ಲೇಖಕ: admin

ಮಡಿಕೇರಿ ಏ.7 NEWS DESK : ಕತ್ತಲೆಕಾಡು ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಶ್ರೀ ರಾಮನವಮಿಯನ್ನು ಸಂಭ್ರಮದಿಂದ‌ ಆಚರಿಸಲಾಯಿತು.  ಟ್ರಸ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರು, ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗಿಯಾಗಿದ್ದರು. ಮಹಿಳೆಯರು ಆವರಣದಲ್ಲಿ ಹಣತೆ ಬೆಳಗಿದರು. ಬಳಿಕ ಶ್ರೀರಾಮನಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು. ಟ್ರಸ್ಟ್‌ನ ವಿದ್ಯಾರ್ಥಿ ಘಟಕದ ಸದಸ್ಯರು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ಸುರೇಶ್ ಮಾವಟ್ಕರ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ‌ ಮಾಡಿದರು. ರಾಮನವಮಿಯನ್ನು ದೇಶದೆಲ್ಲೆಡೆ ಹಿಂದುಗಳು ಸಡಗರ, ಸಂಭ್ರಮದಿಂದ ಆಚರಿಸುತ್ತಾರೆ. ಮರ್ಯಾದ ಪುರುಷೋತ್ತಮ ಜನ್ಮ ದಿನವನ್ನು ಹಳ್ಳಿ ಹಳ್ಳಿಯಲ್ಲೂ ಸಂಭ್ರಮಿಸುತ್ತಿರುವುದು ಖುಷಿಯ ವಿಚಾರ ಎಂದು ಅನಿಸಿಕೆ ವ್ಯಕ್ತಪಡಿಸಿದರು.  ಪೂಜೆ ಬಳಿಕ ಪಾನಕ ಹಾಗೂ ಲಘು ಉಪಹಾರ ವಿತರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಕಾರ್ಯದರ್ಶಿ ಬ್ರಿಜೇಶ್ ರೈ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಹಾಗೂ ಸದಸ್ಯರು ಇದ್ದರು.  

Read More

ಮಡಿಕೇರಿ NEWS DESK ಏ.7 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಏ.11 ರಂದು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯದ ವಧು-ವರರ ಸಮಾವೇಶ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚೊಕ್ಕಾಡಿ ಎನ್.ಅಪ್ಪಯ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತರು ತಮ್ಮ ಭಾವಚಿತ್ರ ಮತ್ತು ಇತರ ಎಲ್ಲಾ ಮಾಹಿತಿಗಳೊಂದಿಗೆ ಖುದ್ದಾಗಿ ಹಾಜರಾಗುವಂತೆ ಮನವಿ ಮಾಡಿದರು. ವಧು-ವರರ ನೋಂದಣಿ ಪ್ರಕ್ರಿಯೆಯನ್ನು ಏ.11 ರಂದು ಬೆಳಿಗ್ಗೆ 9 ಗಂಟೆಗೆ ಪ್ರಾರಂಭಿಸಲಾಗುವುದು. ಅಲ್ಲದೆ ಆನ್ ಲೈನ್ ಮೂಲಕವೂ ವಧು-ವರರ ನೋಂದಣಿಯನ್ನು ಮಾಡಬಹುದಾಗಿದೆ. ಆಸಕ್ತರು appaiahchokkadiral@gmail.com, kumar.kuyyamudi@gmail.com ಇ-ಮೇಲ್‌ನಲ್ಲಿ ನೋಂದಾಯಿಸಬಹುದಾಗಿದೆ ಎಂದರು. ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್ ಮಾತನಾಡಿ, ವಧು-ವರರ ಸಮಾವೇಶದಲ್ಲಿ ಭಾಗವಹಿಸುವವರಿಗೆ ನೋಂದಾಣಿ ಶುಲ್ಕ ರೂ.500 ನಿಗಧಿ ಪಡಿಸಲಾಗಿದೆ. ವಧುವಿಗೆ 18 ವರ್ಷ ಹಾಗೂ ವರನಿಗೆ 21 ವರ್ಷ ಆಗಿರಬೇಕು. ವಧುವರರು ಪೋಸ್ಟ್ ಕಾರ್ಡ್…

Read More

ನಾಪೋಕ್ಲು ಏ.7 NEWS DESK : ಕೊಡಗಿನ ಪ್ರಪ್ರಥಮ ಪೊನ್ನು ಮುತ್ತಪ್ಪ ದೇವಾಲಯ ಹಾಗೂ ಎರಡನೇ ಪರಶಿನಿ ಎಂದು ಪ್ರಖ್ಯಾತವಾಗಿರುವ ನಾಪೋಕ್ಲುವಿನ ಶ್ರೀ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವವು ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ಸಾಂಪ್ರದಾಯಿಕವಾಗಿ ಸಂಪನ್ನಗೊಂಡಿತು. ಪೈಂಗುತ್ತಿ ಹಾಗೂ ಶ್ರೀ ಮುತ್ತಪ್ಪ ದೇವರ ಕಳಸ ನಡೆಯಿತು. ಪವಿತ್ರ ಕಾವೇರಿ ನದಿಯಲ್ಲಿ ಸ್ನಾನದ ನಂತರ ಪ್ರಖ್ಯಾತ ಕೇರಳ ಚಂಡೆಗಳೊಂದಿಗೆ ನಾಪೋಕ್ಲು ಪೇಟೆಯ ಮುಖ್ಯಬೀದಿಯಲ್ಲಿ ಮೆರವಣಿಗೆ ನಡೆದು ನಂತರ ದೇವಾಲಯಕ್ಕೆ ಆಗಮನವಾಯಿತು. ಈ ಸಂದರ್ಭ ಸಿಡಿಮದ್ದು ಪ್ರದರ್ಶನ, ಕೇರಳದ ನೃತ್ಯ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಂಟಪ ಮತ್ತಿತರ ಮನರಂಜನಾ ಕಾರ್ಯಕ್ರಮಗಳು ನಡೆದು ಜನಮನ ಆಕರ್ಷಿಸಿದವು. ರಾತ್ರಿ ಕುಟ್ಟಿಚಾತ ಮತ್ತು ಗುಳಿಗ ದೇವರ ವೆಳ್ಳಾಟಂ ನಡೆಯಿತು. ಉತ್ಸವದ ಅಂಗವಾಗಿ ಕೇರಳ ನೀಲೇಶ್ವರದ ಮುರಳಿ ಕೃಷ್ಣ ತಂತ್ರಿ ಅವರಿಂದ ಗಣಪತಿ ಹೋಮ ಮತ್ತು ಶುದ್ಧ ಕಳಸ ನಡೆಯಿತು. ರಾತ್ರಿ ಗುರು ಪೂಜೆ ಹಾಗೂ ಶ್ರೀದೇವಿ ಪೂಜೆ ನಡೆಯಿತು. ಗುಳಿಗ ಕೋಲ ಬಳಿಕ ಕುಟ್ಟಿಚಾತ ಕೋಲ…

Read More

ನಾಪೋಕ್ಲು ಏ.7 NEWS DESK : ಶಿಸ್ತು, ಸಂಯಮ, ಉತ್ತಮ ಗುಣ ನಡತೆಗಳನ್ನು ಹೊಂದಿರುವ ವಿದ್ಯಾರ್ಥಿಗಳಿಂದ ಕೂಡಿದ ಶಾಲೆಯು ಉತ್ತಮ ಶಾಲೆ ಆಗಿರುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಚೌರಿರ ಡಾ.ಜಗತ್ ತಿಮ್ಮಯ್ಯ ಹೇಳಿದರು. ನಾಪೋಕ್ಲು ಅಂಕುರ್ ಪಬ್ಲಿಕ್ ಶಾಲೆಯ ವತಿಯಿಂದ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಹತ್ತನೇ ತರಗತಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಉತ್ತಮವಾದ ಶಾಲೆಗಳಿವೆ. ಮಕ್ಕಳನ್ನು ತಿದ್ದಿ ಸೂಕ್ತ ಮಾರ್ಗದರ್ಶನ ನೀಡುವ ಶಿಕ್ಷಕರುಗಳಿಗಿಂತ ಆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಪೂರ್ಣ ವಿದ್ಯಾರ್ಥಿಗಳಿಂದ ಶಾಲೆಯು ಉತ್ತಮವಾಗಿರುತ್ತದೆ. ಪೋಷಕರು ಅಂತಹ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ದಾಖಲಿಸಬೇಕು ಎಂದರು. ಪರಿಸರ ಸಂರಕ್ಷಣೆಯು ವಿದ್ಯಾರ್ಥಿಗಳು ಮುಖ್ಯವಾಗಿ ರೂಡಿಸಿಕೊಳ್ಳಬೇಕಾದ ಅಂಶವಾಗಿದೆ. ಇಂದು ಕಾವೇರಿ ನದಿ ತಟ ಬಹಳ ಕಲುಷಿತವಾಗಿದೆ. ಎಲ್ಲೆಂದರಲ್ಲಿ ತ್ಯಾಜ್ಯದ ರಾಶಿ ಕಂಡುಬರುತ್ತದೆ. ನಾವು ವಾಸಿಸುವ ಪ್ರದೇಶ ಉತ್ತಮವಾಗಿರಬೇಕು. ಗಾಳಿ ನೀರು, ಮಣ್ಣು, ಮಲೀನವಾಗದಂತೆ ನೋಡಿಕೊಳ್ಳಬೇಕಾದ್ದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಅದನ್ನು ವಿದ್ಯಾರ್ಥಿಗಳು ಅರಿತುಕೊಂಡು ಪರಿಸರ…

Read More

ನಾಪೋಕ್ಲು ಏ.6 NEWS DESK : ಗ್ರಾಮ ಪಂಚಾಯಿತಿಯ 2024-25ರ ಸಾಲಿನ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು. ಹಿಂದೆ ನಿಗದಿಪಡಿಸಿ ದಂತೆ ಗ್ರಾ.ಪಂ ವತಿಯಿಂದ ಪಂಚಾಯತಿ ಸಭಾಂಗಣದಲ್ಲಿ ನಡೆದ ಬಹಿರಂಗ ಹರಾಜು ಪಕ್ರಿಯೆ ಕುರಿತು ಮಾಹಿತಿ ನೀಡಿದ ಅವರು, ಮಾರುಕಟ್ಟೆ 19,ಲಕ್ಷ 7ಸಾವಿರ 470 ರೂ.ಗಳಿಗೆ ಹರಾಜಾಗಿದೆ. ವಾಹನ ಶುಲ್ಕ 3,12,700 ರೂ.ಗಳಿಗೆ, ಹಸಿ ಮೀನು ಒಂದನೇ ಮಳಿಗೆ 3,56,006ರೂ. ಗಳಿಗೆ ಹಾಗೂ ಎರಡನೆ ಮಳಿಗೆ 3,26,978 ರೂ.ಗಳಿಗೆ ಹರಾಜಾಗಿದೆ. ಕುರಿಮಾಂಸ ಮಳಿಗೆ ಒಂದನ್ನು 1,72,280ಗಳಿಗೆ ಎರಡನ್ನು 1,72,162 ರೂ.ಗಳಿಗೆ ಹರಾಜಾಗಿದೆ. ಕೋಳಿ ಮಾಂಸ ಆರು ಮಳಿಗೆಗಳಿಗೆ ಅವಕಾಶಗಳಿದ್ದು ಇದರಲ್ಲಿ ನಾಲ್ಕು ಮಳಿಗೆಗಳನ್ನು ತಲಾ 78,116 ರೂ.ಗಳಿಗೆ ಹರಾಜಾಗಿದೆ ಉಳಿದ ಹರಾಜನ್ನು ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಹರಾಜು ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕಂಗಂಡ ಶಶಿ ಮಂದಣ್ಣ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪಂಚಾಯತಿ ಅಭಿವೃದ್ಧಿ…

Read More

ನಾಪೋಕ್ಲು ಏ.7 NEWS DESK : ರಾಮನವಮಿಯ ಪ್ರಯುಕ್ತ ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಕ್ಕದಲ್ಲಿ ಶ್ರೀರಾಮ ಭಕ್ತ ಸಮಿತಿ, ಶ್ರೀ ಗಜಾನನ ಯುವಕ ಭಕ್ತ ಮಂಡಳಿ, ಶ್ರೀ ಕೃಷ್ಣ, ಸಂಕ್ರಾಂತಿ, ಸಾಗರ ಸ್ವ ಸಹಾಯ ಸಂಘ, ಅಂಬಿಕಾ ಸ್ತ್ರೀಶಕ್ತಿ ಸಂಘಗಳ ಸಹಯೋಗದಲ್ಲಿ ಗಣಪತಿ ಹೋಮ, ಕಳಸ ಪೂಜೆ ಹಾಗೂ ಶ್ರೀರಾಮ ದೇವರಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಈ ಸಂದರ್ಭ ಮಡಿಕೇರಿ ಸಾಮಾಜಿಕ ಕಾರ್ಯಕರ್ತ ಚೀ.ನಾ ಸೋಮೇಶ್  ಮಾತನಾಡಿ, ಜಗತ್ತಿನಲ್ಲಿ ಎಲ್ಲರೂ ಒಟ್ಟಾಗಿ ಸೇರಿ ನಮಿಸುವಂತಹ ದೇವರು ಎಂದಿದ್ದರೆ ಅವರಲ್ಲಿ ಶ್ರೀರಾಮ ದೇವರು ಮೊದಲಿಗರು ಎಂದು ರಾಮೋತ್ಸವದ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭ ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಕುಕ್ಕೇರ ಅಜಿತ್, ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಚಂದ್ರ ಉಡೋತ್ ಪಾಲ್ಗೊಂಡಿದು. ಕೈಕಾಡು ಭಗವತಿ ದೇವಸ್ಥಾನದ ಪ್ರಧಾನ ಅರ್ಚಕ ಅಖಿಲೇಶ್ ಅವರು ಪೂಜಾ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು. ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ…

Read More

ಸುಂಟಿಕೊಪ್ಪ ಏ.7 NEWS DESK : ಶ್ರಿ ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡ ರಾಮ ಮಂದಿರದಲ್ಲಿ  ಶ್ರದ್ಧಾಭಕ್ತಿಯಿಂದ ರಾಮ ನವಮಿ ಆಚರಿಸಲಾಯಿತು.  ಬೆಳಿಗ್ಗೆ ಶುದ್ಧಿ ಪೂಜೆಯೊ0ದಿಗೆ ಆರಂಭಗೊಂಡಿತು.ರಾಮ, ಲಕ್ಷ್ಮಣ, ಸೀತೆ, ಆಂಜನೇಯ ದೇವರಿಗೆ ವಿವಿಧ ಹೂವಿನ ಅಲಂಕಾರ ನಡೆಯಿತು. ನಂತರ ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕದ ಬಳಿಗೆ ಗಣ ಹೋಮ ಹಾಗೂ ರಾಮತಾರಕ ಹೋಮವನ್ನು ಪ್ರಧಾನ ಅರ್ಚಕ ಜಯಂಂತ್ ಭಟ್, ಕಕ್ಕಬ್ಬೆಯ ಸಂತೋಷ್ ಹೆಬ್ಬಾರ್ , ರಾಘವೇಂದ್ರ ಭಟ್, ರವಿಶಂಕರ್ ಭಟ್, ಗಣೇಶ್ ಉಪಾಧ್ಯಯ, ಮಂಜುನಾಥ್ ಶರ್ಮಾ ನೆರವೇರಿಸಿದರು. ವಿಶೇಷ ಮಂಗಳಾರತಿ, ಮಹಾ ಆರತಿ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.  ನೆರೆದಿದ್ದ ನೂರಾರು ಭಕ್ತರಿಗೆ ಸಮಿತಿಯ ವತಿಯಿಂದ ಅನ್ನಸಂತರ್ಪಣೆ ನೆರವೇರಿತು. ಸುಂಟಿಕೊಪ್ಪ ಸೇರಿದಂತೆ ಸುತ್ತಲಿನ ನೂರಾರು ಭಕ್ತರು ಆಗಮಿಸಿ ಪೂಜಾ ಕೈಂಕಾರ್ಯಗಳಲ್ಲಿ ಭಾಗವಹಿಸಿದರು. ರಾಮ ನವಮಿಯ ಅಂಗವಾಗಿ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಲಾಗಿತ್ತು. ಪಟ್ಟಣ ಹಾಗೂ ದೇವಾಲಯದ ರಸ್ತೆಯಲ್ಲಿ ಕೇಸರಿ ಧ್ಚಜ ಹಾಗೂ ಬಂಟಿಂಗ್ಸ್ ಗಳು ರಾರಾಜಿಸುತ್ತಿದ್ದವು‌.…

Read More

ಕುಶಾಲನಗರ NEWS DESK ಏ.7 : ಕುಶಾಲನಗರ ಸೇತುವೆ ಬಳಿ ಕಾವೇರಿ ನದಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಕುಶಾಲನಗರ, ಏ.6 NEWS DESK : ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವ ಮೂಲಕ ಆರೋಗ್ಯ, ನೈರ್ಮಲ್ಯ ಹಾಗೂ ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮನವಿ ಮಾಡಿದರು. ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ತಾಲ್ಲೂಕುಮಟ್ಟದ ಶಾಲಾ ಮಕ್ಕಳ ಬೇಸಿಗೆ ಶಿಬಿರದ ಅಂಗವಾಗಿ ‌ಶನಿವಾರ ಏರ್ಪಡಿಸಿದ್ದ ಪರಿಸರ ಜಾಗೃತಿ ಆಂದೋಲನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ನಾವುಗಳು ನಿಸರ್ಗದ ನಿಯಮಗಳನ್ನು ಪರಿಪಾಲಿಸುವ ಮೂಲಕ ಭವಿಷ್ಯದ ದೃಷ್ಟಿಯಿಂದ ಪರಿಸರ, ಪ್ರಕೃತಿ, ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ಹೊಂದಬೇಕು ಎಂದರು. ಪರಿಸರ…

Read More

ಮಡಿಕೇರಿ NEWS DESK ಏ.7 : ಮಂಗಳೂರು ವಿಶ್ವ ವಿದ್ಯಾನಿಲಯ 2024ರಲ್ಲಿ ನಡೆಸಿದ ಎಂ.ಎ ಕೊಡವ ಪರೀಕ್ಷೆಯಲ್ಲಿ ಮಡಿಕೇರಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನ ವಿದ್ಯಾರ್ಥಿನಿ ಸಹನಾ ಸಿ.ಕೆ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ 43ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಹನಾಗೆ ರ‍್ಯಾಂಕ್ ಪ್ರದಾನ ಮಾಡಲಾಯಿತು. ಸಹನಾ ಸಿ.ಕೆ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ನಾಡಿನ ಮಂಕ್ಯ ಗ್ರಾಮದ ಚಾಮೇರ ಕುಟುಂಬದ ದಿ.ಕಾಳಪ್ಪ ಸಿ.ಟಿ ಹಾಗೂ ಚೋಂದಮ್ಮ ಪಿ.ಕೆ ದಂಪತಿಯ ತೃತೀಯ ಪುತ್ರಿ. ಫೀ.ಮಾ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಹಾಗೂ ಭೋದಕ, ಭೋದಕೇತರ ವರ್ಗ ಸಹನಾಗೆ ಅಭಿನಂದನೆ ಸಲ್ಲಿಸಿದ್ದಾರೆ.

Read More