ಲೇಖಕ: admin

*ಹಳೆ ಕೆರೆ ದುರಸ್ತಿ ಪಡಿಸಿಕೊಡಲಾಗುವುದು >>> ಕಲ್ಲು ಒಡೆದು ಕೊಡಲಾಗುವುದು >>> ತಕ್ಷಣ ಸಂಪರ್ಕಿಸಿ : 84315 15404*

Read More

ಸುಂಟಿಕೊಪ್ಪ ಏ.8 NEWS DESK : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸಂತ ಮೇರಿ ಆಂಗ್ಲ ಮಾದ್ಯಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಡಿಂಪಲ್ ತಮ್ಮಯ್ಯ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಸುಂಟಿಕೊಪ್ಪಕ್ಕೆ ಕೀರ್ತೀ ತಂದಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯು ಸುಂಟಿಕೊಪ್ಪ ವ್ಯಾಪ್ತಿಯಲ್ಲಿನ ಸರಕಾರಿ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳು ಉತ್ತಮ ಸಾಧನೆ ಮಾಡಿರುವುದು ಪೋಷಕರಲ್ಲಿ ಮತ್ತು ಕಾಲೇಜಿನ ಉಪನ್ಯಾಸಕರಲ್ಲಿ ಹರ್ಷ ಉಂಟು ಮಾಡಿದೆ. ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.95.74 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 47 ವಿದ್ಯಾರ್ಥಿಗಳ ಪೈಕಿ 7 ಮಂದಿ ಉನ್ನತ ಶ್ರೇಣಿ, 29 ಮಂದಿಗೆ ಪ್ರಥಮ ಶ್ರೇಣಿ, 6 ದ್ವಿತೀಯ ಶ್ರೇಣಿ ಹಾಗೂ 3 ಮಂದಿ ಸಾಮಾನ್ಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಆ ಪೈಕಿ ಡಿಂಪಲ್ ತಮ್ಮಯ್ಯ ಸಿ.ಎನ್.591 ಅಂಕಗಳನ್ನು ಗಳಿಸಿ ಶೇ.98.5 ಸಾಧನೆ ಮಾಡಿದ್ದಾರೆ. ಡಿ.ಡಿ.ಸೃಜನ 587 ಅಂಕಗಳನ್ನು ಪಡೆದಿದ್ದು ಶೇ.97.83 ಸಾಧನೆ ತೋರಿದ್ದಾರೆ. ಸಂಸ್ಥೆಯ…

Read More

ಮಡಿಕೇರಿ ಏ.9 NEWS DESK : ಎಂ.ಎ. ಕನ್ನಡ ವಿಭಾಗದಲ್ಲಿ ಬೊಟ್ಟಂಗಡ ಸುಮನ್ ಸೀತಮ್ಮ  ಶೇ.78.10 ಅಂಕಗಳೊಂದಿಗೆ ವಿಶ್ವವಿದ್ಯಾನಿಲಯಕ್ಕೆ 7ನೇ ರ‍್ಯಾಂಕ್ ಪಡೆದಿದ್ದಾರೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ 20ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಬೊಟ್ಟಂಗಡ ಸುಮನ್ ಸೀತಮ್ಮಗೆ ಪದವಿ ಪ್ರದಾನ ಮಾಡಲಾಯಿತು.  ಅಲ್ಲದೆ ವಿಶ್ವವಿದ್ಯಾನಿಲಯದ ಕೊಡಗು ಪ್ರಾದೇಶಿಕ ಕೇಂದ್ರದಿಂದ ಕನ್ನಡ ವಿಷಯದಲ್ಲಿ  ಪ್ರಥಮ ಸ್ಥಾನ ಪಡೆದಿರುತ್ತಾರೆ.ಸುಮನ್ 2014ನೇ ಪಿ.ಯು.ಸಿ. ಕಲಾ ವಿಭಾಗದಲ್ಲಿ ಕೊಡಗಿಗೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿದ್ದರು. ಸುಮನ್’ ಅವರ ಪತಿ ಬೊಟ್ಟಂಗಡ ತಿಲಕ್ ಹಾಗೂ ಮಗಳು ಸ್ತುತಿ ಬೋಜಮ್ಮ.ಇವರು ತೆರಾಲುವಿನಲ್ಲಿ ವಾಸವಾಗಿದ್ದಾರೆ.

Read More

ಮಡಿಕೇರಿ ಏ.9 NEWS DESK : ಬೆಂಗಳೂರು ಸಮಾಜ ಕಲ್ಯಾಣ ಸಂಸ್ಥೆ ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್  ವತಿಯಿಂದ ಕೊಡಮಾಡುವ ವೀರ ವನಿತೆ ಅಕ್ಷರದ ಅವ್ವ ಮಹಿಳಾ ರಾಜ್ಯ ಪ್ರಶಸ್ತಿಗೆ ಎಂ.ಬಾಡಗ-1 ಅಂಗನವಾಡಿ ಕಾರ್ಯಕರ್ತೆ ಬಿ.ಬಿ.ಜಯಂತಿ ಭಜನರಾಗಿದ್ದಾರೆ. ಮಹಿಳಾ ದಿನಾಚರಣೆಯ ಸಲುವಾಗಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮಹಿಳಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಬಿ.ಬಿ.ಜಯಂತಿ ಅವರಿಗೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

Read More

ಸೋಮವಾರಪೇಟೆ, ಏ.8 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾಘಟಕದ ಅಧೀನಕ್ಕೊಳಪಡುವ, ಸೋಮವಾರಪೇಟೆ ತಾಲ್ಲೂಕು ಘಟಕಕ್ಕೆ, ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಹಾಗೂ ಜಿಲ್ಲಾ ಸಮಿತಿಯ ನಿರ್ದೇಶನದಂತೆ, ಸೋಮವಾರಪೇಟೆ ತಾಲ್ಲೂಕು ಘಟಕದ ಉಪಾಧ್ಯಕ್ಷರಾಗಿ ಬಿ.ಪಿ.ಸುಮತಿ,  ಪ್ರಧಾನ ಕಾರ್ಯದರ್ಶಿಯಾಗಿ ಒಡೆಪ್ಪನ ಕಾವ್ಯ ಪವನ್, ಶರಣು ಗೌಡ ಹರಗ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಸದಸ್ಯರಾಗಿ ಪ್ರದೀಪ್ ಪೆಂಗ್ವಿನ್, ಬಸೀರಾ ರಶೀದ್, ಉಮೇಶ್ ಅಂಥೋನಿ, ಬಿ.ಬಿ.ಚಂದ್ರಕಲಾ, ಕೆ.ಪಿ.ಸಜಿತ್  ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಾಲ್ಲೂಕು ಅಧ್ಯಕ್ಷರಾದ ಅಪ್ಪುಡ ಸುದೀಶ್ ಕುಶಾಲಪ್ಪ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Read More

ಮಡಿಕೇರಿ NEWS DESK ಏ.8 : ಸಾರ್ವಜನಿಕರಲ್ಲಿ ಮನವಿ… ನಾಳೆ ದಿನ ಅಂದರೇ ದಿನಾಂಕ 09- 04-2025 ರಂದು ಬೆಳಿಗ್ಗೆ 10.30 ಗಂಟೆಯಿಂದ ಮದ್ಯಾಹ್ನ 01.00 ಗಂಟೆಯ ವರೆಗೆ ಬಿಜೆಪಿ ಪಕ್ಷದ ವತಿಯಿಂದ ಮಡಿಕೇರಿಯ ಚೌಡೇಶ್ವರಿ ದೇವಾಲಯದಿಂದ ಖಾಸಗಿ ಬಸ್ಸು ನಿಲ್ದಾಣದವರೆಗೆ ಪ್ರತಿಭಟನ ಮೆರವಣಿಗೆ ಹಮ್ಮಿಕೊಂಡಿದ್ದು, ಈ ಸಂಬಂಧ ಸುಗಮ ಸಂಚಾರಕ್ಕೆ ಅನವು ಮಾಡಿಕೊಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರಿಗೆ ಅನಕೂಲ ಕಲ್ಪಿಸುವ ಉದ್ದೇಶದಿಂದ ಚೌಡೇಶ್ವರಿ ದೇವಾಲಯದಿಂದ ಐ ಜಿ ( ಚೌಕಿ ) ವೃತ್ತದ ವರೆಗೆ ರಸ್ತೆಯ ಎರೆಡು ಬದಿಯಲ್ಲೂ ವಾಹನ ಪಾರ್ಕಿಂಗ್ ನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಹಾಗೂ ಗಣಪತಿ ಬೀದಿಯ ರಸ್ತೆಯಲ್ಲಿ ಕಡ್ಡಾಯವಾಗಿ ರಸ್ತೆಯ ಒಂದು ಭಾಗದಲ್ಲಿ ( ಎಡ ಭಾಗದಲ್ಲಿ ) ಪಾರ್ಕಿಂಗ್ ಮಾಡುವಂತೆ ಸಾರ್ವಜನಿಕರಲ್ಲಿ ಈ ಮೂಲಕ ವಿನಂತಿಸುತ್ತಿದ್ದೇವೆ. ಸಂಚಾರಿ ಪೊಲೀಸ್ ಠಾಣೆ ಮಡಿಕೇರಿ.

Read More

*ಮುದ್ದಂಡ ಕಪ್‌ ಹಾಕಿ ಉತ್ಸವ : ಏಪ್ರಿಲ್‌ 9 ರಂದು ನಡೆಯುವ ಪಂದ್ಯಾವಳಿಯ ವಿವರ* *09-04-2025*  *ಮೈದಾನ 1*  9:00 AM – ಅಂಜಪರವಂಡ VS ತಿರುಟೇರ  10:00 AM -ಮುಕ್ಕಾಟಿರ V/S ಕೋಚೇರ  11:00AM – ಚೋಳಂಡ V/S ಬೊಳ್ಳೆರಾ  1:00PM – ಮಾತಂಡ V/S ಚಂಗುಲಂಡ  2:00PM – ಮೇಚಂಡ V/S ಮಂಡೇಟಿರ  3:00PM – ಕೋಡಿಮಣಿಯಂಡ V/S.ಮಾದಂಡ  09-04-2025  *ಮೈದಾನ 2*  9:00 AM – ಅಮ್ಮಣಿಚಂಡ V/S ಕುಟ್ಟಂಡ(ಕಾರ್ಮಾಡ್)  10:00AM – ಚಿಲ್ಲವಂಡ V/S ಬೋಳಕಾರಂಡ  11:00AM – ಅಜ್ಜಮಾಡ V/S ಕಂಜಿತಂಡ  1:00PM – ಪೊನ್ನಿಮಾಡ V/S ಕೊಟ್ಟಂಗಡ  2:00PM – ಮೇರಿಯಂಡ V/S ಬೊಳ್ಳಚಂಡ  3:00PM – ಕುಟ್ಟಂಡ (ಅಮ್ಮತ್ತಿ) V/S.ಕನ್ನಂಬಿರ  09-04-2025 *ಮೈದಾನ 3*  9:00 AM – ನಂದೇಟಿರ V/S ನಾಗಂಢ  10:00AM – ಕಲಿಯಾಟಂಡ V/S ಚೇರಂಡ  11:00AM -ಐತಿಚಂಡ V/S ಅಮ್ಮಂಡ  1:00PM – ಬಾರಿಯಂಡ V/S…

Read More

ಮಡಿಕೇರಿ ಏ.8  NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸಿಸನ್-2 ಎಂಟನೇ ದಿನದ ಪಂದ್ಯಾವಳಿಯಲ್ಲಿ ಟೀಮ್ ಕೊಡವ ರೈಸಿಂಗ್ ಸ್ಟಾರ‍್ಸ್ ಮತ್ತು ಟೀಮ್ ವೆಸ್ಟರ್ನ್ ಘಾಟ್ ವಾರಿಯರ್ಸ್ ಗೆಲುವು ಸಾಧಿಸಿತು. ಟೀಮ್ ಕೊಡವ ವಾರಿಯರ್ಸ್ ಮತ್ತು ಟೀಮ್ ಕೊಡವ ರೈಸಿಂಗ್ ಸ್ಟಾರ‍್ಸ್ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಿದ ಕೊಡವ ವಾರಿಯರ್ಸ್ ತಂಡ 18 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 54 ರನ್‌ಗಳನ್ನಷ್ಟೇ ಸೇರಿಸಲು ಶಕ್ತವಾಯಿತು. ಇದನ್ನು ಬೆನ್ನಟ್ಟಿದ ಟೀಮ್ ಕೊಡವ ರೈಸಿಂಗ್ ಸ್ಟಾರ‍್ಸ್ ತಂಡ 8.2 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ ೫೫ ರನ್‌ಗಳನ್ನು ಬಾರಿಸಿ ಗೆಲುವಿನ ನಗು ಬೀರಿತು. ಟೀಂ ಕೊಡವ ರೈಸಿಂಗ್ ಸ್ಟಾರ‍್ಸ್ ತಂಡದ ನೆರವಂಡ ವರುಣ್ ಅಯ್ಯಣ್ಣ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಟೀಮ್ ವೈಲ್ಡ್ ಫ್ಲವರ್ ಮತ್ತು ಟೀಮ್ ವೆಸ್ಟರ್ನ್ ಘಾಟ್ ವಾರಿಯರ್ಸ್…

Read More

ಮಡಿಕೇರಿ ಏ.8 NEWS DESK : 2024–25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಶೇ 83.84 ರಷ್ಟು ಫಲಿತಾಂಶ ದಾಖಲಿಸಿದ್ದು, ರಾಜ್ಯದಲ್ಲಿ ಕೊಡಗು ಜಿಲ್ಲೆ 4 ನೇ ಸ್ಥಾನ ಗಳಿಸಿದೆ. 2024 ರ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಜಿಲ್ಲೆಯು 5 ಸ್ಥಾನದಿಂದ 4 ನೇ ಸ್ಥಾನವನ್ನು ಪಡೆದಿದೆ. ಜಿಲ್ಲೆಯಲ್ಲಿ 4697 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3938 ಮಂದಿ ತೇರ್ಗಡೆಯಾಗಿದ್ದಾರೆ. ಇವರಲ್ಲಿ ಪರೀಕ್ಷೆಗೆ ಕುಳಿತಿದ್ದ 2,320 ಬಾಲಕರಲ್ಲಿ 1750 ಬಾಲಕರು ಉತ್ತೀರ್ಣರಾಗಿ 75.43 ರಷ್ಟು ಫಲಿತಾಂಶ ಪಡೆದಿದ್ದಾರೆ. ಹಾಗೆಯೇ ಪರೀಕ್ಷೆಗೆ ಕುಳಿತಿದ್ದ 2,748 ಬಾಲಕಿಯರಲ್ಲಿ 2,333 ಬಾಲಕಿಯರು ಉತ್ತೀರ್ಣರಾಗಿದ್ದು, ಶೇ.84.9 ರಷ್ಟು ಫಲಿತಾಂಶ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ 786 ವಿದ್ಯಾರ್ಥಿಗಳ ಪೈಕಿ 516 (ಶೇ 65.65), ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 2376 ವಿದ್ಯಾರ್ಥಿಗಳಲ್ಲಿ 2027 ಮಂದಿ (ಶೇ 85.31), ವಿಜ್ಞಾನ ವಿಭಾಗದಲ್ಲಿ 1535 ವಿದ್ಯಾರ್ಥಿಗಳ ಪೈಕಿ 1395 (ಶೇ 90.88) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಖಾಸಗಿ…

Read More

*ಮೈದಾನ 1* ತೆಕ್ಕಡ ಮತ್ತು ಮಾಳೇಟಿರ (ಕುಕ್ಲೂರು) ನಡುವಿನ ಪಂದ್ಯದಲ್ಲಿ ತಲಾ 1 ಗೋಲು ಸಮಬಲವಾದ ಕಾರಣ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಮಾಳೇಟಿರ ತಂಡ ಜಯ ದಾಖಲಿಸಿತು. ಮಾಳೇಟಿರ ತಂಡದ ಪರ ಸೋಮಣ್ಣ ಹಾಗೂ ತೆಕ್ಕಡ ತಂಡದ ಪರ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ತೆಕ್ಕಡ ಸೋಮಣ್ಣ ಪಡೆದರು. ಬಲ್ಲಚಂಡ ಮತ್ತು ಕಾವಾಡಿಚಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಬಲ್ಲಚಂಡ ತಂಡ ಗೆಲುವು ಸಾಧಿಸಿತು. ಬಲ್ಲಚಂಡ ಪರ ನಾಣಯ್ಯ ಹಾಗೂ ಸಜನ್ ತಲಾ 2 ಗೋಲು ಅದ್ವಯಿತ್ 1 ಗೋಲು ದಾಖಲಿಸಿದರು. ಕಾವಾಡಿಚಂಡ ಕುಶಾಲಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮೇಕೇರಿರ ಮತ್ತು ಕಡೇಮಾಡ ನಡುವಿನ ಪಂದ್ಯದಲ್ಲಿ 5-2 ಗೋಲುಗಳ ಅಂತರದಲ್ಲಿ ಮೇಕೇರಿರ ತಂಡ ಗೆಲುವು ದಾಖಲಿಸಿತು. ಮೇಕೇರಿರ ಪರ ನಿತಿನ್ ತಿಮ್ಮಯ್ಯ ಹಾಗೂ ಶೈನಾ ತಂಗಮ್ಮ ತಲಾ 2 ಹಾಗೂ ಅಭಿನ ಗಣಪತಿ 1…

Read More