಕೇರಿ ಏ.17 NEWS DESK : ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ. ಬೈಕ್ ಹಿಂಬದಿ ಕುಳಿತ್ತಿದ್ದ ಮಡಿಕೇರಿ ತಾಲ್ಲೂಕಿನ ಸಾಮ್ವೆಲ್ (22) ಮೃತ ದುರ್ದೈವಿಯಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬ ಸವಾರ ನವೀನ(23) ನನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಹಾಗೂ ಬೈಲುಕುಪ್ಪೆ ಕಡೆಯಿಂದ ಕೊಪ್ಪ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಕೊಪ್ಪ ಆರೋಗ್ಯ ಕೇಂದ್ರದ ಸಮೀಪ ಈ ದುರ್ಘಟನೆ ನಡೆದಿದೆ. ಬೈಲುಕುಪ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಶಾಲನಗರ ಏ.17 NEWS DESK : ಅಂಕನಹಳ್ಳಿ ತಪೋವನ ಕ್ಷೇತ್ರದ ಶ್ರೀ ಗುರುಸಿದ್ಧ ವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಧಾರ್ಮಿಕ ಹಾಗೂ ಗುರುವಂದನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿಶ್ರಾಂತ ನ್ಯಾಯಾಧೀಶರಾದ ಎಂ ಆರ್ ದೇವಪ್ಪ, ರಾಜ್ಯ ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ವಿರೂಪಾಕ್ಷಯ್ಯ ಖೋ ಖೋ ತಂಡದ ಆಟಗಾರ್ತಿ ವಿಶ್ವಕಪ್ ವಿಜೇತೆ ಕುಮಾರಿ ಚೈತ್ರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ವಿಕ್ರಂ ಖಾತ, ಭಾರತ ಕಿರಿಯರ ಹಾಕಿ ತಂಡದ ತರಬೇತುದಾರ ಏಷ್ಯಾ ಕಪ್ ವಿಜೇತ ಸಿ ಬಿ ಜನಾರ್ಧನ್, ಭರತನಾಟ್ಯ ಕಲಾವಿದೆ ಮಿಲನ ಭರತ್ ,ಪ್ರಗತಿಪರ ಕೃಷಿಕ ಡಿ ಬಿ ಧರ್ಮಪ್ಪ ,ನಿವೃತ್ತ ಸೈನಿಕ ಲೋಕೇಶ್ ಸುವರ್ಣ, ಸಾಹಿತಿ ಉಳುವಂಗಡ ಕಾವೇರಿ ಉದಯ್, ಗೋರಕ್ಷಕರಾದ ಡಾ. ರಾಜಾರಾಮ್, ಡಿ ವೈ ಎಸ್ ಪಿ ಪರಶಿವಮೂರ್ತಿ, ಹಿರಿಯ ಪತ್ರಕರ್ತರಾದ ಕೆ ವಿ ಪರಮೇಶ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ…
ಮಡಿಕೇರಿ ಏ.17 NEWS DESK : ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ರೋಚಕ ಹಾಕಿ ಪಂದ್ಯಗಳೊಂದಿಗೆ ವೈವಿಧ್ಯಮಯ ಕಾರ್ಯಕ್ರಮಗಳು ಕೂಡ ನಡೆಯುತ್ತಿದ್ದು, ಏ.26ರಂದು ಟೂರ್ ಆಫ್ ಸ್ಟಾರ್ಸ್ ಕೂರ್ಗ್ ಕ್ಲಾಸಿಕ್ ರೇಸ್ ಸೈಕ್ಲೋಥಾನ್ ನ್ನು ಆಯೋಜಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ಅವರು ಖ್ಯಾತ ಸೈಕಲ್ ಪಟುಗಳು ಸೇರಿದಂತೆ ನೂರಾರು ಮಂದಿ ಸೈಕ್ಲೋಥಾನ್ ರೇಸ್ ನಲ್ಲಿ ಪಾಲ್ಗೊಳ್ಳಳಿದ್ದಾರೆ. 100 ಕಿ.ಮೀ ಮತ್ತು 30 ಕಿ.ಮೀ ವಿಭಾಗಗಳಲ್ಲಿ (5 ವಿಭಾಗಗಳು ಎಲೈಟ್ / ಹವ್ಯಾಸಿ) ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ನಗದು ಬಹುಮಾನ ಮತ್ತು ಪಾರಿತೋಷಕ ನೀಡಲಾಗುವುದು. ಮಡಿಕೇರಿ, ಮೂರ್ನಾಡು, ವಿರಾಜಪೇಟೆ, ಗೋಣಿಕೊಪ್ಪ, ಪಾಲಿಬೆಟ್ಟ ಮಾರ್ಗದಲ್ಲಿ ಈ ಜಾಥಾ ಸಾಗಲಿದೆ. ಆಸಕ್ತರು ಏ.22ರ ಒಳಗಾಗಿ https://www.tourofstars.com/register ನೋಂದಾಯಿಸಿಕೊಳ್ಳಬಹುದಾಗಿದೆ.
ಸೋಮವಾರಪೇಟೆ ಏ.17 NEWS DESK : ಜಾತಿ ಜನಗಣತಿ ಜಾತಿ, ಜಾತಿಗಳ ನಡುವೆ ವಿಷಬೀಜ ಬಿತ್ತಿ ಒಡೆದು ಆಳುವ ಹುನ್ನಾರ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯ ಸರ್ಕಾರ ಜಾತಿ ಜನಗಣತಿ ನಡೆಸಿರುವುದೇ ಸೋಜಿಗದ ಸಂಗತಿಯಾಗಿದೆ ಏಕೆಂದರೆ ಈ ರಾಜ್ಯದಲ್ಲಿ ಯಾರು, ಯಾವಾಗ ಜಾತಿ ಜನಗಣತಿ ನಡೆಸಿದರು ಎಂಬುದು ಯಾರಿಗೂ ಗೊತ್ತಿಲ್ಲಾ, ನಮ್ಮ ಮನೆಗೂ ಯಾರು ಬಂದು ಜಾತಿ ಜನಗಣತಿ ನಡೆಸಿಲ್ಲ ಹೀಗಿರುವಾಗ ಮಾಹಿತಿ ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು, ಜಾತ್ಯಾತೀತ ರಾಷ್ಟ್ರ ಎಂಬುವವರೇ ಜಾತಿಯ ವಿಷಬೀಜ ಬಿತ್ತಿ ಒಡೆದು ಆಳುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಒಂದು ವೇಳೆ ಇವರು ಜಾತಿ ಜನಗಣತಿ ನಡೆಸಿದ್ದರೆ ಅದು ಅಸಮರ್ಪಕ ವಾಗಿದ್ದು, ಅದನ್ನು ಕೈ ಬಿಟ್ಟು ಹೊಸದಾಗಿ ನಡೆಸಿ ಎಂದು ಮಹೇಶ್ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚಾಗಿರುವ ವೀರಶೈವ ಲಿಂಗಾಯತ ಜನಾಂಗವನ್ನು…
ಕುಶಾಲನಗರ ಏ.17 NEWS DESK : ಕುಶಾಲನಗರ ಪುರಸಭೆ ವತಿಯಿಂದ 2025 ಮತ್ತು 2026 ರ ಆಸ್ತಿ ತೆರಿಗೆಯಲ್ಲಿ ಬಹಳ ಹೆಚ್ಚಳವಾಗಿದ್ದು, ಅದು ಅವೈಜ್ಞಾನಿಕವಾಗಿದೆ. ಅದನ್ನು ಸರಿಪಡಿಸಿಕೊಂಡು ಜನರಿಂದ ತೆರಿಗೆ ಸಂಗ್ರಹ ಮಾಡಬೇಕೆಂದು ಕುಶಾಲನಗರ ಪುರಸಭೆ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಗಳಿಗೆ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಮನವಿ ಮಾಡಿಕೊಳ್ಳಲಾಯಿತು. ಕಳೆದ ವರ್ಷದ ತೆರಿಗೆಗೆ ಈ ವರ್ಷ ಶೇ.3 ಹೆಚ್ಚಳ ಮಾಡಲಾಗಿದ್ದರು ಅಂತಿಮ ಹಂತದ ತೆರಿಗೆ ನೋಡಿದಾಗ ಅದು ಶೇ.15 ರಿಂದ ಶೇ.20 ಹೆಚ್ಚಳವಾಗಿರುವುದು ಕಂಡು ಬಂದಿದೆ. ಅದು ಅವೈಜ್ಞಾನಿಕ ಹೆಚ್ಚಳ ಮತ್ತು ಸಾರ್ವಜನಿಕರಿಗೆ ಹೊರೆಯಾಗುತ್ತಿದೆ. ಅದನ್ನು ಆದ್ಯತೆ ಮೇರೆಗೆ ತಪ್ಪಿಸಲು ಅಧ್ಯಕ್ಷ ಕೆ.ಎಸ್.ನಾಗೇಶ್ ಅಧಿಕಾರಿಗಳಿಗೆ ತಿಳಿಸಿದರು. ಮುಂದುವರಿದು ಉದ್ದಿಮೆದಾರ ಟ್ರೇಡ್ ಲೈಸನ್ಸ್ ಗೂ ವಿಪರೀತ ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡಬಲ್ ಆಗಿರುವುದನ್ನು ತಿಳಿಸಿದರು. ಚೇಂಬರ್ ಆಫ್ ಕಾಮರ್ಸ್ ನ ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಮಾತನಾಡಿ, ತೆರಿಗೆ ಹೆಚ್ಚಳ ಮಾಡುವುದಕ್ಕೆ ಸರಿಯಾಗಿ ಜನರ ಅವಶ್ಯಕತೆಗಳನ್ನು…
ಸಿದ್ದಾಪುರ ಏ.17 NEWS DESK : ಕೊಂಡಂಗೇರಿ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಮೊಹಮ್ಮದ್ ಪೈಗಂಬರ್ ಸ.ಅ ರವರ ಸಂತತಿ ಪುತ್ರರಾದ ಬಹು ಅಸ್ಸಯ್ಯದ್ ಅಬ್ದುಲ್ಲಾಹಿ ಸಖಾಫ ಅಲ್ ಹಳ್ರಮಿ (ನ.ಮ) ಹಾಗೂ ಸಮೀಪದ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿಗೊಳ್ಳುತ್ತಿರುವ ಪವಾಡ ಪುರುಷರ ಹೆಸರಿನಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು ಏ.18 ರಿಂದ 22 ರವರಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತದೆ ಎಂದು ಕೊಂಡಂಗೇರಿ ಸುನ್ನೀ ಮುಸ್ಲಿಂ ಜಮಾಅತ್ ಅಧ್ಯಕ್ಷ ಕುಪ್ಪಂದರ ಕೆ.ಯೂಸುಫ್ ಹಾಜಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏ.18 ರಂದು ಶುಕ್ರವಾರ 2 ಗಂಟೆಗೆ ಮಖಾಂ ಅಲಂಕಾರ ಹಾಗೂ ದುಆಃ ನಂತರ ಸಾಮೂಹಿಕ ಪ್ರಾರ್ಥನೆ ನೆರವೇರಲಿದೆ. ಧಾರ್ಮಿಕ ಪಂಡಿತ ಸಯ್ಯದ್ ಅಲವಿ ಜಲಾಲುದ್ದೀನ್ ಅಲ್ ಹಾದಿ ನೇತೃತ್ವ ವಹಿಸಲಿದ್ದು, ತಕ್ಕ ಮುಖ್ಯಸ್ಥರುಗಳಾದ ಪೇರಿಯಂಡ ಎ ಕುಂಇ ಅಹಮದ್ ಮುಸ್ಲಿಯಾರ್, ಕುಪ್ಪಂದರ ಎಂ.ಯಹ್ಯಾ ಹಾಜಿ, ಎಂ ಐ ಇಕ್ಬಾಲ್, ಕೊಟ್ಟಿಯಾಡ್ ಎಂ ಶಾದುಲಿ ಸಮ್ಮುಖದಲ್ಲಿ ಅಪರಾಹ್ನ…
ಮಡಿಕೇರಿ ಏ.17 NEWS DESK : ಡ್ರಾವಿಡ ವಿಶ್ವವಿದ್ಯಾಲಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಎಂ.ಎನ್.ವನಿತ್ ಕುಮಾರ್ಗೆ ಪಿ.ಹೆಚ್.ಡಿ ಪದವಿ ಲಭಿಸಿದೆ. ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಜಿ.ಹೆಚ್.ನಾಗರಾಜು ಅವರ ಮಾರ್ಗದರ್ಶನದಲ್ಲಿ “ಕರ್ನಾಟಕದಲ್ಲಿ ಮೂರು ಹಂತದ ವ್ಯವಸ್ಥೆ- ಮೈಸೂರು ಜಿಲ್ಲಾ ಪಂಚಾಯಿತಿ ಕುರಿತು ಒಂದು ಅಧ್ಯಯನ” ಎಂಬ ವಿಷಯದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಡ್ರಾವಿಡ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. ಈ ಹಿಂದೆ ಕಾವೇರಿ ಕಾಲೇಜು ಗೋಣಿಕೊಪ್ಪಲು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಕೆಲಸ ನಿರ್ವಹಿಸಿದ ಇವರು ಪ್ರಸ್ತುತ ಡಿ.ದೇವರಾಜ್ ಅರಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಂದೆಯಂಡ ವನಿತ್ ಕುಮಾರ್(ಸಂಜು) ಆಲೂರು ಸಿದ್ದಾಪುರ ಗ್ರಾಮದ ಮಂದೆಯಂಡ ನಾಣಯ್ಯ ಮತ್ತು ಪೊನ್ನಮ್ಮ ದಂಪತಿಯ ಪುತ್ರ. =
ಮಡಿಕೇರಿ ಏ.17 NEWS DESK : ಪೊನ್ನಂಪೇಟೆಯ ಸಿಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾದಕ ದ್ರವ್ಯದ ದುಷ್ಪರಿಣಾಮಗಳು, ಸಂಚಾರ ಸುರಕ್ಷತೆ ಮತ್ತು ಇನ್ನಿತರ ವಿಷಯಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು. ನಂತರ ಮಾತನಾಡಿ, ಜಿಲ್ಲೆಯಲ್ಲಿ ರಸ್ತೆ ಅವಘಡಗಳು ಹೆಚ್ಚಾಗುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಇದೆ. ಇದರೊಂದಿಗೆ ಮದ್ಯ ಸೇವಿಸಿ ವಾಹನ ಚಲಾಯಿಸುವ ಪ್ರಕರಣಗಳು ಅಧಿಕವಾಗುತ್ತಿವೆ. ಈ ಕುರಿತು ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದರು.






