ಲೇಖಕ: admin

ಕುಶಾಲನಗರ, ಏ.10 NEWS DESK : ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ  ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಲ್ ಬುಲ್, ಸ್ಕೌಟ್ಸ್, ಗೈಡ್ಸ್ ಹಾಗೂ ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾಲ ಏರ್ಪಡಿಸಿದ್ದ ತಾಲ್ಲೂಕುಮಟ್ಟದ ಶಾಲಾ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.  ಶಿಬಿರದ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಜಿಲ್ಲಾ ಗೈಡ್ಸ್ ಸಂಸ್ಥೆಯ ಸಹಾಯಕ ಆಯುಕ್ತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ , ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು- ಸಂಯಮ ಬೆಳೆಸಿಕೊಂಡು ರಾಷ್ಟಾಭಿಮಾನ ಬೆಳೆಸಿಕೊಂಡು ದೇಶದ ಸಮಗ್ರತೆ ಮತ್ತು ಭಾವೈಕ್ಯತೆಗೆ ಪಣ ತೊಡಬೇಕು ಎಂದರು. ಈ ದಿಸೆಯಲ್ಲಿ ಇಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕತ್ವ, ವ್ಯಕ್ತಿತ್ವ ಬೆಳವಣಿಗೆ…

Read More

ಕುಶಾಲನಗರ ಏ.10 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿಜಯನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ 2024-25 ನೇ ಸಾಲಿನ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಸಲಾಯಿತು.  ಸಮುದಾಯದತ್ತ ಶಾಲಾ ಕಾರ್ಯಕ್ರಮದ ಮಹತ್ವ ಕುರಿತು ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ  ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಸಮುದಾಯವನ್ನು ಶಾಲೆಯ ಅಭಿವೃದ್ಧಿಗೆ ಸದ್ಬಳಕೆ ಮಾಡಿಕೊಳ್ಳುವ ಉದ್ದೇಶ ಇದಾಗಿದ್ದು, ಪೋಷಕರು ಮಕ್ಕಳ ಕಲಿಕೆಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಮನವಿ ಮಾಡಿದರು. ಪೋಷಕರು ಆಗಿಂದಾಗ್ಗೆ ಶಾಲೆಗೆ ಆಗಮಿಸಿ ಮಕ್ಕಳ ಕಲಿಕಾ ಪ್ರಗತಿ ಕುರಿತು ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಬೇಕು. ಪೋಷಕರೊಂದಿಗೆ ಸಮಾಲೋಚನೆ ನಡೆಸಿದ ಶಾಲೆಯ ಮುಖ್ಯ ಶಿಕ್ಷಕಿ ಕೆ.ಡಿ.ನವೀನ ಮಾತನಾಡಿ, ಪೋಷಕರು ಮಕ್ಕಳ ಕಲಿಕಾ ಪ್ರಗತಿಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು. ‌ಮಾರ್ಗದರ್ಶಕ ಅಧಿಕಾರಿಯಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೂಡಿಗೆ…

Read More

ಸುಂಟಿಕೊಪ್ಪ ಏ.10 NEWS DESK : ನಾರ್ಗಾಣೆ ಶ್ರೀದೇವಿ ಗ್ರಾಮದಲ್ಲಿ ನೆಲೆಗೊಂಡಿರುವ ಶ್ರೀ ಅಣ್ಣಪ್ಪ ಸ್ವಾಮಿ ದೇವಾಲಯದಲ್ಲಿ ಏ.12, 14 ಮತ್ತು 15 ರಂದು ಧರ್ಮದೈವದ ನೇಮೋತ್ಸವವು ನಡೆಯಲಿದೆ ಎಂದು ದೇವಸ್ಥಾನದ ಮೇಲ್ವಿಚಾರಕರಾದ ಬಿ.ಡಿ.ರಾಜುರೈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಏ.12 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ ಮತ್ತು ಶುದ್ಧ ಕಲಶ ನಡೆಯಲಿದೆ. ಏ.14ರಂದು ಸಂಜೆ 6 ಗಂಟೆಗೆ ಶ್ರೀ ಸ್ವಾಮಿ, ಮತ್ತು ಅಮ್ಮನವರ ಭಂಡಾರ ಮೆರವಣಿಗೆ, 6.30ಕ್ಕೆ ಮಹಾ ಮಂಗಳಾರತಿ ಪ್ರಸಾದ ವಿತರಣೆ ರಾತ್ರಿ 8.30 ಕ್ಕೆ ಧೂಮಾವತಿ ಕೋಲ ರಾತ್ರಿ 10.30ಕ್ಕೆ ಆದಿ ದೇವತೆ ಕಲ್ಲುರ್ಟಿ ದೈವದ ಕೋಲ ಹಾಗೂ ಪ್ರಸಾದ ವಿತರಣೆ. ಏ.15 ರಂದು ಬೆಳಿಗ್ಗೆ 1 ಗಂಟೆಗೆ ಧರ್ಮದೈವ ಶ್ರೀ ಅಣ್ಣಪ್ಪ ಪಂಜುರ್ಲಿದೈವದ ಕೋಲ, 3.30 ಗಂಟೆಯಿಂದ ಗುಳಿಗ ಹಾಗೂ ಶ್ರೀ ಚಾಮುಂಡೇಶ್ವರಿ ಧರ್ಮದೈವದ ಕೋಲ ನಡೆಯಲಿದೆ. ಏ.15 ರಂದು ಬೆಳಿಗ್ಗೆ 9 ಗಂಟೆಯಿಂದ ಧರ್ಮದೈವಗಳಿಗೆ ಹರಕೆ, ಬೇಡಿಕೆಗಳನ್ನು ಒಪ್ಪಿಸುವುದು ಮತ್ತು ಮಧ್ಯಾಹ್ನ 1…

Read More

ಸುಂಟಿಕೊಪ್ಪ ಏ.10 NEWS DESK : ಹರದೂರು ಗ್ರಾಮದ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಸಮಿತಿ ವತಿಯಿಂದ ಆದಿನಾಗಬ್ರಹ್ಮ ಮೊಗೇರ ದೈವಗಳ, ಕೊರಗ ತನಿಯ ದೈವದ ಹಾಗೂ ಮಂತ್ರವಾದಿ ಗುಳಿನಗ 85 ನೇ ನೇಮೋತ್ಸವವು ಏ.12 ಮತ್ತು 13 ರಂದು ನಡೆಯಲಿದೆ ಎಂದು ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಯುಧಾ ಪೂಜೆ, ಸಂಜೆ 5 ಗಂಟೆಗೆ ನಿತ್ಯ ಪೂಜೆ ಮತ್ತು ಭಂಡಾರ ಹೊರಡುವುದರ ಮೂಲಕ ನೇಮೋತ್ಸವಕ್ಕೆ ಚಾಲನೆ ನೀಡಲಾಗುವುದು. ಸಂಜೆ 6 ಗಂಟೆಗೆ ಮಂತ್ರವಾದಿ ಗುಳಿಗನ ನೇಮ, ರಾತ್ರಿ 8.30 ಗಂಟೆಗೆ ಶ್ರೀ ಆದಿನಾಗಬ್ರಹ್ಮ ಮೊಗೇರ ದೈವಗಳ ಗರಡಿ ಇಳಿಯುವುದು, ರಾತ್ರಿ 9 ಗಂಟೆಗೆ ಅನ್ನ ಸಂತರ್ಪಣೆ ಜರುಗಲಿದೆ. ರಾತ್ರಿ 12 ಗಂಟೆಗೆ ಆದಿ ಮಾಯೆ ತನ್ನಿ ಮಾನಿಗ ಗರಡಿ ಇಳಿಯುವುದು, ಬೆಳಗ್ಗೆ 4.30 ಗಂಟೆಗೆ ಹರಕೆ ಮತ್ತು ಕಾಣಿಕೆ, ಬೆಳಿಗ್ಗೆ 8.ಗಂಟೆಗೆ ಕೊರಗತನಿಯ ದೈವದ ನೇಮ ನಡೆಯಲಿದೆ. ಏ.20 ರಂದು ಕೊರಗತನಿಯ ದೈವದ ಅಗೇಲು…

Read More

ಮಡಿಕೇರಿ ಏ.10 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯು ಏಪ್ರಿಲ್, 14 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಏ.14 ರಂದು ಬೆಳಗ್ಗೆ 7.30 ಗಂಟೆಗೆ ವಿವಿಧ ಕಲಾತಂಡದೊಂದಿಗೆ ಕಾವೇರಿ ಕಲಾಕ್ಷೇತ್ರದಿಂದ ಸುದರ್ಶನ ವೃತ್ತದವರೆಗೆ ಮೆರವಣಿಗೆ ಸಾಗಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಬೆಂಗಳೂರು ಅಕ್ಕ ಐಎಎಸ್ ಅಕಾಡೆಮಿ…

Read More

ಮಡಿಕೇರಿ ಏ.10 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ಬಿ.ಎ(ಎಚ್‍ಇಪಿ, ಎಚ್‍ಪಿಕೆ, ಎಚ್‍ಇಕೆ), ಬಿ.ಕಾಂ(ಜನರಲ್), ಬಿ.ಕಾಂ (ಎಇಡಿಪಿ), ಬಿ.ಬಿ.ಎ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಕಾಲೇಜು ನ್ಯಾಕ್‍ನಿಂದ ‘ಬಿ’ ಮರು ಮಾನ್ಯತೆ ಪಡೆದಿದ್ದು, ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಸುಸಜ್ಜಿತವಾದ ತರಗತಿ ಕೊಠಡಿಗಳು ಮತ್ತು ನುರಿತ ಬೋಧಕರನ್ನು ಒಳಗೊಂಡಿದೆ. ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅವಶ್ಯಕವಿರುವ ಸುಮಾರು 14,000 ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ, ಇ-ಗ್ರಂಥಾಲಯ, ಸ್ಮಾರ್ಟ್‍ಕ್ಲಾಸ್ ಸೌಲಭ್ಯ, ವೈಫೈ ಸೌಲಭ್ಯ, ಸಿ.ಸಿ.ಕ್ಯಾಮೆರಾ ಕಣ್ಗಾವಲಿನಲ್ಲಿರುವ ಸುಸಜ್ಜಿತ ಕಟ್ಟಡ, ಮಹಿಳಾ ದೌರ್ಜನ್ಯ ನಿರ್ಮೂಲನಾ ಸಮಿತಿ, ಮಾದಕ ವಸ್ತು ನಿರ್ಮೂಲನಾ ಸಮಿತಿ, ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಆಧುನಿಕ ರೀತಿಯ ಬೋಧನ ಕ್ರಮ, ಉದ್ಯೋಗ ಮಾರ್ಗದರ್ಶನ ಕೇಂದ್ರ, ವಿದ್ಯಾರ್ಥಿ ನಿಲಯ, ಕ್ಯಾಂಟೀನ್ ವ್ಯವಸ್ಥೆ, ಇಕೋ ಕ್ಲಬ್, ವಿದ್ಯಾರ್ಥಿ ಭ್ರಾತೃತ್ವ ವೇದಿಕೆ, ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಸಂಘ, ಅಂತರಕಾಲೇಜು ವಿದ್ಯಾರ್ಥಿಗಳ ಕಲಿಕಾ ವಿನಿಮಯ ಕಾರ್ಯಕ್ರಮಗಳು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ…

Read More

ಮಡಿಕೇರಿ NEWS DESK : ಕರ್ನಾಟಕ ರಾಜ್ಯದಲ್ಲೇ ಮಾದರಿ ಗ್ರಾಮ ಪಂಚಾಯಿತಿ ಹಾಗೂ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪಡೆದ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿಗೆ  ಅಂಡಮಾನ್ ನಿಕೋಬಾರ್ ದ್ವೀಪಗಳ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಭೇಟಿ ನೀಡಿ ಹೊದ್ದೂರು ಗ್ರಾ.ಪಂ ಆಡಳಿತ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಕೊಟ್ಟಮುಡಿ, ಹೊದ್ದೂರು ಗ್ರಾ.ಪಂ ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಸದಸ್ಯರು ಮತ್ತು ಅಧಿಕಾರಿಗಳ ಸಹಕಾರದಿಂದ ಗ್ರಾ.ಪಂ ಅಭಿವೃದ್ಧಿಯತ್ತ ಸಾಗುತ್ತಿದೆ. ಹೊದ್ದೂರು ಗ್ರಾಮ ಪಂಚಾಯಿತಿ ಇದೀಗ ರಾಷ್ಟ್ರದ ಇತರೆ ರಾಜ್ಯಗಳ ಗ್ರಾಮ ಪಂಚಾಯಿತಿಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದೆಂದು ಹಂಸ ಹೇಳಿದರು. ಅಂಡಮಾನ್ ನಿಕೋಬಾರ್ ದ್ವೀಪದ ಜನಪ್ರತಿನಿಧಿಗಳಾದ ಆರ್.ಮಾಧವನ್, ದಿಪಾಂಕರ್ ಮಿಸ್ಟ್ರಿ, ನಾರಾಯಣ್ ಮೊಂಡಲ್, ಸುಜಿತ್ ಮಿಸ್ಟ್ರಿ, ಉಮಾ ಶಂಕರ್ ಸರ್ಕಾರ್, ಎಸ್‌.…

Read More

ಮಡಿಕೇರಿ ಏ.10 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಏ.12 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸುವಂತೆ ದೇವಾಲಯದ ಇಒ ಚಂದ್ರಶೇಖರ್ ಎನ್.ಜಿ ಕೋರಿದ್ದಾರೆ.

Read More

ಮಡಿಕೇರಿ ಏ.10 NEWS DESK : ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಎರಡನೇ ಕಾರ್ಯಕ್ರಮ ನಡೆಯಿತು. ಶಾಲಾ ಹಿರಿಯ ಮುಖ್ಯ ಶಿಕ್ಷಕಿ ಹೆಚ್.ಕೆ.ಸುಶೀಲ ಮಾತನಾಡಿ ಶಾಲೆಯಲ್ಲಿ ಸಿಗುವ ಉಚಿತ ಸೌಲಭ್ಯ ಹಾಗೂ ಸರ್ಕಾರದ ವತಿಯಿಂದ ದೊರೆಯುವ ಉಚಿತ ಸೌಲಭ್ಯಗಳ ಬಗ್ಗೆ ವಿವರಿಸಿದರು. ಶಾಲೆಯಲ್ಲಿನ ಸೌಲಭ್ಯಗಳು ನುರಿತ ಶಿಕ್ಷಕರು, ಸುಸಜ್ಜಿತ ನವೀನ ಕಟ್ಟಡ, ಸುಸಜ್ಜಿತ ಪೀಠೋಪಕರಣಗಳು, ಅನುಭವಾತ್ಮಕ ಕಲಿಕೆ, ವಿಶಾಲವಾದ ಆಟದ ಮೈದಾನ, ಗ್ರಂಥಾಲಯ, ಉತ್ತಮ ವಿಜ್ಞಾನ, ಗಣಿತ, ಸಮಾಜ ಸಮಾಜ ವಿಜ್ಞಾನ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸೋಲಾರ್ ವ್ಯವಸ್ಥೆ, ಡಿಜಿಟಲ್ ಲೈಬ್ರರಿ(ಗ್ರಂಥಾಲಯ), ಆಧುನಿಕ ಕ್ರೀಡಾ ಉಪಕರಣಗಳು, ಐಡಿಕಾರ್ಡ್ ವ್ಯವಸ್ಥೆ ಇದೆ ಎಂದು ಶಾಲೆಯ ಮುಖ್ಯೋಪಾಧ್ಯಯರು ಹೇಳಿದರು. ಸರ್ಕಾರದ ಸೌಲಭ್ಯಗಳು ಪಠ್ಯಪುಸ್ತಕ ಮತ್ತು ಅಭ್ಯಾಸ ಪುಸ್ತಕ, 2 ಜೊತೆ ಸಮವಸ್ತ್ರ, ಕ್ಷೀರ ಭಾಗ್ಯದೊಂದಿಗೆ ರಾಗಿ ಮಾಲ್ಟ್, ಅಕ್ಷರ ದಾಸೋಹದಡಿ ಮಧ್ಯಾಹ್ನದ…

Read More

ಮಡಿಕೇರಿ ಏ.10 NEWS DESK : ಇದೇ ಏಪ್ರಿಲ್, 16 ಮತ್ತು 17 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿಇಟಿ ಪರೀಕ್ಷೆ ಸಿದ್ಧತೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಇರಬೇಕು. ಪರೀಕ್ಷಾ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ, ಶೌಚಾಲಯ ಇರಬೇಕು. ಸಿಇಟಿ ಪರೀಕ್ಷೆ ಸಂಬಂಧ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ಪಷ್ಟ ನಿರ್ದೇಶನ ನೀಡಿದರು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಸುಗಮವಾಗಿ ಪರೀಕ್ಷೆ ನಡೆಸಬೇಕು. ಪೊಲೀಸರ ನಿಯೋಜನೆ, ರೂಟ್ ಅಧಿಕಾರಿಗಳು ಮತ್ತು ಮೇಲ್ವಿಚಾರಕರ ನಿಯೋಜನೆ ಮತ್ತಿತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದರು. ಪರೀಕ್ಷೆ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವೈದ್ಯರು/ ಶ್ರುಶ್ರೂಷಕರನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ…

Read More