ಲೇಖಕ: admin

ಮಡಿಕೇರಿ ಏ.15 NEWS DESK : ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕದ ವತಿಯಿಂದ ಏ.16 ರಂದು ಅರಣ್ಯ ಇಲಾಖೆಯೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.  ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್ ಕುಮಾರ್ ವಹಿಸಲಿದ್ದಾರೆ.  ಶಾಸಕರಾದ  ಡಾ.ಮಂತರ್ ಗೌಡ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ  ಹೆಚ್.ಟಿ.ಅನಿಲ್ ಭಾಗಿಯಾಗಲಿದ್ದಾರೆ.

Read More

ಮಡಿಕೇರಿ ಏ.15 NEWS DESK : ಕಾಂತೂರು-ಮೂರ್ನಾಡು ಐಕಾನಿಕ್ ಬ್ರದರ್ಸ್ ವತಿಯಿಂದ ಕೊಡಗು ಗೌಡ 4ನೇ ವರ್ಷದ ವಾಲಿಬಾಲ್ ಪಂದ್ಯಾವಳಿ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು. ಉಳುವಾರನ ಆಟದ ಬಾಣೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಕ್ರೀಡೆಯನ್ನು ನಡೆಸುವುದರಿಂದ ಜನಾಂಗದ ಒಗ್ಗಟ್ಟಿಗೆ ಸಹಕಾರಿಯಾಗಿದೆ. ಉತ್ತಮ ಗುರಿ ಮುಟ್ಟಲು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮ ಮುಖ್ಯ ಎಂದು ಹೇಳಿದರು. ಮಠದ ಮನೆ ಧನಂಜಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ಮನಸ್ಸು ಉಲ್ಲಾಸವಾಗುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮವಾಗಿ ಕಾಣಬೇಕು ಎಂದು ಹೇಳಿದರು. ಸಮಾರೋಪ ಸಮಾರಂಭದಲ್ಲಿ ಮಾಜಿ ಸಭಾಪತಿ ಕೊಂಬಾರನ ಜಿ.ಬೋಪಯ್ಯ ಮಾತನಾಡಿ, ಕ್ರೀಡೆಯನ್ನು ನಡೆಸುವುದರಿಂದ ಯುವ ಪ್ರತಿಭೆಗಳಿಗೆ ಪ್ರತಿಭಾ ಅನಾವಣಗೊಳಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಬಾಳಾಡಿ ಮನೋಜ್ ಮಾತನಾಡಿ, ಒಂದು ತಂಡವು ಒಟ್ಟಾಗಿ ಆಡುವುದರಿಂದ ಯಶಸ್ಸು ಲಭಿಸುತ್ತದೆ. ಯುವ ಜನಾಂಗ ತಮ್ಮ ಪ್ರತಿಭೆಯನ್ನು ಹೊರಹಾಕಲು ಉತ್ತಮ ಅವಕಾಶವಾಗಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮ…

Read More

ಮಡಿಕೇರಿ NEWS DESK ಏ.15 : ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗರಗಂದೂರಿನಲ್ಲಿ ನಡೆದಿದೆ. ಸೋಮವಾರಪೇಟೆ ಬಳಿಯ ನಗರೂರು ಗ್ರಾಮದ ಯೋಗೇಶ್(25) ಮೃತ ದುರ್ದೈವಿ. ಸ್ನೇಹಿತನೊಂದಿಗೆ ಮೀನು ಹಿಡಿಯಲೆಂದು ಹಿನ್ನೀರಿಗೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಏ.15 NEWS DESK : ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ವಿವಿಧ ಗೌಡ ಸಮಾಜಗಳ ಒಕ್ಕೂಟಗಳ ಸಹಯೋಗದೊಂದಿಗೆ ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಆಯೋಜನೆಗೊಂಡ ಅರೆಭಾಷೆ ಗಡಿನಾಡ ಉತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಕರಿಕೆ ಗೇಟ್ ಬಳಿಯಿಂದ ಉತ್ಸವದ ಸಭಾಂಗಣದ ತನಕ ಮೆರವಣಿಗೆಯಲ್ಲಿ ಇತರ ಗಣ್ಯ ಅತಿಥಿಗಳೊಂದಿಗೆ ಹೆಜ್ಜೆ ಹಾಕಿದ ಶಾಸಕರು, ಬಳಿಕ ಸಾಂಪ್ರದಾಯಿಕ ವಸ್ತು ಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಅರೆಭಾಷೆ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅಕಡೆಮಿಯ ಮೇಲೆ ಗುರುತರವಾದ ಜವಾಬ್ದಾರಿ ಇದ್ದು, ಇದೇ ರೀತಿಯ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಾಷೆ ಹಾಗೂ ಸಂಸ್ಕೃತಿಯ ಏಳಿಗೆಗೆ ಶ್ರಮಿಸುವಂತೆ ಕರೆ ನೀಡಿದರು. ವಿಶಿಷ್ಟವಾದ ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ ಅರೆಭಾಷಿಕರು ಕೊಡಗು ಹಾಗೂ ದಕ್ಷಿಣ ಕನ್ನಡ ಭಾಗದಲ್ಲಿ ಸಾಂಸ್ಕೃತಿಕವಾಗಿ, ರಾಜಕೀಯವಾಗಿ ಮತ್ತು ಹತ್ತು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ…

Read More

ಸಿದ್ದಾಪುರ ಏ.15 NEWS DESK : ಡಾ‌.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯನ್ನು ಸಿದ್ದಾಪುರದ ಬಿಜೆಪಿ ಶಕ್ತಿ ಕೇಂದ್ರದ‌ ‌ ವತಿಯಿಂದ ‌ಆಚರಿಸಲಾಯಿತು. ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಕಾರ್ಯಕರ್ತರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ರೊಪೇಶ್, ಗ್ರಾ.ಪಂ ಸದಸ್ಯ ಆನಂದ, ರೀನಾತುಳಸಿ, ಡಿಜಿತ್, ಜಯಂತ್, ಹರೀಶ್, ಮಣಿ, ಶಾಜಿ, ಅನೀಲ್ , ಮೋಹನ್, ಅಜಿ ಅಯ್ಯಪ್ಪ, ಸುರೇಶ್ ಗುಹ್ಯ ಇನ್ನಿತರರು‌ ಉಪಸ್ಥಿತರಿದ್ದರು.

Read More

ಕುಶಾಲನಗರ, ಏ.15 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್.ಘಟಕ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಶಾಲಾ ಘಟಕದ ವತಿಯಿಂದ ಡಾ.ಬಿ.ಆರ್.‌ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯನ್ನು  ಏರ್ಪಡಿಸಲಾಗಿತ್ತು.  ಡಾ ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತು ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್,  ಭಾರತೀಯ ಬಹುಮುಖಿ ಪ್ರತಿಭೆಯ ಅವರ ದಾರ್ಶನಿಕ ವಿಧಾನಕ್ಕೆ ಹೆಸರುವಾಸಿಯಾದ ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ಅವರು ಭಾರತದ ಸಂವಿಧಾನವನ್ನು ರಚಿಸಿದ ಸಮಾಜ ಸುಧಾರಕ,  ಅವರ ನ್ಯಾಯಶಾಸ್ತ್ರಜ್ಞ ಮತ್ತು ಅರ್ಥಶಾಸ್ತ್ರಜ್ಞರ ಆಲೋಚನೆಗಳು ಎಲ್ಲರ ಮೇಲೆ ಪ್ರಭಾವ ಬೀರುತ್ತವೆ. ಸಮಾನತೆ ಮತ್ತು ಸಾಮಾಜಿಕ ಉನ್ನತೀಕರಣವನ್ನು ತರಲು ತಮ್ಮ ಇಡೀ ಜೀವನವನ್ನು  ಮುಡಿಪಾಗಿಟ್ಟದ್ದರು ಎಂದು ಹೇಳಿದರು. ಡಾ. ಅಂಬೇಡ್ಕರ್ ಅವರ ಜೀವನ, ದೇಶಕ್ಕೆ ಅವರ ಕೊಡುಗೆ ಮತ್ತು ಎಲ್ಲರಿಗೂ ನಿಜವಾದ ಸಮಾನ ಸಮಾಜವನ್ನು ಸಾಧಿಸುವ ಪರಿಹಾರದ ಅವಲೋಕನವನ್ನು ಒದಗಿಸುತ್ತದೆ ಎಂದರು. ಡಾ ಬಿ.ಆರ್ ಅಂಬೇಡ್ಕರ್ ಸರ್ವರಿಗೂ ಸಮಾನವಾಗಿ ಬದುಕು ಕಲ್ಪಿಸುವುದೇ…

Read More

ವಿರಾಜಪೇಟೆ ಏ.15 NEWS DESK : ಕಲಾವಿಧನ ಬದುಕು ಅನೇಕ ಏರು ಇಳಿತಗಳನ್ನು ಕಂಡು ಸಾಗುತ್ತದೆ. ಆದರೆ ಬದುಕಿನಲ್ಲಿ ಸಾಧಿಸಿರುವ ಸಾಧನೆಯು ಯುಗಯುಗಳು ಕಳೆದರು ಶಾಶ್ವತವಾಗಿ ನೆಲೆ ನಿಲ್ಲುತ್ತದೆ ಇದಕ್ಕೆ ಸಾಕ್ಷಿ ದಿ.ಆಪಾಡಂಡ ರಘು ಎಂದು ಕೊಡವ ಸಾಹಿತ್ಯ ಆಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಹೇಳಿದರು. ಕೊಡಗು ಜಿಲ್ಲಾ ಕಲಾವಿದರ ಸಂಘ ಮಡಿಕೇರಿ ಕೊಡಗು ಜಿಲ್ಲೆ ವತಿಯಿಂದ ವಿರಾಜಪೇಟೆ ನಗರದ ನಿಸರ್ಗ ಬಡಾವಣೆಯ ಕೆ.ಕೆ.ಗ್ರೂಪ್ ಖಾಸಾಗಿ ಕಟ್ಟಡ ಸಭಾಂಗಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ದಿ.ಆಪಾಡಂಡ ಟಿ. ರಘು ಅವರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಹಲವು ಕಲಾವಿದರಿಗೆ ಆಶ್ರಯ ಕರುಣಿಸಿ ಕೊಡವ ಧಿಮಂತ ಸಂಸ್ಕøತಿಯನ್ನು ವಿಶ್ವದ ಎಲ್ಲೆಡೆ ಧಾರವಾಹಿ ಮೂಲಕ ಭಿತ್ತರಿಸಿದ ಕೀರ್ತಿ ರಘು ಅವರಿಗೆ ಸಲ್ಲುತ್ತದೆ. ಮನುಜ ಸತ್ತರು ಕಲೆಯು ಎಂದಿಗೂ ಜೀವಂತವಾಗಿರುತ್ತದೆ. ಕೊಡಗಿನಲ್ಲಿ ಐನ್ ಮನೆಗಳು ಒಂದಾನೊಂದು ಕಾಲದಲ್ಲಿ ನಶೀಸಿ ಹೋಗುವ ಸ್ಥಿತಿಯಿತ್ತು. ಐನ್ ಮನೆಗಳ ಚಿತ್ರಣ ಐತಿಹಾಸಿಕ ಕ್ಷಣಗಳು…

Read More

ಮಡಿಕೇರಿ ಏ.15 NEWS DESK : ನಗರದ ಶಕ್ತಿ ಆಶ್ರಮಕ್ಕೆ ಕುಕ್ಕರ್ ನ್ನು ಕೊಡುಗೆಯಾಗಿ ನೀಡಲಾಯಿತು. ಸೋಮವಾರಪೇಟೆಯ ಎಂ.ಎ.ರುಬೀನಾ ಶಕ್ತಿ ಆಶ್ರಮಕ್ಕೆ ಅವಶ್ಯಕವಾಗಿದ್ದ ಕುಕ್ಕರ್ ನ್ನು ಕೊಡಗೆಯಾಗಿ ನೀಡಿದರು. 2023ರಲ್ಲಿ ಸೋಮವಾರಪೇಟೆಯ ಜೆಸಿಐ ಸಂಸ್ಥೆಯ ಅಧ್ಯಕ್ಷೆಯಾಗಿ ಒಂದು ವರ್ಷದ ಅವಧಿಯಲ್ಲಿ ಹಲವಷ್ಟು ಸಮಾಜಮುಖಿ ಕೆಲಸ ಕಾರ್ಯ ಮಾಡಿದ್ದು, ಅನಾಥಾಶ್ರಮಕ್ಕೆ ತನ್ನ ಕೈಲಾದ ಸಹಾಯ ಮಾಡುವ ಹಂಬಲದಲಲ್ಲಿದ್ದ ರುಬೀನಾ ರಿಗೆ ಭರವಸೆ ನೀಡಿ ಸಹಕರಿಸಿದ್ದು ತನ್ನ ಪ್ರೌಢಶಾಲೆಯ ತರಗತಿ ಶಿಕ್ಷಕರಾದ ಮನೂಬಾಯಿ  ಸುಮಾರು ಹದಿನೈದು ಸಾವಿರ ವೆಚ್ಚದ ಐವತ್ತು ಲೀಟರಿನ ಕುಕ್ಕರ್ ಕೊಡುಗೆಯಾಗಿ ನೀಡಿ ಸ್ಪಂದಿಸಿದ್ದಾರೆ.  ಈ ಸಂದರ್ಭ  ಚಂದನ್ ನಂದರಬೆಟ್ಟು, ರಿಶಾ ಉಪಸ್ಥಿತರಿದ್ದರು.

Read More

ಮಡಿಕೇರಿ, ಏ.14 NEWS DESK : ನಗರದ ಅಶೋಕಪುರದ ಅನ್ನಪೂರ್ಣೇಶ್ವರಿ ಸಮುದಾಯ ಭವನ ಸಮಿತಿ, ಗಣಪತಿ ಉತ್ಸವ ಸಮಿತಿ ಹಾಗೂ ಅಂಬೇಡ್ಕರ್ ಭವನ ಸಮಿತಿಯ ಜಂಟಿ ಆಶ್ರಯದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಮೆರವಣಿಗೆ ನಡೆಯಿತು.  ನಗರದ ಮಂಗೇರಿರ ಮುತ್ತಣ್ಣ ವೃತ್ತದಿಂದ ಅಂಬೇಡ್ಕರ್ ಭವನದ ತನಕ ಅಲಂಕೃತ ರಥದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಯಿತು. ಪ್ರಮುಖರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ನಾಸಿಕ್ ಬ್ಯಾಂಡ್ ಮೆರವಣಿಗೆಯ ಆಕರ್ಷಣೆಯಾಗಿತ್ತು. ಅನ್ನಪೂರ್ಣೇಶ್ವರಿ ಸಮುದಾಯ ಭವನ ಸಮಿತಿ ಅಧ್ಯಕ್ಷ ಹೆಚ್.ಎಂ.ಜಯರಾಮ್, ಉಪಾಧ್ಯಕ್ಷ ಧರ್ಮೇಂದ್ರ, ಕಾರ್ಯದರ್ಶಿ ಜಯಪ್ರಕಾಶ್, ಅಂಬೇಡ್ಕರ್ ಭವನ ಸಮಿತಿ ಉಪಾಧ್ಯಕ್ಷ ಹೆಚ್.ಆರ್.ಮುತ್ತಪ್ಪ, ಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಎಂ.ಜಿ. ಸುನಿಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Read More

ಮಡಿಕೇರಿ ಏ.15 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಭಾರತದ ಸಂವಿಧಾನದ ಶಿಲ್ಪಿ, ಸಮಾಜ ಪರಿವರ್ತಕ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ, ವಿದ್ಯಾರ್ಥಿಗಳಿಗೆ ಡಾ.ಅಂಬೇಡ್ಕರ್ ಅವರ ತತ್ವಗಳನ್ನು ಅನುಸರಿಸುವ ಮಹತ್ವವನ್ನು ವಿಸ್ತಾರವಾಗಿ ವಿವರಿಸಿದರು. ಸಮಾಜ ಪರಿವರ್ತನೆಯ ಆವಶ್ಯಕತೆ, ಸಮಾನತೆಗೆ ಸಂಬಂಧಿಸಿದ ಪ್ರಬಲ ವಿಚಾರಗಳು ಹಾಗೂ ಅಂಬೇಡ್ಕರ್ ಅವರ ಮಹತ್ವದ ಕೊಡುಗೆ ಕುರಿತಂತೆ ಚರ್ಚಿಸಿದರು. ವಿದ್ಯಾರ್ಥಿಗಳ ಪ್ರಜ್ಞಾವಂತ ಭಾಷಣದಿಂದ ಕಾರ್ಯಕ್ರಮ ಸಾರ್ಥಕ ಹೊಂದಿದೆ, ಇದಕ್ಕೆ ಭಾರತರತ್ನ ಅಂಬೇಡ್ಕರ್ ಅವರೇ ಸ್ಫೂರ್ತಿ ಎಂದರು. ಅಂಬೇಡ್ಕರ್ ಅವರ ಗುರಿಮುಟ್ಟುವ ಇಚ್ಚಾಶಕ್ತಿ ವಿದ್ಯಾರ್ಥಿಗಳಿಗೆ ಬರಬೇಕು. ಕೊಡುಗೆ ನೀಡಿದ ಸಂವಿಧಾನದ ಆಶಯದಂತೆ ಸಮುದಾಯದ ಬೆಳವಣಿಗೆಗೆ ಮಹಿಳೆಯರೂ ಸೇರಿದಂತೆ ಎಲ್ಲರೂ ಅಭಿವೃದ್ಧಿ ಹೊಂದಬೇಕೆಂದರು. 2ನೇ ಬಿ.ಕಾಂ ವಿದ್ಯಾರ್ಥಿನಿ ಹೆಚ್.ಎನ್.ಶ್ರುತಿ ಮಾತನಾಡಿ, ಭಾರತ ರತ್ನ ಅಂಬೇಡ್ಕರ್ ಅವರ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶಿಕ್ಷಣದ ಕುರಿತ ತತ್ವಗಳನ್ನು ವಿವರಿಸಿದರು.…

Read More