ಮಡಿಕೇರಿ ಏ.12 NEWS DESK ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಏಪ್ರಿಲ್, 16 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ರಾಣಿ ಮದ್ರಾಸ್ ಪ್ರೈ.ಲಿ., ಮೈಸೂರು, ಆಟೋ ಲೈವ್, ಕಾಡಕೊಳ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಕೂರ್ಗ್ ಜಂಗಲ್ ಕ್ಯಾಂಪ್ ರೆಸಾರ್ಟ್, ಕುಶಾಲನಗರ, ಮುತ್ತೂಟ್ ಪೈನಾನ್ಸ್, ಮೈಸೂರು, ಕಾವೇರಿ ಹೊಂಡಾ, ಕುಶಾಲನಗರ, ಪ್ಯಾಲೇಸ್ ಟಯೋಟ ಕಾರ್ ಶೋ ರೂಂ, ಕುಶಾಲನಗರ ಹಾಗೂ ಪರ್ಪಲ್ ಪಾಮ್ಸ್ ರೆಸಾರ್ಟ್, ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು,…
ಲೇಖಕ: admin
ಮಡಿಕೇರಿ ಏ.12 NEWS DESK : ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯ ರೂ. 2000 ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಇದುವರೆಗೂ 1,20,641 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು, ಜನವರಿ-2025ರ ಮಾಹೆಯ ಅಂತ್ಯಕ್ಕೆ 1,16,255 ಫಲಾನುಭವಿಗಳಿಗೆ ರೂ. 23,25,10,000 ಹಣ ಪಾವತಿಯಾಗಿರುತ್ತದೆ. ಈ ಯೋಜನೆಯಡಿ ಆಗಸ್ಟ್-2023 ರಿಂದ ಜನವರಿ-2025ರವರೆಗೆ ಒಟ್ಟು 18 ತಿಂಗಳು ರೂ. 403,94,02,000 ಹಣ ಪಾವತಿಯಾಗಿರುತ್ತದೆ ಮತ್ತು ಶೇಕಡಾ 96.36 ರಷ್ಟು ಸಾಧನೆ ಮಾಡಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ನಾಪೋಕ್ಲು ಏ.12 NEWS DESK : ಪಾಲೂರು ಗ್ರಾಮದ ಶ್ರೀ ಪಾಲೂರಪ್ಪ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಉತ್ಸವವು ಏ.13 ರಿಂದ 19 ರವರೆಗೆ ನಡೆಯಲಿದೆ. ಏ.13 ರಂದು ಮಹಾಲಿಂಗೇಶ್ವರ ದೇವರ ಮೂಲ ಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಗುವುದು. ಏ.14 ರಂದು ಗಣ ಹೋಮ ಮತ್ತು ಕೊಡಿಮರ ಏರಿಸುವುದು, ಬೆಳಿಗ್ಗೆ ಮಧ್ಯಾಹ್ನ ಮತ್ತು ರಾತ್ರಿ ಉತ್ಸವಬಲಿ ನಡೆಯಲಿದೆ. ಏ.16 ರಂದು ಉತ್ಸವ ಬಲಿ ಮತ್ತು ರಾತ್ರಿ ದೀಪಾರಾಧನೆ ನಡೆಯಲಿದೆ. ಏ.17ರಂದು ಹಗಲು ಉತ್ಸವಬಲಿ ನಡೆದು ಸಂಜೆ ದೀಪಾರಾಧನೆ ನಡೆಯಲಿದೆ. ಏ.18 ರಂದು ಪಟ್ಟಣಿಹಬ್ಬ ಜರುಗಲಿದೆ. ಬೆಳಗ್ಗೆ ತುಲಾಭಾರ, ಮಧ್ಯಾಹ್ನ ಎತ್ತು ಪೋರಾಟ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಅಪರಾಹ್ನ ಜೋಡಿ ದೇವರ ನೃತ್ಯೋತ್ಸವ ನಡೆಯಲಿದೆ. ಪಾಲೂರಪ್ಪ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಒಳಪಡುವ ಕುಯ್ಯಂಗೇರಿ ನಾಡಿನ ಗ್ರಾಮಗಳಾದ ಪಾಲೂರು, ಹೊದ್ದೂರು, ಹೊದವಾಡ, ಕುಂಬಳದಾಳು, ಅರವತ್ತೋಕ್ಲು, ಬೆಟ್ಟಗೇರಿ, ಹೆರವನಾಡು, ಕಾರುಗುಂದ ಮತ್ತು ಕಡಿಯತ್ತೂರಿನ ಸೇರಿದಂತೆ ವಿವಿಧೆಡೆಯಿಂದ ಭಕ್ತರು…
ನಾಪೋಕ್ಲು ಏ.12 NEWS DESK : ವಿದ್ಯಾರ್ಥಿಗಳು ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಂಡು ರಜಾ ಅವಧಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಿವೃತ ಏರ್ ಪೋರ್ಸ್ ಅಧಿಕಾರಿ ಕೊಂಡಿರ ಗಣೇಶ್ ನಾಣಯ್ಯ ಹೇಳಿದರು. ನಾಪೋಕ್ಲು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಕೆಪಿಎಸ್ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 25ನೇ ವರ್ಷದ ಹಾಕಿ ಹಾಗೂ ಇನ್ನಿತರ ಬೇಸಿಗೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯರಾದ ದಿ.ಕಲಿಯಂಡ ಸಾಬು ಅಯ್ಯಣ್ಣ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕ್ರೀಡಾ ಅಕಾಡಮಿ ಸ್ಥಾಪಿಸಿದ ಬಳಿಕ 25 ವರ್ಷಗಳಲ್ಲಿ ನಿರಂತರವಾಗಿ ಬೇಸಿಗೆ ಶಿಬಿರವನ್ನು ಆಯೋಜಿಸುತ್ತಾ ಬರಲಾಗುತ್ತಿದ್ದು ಹಲವು ವಿದ್ಯಾರ್ಥಿಗಳು ತರಬೇತಿ ಪಡೆದು ಉನ್ನತ ಸ್ಥಾನ ಹೊಂದಿದ್ದಾರೆ. ಹಲವು ಕ್ರೀಡಾಪಟುಳಾಗಿಗಳು ಹೊರಹೊಮ್ಮಿದ್ದಾರೆ. ವಿದ್ಯಾರ್ಥಿಗಳ ಏಳಿಗೆಯಲ್ಲಿ ಪೋಷಕರ ಪಾತ್ರ ಮುಖ್ಯ. ತರಬೇತುದಾರರು ಉತ್ತಮ ಮಾರ್ಗದರ್ಶನ ನೀಡುತ್ತಿದ್ದಾರೆ. ಅಭ್ಯಾಸದ ವೇಳೆ ಉತ್ತಮ ತರಬೇತಿಯನ್ನು ವಿದ್ಯಾರ್ಥಿಗಳು ಪಡೆದುಕೊಂಡು ಉನ್ನತಿಯನ್ನು ಸಾಧಿಸಬೇಕು ಎಂದರು. ಈ ಸಂದರ್ಭ ನುರಿತ ತರಬೇತುದಾರರಾದ ಅಕಾಡೆಮಿಯ ಕಾರ್ಯದರ್ಶಿ, ಮಾಜಿ…
ಮಡಿಕೇರಿ NEWS DESK ಏ.12 : ಹಸಿರ ಜೀವರಾಶಿಯ ಪ್ರಕೃತಿ ಸೌಂದರ್ಯದ ಒಡೆಯ ಮಂಜಿನ ನಗರಿ ಮಡಿಕೇರಿಯಲ್ಲಿ ಕೊಡವ ಸಾಂಪ್ರದಾಯಿಕ ಊಟ ಮತ್ತು ಉಪಹಾರದ “ತೀನಿ ರೆಸ್ಟೋರೆಂಟ್” ನಿಮ್ಮನ್ನು ಕೈಬೀಸಿ ಕರೆಯುತ್ತಿದೆ. ಶುಚಿಯಾದ ವ್ಯವಸ್ಥೆ, ರುಚಿಯಾದ ಆತಿಥ್ಯ ‘ತೀನಿಗೆ ತೀನಿಯೇ ಸರಿಸಾಟಿ’. ಕೊಡಗಿನ ಸಾಂಪ್ರದಾಯಿಕ ಆಹಾರವನ್ನು ಸವಿಯಲು “ತೀನಿ ರೆಸ್ಟೋರೆಂಟ್”ಗೆ ಬನ್ನಿ. ಇಲ್ಲಿ ಸಿಗುವ ಬಾಯಲ್ಲಿ ನೀರೂರಿಸುವ ಮತ್ತು ಮನಸ್ಸಿಗೆ ಆನಂದವನ್ನು ನೀಡುವ ಕಡುಂಬುಟ್, ಒಟ್ಟಿ, ಪಂದಿಕರಿ, ಪೋರ್ಕ್ ಮೀಲ್ಸ್, ಚಿಕನ್ ಮೀಲ್ಸ್ ನ ರುಚಿಯೇ ಅಮೋಘ. ಕೊಡವ ಸಾಂಪ್ರದಾಯಿಕ ಆಹಾರದ ಸವಿ ಸವಿಯಲು ಇಂದೇ ಭೇಟಿ ನೀಡಿ >>> “ತೀನಿ ರೆಸ್ಟೋರೆಂಟ್”, ಆಗ್ರೋಶಕ್ತಿ ಬಿಲ್ಡಿಂಗ್, ಕಾಲೇಜ್ ರಸ್ತೆ, ಮಡಿಕೇರಿ. ಮೊಬೈಲ್ ಸಂಖ್ಯೆ : 99451 18312
ಮಡಿಕೇರಿ ಏ.12 NEWS DESK : ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವತಿಯಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಪದವಿ ಪ್ರದಾನ ಮಾಡಲಾಯಿತು. ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರೈನೋಬ್ರೈನ್ ಕೇಂದ್ರದ 21ನೇ ಬ್ಯಾಚ್ ನ ಒಟ್ಟು 22 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ 10 ಹಂತಗಳಿರುವ ಅಬಾಕಸ್ ಕೋರ್ಸ್ ನ್ನು ಈ ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರೈಸಿದ್ದಾರೆ. ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸಂಸ್ಥೆಯ ಕರ್ನಾಟಕ ಬ್ರೈನೋಬ್ರೈನ್ ಕಿಡ್ಸ್ ಅಕಾಡೆಮಿಯ ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಾಲ್ ಸ್ವರ್ಣಕರ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ, ಇಲ್ಲಿಯವರಿಗೆ ಮಡಿಕೇರಿ ಕೇಂದ್ರದಿಂದ ಒಟ್ಟು 700 ವಿದ್ಯಾರ್ಥಿಗಳು ಪದವಿ ಸ್ವೀಕಾರ ಮಾಡಿದ್ದಾರೆ ಎಂದರು. ಕರ್ನಾಟಕ ರಾಜ್ಯದ ಇತರ ಬ್ರೈನೋಬ್ರೈನ್ ಕೇಂದ್ರಗಳಲ್ಲೇ ಮಡಿಕೇರಿ ಕೇಂದ್ರದ ಅಬಕಾಸ್ ವಿದ್ಯಾರ್ಥಿಗಳನ್ನು ಅವರ ಶಿಸ್ತು ಪರಿಪಾಲನೆ, ಕ್ರಮಬದ್ಧವಾದ ಕಲಿಕೆಯಿಂದಲೇ ಗುರುತಿಸಲಾಗುತ್ತದೆ. ಇದೇ ಕಾರಣಕ್ಕೆ ಈ ಕೇಂದ್ರದ ವಿದ್ಯಾರ್ಥಿಗಳು ಬೇರೆ ಕೇಂದ್ರದ ಮಕ್ಕಳಿಗೆ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು. ಬೇರೆ ಕೇಂದ್ರಗಳಿಗೆ ಹೋಲಿಸಿದರೆ ಈ…
ಸೋಮವಾರಪೇಟೆ ಏ.12 NEWS DESK : ಒಕ್ಕಲಿಗರ ಯುವ ವೇದಿಕೆ, ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಮೂರು ದಿನಗಳ ಕಾಲ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿರುವ ರಾಷ್ರೀಯ ಮಟ್ಟದ ಹೊನಲು ಬೆಳಕಿನ 5ನೇ ವರ್ಷದ ‘ಒಕ್ಕಲಿಗರ ಕಪ್’ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಹೊರತುಪಡಿಸಿ, ಸತತ 4 ವರ್ಷಗಳಿಂದಲೂ ವ್ಯವಸ್ಥಿತವಾಗಿ ಕಬಡ್ಡಿ ಪಂದ್ಯಾವಳಿಯನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯವಾಗಿದೆ. ಗ್ರಾಮೀಣ ಕ್ರೀಡೆಗಳು ನಶಿಸದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮುಂದಿನ ಪೀಳಿಗೆಗೂ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು. ಸೋಮವಾರಪೇಟೆಯಲ್ಲಿ ಒಳಾಂಗಣ ಕ್ರೀಡಾಂಗಣ ಅವಶ್ಯಕತೆಯಿದೆ. ಸೌಲಭ್ಯಗಳ ಕೊರತೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಹಿನ್ನೆಡೆಯಾಗುತ್ತಿದೆ. ಒಕ್ಕಲಿಗರ ಯುವವೇದಿಕೆ ಈ ಬಗ್ಗೆ ಗಂಭೀರವಾಗಿ ತೆಗೆದುಕೊಂಡು ಶ್ರಮಪಡಬೇಕು. ಜನಪ್ರತಿನಿಧಿಗಳು ಮತ್ತು ಸರ್ಕಾರ ಸಹಕಾರ ನೀಡಲಿದೆ ಎಂದು ಹೇಳಿದರು. ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಮಾತನಾಡಿ, ಪಟ್ಟಣ…
ಮಡಿಕೇರಿ ಏ.12 NEWS DESK : ಕಾಂತೂರು-ಮೂರ್ನಾಡು ಶ್ರೀ ಪನ್ನಂಗಾಲ ದೇವಿಯ ವಾರ್ಷಿಕೋತ್ಸವವು ಏ.17 ಮತ್ತು 18 ರಂದು ನಡೆಯಲಿದೆ. ಏ.17 ರಂದು ಬೆಳಿಗ್ಗೆ ದೇವರ ಶುದ್ಧ ಕಳಸ ಪೂಜೆ, ಕೆರೆ ಮನೆಯಿಂದ ಭಂಡಾರ ತರುವುದು, ಎತ್ತು ಪೋರಾಟ, ದೇವರ ದರ್ಶನ ಹಾಗೂ ಸಂಜೆ 7 ಗಂಟೆಗೆ ಕುರುಂದ ಭಾರಣಿ ಜರುಗಲಿದೆ. ಏ.18 ರಂದು ಬೆಳಿಗ್ಗೆ ದೇವರ ದರ್ಶನ, ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ಚಾಮುಂಡಿ ಉತ್ಸವ, ಕುರುಂದಾಟ ದೇವರ ಜಳಕ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಹಾಗೂ ತಕ್ಕ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸೋಮವಾರಪೇಟೆ ಏ.12 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂದತ್ವ ನಿಯಂತ್ರಣ ಸಂಸ್ಥೆ ಕೊಡಗು, ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡಮಳ್ತೆ ಗ್ರಾಮ ಪಂಚಾಯತಿ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಕಾಗಡಿಕಟ್ಟೆ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ನಡೆಯಿತು. ಶಿಬಿರವನ್ನು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಉದ್ಘಾಟಿಸಿ, ಮಾತನಾಡಿ ಕಣ್ಣಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿಕೊಳ್ಳಬೇಕು. ಅದರಲ್ಲೂ ದೃಷ್ಟಿ ದೋಷವಿದ್ದವರು, ತಜ್ಞ ವೈದ್ಯರೊಂದಿಗೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎಲ್ಲಾ ಕಡೆ ನೇತ್ರ ಚಿಕಿತ್ಸೆ ಉಚಿತವಾಗಿರುತ್ತದೆ. ಗ್ರಾಮೀಣ ಭಾಗದಲ್ಲಿ ನೇತ್ರ ಚಿಕಿತ್ಸಾ ಶಿಬಿರಗಳು ಆಯೋಜನೆಗೊಂಡಾಗ ಸಮಸ್ಯೆಯಿದ್ದವರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯ ಶಂಕರ್, ಸಿಬ್ಬಂದಿ ವಿಶ್ವರೂಪಚಾರ್, ಹಾಸನ ಅಮ್ಮ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಪ್ರೀತಿ, ಅಪೂರ್ವ, ಆಶಾ ಕಾರ್ಯಕರ್ತೆಯರಾದ ಈಶ್ವರಿ, ಉಷಾ, ಶೈಲಾ ವಸಂತ್ ಇದ್ದರು.
ಗೋಣಿಕೊಪ್ಪ ಏ.12 NEWS DESK : ಕ್ಷೇತ್ರದಲ್ಲಿದ್ದ ಕೆಂಪು ರಸ್ತೆಗಳೆಲ್ಲವೂ 15 ವರ್ಷಗಳಲ್ಲಿ ಕಪ್ಪು ಬಣ್ಣಗಳಾಗಿ ಬದಲಾವಣೆಗೊಂಡಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ ಬೋಪಯ್ಯ ನುಡಿದಿದ್ದಾರೆ. ಮಲ್ಲೂರು ಗ್ರಾಮಸ್ಥರು ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು. ರಾಜಕಾರಣಿಗಳಿಗೆ ಟೀಕೆಗಳು ಸಹಜವಾದುದ್ದೆ. ಆದರೆ ವಿನಾಕಾರಣ ವೈಯಕ್ತಿಕ ಟೀಕೆಗಳು ಉಪಯುಕ್ತವಲ್ಲ ಎಂದು ಹೇಳಿದರು. ಮಾಡಿರುವ ಕಾರ್ಯವನ್ನು ವಿಶಾಲ ಮನಸ್ಥಿತಿಯಿಂದ ಒಪ್ಪಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ವಿನಾಕಾರಣ ಸುಮ್ಮನೆ ಆರೋಪ ಹೊರಿಸುವ ಉದ್ದೇಶ ಗೌರವಿತವಾದದ್ದಲ್ಲ ಎಂದು ಹೇಳಿದರು. ಕಳೆದ 20 ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಮತದಾರರು ನೀಡಿದ ಆಶೀರ್ವಾದದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಸರ್ಕಾರದ ನಯ ಪೈಸವು ವ್ಯರ್ಥವಾಗದಂತೆ ಕ್ಷೇತ್ರಕ್ಕೆ ಬಳಸಿಕೊಳ್ಳಲಾಗಿದೆ. ಆದರೆ, ಇತ್ತೀಚಿನ ಬೆಳವಣಿಗೆಯಲ್ಲಿ ಬದಲಾವಣೆಗೆ ಹುಸಿ ಆರೋಪಗಳನ್ನ ಅಲಂಕರಿಸುತ್ತಿರುವುದು ವೇದನೆಯ ವಿಚಾರ ಎಂದರು. ಕ್ಷೇತ್ರದ ಅಭಿವೃದ್ಧಿ ಕಾಣಬೇಕೆಂಬ ಉದ್ದೇಶದಲ್ಲಿ ಪಾರದರ್ಶಕತೆಯಿಂದ ಜವಾಬ್ದಾರಿಯನ್ನು ನಿಭಾಯಿಸಲಾಗಿದೆ. ಕಾವೇರಿ ಹುಟ್ಟಿದ ಈ ಮಣ್ಣಿನಲ್ಲಿ ಯಾರೇ ಅನ್ಯಾಯ ಮಾಡಿದರು ಅದು ದೀರ್ಘಾಯುಷ್ಯವು ಅಲ್ಲ…






