ಲೇಖಕ: admin

ಮಡಿಕೇರಿ NEWS DESK ಏ.11 : ವಿವಾಹವೆಂಬುವುದು ಪ್ರತಿಯೊಬ್ಬರ ಜೀವನದಲ್ಲಿ ಬಹುಮುಖ್ಯ ಹಂತ ಮತ್ತು ದೀರ್ಘಕಾಲದ ಅನುಬಂಧವೂ ಹೌದು. ಕುಟುಂಬಗಳ ನಡುವಿನ ಸಾಮರಸ್ಯವನ್ನು ಕಾಪಾಡುವ ಭಾವನಾತ್ಮಕ ಸಂಬಂಧ ಗಟ್ಟಿಯಾಗಬೇಕಾದರೆ ವೈವಾಹಿಕ ಜೀವನದಲ್ಲಿ ಸೂಕ್ತ ಸಂಗಾತಿಯ ಆಯ್ಕೆ ಅಗತ್ಯವೆಂದು ಕೂಡಿಗೆ ಕ್ರೀಡಾಶಾಲೆಯ ನಿವೃತ್ತ ಪ್ರಾಂಶುಪಾಲರಾದ ಕುಂತಿ ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯದ ವಧು-ವರರ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿವಾಹ ಎಂಬುವುದು ದೀರ್ಘಕಾಲದ ಸಂಬಂಧ, ಇದು ಪ್ರತಿಯೊಬ್ಬರ ಜೀವನದಲ್ಲಿ ಪ್ರೀತಿ, ನಂಬಿಕೆ, ವಿಶ್ವಾಸವನ್ನು ಹೆಚ್ಚಿಸುತ್ತದೆ. ಕೌಟುಂಬಿಕ, ಸಾಮಾಜಿಕ ಮತ್ತು ಭಾವನಾತ್ಮಕವಾಗಿ ಹೊಸ ಸಂಬಂಧಗಳನ್ನು ಸೃಷ್ಟಿ ಮಾಡಿ ಕುಟುಂಬಗಳ ನಡುವಿನ ಸಾಮರಸ್ಯವನ್ನು ಕಾಪಾಡುತ್ತದೆ. ಆದ್ದರಿಂದ ವಧು-ವರರು ಸಾಮಾಜಿಕ ಹಿನ್ನೆಲೆ, ಅಭಿರುಚಿ ಇತ್ಯಾದಿಗಳನ್ನು ತಿಳಿದುಕೊಂಡು ಉತ್ತಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಅನಿವಾರ್ಯವೆಂದು ತಿಳಿಸಿದರು. ಹಿಂದೆ ಕೂಡು ಕುಟುಂಬಗಳಿದ್ದು, ವಧು-ವರರನ್ನು ಹಿರಿಯರು…

Read More

ಮಡಿಕೇರಿ NEWS DESK ಏ.11 : ಇತ್ತೀಚೆಗೆ ನಡೆದ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಎಲ್ಲಾ 15 ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆದ್ದುಕೊಂಡಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಎಂ.ಬಿ.ದೇವಯ್ಯ, ನಾಪಂಡ ರವಿ ಕಾಳಪ್ಪ, ರಾಬಿನ್ ದೇವಯ್ಯ, ತಾಕೇರಿ ಪೊನ್ನಪ್ಪ, ಗೌತಮ್ ಗೌಡ, ಸುವಿನ್ ಗಣಪತಿ, ಬಿ.ಎ.ಹರೀಶ್, ಮಹೇಶ್ (ಪಡಿಯಮ್ಮನ), ಪ್ರಶಾಂತ್ ಚೆಟ್ಟಿಮಾಡ, ಕಡ್ಲೆರ ತುಳಸಿ ಮೋಹನ್, ವರದ ರಾಜ್ ಅರಸು, ಸುರೇಶ್ ಮಾಯಮುಡಿ, ಲೀಲಾ ಮೇದಪ್ಪ, ಕಾಕೂರು ಸಂದೀಪ್ ಹಾಗೂ ಹಾಲು ಮತದ ಮಹೇಶ್ ಜಯ ಸಾಧಿಸಿದ್ದಾರೆ.

Read More

ಮಡಿಕೇರಿ NEWS DESK ಏ.11 : ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜ್ ದ್ವಿತೀಯ ಪಿಯುಸಿಯಲ್ಲಿ ಶೇ.100 ರಷ್ಟು ಫಲಿತಾಂಶ ಗಳಿಸಿದೆ. ಕಾಲೇಜು ಸ್ಥಾಪನೆಯಾದಾಗಿನಿಂದಲೂ ಶೇ.100 ರ ಸಾಧನೆ ಮಾಡುತ್ತಿರುವುದು ಈ ಕಾಲೇಜ್ ನ ಹೆಗ್ಗಳಿಕೆಯಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಬರೆದ 692 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಮೇಘನಾ ಯು.ವೈ. 594 ಅಂಕಗಳೊAದಿಗೆ ರಾಜ್ಯಕ್ಕೆ 6ನೇ ಸ್ಥಾನ, ಕ್ರಿಯೇಟಿವ್ ಸಹಭಾಗಿತ್ವದ ತ್ರಿಶಾ ಕಾಲೇಜಿನ ಅಮೃತ ಬಸವರಾಜ್ ಬಣಕಾರ್ 592 ಅಂಕಗಳೊAದಿಗೆ ರಾಜ್ಯಕ್ಕೆ 8ನೇ ಸ್ಥಾನ, ಶ್ರೀನಿಧಿ ಡಿ. 591 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ, ಪ್ರಜ್ವಲ್ ಎಸ್.ಎನ್ 590 ಅಂಕಗಳೊAದಿಗೆ ರಾಜ್ಯಕ್ಕೆ 10ನೇ ಸ್ಥಾನ, ತೇಜಸ್ ವಿ.ನಾಯಕ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ ಗಳಿಸಿದ್ದಾರೆ. ಒಟ್ಟು ಪರೀಕ್ಷೆಗೆ ಹಾಜರಾದ 592 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ಶೇ.97ಕ್ಕಿಂತ…

Read More

ಗೋಣಿಕೊಪ್ಪ ಏ.11 NEWS DESK : ಲಕ್ಷಣತೀರ್ಥ ನದಿಗೆ ಅಡ್ಡಲಾಗಿ ಕಟ್ಟಲಾದ ನಿಟ್ಟೂರು ಗ್ರಾಮ ಪಂಚಾಯಿತಿಯ ಮಲ್ಲೂರು ಸೇತುವೆ ನಿರ್ಮಾಣ ಸಂಭ್ರಮವನ್ನು ಸ್ಥಳೀಯ ಗ್ರಾಮಸ್ಥರು ಆಚರಿಸಿದರು. ಮಲ್ಲೂರು ಗ್ರಾಮ ಅಭಿವೃದ್ಧಿ ಸಮಿತಿ ಆಯೋಜಿಸಿದ ಸೇತುವೆ ಸಂಭ್ರಮದಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಭಾಗವಹಿಸಿ ಗ್ರಾಮಸ್ಥರಿಂದ ಸನ್ಮಾನ ಸ್ವಿಕರಿಸಿದರು. ನಂತರ ಮಾತನಾಡಿದ ಸಂಸದರು, ಗ್ರಾಮಗಳು ಅಭಿವೃದ್ಧಿ ಕಂಡಾಗ ಮಾತ್ರ ನಗರಗಳ ಬೆಳವಣಿಗೆ ಸಾಧ್ಯ ಎಂಬುವುದನ್ನು ಮನಗಂಡ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಜನರ ಸ್ವಾವಲಂಬಿ ಬದುಕಿಗೆ ಹಲವು ಯೋಜನೆಗಳನ್ನು ರೂಪಿಸಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಳೆದ ಹತ್ತು ವರ್ಷದಲ್ಲಿ ಸುಮಾರು 20 ಕೋಟಿ ಜನರ ಆರ್ಥಿಕ ಸ್ಥಿತಿಯ ಸುಧಾರಣೆಗೆ ಮೋದಿ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದ ಆಡಳಿತದಲ್ಲಿ ವಿಕಾಸಿತ ಭಾರತವಾಗಿ ಮುಂದುವರೆದಿದ್ದು, ಆರ್ಥಿಕ ಸ್ಥಿತಿಯಲ್ಲಿ ಮೂರನೇ ಸ್ಥಾನವನ್ನಗಳಿಸಿದೆ ಎಂದು ತಿಳಿಸಿದರು. 150 ವಿಮಾನ ನಿಲ್ದಾಣಗಳು, ಎಲೆಕ್ಟ್ರಿಕಲ್ ರೈಲು ಸಂಚಾರ, ಹೆದ್ದಾರಿಗಳ ನಿರ್ಮಾಣ ಸೇರಿದಂತೆ, ಹಲವಾರು ಹಲವಾರು ಅಭಿವೃದ್ದಿ…

Read More

ಮಡಿಕೇರಿ ಏ.11 NEWS DESK :  ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಟಿ.ಸಿ. ಗೀತಾ ನಾಯ್ಡು ಅವರಿಗೆ ಕರ್ನಾಟಕ ಇನ್‍ಸ್ಪೈರಿಂಗ್ ವುಮೆನ್ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬಾಳೆಲೆ ಪ್ರತಿಭಾ ಎಜುಕೇಷನಲ್ ಇನ್ಸಿಟಿಟ್ಯೂಟ್ ಪ್ರಾಂಶುಪಾಲರಾಗಿರುವ ಇವರು, ವಿವಿಧ ಕ್ಷೇತ್ರಗಳಲ್ಲಿ ತೋರುತ್ತಿರುವ ಪ್ರತಿಭೆಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಗೀತಾ ನಾಯ್ಡು ಪೊನ್ನಂಪೇಟೆ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿಯಾಗಿ, ಕೊಡಗು ಬಲಿಜ ಸಮಾಜದ ಪ್ರಧಾನ ಕಾರ್ಯದರ್ಶಿಯಾಗಿ, ವಿರಾಜಪೇಟೆ ತಾಲೂಕಿನ ವಿಕಾ ಗ್ರೀನ್ ಅಂಬಾಸಿಡರ್ ಆಗಿ ಹಾಕಿ ಮತ್ತು ಕ್ರಿಕೆಟ್ ಪಂದ್ಯಗಳ ವರದಿಗಾರ್ತಿಯಾಗಿ, ಮೆಂಟಲ್ ಎಬಿಲಿಟಿ ತರಬೇತುದಾರರಾಗಿ, ನಿರೂಪಕಿಯಾಗಿ, ಧರ್ಮಸ್ಥಳ ಸಂಘದ ಮಹಿಳೆಯರ ಪ್ರೇರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿ ಆಗಿದ್ದಾಗಲೇ 200 ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು. ಇದೀಗ ಕರ್ನಾಟಕ ಪ್ರಾಂತೀಯ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ಗೌರವವನ್ನು, ಇನ್ಸ್ಪಿರೇಷನಲ್ ವುಮನ್ ಪ್ರಶಸ್ತಿ, 2024ರಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಮಲ್ಟಿ ಟಾಲೆಂಟೆಡ್ ವುಮನ್ ಪ್ರಶಸ್ತಿ, ‘Best…

Read More

ಮಡಿಕೇರಿ ಏ.11 NEWS DESK : 2024-25ನೇ ಸಾಲಿನ ದ್ವಿತೀಯ ಪಿಯುಸಿ ಪಿಸಿಎಂಸಿ ಪರೀಕ್ಷೆಯಲ್ಲಿ ಕೊಡಗಿನ ಟಿ.ಎಸ್.ರೋಹಿತ್ ರಾಜ್ಯಕ್ಕೆ 7ನೇ ಸ್ಥಾನ ಪಡೆದಿದ್ದಾನೆ. ಮಂಗಳೂರಿನ ಪ್ರೆಸಿಡೆನ್ಸಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಟಿ.ಎಸ್.ರೋಹಿತ್ 600 ಅಂಕಗಳಿಗೆ 593 ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ರೋಹಿತ್ ಮೂಲತಃ ಕೊಡಗಿನ ಕುಂಬಳದಾಳು ಗ್ರಾಮದ ತೆಕ್ಕಡೆ ಸುಗುಗಣಪತಿ ಮತ್ತು ಜ್ಯೋತಿ ದಂಪತಿಯ ಪುತ್ರ.

Read More

ಮಡಿಕೇರಿ NEWS DESK ಏ.10 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ರ 10ನೇ ದಿನದ ಪಂದ್ಯದಲ್ಲಿ ಕೊಡವ ರೈಸಿಂಗ್ ಸ್ಟಾರ್ಸ್ ಮತ್ತು ಟೀಮ್ ಲಿವರೇಜ್ ಗೆಲುವು ಸಾಧಿಸಿತು. ಟೀಮ್ ವೈಲ್ಡ್ ಫ್ಲವರ್ ಮತ್ತು ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೈಲ್ಡ್ ಫ್ಲವರ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 68 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಕೊಡವ ರೈಸಿಂಗ್ ಸ್ಟಾರ್ಸ್ 17.1 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 70 ರನ್ ದಾಖಲಿಸಿ ಜಯ ಸಾಧಿಸಿತು. ಕೊಡವ ರೈಸಿಂಗ್ ಸ್ಟಾರ್ಸ್ ನ ಬೊಳ್ಳೆರ ದಿಶಾನ್ ಕುಟ್ಟಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಟೀಮ್ ಕೊಡವ ಟ್ರೈಬ್ಸ್ ಮತ್ತು ಟೀಮ್ ಲಿವರೇಜ್ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು…

Read More

ಮಡಿಕೇರಿ ಏ.10 NEWS DESK : ಸಮಾಜದಲ್ಲಿ ಎಲ್ಲರೂ ಬದುಕಬೇಕು, ಹಾಗೆಯೇ ಇತರರನ್ನೂ ಬದುಕಲು ಬಿಡಬೇಕು’ ಎಂಬುದು ಭಗವಾನ್ ಮಹಾವೀರರ ಸಂದೇಶವಾಗಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಹೇಳಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಭಗವಾನ್ ಮಹಾವೀರರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಗವಾನ್ ಮಹಾವೀರರು ಅಹಿಂಸಾ ಧರ್ಮದ ಪ್ರವರ್ತಕರಾಗಿದ್ದು, ಸನ್ಮತಿ, ವರ್ಧಮಾನ ಹಾಗೂ ವೀರ ಹೆಸರುಗಳಿಂದ ಮಹಾವೀರರನ್ನು ಕರೆಯುತ್ತಾರೆ ಎಂದು ತಿಳಿಸಿದರು.  ಕ್ರಿ.ಪೂ.6ನೇ ಶತಮಾನದಲ್ಲಿ  ರಾಜಪುತ್ರನಾಗಿ ಜನಿಸಿದರೂ, ಜನ ಕಲ್ಯಾಣಕ್ಕಾಗಿ ರಾಜತ್ವವನ್ನೂ ತ್ಯಾಗಮಾಡಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಭಗವಾನ್ ಮಹಾವೀರರು ಜೀವನ ನಡೆಸಿದರು ಎಂದು ಉಪ ವಿಭಾಗಾಧಿಕಾರಿ ಹೇಳಿದರು.   ಭಗವಾನ್ ಮಹಾವೀರರು ಸತ್ಯ, ಅಹಿಂಸೆ, ಅಪರಿಗ್ರಹ, ಅಸ್ತೇಯ ಮತ್ತು ಬ್ರಹ್ಮಚರ್ಯ ಈ ಪಂಚ ವ್ರತಗಳ ಅನುಷ್ಠಾನದ ಅಡಿಪಾಯ ಹಾಕಿದರು ಎಂದು ಅವರು ವಿವರಿಸಿದರು.  ಅಹಿಂಸೆಯೇ ಪರಮ ಧರ್ಮ ಎಂಬುದು ದಿವ್ಯ ಮಂತ್ರವಾಗಿ ಅಳವಡಿಸಿಕೊಂಡಿದ್ದ ಮಹಾವೀರರು ಅದರಂತೆ ನಡೆದುಕೊಂಡರು…

Read More

ಮಡಿಕೇರಿ ಏ.10 NEWS DESK : ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು ರೂ.10 ಕೋಟಿ ಮೌಲ್ಯದ 10 ಕೆ.ಜಿ 390 ಗ್ರಾಂ ಅಂಬರ್‍ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ತಿರುವನಂತಪುರಂನಿಂದ ಅಕ್ರಮವಾಗಿ ಅಂಬರ್‍ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ಕೇರಳ ರಾಜ್ಯದ ತಿರುವನಂತಪುರಂ ನ ಶಂಶುದ್ದೀನ್.ಎಸ್, (45) ಎಂ.ನವಾಜ್, (54), ಕಣ್ಣೂರು ಜಿಲ್ಲೆಯ ವಿ.ಕೆ.ಲತೀಶ್ (53) ರಿಜೇಶ್.ವಿ. (40) ಪ್ರಶಾಂತ್.ಟಿ (52), ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ರಾಘವೇಂದ್ರ ಎ.ವಿ. (48) ವರ್ಷ, ಕಾಸರಗೋಡಿನ ಬಾಲಚಂದ್ರ ನಾಯಕ್ (55), ಕ್ಯಾಲಿಕಟ್ ನ ಸಾಜುಥಾಮೋಸ್ (58), ಕಣ್ಣೂರಿನ ಜೋಬಿಸ್.ಕೆ.ಕೆ (33) ಹಾಗೂ ಜಿಜೇಸ್.ಎಂ, (40) ಬಂಧಿತ ಆರೋಪಿಗಳು. ಬಂಧಿತರಿಂದ ಅಂದಾಜು ರೂ.10 ಕೋಟಿ ಮೌಲ್ಯದ 10 ಕೆ.ಜಿ…

Read More

*ಮೈದಾನ 1* ಮದ್ರೀರ ಮತ್ತು ಜಮ್ಮಡ ತಂಡಗಳ ನಡುವಿನ ಪಂದ್ಯದಲ್ಲಿ ನಿಗಧಿತ ಅವಧಿಯಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ನಡೆದ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಮದ್ರೀರ ತಂಡ ಜಯ ದಾಖಲಿಸಿತು. ಜಮ್ಮಡ ತಶಿನ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಳಂಗಂಡ ಮತ್ತು ಚಪ್ಪಂಡ ನಡುವಿನ ಪಂದ್ಯದಲ್ಲಿ 6-1 ಗೋಲುಗಳ ಅಂತರದಲ್ಲಿ ಅಳಂಗಂಡ ತಂಡ ಜಯ ಸಾಧಿಸಿತು. ಪಳಂಗಂಡ ಪರ ಕಾಳಪ್ಪ, ಶಶಾಂಕ್ ಸುಬ್ಬಯ್ಯ ತಲಾ 2, ಅಜಯ್ ಅಯ್ಯಪ್ಪ ಹಾಗೂ ಮಂದಣ್ಣ ತಲಾ 1 ಗೋಲು ದಾಖಲಿಸಿದರು. ಚಪ್ಪಂಡ ಸಾಯಿ ನಾಚಪ್ಪ ಮ್ಯಾನ್ ಆಪ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಾಚಿಮಾಡ ಮತ್ತು ಮೇಚಿಯಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಮೇಚಿಯಂಡ ತಂಡ ಗೆಲುವು ದಾಖಲಿಸಿತು. ಮೇಚಿಯಂಡ ಪರ ಸೂರಜ್ ಸೋಮಯ್ಯ 2 ಗೋಲು ದಾಖಲಿಸಿದರು. ಮಾಚಿಮಾಡ ಪರ ಚಂಗಪ್ಪ 1 ಗೋಲು ಬಾರಿಸಿದರು. ಮಾಚಿಮಾಡ ಶ್ರೇಯಸ್ ಮ್ಯಾನ್ ಆಫ್ ದಿ…

Read More