ಲೇಖಕ: admin

ನಾಪೋಕ್ಲು ಏ.8 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಕಿ ಅಕಾಡೆಮಿ ವತಿಯಿಂದ ಏ.10 ರಂದು ಹಾಕಿ ತರಬೇತಿ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 6.30 ಗಂಟೆಗೆ ಕೆ.ಪಿ.ಎಸ್ ಶಾಲಾ ಮೈದಾನದಲ್ಲಿ ಶಿಬಿರ ಪ್ರಾರಂಭಗೊಳ್ಳಲಿದ್ದು, ನುರಿತ ತರಬೇತುದಾರರಾದ ಅಕಾಡೆಮಿಯ ಕಾರ್ಯದರ್ಶಿ, ನಿವೃತ ಸೈನಿಕ ಕೋಟೋಳಿರ ಡಾಲಿ ಅಪ್ಪಚ್ಚ ಹಾಗೂ ಅರೆಯಡ ಗಣೇಶ್ ಬೆಳ್ಳಿಯಪ್ಪ ಹಾಗೂ ಇನ್ನಿತರರು ತರಬೇತಿ ನಿರ್ವಹಿಸಲಿದ್ದಾರೆ. ಈ ಸಂದರ್ಭ ಶಿಬಿರಾರ್ಥಿಗಳಿಗೆ ಹಾಲು, ಮೊಟ್ಟೆ ಇನ್ನಿತರ ಸೌಲಭ್ಯಗಳಿದ್ದು, ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರ ನೀಡಲಾಗುತ್ತದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಕಾಡೆಮಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಏ.8 NEWS DESK : ಮಡಿಕೇರಿಯ ಚಾಮುಂಡೇಶ್ವರಿ ನಗರದ ನಿವಾಸಿ ಶ್ರೀನಿವಾಸ ರೈ ಇಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶ್ರೀನಿವಾಸ ರೈ  ನಗರದ  ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು.

Read More

ಕುಶಾಲನಗರ ಜ.8 NWES DESK : ಡಾ.ಅಂಬೇಡ್ಕರ್ ಅವರ ಜನ್ಮದಿನವನ್ನು ಮನೆ ಮನದ ಹಬ್ಬವಾಗಿ ಆಚರಿಸಲಾಗುತ್ತದೆ ಎಂದು ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಹೆಚ್.ಬಿ.ಗಣೇಶ್ ತಿಳಿಸಿದ್ದಾರೆ.  ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಏಪ್ರಿಲ್ 14 ಇಡೀ ವಿಶ್ವವೇ ಸಂಭ್ರಮಿಸುವ ದಿನವಾಗಿದ್ದು,  ಅಂಬೇಡ್ಕರ್ ಅವರ ಸಾಧನೆಗಳನ್ನು ಸ್ಮರಿಸಿ ಯುವ ಜನಾಂಗಕ್ಕೆ ಸಮಗ್ರ ಮಾಹಿತಿ ಒದಗಿಸುವ ದಿನವಾಗಿದೆ ಎಂದು ಹೇಳಿದರು. ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಿ ಸಂಭ್ರಮಿಸಿ ಅವರ ಆಶಯದ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಪಣತೊಡಬೇಕಾಗಿದೆ ವಿಶೇಷವಾಗಿ ಭಾರತ ದೇಶದ ಶೋಷಿತ ಜನ ಅವರನ್ನು ನೆನೆಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಣೆಯಲ್ಲಿ ತೊಡಗಬೇಕಾಗಿದೆ ಎಂದರು.   ಈ ಸಂಬಂಧ ಈಗಾಗಲೇ ಸಂಘದ ವತಿಯಿಂದ ಪೂರ್ವ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು. ದಲಿತ ಮುಖಂಡರು ಮತ್ತು ಸಂಘದ ಪ್ರಮುಖರಾದ ಕೆ.ಬಿ.ರಾಜು ಮಾತನಾಡಿ, ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಪ್ರತಿ ಗ್ರಾಮ ಗ್ರಾಮಗಳಲ್ಲಿ ಅದ್ದೂರಿಯಾಗಿ ಆಚರಣೆಯಾಗಬೇಕು. ಆ ದಿನವನ್ನು ಮಧ್ಯಪಾನ ಮುಕ್ತ ದಿನವನ್ನಾಗಿ ಸರ್ಕಾರ ಘೋಷಿಸಬೇಕು. ಕಾರ್ಯಕ್ರಮಗಳು…

Read More

ಸುಂಟಿಕೊಪ್ಪ ಏ.8 NEWS DESK : ಸುಂಟಿಕೊಪ್ಪ ಉಲುಗುಲಿ ಪನ್ಯ ಗ್ರಾಮದಲ್ಲಿ ನೆಲೆನಿಂತಿರುವ ಗ್ರಾಮ ದೇವತೆಯಾದ ಶ್ರೀ ಮಳೂರು ಬೆಳ್ಳಾರಿಕ್ಕಮ್ಮ ದೇವರ ವಾರ್ಷಿಕೋತ್ಸವವು 7 ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ಎತ್ತು ಪೋರಾಟ್, ಚೌರಿಕುಣಿತ, ಶ್ರೀ ದೇವರ ಉತ್ಸವ ಮೂರ್ತಿಯ ನೃತ್ಯ ಬಲಿ ಹಾಗೂ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಉತ್ಸವದ ಅಂಗವಾಗಿ ಸುಂಟಿಕೊಪ್ಪ, ಉಲುಗುಲಿ, ಆಂಜನಗೇರಿ ಬೆಟ್ಟಗೇರಿ, ಹರದೂರು ಗ್ರಾಮದ ಗ್ರಾಮಸ್ಥರು ವ್ರತದಲ್ಲಿದ್ದು, ವಾಡಿಕೆಯಂತೆ ವಾರದ ನಂತರ ದೇವಾಲಯದಲ್ಲಿ ವೃತಾಚರಣೆಯ ವಿಶೇಷ ನೆರವೇರಿಸಿದರು. ಗ್ರಾಮದ ಮಂದನ ರಮೇಶ್ ಅವರ ಮನೆಯಿಂದ ಎತ್ತಿನ ಮೇಲೆ ಇರಿಸುವ ಮೂಲಕ ವಾದ್ಯಗೋಷ್ಠಿಯೊಂದಿಗೆ ದೇವಾಲಯಕ್ಕೆ ಮೆರವಣಿಗೆಯೊಂದಿಗೆ ತಂದು ದೇವಾಲಯದಲ್ಲಿ ಭಂಡಾರವನ್ನು ಸಮರ್ಪಿಸಿ, ನಂತರ ಗ್ರಾಮದ ಜನತೆಯಿಂದ ಈಡುಗಾಯಿ ಎತ್ತು ಪೋರಾಟ್, ಚೌರಿಕುಣಿತದಲ್ಲಿ ಪುರುಷರು ಯುವಕರು ಪಾಲ್ಗೊಂಡು ನಂತರ ಬೆಳ್ಳಾರಿಕ್ಕಮ್ಮ ಉತ್ಸವ ಮೂರ್ತಿಯನ್ನು ದೇವಸ್ಥಾನಕ್ಕೆ ಪ್ರದಕ್ಷಿಣೆ ನಡೆಸಿ ದೇವಿಗೆ ಪೂಜೆ ಮಹಾಮಂಗಳಾರತಿ ಪ್ರಸಾದ ವಿತರಣೆಯನ್ನು ನಡೆಸಲಾಯಿತು. ದಿನದ ಪೂಜಾ ಕೈಂಕರ್ಯವನ್ನು…

Read More

ಮಡಿಕೇರಿ ಏ.8 NEWS DESK : ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‍ಪಿ)ಯಾಗಿ ಬಾರಿಕೆ ದಿನೇಶ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಮಡಿಕೇರಿ ಡಿವೈಎಸ್‍ಪಿಯಾಗಿ ಬಳಿಕ ಮಂಗಳೂರು ಡಿಸಿಪಿಯಾಗಿ ದಿನೇಶ್ ಕುಮಾರ್ ಕಾರ್ಯನಿರ್ವಹಿಸಿದ್ದರು.

Read More

ಮಡಿಕೇರಿ ಏ.8 NEWS DESK : ಪ್ರಸಕ್ತ(2025-26) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್, 15 ಪ್ರಾರಂಭದ ದಿನಾಂಕ, ಅರ್ಜಿಯನ್ನು ಆನ್‍ಲೈನ್‍ನಲ್ಲಿ ಸಲ್ಲಿಸಲು ಮೇ, 03 ಕೊನೆಯ ದಿನವಾಗಿದೆ. ಪ್ರವೇಶ ಪರೀಕ್ಷೆಯು ಮೇ, 09 ರಂದು ನಡೆಯಲಿದೆ. ಪ್ರವೇಶ ಪರೀಕ್ಷೆ ಫಲಿತಾಂಶ ಮೇ, 13 ರಂದು ಪ್ರಕಟವಾಗಲಿದೆ. ಮೇ, 17 ರಂದು ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡುವುದು. ಆಯ್ಕೆಯಾದ ಶಾಲೆಗೆ ದಾಖಲಾಗಲು ಮೇ, 31 ಕೊನೆಯ ದಿನವಾಗಿದೆ. ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://swd.karnataka.gov.in/ ಅನ್ನು ಬಳಸಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಟಿತ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುತ್ತದೆ.  ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ…

Read More

ಮಡಿಕೇರಿ ಏ.8 NEWS DESK : ರಾಷ್ಟ್ರೀಯ 36 ನೇ ಭೂಮಾಪನ ದಿನಾಚರಣೆಯು ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿಯವರು ಹಾಗೂ ಕಂದಾಯ ಸಚಿವರ ಉಪಸ್ಥಿತಿಯಲ್ಲಿ ಏ.10 ರಂದು ವಿಧಾನಸೌಧ ಆವರಣದಲ್ಲಿ ನಡೆಯಲಿದೆ.

Read More

ಮಡಿಕೇರಿ ಏ.8 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಅರ್ಥಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ “ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು” ನಡೆಯಿತು. ಕಾಲೃಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ ಉದ್ಘಾಟಿಸಿ ಮಾತನಾಡಿ, ಸಹಕಾರಿ ಕ್ಷೇತ್ರ ಬಹಳ ಮುಖ್ಯವಾದ ಒಂದು ಆರ್ಥಿಕ ಕ್ಷೇತ್ರವಾಗಿದೆ. ಭಾರತದಲ್ಲಿ ಸಹಕಾರಿ ಕ್ಷೇತ್ರ ಬಹಳ ಆಳವಾಗಿ ಬೆಳೆದಿದೆ. ಜಗತ್ತಿನ ಎಲ್ಲಾ ರಾಷ್ಟ್ರಗಳು ಆರ್ಥಿಕ ಹಿಂಜರಿಕೆಯಿಂದ ಸಂಕಷ್ಟ ಅನುಭವಿಸಿದರೂ, ಸಹಕಾರಿ ಕ್ಷೇತ್ರ ಬಹಳ ಪ್ರಬಲವಾಗಿರುವುದರಿಂದ ಅದರ ಪರಿಣಾಮ ಭಾರತದ ಮೇಲೆ ಅಷ್ಟೊಂದು ಉಂಟಾಗಲಿಲ್ಲ ಎಂದು ಹೇಳಿದರು. ಕೊಡಗು ಜಿಲ್ಲಾ ಸಹಕಾರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ.ರೇಣುಕಾ ಆರ್.ಎಸ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಸಹಕಾರಿ ಕ್ಷೇತ್ರದ ಮೂಲ ತತ್ವಗಳು, ಸಹಕಾರಿ ಸಂಘಗಳ ಕಾರ್ಯ ಚಟುವಟಿಕೆ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಹಕಾರಿ ವಿಷಯದ ಮಹತ್ವ ಮತ್ತು ಸಹಕಾರಿ ಕ್ಷೇತ್ರದಲ್ಲಿ ಅವಕಾಶವಿರುವ ವಿವಿಧ ಉದ್ಯೋಗ ಅವಕಾಶಗಳ…

Read More

ಪುತ್ತೂರು ಏ.9 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು 2001ನೇ ಇಸವಿಯಲ್ಲಿ ಪ್ರಾರಂಭಗೊಂಡಿದ್ದು, 25ನೇ ವರ್ಷದತ್ತ ದಾಪುಗಾಲಿಡುತ್ತಿದೆ. ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ  ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ಪ್ರಾರಂಭವಾದ ಈ ಸಂಸ್ಥೆ ಇಂದು ಕರಾವಳಿ ಭಾಗದ ಪ್ರತಿಷ್ಟಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡುತ್ತಿರುವ ಕಾಲೇಜಿನ ವಿದ್ಯಾರ್ಥಿಗಳು ಇದುವರೆಗೆ ಒಟ್ಟು 20 ರ್ಯಾಂಕುಗಳನ್ನು ಗಳಿಸಿಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 2 ಹಾಗೂ ಎಂಬಿಎ ವಿಭಾಗದಲ್ಲಿ ಒಂದು ರ್ಯಾಂಕ್ ಬಂದಿರುತ್ತದೆ. ಪ್ರಾರಂಭದ ದಿನದಿಂದ ಇದುವರೆಗೆ ಒಟ್ಟು 6163 ವಿದ್ಯಾರ್ಥಿಗಳು ಪದವಿ ಹಾಗೂ 770 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದು ಕೇಂದ್ರ, ರಾಜ್ಯ ಸರ್ಕಾರದ ಮತ್ತು ಕಾಪೆರ್Çರೇಟ್ ಜಗತ್ತಿನ ವಿವಿಧ ಮಜಲುಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಭಾರತೀಯ ಸೇನೆ, ಭಾರತೀಯ ನಾಗರಿಕ ಸೇವೆ, ಬ್ಯಾಂಕಿಂಗ್, ಕಾನೂನು, ಶೈಕ್ಷಣಿಕ ವ್ಯವಸ್ಥೆ, ಸಾಫ್ಟ್‍ವೇರ್ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.. ಇಲ್ಲಿ…

Read More

ಮಡಿಕೇರಿ NEWS DESK ಏ.7 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ರ 7ನೇ ದಿನದ ಪಂದ್ಯದಲ್ಲಿ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಟೀಮ್ ಲಿವರೇಜ್ ತಂಡ ಗೆಲುವು ದಾಖಲಿಸಿದವು. ಟೀಮ್ ಕೊಡವ ರೈಸಿಂಗ್ ಸ್ಟರ‍್ಸ್ ಮತ್ತು ಟೀಮ್ ವೆಸ್ಟರ್ನ್ ಘಾಟ್ ವಾರಿಯರ್ಸ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟರ್ನ್ ಘಾಟ್ ವಾರಿಯರ್ಸ್ ತಂಡ 18.5 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 91 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಕೊಡವ ರೈಸಿಂಗ್ ಸ್ಟರ‍್ಸ್ ತಂಡ 19.3 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 86 ರನ್ ಗಳನ್ನಷ್ಟೇ ಗಳಿಸಿ ಸೋಲು ಒಪ್ಪಿಕೊಂಡಿತು. ವೆಸ್ಟರ್ನ್ ಘಾಟ್ ವಾರಿಯರ್ಸ್ ತಂಡದ ಅಯ್ಯಪ್ಪ ಸಿ.ಆರ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಟೀಮ್ ಲಿವರೇಜ್ ಮತ್ತು ಪ್ರಗತಿ…

Read More