ಕುಶಾಲನಗರ ಜೂ.22 NEWS DESK : ಬಸವಣ್ಣನವರ ವಚನಗಳು ಕೇವಲ ಓದು ಅಥವಾ ಉದ್ಯೋಗಕ್ಕಾಗಿ ಸೀಮಿತವಾಗದೆ, ಜೀವನದ ಮೌಲ್ಯಗಳಾಗಿ ಅಳವಡಿಸಿಕೊಳ್ಳಬೇಕು ಎಂದು ಪುಣೆಯ ಬಸವ ತಿಳವಳಿಕೆ ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ. ಶಶಿಕಾಂತ ಪಟ್ಟಣ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ನಾಯಕ ಬಸವಣ್ಣ” ವಿಶೇಷ ಉಪನ್ಯಾಸ ಹಾಗೂ ವಚನ ಗಾಯನ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ಮಾತನಾಡಿದರು. ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ಬಸವಾದಿ ಶರಣರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಚನಗಳು ಸಮಾನತೆ, ಮಾನವೀಯತೆ ಹಾಗೂ ವೈಚಾರಿಕ ಕ್ರಾಂತಿಯ ಸಂದೇಶವನ್ನು ಸಾರಿದ್ದು, ಲಿಂಗಾಯತವು ಜಾತಿ ಅಥವಾ ಧರ್ಮವಲ್ಲ; ಅದು ಪ್ರಾಯೋಗಿಕ ಬದುಕಿನತ್ತ ಕೊಂಡೊಯ್ಯುವ ವೈಚಾರಿಕ ಆಂದೋಲನವಾಗಿದೆ ಎಂದು ಅವರು ಹೇಳಿದರು. ಜಗತ್ತಿನಲ್ಲಿ ಮೊದಲ ಬಾರಿಗೆ ತೃತೀಯ ಲಿಂಗಿಗಳ ಅಸ್ತಿತ್ವ ಹಾಗೂ ಮಹಿಳಾ ಸ್ವಾತಂತ್ರ್ಯದ ಪರ ಧ್ವನಿ ಎತ್ತಿದವರಲ್ಲಿ ಬಸವಾದಿ ಶರಣರು ಪ್ರಮುಖರು. ಶರಣರು ಬೋಧನೆ ಮಾಡುವುದಕ್ಕಿಂತ ತಮ್ಮ ಬದುಕಿನ ಮೂಲಕವೇ ಆದರ್ಶವನ್ನು ತೋರಿಸಿದರು. ಅವರು…
ಲೇಖಕ: admin
ಮಡಿಕೇರಿ ಜೂ.22 NEWS DESK : ಸಾರಿಗೆ ಇಲಾಖೆಯ ದಂಡ ಬಾಕಿ ಹಾಗೂ ಪೊಲೀಸ್ ಇಲಾಖೆಯ ಇ-ಚಲನ್ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ರಾಜ್ಯ ಸರಕಾರ ಶೇ 50 ರಷ್ಟು ರಿಯಾಯಿತಿ ಘೋಷಿಸಿದ್ದು, ಜು.10 ರ ವರೆಗೆ ನಡೆಯಲಿರುವ ಅಭಿಯಾನವನ್ನು ವಾಹನ ಸವಾರರು ಸದುಪಯೋಗ ಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹೇಳಿದರು. ನಗರದ ಜಿಲ್ಲಾ ನ್ಯಾಯಾಲದಲ್ಲಿ ನಡೆದ 1991 ರಿಂದ 2027ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಪ್ರಕರಣ ಇತ್ಯರ್ಥ ಪಡಿಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕ ಸರ್ಕಾರವು ಸಾರಿಗೆ ಇಲಾಖೆ ಹಾಗೂ ಸಂಚಾರ ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ದಂಡದ ಮೊತ್ತದ ಮೇಲೆ ಶೇ.50 ರಷ್ಟು ರಿಯಾಯಿತಿ ಘೋಷಿಸಿದೆ. ವಾಹನ ಸವಾರರು ತಮ್ಮ ಮೇಲಿರುವ ದಂಡದ…
ಮಡಿಕೇರಿ NEWS DESK ಜೂ.22 : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೊಡಗು ವಿದ್ಯಾಲಯದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವು ಪ್ರಾಂಶುಪಾಲರಾದ ಕೆ. ಎಸ್. ಸುಮಿತ್ರಾ ಉಪಸ್ಥಿತಿಯಲ್ಲಿ ನಡೆಯಿತು. ಯೋಗ ಶಿಕ್ಷಕಿ ವಿದ್ಯಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳು, ಪ್ರಾಣಾಯಾಮಗಳು ಹಾಗೂ ಧ್ಯಾನಾಭ್ಯಾಸಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳಿಂದ ನಡೆದ ಯೋಗ ಪ್ರದರ್ಶನಗಳು ಗಮನ ಸೆಳೆದವು. ಈ ಸಂದರ್ಭದಲ್ಲಿ ಯೋಗದ ಮಹತ್ವ ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಅದರ ಸಕಾರಾತ್ಮಕ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ನಿಯಮಿತ ಯೋಗಾಭ್ಯಾಸವು ಆರೋಗ್ಯಕರ ಜೀವನಶೈಲಿಯನ್ನು ರೂಪಿಸುವುದರ ಜೊತೆಗೆ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಮನೋಬಲವನ್ನು ವೃದ್ಧಿಸುತ್ತದೆ ಎಂಬ ಸಂದೇಶವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ಯೋಗವನ್ನು ತಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳುವ ಸಂಕಲ್ಪ ಕೈಗೊಂಡರು.
ಸುಂಟಿಕೊಪ್ಪ NEWS DESK ಜೂ.22 : ಸರಕಾರಿ ಶಾಲೆಗಳು ಮತ್ತು ಖಾಸಗಿ ಶಾಲೆಗಳನ್ನು ಹೋಲಿಕೆ ಮಾಡುವುದು ಸರಿಯಲ್ಲ. ಪ್ರಸ್ತುತ ಕಾಲಘಟ್ಟದಲ್ಲಿ ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯವಾಗಿದೆ. ಈ ಕಾರಣದಿಂದ ಸರಕಾರ ಆಂಗ್ಲ ಭಾಷಾ ತರಗತಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ಗೌಡ ಅವರು ತಿಳಿಸಿದ್ದಾರೆ. ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಎಲ್ಕೆಜಿ ತರಗತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಗರಿಷ್ಠವಾಗಿ ಬೆಳೆಯಲು ಶಿಕ್ಷಕರ ಪಾತ್ರ ಮಹತ್ವದಾಗಿರುತ್ತದೆ ಎಂದರು. ಶಾಲೆಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ರೂ.5 ಲಕ್ಷ ಶಾಸಕರ ಅನುದಾನ ನೀಡುವುದಾಗಿ ಘೋಷಣೆ ಮಾಡಿದರು. ಗದ್ದೆಹಳ್ಳ ಸರಕಾರಿ ಶಾಲೆಗೆ ಸೇರಿದ ಮೈದಾನವನ್ನು ಟರ್ಫ್ ಮೈದಾನವನ್ನಾಗಿ ಪರಿವರ್ತನೆ ಮಾಡಬೇಕೆಂಬ ಆಮ್ನೆಸ್ಟಿ ಪುಟ್ಬಾಲ್ ಕ್ಲಬ್ ನ ಬೇಡಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು ಈ ಬಗ್ಗೆ 2 ಶಾಲೆಗಳ ಶಾಲಾಭಿವೃದ್ಧಿ ಸಮಿತಿಯಲ್ಲಿ ನಿರ್ಧಾರವಾಗಿ ಸರಕಾರದ ಅನುಮತಿ ಪಡೆಯಬೇಕಾಗಿದೆ ಎಂದು ತಿಳಿಸಿದರು. ಸಂಜೆಯ ವೇಳೆ ಮಾತ್ರ…
ಮಡಿಕೇರಿ NEWS DESK ಜೂ.22 : ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುವ ಮುಟ್ಲು ಗ್ರಾಮದಲ್ಲಿ ಈ ಬಾರಿ ಜೂನ್ ಕೊನೆಯ ವಾರವಾದರೂ ಮಳೆ ಬೀಳದೆ ಕೃಷಿಕರು ಕಂಗಾಲಾಗಿದ್ದಾರೆ. ಮಳೆಯ ಅಭಾವದಿಂದ ಭತ್ತದ ಕೃಷಿ ವಿಳಂಬವಾಗಿದ್ದು ಸಸಿಗಳು ಒಣಗುತ್ತಿವೆ. ಉಳುಮೆ ಮಾಡಿದ ಗದ್ದೆಗಳಿಗೆ ನೀರಿಲ್ಲದೆ ಒಣಗಿ ಹೋಗಿವೆ. ಈ ಭಾಗದಲ್ಲಿ ಜೂನ್ ತಿಂಗಳಿನಲ್ಲಿ ಭತ್ತದ ನಾಟಿ ಆರಂಭ ಆಗಬೇಕಾಗಿತ್ತು, ಆದರೆ ಮಳೆಯಾಗದೆ ನಾಟಿ ಕಾರ್ಯಕ್ಕೆ ಹಿನ್ನಡೆಯಾಗಿದೆ. ಸ್ಥಳೀಯ ಕೃಷಿಕ ಉದಿಯಂಡ ಎಸ್.ಕಾರ್ಯಪ್ಪ ಅವರು ಪುತ್ತರಿ ಹಬ್ಬದಲ್ಲಿ ಕದಿರು ತೆಗೆಯಲಾದರೂ ಇರಲಿ ಎಂದು ಬಕೆಟ್ ನಲ್ಲಿ ನೀರು ಹಾಕಿ ಒಣ ಗದ್ದೆಯಲ್ಲಿ ನಾಟಿ ಕಾರ್ಯ ಮಾಡಿದ್ದಾರೆ. ಜಿಲ್ಲೆಯ ಕೃಷಿಕ ವರ್ಗ ಮಳೆಯನ್ನೇ ಎದುರು ನೋಡುತ್ತಿದ್ದಾರೆ.
ಮಡಿಕೇರಿ NEWS DESK ಜೂ.22 : ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಂಬAಧ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ನಡೆಯಿತು. ಕೊಡಗು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದ ಪ್ರಗತಿಯ ಕುರಿತು ಸಂಸದರು ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದರು. ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಕೊಡಗು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಮೈಸೂರು NEWS DESK ಜೂ.22 : ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಇಂದು ಮೈಸೂರಿನ ಕರ್ನಾಟಕ ಸರ್ಕಾರಿ ರಿಸರ್ವ್ ಪೊಲೀಸ್ ಠಾಣೆಗೆ ಭೇಟಿ ನೀಡಿ, ಬಂಧನಕ್ಕೊಳಗಾಗಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರ ಪರವಾಗಿ ಮಧ್ಯ ಪ್ರವೇಶಿಸಿದರು. ಇಂದು ಬೆಳಿಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸಿಗರು ರೈಲಿನ ಮೂಲಕ ಮೈಸೂರಿಗೆ ಬಂದಿದ್ದಾರೆ ಎಂಬ ಮಾಹಿತಿ ತಿಳಿದ ಹಿನ್ನೆಲೆ, ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಸ್ಥಳಕ್ಕೆ ತೆರಳಿ ಪೊಲೀಸರಿಗೆ ಮಾಹಿತಿ ನೀಡಿ, ಅಗತ್ಯ ಪರಿಶೀಲನೆ ನಡೆಸುವಂತೆ ಮನವಿ ಮಾಡಿದರು. ನಂತರ ಕಾರ್ಯಕರ್ತರು ವಲಸಿಗರೊಂದಿಗೆ ಪೊಲೀಸ್ ಠಾಣೆಗೆ ತೆರಳಿದರು. ಈ ವೇಳೆ ವಲಸಿಗರು, ಪೊಲೀಸರು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಯಿತು. ಬಳಿಕ ಪೊಲೀಸರು ಸ್ವಯಂ ಪ್ರೇರಿತವಾಗಿ ಆರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದರು. ಈ ವಿಷಯ ತಿಳಿದ ತಕ್ಷಣ ಸಂಸದ ಯದುವೀರ್ ಒಡೆಯರ್ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಹಿರಿಯ ಪೊಲೀಸ್…
ಮಡಿಕೇರಿ NEWS DESK ಜೂ.21 : ಅಂತರಾಷ್ಟ್ರೀಯ ಯೋಗ ದಿನವಾದ ಇಂದು ಮದೆನಾಡು ಬಿಜಿಎಸ್ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಬಿ.ಕೆ.ಸಿಂಚನ 33 ನಿಮಿಷದಲ್ಲಿ 310 ಆಸನಗಳು ಮಾಡುವ ಮೂಲಕ ಹೊಸ ದಾಖಲೆ ಬರೆದಿದ್ದಾಳೆ. ಇಂಡಿಯನ್ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯನ್ ಬುಕ್ ಆಫ್ ರೆಕಾರ್ಡ್ ಆನ್ ಲೈನ್ ಮೂಲಕ ಆಯೋಜಿಸಿದ್ದ ಯೋಗ ಪ್ರದರ್ಶನದಲ್ಲಿ ಒಂದು ಗಂಟೆಯೊಳಗೆ 300 ಆಸನಗಳನ್ನು ಮಾಡಬೇಕಾಗಿತ್ತು. ಆದರೆ ಸಿಂಚನ ಕೇವಲ 33 ನಿಮಿಷಗಳಲ್ಲಿ 310 ಆಸನಗಳು ಮಾಡಿ ಪ್ರಶಸ್ತಿಗೆ ಭಾಜನರಾದರು. ಮುಂದಿನ ವಾರ ಬಿ.ಕೆ.ಸಿಂಚನಗಳಿಗೆ ಪದಕ ಮತ್ತು ಪ್ರಶಸ್ತಿ ಪತ್ರ ಸಿಗಲಿದೆ. ಈಕೆ ಬಿ.ಸಿ.ಕೀರ್ತಿ ಕುಮಾರ್ ಹಾಗೂ ಬಿ.ಎಸ್.ರೇಣುಕಾ ದಂಪತಿಯ ಪುತ್ರಿ. ಮದೆ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಅಗೋಳಿಕಜೆ ಧನಂಜಯ, ನಿವೃತ್ತ ಶಿಕ್ಷಕರಾದ ಬಾರಿಯಂಡ ಜೋಯಪ್ಪ, ಎಂ.ಎಸ್.ಶಿವರಾಂ, ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಾಲಯದ ಅಧ್ಯಕ್ಷರಾದ ಯಶೋಧರ, ಹಿರಿಯರಾದ ಬಿ.ಸಿ.ಚೆನ್ನಪ್ಪ, ಯೋಧ ಹಾಗೂ ಕ್ರೀಡಾಪಟು ಬಿ.ಸಿ.ತಿಲಕ್, ಸಹಕಾರ…
ಮಡಿಕೇರಿ NEWS DESK ಜೂ.21 : ಕೆಪಿಸಿಸಿಯ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಮುಖ ನಂದಿನೆರವಂಡ ಮಧು ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಮಡಿಕೇರಿ NEWS DESK ಜೂ.21 : ಅಂತರಾಷ್ಟ್ರೀಯ ಯೋಗ ದಿನವಾದ ಇಂದು ಮದೆನಾಡು ಬಿಜಿಎಸ್ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಬಿ.ಕೆ.ಸಿಂಚನ 33 ನಿಮಿಷದಲ್ಲಿ 310 ಆಸನಗಳು ಮಾಡುವ ಮೂಲಕ ಹೊಸ ದಾಖಲೆ ಬರೆದಿದ್ದಾಳೆ. ಇಂಡಿಯನ್ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯನ್ ಬುಕ್ ಆಫ್ ರೆಕಾರ್ಡ್ ಆನ್ ಲೈನ್ ಮೂಲಕ ಆಯೋಜಿಸಿದ್ದ ಯೋಗ ಪ್ರದರ್ಶನದಲ್ಲಿ ಒಂದು ಗಂಟೆಯೊಳಗೆ 300 ಆಸನಗಳನ್ನು ಮಾಡಬೇಕಾಗಿತ್ತು. ಆದರೆ ಸಿಂಚನ ಕೇವಲ 33 ನಿಮಿಷಗಳಲ್ಲಿ 310 ಆಸನಗಳು ಮಾಡಿ ಪ್ರಶಸ್ತಿಗೆ ಭಾಜನರಾದರು. ಮುಂದಿನ ವಾರ ಬಿ.ಕೆ.ಸಿಂಚನಗಳಿಗೆ ಪದಕ ಮತ್ತು ಪ್ರಶಸ್ತಿ ಪತ್ರ ಸಿಗಲಿದೆ. ಈಕೆ ಬಿ.ಸಿ.ಕೀರ್ತಿ ಕುಮಾರ್ ಹಾಗೂ ಬಿ.ಎಸ್.ರೇಣುಕಾ ದಂಪತಿಯ ಪುತ್ರಿ. ಮದೆ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಅಗೋಳಿಕಜೆ ಧನಂಜಯ, ನಿವೃತ್ತ ಶಿಕ್ಷಕರಾದ ಬಾರಿಯಂಡ ಜೋಯಪ್ಪ, ಎಂ.ಎಸ್.ಶಿವರಾಂ, ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಾಲಯದ ಅಧ್ಯಕ್ಷರಾದ ಯಶೋಧರ, ಹಿರಿಯರಾದ ಬಿ.ಸಿ.ಚೆನ್ನಪ್ಪ, ಯೋಧ ಹಾಗೂ ಕ್ರೀಡಾಪಟು ಬಿ.ಸಿ.ತಿಲಕ್, ಸಹಕಾರ…






