ಮಡಿಕೇರಿ, ಏ.12 NEWS DESK : ನಿರಂತರ ಅಭ್ಯಾಸದಿಂದ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಪರಿಪೂರ್ಣತೆ ಹೊಂದಲು ಸಾಧ್ಯವೆಂದು ಮಾಜಿ ಒಲಂಪಿಯನ್, ಭಾರತ ತಂಡದ ಮಾಜಿ ನಾಯಕ ಮನೆಯಪಂಡ ಎಂ.ಸೋಮಯ್ಯ ಹೇಳಿದರು. ದಿ. ಸಿ.ವಿ. ಶಂಕರ್ ಸ್ಮರಣಾರ್ಥ ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಕ್ಕಳ ಉಚಿತ ಬೇಸಿಗೆ ಶಿಬಿರಕ್ಕೆ ಆಗಮಿಸಿದ ಅವರು ಶಿಬಿರಾರ್ಥಿಗಳನ್ನು ಕುರಿತು ಮಾತನಾಡಿದರು. ವಾಂಡರರ್ಸ್ ಕ್ಲಬ್ ವತಿಯಿಂದ ಏರ್ಪಡಿಸಿರುವ ಈ ಶಿಬಿರದಲ್ಲಿ ಶಿಸ್ತು, ವ್ಯಯಾಮ, ಯೋಗಾಭ್ಯಾಸ ಕೂಡ ಕಲಿಸಿಕೊಡಲಾಗುತ್ತದೆ. ಇದು ಮಕ್ಕಳನ್ನು ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳಿಸಲು ಸಹಕಾರಿಯಾಗಲಿದೆ. ಕೇವಲ ಒಂದು ತಿಂಗಳ ಅಭ್ಯಾಸದಿಂದ ಪರಿಪೂರ್ಣತೆ ಸಾಧ್ಯವಾಗುವದಿಲ್ಲ. ಶಿಬಿರದ ಬಳಿಕವೂ ಅಭ್ಯಾಸ ಮಾಡಬೇಕು. ನಿರಂತರ ಅಭ್ಯಾಸದಿಂದ ಮಾತ್ರ ಕ್ರೀಡೆಯಲ್ಲಿ ಪರಿಪೂರ್ಣತೆ ಹೊಂದಲು ಸಾಧ್ಯವೆಂದು ಕಿವಿ ಮಾತು ಹೇಳಿದರು. ಮಕ್ಕಳು ಉತ್ತಮ ನಡತೆ ಮೈಗೂಡಿಸಿಕೊಳ್ಳಬೇಕು. ರಾತ್ರಿ ಬೇಗನೇ ನಿದ್ರಿಸಿ, ಬೆಳಿಗ್ಗೆ ಬೇಗನೇ ಎದ್ದೇಳುವುದರಿಂದ ಅರೋಗ್ಯವಾಗಿರಲು ಸಾಧ್ಯವಾಗುತ್ತದೆ. ಉತ್ತಮ ಗೆಳೆತನ ಹೊಂದಿದವರು ಉತ್ತಮ ಕ್ರೀಡಾ ಪಟುಗಳಾಗಲು…
ಲೇಖಕ: admin
ಮಡಿಕೇರಿ ಏ.12 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಭಾಗಮಂಡಲ ನಾಡ್ಗೌಡ ಸಮಾಜ, ಕರಿಕೆ ಗೌಡ ಸಮಾಜ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡ್ಗೌಡ ಯುವ ಒಕ್ಕೂಟ ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಸಂಯುಕ್ತ ಆಶ್ರಯದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ 2025 ಕಾರ್ಯಕ್ರಮವು ಏ.15 ರಂದು ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಗಮಂಡಲದ ಗಡಿನಾಡು ಉತ್ಸವವು ಬೆಳಗ್ಗೆ 9 ಗಂಟೆಗೆ ಭಾಗಮಂಡಲದ ಕರಿಕೆ ಗೇಟ್ ಬಳಿಯಿಂದ ಅರೆಭಾಷೆ ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಆರಂಭವಾಗಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ಆದಿಚುಂಚನಗಿರಿ ಶಾಖಾಮಠ ಹಾಸನ ಪರಮ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಯವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ…
ವಿರಾಜಪೇಟೆ ಏ.12 NEWS DESK : 2024-25ನೇ ಶೈಕ್ಷಣಿಕ ಸಾಲಿನ ಅತ್ಯುತ್ತಮ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ಪ್ರಶಸ್ತಿಯನ್ನು ವಿರಾಜಪೇಟೆ ಸಮೀಪದ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡೆದುಕೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಪುಷ್ಟಿ ಯೋಜನೆಯಡಿ ಸಮೀಕ್ಷೆ ಕೈಗೊಂಡು ಇಡೀ ಜಿಲ್ಲೆಯಲ್ಲಿ ಆಯ್ಕೆಗೊಂಡಿರುವ ಒಟ್ಟು ಮೂರು ಶಾಲೆಯ ಎಸ್ ಡಿ ಎಂ ಸಿ. ಪೈಕಿ ವಿರಾಜಪೇಟೆ ತಾಲೂಕಿನಿಂದ ಆಯ್ಕೆಗೊಂಡ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಏಕೈಕ ಶಾಲೆಯಾಗಿದೆ. ಸರಕಾರಿ ಶಾಲೆಗಳನ್ನು ಮತ್ತು ಎಸ್ ಡಿ ಎಂ ಸಿ ಗಳನ್ನು ಪ್ರೋತ್ಸಾಹಿಸಲು ಸರಕಾರ ಪ್ರಶಸ್ತಿ ಘೋಷಿಸಿತ್ತು. ಇದರಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾ ವಾಹಿನಿ ಪೋರ್ಟಲ್ ನಲ್ಲಿ ನಿರ್ದಿಷ್ಟ ಮಾನದಂಡಗಳ ಆಧಾರದಲ್ಲಿ ಎಸ್ ಡಿ ಎಂ ಸಿ ಗಳ ಸಮೀಕ್ಷೆಯನ್ನು ಆಯೋಜಿಸಿ ಇದರಲ್ಲಿ ಪಾಲ್ಗೊಳ್ಳುವ ಅವಕಾಶ ನೀಡಲಾಗಿತ್ತು. ಇದರಂತೆ ಸಮೀಕ್ಷೆಯ ಅಂತಿಮ ಘಟ್ಟದಲ್ಲಿ ದೊರೆಯುವ ಗರಿಷ್ಠ ಅಂಕಗಳ ಆಧಾರದಲ್ಲಿ ಜಿಲ್ಲಾವಾರು ಅತ್ಯುತ್ತಮ ಎಸ್ಡಿಎಂಸಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಅತ್ಯುತ್ತಮ ಎಸ್ಡಿಎಂಸಿ…
ಕುಶಾಲನಗರ ಏ.12 NEWS DESK : ಕುಶಾಲನಗರ ತಾಲ್ಲೂಕು ತೊರೆನೂರು ಗ್ರಾಪಂ ವ್ಯಾಪ್ತಿಯಲ್ಲಿನ ಅಳುವಾರ ಗ್ರಾಮದ ಗ್ರಾಮದೇವತೆ ಅಳುವಾರದಮ್ಮ ದೇವರ ಎರಡು ದಿನಗಳ ಅವಧಿಯ ವಾರ್ಷಿಕ ಪೂಜೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಚೈತ್ರ ಮಾಸ ಉತ್ತರ ಪಾದ ಶುಭ ನಕ್ಷತ್ರದ ಮುಂಜಾನೆ ದೇವಾಲಯದಲ್ಲಿ ವಿವಿಧ ಹೋಮ ಹಾಗೂ ಧಾರ್ಮಿಕ ವಿಧಿಗಳು ಜರುಗಿದವು. ಹಬ್ಬದ ಅಂಗವಾಗಿ ಗ್ರಾಮದ ಬಹುತೇಕ ಮನೆಗಳು ತಳಿರು ತೋರಣ ಹಾಗೂ ಅಲಂಕೃತ ವಿದ್ಯುತ್ ದೀಪಗಳೊಂದಿಗೆ ಅಲಂಕರಿಸಲಾಗಿತ್ತು. ಅಳುವಾರದ ಸುತ್ತಮುತ್ತಲಿನ ಅಳಿಲು ಗುಪ್ಪೆ, ಬಸರಿಗುಪ್ಪೆ, ಅರಿಶಿಣ ಗುಪ್ಪೆ, ತೊರೆನೂರು ದೊಡ್ಡಳುವಾರ, ಆರನೇ ಹೊಸಕೋಟೆ ಮೊದಲಾದ ಗ್ರಾಮಗಳ ಸಹಸ್ರಾರು ಭಕ್ತರು ಪೂಜೋತ್ಸವದಲ್ಲಿ ಭಾಗಿಯಾದರು. ಮರುದಿನ ಶುಕ್ರವಾರ ಬೆಳಗ್ಗೆ ದೇವಿಯ ಸನ್ನಿಧಿಯಲ್ಲಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹಕವು ಭಕ್ತರು ಪ್ರಾಣಿಗಳ ಬಲಿಕೊಟ್ಟು ಭಕ್ತಿ ಮೆರೆದರು. ಬಳಿಕ ತಮ್ಮ ತಮ್ಮ ಮನೆಗಳಿಗೆ ಬೇರೆ ಬೇರೆ ಊರುಗಳಿಗೆ ವಿವಾಹ ಮಾಡಿಕೊಟ್ಟಿದ್ದ ಹೆಣ್ಣು ಮಕ್ಕಳು ಒಳಗೊಂಡಂತೆ ಮಿತ್ರರು, ನೆರೆ ಹೊರೆಯ ಗ್ರಾಮಗಳ ಭಕ್ತ ಸ್ನೇಹಿತರನ್ನು ಆಹ್ವಾನಿಸಿ ವಿವಿಧ…
ಸುಂಟಿಕೊಪ್ಪ ಮಾ.11 NEWS DESK : ಪಟ್ಟಣದಲ್ಲಿ ಹೆಚ್ಚಿದ ಟ್ರಾಫಿಕ್-ಪಾರ್ಕಿಂಗ್ ಸಮಸ್ಯೆ, ಹೆದ್ದಾರಿ ಬದಿಯಲ್ಲಿ ಮಾಂಸ ಮಾರಾಟ, ತ್ಯಾಜ್ಯ ವಿಲೇವಾರಿ ವಿಳಂಬ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಹತ್ತಾರು ಸಮಸ್ಯೆಗಳು ಅನಾವರಣಗೊಂಡಿತು. ಕೊಡಗು ಪತ್ರತರ್ಕರ ಸಂಘದ ಕುಶಾಲನಗರ ತಾಲ್ಲೂಕು ಘಟಕದಿಂದ ಸುಂಟಿಕೊಪ್ಪದ ವಿಎಸ್ಎಸ್ಎನ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆಯಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಹಲವಾರು ಸಮಸ್ಯೆಗಳ ಬಗ್ಗೆ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸಂಬಂಧಿಸಿದವರ ಗಮನ ಸೆಳೆದರು. ಪ್ರಶ್ನೆಗಳನ್ನು ಆಲಿಸಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯತಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ತಯಾರಾಗಿದೆ. ಗ್ರಾಪಂ ವ್ಯಾಪ್ತಿಯ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಪಂ ನೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ಇದಲ್ಲದೆ 29 ಇಲಾಖೆಗಳು ಕೂಡ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸುಂಟಿಕೊಪ್ಪದಲ್ಲಿ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ಮಾರುಕಟ್ಟೆ ನಿರ್ಮಿಸಲಾಗುತ್ತಿದ್ದು, ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಪೊಲೀಸ್ ಇಲಾಖೆಯ ಜೊತೆಗೂಡಿ ರಸ್ತೆಯ…
ಮಡಿಕೇರಿ, ಏ, 12 NEWS DESK : ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೇಂದ್ರ ಸರ್ಕಾರದ ವಿವಿಧ ಅನುದಾನಗಳಡಿಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿಯವರ ವಿಕಸಿತ ಭಾರತ ಯೋಜನೆಗೆ ಪೂರಕವಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರುಲಾಗುತ್ತಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶೇಖರಿಸಿರುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಸಂಸದರು ಮಾತನಾಡಿದರು. ಸ್ವಚ್ಛ ಭಾರತ ಮಿಷನ್ 2.0(ನಗರ) ಯೋಜನೆಯಡಿಯಲ್ಲಿ ಈ ಯೋಜನೆಯನ್ನು ಆರಂಭಿಸಲಾಗಿದೆ. ಕೇಂದ್ರ ಸರ್ಕಾರ ಅನುದಾನ ಒದಗಿಸಲಾಗುತ್ತಿದೆ ಎಂದು ತಿಳಿಸಿದರು. ಹಲವು ವರ್ಷಗಳಿಂದ ತ್ಯಾಜ್ಯ ಸಂಗ್ರಹವಾಗಿದೆ. ಇದನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಜನರು ಮನವಿ ಮಾಡಿದ್ದರು. ಜನರಿಗೆ ಆಗುತ್ತಿದ್ದ ತೊಂದರೆಯನ್ನು ಮನಗಂಡು ಕೇಂದ್ರ ಸರ್ಕಾರದಿಂದ ಅನುದಾನ ಮಂಜೂರು ಮಾಡಿಸಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಯದುವೀರ್ ವಿವರಿಸಿದರು. ಸುಮಾರು 12.5 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿಯನ್ನು ಆರಂಭಿಸಲಾಗಿದೆ. ಅತಿ…
ಮಡಿಕೇರಿ NEWS DESK ಏ.11 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ರ 11ನೇ ದಿನದ ಪಂದ್ಯದಲ್ಲಿ ಟೀಮ್ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ತಂಡಗಳು ಗೆಲುವು ಸಾಧಿಸಿದವು. ಟೀಮ್ ಲಿವರೇಜ್ ಮತ್ತು ಟೀಮ್ ವೆಸ್ಟರ್ನ್ ಘಾಟ್ ವಾರಿಯರ್ಸ್ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಲಿವರೇಜ್ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 114 ರನ್ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ವೆಸ್ಟರ್ನ್ ಘಾಟ್ ವಾರಿಯರ್ಸ್ 13.2 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 115 ರನ್ ದಾಖಲಿಸಿ ವಿಜಯದ ನಗು ಬೀರಿತು. ವೆಸ್ಟರ್ನ್ ಘಾಟ್ ವಾರಿಯರ್ಸ್ನ ಲೋಚನ್ ಅಪ್ಪಣ್ಣ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ಮತ್ತು ಟೀಮ್ ಕೂರ್ಗ್ ಯುನೈಟೆಡ್ ನಡುವೆ ನಡೆದ ಪಂದ್ಯದಲ್ಲಿ…
*ಮೈದಾನ 1* ಮಲಚೀರ ಮತ್ತು ಬೊಟ್ಟೋಳಂಡ ನಡುವೆ ನಡೆದ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಬೊಟ್ಟೋಳಂಡ ಗೆಲುವು ಸಾಧಿಸಿತು. ಬೊಟ್ಟೋಳಂಡ ಪರ ಸೂರಜ್ ಅಯ್ಯಪ್ಪ ಹಾಗೂ ಮುತ್ತಣ್ಣ ತಲಾ 1 ಗೋಲು ದಾಖಲಿಸಿದರು. ಮಲಚೀರ ಪರ ಹರ್ಷ 1 ಗೋಲು ಬಾರಿಸಿದರು. ಮಲಚೀರ ಶಾನ್ ಬೋಪಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕನ್ನಂಡ ಮತ್ತು ಚೊಟ್ಟೆರ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ಕನ್ನಂಡ ತಂಡ ಜಯ ಸಾಧಿಸಿತು. ಕನ್ನಂಡ ಪರ ಶರಣ್ ಹಾಗೂ ರೋಹನ್ ಅಯ್ಯಪ್ಪ ತಲಾ 2 ಗೋಲು ದಾಖಲಿಸಿದರು. ಚೊಟ್ಟೆರ ಪರ ಕವನ್ 1 ಗೋಲು ಬಾರಿಸಿದರು. ಚೊಟ್ಟೆರ ಬಿಪಿನ್ ಬೆಳ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೋಡಿರ ಮತ್ತು ಪಾಲೆಕಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕೋಡಿರ ತಂಡ ಗೆಲುವು ದಾಖಲಿಸಿತು. ಕೋಡಿರ ಪರ ದೀಕ್ಷಿತ್ ಅಪ್ಪಚ್ಚು 1 ಗೋಲು ದಾಖಲಿಸಿದರು. ಪಾಲೆಕಂಡ ಸೋಮಣ್ಣ ಮ್ಯಾನ್ ಆಫ್ ದಿ…
*ಮೈದಾನ 1* ಬೆಳಿಗ್ಗೆ 9 ಗಂಟೆಗೆ ಮೂಕೋಂಡ ಮತ್ತು ಕುಂಡ್ಯೋಳಂಡ, 10 ಗಂಟೆಗೆ ಆದೇಂಗಡ ಮತ್ತು ನಾಪಂಡ, 11 ಗಂಟೆಗೆ ಕೇಲೇಟಿರ ಮತ್ತು ಕುಪ್ಪಂಡ (ನಾಂಗಾಲ) ಮಧ್ಯಾಹ್ನ 1 ಗಂಟೆಗೆ ಮಾರ್ಚಂಡ ಮತ್ತು ಕೋಳೇರ, 2 ಗಂಟೆಗೆ ಶಾಂತೆಯಂಡ ಮತ್ತು ಅಪ್ಪಚೆಟ್ಟೋಳಂಡ, 3 ಗಂಟೆಗೆ ಮನೆಯಪಂಡ ಮತ್ತು ಚೆಕ್ಕೇರ *ಮೈದಾನ 2* ಬೆಳಿಗ್ಗೆ 9.30ಕ್ಕೆ ಮಾಳೇಟಿರ (ಕೆದಮುಳ್ಳೂರು) ಮತ್ತು ಮತ್ರಂಡ, 10.30ಕ್ಕೆ ಚೋಡುಮಾಡ ಮತ್ತು ಅನ್ನಾಡಿಯಂಡ, ಮಧ್ಯಾಹ್ನ 12.30ಕ್ಕೆ ಪರದಂಡ ಮತ್ತು ಮುಂಡ್ಯೋಳಂಡ, 1.30 ಗಂಟೆಗೆ ಪಾಡೆಯಂಡ ಮತ್ತು ಮೈಂದಪಂಡ, 2.30 ಗಂಟೆಗೆ ಮಲ್ಲಮಾಡ ಮತ್ತು ಐನಂಡ
ಮಡಿಕೇರಿ ಏ.11 NEWS DESK : ಕೊಡವರ ಹೊಸ ವರ್ಷಾಚರಣೆ ಎಡ್ಮ್ಯಾರ್ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಏ.14 ರಂದು ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ವಸಂತ ಋತು ಫೆ.15 ರಿಂದ ಆರಂಭಗೊಂಡು ಏ.14ಕ್ಕೆ ಕೊನೆಗೊಳ್ಳುವ “ ಎಡ್ಮ್ಯಾರ್ 1′ ನ್ನು ಸಿಎನ್ಸಿ ಸಂಘಟನೆ ಪ್ರತಿವರ್ಷ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದ್ದು, ಇದು 30ನೇ ವರ್ಷದ ಕಾರ್ಯಕ್ರಮವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಏ.14 ರಂದು ಸಂಜೆ 6.30ಗಂಟೆಗೆ ಗೋಣಿಕೊಪ್ಪಲಿನ ಆರ್ಎಂಸಿ ಯಾರ್ಡ್ ಬಳಿಯಿಂದ ದುಡಿಕೊಟ್ಟ್ ಪಾಟ್ ನೊಂದಿಗೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಂಜಿನ ಮೆರವಣಿಗೆ ಸಾಗಿ ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ಕೊನೆಗೊಳ್ಳಲಿದೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗ ಕೊಡವರ ಹಕ್ಕುಗಳ ಕುರಿತು ಕಾರ್ಯಕ್ರಮದಲ್ಲಿ ಪ್ರತಿಪಾದನೆ ಮಾಡುವ ಮೂಲಕ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯಲಾಗುವುದು. ರಾಜ್ಯಾಂಗದತ್ತ ಹಕ್ಕೊತ್ತಾಯಗಳನ್ನು ಪ್ರಚುರಪಡಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕೂ ಮೊದಲು…






