ಲೇಖಕ: admin

ನಾಪೋಕ್ಲು ಏ.10 NEWS DESK : ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಪೂಜಾ ಕೈಂರ್ಕುಗಳೊಂದಿಗೆ ಸಂಪನ್ನಗೊಂಡಿತು. ಮಂಗಳವಾರ ಮಹಾಪೂಜೆ ಧ್ವಜಾರೋಹಣ ದೀಪಾರಾಧನೆ, ದೇವರ ಪ್ರದಕ್ಷಣೆ  ಬಲಿಯೊಂದಿಗೆ ಉತ್ಸವಕ್ಕೆ ಚಾಲನೆ ನೀಡಿ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಬುಧವಾರ ಬೆಳಿಗ್ಗೆ ದೇವರ ದರ್ಶ  ಬಲಿ, ಮಹಾಭಿಷೇಕ, ಮತ್ತು ಮಧ್ಯಾಹ್ನ ಮಹಾಪೂಜೆ, ವಿಶೇಷ ಸೇವೆಗಳು, ದೇವರ ಪ್ರದಕ್ಷಣೆ  ನೃತ್ಯ  ಜರುಗಿ ಮಹಾಮಂಗಳಾರತಿ ನಂತರ ತೀರ್ಥ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನೆರವೇರಿತು. ಸಂಜೆ ಪಟ್ಟಣದಲ್ಲಿ  ದೇವರ ಉತ್ಸವ ಮೂರ್ತಿಯನ್ನು ಚೆಂಡೆ, ವಾದ್ಯಗೋಷ್ಠಿಗಳೊಂದಿಗೆ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಕಾವೇರಿನದಿಯಲ್ಲಿ ಅವಭೃತಸ್ನಾನದ ಬಳಿಕ ಸನ್ನಿಧಿಗೆ ಹಿಂತುರುಗಿ ದೇವರ ಪ್ರದಕ್ಷಣೆ ನೃತ್ಯ  ಬಲಿ ಜರುಗಿತು.  ಗುರುವಾರ ಶುದ್ಧ ನವಕ ಕಲಶ, ಮಹಾಪೂಜೆ, ಮಂತ್ರಾಕ್ಷತೆಯೋಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ದೇವಾಲಯದ ಮುಖ್ಯ ಅರ್ಚಕ ಸುಧೀರ, ತಂತ್ರಿಗಳಾದ ರಮೇಶ್ ಶರ್ಮಾ, ಸುರೇಶ್ ಶರ್ಮ, ಸತ್ಯಮೂರ್ತಿ ಸರಳಾಯ ಧಾರ್ಮಿಕ  ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.…

Read More

ಸುಂಟಿಕೊಪ್ಪ,ಏ.10 NEWS DESK : ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ಮುಖ್ಯ ಮಂತ್ರಿಗಳ ವಿಶೇಷನಿಧಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ ಕಾಂಕ್ರಿಟ್ ರಸ್ತೆ ಕಾಮಗಾರಿ 93 ಲಕ್ಷ ರೂಗಳಲ್ಲಿ ನಿರ್ಮಿಸಲಾಗಿದೆ ಎಂದು ವಲಯ ಕಾಂಗ್ರೆಸ್ ಅಧ್ಯಕ್ಷ ಮೇದೂರ ಹರೀಶ್ ಸುಬ್ಬಯ್ಯ ತಿಳಿಸಿದ್ದಾರೆ. ಶಾಸಕ ಮಂತರ್‍ಗೌಡ ಪ್ರಯತ್ನದಿಂದ ಮಾದಾಪುರ ಮಠದ ರಸ್ತೆ 40 ಲಕ್ಷ ರೂ ವೆಚ್ಚದಲ್ಲಿ, ಚರ್ಚ್ ದೊಡ್ಡಿಬಾಣೆ ರಸ್ತೆ, ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಂಕ್ರಿಟ್ ರಸ್ತೆ ಸೇರಿದಂತೆ 93 ಲಕ್ಷದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದೆ. ಇದರಿಂದ ಈ ವಿಭಾಗದ ಜನತೆಯ ಬಹುದಿನದ ನಿರೀಕ್ಷೆಗೆ ಮನ್ನಣೆ ಸಿಕ್ಕಿದೆ ಎಂದು ಮಾದಾಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಪಿ.ಡಿ.ಅಂತೋಣಿ (ತಂಗಚ್ಚ)ವಲಯ ಕಾಂಗ್ರೆಸ್ ಕಾರ್ಯದರ್ಶಿ ನಾಸಿರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಏ.10 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್‍ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಹಾಗೂ ಸಮಾರೋಪ ಸಮಾರಂಭವು ಏ.13 ರಂದು ನಡೆಯಲಿದೆ. ಬೆಳಿಗ್ಗೆ 10.30 ಗಂಟೆಗೆ ಪಾಟಿಬೆಟ್ಟದ ಟಾಟಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ, ರಿಪಬ್ಲಿಕ್ ಟಿವಿ ಮತ್ತು ಆರ್ ಕನ್ನಡ ವಿತರಣಾ ಅಧ್ಯಕ್ಷರು ಹಾಗೂ ಕೂರ್ಗ್ ಕ್ರಿಕೆಟ್ ಫೌಂಡೇಶನ್‍ನ ಮುಖ್ಯ ಮಾರ್ಗದರ್ಶಕ ಚೇರಂಡ ಕಿಶನ್ ಮಾದಪ್ಪ, ಕ್ಯೂರೆಮಾರ್ವೆಲ್ ನಿರ್ದೇಶಕಿ ಪೂಜಿತಾ ಉತ್ತಪ್ಪ, ಮಾಜಿ ಹಾಕಿ ಒಲಿಂಪಿಯನ್ ಲೆಫ್ಟಿನೆಂಟ್ ಕರ್ನಲ್ ಬಾಳೆಯಡ ಸುಬ್ರಮಣಿ, ರಾಜ್ಯ ಸರ್ಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕ ತೀತಿರ ರೋಶನ್ ಅಪ್ಪಚ್ಚು, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ, ಉದ್ಯಮಿ ಕುಪ್ಪಂಡ ಚಿಣ್ಣಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಬಿಜೆಪಿ…

Read More

ಮಡಿಕೇರಿ ಏ.10 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವಿರಾಜಪೇಟೆ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಾಲ್ಲೂಕು ಅಧ್ಯಕ್ಷ ವಿಜಯ್ ಕುಮಾರ್ ತಿಳಿಸಿದ್ದಾರೆ.  ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನಿರ್ದೇಶನದಂತೆ ವಿರಾಜಪೇಟೆ ತಾಲ್ಲೂಕು ಘಟಕದ ಉಪಾಧ್ಯಕ್ಷರಾಗಿ ಮುಕ್ಕಾಟಿರ ಕಾವೇರಮ್ಮ ಕರಂಬಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಜೆ.ಸವಿತಾ  ಹಾಗೂ ಸದಸ್ಯರಾಗಿ ಕೆ.ಎಚ್.ಪವಿತ್ರ , ಪಿ.ಕೆ.ಪೂವಮ್ಮ , ಕಡೇಮಡ ಸುವಿತ್, ನಝೀರ್ ಚೊಕ್ಕಂಡ, ಇಸ್ಮಾಯೀಲ್ ಎಂ.ಎಂ.ಡ್ಯಾನಿ ಕುಶಾಲಪ್ಪ ಕರಿನೆರವಂಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಜಯ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಏ.10 NEWS DESK : ನಗರದ ಕಾಲೇಜು ರಸ್ತೆಯ ಹೃದಯ ಭಾಗದಲ್ಲಿ ಮನೆಯೊಂದಕ್ಕೆ ನುಗ್ಗಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಂಧಿತ ವ್ಯಕ್ತಿಗೆ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ನಗರದ ಹೊರ ವಲಯದ ಪ್ರತಿಷ್ಠಿತ ರೆಸಾರ್ಟ್‍ನಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ನಿವಾಸಿ ವಿಕಾಸ್ ಜೋರ್ಡಿಯಾ(35) ಎಂಬಾತನೇ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಯಾಗಿದ್ದಾನೆ. ::: ಪ್ರಕರಣದ ಹಿನ್ನೆಲೆ ::: ಸಾಕಮ್ಮ ಪ್ರಭಾಕರ್ ಎಂಬುವವರು 2023ರ ನವೆಂಬರ್ 5ರಂದು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಅಪರಿಚಿತ ವ್ಯಕ್ತಿ ಏಕಾಏಕಿ ನುಗ್ಗಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಅಲ್ಲದೆ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಮತ್ತು ಕೈ ಬೆರಳಿನಲ್ಲಿದ್ದ ಉಂಗುರವನ್ನು ಕಸಿದುಕೊಂಡು ಹೋಗಿರುವ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ರೆಸಾರ್ಟ್ ಒಂದರಲ್ಲಿ…

Read More

ಮಡಿಕೇರಿ ಏ.10 NEWS DESK : ಕರಿಕೆ ಗ್ರಾಮದ ತೋಟದಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ.  ಕರಿಕೆ ಗ್ರಾಮದ ತೋಟಂ ನಿವಾಸಿ ಸೈಯದು ಅವರ ಮನೆಯ ಪಕ್ಕದ ತೋಟದಲ್ಲಿ ಇದ್ದ ಸುಮಾರು 10 ಅಡಿ ಉದ್ದ, 30 ಕೆ.ಜಿ ತೂಕದ ಹೆಬ್ಬಾವನ್ನು ರಕ್ಷಿಸಿ, ಅರಣ್ಯ ಇಲಾಖೆಯ ಅರಣ್ಯ ಪಾಲಕ ಆರ್.ಜಿ.ರಫೀಕ್, ಉಪವಲಯ ಅರಣ್ಯಾಧಿಕಾರಿ ಸಚಿನ್ ಬಿರಾದಾರ ಅವರ ನೇತೃತ್ವದಲ್ಲಿ ಸಮೀಪದ ಪಟ್ಟಿಘಾಟ್ ಮೀಸಲು ಅರಣ್ಯಕ್ಕೆ ಬಿಟ್ಟರು.  

Read More

ಸಿದ್ದಾಪುರ ಏ.10 NEWS DESK : ನೆಲ್ಲಿಹುದಿಕೇರಿಯ ನಾಲ್ಕನೇ ವಾರ್ಡ್‌ನ ಲಕ್ಕಿ ಇಲೆವೆನ್ ಯುವಕ ಸಂಘ ನಡೆಸಿದ ಲಕ್ಕಿ ಇಲೆವೆನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಬ್ರದರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.  ಪಂದ್ಯಾವಳಿಯಲ್ಲಿ ವಾರ್ಡ್‌ ನೂರಕ್ಕೂ ಅಧಿಕ ಯುವಕರು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. 8 ತಂಡಗಳು ಭಾಗವಹಿಸಿದ್ದ ಪಂದ್ಯಾವಳಿಯ ರೋಚಕ ಫೈನಲ್ ಪಂದ್ಯಾಟದಲ್ಲಿ ಡ್ರೀಮ್ 46 ತಂಡವನ್ನು ಮಣಿಸಿದ ರಾಯಲ್ ಬ್ರದರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಪೊನ್ನಂಪೇಟೆ ಹಾಗೂ ಮಾಲ್ದಾರೆ ಮಹಿಳಾ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಿತು. ಮಾಲ್ದಾರೆಯ ಮಹಿಳಾ ತಂಡವು ಜಯಗಳಿಸಿತು. ಪುರುಷರ ಪಂದ್ಯಾವಳಿಯಲ್ಲಿ ವಿಜೇತರಾದ ಎರಡು ತಂಡಗಳಿಗೆ ಪ್ರಶಸ್ತಿ ಹಾಗೂ ನಗದು ಬಹುಮಾನ ನೀಡಲಾಯಿತು. ಪಂದ್ಯಾವಳಿಯ ಸರಣಿ ಶ್ರೇಷ್ಠನಾಗಿ నిధిలో ಅನಿಯನ್, ಫೈನಲ್ ಪಂದ್ಯದ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಜೀಯದ್, ಉತ್ತಮ బౌలరా ಪ್ರಶಸ್ತಿಯನ್ನು ಅಜ್ಜಲ್. ಉತ್ತಮ ಕ್ಷೇತ್ರರಕ್ಷಕ ಪ್ರಶಸ್ತಿಯನ್ನು ನಯಾಜ್, ಉತ್ತಮ ಬ್ಯಾಟ್ಸ್‌ಮನ್ ಆಗಿ ನಿಖಿಲ್, ಉತ್ತಮ ಗೂಟ ರಕ್ಷಕನಾಗಿ ಜಾಫರ್, ಭವಿಷ್ಯದ ಆಟಗಾರನಾಗಿ ರಫೀಕ್,…

Read More

ಮಡಿಕೇರಿ NEWS DESK ಏ.10 : ವಿಷು ಹಬ್ಬಕ್ಕೆ ಮುಖ್ಯವಾಗಿ ಬೇಕಾಗಿರುವ (ಕೊನ್ನ ಪೂ) ಹೊನ್ನೇ ಹೂವು ವಿತರಣೆ, ವಿಷು ಕಣಿ ಹಾಗೂ ವಿಷು ಕೈನೀಟಂ ನ್ನು ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ಆಚರಿಸಲು ಮಡಿಕೇರಿಯ ಹಿಂದೂ ಮಲಯಾಳಿ ಸಂಘ ನಿರ್ಧರಿಸಿದೆ. ಸಂಘದ ವತಿಯಿಂದ ಏ.13ರಂದು ಸಂಜೆ 5 ಗಂಟೆಗೆ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಹರಿಹರ ಸರ್ವಿಸ್ ಸ್ಟೇಷನ್ ಆವರಣದಲ್ಲಿ ಆಚರಣೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ಹಾಗೂ ಸ್ಥಾಪಕ ಅಧ್ಯಕ್ಷ ಕೆ.ಎಸ್.ರಮೇಶ್ ತಿಳಿಸಿದ್ದಾರೆ. ಸರ್ವ ಹಿಂದೂ ಮಲಯಾಳಿ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವ ಮೂಲಕ ಸದುಪಯೋಗ ಪಡೆದುಕೊಳ್ಳುಂತೆ ಮನವಿ ಮಾಡಿದ್ದಾರೆ. ಈ ಸಂದರ್ಭ ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ್.ಹೆಚ್.ಪಿ, ಸಂಘಟನಾ ಕಾರ್ಯದರ್ಶಿ ಟಿ.ಆರ್.ಪ್ರಮೋದ್ ಹಾಗೂ ಸಹ ಖಜಾಂಚಿ ಪಿ.ವಿ.ಸುಬ್ರಮಣಿ ಉಪಸ್ಥಿತರಿದ್ದರು.

Read More

ಸುಂಟಿಕೊಪ್ಪ ಏ.10 NEWS DESK : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂತ ಮೇರಿ ಸಂಯುಕ್ತ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ರಾಜ್ಯ ಮತ್ತು ಜಿಲ್ಲೆಯಲ್ಲಿ ಪ್ರಥಮ ಮತ್ತು ತೃತೀಯ ಸ್ಥಾನಗಳಿಸಿದ ಹಿನ್ನೆಲೆ ಶಾಲಾಡಳಿತ ಮಂಡಳಿ ವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಿಸಲಾಯಿತು. ಸಂತ ಮೇರಿ ಸಂಯುಕ್ತ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಿ.ಎನ್.ಡಿಂಪಲ್ ತಿಮ್ಮಯ್ಯ 591 ಅಂಕ ಶೇ98.05 ಹಾಗೂ ಜಿಲ್ಲೆಯಲ್ಲಿ 3ನೇ ಸ್ಥಾನ ಪಡೆದ ಡಿ.ಡಿ.ಸೃಜನ 587 ಶೇ.97.83 ಪಡೆದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯ ಪ್ರಮುಖರು, ಶಿಕ್ಷಕರು ಸನ್ಮಾನಿಸಿ, ಗೌರವಿಸಿದರು. ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ ಕಾಲೇಜಿನ ವ್ಯವಸ್ಥಾಪಕ ರೇ.ಫಾ.ವಿಜಯಕುಮಾರ್  ವಿದ್ಯಾರ್ಥಿಗಳ ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆ ಮಾಡುವ ಮೂಲಕ ಇತರರಿಗೆ ಮಾದರಿಯಾಗಲೆಂದು ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಸೇಲ್ವರಾಜ್ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು ಇದ್ದರು.

Read More

ಸಿದ್ದಾಪುರ ಏ.10 NEWS DESK : 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಬಿ.ಜಿ.ಎಸ್. ಪಿಯು ಕಾಲೇಜಿನ ವಿದ್ಯಾರ್ಥಿನಿ‌ ಶ್ವೇತಾ 600ಕ್ಕೆ 530 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಶ್ವೇತಾ ಅಮ್ಮತ್ತಿ ಹಚ್ಚಿನಾಡು ಗ್ರಾಮದ ನಾಗರಾಜು, ಸುಂದರಿ  ದಂಪತಿಯ ಪುತ್ರಿ. ಕಾಲೇಜಿನ  20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು, ಕಾಲೇಜಿನ ‌ ಒಟ್ಟು ಫಲಿತಾಂಶ ಶೇ.93 ಆಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಸೋಮೇಶ್ವರನಾಥ ಸ್ವಾಮೀಜಿ ತಿಳಿಸಿದ್ದಾರೆ.

Read More