ಮಡಿಕೇರಿ ಜೂ.3 NEWS DESK : ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.
ಲೇಖಕ: admin
ಪುತ್ತೂರು ಜೂ.3 NEWS DESK : ಜೀವನದಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ಗುರಿ ಇರುತ್ತದೆ, ಅದನ್ನು ತಲುಪುವಲ್ಲಿ ಅಪಾರವಾದ ಶ್ರದ್ಧೆ ಮತ್ತು ಅವಿರತವಾದ ಶ್ರಮದ ಆವಶ್ಯಕತೆ ಇದೆ ಎಂದು ಎಸ್ಎಪಿ ಲ್ಯಾಬ್ ಇಂಡಿಯಾ ಇದರ ಡೆವೆಲಪ್ಮೆಂಟ್ ಎಕ್ಸ್ಪರ್ಟ್ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿನಿ ನಿವೇದಿತಾ ಕಾಮತ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಸಮಾಜ ನಿಮ್ಮನ್ನು ಪರೀಕ್ಷಿಸುತ್ತಲೇ ಇರುತ್ತದೆ. ಅಲ್ಲಿ ನೀವು ಇತರರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳಬೇಕಾದರೆ ಹೊಸತನ್ನು ಕಲಿಯುತ್ತಲೇ ಇರಬೇಕು ಎಂದರು. ಕೇವಲ ಹಣದ ಹಿಂದೆ ಹೋಗುವುದಲ್ಲ, ಗಳಿಕೆಯ ಜತೆಯಲ್ಲಿ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಮಹೇಶ್ ಪ್ರಸನ್ನ ಮಾತನಾಡಿ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯದ ಅರಿವಿರಬೇಕು. ಸಮಾಜವನ್ನು ಎದುರಿಸಿ ನಿಲ್ಲುವ ಛಾತಿ ಇರಬೇಕು ಇದರಿಂದ ಮಾತ್ರ ಉನ್ನತಿಯನ್ನು ಸಾಧಿಸಬಹುದು ಎಂದು…
ನಾಪೋಕ್ಲು ಜೂ.3 NEWS DESK : ಮರಂದೋಡ ಗ್ರಾಮದ ಶ್ರೀ ಕೇಕುಮನಿ ಭಗವತಿ ದೇವಾಲಯಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕ್ಷೇತ್ರದ ಭಗವತಿ ದೇವರಲ್ಲಿ ಪ್ರಾರ್ಥಿಸಿದ ಶಾಸಕರು, ಕ್ಷೇತ್ರದ ಅಭಿವೃದ್ಧಿ ಹಾಗೂ ಈ ಬಾರಿಯ ಮಳೆಗಾಲವು ಸುಸೂತ್ರವಾಗಿ ಯಾವುದೇ ಹಾನಿಯನ್ನುಂಟುಮಾಡದೆ ಜನರ ಬಾಳಿಗೆ ಸುಖ-ಶಾಂತಿಯನ್ನು ನೀಡಲಿ ಎಂದು ಪೂಜೆ ಸಲ್ಲಿಸಿದರು. ಈ ಸಂದರ್ಭ ಚುನಾಯಿತ ಪ್ರತಿನಿಧಿಗಳು ದೇವಸ್ಥಾನದ ತಕ್ಕ ಮುಖ್ಯಸ್ಥರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಮರೊಂದೊಡ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ 8 ಲಕ್ಷ ಮೊತ್ತದ ರಸ್ತೆಯನ್ನು ಇದೇ ಸಂದರ್ಭ ಶಾಸಕರು ಉದ್ಘಾಟಿಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.3 NEWS DESK : ತೀವ್ರವಾದ ಮಳೆ-ಗಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1442 ಸಂಖ್ಯೆ ಕಂಬಗಳು, 11 ಸಂಖ್ಯೆ ವಿದ್ಯುತ್ ಪರಿವರ್ತಕಗಳು ಹಾಗೂ 13.105 ಕಿ.ಮೀ ವಾಹಕಗಳು ಹಾನಿಗೊಳಗಾಗಿರುತ್ತದೆ. ಈಗಾಗಲೇ 1091 ಸಂಖ್ಯೆ ಕಂಬಗಳನ್ನು ಹಾಗೂ 09 ಸಂಖ್ಯೆ ಪರಿವರ್ತಕಗಳನ್ನು ದುರಸ್ತಿಗೊಳಿಸಿ ಬದಲಾಯಿಸಲಾಗಿದೆ. ದೈನಂದಿನ ಚಟುವಟಿಕೆಯಲ್ಲಿ ಸರಾಸರಿ 100 ಕಂಬಗಳ ಬದಲಾವಣೆಯ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಮಳೆ ಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ವಿದ್ಯುತ್ ಕಂಬಗಳ ಮುರಿಯುವಿಕೆ ಮುಂದುವರಿಯುತ್ತಿದೆ. ವಿದ್ಯುತ್ ಜಾಲದ ದುರಸ್ತಿ ಕಾರ್ಯವನ್ನು ಚುರುಕಗೊಳಿಸಲು, ವಿದ್ಯುತ್ ಜಾಲವನ್ನು ಪುನಃ ಸ್ಥಾಪಿಸಲು ಮಡಿಕೇರಿ ವಿಭಾಗದ 231 ಸಂಖ್ಯೆಯ ಸಿಬ್ಬಂದಿ, ಇತರೆ ವಿಭಾಗಗಳಿಂದ 52 ಸಂಖ್ಯೆ ಸಿಬ್ಬಂದಿ ಹಾಗೂ ಹೊರಗುತ್ತಿಗೆಯಿಂದ 75 ಸಂಖ್ಯೆ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು, ಇವರ ಜೊತೆ 124 ಸಂಖ್ಯೆ ವಿದ್ಯುತ್ ಗುತ್ತಿಗೆದಾರ ಸಿಬ್ಬಂದಿಗಳು ವಿವಿಧ ಸಲಕರಣೆಗಳೊಂದಿಗೆ ನಿರಂತರವಾಗಿ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ 10 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ವಿಪರೀತ ಗಾಳಿಯಿಂದ ಕಂಬದ ಬದಲಾವಣೆ ಕಾಮಗಾರಿ ಹಾಗೂ…
ಮಡಿಕೇರಿ ಜೂ.2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ”ಯು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಎಂ.ಸತೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಯುವ ಜನತೆ ತಂಬಾಕು ಎನ್ನುವ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದು, ಅವರನ್ನು ಈ ವ್ಯಸನದಿಂದ ಮುಕ್ತರಾಗಲು ಸಮಾಜ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳ ಬಗ್ಗೆ ಸಲಹೆ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಬಿ.ಎಲ್. ಅವರು ವಿಶ್ವ ತಂಬಾಕು ರಹಿತ ದಿನಾಚರಣೆಯ ವಿಶೇಷತೆಯ ಮತ್ತು…
ಪೊನ್ನಂಪೇಟೆ ಜೂ.3 NEWS DESK : ಭಾರತೀಯ ನೌಕಾಪಡೆಯ ಸಬ್ ಲೆಫ್ಟಿನೆಂಟ್ ಆಗಿ ಕೊಡಗಿನ ಕಾಡ್ಯಮಾಡ ರಿಯಾ ಅಚ್ಚಯ್ಯ ನಿಯೋಜನೆಗೊಂಡ್ಡಿದ್ದಾರೆ. ಮೇ ತಿಂಗಳಾಂತ್ಯದಲ್ಲಿ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು, ಇದೇ ತಿಂಗಳ 14 ರಂದು ಐಎನ್ಎಸ್ ಸುಜಾತಾದಲ್ಲಿ ತಮ್ಮ ಆನ್ಬೋರ್ಡ್ ತರಬೇತಿಗಾಗಿ ಕೇರಳದ ಕೊಚ್ಚಿಯಲ್ಲಿ ವರದಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರು ವಿಜಯನಗರದ ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿಂಗ್ನಿಂದ ಮಾಹಿತಿ ವಿಜ್ಞಾನದಲ್ಲಿ ಎಂಜಿನಿಯರಿಂಗ್ ಅನ್ನು ಡಿಸ್ಟಿಂಕ್ಷನ್ನಲ್ಲಿ ಪೂರ್ಣಗೊಳಿಸಿದ ಕಾಡ್ಯಮಾಡ ರಿಯಾ ಅಚ್ಚಯ್ಯ, ಚಿಕ್ಕಂದಿನಿಂದಲೇ ರಕ್ಷಣಾ ಪಡೆಗೆ ಸೇರ್ಪಡೆಯಾಗಬೇಕೆಂಬ ಆಸಕ್ತಿ ಹೊಂದಿದ್ದರು. ತಮ್ಮ ನಿರಂತರ ಪರಿಶ್ರಮದ ಮೂಲಕ ಭಾರತೀಯ ನೌಕಾಪಡೆಗೆ ಇದೀಗ ಆಯ್ಕೆಯಾಗಿದ್ದಾರೆ. ರಿಯಾ ಅಚ್ಚಯ್ಯ ಅವರು ಮೈಸೂರಿನ ವಿಜಯನಗರದ ಸೇಂಟ್ ಜೋಸೆಫ್ ಸೆಂಟ್ರಲ್ ಶಾಲೆಯ ಹಳೆಯ ವಿದ್ಯಾರ್ಥಿನಿಯಾಗಿದ್ದು, ಹಿಂದೆ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕಾಗಿ 2 ಕಂಚು ಗೆದ್ದ ಅಂತರರಾಷ್ಟ್ರೀಯ ಸ್ಕೇಟರ್ ಕೂಡ ಆಗಿದ್ದಾರೆ. ಇವರು ಮೂಲತಃ ಗೋಣಿಕೊಪ್ಪಲಿನ ಅತ್ತೂರಿನವರಾದ, ಇದೀಗ ಮೈಸೂರಿನಲ್ಲಿ ನೆಲೆಸಿರುವ ಕಾಡ್ಯಮಾಡ ಅರುಣ್ ಅಚ್ಚಯ್ಯ ಮತ್ತು…
ಮಡಿಕೇರಿ ಜೂ.2 NEWS DESK : ಈಗಾಗಲೇ ಮುಂಗಾರು ಆರಂಭವಾಗಿದ್ದು, ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಸೂಚಿಸಿದ್ದಾರೆ. ಪೊನ್ನಂಪೇಟೆಯ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ಸೋಮವಾರ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಟಾಸ್ಕ್ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೆಚ್ಚಿನ ಮಳೆಯಿಂದಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಉದಾರವಾಗಿ ವರದಿ ನೀಡಿ ಮನೆ ಪರಿಹಾರ ಹಣ ಬಿಡುಗಡೆಗೆ ಕ್ರಮವಹಿಸುವಂತೆ ಕಂದಾಯ, ಪಂಚಾಯತ್ ರಾಜ್, ಲೋಕೋಪಯೋಗಿ ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದರು. ಸಂಪೂರ್ಣ ಮನೆ ಹಾನಿಯಾದ ಕುಟುಂಬಗಳಿಗೆ ಸರ್ಕಾರ ನೀಡುವುದು ರೂ.1.20 ಲಕ್ಷ ರೂ. ಮಾತ್ರ. ಆದ್ದರಿಂದ ಮನೆ ಹಾನಿ ವರದಿ ನೀಡುವಾಗ ಅಧಿಕಾರಿಗಳು ಉದಾರತೆ ತೋರಬೇಕು. ಈ ಬಗ್ಗೆ ಜಿಲ್ಲಾಧಿಕಾರಿಯವರು ಹಾಗೂ ಸರ್ಕಾರದ ಜೊತೆ ಚರ್ಚಿಸಲಾಗುವುದು ಎಂದು ಶಾಸಕರಾದ ಎ.ಎಸ್.ಪೊನ್ನಣ್ಣ ತಿಳಿಸಿದರು. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪ್ರತೀ ಗ್ರಾಮ ಪಂಚಾಯಿತಿಗೆ…
ಮಡಿಕೇರಿ ಜೂ.2 NEWS DESK : ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಅಳವಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬಾಳೆಲೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಬಾಳೆಲೆಯಲ್ಲಿ ಮಾನವ ಸರಪಳಿ ನಿರ್ಮಿಸಿದ ಸದಸ್ಯರು ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ಕೊಡವಲ್ಯಾಂಡ್ ನ ರಕ್ಷಣೆಗಾಗಿ 2025-26ರ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮಸಂಜಾತ ಕೊಡವರಿಗೆ ಪ್ರತ್ಯೇಕ “ಕೋಡ್ ಮತ್ತು ಕಾಲಮ್” ಅನ್ನು ಸೇರಿಸಲು ಕೇಂದ್ರ ಗೃಹ ಮಂತ್ರಾಲಯ ರಿಜಿಸ್ಟ್ರಾರ್ ಜನರಲ್ ಮತ್ತು ಭಾರತದ ಜನಗಣತಿ ಆಯೋಗ ನಮ್ಮ ಬೇಡಿಕೆಯನ್ನು ಪರಿಗಣಿಸಬೇಕೆಂದು ಒತ್ತಾಯಿಸಿದರು. ಪ್ರಸ್ತುತ ಜನಗಣತಿ ಸಂದರ್ಭ ಕೊಡವರಿಗೆ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಸೇರಿಸಿದರೆ ಕೊಡವ ಸಮುದಾಯದ ನಿಖರವಾದ ಪ್ರಾತಿನಿಧ್ಯವನ್ನು ಖಚಿತಪಡಿಸಬಹುದು. ಸರ್ಕಾರ ಕೊಡವ ಸಮುದಾಯದ ನಿರ್ದಿಷ್ಟ…
ಮೈಸೂರು ಜೂ.2 NEWS DESK : ಮೈಸೂರಿನ ಹೊರ ವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಳಿ ನೂತನ ಪಾದಚಾರಿ ಸೇತುವೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದು ಪೂರ್ಣಗೊಳ್ಳಲಿದೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಮೈಸೂರಿನ ರಾಷ್ಟ್ರೀಯ ಹೆದ್ದಾರಿಯ ಕೆ.ಆರ್. ಮಿಲ್ ಬಳಿ ನಡೆಯುತ್ತಿರುವ ಪಾದಚಾರಿ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಯದುವೀರ್ ಒಡೆಯರ್ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯನ್ನು ದಾಟುವುದು ಕಷ್ಟವಾಗುತ್ತಿತ್ತು. ಈ ಬಗ್ಗೆ ಜನರು ಕುಂದುಕೊರತೆ ಹೇಳಿಕೊಂಡಾಗ ಕೂಡಲೇ ಇದನ್ನು ನಿರ್ಮಿಸುವ ಕುರಿತು ಕ್ರಮ ಕೈಗೊಳ್ಳಲಾಯಿತು ಎಂದರು. ಕಾಮಗಾರಿ ಕೆಲಸ ತ್ವರಿತವಾಗಿ ಗತಿಯಲ್ಲಿ ಸಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಂಸದರು ತಿಳಿಸಿದರು. ಜನರಿಗೆ ಅನುಕೂಲವಾಗು ರೀತಿಯಲ್ಲಿ ಎಲ್ಲ ರೀತಿಯ ಕೆಲಸಗಳನ್ನು ಮಾಡಲಾಗುವುದು. ಅಭಿವೃದ್ಧಿಯ ಜೊತೆಗೆ ಜನೋಪಯೋಗಿ ಕೆಲಸಗಳಿಗೂ ಆದ್ಯತೆ ನೀಡಲಾಗುವುದು ಎಂದು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದರು.
ಮಡಿಕೇರಿ ಜೂ.2 NEWS DESK : ಅನುವಾದ ಸಾಹಿತ್ಯ ಕಠಿಣವಾದ ಸಾಹಿತ್ಯ ಪ್ರಕಾರವಾಗಿದ್ದು ಸಾಕಷ್ಟು ಸೂಕ್ಷತೆಯಿಂದ ತಜು೯ಮೆ ಮಾಡಬೇಕಾದ ಹೊಣೆಗಾರಿಕೆ ಅನುವಾದಕನ ಮೇಲಿರುತ್ತದೆ, ಸಾಕಷ್ಟು ಸಾಹಿತ್ಯಧ್ಯಾಯನದ ಬಳಿಕವೇ ಉತ್ತಮ ಅನುವಾದ ಸಾಧ್ಯವಾಗುತ್ತದೆ ಎಂದು ಮುಂಬೈನ ಬಾಬಾ ಪರಮಾಣು ಸಂಶೋಧನಾ ಕೇಂದ್ರದ ನಿವೃತ್ತ ವಿಜ್ಞಾನಾಧಿಕಾರಿ ಮುಳಿಯ ರಾಘವಯ್ಯ ಹೇಳಿದ್ದಾರೆ. ಸುಂಟಿಕೊಪ್ಪ ಬಳಿಯ ಗುಂಡುಗುಟ್ಟಿ ಶ್ರೀ ರಾಮಮಂದಿರ ಸಭಾಂಗಣದಲ್ಲಿ ಆಯೋಜಿತ ಮಂಜನಾಥಯ್ಯ ಅವರ 121ನೇ ಜನ್ಮಜಯಂತಿ ಸಮಾರಂಭದಲ್ಲಿ ಗುಂಡುಗುಟ್ಟಿ ಮಂಜನಾಥಯ್ಯ ಅವರ ಜೀವನ ಚರಿತ್ರೆಯ ಕೊಡಗಿನ ಕಲ್ಪತರು ಹೆಸರಿನ ಕನ್ನಡ ಮತ್ತು ಇಂಗ್ಲೀಷ್ ಕೃತಿಗಳನ್ನು ಲೋಕಾಪ೯ಣೆ ಮಾಡಿ ರಾಘವಯ್ಯ ಮಾತನಾಡಿದರು. ಇಂದಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಗೂಗಲ್ ಅಥವಾ ಎಐ ನೆರವಿನಿಂದ ತಜು೯ಮೆ ಸುಲಭಸಾಧ್ಯ ಎಂಬ ಭಾವನೆ ಹಲವರಲ್ಲಿದೆ. ಆದರೆ ಖಂಡಿತವಾಗಿಯೂ ಈ ತಂತ್ರಜ್ಞಾನ ಬಳಸಿ ಮಾಡುವ ತಜು೯ಮೆ ನೈಜವಾದ ಅನುದಾವಕ್ಕೆ ನ್ಯಾಯ ನೀಡಲಾರದು. ಈ ರೀತಿಯ ತಜು೯ಮೆಯ ಭಾಷೆ ಸ್ಪಷ್ಟವಾದ ಅನುವಾದ ಆಗಲಾರದು ಎಂದೂ ರಾಘವಯ್ಯ ಹೇಳಿದರು. ಬಾರತೀಯ ಭಾಷೆಗಳು ಸಾಕಷ್ಟು ವಷ೯ಗಳ…






