ಕುಶಾಲನಗರ, ಏ.15 NEWS DESK : ಕುಶಾಲನಗರದ ವಾಸವಿ ಯುವಜನ ಸಂಘ ಮತ್ತು ಶ್ರೀಮತ್ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ವತಿಯಿಂದ ವಾಸವಿ ಜಯಂತಿ ಅಂಗವಾಗಿ ಕೊಡಗು ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಏ.16 ರಂದು ಕುಶಾಲನಗರದಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಪ್ರವೀಣ್ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕುಶಾಲನಗರದ ಬೈಪಾಸ್ ರಸ್ತೆಯ ವಾಸವಿ ಮಹಲ್ ಹಿಂಭಾಗ ನಡೆಯಲಿದೆ ಎಂದು ತಿಳಿಸಿದರು. ನಮ್ಮ ಸಂಘದ ವತಿಯಿಂದ ಹಲವಾರು ವರ್ಷಗಳಿಂದ ರಕ್ತದಾನ ಶಿಬಿರವನ್ನು ಆಯೋಜಿಸುತ್ತ ಬಂದಿದ್ದೇವೆ. ಮಡಿಕೇರಿಯಲ್ಲಿ ಜಿಲ್ಲಾ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ಇಲ್ಲೇ ಇರುವುದರಿಂದ ಬಹಳಷ್ಟು ಶಸ್ತ್ರಚಿಕಿತ್ಸೆಗಳು ಇಲ್ಲೇ ನಡೆಯುತ್ತದೆ ಮತ್ತು ತುರ್ತು ಪ್ರಥಮ ಚಿಕಿತ್ಸೆ ಸಿಗುತ್ತದೆ. ಇಂತಹ ಸಂದರ್ಭದಲ್ಲಿ ಕೂಡ ರಕ್ತದ ಅವಶ್ಯಕತೆ ಬಹಳ ಇರುತ್ತದೆ. ಹಾಗಾಗಿ ಈ ರಕ್ತದಾನ ಶಿಬಿರಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಪಾಲ್ಗೊಂಡು ಸಹಕರಿಸಬೇಕಾಗಿ ಅವರು ಕೋರಿದರು. ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ವಿ.ವೈಶಾಖ್,…
ಲೇಖಕ: admin
ಮಡಿಕೇರಿ NEWS DESK ಏ.14 : ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಭಾರೀ ಗಾಳಿ ಮಳೆಯಾಗಿದೆ. ಗುಡುಗು ಸಿಡಿಲಿನ ಅಬ್ಬರಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಮಡಿಕೇರಿ ಮತ್ತು ಕುಶಾಲನಗರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಭಾರೀ ಗಾಳಿ ಮಳೆಗೆ ಮರ ವಿದ್ಯುತ್ ತಂತಿಯ ಮೇಲೆ ಬಿದ್ದು, ತಂತಿ ರಸ್ತೆಗೆ ಬಿದ್ದ ಪರಿಣಾಮ ವಿದ್ಯುತ್ ಸ್ಪರ್ಷದಿಂದ ಹಸುವೊಂದು ಬಲಿಯಾದ ಘಟನೆ ಕಶಾಲನಗರ ಸಮೀಪ ಗುಡ್ಡೆಹೊಸೂರಿನಲ್ಲಿ ನಡೆದಿದೆ. ರವಿ ಎಂಬುವವರಿಗೆ ಸೇರಿದ ಹಸು ಇದಾಗಿದೆ. ಕುಶಾಲನಗರ ಮತ್ತು ಕೊಪ್ಪ ಭಾಗದಲ್ಲಿ ಮಳೆಯ ನೀರು ಕೆಲವು ಅಂಗಡಿಗಳಿಗೆ ನುಗ್ಗಿದ ಘಟನೆಯೂ ನಡೆದಿದೆ. ಭಾರೀ ಗಾಳಿ ಮಳೆಗೆ ಅಡಿಕೆ ಮರ ಬಿದ್ದು ಕಾರು ಜಖಂಗೊAಡ ಘಟನೆ ಮಡಿಕೇರಿ ತಾಲ್ಲೂಕಿನ ಆವಂದೂರು ಗ್ರಾಮದಲ್ಲಿ ನಡೆದಿದೆ. ದೇವಾಯಿರ ಸಂತೋಷ್ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಮಡಿಕೇರಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಗುಡುಗು, ಸಿಡಿಲು, ಗಾಳಿ ಸಹಿತ ಮಳೆಯಾಗಿದ್ದು, ವಿದ್ಯುತ್ ಮಾರ್ಗಗಳಿಗೆ ಹಾನಿಯಾಗಿದೆ. ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಸೋಮವಾರಪೇಟೆ,…
ಮಡಿಕೇರಿ ಏ.14 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಭೆ ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿ ಹಾಗೂ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ನಡೆಯಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ ಮಾತನಾಡಿ, ಕಾಲೇಜು ಈಗಾಗಲೇ 75 ವರ್ಷಗಳನ್ನು ಪೂರೈಸಿದ್ದು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳಿಗಾಗಿ ಬಹಳಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಕಾಲೇಜಿನ ಅಭಿವೃದ್ಧಿಗೂ ಬಹಳಷ್ಟು ಸಹಕಾರ ನೀಡಿದ್ದಾರೆ. ಕಾಲೇಜಿನ ಬೆಳವಣಿಗೆಗೆ ಹಳೆಯ ವಿದ್ಯಾರ್ಥಿಗಳ ಕೊಡುಗೆ ಬಹಳ ಮುಖ್ಯವಾಗುತ್ತದೆ ಎಂದರು. ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಕಾಲೇಜನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವುದು ನಮ್ಮ ಮುಖ್ಯ ಉದ್ದೇಶ. ಕಾಲೇಜಿಗೆ ಅಗತ್ಯವಿರುವ ಮೂಲ ಸೌಕರ್ಯಗಳು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ದೊರೆಯಬೇಕು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರೈಸಿದ ವಿದ್ಯಾರ್ಥಿಗಳು ಕಾಲೇಜಿನೊಂದಿಗೆ ನಿಕಟ ಒಡನಾಟ ಹೊಂದಬೇಕು. ಹಳೆ ವಿದ್ಯಾರ್ಥಿ ಸಂಘದ ಸದಸ್ಯತ್ವ ಪಡೆದುಕೊಂಡು ನಮ್ಮೊಂದಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಆ…
*ಮೈದಾನ 1* ಮೇರಿಯಂಡ ಮತ್ತು ಕುಟ್ಟಂಡ (ಅಮ್ಮತ್ತಿ) ನಡುವಿನ ಪಂದ್ಯದಲ್ಲಿ ಪಂದ್ಯದಲ್ಲಿ ತಲಾ 3 ಗೋಲುಗಳ ಮೂಲಕ ಎರಡೂ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್ನಲ್ಲಿ 8-7 ಗೋಲುಗಳ ಅಂತರದಲ್ಲಿ ಮೇರಿಯಂಡ ಗೆಲುವು ಸಾಧಿಸಿತು. ಮೇರಿಯಂಡ ಪರ ರಾಯಲ್ ಅಯ್ಯಣ್ಣ 2 ಹಾಗೂ ಸಚಿನ್ ಸೋಮಣ್ಣ 1 ಗೋಲು ದಾಖಲಿಸಿದರು. ಕುಟ್ಟಂಡ ಪರ ವಿಬಿನ್ ಅಯ್ಯಪ್ಪ 2, ರಾಜಿನ್ ಬಿದ್ದಪ್ಪ 1 ಗೋಲು ದಾಖಲಿಸಿದರು. ಕುಟ್ಟಂಡ ಪಾರ್ತ್ ಪೂಣಚ್ಚ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊವ್ವೇರಿಯಂಡ ಮತ್ತು ಅಜ್ಜಿನಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಬೊವ್ವೇರಿಯಂಡ ಜಯ ಸಾಧಿಸಿತು. ಬೊವ್ವೇರಿಯಂಡ ಪರ ನಿತೀನ್ ಅಪ್ಪಯ್ಯ ಹ್ಯಾಟ್ರೀಕ್ ಗೋಲು ಬಾರಿಸಿದರೆ, ಜಿತನ್ 2 ಗೋಲು ದಾಖಲಿಸಿದರು. ಅಜ್ಜಿನಂಡ ಅಯ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನೆರವಂಡ ಮತ್ತು ಬೇರೆರ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ನೆರವಂಡ ತಂಡ ಗೆಲುವು ಸಾಧಿಸಿತು. ನೆರವಂಡ ಪರ…
ಮಡಿಕೇರಿ ಏ.14 NEWS DESK : ಬೆಂಗಳೂರಿನ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ ನೀಡುವ “ಛಾಯಾ ಶ್ರೀ ” ಪ್ರಶಸ್ತಿಗೆ ಮಡಿಕೇರಿಯ ಜಿ.ಆರ್.ಗಿರೀಶ್ ಭಾಜನರಾಗಿದ್ದಾರೆ. ಮಡಿಕೇರಿಯ ಗೌಳಿಬೀದಿಯ ನಿವಾಸಿಯಾಗಿರುವ ಗಿರೀಶ್ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಛಾಯಾಗ್ರಹಣ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ್ದು, ಛಾಯಾ ಗ್ರಾಹಕರ ಸಂಘಟನೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಛಾಯಾಚಿತ್ರ ಕ್ಷೇತ್ರದಲ್ಲಿ ಗಿರೀಶ್ ಅವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ಛಾಯಾ ಗ್ರಾಹಕರ ಸಂಘದ *”ಡಿಜಿ ಇಮೇಜ್ 2025″ರ* ವಸ್ತು ಪ್ರದರ್ಶನದಲ್ಲಿ ” *”ಛಾಯಾ ಶ್ರೀ”* ಗೌರವವನ್ನು ನೀಡಿ ನಾಡಿನ ಸಮಸ್ತ ಛಾಯಾ ಗ್ರಾಹಕರ ಪರವಾಗಿ ಅಭಿನಂದನಾ ಪೂರ್ವಕವಾಗಿ ಸನ್ಮಾನಿಸಿ, ಗೌರವಿಸಲಾಯಿತು.
ಮಡಿಕೇರಿ NEWS DESK ಏ.14 : *ಮೈದಾನ 1* ಬೆಳಿಗ್ಗೆ 10 ಗಂಟೆಗೆ ಚೆರುವಾಳಂಡ ಮತ್ತು ಸಣ್ಣುವಂಡ, 11 ಗಂಟೆಗೆ ಸೋಮೆಯಂಡ ಮತ್ತು ಅಲ್ಲಾರಂಡ, ಮಧ್ಯಾಹ್ನ 1 ಗಂಟೆಗೆ ಓಡಿಯಂಡ ಮತ್ತು ಕಲಿಯಂಡ, 2 ಗಂಟೆಗೆ ಕರಿನೆರವಂಡ ಮತ್ತು ಕರವಂಡ, 3 ಗಂಟೆಗೆ ಬಯವಂಡ ಮತ್ತು ಮುಕ್ಕಾಟಿರ (ಹರಿಹರ) *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಕಾಯಪಂಡ ಮತ್ತು ಮಾಳೇಟಿರ (ಕುಕ್ಲುರು), 10 ಗಂಟೆಗೆ ಬಲ್ಲಚಂಡ ಮತ್ತು ಮೇಕೇರಿರ, 11 ಗಂಟೆಗೆ ನಂಬುಡುಮಾಡ ಮತ್ತು ಚೊಟ್ಟೆಯಂಡಮಾಡ, ಮಧ್ಯಾಹ್ನ 1 ಗಂಟೆಗೆ ಅಯ್ಯನೆರವಂಡ ಮತ್ತು ಅಂಜಪರವಂಡ
ವಿರಾಜಪೇಟೆ ಏ.14 NEWS DESK : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ 134ನೇ ಜನ್ಮದಿನಾಚರಣೆಯನ್ನು ವಿರಾಜಪೇಟೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ವಿರಾಜಪೇಟೆ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡು ಭವನದ ಮುಂಭಾಗದಲ್ಲಿ ನೂತನವಾಗಿ ಸ್ಥಾಪಿತಗೊಂಡಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಶಾಸಕರು, ಸಮಾಜದಲ್ಲಿ ನಾವು ಅಂಬೇಡ್ಕರ್ ತತ್ವ ಸಿದ್ಧಾಂತನಗಳನ್ನು ಅಳವಡಿಸಿ ಮುನ್ನಡೆಯುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದರು. ಇಂದು ನಾವುಗಳು ನಾಡಿನಲ್ಲಿ ಸುಖ ಶಾಂತಿಯಿಂದ ನಡೆಸುವಂಥಾಗಲು ಅಂಬೇಡ್ಕರ್ ರಚಿಸಿದ ಭಾರತೀಯ ಸಂವಿಧಾನವೇ ಪ್ರಮುಖ ಕಾರಣ. ಭಾರತ ದೇಶದ ಕಾನೂನಾದ ನಮ್ಮ ಹೆಮ್ಮೆಯ ಸಂವಿಧಾನವನ್ನು ಎಲ್ಲರೂ ಗೌರವಿಸಿ ಅದರಂತೆ ನಡೆದುಕೊಳ್ಳುವುದು ನಮ್ಮ ಗುರಿಯಾಗಿ ಇರಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಎಲ್ಲಾ ಗಣ್ಯರು ಹಾಗೂ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಏ.14 NEWS DESK : ರಾಷ್ಟ್ರದಲ್ಲಿನ ಅಸಮಾನತೆ ಹೋಗಲಾಡಿಸಿ, ಸಂವಿಧಾನದ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಶ್ರಮಜೀವಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳು ವಂತಾಗಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಮೇರಿಕಾ, ಲಂಡನ್ ಸೇರಿದಂತೆ ವಿದೇಶದಲ್ಲಿ ವ್ಯಾಸಂಗ ಮಾಡಿದವರು ವಾಪಸ್ಸು ದೇಶಕ್ಕೆ ಆಗಮಿಸುವುದು ಕಡಿಮೆ, ಆದರೆ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿದೇಶದಲ್ಲಿ ಅಧ್ಯಯನ ಮಾಡಿ ರಾಷ್ಟ್ರಕ್ಕೆ ದೇವರಂತೆ ಆಗಮಿಸಿ ಸಂವಿಧಾನ ರಚಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆಗೆ ಹಗಲಿರುಳು ಶ್ರದ್ಧೆ ವಹಿಸಿ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ ಎಂದು ಶಾಸಕರು ನುಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಶಿಕ್ಷಣದಿಂದ ಮಾತ್ರ ರಾಷ್ಟ್ರದಲ್ಲಿ ಬದಲಾವಣೆ ತರಲು…
ಮಡಿಕೇರಿ ಏ.14 NEWS DESK : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಯೋಜಿತ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮ(ಯುವಿಕಾ)ಗೆ ಕೊಡಗು ಸೈನಿಕ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆಡೆಟ್ ಅತುಲ್ ಕುಮಾರ್ ಆಯ್ಕೆಯಾಗಿದ್ದಾರೆ. ಮೇ 19 ರಿಂದ ಮೇ 30ರವರೆಗೆ ಬೆಂಗಳೂರಿನ ಯುಆರ್ ರಾವ್ ಉಪಗ್ರಹ ಕೇಂದ್ರ (ಯು ಆರ್ ಎಸ್ ಸಿ)ದಲ್ಲಿ ಕಾರ್ಯಕ್ರಮ ನಡೆಯಲಿದೆ. ವಿದ್ಯಾರ್ಥಿಯ ಸಾಧನೆಯನ್ನು ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ಜೀತ್ ಸಿಂಗ್, ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪ್ರಕಾಶ್ ರಾವ್ ಮತ್ತು ಉಪಪ್ರಾಂಶುಪಾಲ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ ಪ್ರಶಂಸಿದರು. ಈ ಸಂದರ್ಭ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ಜೀತ್ ಸಿಂಗ್, ಈ ಆಯ್ಕೆಯು ಸೈನಿಕ ಶಾಲೆಯು ಹೆಮ್ಮೆಪಡುವ ಕ್ಷಣವಾಗಿದ್ದು. ಅತುಲ್ ಕುಮಾರ್ ಅವರು ಯೂವಿಕಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದರೊಂದಿಗೆ ಶಾಲೆಯ ಗೌರವವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ ಎಂದರು. ಅತುಲ್ ಕುಮಾರ್ಗೆ ಲಭಿಸಿರುವ ಈ ಸುವರ್ಣಾವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡು, ಯುವ ವಿಜ್ಞಾನಿಯಾಗಿ ಹೊರಹೊಮ್ಮುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಂತಸ…
ಕುಶಾಲನಗರ ಏ.14: NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ನವಗ್ರಾಮದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ರೂ. 50 ಲಕ್ಷ ಹಣ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಕೂಡ್ಲೂರು ಗ್ರಾಮದಲ್ಲಿ ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಬಸವೇಶ್ವರ ಯುವಕ ಸಂಘದ ವತಿಯಿಂದ ಏರ್ಪಡಿಸಿದ್ದ ಮೂರನೇ ವರ್ಷದ ಹೊನಲು ಬೆಳಕಿನ ಕಬಡ್ಡಿ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಕೂಡ್ಲೂರು ನವಗ್ರಾಮದ ಗ್ರಾಮಸ್ಥರ ಮನವಿ ಸ್ಪಂದಿಸಿರುವ ಶಾಸಕರು, ನವಗ್ರಾಮದಲ್ಲಿ ಸೂಕ್ತ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಗ್ರಾಮದ ಮೂಲ ಸೌಕರ್ಯಗಳ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದೆ . ಇದು ಈ ಗ್ರಾಮಸ್ಥರಿಗೆ ಸಂತಸದ ಸಂಗತಿಯಾಗಿದೆ ಎಂದು ವಿ.ಪಿ.ಶಶಿಧರ್ ಪ್ರತಿಕ್ರಿಯೆ ನೀಡಿದರು. ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಈರಪ್ಪ, ಯುವಕ ಸಂಘದ ಅಧ್ಯಕ್ಷ ಕೆ.ವಿ.ನಿಶಾಂತ್, ಸಂಘದ ಪದಾಧಿಕಾರಿಗಳು ಇದ್ದರು.






