ಲೇಖಕ: admin

ವಿರಾಜಪೇಟೆ ಏ.6 NEWS DESK : ಭಾರತದ ಜಾನಪದ ಇತಿಹಾಸದಲ್ಲಿ ಪ್ರಪ್ರಥಮ ಜಾನಪದ ಆಧಾರಿತ ಸಂಗ್ರಹ ಪುಸ್ತಕ ಪಟ್ಟೋಲೆ ಪಳಮೆಯನ್ನು ಪ್ರಕಟಿಸಿದ, ಜಾನಪದ ಬ್ರಹ್ಮ ಎಂದೇ ಖ್ಯಾತರಾಗಿರುವ, ದಿ. ನಡಿಕೇರಿಯಂಡ ಚಿಣ್ಣಪ್ಪ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ, ಕೊಡವಾಮೆರ ಕೊಂಡಾಟ ಸಂಘಟನೆ ವತಿಯಿಂದ ಕೊಡವ ಜಾನಪದ ನಾಳ್ ಮತ್ತು ಕೊಡವಾಮೆಗಾಗಿ ಎಲೆಮರೆಯಲ್ಲಿ ದುಡಿಯುತ್ತಿರುವ ಸುಮಾರು 250 ಜನರಿಗೆ, ದಿವಂಗತ ಮುಕ್ಕಾಟಿರ ಶಿವು ಮಾದಪ್ಪ ನೆನಪಿನಲ್ಲಿ ಸ್ಮರಣಿಕೆ ವಿತರಣಾ ಕಾರ್ಯಕ್ರಮ ವಿರಾಜಪೇಟೆ ಕೊಡವ ಸಮಾಜದಲ್ಲಿ ನಡೆಯಿತು. ಕಾರ್ಯಕ್ರಮದ ಮೊದಲಿಗೆ ಅತಿಥಿ ಗಣ್ಯರನ್ನು ಕೊಡವ ಸಂಪ್ರದಾಯದಂತೆ ದುಡಿಕೊಟ್ಟ್ ಪಾಟ್ ಮೂಲಕ ಸ್ವಾಗತಿಸಿದರು. ಬಳಿಕ ಅತಿಥಿ ಗಣ್ಯರು ನಡಿಕೇರಿಯಂಡ ಚಿಣ್ಣಪ್ಪ ಅವರ ಭಾವಚಿತ್ರಕ್ಕೆ ನಮಿಸಿ ಅಕ್ಷತೆ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಿರಿಯ ಸಾಹಿತಿ, ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ಜಾನಪದ ತಜ್ಞ ಬಾಚರಣಿಯಂಡ ಬಿ.ಅಪ್ಪಣ್ಣ ಮಾತನಾಡಿ, ಜಾನಪದಕ್ಕೆ ಮೊಟ್ಟ ಮೊದಲಿಗೆ ವೈಜ್ಞಾನಿಕ ನೆಲೆಯಲ್ಲಿ ಸ್ವರೂಪವನ್ನು ದೇಶಿ ಶಕ್ತಿಯಾಗಿ ಪ್ರಚುರಪಡಿಸಿದ ನಡಿಕೇರಿಯಂಡ ಚಿಣ್ಣಪ್ಪ…

Read More

ಮಡಿಕೇರಿ ಏ.6 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಎರಡು ದಿನಗಳ ಕಾಲ ಶ್ರದ್ಧಾಭಕ್ತಿ ಮತ್ತು ವಿಜೃಂಭಣೆಯಿಂದ ನಡೆಯಿತು. ಏ.5 ರಂದು ಸಂಜೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ಚಂಡೆ, ತೈಯಂ ಕುಣಿತ, ಫ್ಲವರ್ ಡ್ಯಾನ್ಸ್, ತಮಟೆ, ರಾಮ, ಆಂಜನೇಯ ವೇಷಧಾರಿಗಳು, ಹುಲಿ ವೇಷ, ಭಜನಾ ತಂಡಗಳು, ಕಳಸ ಹಾಗೂ ರಾಮನ ಪಲ್ಲಕ್ಕಿ ಮೆರವಣಿಗೆ ಆಕರ್ಷಿಸಿತು. ಮೆರವಣಿಗೆಯು ನಗರದ ಗಾಂಧಿ ಮೈದಾನ, ಜನರಲ್ ತಿಮ್ಮಯ್ಯ ವೃತ್ತ, ಹಳೆಯ ಖಾಸಗಿ ಬಸ್ ನಿಲ್ದಾಣ, ಚೌಕಿ, ಮಹದೇವಪೇಟೆ, ಮಾರುಕಟ್ಟೆ, ಶ್ರೀಚೌಡೇಶ್ವರಿ ದೇವಾಲಯ ಮೂಲಕ ಎ.ವಿ ಶಾಲೆ ಹಿಂಭಾಗ, ಶ್ರೀಮುತ್ತಪ್ಪ ದೇವಾಲಯ ರಸ್ತೆಯಿಂದ ಶ್ರೀಕೋದಂಡರಾಮ ದೇವಾಲಯ ಸೇರಿತು. ಮೆರವಣಿಗೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ರಾಮೋಹಳ್ಳಿ ಶ್ರೀ…

Read More

ಮಡಿಕೇರಿ ಏ.6 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ನಲ್ಲಿ 4ನೇ ದಿನದ ಪಂದ್ಯದಲ್ಲಿ ಟೀಮ್ ಲಿವರೇಜ್ ಮತ್ತು ವೆಸ್ಟರ್ನ್ ಘಾಟ್ ವಾರಿಯರ್ಸ್ ಗೆಲುವು ದಾಖಲಿಸಿದವು. ಟೀಮ್ ಲಿವರೇಜ್ ಮತ್ತು ಕೂರ್ಗ್ ಬ್ಲಾಸ್ಟರ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಲಿವರೇಜ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 171 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕೂರ್ಗ್ ಬ್ಲಾಸ್ಟರ್ಸ್ ತಂಡ 16.4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 76 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ ಸೋಲು ಒಪ್ಪಿಕೊಂಡಿತು. ಟಾಸ್ ಗೆದ್ದ ಕೂರ್ಗ್ ಬ್ಲಾಸ್ಟರ್ಸ್ ತಂಡ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿತು. ಟೀಮ್ ಲಿವರೇಜ್ ನ ಚೇತನ್ ಚಿಣ್ಣಪ್ಪ ಮ್ಯಾನ್ ಆಪ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಟೀಮ್ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಕೊಡವ ವಾರಿಯರ್ಸ್…

Read More

ಕುಶಾಲನಗರ NEWS DESK ಏ.6 : ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಇಬ್ಬರು ಶಾಸಕರ ವಿರುದ್ಧ ತಕ್ಷಣ ಎಫ್ ಐ ಆರ್ ದಾಖಲಿಸಿ  ಕಾನೂನು ಕ್ರಮ ಕೈಗೊಳ್ಳಬೇಕು  ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಕುಶಾಲನಗರ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವಿನಯ್ ಸೋಮಯ್ಯ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿನಯ್ ಸೋಮಯ್ಯ ಅವರು ಆತ್ಮಹತ್ಯೆಗೆ ಮುನ್ನ ಬರೆದ ಡೆತ್ ನೋಟ್ ನಲ್ಲಿ ಕೆಲವರ ಹೆಸರನ್ನು ಉಲ್ಲೇಖಿಸಿದ್ದು, ಕುಟುಂಬಸ್ಥರು  ದೂರು ನೀಡಿದರೂ ಪೊಲೀಸರು ಸಮರ್ಪಕವಾಗಿ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿ ಕೆಲಸ ನಿರ್ವಹಿಸುತ್ತಿರುವುದು ಇತ್ತೀಚಿನ ಬೆಳವಣಿಗೆಯಾಗಿದೆ. ವಿರೋಧ ಪಕ್ಷಗಳ ಕಾರ್ಯಕರ್ತರ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದ್ದು, ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳಿಗೆ ಲಿಖಿತ ದೂರ ನೀಡಲಾಗಿದೆ ಎಂದು ವಿಜಯೇಂದ್ರ ತಿಳಿಸಿದರು. ವಿನಯ್ ಪ್ರಕರಣದ ದೂರಿನಲ್ಲಿ ನೀಡಿರುವಂತೆ ಇಬ್ಬರು ಶಾಸಕರ ವಿರುದ್ಧ…

Read More

ಮಡಿಕೇರಿ NEWS DESK ಏ.5 :  ವಿನಯ್ ಸೋಮಯ್ಯ ಸಾವಿನ  ಪ್ರಕರಣದಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಷಡ್ಯಂತ್ರ ರೂಪಿಸಿರುವುದು ಖಂಡನೀಯವೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶವದ ಮೇಲಿನ ರಾಜಕೀಯವನ್ನು ರಾಜ್ಯದ ಪ್ರಜ್ಞಾವಂತ ಜನತೆ ದಿಕ್ಕರಿಸಬೇಕೆಂದು ಕರೆ ನೀಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಭಾವುಕರಾಗಿ ಮಾತನಾಡಿದ ಪೊನ್ನಣ್ಣ ಅವರು, ಕೊಡಗಿನಾದ್ಯಂತ ಇಬ್ಬರು ಶಾಸಕರು ಕಳೆದ 2 ವಷ೯ಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಯ೯ಗಳನ್ನು ಸಹಿಸಲಾರದೆ ಮತ್ಸರದಿಂದ ವಿನಯ್ ಸಾವಿನ ಪ್ರಕರಣವನ್ನು ಬಳಸಿಕೊಂಡಿರುವ ಬಿಜೆಪಿ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ. ವಾಸ್ತವಾಂಶವನ್ನು ತಿರುಚಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರು ವಿನಯ್ ಮೃತದೇಹವನ್ನು ತೆಗೆಯಲು ಕೂಡ ಬಿಡದೆ ಹೀನ ಮನಸ್ಥಿತಿಯನ್ನು ಬಹಿರಂಗಗೊಳಿಸಿದ್ದಾರೆ. ವಿನಯ್ ಕುಟುಂಬಸ್ಥರ ನೋವಿಗೆ ಧನಿಯಾಗದ ಬಿಜೆಪಿ ನಾಯಕರು ಕಾಂಗ್ರೆಸ್ ನ್ನು ಹಾಗೂ ನಮ್ಮಿಬ್ಬರನ್ನು ಟೀಕಿಸಿ ಸ್ಥಳದಿಂದ ಪಲಾಯನ ಮಾಡುವುದಕ್ಕೆ ಸೀಮಿತರಾಗಿದ್ದಾರೆ ಎಂದು ಆರೋಪಿಸಿದರು. ಸಾವಿನ ಮನೆಯಲ್ಲಿಯೂ  ರಾಜಕೀಯ ಮಾಡುವ ಹೀನ ಪ್ರವೃತ್ತಿಯಿಂದ ಬಿಜೆಪಿಯವರು ಹಿಂದೆ…

Read More

ಮಡಿಕೇರಿ NEWS DESK ಏ.6 : ಬಿಜೆಪಿ ಕಾರ್ಯಕರ್ತ ವಿನಯ್ ಅವರ ಆತ್ಮಹತ್ಯೆ ಪ್ರಕರಣಕ್ಕೂ ಶಾಸಕದ್ವಯರಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಬಿಜೆಪಿ ರಾಜಕೀಯ ದುರುದ್ದೇಶದಿಂದ ಅಪಪ್ರಚಾರದಲ್ಲಿ ತೊಡಗಿದೆ ಎಂದು ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಅಬ್ದುಲ್ ರಶೀದ್ ಪಿ.ಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಳ ಸಜ್ಜನಿಕೆಯ ರಾಜಕಾರಣಿಗಳಾಗಿರುವ ವಿರಾಜಪೇಟೆಯ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿಯ ಶಾಸಕ ಡಾ.ಮಂತರ್ ಗೌಡ ಅವರುಗಳು ಪ್ರಾಮಾಣಿಕತೆ ಮತ್ತು ಮಾನವೀಯತೆಗೆ ಹೆಸರಾದವರು. ವಿನಯ್ ಸಾವಿನ ಪ್ರಕರಣದಲ್ಲಿ ಶಾಸಕರಿಬ್ಬರ ವಿರುದ್ಧ ಮಾಡುತ್ತಿರುವ ಆರೋಪ ಆಧಾರರಹಿತವೆಂದು ತಿಳಿಸಿದ್ದಾರೆ. ವಿನಯ್ ಆತ್ಮಹತ್ಯೆ ಮಾಡಿಕೊಳ್ಳಬಾರದಾಗಿತ್ತು, ಈ ಬಗ್ಗೆ ನಮಗೂ ಬೇಸರವಿದೆ. ಆದರೆ ಬಿಜೆಪಿ ಸಾವಿನ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಶಾಸಕದ್ವಯರ ಜನಸ್ನೇಹಿ ಗುಣ, ಅಭಿವೃದ್ಧಿ ಕಾರ್ಯ, ಜನಪ್ರಿಯತೆ ಮತ್ತು ರಾಜಕೀಯ ಬೆಳವಣಿಗೆಯನ್ನು ಸಹಿಸಲಾಗದ ಬಿಜೆಪಿ ಮಂದಿ ರಾಜಕೀಯ ಷಡ್ಯಂತ್ರ ಹೂಡಿ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಆದರೆ ಶಾಸಕರಿಬ್ಬರ ಪರ ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ಜಿಲ್ಲೆಯ ಜನರೇ ಬಲವಾಗಿ…

Read More

ಮಡಿಕೇರಿ NEWS DESK ಏ.6 : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದಕ್ಕಾಗಿ ಶಾಸಕದ್ವಯರ ವಿರುದ್ಧ ಅಪಪ್ರಚಾದಲ್ಲಿ ತೊಡಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸದಸ್ಯ ಇಸಾಕ್ ಖಾನ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಮಾಯಕ ವಿನಯ್ ಅವರ ಸಾವು ಅತ್ಯಂತ ವಿಷಾದಕರ, ಈ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಲಾಭಕ್ಕಾಗಿ ಹವಣಿಸುತ್ತಿರುವುದು ಖಂಡನೀಯ ಎಂದು ತಿಳಿಸಿದ್ದಾರೆ. ಅಭಿವೃದ್ಧಿಪರ ಚಿಂತನೆಯ ಶಾಸಕದ್ವಯರು ಕಳಂಕರಹಿತರಾಗಿದ್ದಾರೆ ಮತ್ತು ಅಲ್ಪಕಾಲದಲ್ಲೇ ಹೆಚ್ಚು ಜನಪ್ರಿಯರಾಗಿದ್ದಾರೆ. ಇದನ್ನು ಸಹಿಸದ ಬಿಜೆಪಿ ರಾಜಕೀಯ ಕುತಂತ್ರ ನಡೆಸುತ್ತಿದೆ. ಕ್ಷುಲ್ಲಕ ರಾಜಕಾರಣದಿಂದ ಬೇಸತ್ತಿದ್ದ ಜನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ ದಿಕ್ಕರಿಸಿದ್ದಾರೆ. ಆದರೂ ಬದಲಾಗದ ಬಿಜೆಪಿ ಮಂದಿ ಜನಪರ ಕಾಳಜಿಯ ಕ್ರಿಯಾಶೀಲ ಶಾಸಕರನ್ನು ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜಕೀಯ ವಿಚಾರಗಳಿಗಾಗಿ ಯುವ ಸಮೂಹ ದುಡುಕಿನ ನಿರ್ಧಾರ ಕೈಗೊಳ್ಳಬಾರದು. ಕುಟುಂಬದವರನ್ನು ಅನಾಥರನ್ನಾಗಿ ಮಾಡಿ ದು:ಖಿತರನ್ನಾಗಿಸುವ ಬದಲು ಸಮಸ್ಯೆಗಳನ್ನು ಪಕ್ಷದ ಪ್ರಮುಖರೊಂದಿಗೆ…

Read More

ಮಡಿಕೇರಿ NEWS DESK ಏ.6 : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಶಾಸಕದ್ವಯರನ್ನು ಅವಹೇಳನ ಮಾಡುವ ಮೂಲಕ ಸಾವಿನಲ್ಲೂ ಬಿಜೆಪಿ ರಾಜಕೀಯ ಲಾಭದ ಲೆಕ್ಕಾಚಾರ ಮಾಡುತ್ತಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಅತ್ಯಂತ ಬೇಸರದ ಬೆಳವಣಿಗೆಯಾಗಿದೆ, ಕಾಂಗ್ರೆಸ್ ಪಕ್ಷ ಸಂತಾಪ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ. ಬಿಜೆಪಿ ಸಾವಿನಲ್ಲೂ ರಾಜಕೀಯ ಲಾಭ ಹುಡುಕುವುದು ಸರಿಯಲ್ಲ, ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸ್ ನಡೆಸುತ್ತಾರೆ. ತನಿಖಾ ವರದಿ ಬರುವ ಮೊದಲೇ ಬಿಜೆಪಿ ಮಂದಿ ತನಿಖಾಧಿಕಾರಿಗಳಂತೆ ವರ್ತಿಸಿ ಶಾಸಕದ್ವಯರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಖಂಡನೀಯ. ಜಿಲ್ಲೆಯ ಇಬ್ಬರು ಶಾಸಕರು ಅತ್ಯಂತ ಸಜ್ಜನ ರಾಜಕಾರಣಿಗಳಾಗಿದ್ದಾರೆ, ಇವರ ಬೆಳವಣಿಗೆ ಮತ್ತು ಜನಪ್ರಿಯತೆಯನ್ನು ಬಿಜೆಪಿ ಪ್ರಮುಖರು ಸಹಿಸುತ್ತಿಲ್ಲ. ತಮ್ಮ ರಾಜಕೀಯ ಅಸ್ತಿತ್ವಕ್ಕೆ ದಕ್ಕೆ ಬರುತ್ತದೆ ಎನ್ನುವ ಕಾರಣಕ್ಕಾಗಿ ಪ್ರತಿಯೊಂದು ವಿಚಾರದಲ್ಲಿ ಶಾಸಕರುಗಳನ್ನು ಗುರಿ ಮಾಡುತ್ತಿರುವ ಬಿಜೆಪಿ ಮಂದಿ ಹೋರಾಟದ ಹೆಸರಿನಲ್ಲಿ ಸಾರ್ವಜನಿಕರಿಗೆ…

Read More

ಮಡಿಕೇರಿ NEWS DESK ಏ.6 : ಬಿಜೆಪಿ ಕಾರ್ಯಕರ್ತ ವಿನಯ್ ಅವರ ಆತ್ಮಹತ್ಯೆ ವಿಚಾರದಲ್ಲಿ ವಿನಾಕಾರಣ ಜಿಲ್ಲೆಯ ಇಬ್ಬರು ಶಾಸಕರನ್ನು ತೇಜೋವಧೆ ಮಾಡುತ್ತಿರುವ ಬಿಜೆಪಿ ಪ್ರಮುಖರ ನಡೆ ಖಂಡನೀಯ ಎಂದು ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿನಯ್ ಆತ್ಮಹತ್ಯೆಯಿಂದ ಎಲ್ಲರ ಮನಸ್ಸಿಗೆ ನೋವಾಗಿದೆ, ಘಟನೆಯನ್ನು ಮಾನವೀಯ ದೃಷ್ಟಿಕೋನದಲ್ಲಿ ನೋಡಬೇಕೆ ಹೊರತು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು. ಈ ಪ್ರಕರಣಕ್ಕೂ ಇಬ್ಬರು ಶಾಸಕರಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಹುರುಳಿಲ್ಲದ ಆರೋಪಗಳನ್ನು ಮಾಡುವ ಮೂಲಕ ಬಿಜೆಪಿ ತನ್ನ ಕ್ಷುಲ್ಲಕ ರಾಜಕಾರಣವನ್ನು ಪ್ರದರ್ಶಿಸುತ್ತಿದೆ. ದೇಶದ ಸಂವಿಧಾನ ಮತ್ತು ಕಾನೂನಿನ ಮೇಲೆ ಗೌರವವಿಲ್ಲದ ಬಿಜೆಪಿ ಮಂದಿ ನಿಯಮ ಮೀರಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ ಅವರು ಅಧಿಕಾರಕ್ಕೆ ಬಂದ ಎರಡೇ ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಹೆಚ್ಚು ಜನಪ್ರಿಯತೆಯನ್ನು ಗಳಿಸಿಕೊಂಡಿದ್ದಾರೆ. ಜನರ ನೋವಿಗೆ ತಕ್ಷಣ ಸ್ಪಂದಿಸುವ ಇಬ್ಬರು…

Read More

ಸೋಮವಾರಪೇಟೆ NEWS DESK ಏ.5 : ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಸಮೀಪದ ಯಡೂಂಡೆ ಗ್ರಾಮದ ನಿವಾಸಿ ಬಿಜೆಪಿ ಕಾರ್ಯಕರ್ತ ಕಡವಡಿರ ವಿನಯ್ ಸೋಮಯ್ಯ(40) ಅವರ ಅಂತ್ಯಕ್ರಿಯೆ ಅರೆಭಾಷಿಕ ಗೌಡ ಜನಾಂಗದ ಸಂಪ್ರದಾಯದಂತೆ ಸ್ವಗ್ರಾಮದಲ್ಲಿ ಶನಿವಾರ ಸಂಜೆ ನೆರವೇರಿತು. ಅಪರಾಹ್ನ 12.30ಗಂಟೆಗೆ ಪಾರ್ಥೀವ ಶರೀರವನ್ನು ಮನೆಗೆ ತರಲಾಯಿತು. ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸುವ ಮೂಲಕ ಕುಟುಂಬಸ್ಥರು ಗೌರವ ಸಲ್ಲಿಸಿದರು. ಅವಳಿ ಸಹೋದರ ವಿವೇಕ್ ಅಂತಿಮ ವಿಧಿವಿಧಾನ ನೆರವೇರಿಸಿದರು. ಮೃತನ ತಾಯಿ ಚಂಡಿರ ದೇವಕ್ಕಿ, ಪತ್ನಿ ಶೋಭಿತ ಪೂಜೆ ಸಲ್ಲಿಸಿದರು. ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಶಾಸಕ ಶ್ರೀವತ್ಸ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಬಿಜೆಪಿ ಪ್ರಮುಖರಾದ ಬಿ.ಸಿ.ನವೀನ್, ಗೌತಮ್, ಭಾರತೀಶ್ ಮತ್ತಿತರರು ಅಂತಿಮ ನಮನ ಸಲ್ಲಿಸಿದರು. ನೂರಾರು ಮಂದಿ ವಿನಯ್ ಗೆ ಅಂತಿಮ ನಮನ ಸಲ್ಲಿಸಿದರು. ಸಹೋದರ ವಿವೇಕ್ ಅಗ್ನಿಸ್ಪರ್ಶ ಮಾಡಿದರು.

Read More