ಮಡಿಕೇರಿ ಏ.13 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಆಯೋಜಿಸಿದ್ದ ಪತ್ರಕರ್ತರು ಹಾಗೂ ಆಯೋಜಕರ ನಡುವಿನ ಪ್ರದರ್ಶನ ಪಂದ್ಯ ಮಳೆಯ ಕಾರಣದಿಂದ ಡ್ರಾದಲ್ಲಿ ಅಂತ್ಯಗೊಂಡಿತು. ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಸನ್ – 2ರ ಸೆಮಿಫೈನಲ್ ಪಂದ್ಯಾಟದ ನಂತರ ಕೂರ್ಗ್ ಕ್ರಿಕೆಟ್ ಫೌಂಡೇಶನ್ (ಟೀಂ ಸಿ.ಸಿ.ಎಫ್) ಹಾಗೂ ಕೊಡಗು ಪತ್ರಕರ್ತರ ಸಂಘದ (ಟೀಂ ಕೆಪಿಎಸ್) ನಡುವೆ ಸೌಹಾರ್ದ ಪ್ರದರ್ಶನ ಪಂದ್ಯ ನಡೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಸಿಎಫ್ ತಂಡ 10 ಓವರ್ ಗಳಲ್ಲಿ 84 ರನ್ ಕಲೆ ಹಾಕಿತು. ಈ ಮೊತ್ತವನ್ನು ಬೆನ್ನಟ್ಟಿದ ಕೆಪಿಎಸ್ ತಂಡ 7.3 ಓವರ್ ಗಳಲ್ಲಿ 56 ರನ್ ಗಳಿಸಿತ್ತು. ಆದರೆ ಮಳೆ ಸುರಿದ ಕಾರಣ ಪಂದ್ಯವನ್ನು ಡ್ರಾ ಮಾಡಲಾಯಿತು. ಕೆಪಿಎಸ್ ತಂಡದ ಪರ ಕುಡೆಕಲ್ ಸಂತೋಷ್ ನಾಯಕತ್ವದಲ್ಲಿ ನಾಸೀರ್, ಖಲೀಲ್, ವಿಘ್ನೇಶ್ ಭೂತನಕಾಡು, ಸುರೇಶ್ ಬಿಳಿಗೇರಿ, ಸೈನುಲ್ಲ,…
ಲೇಖಕ: admin
ವಿರಾಜಪೇಟೆ ಏ.13 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ತಾಲ್ಲೂಕು ಕದನೂರು ಹಾಗೂ ಅರಮೇರಿ ಗ್ರಾಮದ ಪನ್ನಂಗಾಲತಮ್ಮೆ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಕೆಲವು ಸಮಯ ದೇವಿಯ ಸನ್ನಿಧಿಯಲ್ಲಿ ಕಳೆದ ಶಾಸಕರು ಸ್ಥಳೀಯರಿಂದ ಹಾಗೂ ಅರ್ಚಕರಿಂದ ದೇವಿಯ ಮಹಾತ್ಮೆಯ ಬಗ್ಗೆ ಅರಿತುಕೊಂಡರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣ್ಣಚ್ಚ, ವಲಯ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕುಶಾಲನಗರ, ಏ.13 NEWS DESK : ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಶೃತಿ .ಎಸ್. ಮಂಜುನಾಥ್ ಮಂಡಿಸಿದ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದ ವತಿಯಿಂದ ನಡೆದ 43ನೇ ಘಟಿಕೋತ್ಸವದಲ್ಲಿ ಪಿ.ಎಚ್.ಡಿ.ಪದವಿಯ ಪ್ರಶಸ್ತಿಯನ್ನು ಉನ್ನತ ಶಿಕ್ಷಣ ಸಚಿವ ಸುಧಾಕರ್ ಪಡೆದುಕೊಂಡರು. ಮಂಗಳೂರು ವಿಶ್ವವಿದ್ಯಾನಿಲಯದ ರಾಸಾಯನ ಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕಿ ಪ್ರೊಫೆಸರ್ ಬಿ. ವಿಶಾಲಾಕ್ಷಿ ಅವರ ಮಾರ್ಗದರ್ಶನದಲ್ಲಿ “ಹೈಬ್ರೀಡ್ ಪಾಲಿಮರ್ ನ್ಯಾನೋಕೋಪೋಸೈಟ್ಸ್ : ಸಿಂಥೆಸೀಸ್ ಕ್ಯಾರಕ್ಟರೈಷೇಶನ್ಸ್ ಅಂಡ್ ಅಪ್ಲಿಕೇಶನ್ಸ್ ಎಂಬ ವಿಷಯದ ಮೇಲೆ ಡಾಕ್ಟರೇಟ್ ಪದವಿ ಪಡೆದರು. ಶೃತಿ ಸೋಮವಾರಪೇಟೆಯ ಪುಷ್ಪಾ ಎಸ್ ಸಾಲಿಯಾನ್ ಅವರ ಪುತ್ರಿ. ಚಿಕ್ಕ ಅಳುವಾರ ಗ್ರಾಮದ ಸಿ.ಕೆ.ಉದಯ್ ಕುಮಾರ್ ಮತ್ತು ಮಾದೇವಿ ದಂಪತಿಯ ಸೊಸೆ.
ಮಡಿಕೇರಿ NEWS DESK ಏ.13 : ಯುವ ಸಮೂಹ ಹಾದಿ ತಪ್ಪುವುದನ್ನು ತಪ್ಪಿಸಲು ಮತ್ತು ಆರೋಗ್ಯಕರ ಜೀವನ ನಡೆಸಲು ಕ್ರೀಡೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ಆಯೋಜಿಸಿರುವ ಕೊಡವ ಕ್ರಿಕೆಟ್ ಲೆದರ್ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಹಾಗೂ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಕೂಟಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿರುವುದಲ್ಲದೆ ಉತ್ತಮ ಬದುಕು ಕಟ್ಟಿಕೊಟ್ಟಿವೆ ಎಂದರು. ಕ್ರೀಡೆಗಳು ಯುವ ಸಮೂಹವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯುತ್ತವೆ ಮತ್ತು ಆರೋಗ್ಯವನ್ನು ಕಾಪಾಡುತ್ತದೆ. ಹೆಚ್ಚು ಹೆಚ್ಚು ಕ್ರೀಡಾಕೂಟಗಳು ನಡೆಯುವುದರಿಂದ ಕೊಡಗಿನ ಆಟಗಾರರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ ಎಂದರು. ಜನಪ್ರಿಯ ಕ್ರೀಡೆಯಾಗಿರುವ ಕ್ರಿಕೆಟ್ ಗೆ ಜಿಲ್ಲೆಯಲ್ಲಿ ಉತ್ತೇಜನ ನೀಡುತ್ತಿರುವುದು ಸ್ವಾಗತಾರ್ಹ, ಕೂರ್ಗ್ ಕ್ರಿಕೆಟ್ ಫೌಂಡೇಶನ್ ಯುವ ಸಮೂಹವನ್ನು ಉತ್ತೇಜಿಸಲು ಲೆದರ್ ಬಾಲ್…
ಮಡಿಕೇರಿ ಏ.12 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ರ ಅಂತಿಮ ಪಂದ್ಯ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಟೀಮ್ ಲಿವರೇಜ್ ತಂಡಗಳ ನಡುವೆ ಏ.13 ರಂದು ನಡೆಯಲಿದೆ. ಇಂದು ನಡೆದ 12ನೇ ದಿನದ ಪಂದ್ಯದಲ್ಲಿ ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ಮತ್ತು ಟೀಮ್ ಲಿವರೇಜ್ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಲಿವರೇಜ್ ತಂಡ 20 ಓವರ್ಗಳಲ್ಲಿ 9 ವಿಕೆಟ್ಗಳ ನಷ್ಟಕ್ಕೆ 144 ರನ್ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ತಂಡ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 114 ರನ್ಗಳನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು. ಟೀಮ್ ಲಿವರೇಜ್ ತಂಡದ ಅಂಜAಡ ಚೇತನ್ ಚಿಣ್ಣಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಏ.13 ರಂದು ಬೆಳಿಗ್ಗೆ 11 ಗಂಟೆಗೆ ಪಾಲಿಬೆಟ್ಟದ ಟಾಟಾ ಕಾಫಿ ಮೈದಾನದಲ್ಲಿ…
*ಮೈದಾನ 1* ಮೂಕೋಂಡ ಮತ್ತು ಕುಂಡ್ಯೋಳಂಡ ಪಂದ್ಯಗಳ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಕೊಂಡ್ಯೋಳಂಡ ತಂಡ ಜಯ ಸಾಧಿಸಿತು. ಕುಂಡ್ಯೋಳಂಡ ಪರ ಪ್ರಫುಲ್ ಪೊನ್ನಪ್ಪ ಹಾಗೂ ಕಾರ್ಯಪ್ಪ ತಲಾ 1 ಗೋಲು ದಾಖಲಿಸಿದರು. ಮೂಕೋಂಡ ತಂಡದ ಮಿಥೇಶ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಆದೇಂಗಡ ಮತ್ತು ನಾಪಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ನಾಪಂಡ ಗೆಲುವು ದಾಖಲಿಸಿತು. ನಾಪಂಡ ಪರ ನಿತಿನ್ ನಾಚಪ್ಪ, ಪ್ರವೀಣ್ ಹಾಗೂ ಬೋಪಣ್ಣ ತಲಾ 1 ಗೋಲು ದಾಖಲಿಸಿದರು. ಆದೇಂಗಡ ಶಾನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೇಲೇಟಿರ ಮತ್ತು ಕುಪ್ಪಂಡ (ನಾಂಗಾಲ) ನಡುವಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಕೇಲೇಟಿರ ತಂಡ ಜಯ ಸಾಧಿಸಿತು. ಕೇಲೇಟಿರ ಪರ ಸುಬ್ರಮಣಿ, ಕವನ್ ಕಾಳಪ್ಪ ಹಾಗೂ ನಿಶ್ಚಯ್ ಮುತ್ತಣ್ಣ ತಲಾ 1 ಗೋಲು ದಾಖಲಿಸಿದರು. ಕುಪ್ಪಂಡ ಪರ ಶರತ್ ಚಿಣ್ಣಪ್ಪ ಹಾಗೂ ಗೌರವ್ ಗಣಪತಿ ತಲಾ 1 ಗೋಲು ದಾಖಲಿಸಿದರು.…
*ಮೈದಾನ 1* ಬೆಳಿಗ್ಗೆ 9 ಗಂಟೆಗೆ ಅಜ್ಜೆಟ್ಟಿರ ಮತ್ತು ಪುಲ್ಲಂಗಡ, 10 ಗಂಟೆಗೆ ಅಲ್ಲಪಂಡ ಮತ್ತು ಪಟ್ಟಡ, 11 ಗಂಟೆಗೆ ಕುಲ್ಲಚಂಡ ಮತ್ತು ಆಲೆಮಾಡ, ಮಧ್ಯಾಹ್ನ 12 ಗಂಟೆಗೆ ಬೊಜ್ಜಂಗಡ ಮತ್ತು ಕೂತಂಡ 1 ಗಂಟೆಗೆ ಬೊಳಿಯಾಡಿರ ಮತ್ತು ಪೆಮ್ಮಂಡ 2 ಗಂಟೆಗೆ ಅಮ್ಮಣಿಚಂಡ ಮತ್ತು ಬೊಳಕಾರಂಡ, 3 ಗಂಟೆಗೆ ಅಜ್ಜಮಾಡ ಮತ್ತು ಕೊಟ್ಟಂಗಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಐಚೆಟ್ಟಿರ ಮತ್ತು ಕಳಕಂಡ, 10 ಗಂಟೆಗೆ ನಾಳಿಯಂಡ ಮತ್ತು ತೀತಮಾಡ, 11 ಗಂಟೆಗೆ ಕಾಳಿಮಾಡ ಮತ್ತು ಕೊಂಗೇಟಿರ, ಮಧ್ಯಾಹ್ನ 12 ಗಂಟೆಗೆ ಕಲ್ಯಾಟಂಡ ಮತ್ತು ಅಮ್ಮಂಡ, 1 ಗಂಟೆಗೆ ತಾಪಂಡ ಮತ್ತು ಚೇನಂಡ, 2 ಗಂಟೆಗೆ ಚೋಯಮಾಡಂಡ ಮತ್ತು ಅಪ್ಪಾರಂಡ, 3 ಗಂಟೆಗೆ ಕೋಟೇರ ಮತ್ತು ಅಪ್ಪನೆರವಂಡ
ಮಡಿಕೇರಿ ಏ.12 NEWS DESK : ಮಡಿಕೇರಿ ಅರೆಭಾಷೆ ಗೌಡ ಸ್ಪೋಟ್ರ್ಸ್ ಅಕಾಡೆಮಿ ವತಿಯಿಂದ ಏ.18, 19 ಮತ್ತು 20 ರಂದು ಮಡಿಕೇರಿಯಲ್ಲಿ ಪ್ರಥಮ ವರ್ಷದ ಗೌಡ ಕ್ರೀಡಾ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ನಿರ್ದೇಶಕ ಪೊನ್ನಚ್ಚನ ಶ್ರೀನಿವಾಸ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರೆಭಾಷಿಕ ಜನಾಂಗದ ಪ್ರತಿಭಾವಂತ ಆಟಗಾರರಿಗೆ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಗರದ ಗಾಂಧಿ ಮೈದಾನದಲ್ಲಿ ಫುಟ್ಬಾಲ್ ಚಾಂಪಿಯನ್ಶಿಪ್ ಲೀಗ್, ಪುರುಷರ ವಾಲಿಬಾಲ್ ಮತ್ತು ಮಹಿಳೆಯರ ಥ್ರೋಬಾಲ್ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಹೇಳಿದರು. ಏ.18 ರಂದು 16 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಫುಟ್ಬಾಲ್ ಪಂದ್ಯಾಟ(5+2) ನಡೆಯಲಿದೆ. ಬಾಲಕಿಯರ ವಿಭಾಗದಲ್ಲಿ 4 ತಂಡ, ಬಾಲಕರ ವಿಭಾಗದಲ್ಲಿ 8 ತಂಡಗಳು ನೋಂದಾಯಿಸಲ್ಪಟ್ಟಿವೆ. ಅದೇ ದಿನ ಮಡಿಕೇರಿ ನಗರ ವ್ಯಾಪ್ತಿಯ ಮುಕ್ತ ಫುಟ್ಬಾಲ್ ಪಂದ್ಯಾಟ(5+2) ನಡೆಯಲಿದ್ದು, 8 ಫ್ರಾಂಚೈಸಿಗಳಿವೆ. ಗೌಡ ಫುಟ್ಬಾಲ್ ಚಾಂಪಿಯನ್ ಲೀಗ್ನಲ್ಲಿ 10 ಫ್ರಾಂಚೈಸಿ ತಂಡಗಳಿವೆ. ಈಗಾಗಲೇ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆದಿದೆ. ಹಗಲು ಮತ್ತು…
ಸುಂಟಿಕೊಪ್ಪ ಏ.12 NEWS DESK : ಮಾದಾಪುರ ಎಸ್ಜೆಎಂ ಶಾಲೆಯ ವತಿಯಿಂದ 40 ದಿನಗಳ ಬೇಸಿಗೆ ಶಿಬಿರಕ್ಕೆ ಬೆಟ್ಟದಪುರದ ಮುರುಗಮಠದ ಶ್ರೀ ಮೋಕ್ಷಪತಿ ಸ್ವಾಮೀಜಿ ಚಾಲನೆ ನೀಡಿದರು. ಬೆಟ್ಟದಪುರದ ಮುರುಗಮಠದ ಶ್ರೀ ಮೋಕ್ಷಪತಿ ಸ್ವಾಮೀಜಿಯವರು 40 ದಿನಗಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಶಿಬಿರದಿಂದ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಹೆಚ್ಚಿಸಿಕೊಳ್ಳಲು ಸೂಕ್ತ ವೇದಿಕೆಯಾಗಿದೆ. ಇದರಿಂದ ಸಾಕಷ್ಟು ಶಿಕ್ಷಣ ಸೇರಿದಂತೆ ಸಾಮಾಜಿಕ ಉತ್ತಮ ವಿಚಾರ ದಾರೆಗಳನ್ನು ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡುವಂತಾಗಬೇಕೆಂದರು. ಕ್ರಿಕೆಟ್ ಹಾಗೂ ಕಬ್ಬಡಿ ನುರಿತ ತರಬೇತುದಾರರಿಂದ ತರಬೇತಿಯನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ಪೋಷಕರಿಗೂ, ಶಾಲೆ ಹಾಗೂ ಊರಿಗೆ ಕೀರ್ತಿಯನ್ನು ತರಲು ಈ ಶಿಬಿರವು ಸಹಕಾರಿಯಾಗಲೆಂದು ಮೋಕ್ಷಪತಿ ಸ್ವಾಮೀಜಿ ಹೇಳಿದರು. ಈ ಸಂದರ್ಭ ಶಾಲಾ ಶಿಕ್ಷಕಿಯರಾದ ಪ್ರಿಯಾ, ಪ್ರಜ್ಞಾ, ನಿವೇದಿತಾ, ಜೂರ, ಲವ್ಯ, ಅಂಕಿತ, ಧನ್ಯ, ಆದಿರಾ, ಸಂಸ್ಥೆಯ ವಿಚಾರಕ ಅನಿಶ್ ಹಾಗೂ ಶಿಬಿರಾರ್ಥಿಗಳು…
ಕುಶಾಲನಗರ, ಏ.12 NEWS DESK : ಬೆಳಗಾವಿ ತಾಂತ್ರಿಕ ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಜಲ ದಿನಾಚರಣೆ: 2025 ರ ಅಂಗವಾಗಿ ಜಲ ಸಂರಕ್ಷಣಾ ಬೃಹತ್ ಅಭಿಯಾನ:2025 ನಡೆಸಲಾಯಿತು. ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಜಲ ಸಂರಕ್ಷಣಾ ಅಭಿಯಾನದ ಅಂಗವಾಗಿ ಎಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ಏರ್ಪಡಿಸಿದ್ದ ಜಲ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ್ದ ಕಾಲೇಜಿನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮನ್ನು ಜಲ ಸಂರಕ್ಷಣೆಗೆ ತೊಡಗಿಸಿಕೊಳ್ಳುವ ಕುರಿತಂತೆ ಗಿನ್ನಿಸ್ ರೆಕಾರ್ಡ್ ಗಾಗಿ ಸರ್ಕಾರದಿಂದ ಕೈಗೊಂಡಿದ್ದ ಜಲ ಸಂರಕ್ಷಣೆಯ ಗಿನ್ನಿಸ್ ರೆಕಾರ್ಡ್ ನ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿ ತಾವುಗಳು ಜಲ ಸಂರಕ್ಷಕರಾಗುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಇದೇ ವೇಳೆ ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಎಲ್ಲರೂ ಜತೆಗೂಡಿ, ತಾವುಗಳೆಲ್ಲರೂ “ನಾಳಿನ ಉತ್ತಮ ಭವಿಷ್ಯಕ್ಕಾಗಿ ‘ಜಲ ಸಂರಕ್ಷಣೆ” ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಒಕ್ಕೊರಲಿನಿಂದ ಪ್ರಮಾಣೀಕರಿಸಿದರು. ಜನ…






