ಲೇಖಕ: admin

ಮಡಿಕೇರಿ NEWS DESK  ಏ.7 : ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ B.Sc  ಸೂಕ್ಷ್ಮಾಣು ಜೀವಶಾಸ್ತ್ರದ ಅಂತಿಮ ಪದವಿ ಪರೀಕ್ಷೆಯಲ್ಲಿ ಮಡಿಕೇರಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನ ವಿದ್ಯಾರ್ಥಿನಿ ಮೋನಿಶಾ ರೈ ಸಿ.ಎಸ್ ರಾಜ್ಯಕ್ಕೆ ಮೊದಲ ರ‍್ಯಾಂಕ್ ಗಳಿಸಿ ಕಾರ್ಮೈನ್ ಲೋಬೋ ಚಿನ್ನದ ಪದಕ ಪಡೆದಿದ್ದಾರೆ. ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ 43ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೋನಿಶಾ ರೈ ಪದಕ ಪ್ರದಾನ ಮಾಡಲಾಯಿತು. ಮೋನಿಶಾ ರೈ ಸಿ.ಎಸ್ ಕುಶಾಲನಗರ ತಾಲ್ಲೂಕಿನ ಹಾರಂಗಿ ಸಮೀಪದ ಚಿಕ್ಕತ್ತೂರು ಗ್ರಾಮದ ಬೈಲಾಡಿ ಕುಟುಂಬದ ಶಿವಾನಂದ ರೈ ಹಾಗೂ ಗುಣವತಿ ರೈ ದಂಪತಿಯ ಪ್ರಥಮ ಪುತ್ರಿ. ಫೀ.ಮಾ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಹಾಗೂ ಭೋದಕ, ಭೋದಕೇತರ ವರ್ಗ ಮೋನಿಶಾಗೆ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮಡಿಕೇರಿ NEWS DESK ಏ.6 : ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮತ್ತು ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಏ.9ರಂದು ಮಡಿಕೇರಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರತಿಭಟನಾ ಮೆರವಣಿಗೆ ಆರಂಭಿಸಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ , ಮುಖಂಡರಾದ ಸಿ.ಟಿ.ರವಿ, ಆರ್‌.ಅಶೋಕ್‌,  ಸಂಸದ ಯದುವೀರ್‌ ಒಡೆಯರ್‌, ಮಾಜಿ ಸಂಸದ ಪ್ರತಾಪ್‌ ಸಿಂಹ ಮತ್ತಿತರರು ಪಾಲ್ಗೊಳ್ಳಲಿದ್ದಾರೆ   ಎಂದು ಕೊಡಗು ಬಿಜೆಪಿ ಮಾಹಿತಿ ನೀಡಿದೆ.

Read More

ಮಡಿಕೇರಿ NEWS DESK ಏ.6 : ಕೊಡಗಿನ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ವರ್ಚಸ್ಸನ್ನು ತಗ್ಗಿಸುವ ನಿಟ್ಟಿನಲ್ಲಿ ವ್ಯವಸ್ಥಿತ ಸಂಚು ನಡೆಯುತ್ತಿದ್ದು, ಇದರ ಬಿಜೆಪಿ ಮುಖಂಡರುಗಳು ಇದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟು ಮೊಣ್ಣಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇಂಧನ ದರ ಹೆಚ್ಚಳದ ಸಂದರ್ಭ ರಾಜ್ಯದ ಮತ್ತೆಲ್ಲೂ ನಡೆಯದ ಶಾಸಕರ ಪ್ರತಿಕೃತಿ ದಹನ ವಿರಾಜಪೇಟೆಯಲ್ಲಿ ನಡೆಯಿತು. ನಾಪೋಕ್ಲುವಿನ ಶೌಚಾಲಯ ಒಂದಕ್ಕೆ ಶಾಸಕ ಪೊನ್ನಣ್ಣ ಅವರ ಭಾವಚಿತ್ರ ಅಳವಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅವಮಾನಿಸುವ ಪ್ರಯತ್ನ ನಡೆಯಿತು. ನಿರಂತರವಾಗಿ ಶಾಸಕರುಗಳ ವಿರುದ್ಧ ಅಪಪ್ರಚಾರ ಮಾಡುವುದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯನ್ನು ಮುಂದಿಟ್ಟುಕೊಂಡು ರಸ್ತೆಗಿಳಿದಿರುವ ಜಿಲ್ಲೆಯ ಮಾಜಿ ಶಾಸಕರು, ವಿನಯ್ ಬದುಕಿದ್ದಾಗಲೇ ಸಮಸ್ಯೆಗಳಿಗೆ ಸ್ಪಂದಿಸಬೇಕಿತ್ತೆಂದು ಹೇಳಿದರು.  ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ಮಾತನಾಡಿ, ಜಿಲ್ಲೆಯ ಇಬ್ಬರು ಶಾಸಕರ ಆಡಳಿತದಲ್ಲಿನ ಲೋಪಗಳಿದ್ದಲ್ಲಿ ಅದನ್ನು ಪ್ರಶ್ನಿಸುವುದರಲ್ಲಿ ಯಾವುದೇ ತಪ್ಪಿಲ್ಲ.…

Read More

ಮಡಿಕೇರಿ NEWS DESK ಏ.6 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ರ 6ನೇ ದಿನದ ಪಂದ್ಯದಲ್ಲಿ ಕೂರ್ಗ್ ಯುನೈಟೆಡ್ ಮತ್ತು ಎಂಟಿಬಿ ರಾಯಲ್ಸ್ ತಂಡ ಗೆಲುವು ದಾಖಲಿಸಿದವು. ಕೂರ್ಗ್ ಯುನೈಟೆಡ್ ಮತ್ತು ಕೂರ್ಗ್ ಬ್ಲಾಸ್ಟರ್ಸ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕೂರ್ಗ್ ಯುನೈಟೆಡ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಕೂರ್ಗ್ ಬ್ಲಾಸ್ಟರ್ಸ್ ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 131 ರನ್ ಗಳನ್ನಷ್ಟೇ ಸೇರಿಸಲು ಶಕ್ತವಾಗಿ ಸೋಲು ಒಪ್ಪಿಕೊಂಡಿತು. ಕೂರ್ಗ್ ಯುನೈಟೆಡ್ ನ ಶರತ್ ಎ.ಎನ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ದಿನದ ದ್ವಿತೀಯ ಪಂದ್ಯ ಕೊಡವ ಎಂಟಿಬಿ ರಾಯಲ್ಸ್ ಮತ್ತು ಟೀಮ್ ವೈಲ್ಡ್ ಫ್ಲವರ್ ನಡುವೆ ನಡೆಯಿತು. ಟಾಸ್…

Read More

ಮಡಿಕೇರಿ ಏ.6 NEWS DESK : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರಮುಖರು ಕೊಡಗಿನ ಇಬ್ಬರು ಶಾಸಕರ ತೇಜೋವಧೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.ಪ್ರತಿಭಟನಾಕಾರರು ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಪ್ರತಿಕೃತಿ ದಹಿಸಿ ಅಸಮಾಧಾನ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಹಾಗೂ ನೂರಾರು ಸಂಖ್ಯೆಯ ಕಾರ್ಯಕರ್ತರು, ಬಿಜೆಪಿಯ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನಗರದ ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಮಾಜಿ ಸಂಸದ ಪ್ರತಾಪ ಸಿಂಹ ಅವರ ಪ್ರತಿಕೃತಿಯನ್ನು ದಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಮೆರವಣಿಗೆಯ ನಂತರ ಗಾಂಧಿ ಮೈದಾನದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ…

Read More

*ಮೈದಾನ 1* ಮೊಳ್ಳೇರ ಮತ್ತು ಅಪ್ಪನೆರವಂಡ ತಂಡಗಳ ನಡುವಿನ ಪಂದ್ಯದಲ್ಲಿ 4-3 ಗೋಲುಗಳ ಅಂತರದಲ್ಲಿ ಅಪ್ಪನೆರವಂಡ ತಂಡ ಜಯ ದಾಖಲಿಸಿತು. ಅಪ್ಪನೆರವಂಡ ಪರ ಯಶ್ವಿನ್ ನಾಚಪ್ಪ 2, ತರುಣ್ ಮಾಚಯ್ಯ ಹಾಗೂ ಚುಮ್ಮಿದೇವಯ್ಯ ತಲಾ 1 ಗೋಲು ದಾಖಲಿಸಿದರು. ಮೊಳ್ಳೇರ ತಂಡದ ಪರ ಶಿವ ಸೋಮಯ್ಯ, ಹರ್ಷ ಅಪ್ಪಣ್ಣ, ಹಾಗೂ ನಿಖಿಲ್ ದೇವಯ್ಯ ತಲಾ 1 ಗೋಲು ಬಾರಿಸಿದರು. ಅಪ್ಪನೆರವಂಡ ಶಿವ ಸೋಮಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಾಂಡಂಡ ಮತ್ತು ಕುಮ್ಮಂಡ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ತಲಾ 1 ಗೋಲು ಗಳಿಸುವ ಮೂಲಕ ಪಂದ್ಯ ಡ್ರಾ ಆದ ಕಾರಣ ಟೈ ಬ್ರೇಕರ್ ನಲ್ಲಿ 4-2 ಗೋಲುಗಳ ಅಂತರದಲ್ಲಿ ಕುಮ್ಮಂಡ ತಂಡ ಗೆಲುವು ದಾಖಲಿಸಿತು. ಕರಲ್ ಕಾರ್ಯಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ತಂಬುಕುತ್ತೀರ ಮತ್ತು ಕಳ್ಳಂಗಡ ತಂಡಗಳ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ತಂಬುಕುತ್ತೀರ ಜಯ ಸಾಧಿಸಿತು. ತಂಬುಕುತ್ತೀರ ಪರ…

Read More

*ಮೈದಾನ 1* ಬೆಳಿಗ್ಗೆ 9 ಗಂಟೆಗೆ ಬೊಟ್ಟಂಗಡ ಮತ್ತು ಕರ್ತಮಾಡ, 10 ಗಂಟೆಗೆ ಚಿಂಡಮಾಡ ಮತ್ತು ತೇಲಪಂಡ, 11 ಗಂಟೆಗೆ ಕುಂಡ್ರಂಡ ಮತ್ತು ಆಟ್ರಂಗಡ ಮಧ್ಯಾಹ್ನ 1 ಗಂಟೆಗೆ ಕಾಡ್ಯಮಾಡ ಮತ್ತು ಮಳವಂಡ, 2 ಗಂಟೆಗೆ ಅರೆಯಡ ಮತ್ತು ಚೋಕಿರ, 3 ಗಂಟೆಗೆ ಚೇಂದಿರ ಮತ್ತು ಕಾಯಪಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಕೋಳೇರ ಮತ್ತು ಕರವಟ್ಟಿರ, 10 ಗಂಟೆಗೆ ಅಪ್ಪಚೆಟ್ಟೋಳಂಡ ಮತ್ತು ಪಳೆಯಂಡ(ನಾಲ್ಕೇರಿ), 11 ಗಂಟೆಗೆ ಮನೆಯಪಂಡ ಮತ್ತು ಅಚ್ಚಪಂಡ, ಮಧ್ಯಾಹ್ನ 12 ಗಂಟೆಗೆ ಮುದ್ದಿಯಡ ಮತ್ತು ಆಲೆಮಾಡ, 1 ಗಂಟೆಗೆ ಮಾಣಿಪಂಡ ಮತ್ತು ಚೆಕ್ಕೇರ, 3 ಗಂಟೆಗೆ ಬೊಳ್ತಂಡ ಮತ್ತು ಬೊಜ್ಜಂಗಡ *ಮೈದಾನ 3* ಬೆಳಿಗ್ಗೆ 9 ಗಂಟೆಗೆ ಮಚ್ಚಾರಂಡ ಮತ್ತು ಎಳ್ತಂಡ, 10 ಗಂಟೆಗೆ ಕೊಂಗಂಡ ಮತ್ತು ಕೋದಂಡ, 11 ಗಂಟೆಗೆ ಕಳ್ಳೇಂಗಡ(ಬೆಳ್ಳೂರು) ಮತ್ತು ಕಂಬೀರಂಡ ಮಧ್ಯಾಹ್ನ 1 ಗಂಟೆಗೆ ಬಾಳೆಯಡ ಮತ್ತು ಮೂಕಳೇರ, 2 ಗಂಟೆಗೆ ಪಾಲೆಯಡ ಮತ್ತು ಕೊಣೇರಿರ, 3 ಗಂಟೆಗೆ ಇಟ್ಟೀರ…

Read More

ಮಡಿಕೇರಿ ಏ.6 NEWS DESK : ಕೊಡಗಿನ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಬೆಳವಣಿಗೆಯನ್ನು ಸಹಿಸದ ಬಿಜೆಪಿ ಪ್ರಮುಖರು ರಾಜಕೀಯ ಮತ್ಸರದಿಂದ ವಿನಯ್ ಸೋಮಯ್ಯ ಅವರ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಭಿವೃದ್ಧಿಪರ ಚಿಂತನೆ ಮತ್ತು ಜನರ ಸಮಸ್ಯೆಗಳಿಗೆ ಸ್ಪಂದನೆ ಈ ಆದರ್ಶಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಇಬ್ಬರು ಶಾಸಕರು ರಾಜಕೀಯ ವಲಯದಲ್ಲಿ ಹೆಮ್ಮರವಾಗಿ ಬೆಳೆಯುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿ ಮಂದಿ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳಿಂದಲೇ ಜನಪ್ರಿಯತೆ ಗಳಿಸಿರುವ ಇಬ್ಬರು ಸಜ್ಜನ ಶಾಸಕರನ್ನು ಮಣಿಸಲು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಸಾಧ್ಯವಿಲ್ಲ. ಸಮಾಜವನ್ನು ಒಡೆದು ಆಳುವ ಬಿಜೆಪಿಯ ಸಣ್ಣತನವನ್ನು ಜನರು ಈಗಾಗಲೇ ಅರಿತುಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕುರಿತು ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ…

Read More

ಕಣಿವೆ ಏ.6 NEWS DESK : ಉತ್ತರ ಕೊಡಗಿನ ಪ್ರಮುಖ ಪುಣ್ಯ ಕ್ಷೇತ್ರವಾಗಿರುವ ಕಣಿವೆಯ ಶ್ರೀರಾಮಲಿಂಗೇಶ್ವರ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಶ್ರದ್ದಾ ಭಕ್ತಿಯಿಂದ ನೆರವೇರಿತು. ರಾಮಲಿಂಗೇಶ್ವರ, ಅಗಸ್ತೇಶ್ವರ, ಗುಹೇಶ್ವರ, ಲಕ್ಷ್ಮಣೇಶ್ವರ ಹಾಗು ಬಸವೇಶ್ವರ ಎಂಬ ಪಂಚ ಲಿಂಗಗಳ ಸನ್ನಿಧಿಯಲ್ಲಿ ಪೂರ್ವಾಭಿಮುಖವಾಗಿ ಹರಿದಿರುವ ಇಲ್ಲಿನ ಕಾವೇರಿ ನದಿಯ ದಂಡೆಯಲ್ಲಿ ನೆರೆದಿದ್ದ ಅಪಾರ ಭಕ್ತ ಸಮೂಹ ರಥೋತ್ಸವಕ್ಕೆ ಸಾಕ್ಷಿಯಾಯಿತು. ಶ್ರೀ ರಾಮನು ಮರಳಿನಿಂದ ಪ್ರತಿಷ್ಠಾಪಿಸಿದನೆಂಬ ಪ್ರತೀತಿ ಇರುವ ಸನ್ನಿಧಿಯಲ್ಲಿ ಬೆಂಗಳೂರಿನ ವೇದಬ್ರಹ್ಮ ನರಹರಿಶರ್ಮಾ ನೇತೃತ್ವದ ಪುರೋಹಿತರ ತಂಡ ಧಾರ್ಮಿಕ ವಿಧಿಗಳನ್ನು ಪೂರೈಸಿತು. ರಥೋತ್ಸವದ ಅಂಗವಾಗಿ ದೇವಾಲಯದ ಒಳ ಹಾಗೂ ಹೊರ ಆವರಣವನ್ನು ತಳಿರು ತೋರಣಗಳು ಮತ್ತು ಬಗೆ ಬಗೆಯ ಪುಷ್ಪಗಳಿಂದ ಸಿಂಗರಿಸಲಾಗಿತ್ತು. ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನಾ ಪದ್ದತಿಯಂತೆ ನೆರೆಯ ಹೆಬ್ಬಾಲೆ ಗ್ರಾಮಸ್ಥರು ಅಂಚೆಯ ಮೂಲಕ ಕಾಶಿಯಿಂದ ತರಿಸಿದ್ದ ಪವಿತ್ರ ಗಂಗಾ ಜಲವನ್ನು ಅಲಂಕೃತ ಮಂಟಪದಲ್ಲಿಟ್ಟು ಮಂಗಳವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ಕಣಿವೆಯ ಶ್ರೀಕ್ಷೇತ್ರಕ್ಕೆ ತಂದು ದೇವರಿಗೆ ಪ್ರೋಕ್ಷಣೆ ಗೈದ…

Read More

ಮಡಿಕೇರಿ NEWS DESK ಏ.6 : ಕೊಡಗಿನ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಬೆಳವಣಿಗೆಯನ್ನು ಸಹಿಸದ ಬಿಜೆಪಿ ಪ್ರಮುಖರು ರಾಜಕೀಯ ಮತ್ಸರದಿಂದ ವಿನಯ್ ಸೋಮಯ್ಯ ಅವರ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಭಿವೃದ್ಧಿಪರ ಚಿಂತನೆ ಮತ್ತು ಜನರ ಸಮಸ್ಯೆಗಳಿಗೆ ಸ್ಪಂದನೆ ಈ ಆದರ್ಶಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಇಬ್ಬರು ಶಾಸಕರು ರಾಜಕೀಯ ವಲಯದಲ್ಲಿ ಹೆಮ್ಮರವಾಗಿ ಬೆಳೆಯುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿ ಮಂದಿ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳಿಂದಲೇ ಜನಪ್ರಿಯತೆ ಗಳಿಸಿರುವ ಇಬ್ಬರು ಸಜ್ಜನ ಶಾಸಕರನ್ನು ಮಣಿಸಲು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಸಾಧ್ಯವಿಲ್ಲ. ಸಮಾಜವನ್ನು ಒಡೆದು ಆಳುವ ಬಿಜೆಪಿಯ ಸಣ್ಣತನವನ್ನು ಜನರು ಈಗಾಗಲೇ ಅರಿತುಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕುರಿತು ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ…

Read More