ಲೇಖಕ: admin

ನಾಪೋಕ್ಲು ಮೇ 12 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಮಕ್ಕಂದೂರು ಗ್ರಾಮದ ಕುಂಭ ಗೌಡನ ಐನ್ ಮನೆಯಲ್ಲಿ ಮೇ 17 ರಂದು ಐನ್ ಮನೆ ಜಂಬರ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಂಭ ಗೌಡರಿಗೆ ಲಿಂಗರಾಜರು ಕೊಡ ಮಾಡಿದ್ದ ನಿರೂಪದ ಅನಾವರಣ, ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಅರೆ ಭಾಷೆ ಸುಪ್ರಭಾತದ ಧ್ವನಿ ಸುರುಳಿ ಬಿಡುಗಡೆ, ಕುಂಭ ಗೌಡನ ಕುಟುಂಬದ ಲಾಂಛನ ಬಿಡುಗಡೆ, ಸಾಧಕರಿಗೆ ಸನ್ಮಾನ ಹಾಗೂ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಕ್ರೀಡಾಕೂಟ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿವೆ. ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕುಂಭ ಗೌಡನ ಕುಟುಂಬದ ಪಟ್ಟದಾರ ಕೆ.ಕೆ.ಓಂಕಾರಪ್ಪ ಉದ್ಘಾಟಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ್ ಡಾ.ಮಂತರ್ ಗೌಡ ಸಾಧಕರು ಸನ್ಮಾನಿಸಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ ಪುಸ್ತಕಗಳ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಏ.ಕೆ.ಹಿಮಕರ ಅರೇಬಾಷೆ ಕುಟುಂಬಗಳ ಐನ್ ಮನೆ ಹಾಗೂ ಕುಂಭ…

Read More

ಮಡಿಕೇರಿ ಮೇ 12 NEWS DESK : ಬಿಟ್ಟಂಗಾಲದ ಪೆಗ್ಗಿರಿಕಾಡು ಎಂಬಲ್ಲಿ ಸಾಕಿದ ಹಸು ದಾಳಿಯಿಂದ ತೀವ್ರ ಗಾಯಗೊಂಡು ಮೃತಪಟ್ಟಿದ್ದ ದಯಾನಂದ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಶಾಸಕರೊಂದಿಗೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಮೇ 12 NEWS DESK : ವಿಶ್ವಾದ್ಯಂತ ಪ್ರಖ್ಯಾತವಾಗಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗಿನ ಹಲವರು ತಮ್ಮ ಛಾಪು ಮೂಡಿಸಿದ್ದು, ಇಂತಹ ಕ್ರೀಡಾಕೂಟಗಳು ಯುವಕರ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಹೇಳಿದರು. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಸುಂಟಿಕೊಪ್ಪ ಸಂತ ಅಂತೋಣಿಯವರ ದೇವಾಲಯದ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ 14ನೇ ವರ್ಷದ ಪಂದ್ಯಾವಳಿಯ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸಮುದಾಯಗಳ ವತಿಯಿಂದ ಆಯೋಜನೆಗೊಳ್ಳುತ್ತಿರುವ ಕ್ರಿಕೆಟ್ ಪಂದ್ಯಾಟಗಳು ಅದ್ಭುತ ಯಶಸ್ಸು ಕಾಣುವುದು ಮಾತ್ರವಲ್ಲದೆ, ಸಮುದಾಯದ ಯುವಕರನ್ನು ಒಟ್ಟುಗೂಡಿಸಿ ಒಗ್ಗಟ್ಟು ಪ್ರದರ್ಶಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಬಣ್ಣಿಸಿದರು. ಕ್ರೀಡೆಯು ಸದಾ ಮನೋಲ್ಲಾಸಕ್ಕೆ ಕಾರಣವಾಗಿದ್ದು, ಕ್ರೀಡೆಯಲ್ಲಿ ಯುವಕರು ತಮ್ಮನ್ನು ತಾವು ತೊಡಗಿಸಿಕೊಳ್ಳುವುದರಿಂದ ಇತರ ದುಶ್ಚಟಗಳಿಂದ ದೂರ ಉಳಿಯಲು ಸಹಕಾರಿಯಾಗಲಿದೆ. ಮಾತ್ರವಲ್ಲ ತಮ್ಮ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳಲು ಕ್ರೀಡೆಯು…

Read More

ಕುಶಾಲನಗರ ಮೇ 12 NEWS DESK : ಕೇಂದ್ರ ಸರ್ಕಾರದ‌ ಕರಕುಶಲ ಮತ್ತು ಜವಳಿ ಮಂತ್ರಾಲಯ ಇಲಾಖೆಯ ಮೈಸೂರಿನ ‌ ಕರಕುಶಲ ವಿಸ್ತರಣಾ ಸೇವಾ ಕೇಂದ್ರದ ವತಿಯಿಂದ ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂರು ದಿನಗಳ ಕಾಲ ಏರ್ಪಡಿಸಿದ್ದ ಕರಕುಶಲ ವಸ್ತುಗಳ ತಯಾರಿಕೆ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮ ಮುಕ್ತಾಯಗೊಂಡಿತು. ಶಿಬಿರದಲ್ಲಿ ಸಮಾರೋಪ ಭಾಷಣ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿಯ ಸದಸ್ಯ ಎಂ.ಎನ್.ವೆಂಕಟನಾಯಕ್, ಇಂತಹ ಕಲಾ ಶಿಬಿರಗಳು ಜೀವನದಲ್ಲಿ‌ ಕಲಾ ಉತ್ಸವದ ಸೆಲೆಯಾಗಿ ರೂಪುಗೊಳ್ಳಲು ಸಹಕಾರಿಯಾಗಿವೆ ಎಂದರು. ಕಲೆ, ಸಂಸ್ಕೃತಿ ಹಾಗೂ ಕರಕುಶಲ ಕಲೆಯಲ್ಲಿ ಶ್ರೀಮಂತಿಕೆಯನ್ನು ಹೊಂದಿರುವ ಭಾರತದಲ್ಲಿ ಕರಕುಶಲ ಕಲೆಯು ಪ್ರಾಚೀನ ಕಾಲದಿಂದಲೂ ಮನುಷ್ಯನಿಗೆ ಕರಗತವಾಗಿ ಬೆಳೆದುಬಂದಿದೆ ಎಂದರು. ಕಲಾ ಶಿಬಿರಗಳು ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿಗಳಲ್ಲಿ ಕರಕುಶಲ ಕಲೆಯನ್ನು ಕರಗತ ಮಾಡಿಕೊಂಡು ಉತ್ತಮ ಜೀವನ ಕಂಡುಕೊಳ್ಳಲು ಸಹಕಾರಿಯಾಗಿವೆ ಎಂದು ವೆಂಕಟನಾಯಕ್ ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ, ಇಂತಹ ಶಿಬಿರಗಳು…

Read More

ಮಡಿಕೇರಿ ಮೇ 12 NEWS DESK : ಕಟ್ಟೆಮಾಡು ಗ್ರಾಮದ ಬಿದ್ರುಪಣೆ ಕುಟುಂಬಸ್ಥರ ಐನ್ ಮನೆಯಲ್ಲಿ ಎರಡು ದಿನ ವೆಂಕಟರಮಣ ದೇವರ ಹರಿಸೇವೆ ಮತ್ತು ಪರಿವಾರ ದೈವಗಳ ನೇಮೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ‌ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ನಡೆದ ದೈವ, ದೇವರ  ಉತ್ಸವದಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ದೈವ, ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸತ್ಯದೇವತೆ, ಪಾಷಾಣಮೂರ್ತಿ, ಕುಕ್ಕತ್ತಿಬಲ್ಲು, ವರ್ಣ ಪಂಜುರ್ಲಿ, ಕುಪ್ಪೆ ಪಂಜುರ್ಲಿ, ಗುಳಿಗ, ಧರ್ಮದೇವತೆಯ ಕೋಲಗಳು ನಡೆದವು. ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.

Read More

ಮಡಿಕೇರಿ ಮೇ 12 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಪಾರಾಣೆಯಲ್ಲಿ, ಮೂರ್ನಾಡು-ಬಲಮುರಿ -ಪಾರಾಣೆ-ನಾಪೋಕ್ಲು ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಸುಮಾರು 2.75 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗೆ ಪಾರಣೆಯ ನಾಯಕಂಡ ಮನೆಯ ಬಳಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಇಂಜಿನಿಯರ್ ಹಾಗೂ ಗುತ್ತಿಗೆದಾರರು ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು ಅತಿ ಮುಖ್ಯ ಎಂದು ಹೇಳಿದರು. ಸಾರ್ವಜನಿಕರ ಅನುಕೂಲಕ್ಕಾಗಿ ತಾನು ಈ ರಸ್ತೆಯ ಅಭಿವೃದ್ಧಿಗೆ ಮುಖ್ಯಮಂತ್ರಿಗಳಲ್ಲಿ ವಿಶೇಷ ಅನುದಾನವನ್ನು ತಂದಿದ್ದು, ಇದರ ಸಂಪೂರ್ಣ ಸದುಪಯೋಗ ಈ ಭಾಗದ ಸಾರ್ವಜನಿಕರಿಗೆ ಹಾಗೂ  ರಸ್ತೆಯನ್ನು ಬಳಿಸುವ ಎಲ್ಲಾ ಬಳಕೆದಾರರಿಗೆ ಲಭಿಸುವಂತಾಗಬೇಕು ಹಾಗೂ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ವಿಶೇಷ ಗಮನಹರಿಸಬೇಕೆಂದು ತಾಕೀತು ಮಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್,…

Read More

ಉಡುಪಿ ಮೇ 12 NEWS DESK : ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಸೋಮವಾರ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಕೇಶ್ ಅವರ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್​ ಪೇಟೆ ಅವರು ಖಚಿತಪಡಿಸಿದ್ದಾರೆ. ರಾಕೇಶ್ ಅವರ ಸಾವು ಅವರ ಅಭಿಮಾನಿಗಳು ಹಾಗೂ ಆಪ್ತ ಬಳಗಕ್ಕೆ ಶಾಕ್ ನೀಡಿದ್ದು, ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ರಾಕೇಶ್ ಅವರು 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಗೆ ಅವರು ಆಯ್ಕೆಯಾದರು. ರನ್ನರ್ ಅಪ್ ತಂಡದಲ್ಲಿ ಇದ್ದರು. ನಂತರದ ಸೀಸನ್ 3​ನಲ್ಲಿ ವಿನ್ನರ್ ಆದರು. ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿಯೂ ನಟಿಸಿದ್ದಾರೆ.…

Read More

ಮಡಿಕೇರಿ NEWS DESK ಮೇ 11 : ಲೋಕಕಲ್ಯಾಣಾರ್ಥವಾಗಿ 11 ದಿನಗಳ ಕಾಲ ನಡೆಯುವ ಅತಿರುದ್ರ ಜಪಯಜ್ಞ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ದೇವಾಲಯದ ಪ್ರಧಾನ ಅರ್ಚಕÀ ವೇ.ಬ್ರ.ಪ್ರಶಾಂತ್ ಆಚಾರ್ಯ ಅವರ ನೇತೃತ್ವದಲ್ಲಿ ಆರಂಭಗೊಂಡಿತು. ಅರುಣೋದಯದ ಸಮಯದಲ್ಲಿ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ ನೆರವೇರಿತು. ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ ಅವರು ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ ಫಲತಾಂಬೂಲದೊಂದಿಗೆ, ಶ್ರೀಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜ್ ಅವರ ಸಂಕಲ್ಪದAತೆ ಅತಿರುದ್ರ ಜಪಯಜ್ಞದ ಯಶಸ್ಸಿಗಾಗಿ ಪ್ರಾರ್ಥಿಸಿದರು. ಶ್ರೀ ರುದ್ರ ದೇವರ ಕೃಪಾಶೀರ್ವಾದವು ಲೋಕಕ್ಕೆ ಲಭಿಸಲಿ, ಪ್ರಸ್ತುತ ಎದುರಾಗಿರುವ ಭಾರತ ಮತ್ತು ಪಾಕಿಸ್ತಾನ ಬಿಕ್ಕಟ್ಟು ಶಾಂತವಾಗಲಿ. ಉಗ್ರರಿಂದ ಹತ್ಯೆಗೊಳಗಾದವರಿಗೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸಿದರು. ಜಪಯಜ್ಞ ಸಮಿತಿಯ ಗೌರವಾಧ್ಯಕ್ಷÀ ಮಿತ್ತೂರು ಈಶ್ವರ ಭಟ್ ಅವರು ಮಾತನಾಡಿ ಈ ಜಪಯಜ್ಞವು ಮುಂದಿನ ಮೇ 21 ರವರೆಗೆ ನಡೆಯಲಿದೆ. ಮೇ 19 ರಂದು ಮಡಿಕೇರಿಯ ಲಕ್ಷಿö್ಮÃನರಸಿಂಹ ಕಲ್ಯಾಣ ಮಂಟಪದಲ್ಲಿ ಶ್ರೀ ರುದ್ರ ಹೋಮ ಹಾಗೂ ಮೇ…

Read More

ಮಡಿಕೇರಿ NEWS DESK ಮೇ 11 : ಕಳೆದ ವರ್ಷ ಸುರಿದ ಭಾರೀ ಮಳೆಯಿಂದಾಗಿ ಹದಗೆಟ್ಟಿದ್ದ ತೀರ್ಥಕ್ಷೇತ್ರ ತಲಕಾವೇರಿ-ಭಾಗಮಂಡಲ ಸಂಪರ್ಕಿಸುವ ಮಡಿಕೇರಿ ಭಾಗಮಂಡಲ ಮುಖ್ಯರಸ್ತೆಯ ಅಪ್ಪಂಗಳ-ಬೆಟ್ಟಗೇರಿ ಭಾಗದ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಅಪ್ಪಂಗಳ ಜಂಕ್ಷನ್ ನಿಂದ ಬೆಟ್ಟಗೇರಿ ವರೆಗೆ ರಸ್ತೆಯ ಪುನರ್ ನಿರ್ಮಾಣ ಕಾರ್ಯಕ್ಕೆ ಇಂದು ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು ರಾಜ್ಯದಿಂದ ಹಾಗೂ ಹೊರ ರಾಜ್ಯದಿಂದ ಬರುವ ಸಾವಿರಾರು ಭಕ್ತರಿಗೆ ಈ ರಸ್ತೆಯು ಅನುಕೂಲವಾಗಲಿದೆ. ಗುತ್ತಿಗೆದಾರರು ವೈಜ್ಞಾನಿಕ ರೂಪದಲ್ಲಿ ರಸ್ತೆಯನ್ನು ನಿರ್ಮಿಸಬೇಕು ಮತ್ತು ಸಾವಿರಾರು ಭಕ್ತರು, ಸಾರ್ವಜನಿಕರು ಸಂಚರಿಸುವ ರಸ್ತೆ ಇದಾಗಿರುವುದರಿಂದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ಸಲಹೆ ನೀಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಇಸ್ಮಾಯಿಲ್, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಚೆಟ್ಟಿಮಾನಿ-ಕುಂದಚೇರಿಗೆ ತೆರಳುವ ರಸ್ತೆಯ…

Read More

ಕಣಿವೆ NEWS DESK ಮೇ 11 : ಕುಶಾಲನಗರ ತಾಲ್ಲೂಕು ಶ್ರೀ ಯೋಗಿ ನಾರೇಯಣ ಬಲಿಜ ಸಂಘದ ವತಿಯಿಂದ ಭಾನುವಾರ ಬಲಿಜ  ಕುಲಗುರು ಶ್ರೀ ಕೈವಾರ ತಾತಯ್ಯನವರ ಜಯಂತ್ಯುತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಯೋಗಿ ನಾರೇಯಣ ಶ್ರೀಗಳ ಭಾವಚಿತ್ರವನ್ನು ಅಲಂಕೃತ ವಾಹನದಲ್ಲಿ ಇಟ್ಟು ಬೈಲಕೊಪ್ಪದ ಮುಖ್ಯ ರಸ್ತೆ ಹಾಗೂ ಕುಶಾಲನಗರ ಗಣಪತಿ ದೇವಾಲಯದಿಂದ ರಥಬೀದಿಯ ಮೂಲಕ ಗಾಯತ್ರಿ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಮಾಲ್ದಾರೆಯ ಮುತ್ತಪ್ಪ ಚೆಂಡ ಮೇಳಂ ತಂಡದವರಿಂದ ಆಕರ್ಷಕವಾದ ಚಂಡೆ ನೋಡುಗ ಭಕ್ತರ ಗಮನಸೆಳೆಯಿತು‌. ಮೆರವಣಿಗೆಯಲ್ಲಿ ಕುಶಾಲನಗರ, ಬೈಲಕೊಪ್ಪ ಆಸುಪಾಸುಗಳ ಗ್ರಾಮಗಳ ನೂರಾರು  ಮಂದಿ ಬಲಿಜ ಬಂಧುಗಳು ಭಾಗವಹಿಸಿ ಗಮನ ಸೆಳೆದರು. ತಾಲ್ಲೂಕು ಬಲಿಜ ಸಂಘದ ಅಧ್ಯಕ್ಷ ಆರ್.ಬಾಬಣ್ಣ ಅವರ  ಅಧ್ಯಕ್ಷತೆಯಲ್ಲಿ  ಹಮ್ಮಿಕೊಂಡಿದ್ದ   ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ  ಮೈಸೂರು ಮಹಾರಾಜ ಕಾಲೇಜಿನ ಉಪನ್ಯಾಸಕ  ಡಾ.ಎಸ್.ಕಿತ್ತೂರು ಕೃಷ್ಣಪ್ಪ, ಖ್ಯಾತ ಅಂಕಣಕಾರರಾದ ಡಾ.ಗುಬ್ಬಿಗೂಡು ರಮೇಶ್, ಕೊಡಗು ಜಿಲ್ಲಾ ಬಲಿಜ ಸಂಘದ ಅಧ್ಯಕ್ಷರಾದ ಟಿ.ಡಿ.ಸುಬ್ರಮಣಿ, ಮಡಿಕೇರಿ ತಾಲ್ಲೂಕು ಅಧ್ಯಕ್ಷೆ…

Read More