ಲೇಖಕ: admin

ಮಡಿಕೇರಿ NEWS DESK ಮೇ 10 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ ಹಾಗೂ ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಿತು. ಶುಕ್ರವಾರ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ನಡೆಯಿತು. ಶನಿವಾರ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ಶ್ರದ್ಧಾಭಕ್ತಿಯಿಂದ ಜರುಗಿತು. ನಾಗ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ಪ್ರಯುಕ್ತ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ, ನಾಗದರ್ಶನ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಉಡುಪಿಯ ಪೆರ್ಲಂಬಾಡಿಯ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗಪ್ರತಿಷ್ಠಾಪನಾ ವಾರ್ಷಿಕೋತ್ಸವ…

Read More

ಮಡಿಕೇರಿ NEWS DESK ಮೇ 10 : ರಾಷ್ಟ್ರೀಯ ಜನಗಣತಿ ಮತ್ತು ಜಾತಿಗಣತಿಯ ಸಂದರ್ಭ ಕೊಡವ ಬುಡಕಟ್ಟು ಜನಾಂಗಕ್ಕೆ ಪ್ರತ್ಯೇಕ ಕೋಡ್ ಮತ್ತು ಕಾಲಂ ಅಳವಡಿಸಬೇಕು, ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಕಲ್ಪಿಸಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ 12 ರಂದು ಪಾಡಿನಾಡ್ ನ ಕಕ್ಕಬೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಕಕ್ಕಬೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತ್ಯೇಕ ಕಾಲಮ್ ಮತ್ತು ಕೋಡ್ ನಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ…

Read More

ಮಡಿಕೇರಿ NEWS DESK ಮೇ 10 : ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಮೇ 11ರಿಂದ ಅತಿರುದ್ರ ಜಪಯಜ್ಞ ಆರಂಭಗೊಳ್ಳಲಿದೆ ಎಂದು ಜಪಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ರಮೇಶ್ ಹೊಳ್ಳ ತಿಳಿಸಿದ್ದಾರೆ. ಮೇ 11 ರಂದು ಬೆಳಿಗ್ಗೆ 6.30 ಗಂಟೆಗೆ ಜಪಯಜ್ಞ ಆರಂಭಗೊಳ್ಳಲಿದ್ದು, ಅಂದು ಅರುಣೋದಯದ ಸಮಯಕ್ಕೆ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ ನಡೆಯಲಿದೆ. ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ.ಪ್ರಶಾಂತ್ ಆಚಾರ್ಯರು ಇದರ ನೇತೃತ್ವವನ್ನು ವಹಿಸಲಿದ್ದಾರೆ. ಮೇ 11ರಿಂದ 21ರವರೆಗೆ ನಡೆಯುವ ಜಪಯಜ್ಞಕ್ಕೆ ರಾಜ್ಯಾದ್ಯಾಂತದಿಂದ 50ಕ್ಕೂ ಅಧಿಕ ಋತ್ವಿಜರು ಆಗಮಿಸಲಿದ್ದಾರೆ. ಅವಧೂತರಾದ ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಸಂಕಲ್ಪಿಸಿರುವ ಕೋಟ್ಯಧಿಕ ಶ್ರೀ ರುದ್ರ ಜಪ ಕೈಂಕರ್ಯವು ಕಳೆದ ಐದು ವರ್ಷಗಳಿಂದ ರಾಜ್ಯದ ಎಲ್ಲೆಡೆ ನಡೆಯುತ್ತಿದ್ದು, 50ಲಕ್ಷ ರುದ್ರ ಜಪ ಪೂರ್ಣವಾಗಿದೆ. 2030ರ ಜನವರಿ 18ಕ್ಕೆ ಶಿವಮೊಗ್ಗದಲ್ಲಿ ಜಪಯಜ್ಞ ಸಾಂಗತವಾಗಲಿದೆ. ಮೇ 11ರಿಂದ 19ರವರೆಗೆ ತಲಕಾವೇರಿ ಸನ್ನಿಧಿಯಲ್ಲಿ 9ದಿನಗಳು ಪ್ರತಿದಿನ ಮೂರು ಆವರ್ತ ಶ್ರೀ ರುದ್ರ ಜಪ…

Read More

ಮಡಿಕೇರಿ ಮೇ 10 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ ಸುಮಾರು ರೂ.22 ಲಕ್ಷಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ತಾನು ಆಯ್ಕೆಯಾಗಿ ಬಂದಲ್ಲಿನಿಂದ ಕ್ಷೇತ್ರದಾದ್ಯಂತ ರಸ್ತೆಗಳ ಅಭಿವೃದ್ಧಿಗೆ ಪ್ರಮುಖ ಆದ್ಯತೆಯನ್ನು ನೀಡುತ್ತಿದ್ದು, ಪಕ್ಷದ ಮುಖಂಡರುಗಳು, ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಅಭಿವೃದ್ಧಿ ಕಾಮಗಾರಿಗಳಿಗೆ ತನ್ನೊಂದಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು. ಜನರ ಬೇಡಿಕೆಗಳಿಗೆ ಸ್ಪಂದಿಸುತ್ತಾ ಆದ್ಯತೆ ಮೇರೆಗೆ ತಾನು ಎಲ್ಲಾ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ತಿತೀರ ಪ್ರಭು ಸುಬ್ಬಯ್ಯ, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರ ಪ್ರಮುಖರು ಹಾಜರಿದ್ದರು.

Read More

ಮಡಿಕೇರಿ ಮೇ 10 NEWS DESK : ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ವಾರ್ಷಿಕ ಮಹಾಸಭೆಯು ಮೇ 14 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ನಗರಸಭಾ ಆವರಣದಲ್ಲಿರುವ ಸಂಘದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಸಭೆಗೆ ಹಾಜರಾಗುವಂತೆ ಸಂಘದ ಅಧ್ಯಕ್ಷ ಜೆ.ಎ.ಮಹೇಶ್ವರ್ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 10 NEWS DESK : ಪೊನ್ನಂಪೇಟೆ ತಾಲ್ಲೂಕಿನ ಟಿ ಶೆಟ್ಟಿಗೇರಿ ಗ್ರಾಮದಲ್ಲಿ ವಿವಿಧ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಟಿ.ಶೆಟ್ಟಿಗೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸುಮಾರು 40ಕ್ಕೂ ಅಧಿಕ ಮಂದಿ ಕಾರ್ಯಕರ್ತರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಶಾಲು ಹೊದಿಸಿ ಪಕ್ಷಕ್ಕೆ ಬರ ಮಾಡಿಕೊಂಡರು. ಈ ಸಂದರ್ಭ ಮಾತನಾಡಿದ ಶಾಸಕರು, ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸುವುದರೊಂದಿಗೆ ಎಲ್ಲರೂ ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದರು. ಶತಮಾನಗಳಿಂದ ಜನಪರವಾಗಿರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಎಲ್ಲರೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ತಿತೀರ ಪ್ರಭು ಸುಬ್ಬಯ್ಯ, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಹಾಗೂ ಇತರ ಪ್ರಮುಖರು ಹಾಜರಿದ್ದರು.

Read More

ಕುಶಾಲನಗರ ಮೇ 10 NEWS DESK : ಕುಶಾಲನಗರ ತಾಲ್ಲೂಕು ವೀರಶೈವ – ಲಿಂಗಾಯತ ಮಹಾಸಭಾದ ವತಿಯಿಂದ ಬಸವ ಜಯಂತಿ ಕಾರ್ಯಕ್ರಮದ ಅಂಗವಾಗಿ ಇಂದು ಕುಶಾಲನಗರ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ವೀರಶೈವ ಸಮಾಜ ಬಾಂಧವರಿಗೆ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ನಂದೀಶ್, ಕ್ರೀಡಾಕೂಟಗಳು ಪರಸ್ಪರ ಸ್ನೇಹ, ಒಗ್ಗಟ್ಟಿಗೆ ಸಹಕಾರಿ ಹಾಗೂ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದರು. ಪ್ರತಿಯೊಬ್ಬರೂ ಕ್ರೀಡಾ ಮನೋಭಾವ ಬೆಳೆಸಿಕೊಂಡು ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್, ಕ್ರೀಡಾಕೂಟಗಳು ಪರಸ್ಪರ ಪ್ರೀತಿ- ವಿಶ್ವಾಸ, ಬಾಂಧವ್ಯ ಹಾಗೂ ಸೌಹಾರ್ದತೆ ಬೆಳೆಸಲು ಸಹಕಾರಿಯಾಗಿವೆ ಎಂದರು. ವೀರಶೈವ ಸಮಾಜದ ವತಿಯಿಂದ ಕೈಗೊಳ್ಳುವ ಸಮಾಜಮುಖಿ ಸೇವಾ ಕಾರ್ಯಗಳಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಅಂತರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ತೊರೆನೂರು ಗ್ರಾಮದ ಟಿ.ಹೆಚ್.ಗಣೇಶ್ ಸಾಧನೆ ಬಗ್ಗೆ…

Read More

ಮಡಿಕೇರಿ ಮೇ 10 NEWS DESK : ಸಮುದಾಯ ಬಾಂಧವರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಿ ಸೌಹಾರ್ದ ಸಂಬಂಧಗಳೊಂದಿಗೆ ಸಂಘಟನೆಯನ್ನು ಸದೃಢಗೊಳಿಸುವ ಚಿಂತನೆಯಡಿ ಕೊಡಗು ಜಿಲ್ಲಾ ಬಂಟರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿತ ‘ಬಂಟೆರೆನ ಸಮ್ಮಿಲನ’ ಕ್ರೀಡಾಕೂಟಕ್ಕೆ ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವಿದ್ಯುಕ್ತ ಚಾಲನೆ ದೊರೆಯಿತು. ಬಂಟೆರೆನ ಸಮ್ಮಿಲನ ಕ್ರೀಡಾಕೂಟವನ್ನು ಗಾಳಿಬೀಡು ನಿವೃತ್ತ ಯೋಧ ಬಾಬು ಪ್ರಸಾದ್ ರೈ ಮತ್ತು ಕೊಡಗು ಬಂಟರ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಗಿರೀಶ್ ರೈ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ.ಸದಾನಂದ, ರೈ ಸಮುದಾಯ ಬಾಂಧವರ ಸಂಘಟನೆ ಮತ್ತು ಪರಸ್ಪರ ಸೌಹಾರ್ದತೆಗಾಗಿ ಕ್ರೀಡಾಕೂಟ ಆಯೋಜಿಸಲಾಗಿದ್ದು, ಇದರ ಯಶಸ್ಸಿಗೆ ಸಮುದಾಯ ಬಾಂಧವರು ಶ್ರಮಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ನಗರಸಭಾ ಸದಸ್ಯ ಅರುಣ್ ಶೆಟ್ಟಿ, ವಿಶ್ಮ ರೆಸಾರ್ಟ್ ಮಾಲೀಕ ನಿತಿನ್ ಶೆಟ್ಟಿ, ಬಂಟರ ಸಂಘದ ನಗರ ಕಾರ್ಯದರ್ಶಿ ಸುಜಾತ ಗಣೇಶ್ ರೈ, ನಿಕಟಪೂರ್ವ ಅಧ್ಯಕ್ಷೆ…

Read More

ಮೂರ್ನಾಡು ಮೇ 10 NEWS DESK : ಕ್ರೀಡೆಗಳಿಗೆ ಸಮುದಾಯದ ಬಾಂಧವ್ಯ ಬೆಸೆಯುವ ಶಕ್ತಿಯಿದ್ದು, ಮುಂದೆಯು ಹೆಚ್ಚಿನ ಕ್ರೀಡಾಕೂಟಗಳು ಆಯೋಜನೆಯಾಗಬೇಕೆಂದು ಬೆಳೆಗಾರರಾದ ಟಿ.ಎನ್.ಲೋಕನಾಥ್ ಅಭಿಪ್ರಾಯಿಸಿದರು. ಬಲಿಜ ನಾಯ್ಡು ಸಮಾಜದ ಅಂಗ ಸಂಸ್ಥೆಯಾದ ನಾಯ್ಡುಸ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಮೂರ್ನಾಡು ಕಾಲೇಜು ಮೈದಾನದಲ್ಲಿ ನಡೆದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಲಿಜ ಸಮಾಜ ಬಾಂಧವರು ವಿರಳವಾಗಿದ್ದರು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ನೆಲೆಸಿರುವ ಸಮಾಜ ಬಾಂಧವರನ್ನು ಒಂದೇ ವೇದಿಕೆಯಲ್ಲಿ ಕರೆತರುವಂತೆ ಮಾಡುವ ಶಕ್ತಿ ಕ್ರೀಡೆಗಿದೆ ಎಂದರು. ಮೂರ್ನಾಡು ಬೆಳೆಗಾರರಾದ ಗಣೇಶ್ ನಾಯ್ಡು ಮಾತನಾಡಿ, ಕ್ರೀಡಾಕೂಟ ಕೇವಲ ಕ್ರೀಡೆಗೆ ಮಾತ್ರ ಸಿಮಿತವಾಗದೆ. ಸಮಾಜದ ಕುಟುಂಬಗಳನ್ನು ಒಂದು ಮಾಡುವ ಸಮ್ಮಿಲನ ಕಾರ್ಯಕ್ರಮವಾಗಿದೆ ಎಂದು ಅಭಿಪ್ರಾಯಿಸಿದರು. ನಾಯ್ಡುಸ್ ಸ್ಪೋಟ್ರ್ಸ್ ಕ್ಲಬ್ ಉಪಾಧ್ಯಕ್ಷ ಟಿ.ಜಿ.ಹರ್ಷ ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಒಟ್ಟು 8 ತಂಡಗಳು ಭಾಗವಹಿಸಿವೆ. ಲೀಗ್ ಮಾದರಿಯಲ್ಲಿ ಪಂದ್ಯಗಳು ನಡೆಯಲಿದೆಯೆಂದರು. ವೇದಿಕೆಯಲ್ಲಿ ನಾಯ್ಡುಸ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ…

Read More

ಮಡಿಕೇರಿ ಮೇ 10 NEWS DESK : ಕುಶಾಲನಗರ ಪುರಸಭೆ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್‍ಗೌಡ ಉದ್ಘಾಟಿಸಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಕೆ.ಪಿ.ಚಂದ್ರಕಲಾ ಹಾಗೂ ಮತ್ತಿತರರು ಹಾಜರಿದ್ದರು.

Read More