ಲೇಖಕ: admin

ಮಡಿಕೇರಿ ಮೇ 7 NEWS DESK : ಕಾಂಗ್ರೆಸ್ ಸೇವಾದಳದ ಸಂಸ್ಥಾಪಕ ಎನ್.ಎಸ್.ಹರ್ಡೀಕರ್ ಅವರ 136ನೇ ಜನ್ಮದಿನವನ್ನು ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಸೇವಾದಳದ ಜಿಲ್ಲಾಧ್ಯಕ್ಷ ಕಾನೇಹಿತ್ಲು ಮೊಣ್ಣಪ್ಪ ಅವರು ಮಾತನಾಡಿ ಕಾಂಗ್ರೆಸ್ ಸೇವಾದಳದ ಸ್ಥಾಪನೆ ಮತ್ತು ಅದು ಬೆಳೆದು ಬಂದ ರೀತಿಯನ್ನು ವಿವರಿಸಿದರು.  ಸೇವಾದಳದ ಮಾಜಿ ರಾಜ್ಯಾಧ್ಯಕ್ಷೆ ಜಯಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಮದಲ್ಲಿ ಡಿಸಿಸಿ ಉಪಾಧ್ಯಕ್ಷ ಕೊಕ್ಕಲೇರ ಸುಜು ತಿಮ್ಮಯ್ಯ ಹಾಗೂ ಭಾರತ್ ಸೇವಾದಳದ ಮುಖ್ಯ ಸಂಚಾಲಕಿ ರೇವತಿ ರಮೇಶ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ, ಉಪಾಧ್ಯಕ್ಷ ವಿ.ಜಿ.ಮೋಹನ್, ರಾಜ್ಯ ಸೇವಾದಳದ ಪ್ರಧಾನ ಕಾರ್ಯದರ್ಶಿ ತೆರೇಸ ವಿಕ್ಟರ್, ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷರಾದ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ಮಡಿಕೇರಿ ಗ್ಯಾರಂಟಿ ಯೋಜನೆಯ ಸದಸ್ಯ ಹರಿಪ್ರಸಾದ್ ಕೋಚನ, ನಗರಸಭಾ ನಾಮ ನಿರ್ದೇಶಿತ ಸದಸ್ಯ ಯಾಕುಬ್, ನಗರ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ,…

Read More

ಬೆಂಗಳೂರು ಮೇ 7 NEWS DESK : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕೈಗೊಂಡ ‘ಆಪರೇಷನ್ ಸಿಂಧೂರ್’ ಅನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ದೇಶದ ರಕ್ಷಣಾ ಪಡೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದಿದ್ದಾರೆ. ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್. ಭಾರತದ ಸೈನ್ಯ ಸಿಂಧೂರ್ ಆಪರೇಷನ್ ಮುಖಾಂತರ ಸುಮಾರು 9 ಉಗ್ರಗಾಮಿಗಳ ನೆಲೆಯನ್ನು ನಾಶಪಡಿಸಿದ್ದಾರೆ. ಭಾರತದ ನಡೆಯನ್ನು ಬೆಂಬಲಿಸುತ್ತೇನೆ. ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ…

Read More

ಮಡಿಕೇರಿ ಮೇ 7 NEWS DESK : ಮಡಿಕೇರಿ ನಗರಸಭೆಯ ನೂತನ ಅಧ್ಯಕ್ಷರಾದ ಕಲಾವತಿ ಹಾಗೂ ಉಪಾಧ್ಯಕ್ಷರಾದ ಮಹೇಶ್ ಜೈನಿ ಅವರನ್ನು ಭೇಟಿಯಾಗಿ ಅಭಿನಂದಿಸಿದ ನಗರಸಭಾ ಮಾಜಿ ಸದಸ್ಯ ಮತ್ತು ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ನಗರದ ಅಭಿವೃದ್ಧಿಯ ದೃಷ್ಟಿಯಿಂದ ಕೆಲವು ಬೇಡಿಕೆಗಳನ್ನು ಮಂಡಿಸಿದರು. ಮಳೆಗಾಲ ಸಮೀಪಿಸುತ್ತಿರುವುದರಿಂದ ನಗರದ ಎಲ್ಲಾ ತೋಡು ಮತ್ತು ಚರಂಡಿಗಳ ತ್ಯಾಜ್ಯವನ್ನು ವಿಲೇವಾರಿಗೊಳೀಸಬೇಕು. ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಬೇಕು. ರಸ್ತೆಗಳ ಬದಿಯ ಕಾಡು ಕಡಿಯಬೇಕು. ರಸ್ತೆ ಅಭಿವೃದ್ಧಿಗಾಗಿ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಮಳೆಗಾಲದೊಳಗೆ ವಿನಿಯೋಗ ಮಾಡಿ ಎಲ್ಲಾ ವಾರ್ಡ್ ಗಳ ರಸ್ತೆ ದುರಸ್ತಿ ಮಾಡಬೇಕು. ಸ್ಟೋನ್ ಹಿಲ್ ಪ್ರದೇಶದಲ್ಲಿ ಟನ್ ಗಟ್ಟಲೆ ತ್ಯಾಜ್ಯ ಇರುವುದರಿಂದ ಮಳೆಗಾಲದಲ್ಲಿ ಅಪಾಯ ಎದುರಾಗಬಹುದಾದ ಸಾಧ್ಯತೆಗಳಿದೆ. ಆದ್ದರಿಂದ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಮತ್ತು ನಗರದ ತ್ಯಾಜ್ಯವನ್ನು ವೈಜ್ಞಾನಿಕ ರೂಪದಲ್ಲಿ ವಿಲೇವಾರಿ ಮಾಡುವ ತ್ಯಾಜ್ಯ ಘಟಕದ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳಬೇಕು. ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಯಿಂದ ಕೆಲವು…

Read More

ನಾಪೋಕ್ಲು ಮೇ 7 NEWS DESK : ಕಕ್ಕಬ್ಬೆ ಸಮೀಪದ ನೆಟ್ಟುಮಾಡು ಶ್ರೀ ಭಗವತಿ ದೇವಾಲಯದ ಜೀರ್ಣೋದ್ಧಾರಕ್ಕೆ ಜೀರ್ಣೋದ್ಧಾರ ಸಮಿತಿ ಮುಂದಾಗಿದೆ. ಸುಮಾರು 700 ವರ್ಷಗಳ ಹಿಂದೆ ಜಿಲ್ಲೆಯ ಕೊಡವರು ಸಮೀಪದ ಕೇರಳ ರಾಜ್ಯಕ್ಕೆ ತೆರಳಿ ಧಾರ್ಮಿಕ ಕಾರ್ಯಗಳನ್ನು ಕೈಗೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಯವಕಪಾಡಿಯ ನಾಟೋಳಂಡ ಕುಟುಂಬಸ್ಥರು ಎತ್ತು ಪೋರಾಟದೊಂದಿಗೆ ಬೈತೂರು ದೇವಸ್ಥಾನಕ್ಕೆ ತೆರಳಿದ್ದು ಅಲ್ಲಿಂದ ಹಿಂತಿರುಗುವ ಸಂದರ್ಭದಲ್ಲಿ ದೇವಿಯು ಯವಕಪಾಡಿ ಗ್ರಾಮಕ್ಕೆ ಆಗಮಿಸಿ ನಾಟೋಳಂಡ ಕುಟುಂಬಸ್ಥರ ಅರಣ್ಯದಲ್ಲಿ ನೆಲೆಸಿದ್ದರು ಎನ್ನುವ ಪ್ರತೀತಿಯಿದೆ. ಬಳಿಕ ನೆಟ್ಟುಮಾಡುವಿನಲ್ಲಿ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಿಂದ ಐದು ಕಿಲೋಮೀಟರ್ ದೂರದಲ್ಲಿ ದೇವಿಗೆ ದೇವಾಲಯವನ್ನು ನಿರ್ಮಿಸಲಾಯಿತು. ಈ ತಾಣದಲ್ಲಿ ಭಗವತಿ ನೆಲೆ ಸೇರಿದಂತೆ ಶಾಸ್ತಾವು ಅಯ್ಯಪ್ಪ, ಕರಿಮೂರ್ತಿ, ವಿಷ್ಣುಮೂರ್ತಿ ನಾಗದೇವತೆ, ಗುಳಿಗ, ಅಜ್ಜಪ್ಪ ಸೇರಿದಂತೆ ವಿವಿಧ ನೆಲೆಗಳನ್ನು ಸ್ಥಾಪಿಸಿ ಗ್ರಾಮ ಸುರಕ್ಷೆಗಾಗಿ, ಊರಿನ ಸುರಕ್ಷಗಾಗಿ ಕಟ್ಟುಪಾಡುಗಳನ್ನು ವಿಧಿಸಲಾಯಿತು. ಇಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ವಿಜೃಂಭಣೆಯಿಂದ ನಡೆಯುತ್ತಿತ್ತು. ಈಚಿನ ದಿನಗಳಲ್ಲಿ ದೇವಾಲಯವನ್ನು ನವೀಕರಿಸಬೇಕಾಗಿ ಕಂಡುಬಂದುದರಿಂದ ಊರಿನ ತಕ್ಕ ಮುಖ್ಯಸ್ಥರು,…

Read More

ಮಡಿಕೇರಿ ಮೇ 7 NEWS DESK : ಪಾಕ್ ಉಗ್ರವಾದಿಗಳ ದಾಳಿಗೆ ಪ್ರತಿರೋಧವಾಗಿ ಭಾರತೀಯ ಸೇನೆ ಉಗ್ರರ ಅಡಗು ತಾಣಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರ ಪಡೆದಿದ್ದು, ಭಾರತೀಯ ಸೇನೆಗೆ ವಿಶೇಷ ಮನೋಸ್ಥೈರ್ಯ ತುಂಬುವ ಸಲುವಾಗಿ  ಮುಜರಾಯಿ ಇಲಾಖೆಗೆ ಸಂಬಂಧ ಪಟ್ಟ ದೇವಸ್ಥಾನಗಳಲ್ಲಿ ಪೂಜೆ ನಡೆಸಲು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದು, ಇದರನ್ವಯ ಓಂಕಾರೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿಯ ವತಿಯಿಂದ ಮೇ 8 ರಂದು ಓಂಕಾರೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 9 ಗಂಟೆಗೆ ವಿಶೇಷ ಪೂಜೆ ನಡೆಯಲಿದೆ. ಮಡಿಕೇರಿಯ ಸರ್ವ ನಾಗರಿಕರು ಆಗಮಿಸಿ ಭಾರತೀಯ ಸೇನೆಗೆ ಆತ್ಮಸ್ಥೈರ್ಯ ತುಂಬುವುದರೊಂದಿಗೆ ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ ಎಂಬ ಸಂದೇಶವನ್ನು ಕಳುಹಿಸವ ಸಲುವಾಗಿ ಪೂಜೆಯಲ್ಲಿ ಭಾಗವಹಿಸಬೇಕೆಂದು ಅಧ್ಯಕ್ಷರು ಹಾಗೂ ಸದಸ್ಯರು ಕೋರಿದ್ದಾರೆ.

Read More

ಮಡಿಕೇರಿ ಮೇ 7 NEWS DESK : ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸದಸ್ಯರಾಗಿ ಕಿರುಗೂರು ಗ್ರಾ.ಪಂ ಅಧ್ಯಕ್ಷರು ಹಾಗೂ ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ವಿರಾಜಪೇಟೆ ಕ್ಷೇತ್ರದಲ್ಲಿ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸುತ್ತಿರುವ ರಾಕೇಶ್ ದೇವಯ್ಯ ಅವರು ಕಿರುಗೂರು ಗ್ರಾ.ಪಂ ಸದಸ್ಯರಾಗಿ, ಅಧ್ಯಕ್ಷರಾಗಿ, ಬಿಜೆಪಿಯ ವಿವಿಧ ಘಟಕಗಳ ಪದಾಧಿಕಾರಿಯಾಗಿ ಇದೀಗ ವಿರಾಜಪೇಟೆ ಮಂಡಲದ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಒಡೆಯರ್ ಅಧ್ಯಕ್ಷರಾಗಿರುವ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಸಂಬಂಧಿತ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾಗಿ ರಾಕೇಶ್ ದೇವಯ್ಯ ಅವರು ಕಾರ್ಯನಿರ್ವಹಿಸಲಿದ್ದಾರೆ. ಪಕ್ಷದ ನಿಷ್ಠಾವಂತ ಯುವ ಕಾರ್ಯಕರ್ತರಿಗೆ ಸಂಸದರು ಅವಕಾಶ ನೀಡಿರುವುದು ಸ್ವಾಗತಾರ್ಹವೆಂದು ರಾಕೇಶ್ ದೇವಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಮೇ 7 NEWS DESK : ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರದ ಅಸೋಸಿಯೇಷನ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಸ್ಟೂಡೆಂಟ್ಸ್ ವತಿಯಿಂದ “ಉತ್ಕರ್ಷ್ 2025”ಎಂಬ ಫೆಸ್ಟ್ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ  ಬ್ರಹ್ಮಕುಮಾರಿ ಧನಲಕ್ಷ್ಮಿ ಉದ್ಘಾಟಿಸಿ ಮಾತನಾಡಿ, ಎಲ್ಲರಲ್ಲೂ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಹೊರ ತರುವ ಕೆಲಸ ಆಗಬೇಕಿದೆ. “ಪರಮಾತ್ಮ ಜೊತೆಗಿದ್ದಾರೆ” ಎಂಬ ಭಾವದಿಂದ ಮುನ್ನಡೆದರೆ ಭಯವು ಕಾಡುವುದಿಲ್ಲ ಎಂದರು. ಕೆ.ಜಿ.ನೀರಜ್ ಮಾತನಾಡಿ, ಸ್ವ ಉದ್ಯೋಗದಲ್ಲಿರುವ ವಿಪುಲ ಅವಕಾಶಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಸಂಘಟಕರಾದ ಡಾ.ದೀಕ್ಷಿತಾ ವರ್ಕಾಡಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ  ಸಹಪ್ರಾಧ್ಯಾಪಕರಾದ ಪ್ರೊ.ವಸಂತಕುಮಾರಿ, ಡಾ.ನಿರ್ಮಲ ಕೆ.ಡಿ, ಡಾ.ಪ್ರಕಾಶ್ ಎಂ.ಎನ್ ಹಾಜರಿದ್ದರು. ಸುಫಾನ ಸ್ವಾಗತಿಸಿದರು. ವಿಷ್ಣುಪ್ರಿಯ ಪ್ರಾರ್ಥಿಸಿದರು.  ಪ್ರಿಯಾಂಕ ವಂದಿಸಿದರು. ವಿನಿತ ಕಾರ್ಯಕ್ರಮವನ್ನು ನಿರ್ವಹಿಸಿದರು. ಮಾರುಕಟ್ಟೆ ಕೌಶಲ್ಯಗಳು, ಮಾನವ ಸಂಪನ್ಮೂಲ, ಹಣಕಾಸು, ಅತ್ಯುತ್ತಮ ಉದ್ಯಮಿ ಹಾಗೂ ವ್ಯವಹಾರಿಕ ರಸಪ್ರಶ್ನೆ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಸಮಾರೋಪ ಭಾಷಣವನ್ನು ದೈಹಿಕ ಶಿಕ್ಷಣ ಸಂಚಾಲಕ…

Read More

ಮೈಸೂರು ಮೇ 7 NEWS DESK : ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರನ್ನು ಗುಂಡಿಟ್ಟು ಹತ್ಯೆ ಮಾಡಿದ ಪಾಕಿಸ್ತಾನದ ಉಗ್ರರಿಗೆ ನಮ್ಮ ಭಾರತೀಯ ಸೇನಾ ಪಡೆಗಳು ತಕ್ಕ ಉತ್ತರ ನೀಡಿದೆ. “ಆಪರೇಷನ್‌ ಸಿಂಧೂರ” ಮೂಲಕ ನಡೆಸಿರುವ ಸೇನಾ ಕಾರ್ಯಾಚರಣೆ ಅತ್ಯಂತ ನಿಖರ, ನಿರ್ದಿಷ್ಟ ಗಟ್ಟಿ ನಿರ್ಧಾರದ ಪ್ರತಿಫಲವಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಭಯೋತ್ಪಾದನೆಯನ್ನು ನಿರ್ನಾಮ ಮಾಡಲು ಸಂಕಲ್ಪ ತೊಟ್ಟಿದೆ. ಅದು “ಆಪರೇಷನ್‌ ಸಿಂಧೂರ” ಮೂಲಕ ಕಾರ್ಯಾರಂಭವಾಗಿದೆ ಎಂದರು. ಪಹಲ್ಗಾಮ್‌ ದಾಳಿಯನ್ನು ನೋಡಿದ ಪ್ರತಿಯೊಬ್ಬರಿಗೂ ರಕ್ತ ಕುದಿಯುತ್ತಿತ್ತು. ಇಂಥ ಹೀನ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಅಮಾಯಕರನ್ನು ಕೊಂದು, ಹಲವಾರು ಮಹಿಳೆಯರ “ಸಿಂಧೂರ” ಕಸಿದ ಉಗ್ರರಿಗೆ ತಕ್ಕ ಉತ್ತರ ಕೊಡಬೇಕೆಂಬುದು ಭಾರತೀಯರ ನಿರೀಕ್ಷೆಯಾಗಿತ್ತು. ಅದರಂತೆ ಮೋದಿ ಸರ್ಕಾರ “ಆಪರೇಷನ್‌ ಸಿಂಧೂರ” ಹೆಸರಿನಲ್ಲೇ ದಾಳಿ ನಡೆಸಿ “ನ್ಯಾಯ” ಒದಗಿಸುತ್ತಿದೆ ಎಂದು…

Read More

ಮಡಿಕೇರಿ ಮೇ 7 NEWS DESK : ಕೊಡಗು ಜಿಲ್ಲಾ ಬಂಟರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಮೇ 10 ಮತ್ತು 11 ರಂದು ಮಡಿಕೇರಿಯಲ್ಲಿ “ಬಂಟೆರೆನ ವಾರ್ಷಿಕ ಸಮ್ಮಿಲನ-2025” ನಡೆಯಲಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಯುವ ಬಂಟ್ಸ್ ಅಸೋಸಿಯೇಷನ್ ನಿರ್ದೇಶಕ ಕೆ.ಶರತ್ ಕುಮಾರ್ ಶೆಟ್ಟಿ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಮ್ಯಾನ್ಸ್ ಕಾಂಪೌಂಡ್ ನಲ್ಲಿ ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ.ಸದಾನಂದ ರೈ ಅವರ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸಮಾಜ ಬಾಂಧವರಿಗಾಗಿ ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಮೇ 10 ರಂದು ಬೆಳಿಗ್ಗೆ 7.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಬಂಟರ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಗಿರೀಶ್ ರೈ, ಗಾಳಿಬೀಡು ನಿವೃತ್ತ ಯೋಧ ಬಾಬು ಪ್ರಸಾದ್ ರೈ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ…

Read More

ಕುಶಾಲನಗರ ಮೇ 7 NEWS DESK : ಒಳ ಮೀಸಲಾತಿ ಸಮೀಕ್ಷೆಗೆ ಆರಂಭಗೊಂಡಿದ್ದು, ಕುಶಾಲನಗರದಲ್ಲಿ ಗಣತಿದಾರರು ಮನೆ ಮನೆಗೆ ತೆರಳಿ ಗಣತಿ ಸಮೀಕ್ಷೆ ನಡೆಸಿದರು. ಕುಶಾಲನಗರ ಪಿ.ಎಂ.ಶ್ರೀ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ, ಶಿಕ್ಷಕಿಯರಾದ ಕುಂಞಮ್ಮ, ಜಾನಕಿ ಸಮೀಕ್ಷೆ ನಡೆಸಿದರು.

Read More