ನಾಪೋಕ್ಲು ಮೇ 3 NEWS DESK : ಶಿಬಿರಾರ್ಥಿಗಳು ಹಾಕಿ ಕ್ರೀಡೆಯಲ್ಲಿ ಪರಿಣತಿಯನ್ನು ಹೊಂದಿ ಉತ್ತಮ ಕ್ರೀಡಾಪಟುಗಳಾಗಬೇಕು ಎಂದು ಮುಖ್ಯ ಅತಿಥಿ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು. ನಾಪೋಕ್ಲು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಕೆಪಿಎಸ್ ಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಶಿಬಿರಾರ್ಥಿಗಳಿಂದ ಧ್ವಜ ವಂದನೆ ಸ್ವೀಕರಿಸಿ, ಬಳಿಕ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿ ಹಾಕಿ ಕ್ರೀಡೆ ಪ್ರಸಿದ್ಧಿ ಹೊಂದಿದೆ. ಜಿಲ್ಲೆಯಲ್ಲೂ ಇರುವ ಉತ್ತಮ ಹಾಕಿಪಟುಗಳಿಂದಾಗಿ ಕೌಟುಂಬಿಕ ಹಾಕಿ ಉತ್ಸವ ಗಿನ್ನೆಸ್ ಬುಕ್ಆಫ್ ರೆಕಾಡ್ರ್ಸ್ ನಲ್ಲಿ ಸ್ಥಾನ ಪಡೆಯುವಂತಾಗಿದೆ. ಹಾಕಿ ಕ್ರೀಡೆಗೆ ಉತ್ತಮ ಅವಕಾಶಗಳು ಇರುವುದರಿಂದ ಶಿಬಿರಾರ್ಥಿಗಳು ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು. ಉತ್ತಮವಾಗಿ ತರಬೇತಿ ಆಯೋಜಿಸುತ್ತಿರುವ ಅಕಾಡೆಮಿಯ ಮುಂದಿನ ವರ್ಷದ ತರಬೇತಿ ಶಿಬಿರಕ್ಕೆ ರೂ.50,000 ಗಳ ಕೊಡುಗೆ ನೀಡುವುದಾಗಿ ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಾನಿಗಳಾದ ಪಾಂಡಂಡ ಲೀಲಾ ಕುಟ್ಟಪ್ಪ, ವಿದ್ಯಾರ್ಥಿಗಳು ತಂದೆ-ತಾಯಿಯಂದಿರಿಗೆ ಗೌರವವನ್ನು ನೀಡಬೇಕು.…
ಲೇಖಕ: admin
ನಾಪೋಕ್ಲು ಮೇ 3 NEWS DESK : ತನ್ನದೇ ಆದ ಆಚಾರ, ವಿಚಾರ, ಸಂಸ್ಕೃತಿ, ಸಂಪ್ರದಾಯಗಳನ್ನು ರೂಡಿಸಿಕೊಂಡಿರುವ ಗೊಲ್ಲ ಜನಾಂಗದವರ ವಾರ್ಷಿಕ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಹೆಮ್ಮೆ ಅನಿಸಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕೊಡಗು ಜಿಲ್ಲಾ ಗೊಲ್ಲ ಸಮಾಜದ ವತಿಯಿಂದ ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಉದ್ಘಾಟಿಸಿ ಮಾತನಾಡಿದರು. ಇಂದು ಜಿಲ್ಲೆಯಲ್ಲಿ ಸಣ್ಣ ಸಣ್ಣ ಸಮುದಾಯದವರು ವ್ಯವಸ್ಥಿತವಾಗಿ ಕ್ರೀಡಾಕೂಟವನ್ನು ಸಂಘಟಿಸುತ್ತಿದ್ದಾರೆ. ಇದು ಸಂತಸದ ವಿಚಾರ. ಜಿಲ್ಲೆಯಲ್ಲಿ ಅಸ್ತಿತ್ವದಲ್ಲಿರುವ ಸಣ್ಣ ಸಣ್ಣ ಸಮುದಾಯದವರು ತಮ್ಮದೇ ಆದ ಸಂಸ್ಕೃತಿ, ಉಡುಪು, ಭಾಷೆ, ಆಚಾರ ವಿಚಾರಗಳನ್ನು ಹೊಂದಿದ್ದಾರೆ. ಅವುಗಳನ್ನು ಕಾಪಾಡುವ ಕೆಲಸ ಆಗಬೇಕಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ವಿವಿಧ ಸಮುದಾಯಗಳ ಕ್ರೀಡಾಕೂಟಗಳು ಜರುಗುತ್ತಿವೆ. ಕ್ರೀಡಾಕೂಟಗಳ ಮೂಲಕ ಸಂಘಟನೆ ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಯಲ್ಲಿ ಎಲ್ಲಾ ಜನಾಂಗದವರ ಕಾರ್ಯಕ್ರಮಗಳಿಗೆ ತಾನು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ…
ಮಡಿಕೇರಿ ಮೇ 2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವು ಮೇ 4 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಮೇ 3 NEWS DESK : ಆದಿ ಶಂಕರಾಚಾರ್ಯರು ಕೇರಳದ ಕಾಲಡಿಯ ಪೂರ್ಣ ನದಿ ತೀರದಲ್ಲಿ ಒಂದು ಸರಳವಾದ ಕುಟುಂಬದಲ್ಲಿ ಹುಟ್ಟಿದ ಸಾಮಾನ್ಯ ಶಿಶು ಹಾಗೂ ಅವರು ಸೌಂದರ್ಯ ಲಹರಿಯಲ್ಲಿ ದ್ರಾವಿಡ ಶಿಶು ಎಂದು ಕರೆದುಕೊಳ್ಳುತ್ತಾರೆ ಎಂದು ಆಧ್ಯಾತ್ಮಿಕ ಚಿಂತಕರಾದ ಯಸಳೂರು ಉದಯ್ ಕುಮಾರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಆದಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಂಗಾರದ ಕ್ರಾಂತಿ ಹಾಗೂ ವರ್ಣವನ್ನು ನೀಗಿಸುವ ಪಾಷ ಅಂಕುಶ ಬಾಣ ಬಿಲ್ಲುಗಳನ್ನು ಧರಿಸಿದ್ದ ಕೆಂಪು ಹೂಮಾಲೆ ಧರಿಸಿದ್ದ ಕೆಂಪಡರಿದ ಕಣ್ಣುಗಳ ತಾಂಬೂಲಗಳಿಂದ ಕೆಂಪಾದ ವದನವುಳ್ಳ ತ್ರಿಪುರ ಸುಂದರಿ ಮಹಾದೇವಿಯನ್ನು ಭಕ್ತಿಯಿಂದ ನಮಿಸುವೆ ಎಂದು ಸೌಂದರ್ಯ ಲಹರಿಯಲ್ಲಿ ಶಂಕರಾಚಾರ್ಯರು ಹೇಳಿದ್ದಾರೆ. ಆದಿ ರಂಗ, ಮಧ್ಯ ರಂಗ, ಅಂತರಂಗ ಮೂರು ರಂಗನಾಥಗಳಿವೆ, ಕಾವೇರಿಯನ್ನು ಫಲವನ್ನು ಮತ್ತು ಬೆಳಕನ್ನು ಕೊಡುವ ಮಹಾತಾಯಿ ಎಂದು ಹೇಳುತ್ತಾರೆ. ಫಲ ಎಂದರೆ…
ಸೋಮವಾರಪೇಟೆ NEWS DESK ಮೇ 3 : ಐತಿಹಾಸಿಕ ಹಿನ್ನೆಲೆ ಹೊಂದಿರುವ ಸೋಮವಾರಪೇಟೆ ಆನೆಕೆರೆ ಆವರಣ ಗೋಡೆ ಕುಸಿದು ಬಿದ್ದಿದೆ. ಧಾರಾಕಾರ ಮಳೆಗೆ ಆವರಣ ಗೋಡೆ ಬಿದ್ದಿದ್ದು, ರಾಜ್ಯ ಹೆದ್ದಾರಿಯ ಬದಿಯಲ್ಲೇ ಕೆರೆ ಇರುವುದರಿಂದ ಅಪಾಯದ ಮುನ್ಸೂಚನೆ ಎದುರಾಗಿದೆ. ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವುದರಿಂದ ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಮತ್ತು ಲೋಕೋಪಯೋಗಿ ಇಲಾಖೆ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಆನೆಕೆರೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಮತ್ತು ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮಡಿಕೇರಿ NEWS DESK ಮೇ 2 : ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಹಿಂದೂ ಸುರಕ್ಷಾ ಸಮಿತಿ ಹಾಗೂ ಹಿಂದೂ ಪರ ಸಂಘಟನೆಗಳು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಶುಕ್ರವಾರ ಸಂಜೆ ಏಕಕಾಲದಲ್ಲಿ ಪ್ರತಿಭಟನೆ ನಡೆಸಿದವು. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿಂದೂ ಸಂಘಟನೆಗಳ ಪ್ರಮುಖರು, ಸುಹಾಸ್ ಶೆಟ್ಟಿಯನ್ನು ಹತ್ಯೆಗೈದವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಕಾರ್ಯಕರ್ತರಿಗೆ ರಕ್ಷಣೆೆ ಇಲ್ಲದಂತಾಗಿದೆ ಎಂದು ಆರೋಪಿಸಿದರು. ಪ್ರಮುಖರಾದ ತಳೂರು ಕಿಶೋರ್ ಕುಮಾರ್, ಮನು ಮಂಜುನಾಥ್, ಅನಿತಾ ಪೂವಯ್ಯ, ಅರುಣ್ ಶೆಟ್ಟಿ, ಪಿ.ಎಂ.ರವಿ, ಮಹೇಶ್ ಜೈನಿ, ನಗರಸಭೆಯ ಬಿಜೆಪಿ ಸದಸ್ಯರುಗಳು, ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕುಶಾಲನಗರದ ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣವನ್ನು ಖಂಡಿಸಿ,…
ಮಡಿಕೇರಿ NEWS DESK ಮೇ 2 : ಕೊಡಗು ಜಿಲ್ಲೆಯಲ್ಲಿ ಈ ಬಾರಿಯ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಒಟ್ಟು 26 ಶಾಲೆಗಳು ಪಡೆದುಕೊಂಡಿವೆ. ಅವುಗಳೆಂದರೆ, ಗಾಳಿಬೀಡು ಸರ್ಕಾರಿ ಪ್ರೌಢ ಶಾಲೆ, ಕಡಗದಾಳು ಸರ್ಕಾರಿ ಪ್ರೌಢ ಶಾಲೆ, ಮಕ್ಕಂದೂರು ಸರ್ಕಾರಿ ಪ್ರೌಢ ಶಾಲೆ, ಚೆಂಬು ಸರ್ಕಾರಿ ಪ್ರೌಢ ಶಾಲೆ, ಹಾಕತ್ತೂರು ಸರ್ಕಾರಿ ಪ್ರೌಢ ಶಾಲೆ, ಕಾನ್ ಬೈಲ್ ಸರ್ಕಾರಿ ಪ್ರೌಢ ಶಾಲೆ, ಕೊಂಡಂಗೇರಿ ಸರ್ಕಾರಿ ಪ್ರೌಢ ಶಾಲೆ, ನಾಪೋಕ್ಲುವಿನ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಚೌಡ್ಲುವಿನ ಡಾ. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಿತಿಮತಿ ಮೊರಾರ್ಜಿ ದೇಸಾಯಿ ವಸತಿ ಶಾಲೆ. ಅನುದಾನ ರಹಿತ ಶಾಲೆಗಳಾದ ಮಡಿಕೇರಿಯ ಬ್ಲಾಸಂ ಸರ್ಕಾರಿ ಪ್ರೌಢ ಶಾಲೆ, ನಾಲೋಕ್ಲುವಿನ ಎಕ್ಸೆಲ್ ಸ್ಕೂಲ್ ಆಫ್ ಎಜ್ಯುಕೇಷನ್, ಸಿದ್ದಾಪುರದ ಇಕ್ರಾ ಪಬ್ಲಿಕ್ ಶಾಲೆ, ಭಾಗಮಂಡಲದ ಕೋರಂಗಾಲದ ಜ್ಞಾನೋದಯ ಸರ್ಕಾರಿ ಪ್ರೌಢ ಶಾಲೆ, ಚೇರಂಬಾಣೆಯ ಕೊಟ್ಟೂರು ಗ್ರಾಮದ ಶ್ರೀ ರಾಜರಾಜೇಶ್ವರಿ ಸರ್ಕಾರಿ ಪ್ರೌಢ…
ಮಡಿಕೇರಿ NEWS DESK ಮೇ 2 : 2024-25ನೇ ಶೈಕ್ಷಣಿಕ ಸಾಲಿನ 10 ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆ ಶೇ.82.21 ಫಲಿತಾಂಶದೊಂದಿಗೆ ರಾಜ್ಯಕ್ಕೆ 5ನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲಾ ವ್ಯಾಪ್ತಿಯ 171 ಪ್ರೌಢಶಾಲೆಗಳಿಂದ ಪರೀಕ್ಷೆಗೆ ಹಾಜರಾಗಿದ್ದ 6673 ವಿದ್ಯಾರ್ಥಿಗಳಲ್ಲಿ 5486 ಮಂದಿ ಉತ್ತೀರ್ಣರಾಗಿದ್ದಾರೆ. ಬಾಲಕಿಯರು ಮೇಲುಗೈ- ಎಂದಿನಂತೆ ಈ ಬಾರಿಯೂ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಯಲ್ಲಿ 2723 ಬಾಲಕಿಯರು ಉತ್ತೀರ್ಣರಾಗಿದ್ದರೆ, 2420 ಬಾಲಕರು ತೇರ್ಗಡೆಯಾಗಿದ್ದಾರೆ. ಗ್ರಾಮೀಣ ಭಾಗದ 4172 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.80.72 ಫಲಿತಾಂಶ ಬಂದಿದ್ದರೆ, ನಗರಪ್ರದೇಶದ 970 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.85.61 ಫಲಿತಾಂಶ ಬಂದಿರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ ತಿಳಿಸಿದ್ದಾರೆ. 26 ಶಾಲೆಗಳಲ್ಲಿ ಪ್ರತಿಶತ ಫಲಿತಾಂಶ-ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು ಇಪ್ಪತ್ತಾರು ಶಾಲೆಗಳು ಶೇ.100 ಫಲಿತಾಂಶವನ್ನು ಪಡೆದುಕೊಂಡಿವೆ. ಇದರಲ್ಲಿ 11 ಸರ್ಕಾರಿ ಶಾಲೆಗಳು, 15 ಅನುದಾನ ರಹಿತ ಶಾಲೆಗಳಾಗಿವೆ. ಜಿಲ್ಲೆಗೆ ಪ್ರಥಮ-ವಿರಾಜಪೇಟೆಯ ಶ್ರೀ ಕಾವೇರಿ ಪ್ರೌಢಶಾಲೆಯ ಟಿ.ಎಂ.ಆಶ್ರಯ್ ಅಕ್ಕಮ್ಮ…
ಸೋಮವಾರಪೇಟೆ ಮೇ 2 NEWS DESK : ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿನಿಯರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿ ಕೆ.ಸಿ.ಪಂಚಮಿ 625ಕ್ಕೆ 621 ಅಂಕಗಳನ್ನು ಪಡೆದು ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಇಂಗ್ಲೀಷ್, ಹಿಂದಿ, ವಿಜ್ಞಾನದಲ್ಲಿ ಶೇ.100ರಷ್ಟು ಅಂಕಗಳಿಸಿದ್ದಾರೆ. ಕನ್ನಡ 124, ಗಣಿತ 99, ಸಮಾಜ ವಿಜ್ಞಾನ 98 ಅಂಕ ಗಳಿಸಿದ್ದಾರೆ. ರೈತ ಕುಟುಂಬದ ಪಂಚಮಿ, ನೇರುಗಳಲೆ- ಅಬ್ಬೂರುಕಟ್ಟೆ ಗ್ರಾಮದ ತನ್ನ ಅಜ್ಜಿ ಮನೆಯಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡಿದ್ದಾರೆ. 5ನೇ ತರಗತಿಯಿಂದ ಕುವೆಂಪು ಶಾಲೆಯಲ್ಲಿ ಕಲಿತ್ತಿದ್ದರು. ತಂದೆ ಚಂದ್ರಕುಮಾರ್ ಹೆತ್ತೂರು ಗ್ರಾಮದಲ್ಲಿ ಕೃಷಿ ಕೆಲಸ ಮಾಡುತ್ತಾರೆ. ತಾಯಿ ಶಿಲ್ಪ ಬೆಂಗಳೂರಿನಲ್ಲಿ ನರ್ಸ್ ಕೆಲಸ ಮಾಡುತ್ತಿದ್ದಾರೆ. ಪಂಚಮಿ ಮಾತನಾಡಿ, ಎರಡು ಹೆಚ್ಚಿನ ಅಂಕದ ನಿರೀಕ್ಷೆ ಇತ್ತು. ನಿದ್ದೆಗೆಟ್ಟು ಓದುತ್ತಿರಲಿಲ್ಲ. ಪರೀಕ್ಷೆ ಸಂದರ್ಭದಲ್ಲಿ ರಾತ್ರಿ 11 ತನಕ ಮತ್ತು ಬೆಳಿಗ್ಗೆ 4 ಗಂಟೆಂಗೆ ಎದ್ದು ಓದಿದ್ದೇನೆ. ಶಾಲೆಯಲ್ಲಿ ಶಿಕ್ಷಕರು ಮತ್ತು…
ಬೆಂಗಳೂರು ಮೇ 2 NEWS DESK : ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿರುವ ನರೇಂದ್ರ ಮೋದಿ ಅವರ ಆಶಯದಂತೆ “ವಿಕಸಿತ ಭಾರತ” ನಿರ್ಮಾಣಕ್ಕೆ ನಾವೆಲ್ಲರೂ ಸಂಕಲ್ಪ ತೊಟ್ಟಿದ್ದೇವೆ. ಇದರ ಭಾಗವಾಗಿ ಎಲ್ಲರಿಗೂ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಜಾತಿ ಗಣತಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ ಕ್ರಮ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಂಸದರು, ಜಾತಿ ಜನ ಗಣತಿ ಎಲ್ಲರಿಗೂ ಪೂರಕವಾಗಿರುತ್ತದೆ. ಇದು ಇಂದಿನ ಅತ್ಯಗತ್ಯ ಕಾರ್ಯಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು. 1931ರಲ್ಲಿ ಅಂದಿನ ಬ್ರಿಟಿಷ್ ಆಡಳಿತ ಜಾತಿ ಗಣತಿ ನಡೆಸಿತ್ತು. ಹಲವು ದಶಕಗಳಾದರೂ ಇದನ್ನು ಮತ್ತೆ ನಡೆಸಿರಲಿಲ್ಲ. ಈಗ ಜಾತಿ ಗಣತಿಯನ್ನು ಅತ್ಯಂತ ವೈಜ್ಞಾನಿಕವಾಗಿ ಸಂವಿಧಾನದ ಆಧಾರದ ಮೇಲೆಯೇ ಇದನ್ನು ನಡೆಸಲು ನಮ್ಮ ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿರುವುದು ಅತ್ಯಂತ ಸ್ವಾಗತಾರ್ಹ ಎಂದು ಯದುವೀರ್ ಹೇಳಿದರು. ಬಿಜೆಪಿಯಿಂದ ಜನಪರ ಆಡಳಿತ :: ಬಿಜೆಪಿ ಎಂದಿಗೂ…






