ವಿರಾಜಪೇಟೆ ಏ.17 NEWS DESK ;: ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ವಾರ್ಷಿಕ ಮಹಾಸಭೆ ನಡೆಯಿತು. ವಿರಾಜಪೇಟೆ ಕೊಡವ ಸಮಾಜದ ಆವರಣದಲ್ಲಿ ನಡೆದ ಸಭೆಯಲ್ಲಿ ಒಕ್ಕೂಟದ ಸ್ಥಾಪಕ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸುಮಾರು ಏಳು ವರ್ಷಗಳಿಂದ ಒಕ್ಕೂಟ ನಡೆದು ಬಂದ ಹಾದಿಯನ್ನು ಮೆಲುಕು ಹಾಕುತ್ತಾ, ಇಲ್ಲಿಯ ತನಕ ಸಹಕಾರ ನೀಡಿದ ಸರ್ವರ ಸಹಕಾರವನ್ನು ಸ್ಮರಿಸಿದರುಹಾಗೂ ಎಲ್ಲರಿಗೂ ಅವಕಾಶ ಸಿಗಬೇಕೆಂಬ ಉದ್ದೇಶದಿಂದ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸ ಆಡಳಿತ ಮಂಡಳಿ ರಚನೆಗೆ ಅನುವು ಮಾಡಿ ಕೊಟ್ಟರು. ಗೌರವ ಕಾರ್ಯದರ್ಶಿ ಬಯವಂಡ ಇಂದಿರಾ ಬೆಳ್ಯಪ್ಪ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ತಾತಂಡ ಯಶು ಕಭೀರ್ ವಾರ್ಷಿಕ ಖರ್ಚು ವೆಚ್ಚದ ಲೆಕ್ಕಪತ್ರವನ್ನು ಮಂಡಿಸಿದರು. ಈ ಸಂದರ್ಭ ಸಭೆಯಲ್ಲಿ ಒಕ್ಕೂಟದ ಸದಸ್ಯರುಗಳು, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು. ಭಾಷಣ ಸ್ಪರ್ಧೆ :: ಸಭೆಯಲ್ಲಿ ನಾಗರಿಕ ಸಮಾಜದಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಬಗ್ಗೆ ಭಾಷಣ ಪೈಪೋಟಿ ನಡೆದು…
ಲೇಖಕ: admin
ಕೊಯನಾಡು ಏ.17 NEWS DESK : ಕೊಯನಾಡು ಸುನ್ನಿ ಮುಸ್ಲಿಂ ಜುಮಾ ಮಸೀದಿ ಹಾಗೂ ನುಸ್ರತುಲ್ ಇಸ್ಲಾಂ ಅಸೋಸಿಯೇಷನ್ ವತಿಯಿಂದ 28ನೇ ಸ್ವಲಾತ್ ಹಾಗೂ ಏಕದಿನ ಧಾರ್ಮಿಕ ಮತ ಪ್ರಭಾಷಣ ಕಾರ್ಯಕ್ರಮ ನಡೆಯಿತು. ಮಸೀದಿ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಸುನ್ನಿ ಮುಸ್ಲಿಂ ಜುಮಾ ಮಸೀದಿ ಖತೀಬರಾದ ಮಹಮ್ಮದ್ ಸಖಾಫಿ ಅಲ್ ಹಿಕಮಿ ಉದ್ಘಾಟಿಸಿ ಮಾತನಾಡಿ, “ಎಲ್ಲಾ ರೀತಿಯ ಮಾನಸಿಕ ಸಮಸ್ಯೆಗಳಿಗೆ ಆಧ್ಯಾತ್ಮಿಕ ಒಂದೇ ಪರಿಹಾರವಾಗಿದೆ. ನಿರಂತವಾಗಿ ಸಕಲ ಸಂಕಷ್ಟಗಳಿಗೆ ಸ್ವಲಾತ್ ಹೆಚ್ಚಿಸುವುದೊಂದೇ ಪರಿಹಾರ” ಎಂದು ಹೇಳಿದರು. “ಮಾದಕ ವ್ಯಸನಗಳು ಸಮಾಜದ ಒಳಗೆ ನುಸುಳಿಕೊಂಡು ಅನೇಕ ಅಕ್ರಮ ಅನೈತಿಕತೆಗಳು ನಡೆಯುತ್ತಿದೆ. ಮಾದಕ ವ್ಯಸನಗಳಿಂದಾಗಿ ಯುವ ಸಮೂಹ ಅಕ್ರಮಗಳಿಗೆ ಮುಂದಾಗುತ್ತಿದ್ದಾರೆ. ಮಾದಕತೆಯ ಪ್ರಭಾವದಿಂದ ಸ್ವಂತ ತಾಯಿ ಮತ್ತು ಸಹೋದರಿ ಎಂದು ಅರಿಯದೇ ಸ್ವಂತ ರಕ್ತದ ಕುಡಿಗಳೇ ಅವರ ಮೇಲೆ ಅಕ್ರಮ ಎಸಗುವಂತ ಕಾಲ ಇದಾಗಿದೆ. ಆದ್ದರಿಂದ ಸಮುದಾಯವು ಈ ಬಗ್ಗೆ ಜಾಗೃತರಾಗಬೇಕಿದೆ” ಎಂದು ಉಸ್ತಾದರು ಕರೆ ನೀಡಿದರು. ಮುಖ್ಯ ಪ್ರಭಾಷಣ ಮಾಡಿದ ಅಬ್ದುಲ್ ರಝಾಕ್…
ಮಡಿಕೇರಿ ಏ.17 NEWS DEWSK : ಕಲಾಕಾವ್ಯ ನಾಟ್ಯ ಶಾಲೆಯ ಏಳನೇ ವರ್ಷದ ವಾರ್ಷಿಕೋತ್ಸವವವು ಸಂಭ್ರಮದಿಂದ ನಡೆಯಿತು. ಮಡಿಕೇರಿಯ ಕೆಳಗಿನ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮವನ್ನು ಭರತನಾಟ್ಯ ಕಲಾವಿದೆ ಮಿಲನ ಭರತ್ ಹಾಗೂ ಯೋಗ ಗುರು ಶಿಲ್ಪ ರವೀಂದ್ರ ರೈ ಉದ್ಘಾಟಿಸಿದರು. ಬಳಿಕ ಮಾತನಾಡಿದ ಮಿಲನಾ ಭರತ್, ಒಂದು ನಾಟ್ಯಶಾಲೆಯನ್ನು ಸ್ಥಾಪಿಸುವುದು ಸುಲಭದ ವಿಷಯವಲ್ಲ, ತಾನು ಕಲಿತು ಬಳಿಕ ಇತರರಿಗೆ ಆ ವಿದ್ಯೆಯನ್ನು ಧಾರೆಯೆರೆಯಬೇಕಾಗಿರುತ್ತದೆ, ಇದಕ್ಕೆ ಬಹಳ ಆತ್ಮಸ್ಥೈರ್ಯದ ಅಗತ್ಯವಿರುತ್ತದೆ. ಕಾವ್ಯಶ್ರೀ ಅವರು ಎಲ್ಲವನ್ನೂ ಮೀರಿ ಈ ಶಾಲೆಯನ್ನು ಕಟ್ಟಿದ್ದಾರೆ ಅವರ ಸಾಧನೆ ನಿಜಕ್ಕೂ ಅಭಿನಂದನೀಯ ಎಂದರು. ಶಿಲ್ಪಾ ರವೀಂದ್ರ ರೈ ಮಾತನಾಡಿ, ಇಂದು ಭಾರತೀಯ ನೃತ್ಯಕಲೆ ಕಲಿಯುವವರ ಸಂಖ್ಯೆ ದಿನದಿಂದ ದಿನಕ್ಕೆ ಕುಂಠಿತವಾಗುತ್ತಿದೆ, ಜನರು ಆಸಕ್ತಿ ಕಳೆದುಕೊಳ್ಳುತ್ತಿರುವುದು ಇದಕ್ಕೆ ಮೂಲ ಕಾರಣ. ಆದರೆ ಕಾವ್ಯಶ್ರೀ ಅವರು ದಕ್ಷಿಣ ಭಾರತದ ಪ್ರಮುಖ ನೃತ್ಯ ಪ್ರಕಾರವಾದ ಭರತನಾಟ್ಯದ ಮೇಲಿಟ್ಟಿರುವ ಗೌರವ, ಅಭಿಮಾನ ನಿಜಕ್ಕೂ ಮೆಚ್ಚುವಂತದ್ದು. ಈ ನೃತ್ಯಶಾಲೆ ಸ್ಥಾಪಿಸಲು ಅವರು ಅಂದು ಇಟ್ಟ…
*ಮೈದಾನ 1* ಮಂಡೇಟಿರ ಮತ್ತು ಚಂಗುಲಂಡ ನಡುವಿನ ಪಂದ್ಯದಲ್ಲಿ ಎರಡೂ ತಂಗಳು ನಿಗಧಿತ ಅವಧಿಯಲ್ಲಿ ತಲಾ 2 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್ನಲ್ಲಿ 5-4 ಗೋಲುಗಳ ಅಂತರದಲ್ಲಿ ಚಂಗುಲಂಡ ತಂಡ ಗೆಲುವು ದಾಖಲಿಸಿತು. ಚಂಗುಲಂಡ ಪರ ಗೌತಮ್ 2 ಹಾಗೂ ಮಂಡೇಟಿರ ಪರ ತಿಲಕ್ ಅಯ್ಯಪ್ಪ ಮತ್ತು ನೆಹಾಲ್ ಬೆಳ್ಯಪ್ಪ ತಲಾ 1 ಗೋಲು ದಾಖಲಿಸಿದರು. ಮಂಡೇಟಿರ ಸೋಹನ್ ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಳ್ಳಿಚಂಡ ಮತ್ತು ಮಚ್ಚಾರಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ತಲಾ 1 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್ನಲ್ಲಿ 4-2 ಗೋಲುಗಳ ಅಂತರದಲ್ಲಿ ಕಳ್ಳಿಚಂಡ ತಂಡ ಜಯ ಸಾಧಿಸಿತು. ಕಳ್ಳಿಚಂಡ ಪರ ದೀವನ್ ಹಾಗೂ ಕಾವೇರಪ್ಪ ತಲಾ 1 ಗೋಲು ದಾಖಲಿಸಿದರು. ಮಚ್ಚಾರಂಡ ಪರ ಗಣಪತಿ ಹಾಗೂ ತಮ್ಮಯ್ಯ ತಲಾ 1 ಗೋಲು ದಾಖಲಿಸಿದರು. ಮಚ್ಚಾರಂಡ ಗಣಪತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ…
ಮಡಿಕೇರಿ ಏ.16 NEWS DESK : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು 2024-25 ನೇ ಸಾಲಿನಲ್ಲಿ ಕಿರು ಅಧ್ಯಯನ ನಡೆಸಲು ತಲಾ ರೂ.1.50 ಲಕ್ಷಗಳಂತೆ ಫೆಲೋಶಿಪ್ ನೀಡಲಾಗುತ್ತದೆ. ಕನಕದಾಸರ ಮುಂಡಿಗೆ ಸಾಹಿತ್ಯ-ತಾತ್ವಿಕ ವಿವೇಚನೆ, ಕರ್ನಾಟಕ ತತ್ವಪದಗಳ ಚಾರಿತ್ರಿಕ ಅಧ್ಯಯನ, ಕನ್ನಡದಲ್ಲಿ ಅನುಭಾವ ಸಾಹಿತ್ಯ-ತಾತ್ವಿಕ ಅಧ್ಯಯನ, ಕನ್ನಡದಲ್ಲಿ ಕೀರ್ತನ ಸಾಹಿತ್ಯದ ಸಮಾಜೋ-ಸಾಂಸ್ಕೃತಿಕ ಅಧ್ಯಯನ ಈ ವಿಷಯಗಳ ಕುರಿತು ಅಧ್ಯಯನ ನಡೆಸಬೇಕು. 12 ತಿಂಗಳ ಅವಧಿಯ ಈ ಅಧ್ಯಯನ ಯೋಜನೆಯ ಬಗ್ಗೆ ಆಸಕ್ತ ಯುವ ಸಂಶೋಧನಾರ್ಥಿಗಳು ತಮ್ಮ ವಿದ್ಯಾರ್ಹತೆ, ಸಂಶೋಧನೆಯ ಬಗೆಗಿನ ಅನುಭವ ಹಾಗೂ ತಮ್ಮ ಆಸಕ್ತಿ ಕ್ಷೇತ್ರವನ್ನು ಒಳಗೊಂಡ ವಿವರಗಳನ್ನು ಹಾಗೂ ಆಯ್ಕೆ ಮಾಡಿಕೊಂಡ ವಿಷಯ ಕುರಿತು ಅಧ್ಯಯನ ವ್ಯಾಪ್ತಿ ಮತ್ತು ಅಕರ ಸಾಮಾಗ್ರಿಒಳಗೊಂಡ ಸಂಕ್ಷಿಪ್ತ ಮಾಹಿತಿಯಿರುವ ಸಾರಲೇಖವನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು. ಆಸಕ್ತಿಯಿರುವ 20 ರಿಂದ 55 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಯನ್ನು ಅಧ್ಯಯನ ಕೇಂದ್ರ ಇ-ಮೇಲ್ಗೆ ಅಥವಾ ಅಂಚೆ ಮೂಲಕ ಕಳುಹಿಸಬಹುದು. ಅರ್ಜಿ ಸಲ್ಲಿಸಲು…
ಮಡಿಕೇರಿ ಏ.16 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇದೇ ಏಪ್ರಿಲ್, 26 ರಿಂದ 45 ದಿನಗಳ ಕಾಲ 7 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಈ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ ಸಂಬಂಧಿಸಿದಂತೆ ಎಲ್ಲರೂ ಎಚ್ಚರವಹಿಸಬೇಕು. ಆ ನಿಟ್ಟಿನಲ್ಲಿ ಶೇಕಡಾವಾರು ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ರೈತರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸುವಲ್ಲಿ ಎಲ್ಲರೂ ಮುಂದಾಗಬೇಕು. ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕಾ ಅಭಿಯಾನ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರಾದ ಡಾ.ಲಿಂಗರಾಜ ದೊಡ್ಡಮನಿ ಮಾತನಾಡಿ, ಕಾಲುಬಾಯಿ ರೋಗವು ವೈರಾಣುನಿಂದ ಬರುವ ಅಂಟು ಜಾಡ್ಯವಾಗಿದ್ದು,…
*ಮೈದಾನ 1* ಬೆಳಿಗ್ಗೆ 9 ಗಂಟೆಗೆ ಕುಪ್ಪಂಡ (ಕೈಕೇರಿ) ಮತ್ತು ನಾಗಂಡ, 10 ಗಂಟೆಗೆ ಮತ್ರಂಡ ಮತ್ತು ಅಮ್ಮಂಡ, 11 ಗಂಟೆಗೆ ಅನ್ನಾಡಿಯಂಡ ಮತ್ತು ಪರದಂಡ, ಮಧ್ಯಾಹ್ನ 12 ಗಂಟೆಗೆ ಬೊಳ್ಳೇರ ಮತ್ತು ಮುಕ್ಕಾಟಿರ (ಬೊಂದ), 1 ಗಂಟೆಗೆ ಪಡೆಯಂಡ ಮತ್ತು ಐನಂಡ, 2 ಗಂಟೆಗೆ ಕನ್ನಂಡ ಮತ್ತು ಚೇದಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ನೆಲ್ಲಮಕ್ಕಡ ಮತ್ತು ಮುಕ್ಕಾಟಿರ (ಕಡಗದಾಳು), 10 ಗಂಟೆಗೆ ಕುಂಡ್ಯೋಳಂಡ ಮತ್ತು ನಾಪಂಡ, 11 ಗಂಟೆಗೆ ಕೇಲೇಟಿರ ಮತ್ತು ಕೋಳೆರ, ಮಧ್ಯಾಹ್ನ 1 ಗಂಟೆಗೆ ಚೆಕ್ಕೇರ ಮತ್ತು ಶಾಂತೆಯಂಡ, 2 ಗಂಟೆಗೆ ಕೂತಂಡ ಮತ್ತು ಅಲ್ಲಪಂಡ, 3 ಗಂಟೆಗೆ ಕುಲ್ಲಚಂಡ ಮತ್ತು ಪೆಮ್ಮಂಡ
ಮಡಿಕೇರಿ ಏ.16 NEWS DESK : ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲಾ ಫೈಝಿ ಹಾಗೂ ಜಿಲ್ಲಾ ಜಮಾಯತ್ ಉಲಮಾ ಅಧ್ಯಕ್ಷ ಸೈಯ್ಯದ್ ಶಿಹಾಬುದ್ದೀನ್ ಹೈದ್ರೋಸಿ ಅವರುಗಳ ನೇತೃತ್ವದಲ್ಲಿ, ಜಿಲ್ಲಾ ಸುನ್ನಿ ಸಮನ್ವಯ ಸಮಿತಿಯ ಮಾರ್ಗದರ್ಶನದಲ್ಲಿ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಗಾಂಧಿ ಮೈದಾನದವರೆಗೆ ಘೋಷಣೆಗಳ ಸಹಿತ ಪ್ರತಿಭಟನಾ ಮೆರವಣಿಗೆ ನಡೆಯಿತು. ವಕ್ಫ್ ತಿದ್ದುಪಡಿ ಮಸೂದೆಗೆ ಪ್ರತಿಭಟನಾಕಾರರು ತೀವ್ರ ವಿರೋಧ ವ್ಯಕ್ತಪಡಿಸಿದರು. ಪಕ್ಷಾತೀತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅಪಾರ ಸಂಖ್ಯೆಯ ಮುಸ್ಲಿಂ ಬಾಂಧವರು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದೆಂದು ಒತ್ತಾಯಿಸಿದರು. ಗಾಂಧಿ ಮೈದಾನದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲಾ ಫೈಝಿ, ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಲ್ಲಿ ಅದು ಮುಸ್ಲಿಂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುತ್ತದೆ. ಅಲ್ಲದೆ ದೇವರ ಹೆಸರಿನಲ್ಲಿ ವಕ್ಫ್ಗೆ ನೀಡಿದ…
ಮಡಿಕೇರಿ ಏ.16 NEWS DESK : ಮಡಿಕೇರಿ ತಾಲ್ಲೂಕು ಕಚೇರಿಯಲ್ಲಿ ಕಡತಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದ್ದು, ಅಧಿಕಾರಿಗಳು ಆಯಾ ಕಡತಗಳಿಗೆ ಯಾವ ಯಾವ ದಾಖಲೆಗಳನ್ನು ತರಬೇಕು ಎನ್ನುವುದರ ಕುರಿತು ಸಾರ್ವಜನಿಕವಾಗಿ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಮಾಹಿತಿಯ ಕೊರತೆಯಿಂದಾಗಿ ಮಡಿಕೇರಿ ತಾಲ್ಲೂಕು ಕಚೇರಿಗೆ ಸಾರ್ವಜನಿಕರು ನಿತ್ಯ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವುದಕ್ಕೆ ಪ್ರಮುಖ ಕಾರಣ ವಿವಿಧ ಕಡತಗಳ ಅರ್ಜಿಗಳಿಗೆ ಬೇಕಾಗಿರುವ ದಾಖಲೆಗಳ ಮಾಹಿತಿಯ ಕೊರತೆ. ಅಲ್ಲದೆ ಲಂಚಕ್ಕಾಗಿ ಕಡತ ವಿಲೇವಾರಿ ವಿಳಂಬವಾಗುತ್ತಿದೆ ಎನ್ನುವ ಸಂಶಯ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರು ನೂತನ ತಾಲ್ಲೂಕು ಕಚೇರಿ ಕಟ್ಟಡದಲ್ಲಿ ಯಾವ ಅರ್ಜಿಗೆ ಯಾವ ದಾಖಲೆಗಳನ್ನು ತರಬೇಕು ಮತ್ತು ಯಾವ ಅರ್ಜಿ ಎಷ್ಟು ದಿನಗಳಲ್ಲಿ ವಿಲೇವಾರಿಯಾಗುತ್ತದೆ ಎನ್ನುವ ಬಗ್ಗೆ ಬಹಿರಂಗವಾಗಿ ಫಲಕಗಳನ್ನು ಅಳವಡಿಸಬೇಕು. ಈ ಕ್ರಮದಿಂದ…
ಮಡಿಕೇರಿ ಏ.16 NEWS DESK : ಮಡಿಕೇರಿಯ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಏ.18 ಮತ್ತು 19ರಂದು ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ನಡೆಯಲಿದೆ. ಕೇರಳದ ಶ್ರೀ ಈಶ್ವರ ನಂಬೂದರಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಏ.18ರಂದು ಸಂಜೆ 6 ಗಂಟೆಗೆ ಆಚಾರ್ಯರ ಆಗಮನ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆಯಾಗಲಿದೆ. ಸಂಜೆ ದೇವಾಲಯ ಸಮಿತಿ ವತಿಯಿಂದ ಶ್ರೀ ಕಂಚಿ ಕಾಮಾಕ್ಷಿಯಮ್ಮ ಹಾಗೂ ಶ್ರೀ ಮುತ್ತು ಮಾರಿಯಮ್ಮ ದೇವಿಯ ಮೂಲ ವಿಗ್ರಹಗಳಿಗೆ ಸ್ವರ್ಣ ಕಾಸಿನ ಮಾಲೆಯನ್ನು ಸಮರ್ಪಿಸಲಾಗುವುದು. ಏಪ್ರಿಲ್ 19 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಮಹಾ ಗಣಪತಿ ಹೋಮ, ಐಕ್ಯಮತ್ಯ ಸುಕ್ರದ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಮತ್ತು ಮಹಾ ಮಂಗಳಾರತಿ ನೆರವೇರಲಿದೆ. ನಂತರ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯಾಗಲಿದೆ.






