ಲೇಖಕ: admin

ಮಡಿಕೇರಿ ಏ.7 NEWS DESK : ದೇಶದ ಸಂಸತ್ ಮತ್ತು ಕರ್ನಾಟಕ ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ಪ್ರತ್ಯೇಕ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಏ.9ರಂದು ಕಡಂಗದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬೆಳಿಗ್ಗೆ 10.30 ಗಂಟೆಗೆ ಕಡಂಗ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಬೇಡಿಕೆಗಳ ಹಕ್ಕೊತ್ತಾಯವನ್ನು ಶಾಂತಿಯುತವಾಗಿ ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ ನೀಡಿರುವ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ಕೂಡ ವಿಶೇಷ ಪ್ರಾತಿನಿಧ್ಯ ಅಥವಾ ಪರ್ಯಾಯವಾಗಿ ಪ್ರತ್ಯೇಕ ಲೋಕಸಭೆ ಮತ್ತು ವಿಧಾನಸಭೆಯ ಕೊಡವ ಮತ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಲಾಗುವುದು. ಕೊಡವರು ಬೇರೆಯೇ ರೇಸ್/ ಮೂಲ ವಂಶಸ್ಥ ಜನಾಂಗವಾಗಿದ್ದು, ಅವರ ಸ್ವತಂತ್ರ ಅಸ್ತಿತ್ವ ಮತ್ತು ವ್ಯಕ್ತಿತ್ವವನ್ನು ಗುರುತಿಸಿ 1871-72ರಿಂದ 1931ರ ವರೆಗೆ ನಡೆಸಿದ ಜನಗಣತಿಯನ್ನು ಪುನರ್ ಮಾನದಂಡಗೊಳಿಸಿ ಕೊಡವರಿಗೆ…

Read More

*ಮೈದಾನ 1* ಬೊಟ್ಟಂಗಡ ಮತ್ತು ಕರ್ತಮಾಡ ತಂಡಗಳ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಮೂಲಕ ಪಂದ್ಯ ಡ್ರಾ ಆದ ಕಾರಣ ಟೈ ಬ್ರೇಕರ್‍ನಲ್ಲಿ 5-3 ಗೋಲುಗಳ ಅಂತರದಲ್ಲಿ ಕರ್ತಮಾಡ ತಂಡ ಜಯ ಸಾಧಿಸಿತು. ಕರ್ತಮಾಡ ತಂಡದ ಪರ ಮೋಹನ್ 1 ಟೈಬ್ರೇಕರ್ ನಲ್ಲಿ ರತನ್ 2, ಕಿರಣ್, ಮೋಹನ್ ಹಾಗೂ ರಾಯ್ ತಲಾ 1 ಗೋಲು ದಾಖಲಿಸಿದರು. ಬೊಟ್ಟಂಗಡ ತಂಡದ ಪರ ಕೌಶಿಕ್ 1, ಟೈ ಬ್ರೇಕರ್‍ನಲ್ಲಿ ಕೌಶಿಕ್, ನಿಖಿಲ್ ಹಾಗೂ ಪೆಮ್ಮಯ್ಯ ತಲಾ 1 ಗೋಲು ದಾಖಲಿಸಿದರು. ಬೊಟ್ಟಂಗಡ ಪೆಮ್ಮಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು. ಚಿಂಡಮಾಡ ಮತ್ತು ತೇಲಪಂಡ ನಡುವಿನ ಪಂದ್ಯದಲ್ಲಿ ತಲಾ 1 ಗೋಲು ದಾಖಲಿಸುವ ಮೂಲಕ ಪಂದ್ಯ ಡ್ರಾ ಆದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ ಚಿಂಡಮಾಡ ತಂಡ 3-1 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿತು. ತೇಲಪಂಡ ಗುಲ್‍ಶನ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕುಂಡ್ರಂಡ ಮತ್ತು ಆಟ್ರಂಗಡ ನಡುವಿನ ಪಂದ್ಯದಲ್ಲಿ…

Read More

ಶನಿವಾರಸಂತೆ ಏ.7 NEWS DESK : ದೊಡ್ಡಕೊಡ್ಲಿ ಗ್ರಾಮದಲ್ಲಿ ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಮತ್ತು ಅವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡಕೊಡ್ಲಿ ಪ್ರಬುದ್ದ ಯುವಕ ಸಂಘದ ಕಾರ್ಯದರ್ಶಿ ಡಿ.ಎನ್.ವಸಂತ್ ತಿಳಿಸಿದ್ದಾರೆ.  ಶನಿವಾರಸಂತೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು,  ಅಂಬೇಡ್ಕರ್ ಅವರ ಚಿಂತನೆ ಆದರ್ಶಗಳನ್ನು ಯುವ ಸಮೂದಾಯಕ್ಕೆ ಸಾರುವ ಸಲುವಾಗಿ ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಯನ್ನು ನಿರ್ಮಿಸುತ್ತಾರೆ. ಇದೇ ರೀತಿಯಲ್ಲಿ ದೊಡ್ಡಕೊಡ್ಲಿ ಗ್ರಾಮದಲ್ಲಿ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಸಮಿತಿ ವತಿಯಿಂದ ಅವರ ಪುತ್ಥಳಿಯನ್ನು ನಿರ್ಮಿಸಲಾಗಿದ್ದು, ಇದರ ವತಿಯಿಂದ ಏ.14 ರಂದು ದೊಡ್ಡಕೊಡ್ಲಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರನೆ ಮತ್ತು ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಅಂದು ಬೆಳಗ್ಗೆ 9.30ಕ್ಕೆ ದೊಡ್ಡಕುಂದ ಬಸ್ ನಿಲ್ದಾಣದಿಂದ ಮೆರವಣಿಗೆ ಪ್ರಾರಂಭಗೊಂಡು ಕೊಡ್ಲಿಪೇಟೆಯ ಪ್ರಮುಖ ಬೀದಿಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರದ ಟ್ಯಾಬ್ಲೋ ಮತ್ತು ನಗಾರಿಬಡಿತ,…

Read More

ಮಡಿಕೇರಿ ಏ.7 NEWS DESK  : ಯುನೈಟೆಡ್ ನೇಷನ್ಸ್ ಎಕನಾಮಿಕ್ ಅಂಡ್ ಸೋಶಿಯಲ್ ಕೌನ್ಸಿಲ್ ನ 2025 ನೇ ಯೂತ್ ಫೋರಂ ಗೆ ಮಡಿಕೇರಿಯ ಯದೀಶ್ ಕುಂಬಳತ್ತಿಲ್ ರಮೇಶ್ ಪ್ರತಿನಿಧಿಯಾಗಿ ಭಾರತದಿಂದ ಆಯ್ಕೆಯಾಗಿದ್ದಾರೆ. ಈ ಸಮಾವೇಶದಲ್ಲಿ ಜಗತ್ತಿನ 138 ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ಮಡಿಕೇರಿಯ ಯದೀಶ್ ಅವರಿಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಅವಕಾಶ ದೊರಕಿದೆ. ಮಡಿಕೇರಿ ನಗರಸಭಾ ಸದಸ್ಯ ಕೆ.ಎಸ್.ರಮೇಶ್ ರಮ್ಯ ಕೆ.ಆರ್. ದಂಪತಿ ಪುತ್ರರಾಗಿರುವ ಯದೀಶ್ ಅಮೇರಿಕಾದ ಬೋಸ್ಟನ್ ನ ನಾಥ್೯ ಈಸ್ಟರನ್ ಯೂನಿವಸಿ೯ಟಿಯಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಏಪ್ರಿಲ್ 15 ರಿಂದ 17 ರವರೆಗೆ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಅಭಿವೃದ್ಧಿಶೀಲ ವಿಜ್ಞಾನ ಮತ್ತು ಸಾಮಾಜಿಕ ಒಳಗೊಳ್ಳುವಿಕೆಗಾಗಿ ಅಭಿವೃದ್ಧಿಶೀಲತೆಯನ್ನು ಹೆಚ್ಚಿಸುವುದು” ಎಂಬ ವಿಷಯದ ಅಡಿಯಲ್ಲಿ ಯೂತ್ ಫೋರಂ ಆಯೋಜಿಸಲ್ಪಟ್ಟಿದೆ. ಯುನೈಟೆಡ್ ನೇಷನ್ಸ್ ಎಕಾನಾಮಿಕ್ ಅಂಡ್ ಸೋಶಿಯಲ್ ಕೌನ್ಸಿಲ್ ಯೂತ್ ಫೋರಮ್ ಯುವಜನರಿಗೆ ಸದಸ್ಯ ರಾಷ್ಟ್ರಗಳೊಂದಿಗೆ ಅರ್ಥಪೂರ್ಣವಾಗಿ ತೊಡಗಿಸಿಕೊಳ್ಳಲು ಸೂಕ್ತ ವೇದಿಕೆಯನ್ನು ನೀಡುತ್ತಿದೆ. ಯುವಪೀಳಿಗೆಯ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ. ಉತ್ತಮ ಆರೋಗ್ಯ ಮತ್ತು…

Read More

ಸೋಮವಾರಪೇಟೆ ಏ.7 NEWS DESK : ಕಾಡಂಚಿನಲ್ಲಿರುವ ಯಡವನಾಡು ಗ್ರಾಮದ ಪ್ರಕೃತಿ ಸೌಂದರ್ಯದ ನಡುವೆ ಗ್ರಾಮಸ್ಥರು ಪ್ರತಿಷ್ಠಾಪಿಸಿರುವ ಶಿವ ಬಸವೇಶ್ವರ ದೇವಾಲಯದ ಹನ್ನೆರಡನೇ ವರ್ಷದ ವಿಶೇಷ ಪೂಜೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಬೆಳಗ್ಗೆ ಗ್ರಾಮದ ಮುಖ್ಯ ಹೆದ್ದಾರಿಯಿಂದ ದೇವಾಲಯದವರೆಗೂ ಗ್ರಾಮದ ಮಹಿಳೆಯರು ಹಾಗೂ ಮಕ್ಕಳು 80 ಕ್ಕೂ ಹೆಚ್ಚಿನ ಪೂರ್ಣಕುಂಭ ಕಲಶಗಳನ್ನು ಹೊತ್ತು ಮೆರವಣಿಗೆ ಮೂಲಕ ದೇವಾಲಯದ ಅವರಣಕ್ಕೆ ತಂದರು. ಈ ಸಂದರ್ಭ ಗ್ರಾಮದ ಪ್ರತಿ ಮನೆ ಮನೆಗಳ ಮುಂಬದಿ ನೀರು ಹಾಕಿ ರಂಗೋಲಿ ಬಿಡಿಸಿ ಪೂರ್ಣಕುಂಭ ಕಲಶಗಳನ್ನು ಸ್ವಾಗತಿಸಿ ಪೂಜಿಸುತ್ತಿದ್ದುದು ಕಂಡು ಬಂತು. ದೇವರ ಸನ್ನಿಧಿಯಲ್ಲಿ ಕಲಶಗಳನ್ನು ಇಟ್ಟ ಬಳಿಕ ದೇವರ ಪೂಜಾ ವಿಧಿಗಳು ಆರಂಭವಾದವು. ನಂತರ ಕಲಾತತ್ಪದಿ ವಾಸ್ತು ಹೋಮ, ಶಿವಬಸವೇಶ್ವರ ದೇವರಿಗೆ ಪಂಚವಿಂಶತಿ ಕಳಸಾಭಿಷೇಕ, ಪಾರ್ವತಿ ದೇವಿಗೆ ನವಕ ಪೂಜೆ, ಗಣಪತಿ ದೇವರಿಗೆ ಕಲಶಾಭಿಷೇಕ, ನಂತರ ಬೆಳಗ್ಗೆ 9:10 ರಿಂದ 9-50 ರ ಒಳಗೆ ವೃಷಭ ಲಗ್ನದಲ್ಲಿ ದೇವರಿಗೆ ಮಹಾಕುಂಭಾಭಿಷೇಕ ನೆರವೇರಿಸಲಾಯಿತು. ಸೋಮವಾರಪೇಟೆಯ ಜಗದೀಶ್ ಉಡುಪ ಹಾಗೂ…

Read More

ಮಡಿಕೇರಿ ಏ.7 NEWS DESK : ಬಿಜೆಪಿ ಕಾರ್ಯಕರ್ತ ವಿನಯ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಕಾರ್ಯಕರ್ತ ವಿನಯ್ ಸಾಯುವ ಮೊದಲು ಉಲ್ಲೇಖಿಸಿರುವ ಎಲ್ಲಾ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಈ ಪ್ರಕರಣದಲ್ಲಿ ಶಾಸಕರನ್ನು ಗುರಿಮಾಡಿ ಪ್ರಕರಣ ದಾಖಲಿಸಬೇಕೆಂದು ನಾವು ಹೇಳುತ್ತಿಲ್ಲ. ಎಲ್ಲರಿಗೂ ಕಾನೂನು ಒಂದೇ ಆಗಿರುವುದರಿಂದ ಡೆತ್ ನೋಟ್ ನಲ್ಲಿರುವ ಎಲ್ಲರ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು. ಪ್ರಕರಣದ ಪ್ರಮುಖ ವ್ಯಕ್ತಿಯ ಬಂಧನ ಇನ್ನೂ ಕೂಡ ಆಗಿಲ್ಲ, ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯನ್ನು ಸಂವಿಧಾನ ಬದ್ಧವಾಗಿ ಕರ್ತವ್ಯ ನಿಭಾಯಿಸಲು ಬಿಡುತ್ತಿಲ್ಲವೆಂದು ಆರೋಪಿಸಿದರು. ವಿನಯ್ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮತ್ತು ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಏ.9 ರಂದು ಮಡಿಕೇರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ…

Read More

ಕುಶಾಲನಗರ ಏ.7 NEWS DESK :  ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ ಎಂದು ಕುಶಾಲನಗರ ದೇವಾಂಗ ಸಮಾಜದ ಅಧ್ಯಕ್ಷ ಡಿ.ವಿ.ರಾಜೇಶ್ ತಿಳಿಸಿದರು. ಕುಶಾಲನಗರ ರಥ ಬೀದಿಯಲ್ಲಿ ಇರುವ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ದೇವರ ದಾಸಿಮಯ್ಯ ಜಯಂತಿ ಮತ್ತು ಶ್ರೀರಾಮನವಮಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ನೇಕಾರ ಸಂತ ತಮ್ಮ ಜೀವಿತಾವಧಿಯಲ್ಲಿ ಸಮಾಜದ ಸಕಲರ ಜೀವನದ ಉನ್ನತಿಗೆ ವಚನಗಳ ಮೂಲಕ ಧಾರೆ ಎರೆದ ಕ್ರಾಂತಿಕಾರಕ. ಸಾಮಾಜಿಕ ಚಿಂತನೆಗಳಿಂದ ಸಂಸ್ಕೃತಿ, ಸಂಪ್ರದಾಯಗಳಿಗೆ ಹೊಸ ದಿಕ್ಕನ್ನು ತೋರಿಸಿ ಸಕಲರಿಗೂ ಸನ್ಮಾರ್ಗದಲ್ಲಿ ಸಾಗುವಂತೆ ಪ್ರತಿ ಜೀವನದ ಗುರಿಯನ್ನು ಸಾಧಿಸುವಂತೆ ತಮ್ಮ ಕ್ರಾಂತಿಕಾರಕ ವಚನಗಳ ಮೂಲಕ ಪ್ರೇರೇಪಿಸಿದ ಸಂತ ಕ್ರಾಂತಿಕಾರಿ ಸುಧಾರಣೆಯ ಕನ್ನಡ ವಚನಗಳ ಬ್ರಹ್ಮ ದೇವರ ದಾಸಿಮಯ್ಯ ಸಾಮಾಜಿಕವಾಗಿ ಸಮಾಜಗಳ ಅಂಕು ಡೊಂಕುಗಳನ್ನು ಸಮಾಜದ ಸುಧಾರಣೆಗೆ ತಮ್ಮ ವಚನಗಳಲ್ಲಿ ಸರಳವಾಗಿ ಸಾಮಾನ್ಯ ಜನತೆಗೆ…

Read More

ಮಡಿಕೇರಿ ಏ.7 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಕರಡಿಗೋಡು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವರ ಜಾತ್ರೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು.   ಬಳಿಕ ದೇವಸ್ಥಾನದ ಆಡಳಿತದವರೊಂದಿಗೆ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ಶ್ರೀ ದೇವರ ಸನ್ನಿಧಿಗೆ ಬೇಕಾದಂತಹ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಈ ಸಂದರ್ಭ  ಸಿದ್ದಾಪುರ ವಲಯ ಅಧ್ಯಕ್ಷರಾದ ಪ್ರತೀಶ್  ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಏ.7 NEWS DESK : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದ ನಂತರದ ಬೆಳವಣಿಗೆಗಳಲ್ಲಿ ಕೊಡಗು ಜಿಲ್ಲೆಯ ಜನಪ್ರಿಯ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರನ್ನು ತೇಜೋವಧೆ ಮಾಡುತ್ತಿರುವ ಬಿಜೆಪಿ ನಡೆಯನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ಘಟಕ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಕೆ.ಆರ್ ಅವರು ಬಡವರ ಹಾಗೂ ಕಾರ್ಮಿಕರ ಸಂಕಷ್ಟಗಳಿಗೆ ಸದಾ ಸ್ಪಂದಿಸುತ್ತಿರುವ ಇಬ್ಬರು ಶಾಸಕರ ಪರವಾಗಿ ಕಾರ್ಮಿಕ ಘಟಕ ನಿಲ್ಲುತ್ತದೆ. ಸಾವಿಗೆ ಶರಣಾದ ವಿನಯ್ ಬಗ್ಗೆ ನಮಗೆ ಅನುಕಂಪವಿದೆ, ಅವರ ಸಾವಿಗೆ ಸಂತಾಪ ಸೂಚಿಸುತ್ತೇವೆ. ಆದರೆ ವಿನಯ್ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕ್ಷುಲ್ಲಕ ರಾಜಕರಣ ಮಾಡುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು. ಶಾಸಕದ್ವಯರು ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಜಿಲ್ಲೆಯ ಸರ್ವ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನಪ್ರಿಯತೆ ಗಳಿಸುತ್ತಿರುವ ಇಬ್ಬರು ಶಾಸಕರ ರಾಜಕೀಯ ಬೆಳವಣಿಗೆಯನ್ನು ಸಹಿಸದ ಬಿಜೆಪಿ ಮಂದಿ…

Read More

ಮಡಿಕೇರಿ ಏ.7 NEWS DESK : ಕೊಡಗು ಜಿಲ್ಲೆಯ ಪ್ರಸಿದ್ಧ ಝಿಯಾರತ್ ಕೇಂದ್ರವಾದ ಮೇಕೇರಿ ಮಸೀದಿಯ ಮಖಾಂ ಉರೂಸ್ ಸಮಾರಂಭವು ಏ.11 ರಿಂದ 15ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಏ.11 ರಂದು ಜುಮಾ ನಮಾಜಿನ ಬಳಿಕ ಮೇಕೇರಿ ಕಿಜರ್ ಜುಮಾ ಮಸೀದಿ ಅಧ್ಯಕ್ಷ ಜನಾಬ್ ಸಯ್ಯದ್ ಜಂಬ್ರುದ್ದೀನ್ ಸಾಹೇಬ್ ಅವರ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದ್ದು, ಪ್ರಧಾನ ಕಾರ್ಯದರ್ಶಿ ಎಂ.ಎಲ್.ರಹೀಮ್ ಉಪಸ್ಥಿತರಿರಲಿದ್ದಾರೆ. ರಾತ್ರಿ ಇಶಾ ನಮಾಜಿನ ಬಳಿಕ ಉದ್ಬೋದನೆ ಹಾಗೂ ದಿಕ್ರ್-ದುಆ ಸಮ್ಮೇಳ ನಡೆಯಲಿದ್ದು, ಸಯ್ಯದ್ ಇಲ್ಯಾಸ್ ತಂಙಳ್ ಅಲ್ ಹೈದರೂಸಿ ಎಮ್ಮೆಮಾಡು ಪಾಲ್ಗೊಳ್ಳಲಿದ್ದಾರೆ. ಏ.12 ರಂದು ಇಶಾ ನಮಾಜಿನ ಬಳಿಕ ರಾತ್ರಿ 8 ಗಂಟೆಗೆ ಖಮರುದ್ದೀನ್ ಸಖಾಫಿ ಅನ್ವಾರಿ ಹಾಗೂ ಸಂಗಡಿಗರ ನೇತೃತ್ವದಲ್ಲಿ ಬುರ್ದಾ ಮಜ್ಲೀಸ್ ಹಾಗೂ ನಅತೆ ಶರೀಫ್ ನಡೆಯಲಿದ್ದು, ಮೇಕೇರಿಯ ಅಬ್ದುಲ್ ಸಲಾಂ ಹಳರಮಿ ದುಆಃ ನೇತೃತ್ವ ವಹಿಸಲಿದ್ದಾರೆ. ಏ.13 ರಂದು ರಾತ್ರಿ 8 ಗಂಟೆಗೆ ಇಶಾ ನಮಾಜಿನ ಬಳಿಕ ಧಾರ್ಮಿಕ ಮತ ಪ್ರವಚನ ನಡೆಯಲಿದೆ.…

Read More