ಲೇಖಕ: admin

ಮಡಿಕೇರಿ ಮೇ 8 NEWS DESK : ಭಾರತೀಯ ಸೇನೆಯಿಂದ ಉಗ್ರರ ನೆಲೆಗಳ ಮೇಲೆ ನಡೆಸಿದ ‘ಆಪರೇಷನ್ ಸಿಂಧೂರ್’ ದಾಳಿ ಯಶಸ್ವಿ ಹಿನ್ನೆಲೆಯಲ್ಲಿ  ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನ ಸಮಿತಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರದ  ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಭಾರತೀಯ ಸೈನ್ಯಕ್ಕೆ ಶಕ್ತಿ ತುಂಬಲು ಮತ್ತು ದೇಶದ ಶಾಂತಿ, ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಪ್ರಮುಖರಾದ ಜಿ.ರಾಜೇಂದ್ರ, ಅಂಬೆಕಲ್ ಕುಶಾಲಪ್ಪ, ಚುಮ್ಮಿದೇವಯ್ಯ, ಪ್ರಕಾಶ್ ಆಚಾರ್ಯ ಸೇರಿದಂತೆ ಮತ್ತಿತರ ಪದಾಧಿಕಾರಿಗಳು ಹಾಜರಿದ್ದರು.

Read More

ನಾಪೋಕ್ಲು ಮೇ 8 NEWS DESK : ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಸಮಿತಿ ಸದಸ್ಯರ ಮಾಸಿಕ ಸಭೆ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರುಗಂದ ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಮೌನ ಸಂತಾಪ ಸೂಚಿಸಲಾಯಿತು. ನಂತರ ಹಲವಾರು ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಕ್ರಿಯಾ ಯೋಜನೆ ರೂಪಿಸಿದ್ದು, ಮುಂಬರುವ ದಿನಗಳಲ್ಲಿ ಒಕ್ಕೂಟದ ಸದಸ್ಯರು ಹಾಗೂ ಅವರ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುವುದಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು. ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ ಸ್ವಾಗತಿಸಿ, ಕೊಡಪಾಲು ತೀರ್ಥ ಗಣಪತಿ ವಂದಿಸಿದರು. ವರದಿ : ದುಗ್ಗಳ ಸದಾನಂದ. 

Read More

ಸೋಮವಾರಪೇಟೆ ಮೇ 8 NEWS DESK : ಗರಗಂದೂರು ಬಿ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಬ್ರಹ್ಮಕಳಶೋತ್ಸವ ಮತ್ತು 15ನೇ ವಾರ್ಷಿಕ ಪೂಜೆ ಗ್ರಾಮಸ್ಥರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು. ಪಕ್ಕದ ಹಾರಂಗಿ ನದಿಯಿಂದ ಗಂಗೆಯನ್ನು ವಾದ್ಯಮೇಳದೊಂದಿಗೆ ಮೆರವಣಿಗೆಯಲ್ಲಿ ದೇವಾಲಯಕ್ಕೆ ತರಲಾಯಿತು. 21 ಮಹಿಳೆಯರು ಕಳಸವನ್ನು ಹೊತ್ತು ಮೆರವಣಿಗೆಯಲ್ಲಿ ತೆರಳಿದರು. ಬ್ರಹ್ಮಕಲಸದ ಪೂಜಾ ವಿಧಿವಿಧಾನಗಳನ್ನು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ನೆರವೇರಿಸಿದರು. ದೇವಾಲಯ ಸಮಿತಿ ಅಧ್ಯಕ್ಷ ಸಿ.ಕೆ.ರೋಹಿತ್, ಉಪಾಧ್ಯಕ್ಷ ಕೆ.ಡಿ.ವೀರಪ್ಪ, ಕಾರ್ಯದರ್ಶಿ ಲಿಖಿತ್ ದಾಮೋಧರ್, ಖಜಾಂಚಿ ಬಿ.ಇ.ಅಜಿತ್‍ಕುಮಾರ್ ಮತ್ತು ಗ್ರಾಮಸ್ಥರು ಇದ್ದರು.

Read More

ಕುಶಾಲನಗರ, ಮೇ 8 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ‌ ಮುಂಬಡ್ತಿ ಹೊಂದಿದ ಎಂ.ಕೃಷ್ಣಪ್ಪ, ಸಂಸ್ಥೆಯಲ್ಲಿ ಉಪನ್ಯಾಸಕ ಹುದ್ದೆಯಿಂದ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಹುದ್ದೆಗೆ ನಿಯುಕ್ತಿಗೊಂದ ಸಿದ್ದೇಶ್ ಕುಮಾರ್ ಹಾಗೂ ಸಂಸ್ಥೆಯಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆಯಿಂದ ಸೋಮವಾರಪೇಟೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಅಧೀಕ್ಷಕ ಹುದ್ದೆಗೆ‌ ಮುಂಬಡ್ತಿ ಹೊಂದಿರುವ ಸುಮ ಅವರಿಗೆ ಡಯಟ್ ಸಂಸ್ಥೆಯ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಸನ್ಮಾನಿತರನ್ನು ಸನ್ಮಾನಿಸಿ ಮಾತನಾಡಿದ ಡಯಟ್ ಸಂಸ್ಥೆಯ ಉಪ ನಿರ್ದೇಶಕ ( ಅಭಿವೃದ್ಧಿ) ಹಾಗೂ ಪ್ರಾಂಶುಪಾಲ ಎಂ.ಚಂದ್ರಕಾಂತ್ , ಸಂಸ್ಥೆಯಲ್ಲಿ ಸದಾ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಕೃಷ್ಣಪ್ಪ, ಸಿದ್ದೇಶ್ ಕುಮಾರ್ ಮತ್ತು ಸುಮ ವಿದ್ಯಾರ್ಥಿ ವೃಂದ ಹಾಗೂ ಸಿಬ್ಬಂದಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ…

Read More

ಕುಶಾಲನಗರ ಮೇ 8 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಬಸವ ಸೇವಾ ಸಮಿತಿಯ ವತಿಯಿಂದ  ಗ್ರಾಮಾಂತರ ಬಸವ ಜಯಂತಿ ಅಂಗವಾಗಿ ಆಕರ್ಷಕ ಮೆರವಣಿಗೆ ನಡೆಸಲಾಯಿತು. ಗ್ರಾಮದಲ್ಲಿ ಸಂಜೆ ವೇಳೆಗೆ ಅಲಂಕೃತ ಬೆಳ್ಳಿ ರಥದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನಿಟ್ಟು ಮೆರವಣಿಗೆ ಮೂಲಕ ಶೋಭಾಯಾತ್ರೆ ನಡೆಸಲಾಯಿತು. ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, 12 ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರು ವಚನಗಳ ಮೂಲಕ ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ, ಕಂದಾಚಾರ, ಮೂಢನಂಬಿಕೆಗಳ ವಿರುದ್ಧ ಜನಜಾಗೃತಿ ಮೂಡಿಸಿದರು.ಪ್ರತಿಯೊಬ್ಬರೂ ಬಸವಣ್ಣನವರ ತತ್ವ,ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದರು. ಶಿರಂಗಾಲ ಗ್ರಾಮ ದೇವಾಲಯ ಸಮಿತಿಯ ಕಾರ್ಯದರ್ಶಿ ಎಂಎಸ್.ಗಣೇಶ್ , ಶೋಭಾಯಾತ್ರೆಗೆ ಚಾಲನೆ ನೀಡಿದರು. ಗ್ರಾಮ ದೇವಾಲಯ ಸಮಿತಿಯ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್, ಗ್ರಾಮ ಬಸವ ಸಮಿತಿಯ ಅಧ್ಯಕ್ಷ ಎಸ್.ಜೆ.ಉಮೇಶ್ , ಕಾರ್ಯದರ್ಶಿ ಎನ್.ಎಸ್.ಜಯಣ್ಣ, ಪ್ರಮುಖರಾದ ಎಸ್.ಎಚ್. ರಾಜಪ್ಪ, ಎಂ.ಎಸ್.ಶಿವಾನಂದ, ಎಸ್.ಪಿ.ಪರಮೇಶ್, ಎಸ್.ಆರ್.ಶಿವಲಿಂಗ, ಸಿದ್ದಲಿಂಗಪ್ಪ ಮತ್ತಿತರರು ಇದ್ದರು. ಮೆರವಣಿಗೆಯಲ್ಲಿ ಅಲಂಕೃತಗೊಳಿಸಲಾಗಿದ್ದ ಹೋರಿಯ ಮೆರವಣಿಗೆ ಗಮನ ಸೆಳೆಯಿತು.

Read More

ಮಡಿಕೇರಿ ಮೇ 7 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಗೆ ಕೋವಿಡ್-19 ಸಂಧರ್ಭದಲ್ಲಿ “ಆಕ್ಸಿಜನ್ ಫಾರ್ ಇಂಡಿಯಾ” ಕಾರ್ಯಕ್ರಮದಡಿಯಲ್ಲಿ ಅಮೇರಿಕಾದ ಮೀರಾ ವೆಲ್ಸ್, ಡಾ.ಶುಭಾ ವರ್ಮಾ ಮತ್ತು ತಂಡದವರು ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ಕೊಡುಗೆಯಾಗಿ ನೀಡಲಾಗಿದ್ದು, ಈ ಸಂಬಂಧ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಗೆ ಡಾ.ಮೀರಾ ವೆಲ್ಸ್ ಅವರ ಪತಿ ಕೋರ್ಟ್‍ಲ್ಯಾಂಡ್ (ನಿರ್ದೇಶಕರು ಐಬಿಎಂ ಸಂಸ್ಥೆ)ನಿವೃತ ಐಎಎಸ್ ಅಧಿಕಾರಿಯಾದ ಎ.ಕೆ.ಮೊಣ್ಣಪ್ಪ ಮತ್ತು ಸ್ಥಳೀಯ ವೈದ್ಯರಾದ ಡಾ ಸಣ್ಣುವಂಡ ಕಾವೇರಪ್ಪ ಭೇಟಿ ನೀಡಿದರು. ಈ ಸಮಯದಲ್ಲಿ 2021 ರ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ, ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ 1984 ರ ಬ್ಯಾಚ್‍ನ ಹಳೆಯ ವಿದ್ಯಾರ್ಥಿಗಳು, ದೇಶಾದ್ಯಂತ ಕೋವಿಡ್ ಪೀಡಿತ ಜನರನ್ನು ಬೆಂಬಲಿಸಲು ಆಕ್ಸಿಜನ್ ಫಾರ್ ಇಂಡಿಯಾ ಎಂಬ ಗುಂಪನ್ನು ರಚಿಸಿದರು. ಡಾ.ಶೋಭಾ ಚೊಟ್ಟೇರಾ, ಮಾಜಿ ಐಎಎಸ್ ಅಧಿಕಾರಿ ಎ.ಕೆ.ಮೊಣ್ಣಪ್ಪ, ನಾಪೋಕ್ಲುವಿನಿಂದ ಡಾ.ಸಣ್ಣುವಂಡ ಎಂ.ಕಾವೇರಪ್ಪ ಅವರನ್ನು ಸಂಪರ್ಕಿಸಿ ಕೊಡಗಿನಲ್ಲಿ ಆಮ್ಲಜನಕದ ಸಾಂದ್ರೀಕರಣದ ಅಗತ್ಯವಿದೆಯೇ ಎಂದು ವಿಚಾರಿಸಿದರು. ಇದರ…

Read More

ಮಡಿಕೇರಿ ಮೇ 7 NEWS DESK : ಕರ್ಣಂಗೇರಿ ಗ್ರಾಮದ ಚಂದ್ರಗಿರಿ ನಗರದಲ್ಲಿ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವತಿಯಿಂದ ಮರು ನಿರ್ಮಿಸಲಾಗಿರುವ ಅಂಗನವಾಡಿ ಮತ್ತು ಸಾರ್ವಜನಿಕ ಗ್ರಂಥಾಲಯದ ಕಟ್ಟಡವನ್ನು ಇಂದು ಪೂಜೆಯ ಮೂಲಕ ಉದ್ಘಾಟಿಸಲಾಯಿತು. ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ, ಸಿ.ಡಿ.ಪಿ.ಒ ಸವಿತಾ, ಅಭಿವೃದ್ಧಿ ಅಧಿಕಾರಿ ಅನಿತಾ, ಬಿಲ್ ಕಲೆಕ್ಟರ್ ಪ್ರಜೀವಿತ್, ಅಂಗನವಾಡಿ ಕಾರ್ಯಕರ್ತೆ ಸುಮಿತ್ರ, ಆಶಾ ಕಾರ್ಯಕರ್ತೆ ಅನಿತಾ ರೈ, ಗುತ್ತಿಗೆದಾರ ಕವನ್, ಗ್ರಾಮಸ್ಥರು, ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಇದೇ ಸಂದರ್ಭ ಕಣರ್ಂಗೇರಿ ಗ್ರಾಮದಲ್ಲಿ ಅಳವಡಿಸಲಾಗಿರುವ ಹೈಮಾಸ್ಟ್ ಬೀದಿ ದೀಪವನ್ನು ಸಾಂಕೇತಿಕವಾಗಿ ಉದ್ಘಾಟಿಸಲಾಯಿತು.

Read More

ಮಡಿಕೇರಿ ಮೇ 7 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಮೇ, 8 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗ್ರತಾ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೇನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್, ಹಳೆ ಪ್ರೈವೆಟ್ ಬಸ್ ಸ್ಟ್ಯಾಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ. ಆಲೂರು ಸಿದ್ದಾಪುರ :: ಆಲೂರು ಸಿದ್ದಾಪುರ 66/11 ಕೆ.ವಿ ಮತ್ತು ಸೋಮವಾರಪೇಟೆ 66/11ಕೆ.ವಿ ಹಾಗೂ ಸೋಮವಾರಪೇಟೆ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಪ್ರಸ್ತುತ ಸಾಲಿನ ಮೊದಲ ತ್ರೈಮಾಸಿಕ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗದಲ್ಲಿ…

Read More

ಮಡಿಕೇರಿ ಮೇ 7 NEWS DESK : ಮುಂಬರುವ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯ ಸಂದರ್ಭ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗಾಗಿ ಪ್ರತ್ಯೇಕ “ಕಾಲಮ್ ಮತ್ತು ಕೋಡ್” ಸೇರಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ 9 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಲಾಗುವುದೆಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ 10.30 ರಿಂದ 11.30 ಗಂಟೆಯವರೆಗೆ ಸತ್ಯಾಗ್ರಹ ನಡೆಯಲಿದ್ದು, ಜಿಲ್ಲಾಡಳಿತದ ಮೂಲಕ ಕೇಂದ್ರ ಗೃಹ ಮಂತ್ರಿಗಳು ಹಾಗೂ ಅದರ ಅಧೀನದಲ್ಲಿ ಬರುವ ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರಿಗೆ (ಆರ್‌ಜಿಸಿಸಿಐ) ವಿವರವಾದ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದರು. ಜನಗಣತಿಯಲ್ಲಿ ಕೊಡವ ಸಮುದಾಯದ ವಿಶಿಷ್ಟ ಸಾಂಸ್ಕೃತಿಕ ಗುರುತನ್ನು ನಿಖರವಾಗಿ ಪ್ರತಿನಿಧಿಸಲು ಮತ್ತು ಕೊಡವ ಜನಸಂಖ್ಯಾ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪ್ರತ್ಯೇಕ ಕಾಲಮ್ ಮತ್ತು ಕೋಡ್ ನ್ನು ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯಕ್ಕೆ ನೀಡಿದ “ಸಂಘ” ಕ್ಷೇತ್ರದಂತೆ,…

Read More

ಮಡಿಕೇರಿ ಮೇ 7 NEWS DESK : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5 ರಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಗರದ ಉಕ್ಕುಡ ಬಳಿಯ ರಾಜರಾಜೇಶ್ವರಿ ಬಡಾವಣೆಗೆ ತೆರಳಿ ವೀಕ್ಷಿಸಿದರು. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‍ದಾಸ ಅವರ ಏಕಸದಸ್ಯ ವಿಚಾರಣಾ ಆಯೋಗ ವತಿಯಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಬಗ್ಗೆ ಖುದ್ದು ಪರಿಶೀಲಿಸಿದರು. ಸಮೀಕ್ಷೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಸಮೀಕ್ಷೆ ಅಪ್ಲಿಕೇಷನ್‍ಗೆ ಲಾಗಿನ್ ಆಗುವುದು. ಸಮೀಕ್ಷೆದಾರರ ಮೊಬೈಲ್ ಸಂಖ್ಯೆಗೆ ಒಟಿಪಿ ನಮೂದಿಸಿ ಲಾಗಿನ್ ಆಗುವುದು, ಸಮೀಕ್ಷೆ ಪ್ರಾರಂಭಿಸಿ ಎಂಬ ಟ್ಯಾಗ್‍ನ್ನು ಒಳಗೊಂಡು ಸಮೀಕ್ಷೆಗೆ ಕ್ಲಿಕ್ ಮಾಡುವುದು, ಹಾಗೆಯೇ ಮತದಾರರ ಪಟ್ಟಿಯಲ್ಲಿರುವ ಮನೆಗಳ ಆಧಾರದ ಮೇಲೆ ಸಮೀಕ್ಷೆ ಪ್ರಾರಂಭಿಸುವುದು. ಮನೆಯ ಮುಖ್ಯಸ್ಥರ ಮತದಾರರ ಪಟ್ಟಿಯಲ್ಲಿನ ಕ್ರಮಸಂಖ್ಯೆಯನ್ನು ನಮೂದು ಮಾಡುವುದು, ಪರಿಶಿಷ್ಟ ಜಾತಿಗೆ ಸೇರಿದವರೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವುದು, ನಂತರ ಪರಿಶಿಷ್ಟ ಜಾತಿ ಕುಟುಂಬದವರ ಪಡಿತರ ಚೀಟಿ ಅಥವಾ ಆಧಾರ್ ಸಂಖ್ಯೆ ನಮೂದಿಸಿ…

Read More