ಲೇಖಕ: admin

ಮಡಿಕೇರಿ NEWS DESK ಏ.9 : ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ ನೀಡಿರುವ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ಕೂಡ ವಿಶೇಷ ಪ್ರಾತಿನಿಧ್ಯ ಅಥವಾ ಪರ್ಯಾಯವಾಗಿ ಪ್ರತ್ಯೇಕ ಲೋಕಸಭೆ ಮತ್ತು ವಿಧಾನಸಭೆಯ ಕೊಡವ ಮತ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕಡಂಗದಲ್ಲಿ ಮಾನವ ಸರಪಳಿ ರಚಿಸಿ ಹಕ್ಕೊತ್ತಾಯವನ್ನು ಮಂಡಿಸಿತು. ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು, ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಘೋಷಿಸಬೇಕು, ಎಸ್‌ಟಿ ಟ್ಯಾಗ್ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಪರ ಘೋಷಣೆಗಳನ್ನು ಕೂಗಿದ ಸಿಎನ್‌ಸಿ ಸದಸ್ಯರು ಆದಿಮಸಂಜಾತ ಕೊಡವರ ಪ್ರಗತಿ ಹಾಗೂ ರಕ್ಷಣೆಗಾಗಿ ಸಂವಿಧಾನಬದ್ಧ ಹಕ್ಕುಗಳನ್ನು ಸರ್ಕಾರ ಒದಗಸಿಕೊಡಬೇಕೆಂದು ಒತ್ತಾಯಿಸಿದರು.  ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಕೊಡವರು ಬೇರೆಯೇ ರೇಸ್/ ಮೂಲ ವಂಶಸ್ಥ ಜನಾಂಗವಾಗಿದ್ದು, ಅವರ ಸ್ವತಂತ್ರ ಅಸ್ತಿತ್ವ ಮತ್ತು ವ್ಯಕ್ತಿತ್ವವನ್ನು ಗುರುತಿಸಿ 1871-72ರಿಂದ 1931ರ…

Read More

ಸೋಮವಾರಪೇಟೆ NEWS DESK ಏ.9 : ಸೋಮವಾರಪೇಟೆ ಭಾಗದ ವಿವಿಧೆಡೆ ಬುಧವಾರ ಗುಡುಗು ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗಿದೆ. ಶಾಂತಳ್ಳಿ ಗ್ರಾಮದಲ್ಲಿ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ. ಗ್ರಾಮದ ಕೃಷಿಕ ಕೆ.ಎಂ.ಗಿರೀಶ್ ಅವರ ಮನೆಗೆ ಸಿಡಿಲು ಬಡಿದು, ಮನೆಯಲ್ಲಿದ್ದ ಟಿ.ವಿ., ಫ್ರಿಡ್ಜ್, ಕೂಲರ್, ವಿದ್ಯುತ್ ವಯರ್‌ಗಳು ಹಾನಿಗೀಡಾಗಿವೆ. ಮನೆಯೊಳಗೆ ಮನೆ ಮಂದಿಯಿದ್ದರೂ ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ.

Read More

ಮಡಿಕೇರಿ NEWS DESK ಏ.9 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸಿಸನ್-2ರ 9ನೇ ದಿನದ ಪಂದ್ಯಾವಳಿಯಲ್ಲಿ ಟೀಮ್ ಕೂರ್ಗ್ ಯುನೈಟೆಡ್ ಹಾಗೂ ಟೀಮ್ ಪ್ರಗತಿ ಕ್ರಿಕೆಟರ್ಸ್‌ ತಂಡಗಳು ಗೆಲುವು ಸಾಧಿಸಿದವು. ಟೀಮ್ ಕೂರ್ಗ್ ಯುನೈಟೆಡ್ ಮತ್ತು ಟೀಮ್ ಕೊಡವ ಟ್ರೈಬ್ಸ್ ನಡುವೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೂರ್ಗ್ ಯುನೈಟೆಡ್ ತಂಡ 20 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 135 ರನ್‌ಗಳನ್ನು ಸೇರಿಸಿತು. ಇದನ್ನು ಬೆನ್ನೆಟ್ಟಿದ ಕೊಡವ ಟ್ರೈಬ್ಸ್ ತಂಡ 16.1 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 96 ರನ್ ಗಳನ್ನಷ್ಟೇ ಸೇರಿಸಿ ಕೂರ್ಗ್ ಯುನೈಟೆಡ್ ಎದುರು ಸೋಲೊಪ್ಪಿಕೊಂಡಿತು. ಟಾಸ್ ಗೆದ್ದ ಕೊಡವ ಟ್ರೆöÊಬ್ಸ್ ತಂಡ ಮೊದಲು ಬೌಲಿಂಗ್ ಅನ್ನು ಆಯ್ದುಕೊಂಡಿತು.‌ ಕೂರ್ಗ್ ಯುನೈಟೆಡ್ ನ ಅಟ್ರಂಗಡ ಶರತ್ ನಂಜಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಟೀಮ್ ಪ್ರಗತಿ ಕ್ರಿಕೆಟರ್ಸ್ ಮತ್ತು ಟೀಮ್…

Read More

ಮಡಿಕೇರಿ ಏ.9 NEWS DESK : ನಿತ್ಯೋಪಯೋಗಿ ವಸ್ತುಗಳ ಬೆಲೆ ಹೆಚ್ಚಳ, ಮುಸ್ಲಿಂ ಓಲೈಕೆ, ಪರಿಶಿಷ್ಟರಿಗೆ ಮೀಸಲಾದ ಹಣದ ಲೂಟಿ ಸೇರಿದಂತೆ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ಇಂದು ನಗರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆರೋಪಗಳ ಬೃಹತ್ ‘ಜನಾಕ್ರೋಶ ಯಾತ್ರೆ’ ನಡೆಸಿತು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಎಂಎಲ್‍ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಮಾಜಿ ಎಂಎಲ್‍ಸಿ ಎಸ್.ಜಿ.ಮೇದಪ್ಪ ಅವರುಗಳನ್ನು ಒಳಗೊಂಡಂತೆ ಪ್ರಮುಖರು ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಳೇ ಖಾಸಗಿ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿನಯ್ ಸಾವಿಗೆ ನ್ಯಾಯ ದೊರಕಿಸಲು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೆರವಣಿಗೆಯ…

Read More

*ಮೈದಾನ 1*  ಅಂಜಪರವಂಡ ಮತ್ತು ತಿರುಟೆರ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಅಂಜಪರವಂಡ ಜಯ ಸಾಧಿಸಿತು. ಅಂಜಪರವಂಡ ಪರ ಅಭಿನ್ ಚಿಟ್ಟಿಯಪ್ಪ 1 ಗೋಲು ದಾಖಲಿಸಿದರು. ತಿರುಟೆರ ಪ್ರೀತಮ್ ಪೂವಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೊಚ್ಚೆರ ಮತ್ತು ಮುಕ್ಕಾಟಿರ (ಬೋಂದ) ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಮುಕ್ಕಾಟಿರ ತಂಡ ಗೆಲುವು ದಾಖಲಿಸಿತು. ಮುಕ್ಕಾಟಿರ ಪರ ರನ್ನ ಚಿಣ್ಣಪ್ಪ, ವಸಂತ್ ಹಾಗೂ ಆದಿತ್ಯ ತಲಾ 1 ಗೋಲು ದಾಖಲಿಸಿದರು. ಕೊಚ್ಚೆರ ಪ್ರತಿಕ್ ತಿಮ್ಮಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೋಳಂಡ ಮತ್ತು ಬೊಳ್ಳೆರ ನಡುವಿನ ಪಂದ್ಯದಲ್ಲಿ ನಿಗಧಿತ ಅವಧಿಯಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಬೊಳ್ಳೆರ ತಂಡ ಗೆಲುವು ದಾಖಲಿಸಿತು. ಚೋಳಂಡ ಅಮನ್ ಮುತ್ತಣ್ಣ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಾತಂಡ ಮತ್ತು ಚಂಗುಲಂಡ ತಂಡಗಳ ನಡುವಿನ ಪಂದ್ಯದಲ್ಲಿ 3-0…

Read More

*ಮೈದಾನ 1* ಬೆಳಿಗ್ಗೆ 9 ಗಂಟೆಗೆ ಮದ್ರೀರ ಮತ್ತು ಜಮ್ಮಡ, 10 ಗಂಟೆಗೆ ಪಳಂಗಂಡ ಮತ್ತು ಚಪ್ಪಂಡ, 11 ಗಂಟೆಗೆ ಮಾಚಿಮಾಡ ಮತ್ತು ಮೇಚಿಯಂಡ, ಮಧ್ಯಾಹ್ನ 12 ಗಂಟೆಗೆ ಕೂತಂಡ ಮತ್ತು ಮಂಡೀರ (ನೆಲಜಿ), 1 ಗಂಟೆಗೆ ಬೊಳ್ಳಂಡ ಮತ್ತು ಕೇಳಪಂಡ, 2 ಗಂಟೆಗೆ ವಾಟೇರಿರ ಮತ್ತು ಬಾಚಿನಾಡಂಡ, 3 ಗಂಟೆಗೆ ಬಡ್ಡೀರ ಮತ್ತು ಕೇಚೇಟಿರ (ಕಡಗದಾಳು) *ಮೈದಾನ 2* ಬೆಳಿಗ್ಗೆ 9.30 ಗಂಟೆಗೆ ಮಂಡೇಪಂಡ ಮತ್ತು ಮಾಚಂಡ, 10.30 ಗಂಟೆಗೆ ಮಂದನೆರವಂಡ ಮತ್ತು ಮಂಡೇಡ, 11.30ಕ್ಕೆ ಕಾಂಡೇರ ಮತ್ತು ಮೂಕಳಮಾಡ, 1 ಗಂಟೆಗೆ ಚೆರುಮಾಡಂಡ ಮತ್ತು ಚೌರೀರ (ಹೊದವಾಡ), 2 ಗಂಟೆಗೆ ಮುರುವಂಡ ಮತ್ತು ಚೆರಿಯಪಂಡ, 3 ಗಂಟೆಗೆ ಅಜ್ಜಿನಂಡ ಮತ್ತು ಬೈರೆಟೀರ *ಮೈದಾನ 3* 9 ಗಂಟೆಗೆ ಅಣ್ಣಾಡಿಯಂಡ ಮತ್ತು ದಾಸಂಡ, 10 ಗಂಟೆಗೆ ಪರದಂಡ ಮತ್ತು ಬೊಪ್ಪಂಡ, 11 ಗಂಟೆಗೆ ಮುಡ್ಯೋಳಂಡ ಮತ್ತು ಚೌರೀರ (ಹೊದ್ದೂರು), 1 ಗಂಟೆಗೆ ಪಾಡೆಯಂಡ ಮತ್ತು ಕರ್ತಚ್ಚಿರ, 2 ಗಂಟೆಗೆ ಮೈಂದಪಂಡ…

Read More

ಮಡಿಕೇರಿ ಏ.9 NEWS DESK : ಬೆಂಗಳೂರು ಸಮಾಜ ಕಲ್ಯಾಣ ಸಂಸ್ಥೆ  ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್  ವತಿಯಿಂದ ಕೊಡಮಾಡುವ ಸುವರ್ಣ ಕರ್ನಾಟಕ ವೀರ ವನಿತೆ ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಸಿಡಿಪಿಓ ಮತ್ತು ಮಹಿಳಾ ಮೇಲ್ವಿಚಾರಕಿ ಮೇಪಾಡಂಡ ಸವಿತಾ ಕೀರ್ತನ್  ಭಾಜನರಾಗಿದ್ದಾರೆ. ಇವರ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಕ್ಷೇತ್ರಗಳಲ್ಲಿ ನಿಸ್ವಾರ್ಥದಿಂದ ನಾಡಿಗಾಗಿ ಸಲ್ಲಿಸಿದ ಅನುಪಮ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನಡೆದ ರಾಷ್ಟ್ರೀಯ ಮಹಿಳಾ ಪ್ರತಿಭಾ ಕಾರ್ಯಕ್ರಮದಲ್ಲಿ  ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Read More

ಮಡಿಕೇರಿ ಏ.9 NEWS DESK : ಕೊಡಗು ಪತ್ರಕರ್ತರ ಸಂಘ(ರಿ)ದ ಕುಶಾಲನಗರ ತಾಲೂಕು ಘಟಕದಿಂದ ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿನ ಸಮಸ್ಯೆಗಳು ಹಾಗೂ ಅಭಿವೃದ್ಧಿ ಬಗ್ಗೆ ಗಮನ ಸೆಳೆಯುವ ನಿಟ್ಟಿನಲ್ಲಿ ಏ.11 ರಂದು ಮಾಧ್ಯಮ ಸಂವಾದ ಕಾರ್ಯಕ್ರಮ ನಡೆಯಲಿದೆ. ಸುಂಟಿಕೊಪ್ಪದ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಭಾರ ಉಪ ತಹಶೀಲ್ದಾರ್ ಎನ್.ಆರ್. ಪ್ರಶಾಂತ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್, ಪಿಡಿಒ ವಿ.ಜಿ. ಲೋಕೇಶ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಜಗದೀಶ್, ವಿಎಸ್‍ಎಸ್‍ಎನ್ ಅಧ್ಯಕ್ಷ ಕೆ.ಎಸ್. ಮಂಜುನಾಥ್ ಸೇರಿದಂತೆ ಸುಂಟಿಕೊಪ್ಪ ಭಾಗದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಏ.9 NEWS DESK : ಅಹಮದಾಬಾದ್ ನಲ್ಲಿ ಎರಡು ದಿನಗಳ ಕಾಲ ನಡೆಯುತ್ತಿರುವ ದಿನಗಳ ಎಐಸಿಸಿ ಆಹ್ವಾನಿತರ ಸಮಾವೇಶದಲ್ಲಿ ಲೋಕಸಭಾ ಸದಸ್ಯರೊಂದಿಗೆ  ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು, ನಗರಾಭಿವೃದ್ಧಿ ಸಚಿವರು, ಇಂಧನ ಸಚಿವರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಮತ್ತು ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಸಭೆ ನಡೆಸಿದರು.

Read More

ಮಡಿಕೇರಿ ಏ.9 NEWS DESK : ಕೊಡಗು ಜಿಲ್ಲಾ ಕಲಾವಿದರ ಸಂಘದ ವತಿಯಿಂದ ಏ.13 ರಂದು ಖ್ಯಾತ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಹಾಗೂ ಕಲಾವಿದ ಆಪಾಡಂಡ ಟಿ.ರಘು ಅವರಿಗೆ ಶ್ರದ್ಧಾಂಜಲಿ ಸಭೆ ನಡೆಯಲಿದೆ ಎಂದು ಹಿರಿಯ ಕಲಾವಿದ ನೆರವಂಡ ಉಮೇಶ್ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ಕೆ.ಕೆ.ಗ್ರೂಪ್ ಕಾಂಪ್ಲೆಕ್ಸ್‍ನ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಶ್ರದ್ಧಾಂಜಲಿ ಸಭೆ ನಡೆಯಲಿದ್ದು, ಕಲಾವಿದರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಹಿರಿಯ ಕಲಾವಿದ ವಾಂಚಿರ ವಿಠಲ್ ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಬ್ರಹ್ಮಗಿರಿ ಪತ್ರಿಕೆಯ ಸಂಪಾದಕ ಉಳ್ಳಿಯಡ ಎಂ.ಪೂವಯ್ಯ, ಜಾನಪದ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ, ಕೆ.ಕೆ.ಗ್ರೂಪ್‍ನ ಮಾಲೀಕ ಜಗತ್, ದಾನಿ ಕೊಟ್ರಮಾಡ ಲಾಲ ಪೂಣಚ್ಚ ಪಾಲ್ಗೊಳ್ಳಲಿದ್ದಾರೆ ಎಂದರು.ಕನ್ನಡ ಚಿತ್ರರಂಗದಲ್ಲಿ…

Read More