ಮಡಿಕೇರಿ ಮಾ.21 NEWS DESK : ಕೊಡಗಿನಲ್ಲಿ ಕೃಷಿ, ಕಾಫಿ, ಏಲಕ್ಕಿ, ಕಾಳು ಮೆಣಸು ಸೇರಿದಂತೆ ಪ್ರಮುಖ ಕೖಷಿ ಇಂದು ತೀವ್ರ ಸಂಕಷ್ಟದಲ್ಲಿದ್ದು, ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮದ ಮೂಲಕ ರೈತರಿಗೆ ಹೆಚ್ಚುವರಿ ಆದಾಯ ಒದಗಿಸುವ ಮತ್ತು ಪ್ರವಾಸಿಗರಿಗೆ ಅದ್ಭುತ ಅನುಭವ ಹಲವಾರು ಅವಕಾಶಗಳಿವೆ ಎಂದು ಬ್ಯಾಂಕಿಂಗ್, ವ್ಯಕ್ತಿತ್ವ ವಿಕಸನ ತರಬೇತುದಾರ ಮತ್ತು ವೃತ್ತಿ ಮಾಗ೯ದಶ೯ಕ, ಆರ್.ಕೆ.ಬಾಲಚಂದ್ರ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಮಂಗಳವಾರ ಕುಶಾಲನಗರ ಗೌಡ ಸಮಾಜದಲ್ಲಿ ಆಯೋಜಿಸಿದ್ದ ‘ನೇಗಿಲಯೋಗಿ’ ಪ್ರಶಸ್ತಿ ಪ್ರದಾನ ಕರ್ಯಕ್ರಮದಲ್ಲಿ ಅವರು ‘ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮ-ಹಲವು ಆಯಾಮಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕೊಡಗಿನಲ್ಲಿ ಸುಮಾರು 1.05 ಲಕ್ಷ ಹೆಕ್ಟೇರ್ ಕಾಫಿ ತೋಟವಿದೆ. ಭಾರತದ ಒಟ್ಟು ಕಾಫಿ ಉತ್ಪಾದನೆಯ ಸುಮಾರು ಶೇ.30ರಷ್ಟು ಇಲ್ಲೇ ಬೆಳೆಯುತ್ತದೆ. ಆದರೆ ಕಳೆದ ಎರಡು ದಶಕಗಳಲ್ಲಿ ಕಾಫಿ ಬೆಲೆಯ ಏರಿಳಿತ, ಹವಾಮಾನ ಬದಲಾವಣೆ, ಕೂಲಿ ಕರ್ಮಿಕರ ಕೊರತೆ, ಕಾಡಾನೆ ಹಾವಳಿ ಇವೆಲ್ಲ ರೈತರ…
ಲೇಖಕ: admin
ಮಡಿಕೇರಿ ಮಾ.20 NEWS DESK : ಕುಂಜಿಲ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮೇ6 ರಿಂದ 10ರವರೆಗೆ ಕಕ್ಕಬ್ಬೆಯ ಪ್ರೌಢ ಶಾಲಾ ಮೈದಾನದಲ್ಲಿ ಜಮಾಅತ್ ಮಟ್ಟದ “ಕೊಡಗು ಕಪ್” ಕ್ರಿಕೆಟ್ ಸೀಸನ್-2 ಪಂದ್ಯಾವಳಿಯನ್ನು ಆಯೋಜಿಸಲಾಗಿದೆಯೆಂದು ಕ್ಲಬ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿರುವ ಜಮಾಅತ್ಗಳಿಗೆ ಸಂಬಂಧಿಸಿದ ತಂಡಗಳು ಈ ಪಂದ್ಯಾವಳಿಯಲ್ಲಿ ಸ್ಪರ್ಧಿಸಲಿವೆ. ಪಂದ್ಯಾವಳಿಯಲ್ಲಿ 60 ರಿಂದ 70 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆಸಕ್ತ ತಂಡಗಳು ಮೇ1ರ ಒಳಗಾಗಿ 3ಸಾವಿರ ರೂ. ಪ್ರವೇಶ ಶುಲ್ಕದೊಂದಿಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊ.9845225284ನ್ನು ಸಂಪರ್ಕಿಸಬಹುದೆಂದರು. ಪಂದ್ಯಾವಳಿ ವಿಜೇತ ತಂಡಕ್ಕೆ 66,666 ರೂ. ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ 33,333 ರೂ. ಮತ್ತು ಆಕರ್ಷಕ ಟ್ರೋಫಿ, ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆಯುವ ತಂಡಗಳಿಗೂ ಆಕರ್ಷಕ ಬಹುಮಾನಗಳನ್ನು ವಿತರಿಸಲಾಗುತ್ತದೆಂದು ತಿಳಿಸಿದರು. ಪಂದ್ಯಾವಳಿಯಲ್ಲಿ ಪಂದ್ಯಗಳು 6 ಓವರ್ಗಳಿಗೆ ಸೀಮಿತವಾಗಿ ನಡೆಯಲಿದೆ. ತಂಡಗಳಿಗೆ ಸಮವಸ್ತ್ರ…
ಮಡಿಕೇರಿ ಏ.21 NEWS DESK : ಕೊಡವರ ಹೊಸವರ್ಷ ಎಡಮ್ಯಾರ್ ಮಾಸಿಕ ಸ್ಮರಣಾರ್ಥ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ ಹಿರಿಯರಿಗೆ ಪುಷ್ಪನಮನ ಸಲ್ಲಿಸಿತು. ಕೊಡವ ನರಮೇಧ ದುರಂತ ಹತ್ಯಾಕಾಂಡ ಸ್ಮಾರಕ ಸ್ಥಳ ದೇವಟ್ ಪರಂಬುವಿಗೆ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಭೇಟಿ ನೀಡಿದ ಸದಸ್ಯರು ಹಿರಿಯರನ್ನು ಸ್ಮರಿಸಿ ಪುಷ್ಪನಮನ ಅರ್ಪಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ವೆನಿಸ್ ಚಾರ್ಟರ್ 1964ರ ವಿಧಿ 7 ಮತ್ತು ಭಾರತೀಯ ಸಂವಿಧಾನದ ವಿಧಿ 49ರ ಅಡಿಯಲ್ಲಿ ದೇವಟ್ ಪರಂಬ್ ಹತ್ಯಾಕಾಂಡ ಸ್ಥಳದಲ್ಲಿ “ಅಂತಾರಾಷ್ಟ್ರೀಯ ಕೊಡವ ಜನಾಂಗೀಯ ಹತ್ಯಾಕಾಂಡ ಸ್ಮಾರಕ’ವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ದೇವಟ್ ಪರಂಬ್ ದುರಂತ ಹತ್ಯಾಕಾಂಡವನ್ನು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಹತ್ಯಾಕಾಂಡ ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕು. ಸೂಕ್ಷ್ಮ, ಏಕ-ಜನಾಂಗೀಯ, ಆದಿಮಸಂಜಾತ, ಅನಿಮಿಸ್ಟಿಕ್ ನಂಬುಗೆಯ, ಪ್ರಕೃತಿಯನ್ನು ಆರಾಧಿಸುವ ಕೊಡವ ಯೋಧ ಕುಲಕ್ಕೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕು. ಕೊಡವ ಯೋಧ ಕುಲವನ್ನು ಭಾರತೀಯ ಸಂವಿಧಾನದ ಬುಡಕಟ್ಟು ಪಟ್ಟಿಗೆ ಸೇರ್ಪಡೆಗೊಳಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ…
ಮಡಿಕೇರಿ NEWS DESK ಏ.21 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.22 ರ ಪಂದ್ಯಗಳು>>> *ಮೈದಾನ 1* ಬೆಳಿಗ್ಗೆ 8 ಗಂಟೆಗೆ ಮೋಟನಾಳಿರ ಮತ್ತು ಚೌರೀರ, 9.30ಕ್ಕೆ ಮಚ್ಚಮಾಡ ಮತ್ತು ಸರ್ಕಂಡ, 11ಕ್ಕೆ ಪಾಂಡ್ಯoಡ ಮತ್ತು ಪೊನ್ನಚಂಡ, ಮಧ್ಯಾಹ್ನ 12ಕ್ಕೆ ಮುಕ್ಕಾಟಿರ (ಬೇತ್ರಿ) ಮತ್ತು ಮಾದೆಯಂಡ (ಮಾದಾಪುರ) ಹಾಗೂ 1 ಗಂಟೆಗೆ ಗೀಜಿಗಂಡ ಮತ್ತು ಬೊಳ್ಳೆಪಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಚೇರಂಡ ಮತ್ತು ಕೋಳೇರ, 10ಕ್ಕೆ ಮೂಕಳೇರ ಮತ್ತು ಕೂತಂಡ, 11ಕ್ಕೆ ಪಾರುವಂಡ ಮತ್ತು ಬೊಳ್ಳಚಟ್ಟೀರ, ಮಧ್ಯಾಹ್ನ 12ಕ್ಕೆ ಕೋಲುಮಾಡಂಡ (ರ್ವತ್ತೊಕ್ಲು) ಮತ್ತು ಚೊಟ್ಟಂಗಡ, 1ಕ್ಕೆ ಮುಕ್ಕಾಟಿರ (ಹರಿಹರ ಬೆಳ್ಳೂರು) ಮತ್ತು ಕಂಗoಡ *ಮೈದಾನ 3* ಮಹಿಳಾ ಕ್ರಿಕೆಟ್* ಬೆಳಿಗ್ಗೆ 10 ಗಂಟೆಗೆ ಮಂಡoಗಡ ಮತ್ತು ಮಚ್ಚಮಾಡ (ತಾವಳಗೇರಿ), 11ಕ್ಕೆ ಪಾಸುರ ಮತ್ತು ಕಟ್ಟೇರ (ಅರಮೇರಿ), ಮಧ್ಯಾಹ್ನ 12ಕ್ಕೆ ಚೆಕ್ಕೇರ ಮತ್ತು ಅಚ್ಚಪ್ಪಂಡ, 1ಕ್ಕೆ…
ಮಡಿಕೇರಿ NEWS DESK ಏ.21 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.21 ರ ವಿಜೇತ ತಂಡಗಳು. *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಕಲಿಯಂಡ ಮತ್ತು ಪುದಿಯೊಕ್ಕಡ ತಂಡಗಳ ನಡುವಿನ ಪಂದ್ಯವನ್ನು ಪುದಿಯೊಕ್ಕಡ 43 ರನ್ ಗಳಿಂದ ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪುದಿಯೊಕ್ಕಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 79 ರನ್ ಗಳನ್ನು ಸೇರಿಸಿತು. ಕಲಿಯಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 36 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ತೆಕ್ಕಡ ಮತ್ತು ಕರಿನೆರವಂಡ ನಡುವಿನ ಪಂದ್ಯದಲ್ಲಿ ಕರಿನೆರವಂಡ 8 ವಿಕೆಟ್ ಗಳಿಂದ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತೆಕ್ಕಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿತು. ಕರಿನೆರವಂಡ 4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ…
ಮಡಿಕೇರಿ ಏ.21 NEWS DESK : ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದ ವಾರ್ಷಿಕ ಪ್ರತಿಷ್ಠಾ ದಿನಾಚರಣೆ ಏ.26 ರಂದು ಜರುಗಲಿದೆ. ಶ್ರೀ ಆಂಜನೇಯ ದೇವಾಲಯದ ಆವರಣದಲ್ಲಿ ನೂತನವಾಗಿ ನವಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಕ್ಷೇತ್ರ ತಂತ್ರಿಗಳಾದ ಉಚ್ಚಿಲದ ವೇದಬ್ರಹ್ಮ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆ ಜರುಗಲಿದೆ. ಏ.25 ರಂದು ಸಂಜೆ 6ರಿಂದ ಪ್ರಾರ್ಥನೆ, ಆಂಜನೇಯ ಗುಡಿಯಲ್ಲಿ ಪುಣ್ಯಾಹ, ಆರೂಢ ಪರಿಗ್ರಹ ಹಾಗೂ ನವಗ್ರಹ ಬಿಂಬ ಪರಿಗ್ರಹ, ಜಲಾಧಿವಾಸ, ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಬಲಿ ಹಾಗೂ ಮಹಾಪೂಜೆ ನಡೆಯಲಿದೆ. ಏ.26 ರಂದು ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, ಬಿಂಬ ಶುದ್ಧಿ, ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರಿಂದ 11 ಗಂಟೆಗೆ ಆಂಜನೇಯ ದೇವಾಲಯದ ಆವರಣದಲ್ಲಿ ಮಿಥುನ ಲಗ್ನದ ಶುಭ ಮುಹೂರ್ತದಲ್ಲಿ ನವಗ್ರಹ ಪ್ರತಿಷ್ಠಾಪನೆ, ಸಾನಿಧ್ಯ ಕಳಶ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆಯಾಗಲಿದೆ ಎಂದು ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ…
ಮಡಿಕೇರಿ NEWS DESK ಏ.21 : ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಸಂಭೋದಿಸಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೀಳುಮಟ್ಟದ ರಾಜಕೀಯ ನಡೆ ಖಂಡನೀಯವೆoದು ಕೊಡಗು ಜಿಲ್ಲಾ ಬಿಜೆಪಿಯ ವಕ್ತಾರ ಬಿ.ಕೆ.ಅರುಣ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಮಿಳುನಾಡು ಚುನಾವಣಾ ಪ್ರಚಾರದ ಸಂದರ್ಭ ಮಲ್ಲಿಕಾರ್ಜುನ ಖರ್ಗೆ ಅವರು ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ದೇಶದ ಜನ ಮಾತ್ರವಲ್ಲದೆ ಇಡೀ ವಿಶ್ವವೇ ಮೆಚ್ಚಿಕೊಂಡಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಲಘುವಾಗಿ ಮಾತನಾಡುವ ಮೂಲಕ ಖರ್ಗೆ ಅವರು ತಮ್ಮ ಸಣ್ಣತನವನ್ನು ಪ್ರದರ್ಶಿಸಿದ್ದಾರೆ ಎಂದು ಟೀಕಿಸಿದ್ದಾರೆ. ಜನಸ್ನೇಹಿ ಆಡಳಿತದ ಮೂಲಕ ದೇಶವನ್ನು ಪ್ರಗತಿಪಥದತ್ತ ಸಾಗಿಸಿ ಮೂರು ಬಾರಿ ಅಧಿಕಾರಕ್ಕೇರಿರುವ ನರೇಂದ್ರ ಮೋದಿ ಅವರ ವಿರುದ್ಧ ಕಟು ಭಾಷೆಯನ್ನು ಬಳಸುವ ಮೊದಲು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿರುವ ಖರ್ಗೆ ಅವರು ಮೊದಲು ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಸಾಹಸವನ್ನು ಮಾಡಲಿ ಎಂದು ಸವಾಲು ಹಾಕಿದ್ದಾರೆ.…
ಮಡಿಕೇರಿ NEWS DESK ಏ.21 : ಜಾತ್ಯಾತೀತ ನೆಲೆಗಟ್ಟಿನಲ್ಲಿ ಉತ್ತಮ ಸಮಾಜ ಸ್ಥಾಪಿಸಬೇಕೆನ್ನುವ ಉದ್ದೇಶದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಸಮಸ್ತ ಮುಸಲ್ಮಾನರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಸಿದ ಪರಿಣಾಮ ಅದು ಭರ್ಜರಿ ಬಹುಮತದಿಂದ ಅಧಿಕಾರಕ್ಕೆ ಬಂತು. ಆದರೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರಕಾರ ಮುಸ್ಲಿಮರ ದಮನಕ್ಕೆ ಮುಂದಾಗಿದೆ ಎಂದು ಸುನ್ನಿ ಸಮನ್ವಯ ಸಮಿತಿಯ ಕೊಡಗು ಜಿಲ್ಲಾ ಘಟಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನ್ನಿ ಸಮನ್ವಯ ಸಮಿತಿಯ ಜಿಲ್ಲಾ ಮಾಧ್ಯಮ ಪ್ರತಿನಿಧಿ ಸಿ.ಎಂ.ಅಬ್ದುಲ್ ಹಮೀದ್ ಮೌಲವಿ ಅವರು ಕಾಂಗ್ರೆಸ್ ಪಕ್ಷ ಇತ್ತೀಚಿನ ದಿನಗಳಲ್ಲಿ ಮಸ್ಲಿಮರನ್ನು ಕಡೆಗಣಿಸುತ್ತಿದ್ದು, ಈ ಬೆಳವಣಿಗೆ ಅತ್ಯಂತ ನೋವನ್ನುಂಟುಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷವು ಕರ್ನಾಟಕದ ಮುಸ್ಲಿಂ ಸಮುದಾಯ ಮತ್ತು ಅದರ ನಾಯಕರೊಂದಿಗೆ ನಡೆದುಕೊಳ್ಳುತ್ತಿರುವ ರೀತಿಯನ್ನು ಕೊಡಗು ಜಿಲ್ಲೆಯ ಪ್ರಮುಖ ಮುಸ್ಲಿಂ ಸಂಘಟನೆಗಳಾದ ಎಸ್ಕೆಎಸ್ಎಸ್ಎಫ್, ಎಸ್ಎಸ್ಎಫ್, ಮುಸ್ಲಿಂ ಸಂಘ ಸಂಸ್ಥೆಗಳು ಹಾಗೂ ಒಕ್ಕೂಟಗಳು ತೀವ್ರವಾಗಿ ಖಂಡಿಸುತ್ತವೆ. ಮುಸ್ಲಿಮರು ನೀಡಿರುವ ಒಗ್ಗಟ್ಟಿನ ಬೆಂಬಲದಿoದ…
ಮಡಿಕೇರಿ ಏ.20 NEWS DESK : ಅಕ್ಕಪಡೆ ವತಿಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಯ ಕುರಿತು ಅರಿವು ಮೂಡಿಸಲಾಯಿತು. ಅಕ್ಕಪಡೆ ಸಿಬ್ಬಂದಿಗಳು ನಗರದ ಕೋಟೆ ಆವರಣದಲ್ಲಿ ಪ್ರವಾಸಿಗರಿಗೆ ಅಕ್ಕಪಡೆ ಕರ್ತವ್ಯ, ವಿವಿಧ ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿದರು. ನಂತರ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮೊಗೇರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಅಕ್ಕಪಡೆಯ ಬಗ್ಗೆ ಮತ್ತು ತುರ್ತು ಸಹಾಯವಾಣಿಗಳ ಬಗ್ಗೆ ಅರಿವು ಮೂಡಿಸಿದರು.
ಮಡಿಕೇರಿ ಏ.20 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿರುವ ಕ್ರಿಕೆಟ್ ಆಟದ ಮೈದಾನದಲ್ಲಿ ಕುಶಾಲನಗರ ತಾಲ್ಲೂಕು ಮಟ್ಟದ ಕುಶಾಲನಗರ ವಲಯ ಅರಣ್ಯ ಇಲಾಖೆಯ ವತಿಯಿಂದ ಸಾರ್ವಜನಿಕ ಯುವಕರು ಮತ್ತು ಅರಣ್ಯ ಇಇಲಾಖೆಯ ಸಿಬ್ಬಂದಿ ಒಳಗೊಂಡಂತೆ ತಂಡಗಳ ರಚನೆ ಮೂಲಕ ಎರಡು ದಿನಗಳ” ಹುಲಿ ಮಿತ್ರ” ಕ್ರಿಕೆಟ್ ಪಂದ್ಯಾವಳಿಯು ಚಿಕ್ಕತ್ತೂರು ಸಾರ್ವಜನಿಕ ಆಟದ ಮೈದಾನದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ನೆರವೇರಿ ನಂತರ ಮಾತಾನಾಡುತ್ತಾ ಗ್ರಾಮಾಂತರ ಪ್ರದೇಶದ ಯುವಕರು ಅರಣ್ಯ ಇಲಾಖೆಯೊಂದಿಗೆ ಸೌಹಾರ್ದ ಮನೋಭಾವ ಬೆಳೆಸಿಕೊಂಡು ,ಗ್ರಾಮದ ಅಭಿವೃದ್ಧಿ, ಮತ್ತು ಇಲಾಖೆಗೆ ಸಹಕಾರಿಯಾಗುವ ಸ್ನೇಹ ಸಂಬಂಧ ಒಗ್ಗೂಡುವ ಹಿತದೃಷ್ಟಿಯಿಂದ ಇಂತಹ ಕ್ರೀಡಾಕೂಟಗಳು ಅರಣ್ಯ ಇಲಾಖೆಯ ವತಿಯಿಂದ ಆಯೋಜನೆಗೊಂಡಿರುವುದರಿಂದ ಯುವಕರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪೂರಕವಾಗುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತಾನಾಡುತ್ತಾ ಕ್ರೀಡಾಕೂಟ ಮೂಲಕ ಒಗ್ಗೂಡಿ ಸಮಾಜಕ್ಕೆ ಪೂರಕವಾಗುವ ವಿಷಯಗಳು…






