ಮಡಿಕೇರಿ NEWS DESK ಜೂ.11 : ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ 29ನೇ ವಾರ್ಷಿಕ ಮಹಾಸಭೆ, ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಮಡಿಕೇರಿ ಸಮೀಪದ ತಾಳತ್ತಮನೆ ಗ್ರಾಮದಲ್ಲಿರುವ ಸಂಘದ ನಿವೇಶನದ ಆವರಣದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅವರು ಸಮಾಜ ಬಾಂಧವರ ಪ್ರಗತಿಗೆ ಮತ್ತು ಸಾಮಾಜಿಕ ಚಟುವಟಿಕೆಗಳಿಗೆಗಾಗಿ ಸಂಘಕ್ಕೆ ಐದು ಎಕರೆ ಭೂಮಿ ಪಡೆಯಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು. ಸಮುದಾಯದ ಮಂದಿಯ ಆರೋಗ್ಯ ಸುಧಾರಣೆಗೆ ಆರೋಗ್ಯ ನಿಧಿ ಸಂಗ್ರಹಿಸಿ ಪ್ರತ್ಯೇಕ ಖಾತೆ ತೆರೆಯಬೇಕು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಸಲುವಾಗಿ ಮರಾಠ ಮರಾಟಿ ವಿದ್ಯಾಭಿವೃದ್ಧಿ ನಿಧಿ ಖಾತೆಯನ್ನು ಆರಂಭಿಸಬೇಕು, ಸರ್ಕಾರದ ಸಮಿತಿಗಳ ಸಭೆಯಲ್ಲಿ ಸಂಘವನ್ನು ಪ್ರತಿನಿಧಿಸಲು ಸಮಾಜ ಬಾಂಧವರು ಮುಂದೆ ಬರಬೇಕು, ಸರ್ವರು ಸಂಘದ ಅಜೀವ ಸದಸ್ಯತ್ವವನ್ನು ಪಡೆದು ಸಮಾಜದ ಅಭ್ಯುದಯಕ್ಕೆ ಸಹಕಾರ ನೀಡಬೇಕೆಂದು ಕರೆ ನೀಡಿದರು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ…
ಲೇಖಕ: admin
ಮಡಿಕೇರಿ NEWS DESK ಜೂ.11 : ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪುರಸಭಾ ಕಚೇರಿ ಕಟ್ಟಡವನ್ನು ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಬುಧವಾರ ಲೋಕಾರ್ಪಣೆಗೊಳಿಸಿದರು. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಉದ್ಘಾಟಿಸಿ ನೂತನ ಸಭಾಂಗಣದಲ್ಲಿ ಮಾತನಾಡಿದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಯೋಜನೆಗಳಿಗೆ 50 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರ ಪ್ರಯತ್ನದಿಂದ ಮುಖ್ಯಮಂತ್ರಿ ಅವರು ಹಲವು ಅಭಿವೃದ್ಧಿ ಕಾರ್ಯಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಿದ್ದಾರೆ. ಪೌರಾಡಳಿತ ಇಲಾಖೆಯಿಂದ ಸಹ ಅಗತ್ಯ ಸಹಕಾರ ನೀಡಲಾಗುವುದು ಎಂದು ಸಚಿವರು ಹೇಳಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ ಮೂರು ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲಾಗಿದೆ. ಸದ್ಯ ಬೇಡಿಕೆ ಹೆಚ್ಚಿರುವುದರಿಂದ ಬೆಳಗಿನ ಉಪಾಹಾರ ಮತ್ತು ಊಟವನ್ನು 300 ರಿಂದ 500 ಜನರಿಗೆ ಒದಗಿಸಲು ಉದ್ದೇಶಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ…
ಸೋಮವಾರಪೇಟೆ NEWS DESK ಜೂ.11 : ಮಾತೃಭಾಷೆ ಕನ್ನಡದೊಂದಿಗೆ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಇಂಗ್ಲೀಷ್ ಕಲಿಸಲೇಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ಗೌಡ ಅಭಿಪ್ರಾಯಪಟ್ಟಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆಯ ವತಿಯಿಂದ ಚೌಡ್ಲು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಹತ್ತನೆ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಹಾಗು ಶೇ.100ರಷ್ಟು ಫಲಿತಾಂಶ ಗಳಿಸಿದ ಶಾಲೆಗಳ ಮುಖ್ಯ ಶಿಕ್ಷಕರುಗಳನ್ನು ಸನ್ಮಾನಿಸಿ ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಮಕ್ಕಳು ಸ್ಪರ್ಧೆ ಮಾಡಲೇಬೇಕಾಗಿದೆ. ಈ ಹಂತದಲ್ಲಿ ಇಂಗ್ಲೀಷ್ ಅವಶ್ಯಕತೆ ಎಷ್ಟಿದೆ ಎಂಬುವುದು ವಿದ್ಯಾವಂತರಿಗೆ ಗೊತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಎಲ್ಕೆಜಿ ಮತ್ತು ಯುಕೆಜಿ ಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪ್ರವೇಶ ಪಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ. ಕೆಲವು ಶಾಲೆಗಳಲ್ಲಿ ಅತೀ ಹೆಚ್ಚಿನ ಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. 30 ಮಕ್ಕಳ ಪ್ರವೇಶಾತಿಗೆ ಮಾತ್ರ ಅವಕಾಶವಿದ್ದು, ಅರ್ಜಿ ಸಲ್ಲಿಸಿದ ಎಲ್ಲಾ ಮಕ್ಕಳಿಗೂ ಪ್ರವೇಶಾತಿಗೆ ಅನುಕೂಲ ಮಾಡಿಕೊಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು…
ಮಡಿಕೇರಿ NEWS DESK ಜೂ.10 : ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಮೊದಲಬಾರಿಗೆ ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿ ಬಿ.ಎ.ಪಿ.ಎಸ್. ಹಿಂದೂ ದೇವಾಲಯದಲ್ಲಿ ಇತ್ತೀಚೆಗೆ ನಡೆದ ಗುರುವಂದನಾ ಸಂಸ್ಕೃತಿ ಸಿಂಚನ ಕಾರ್ಯಕ್ರಮದಲ್ಲಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರಿಗೆ “ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸನಾತನ್ ವೇದಿಕ್ ಸಂಸ್ಥಾನದ ಗುರುಗಳಾದ ಶ್ರೀ ಶ್ರೀ ಶ್ರೀ ಪ್ರೋಫೆಸರ್ ಸ್ವಾಮಿ ಚೈತನ್ಯಾನಂದ ಸರಸ್ವತಿಯವರ ಸಮ್ಮುಖದಲ್ಲಿ ಕಲಾವಿದ ಬಿ.ಕೆ.ಗಣೇಶ್ ರೈ ಹಾಗೂ ಮಂಜುಳಾ ಗಣೇಶ್ ರೈ ದಂಪತಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಹಿಂದೂ ಮಂದಿರದ ಅವರಣದಲ್ಲಿರುವ ಪ್ರಮುಖ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬುಧಾಬಿ ಹಿಂದೂ ಮಂದಿರದ ಮುಖ್ಯಸ್ಥರಾದ ಶ್ರೀ ಬ್ರಹ್ಮವಿಹಾರಿ ದಾಸ್ ಸ್ವಾಮೀಜಿ, ಬೆಳಗಾವಿ ನಿಡಸೊಸಿ ಶ್ರೀ ಜಗದ್ಗುರು ದುರುದುಂಡೇಶ್ವರ ಮಠದ ಶ್ರೀ ಶ್ರೀ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ, ಗೋವಾ ರಾಜ್ಯದ ಶ್ರೀ ದತ್ತ ಪದ್ಮನಾಭ ಪೀಠದ ಪದ್ಮಶ್ರೀ ಪುರಸ್ಕöÈತ ಶ್ರೀ ಶ್ರೀ ಸದ್ಗುರು ಬ್ರಹ್ಮೇಶನಂದನಾಚಾರ್ಯ ಸ್ವಾಮೀಜಿ ಮತ್ತಿತರ…
ಸೋಮವಾರಪೇಟೆ ಜೂ.10 NEWS DESK : ಸೋಮವಾರಪೇಟೆ ತಾಲೂಕಿನ ಮಸಗೋಡು ಗ್ರಾಮದ ಸಮುದಾಯ ಭವನ ಅಭಿವೃದ್ಧಿಗೆ ಕ್ಷೇತ್ರದಿಂದ ಮಂಜೂರಾದ 50,000 ಮೊತ್ತದ ಡಿ ಡಿ ಮಂಜೂರಾತಿ ಪತ್ರವನ್ನು ಕೊಡಗು ಜಿಲ್ಲಾ ನಿರ್ದೇಶಕಿ ಶ್ರೀಮತಿ ಲೀಲಾವತಿರವರು ಹಾಗೂ ತಾಲೂಕಿನ ಯೋಜನಾಧಿಕಾರಿಗಳಾದ ಹನುಮಂತಪ್ಪ ಅಂಗಡಿ ಆಡಳಿತ ಮಂಡಳಿಯ ಅದ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಜಿಲ್ಲಾ ನಿರ್ದೇಶಕರು ಮಾತನಾಡಿ, ಕ್ಷೇತ್ರದಿಂದ ಪೂಜ್ಯರು ಧರ್ಮೋತ್ಥಾನ ಟ್ರಸ್ಟ್ಗಳನ್ನು ಮಾಡಿ ಸಮಾಜಮುಖಿಯಾಗಿ ರಾಜ್ಯಾದ್ಯಂತ ದೇವಸ್ಥಾನ, ಸಮುದಾಯಭವನ ಹಾಗೂ ಹಾಲು ಉತ್ಪಾದಕರ ಘಟಕಗಳ ಅಭಿವೃದ್ಧಿಗಾಗಿ ಆರ್ಥಿಕ ನೆರವನ್ನು ನೀಡುತ್ತಿದ್ದಾರೆ ಎಂದು ಕೇತ್ರದ ಹತ್ತು ಹಲವಾರು ಕಾರ್ಯಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಗ್ರಾಮ ಸಮಿತಿಯ ಅದ್ಯಕ್ಷ ಸತೀಶ್, ಜಿಲ್ಲಾ ಜನಜಾಗೃತಿ ಸದಸ್ಯ ಸುರೇಶ್ , ಗ್ರಾಮ ಪಂಚಾಯತ್ ಉಪಾದ್ಯಕ್ಷರಾದ ಜಲದಿನೇಶ್, ಒಕ್ಕೂಟ ಅದ್ಯಕ್ಷರಾದ ರೂಪಾ ಸುರೇಶ್ ಹಾಗೂ ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿಯವರು ಹಾಜರಿದ್ದರು.
ಸುಂಟಿಕೊಪ್ಪ ಜೂ.10 NEWS DESK : ಸುಂಟಿಕೊಪ್ಪ ವಿಭಾಗದ ಪತ್ರಕರ್ತರು ಹಾಗೂ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಎಂ.ಬಿ.ವಿನ್ಸೆಂಟ್ರವರ ಮಾತೋಶ್ರೀ, ದಿ.ಬೋನಿಪಾಸ್ ರವರ ಪತ್ನಿ ವಿ.ಎಂ.ಥೆರೇಸಾ ಇಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಕಳೆದ ಕೆಲ ಸಮಯಗಳ ಅನಾರೋಗ್ಯದ ಬಳಿಕ ಥೆರೇಸಾ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಸುಂಟಿಕೊಪ್ಪ ಸಂತ ಅಂತೋಣಿ ಚರ್ಚ್ನಲ್ಲಿ ಅಂತಿಮ ಪ್ರಾರ್ಥನಾ ವಿಧಿವಿಧಾನಗಳು ನೆರವೇರಿದ ನಂತರ ಕ್ರಿಶ್ಚಿಯನ್ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಸಂತಾಪ :: ಥೆರೇಸಾ ಅವರ ನಿಧನಕ್ಕೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘ, ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮಡಿಕೇರಿ ಜೂ.10 NEWS DESK : ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದ ಅಧ್ಯಕ್ಷರಾಗಿ ಎ.ಸಮದ್, ಉಪಾಧ್ಯಕ್ಷರಾಗಿ ದಿನೇಶ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ಬಾಲಭವನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎ.ಅರುಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಾರ್ಷಿಕ ಮಹಾಸಭೆ 2025-26ನೇ ಸಾಲಿನ ನೂತನ ಆಡಳಿತ ಮಂಡಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಬಾರನ ದಿನೇಶ್, ಕಾರ್ಯದರ್ಶಿಯಾಗಿ ಸುನಿಲ್, ಖಜಾಂಚಿಯಾಗಿ ಹೆಚ್.ಎಸ್.ನಾಗರಾಜ್ ನೇಮಕಗೊಂಡಿದ್ದಾರೆ. ಸಂಘಟನಾ ಕಾರ್ಯದರ್ಶಿಗಳಾಗಿ ಮಂಜು, ರುಹೇಜ್, ಕೆ.ಕೆ.ಸುಕುಮಾರ್, ಆನಂದ ಅಪ್ಪು ಆಯ್ಕೆಯಾಗಿದ್ದು, ನಿರ್ದೇಶಕರಾಗಿ ಸುಲೈಮನ್, ಹರ್ಷಿತ್, ಪ್ರವೀಣ್ ಮುದ್ಯನ, ಜಸ್ಟಿನ್ ಅಪ್ಪು, ಶೇಖರ್ ಪೂಜಾರಿ, ಅನ್ಸರ್, ಗಣೇಶ, ಶ್ರೀಕಾಂತ್, ಜ್ಞಾನಕುಮಾರ್, ರೋನಿ, ಸುಗು ಪೂಜಾರಿರ ಸೇರಿದಂತೆ 20 ಪದಾಧಿಕಾರಿಗಳ ನೂತನ ಸಮಿತಿಯನ್ನು ರಚಿಸಲಾಗಿದೆ.
ಮಡಿಕೇರಿ ಜೂ.10 NEWS DESK : ಪ್ರಧಾನಮಂತ್ರಿಗಳಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ಬಳಿಕ ಕೈಗೊಂಡ ದೂರದೃಷ್ಟಿಯ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನ ಹೆಚ್ಚಿರುವುದಾಗಿ ಬಿಜೆಪಿ ಮುಖಂಡ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ. ಮಡಿಕೇರಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರು ರಾಷ್ಟ್ರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ ಪರಿಣಾಮ, ರಾಷ್ಟ್ರವ್ಯಾಪಿ ಗುಣಮಟ್ಟದ ರಸ್ತೆಗಳ ನಿರ್ಮಾಣವಾಗಿದೆ. ಸುಲಲಿತ ಸಂಚಾರದಿಂದ ಇಂಧನ ಉಳಿತಾಯವು ಸಾಧ್ಯವಾಗಿದೆ ಎಂದರು. ಜನಪರವಾದ ಹತ್ತಾರು ಯೋಜನೆಗಳನ್ನು ಜಾರಿಗೆ ತಂದ ಮೋದಿಯವರು, ಸರ್ಕಾರಿ ಸೌಲಭ್ಯಗಳ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಹಾಕುವ ಕ್ರಾಂತಿಕಾರಕ ಚಿಂತನೆಯನ್ನು ಜಾರಿಗೆ ತರುವ ಮೂಲಕ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿದ್ದಾರೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಯೋಜನೆಗಳ ಹಣ ಮಧ್ಯವರ್ತಿಗಳ ಮೂಲಕ ಸೋರಿ ಹೋಗಿ ಉದ್ದೇಶಿತ ಗುರಿ ಸಾಧನೆ ಸಾಧ್ಯವಾಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯಕ್ಕೂ ಕೇಂದ್ರದ ಬಿಜೆಪಿ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ರಸ್ತೆ, ರೈಲ್ವೆ, ನಗರಾಭಿವೃದ್ಧಿ, ಇಂಧನ…
ಮಡಿಕೇರಿ ಜೂ.10 NEWS DESK : ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 8 ಮಂದಿ ಪತ್ರಕರ್ತ ಸದಸ್ಯರು ಅತ್ಯುತ್ತಮ ವರದಿಗಳಿಗೆ ನೀಡಲಾಗುವ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ. ಸಂಘದ ಸದಸ್ಯರುಗಳಿಗೆ ಅತ್ಯುತ್ತಮ ವರದಿಗಳಿಗೆ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿ ಘೋಷಣೆಯಾಗಿದ್ದು, ಪತ್ರಕರ್ತೆ ವನಿತಾ ಚಂದ್ರಮೋಹನ್ ಅವರ ತಾಯಿ ಅಯಿನಮಂಡ ಲೀಲಾವತಿ ಗಣಪತಿ ಅವರು ತಮ್ಮ ಪತಿ ದಿ. ಅಯಿನಮಂಡ ಗಣಪತಿ ಅವರ ಸ್ಮರಣಾರ್ಥ ಅತ್ಯುತ್ತಮವಾದ ಮಾನವೀಯ ವರದಿಗೆ ಶಕ್ತಿ ವರದಿಗಾರ ಕೆ ಕೆ ನಾಗರಾಜ ಶೆಟ್ಟಿ ಅವರ ಜಿಲ್ಲೆಯಲ್ಲಿ ಮುಚ್ಚುವ ಹಂತಕ್ಕೆ ತಲುಪಿರುವ ರೇಷ್ಮೆ ಇಲಾಖೆ ಎಂಬ ವರದಿ ಆಯ್ಕೆಯಾಗಿದೆ. ಪತ್ರಕರ್ತ ಎಂ.ಎನ್. ಚಂದ್ರಮೋಹನ್ ಅವರು ತಮ್ಮ ತಂದೆ, ತಾಯಿ ಎಂ. ನಾರಾಯಣ ಮತ್ತು ಎನ್. ಪದ್ಮಾವತಿ ದಂಪತಿಗಳ ಸ್ಮರಣಾರ್ಥ ಅತ್ಯುತ್ತಮ ತನಿಖಾ ವರದಿಗೆ ಚಂದ್ರಮೋಹನ್ ಅವರ ಶಕ್ತಿಯಲ್ಲಿ ಪ್ರಕಟಗೊಂಡ ‘ಹಾರಂಗಿ ಅಣೆಕಟ್ಟೆ ಅಂಚಿನಲ್ಲಿ ಗಣಿಗಾರಿಕೆ ತಂದಿರುವ ಆತಂಕ’ ತನಿಖಾ ವರದಿ ಆಯ್ಕೆಯಾಗಿದೆ. ಮಾಜಿ ಸಚಿವರು ಎಂ. ಪಿ.…
ಮಡಿಕೇರಿ ಜೂ.10 NEWS DESK : ವಿಧಾನ ಪರಿಷತ್ ಸದಸ್ಯರೊಬ್ಬರು ಸಮಾಜಪರ ಚಿಂತನೆವುಳ್ಳ ಸ್ವಾಭಿಮಾನಿ, ಅಂಬೇಡ್ಕರ್ವಾದಿ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಹಗುರವಾಗಿ ಮಾತನಾಡಿರುವುದು ಸರಿಯಲ್ಲ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ರಾಜಶೇಖರ್, ಬಿಜೆಪಿ ತನ್ನ ಕೋಮುವಾದದ ಅಜೆಂಡಾದಿಂದ ಸೋಲು ಕಂಡಿದೆ. ರಾಜಕೀಯದಲ್ಲಿ ಪರ, ವಿರೋಧ ಸಹಜ, ಆದರೆ ಅದು ಪ್ರಗತಿಪರವಾಗಿರಬೇಕು ಮತ್ತು ಜನಪರವಾಗಿರಬೇಕು. ಅನವಶ್ಯಕ ಆಕ್ಷೇಪಾರ್ಹ ಪದ ಬಳಕೆ ಶೋಭೆ ತರುವುದಿಲ್ಲ ಎಂದು ಹೇಳಿದರು. ಪ್ರಿಯಾಂಕ್ ಖರ್ಗೆ ಅವರ ಹೆಸರಿಗೆ, ವಕ್ತಿತ್ವಕ್ಕೆ ಹಾಗೂ ಕುಟುಂಬಕ್ಕೆ ಧಕ್ಕೆ ತಂದಿರುವ ಕರ್ನಾಟಕ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ನಡೆ ಖಂಡನೀಯ ಎಂದರು. ನಾರಾಯಣಸ್ವಾಮಿ ಅವರು ಸಂವಿಧಾನ ಬದ್ಧ ಹುದ್ದೆಗೆ ಚ್ಯುತಿ ತರುವ ರೀತಿಯಲ್ಲಿ ನಡೆದುಕೊಂಡು ಆ ಹುದ್ದೆಯ ಘನತೆಗೆ…






