ಲೇಖಕ: admin

ಮಡಿಕೇರಿ ಏ.16 NEWS DESK : ಅರೆಭಾಷೆ ಉಳಿದರೆ ಮಾತ್ರ ಅರೆಭಾಷೆ ಸಂಸ್ಕೃತಿ, ಸಮಾಜ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ತಮ್ಮದೇ ಆದ ವಿಭಿನ್ನ ಸಂಸ್ಕೃತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿಕೊಂಡು ಬಂದಿರುವ ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದ್ದಾರೆ.   ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಭಾಗಮಂಡಲ ನಾಡಗೌಡ ಸಮಾಜ, ಕರಿಕೆ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡಗೌಡ ಯುವ ಒಕ್ಕೂಟ ಮತ್ತು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ಇವರ ಸಹಯೋಗದಲ್ಲಿ ಭಾಗಮಂಡಲದ ಮಾರುಕಟ್ಟೆ ಆವರಣದಲ್ಲಿ ಮಂಗಳವಾರ ನಡೆದ ‘ಅರೆಭಾಷೆ ಗಡಿನಾಡ ಉತ್ಸವ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಅರೆಭಾಷಿಕರು ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಅಮರ ಸುಳ್ಯ ಇತಿಹಾಸವು ಇದಕ್ಕೆ ಸಾಕ್ಷಿಯಾಗಿದೆ. ಆ ನಿಟ್ಟಿನಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು.  ಮುಂದಿನ ಒಂದು ಶತಮಾನದಲ್ಲಿ ಕನ್ನಡ ಭಾಷೆ ಮಾತನಾಡುವವರ ಸಂಖ್ಯೆ…

Read More

ಸೋಮವಾರಪೇಟೆ ಏ.16 NEWS DESK : ತಾಲ್ಲೂಕಿನ ಗೆಜ್ಜೆಹಣಕೋಡು ಗ್ರಾಮದ ಸೋಮೇಶ್ವರ ದೇವಾಲಯದ ವಾರ್ಷಿಕ ಸುಗ್ಗಿ ಹಬ್ಬ ದೇವಾಲಯದ ಆವರಣದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಪೂಜೆಯ ಮೊದಲ ದಿನ ಗ್ರಾಮದ ಭಕ್ತಾಧಿಗಳೆಲ್ಲರೂ ಒಂದೆಡೆ ಸೇರಿ ಪರೇವು ( ಅನ್ನದಾಸೋಹ ) ನಡೆಸಿಕೊಟ್ಟರು. ಮರು ದಿನ ಸೋಮವಾರ ದೇವರಿಗೆ ರುದ್ರಾಭಿಷೇಕ, ಸಂಜೆ ಮೆರೆ ಬಸವಣ್ಣ ಮೂರ್ತಿಯನ್ನು ದೇವಾಲಯದ ಹೊರಗೆ ತಂದು ಪ್ರದಕ್ಷಿಣೆಯೊಂದಿಗೆ ದೊಡ್ಡ ಪೂಜೆ ಹಾಗೂ ಮಂಗಳಾರತಿ ನೆರವೇರಿಸಲಾಯಿತು. ಕೊನೆ ದಿನ ಮಂಗಳವಾರ ದೇವರಿಗೆ ಗಂಗಾ ಸ್ನಾನ ನೆರವೇರಿಸಲಾಯಿತು. ಇದೇ ಸಂದರ್ಭ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹಲವು ಭಕ್ತರು ಕೆಂಡ ಸ್ನಾನದಲ್ಲಿ ಪಾಲ್ಗೊಂಡರು. ಬಳಿಕ ಕೆಂಡ ಕೊಂಡ ಪೂಜೆಯೊಂದಿಗೆ ಕೊಂಡ ಹಾಯುವುದು. ದೇವಾಲಯದ ಸುತ್ತಲೂ ಮೂರು ಸುತ್ತು ಪ್ರದಕ್ಷಿಣೆಯ ನಂತರ ದೇವರಿಗೆ ಈಡುಗಾಯಿ ಹಾಕಿ ದೇವಾಲಯದ ಒಳಗೆ ಬರಮಾಡಿಕೊಂಡು ಭಕ್ತರಿಂದ ಹಣ್ಣು ಕಾಯಿ ಪೂಜೆ ನಡೆಯಿತು. ದೇವಾಲಯದ ಅರ್ಚಕ ಸಿದ್ದಲಿಂಗಸ್ವಾಮಿ ಹಾಗೂ ಊರಿನ ಹಿರಿಯ ಜಂಗಮರಾದ ಜಿ.ಇ.ತಮ್ಮಯ್ಯ ಅವರಿಂದ ಪೂಜೆ ನೆರವೇರಿತು. ಈ ಸಂದರ್ಭ…

Read More

ಸುಂಟಿಕೊಪ್ಪ NEWS DESK ಏ.15 : ಕಂಬಿಬಾಣೆಯ ಕಾಫಿ ತೋಟವೊಂದರಲ್ಲಿ ಕಾಡಾನೆಯೊಂದರ ಮೃತದೇಹ ಪತ್ತೆಯಾಗಿದೆ. ಸೋಲಾರ್ ತಂತಿ ಸ್ಪರ್ಷಗೊಂಡು ಆನೆ ಸಾವನ್ನಪ್ಪಿರಬಹುದೆಂದು ಸಂಶಯ ವ್ಯಕ್ತವಾಗಿದೆ. 20 ವರ್ಷದ ಹೆಣ್ಣಾನೆಯ ಮೃತದೇಹ ಕೊಳೆತು ದುರ್ವಾಸನೆ ಬರುತ್ತಿದ್ದು, ಒಂದು ವಾರದ ಹಿಂದೆ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ನಿಖರ ಕಾರಣ ತಿಳಿದು ಬರಲಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಆರ್‌ಎಫ್‌ಓ, ಸಿಬ್ಬಂದಿಗಳು, ಡಿವೈಎಸ್‌ಪಿ ಗಂಗಾಧರಪ್ಪ, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಜಗದೀಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ NEWS DESK ಏ.15 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 31 ನೇ ವರ್ಷದ ಎಡಮ್ಯಾರ್ – 1 ನ್ನು ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆಯ ಮೂಲಕ ಆಚರಿಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಆರ್‌ಎಂಸಿ ಯಾರ್ಡ್ನಿಂದ ಬಸ್ ನಿಲ್ದಾಣದವರೆಗೆ ಮುಖ್ಯ ಬೀದಿಗಳಲ್ಲಿ ಪಂಜಿನ ಮೆರವಣಿಗೆಯಲ್ಲಿ ಸಾಗಿದ ಸದಸ್ಯರು ಕೊಡವ ಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದರು. ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು ಪೊಂಬೊಳಕ್ ಮೆರವಣಿಗೆ ಆಚರಣೆಯು ಆದಿಮಸಂಜಾತ ಕೊಡವ ಜನಾಂಗೀಯ ಸಮುದಾಯದ ಶ್ರೀಮಂತ ಪರಂಪರೆ ಮತ್ತು ಕಾನೂನು ಬದ್ಧ ಸಾಂವಿಧಾನಿಕ ಹಕ್ಕುಗಳ ಕುರಿತು ಜಗತ್ತಿಗೆ ತಿಳಿಸುವ ಉದ್ದೇಶವಾಗಿದೆ ಎಂದರು. ಕೊಡವ ಜನಾಂಗೀಯ ಸಮುದಾಯ ಪಂಚಾಂಗದ ಪ್ರಕಾರ ಸೌರಮಾನ ಕ್ಯಾಲೆಂಡರ್ ಕೊಡವ ಬುಡಕಟ್ಟಿನ ಹೊಸ ವರ್ಷ ಅಂದರೆ ಎಡಮ್ಯಾರ್-1 ಗ್ರೆಗೋರಿಯನ್ ಕ್ಯಾಲೆಂಡರ್ ಗೆ ಹೊಂದಿಕೆಯಾಗುತ್ತದೆ. ಎಡಮ್ಯಾರ್-1 ಕೊಡವ ಜನಾಂಗದ ಸೌರಮಾನ ಹೊಸ ವರ್ಷವನ್ನು ಪ್ರಕೃತಿಯ ಚಕ್ರದಲ್ಲಿ ಮೊದಲ ಹಬ್ಬವೆಂದು ಪರಿಗಣಿಸಲಾಗಿದೆ. ಕೊಡವ ಮಂಗಳಕರ ಹೊಸ…

Read More

ಮಡಿಕೇರಿ ಏ.15 NEWS DESK : ಮಡಿಕೇರಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ  11 ಕೆ.ವಿ ಎಫ್1 ಕೋಟೆ ಮಾರ್ಗದಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಂಡಿರುವುದರಿಂದ ಏಪ್ರಿಲ್, 16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.

Read More

ಮೈದಾನ 1 ::  ಬೆಳಿಗ್ಗೆ 8.30 ಗಂಟೆಗೆ ಮಂಡೇಟಿರ ಮತ್ತು ಚಂಗುಲಂಡ, 9.30 ಗಂಟೆಗೆ ಕಳ್ಳಿಚಂಡ ಮತ್ತು ಮಚ್ಚಾರಂಡ, 10.30ಕ್ಕೆ ಕೊಂಗಂಡ ಮತ್ತು ಕಂಬೀರಂಡ, 11.30ಕ್ಕೆ ಬಾಳೆಯಡ ಮತ್ತು ಕೋಣೇರಿರ, ಮಧ್ಯಾಹ್ನ 12.30ಕ್ಕೆ ಇಟ್ಟಿರ ಮತ್ತು ಕಂಬೆಯಂಡ, 1.30 ಗಂಟೆಗೆ ಕಾಂಡಂಡ ಮತ್ತು ನುಚ್ಚಿಮಣಿಯಂಡ, 2.30ಕ್ಕೆ ಮಲ್ಲಂಡ ಮತ್ತು ಕುಲ್ಲೇಟಿರ ಮೈದಾನ 2 ::  ಬೆಳಿಗ್ಗೆ 8.30ಕ್ಕೆ ಮಾದಂಡ ಮತ್ತು ಮದ್ರೀರ, 9.30 ಗಂಟೆಗೆ ಪಳಂಗಂಡ ಮತ್ತು ಮೇಚಿಯಂಡ, 10.30 ಗಂಟೆಗೆ ಬೊಳ್ಳಂಡ ಮತ್ತು ವಾಟೇರಿರ, 11.30ಕ್ಕೆ ಕೆಚೇಟಿರ (ಕಡಗದಾಳು) ಮತ್ತು ಬೊಟ್ಟೋಳಂಡ, ಮಧ್ಯಾಹ್ನ 12.30 ಗಂಟೆಗೆ ಕನ್ನಂಡ ಮತ್ತು ಕೋಡೀರ, 1.30ಕ್ಕೆ ಚೇಂದಂಡ ಮತ್ತು ಬಡುವಮಂಡ

Read More

*ಮೈದಾನ 1* ಚೆರುವಾಳಂಡ ಮತ್ತು ಸಣ್ಣುವಂಡ ತಂಡಗಳ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ಸಣ್ಣುವಂಡ ಗೆಲುವು ದಾಖಲಿಸಿತು. ಸಣ್ಣುವಂಡ ಪರ ಯತಿಕ್ ಅಯ್ಯಪ್ಪ ಹ್ಯಾಟ್ರಿಕ್ ಗೋಲು ದಾಖಲಿಸಿದರೆ, ಪೂವಯ್ಯ 1 ಗೋಲು ಬಾರಿಸಿದರು. ಚೆರುವಾಳಂಡ ಪರ ಸಬ್ಬಯ್ಯ 1 ಗೋಲು ದಾಖಲಿಸಿ, ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಸೋಮೆಯಂಡ ಮತ್ತು ಅಲ್ಲಾರಂಡ ನಡುವಿನ ಪಂದ್ಯದಲ್ಲಿ 5-1 ಗೋಲುಗಳ ಅಂತರದಲ್ಲಿ ಸೋಮೆಯಂಡ ತಂಡ ಗೆಲುವು ದಾಖಲಿಸಿತು. ಸೋಮೆಯಂಡ ಪರ ಅಪ್ಪಚ್ಚು ಭರ್ಜರಿ 4 ಗೋಲು ದಾಖಲಿಸಿದರೆ, ಅಪ್ಪಯ್ಯ 1 ಗೋಲು ಬಾರಿಸಿದರು. ಅಲ್ಲಾರಂಡ ಪರ ಗೌತಮ್ ಗಣಪತಿ 1 ಗೋಲು ಬಾರಿಸಿ, ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಓಡಿಯಂಡ ಮತ್ತು ಕಲಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಕಲಿಯಂಡ ಜಯ ಸಾಧಿಸಿತು. ಕಲಿಯಂಡ ಪರ ಭರತ್, ದೇಶ್ ಮುತ್ತಣ್ಣ, ಚಿರಂತ್, ಚಿಣ್ಣಪ್ಪ ಹಾಗೂ ಕಿರಣ್ ತಲಾ 1 ಗೋಲು ದಾಖಲಿಸಿದರು. ಓಡಿಯಂಡ ಪೃಥ್ವಿ…

Read More

ಮಡಿಕೇರಿ ಏ.15 NEWS DESK : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ಶಿವಮೊಗ್ಗ ನೇತೃತ್ವದ ಕೊಡಗು ಜಿಲ್ಲಾ ಸಮಿತಿಯಿಂದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯ ಅಂಗವಾಗಿ ಪುಷ್ಪ ನಮನ ಸಲ್ಲಿಸಲಾಯಿತು. ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿರಾಜಪೇಟೆ ತಾಲ್ಲೂಕು ಹಾಗೂ ಪೊನ್ನಂಪೇಟೆ ತಾಲ್ಲೂಕು ಸಂಯುಕ್ತ ಆಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಮಿತಿಯ ಸಂಚಾಲಕಿ ಗಾಯತ್ರಿ ನರಸಿಂಹ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಬೆಂಗಳೂರಿನ ಡಾ.ಬಾಬು ಜಗಜೀವನ್ ರಾಮ್ ಸಂಶೋಧನಾ ಕೇಂದ್ರ ಸುಮನಹಳ್ಳಿ ಮಾಗಡಿರಸ್ತೆಯಲ್ಲಿ ಏ.23 ರಂದು ನಡೆಯಲಿರುವ ‘ಕೋಮುವಾದ ಧಿಕ್ಕರಿಸಿ, ಸಂವಿಧಾನ ರಕ್ಷಿಸಿ ದಲಿತರ ಅಭಿವೃದ್ಧಿಗಾಗಿ’, “ಜನಕ್ರಾಂತಿ ಸಮಾವೇಶ” ಬೆಂಗಳೂರು ಚಲೋ ಕಾರ್ಯಕ್ರಮದ ಕರಪತ್ರ ಬಿಡುಗಡೆ ಮಾಡಿ, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ದಲಿತ ಬಂಧುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವೀಗೊಳಿಸಬೇಕೆಂದು ಮನವಿ ಮಾಡಿದರು.…

Read More

ಮಡಿಕೇರಿ ಏ.15 NEWS DESK : ಕೊಡಗು ಪ್ರೆಸ್ ಕ್ಲಬ್ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಹಾಗೂ ಸದಸ್ಯತ್ವ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಏ.25 ಕೊನೆ ದಿನ ಎಂದು ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯ ಸದಸ್ಯರಾಗುವವರು ಕಡ್ಡಾಯವಾಗಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ/ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರಬೇಕು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ/ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಪಡೆಯದಿದ್ದರೇ ಕ್ಲಬ್‍ನ ಆಜೀವ ಸದಸ್ಯತ್ವ ಮತ್ತು ಸಾಮಾನ್ಯ ಸದಸ್ಯತ್ವ ರದ್ದಗಲಿದೆ. ಏ.28 ರಂದು ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಆಡಳಿತ ಮಂಡಳಿ ಸಭೆಯಲ್ಲಿ ಸದಸ್ಯತ್ವ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಏ.15 NEWS DESK : ಮಡಿಕೇರಿಯ ಹಿಂದೂ ಮಲಯಾಳಿ ಸಂಘದ ವತಿಯಿಂದ ವಿಷು ಕಣಿ ಹಾಗೂ ವಿಷು ಕೈನೀಟಂ ಆಚರಣೆ ಅರ್ಥಪೂರ್ಣವಾಗಿ ನಡೆಯಿತು. ವಿಷು ಹಬ್ಬಕ್ಕೆ ಮುಖ್ಯವಾಗಿ ಬೇಕಾಗಿರುವ (ಕೊನ್ನ ಪೂ) ಹೊನ್ನೇ ಹೂವನ್ನು ಇದೇ ಸಂದರ್ಭ ವಿತರಿಸಲಾಯಿತು. ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಹರಿಹರ ಸರ್ವಿಸ್ ಸ್ಟೇಷನ್ ಆವರಣದಲ್ಲಿ ಮಲಯಾಳಿ ಬಂಧುಗಳು ಹಬ್ಬದ ಸಡಗರವನ್ನು ಹಂಚಿಕೊಂಡರು.  ಮಡಿಕೇರಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ಮಾತನಾಡಿ ಹಬ್ಬಗಳ ಆಚಾರ ವಿಚಾರಗಳನ್ನು ಮಕ್ಕಳಿಗೆ ತಿಳಿ ಹೇಳುವ ಮೂಲಕ ನಮ್ಮ ಸಂಪ್ರದಾಯವನ್ನು ಮುಂದಿನ ಪೀಳಿಗೆ ಮುಂದುವರೆಸಿಕೊಂಡು ಹೋಗುವಂತೆ ನೋಡಿಕೊಳ್ಳಬೇಕು ಎಂದರು. ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸಿ ಗುರು ಹಿರಿಯರಿಗೆ ಗೌರವ ನೀಡುವುದನ್ನು ಕಲಿಸಬೇಕು. ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂದು ಕರೆ ನೀಡಿದ ಅವರು, ವಿಷು ಆಚರಣೆಯ ಕುರಿತು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸಂಘದ ಜಿಲ್ಲಾ ಉಪಾಧ್ಯಕ್ಷ ಹಾಗೂ ಶ್ರೀಮುತ್ತಪ್ಪ ದೇವಾಲಯದ ಅಧ್ಯಕ್ಷರಾದ ಟಿ.ಕೆ.ಸುಧೀರ್ ಹೊಸ ವರ್ಷ…

Read More