ಲೇಖಕ: admin

ವಿರಾಜಪೇಟೆ ಜೂ.24 NEWS DESK : ವಿರಾಜಪೇಟೆ ಕೊಡವ ಸಮಾಜ ಮತ್ತು ಲೋಪಮುದ್ರ ದೃಷ್ಟಿ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ವಿರಾಜಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಲೋಪಮುದ್ರ ದೃಷ್ಟಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ.ಸೌಮ್ಯ ಗಣೇಶ್ ನಾಣಯ್ಯ, ಇಂದು ನಾವು ಕಣ್ಣಿನ ತೊಂದರೆ ಇರುವವರಿಗೆ ಸ್ಕ್ರೀನಿಂಗ್ ಟೆಸ್ಟ್ ಮಾಡುತ್ತಿದ್ದೇವೆ. ಹೆಚ್ಚಿನ ಜನರಿಗೆ ಕಣ್ಣಿನ ತೊಂದರೆಯ ಬಗ್ಗೆ ತಿಳಿದಿರುವುದಿಲ್ಲ. ಬಿಪಿ, ಶುಗರ್, ಇನ್ನಿತರ ಆರೋಗ್ಯ ಸಮಸ್ಯೆಗಳಿದ್ದರೆ ಕಣ್ಣಿಗೆ ಯಾವ ರೀತಿಯ ಪರಿಣಾಮಗಳಾಗುತ್ತದೆ ಎಂಬುವುದು ತಿಳಿದಿರುವುದಿಲ್ಲ. ಆದರಿಂದ ಸ್ಕ್ರೀನಿಂಗ್ ಟೆಸ್ಟ್ ಬಹಳ ಮುಖ್ಯವಾಗಿದ್ದು, ಸ್ಕ್ರಿನಿಂಗ್ ಟೆಸ್ಟ್ ಮಾಡಿ ಹೆಚ್ಚಿನ ಚಿಕೆತ್ಸೆಯ ಅವಶ್ಯಕತೆ ಇದ್ದರೆ ನಮ್ಮ ಮುಖ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತೇವೆ. ವಿರಾಜಪೇಟೆ ಕೊಡವ ಸಮಾಜ ಒಂದೊಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.  ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಎ.ಮನು ಕುಮಾರ್ ಮಾತನಾಡಿ, ವಿರಾಜಪೇಟೆ ಕೊಡವ ಸಮಾಜ ಮತ್ತು ಲೋಪಮುದ್ರ ದೃಷ್ಟಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ…

Read More

ಮಡಿಕೇರಿ ಜೂ.24 NEWS DESK : ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಟೋಳಿ ಗುಂಡಿಕೆರೆಯ ಮಸೀದಿ ಮುಂಭಾಗದಿಂದ ಬೇಟೋಳಿ ಸರ್ಕಾರಿ ಶಾಲೆಯವರೆಗೆ ಮತ್ತು ಸ್ಥಳೀಯ ಅಲ್ಪಸಂಖ್ಯಾತ ಕುಟುಂಬಸ್ಥರುಗಳ ಮನೆಗಳಿಗೆ ಹಾದು ಹೋಗುವ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರ ಸ್ಪಂದನೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರು  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಇದೀಗ ಕ್ಷೇತ್ರದ ನಿರಂತರ ಅಭಿವೃದ್ಧಿಯ ಭಾಗವಾಗಿ, ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆ ಅನುದಾನ ರೂ.30 ಲಕ್ಷದ ಅನುದಾನದಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆ  ನಿರ್ಮಾಣವಾಗಿದೆ. ಗ್ರಾಮಸ್ಥರ ಮನವಿ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ರಸ್ತೆ ನಿರ್ಮಾಣಕ್ಕೆ ಅನುದಾನ ತರುವಲ್ಲಿ ಸಹಕರಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಪಿ.ಎ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ…

Read More

ಮಡಿಕೇರಿ ಜೂ.24 NEWS DESK :  ಗ್ರಾಮ ಪಂಚಾಯ್ತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೈಜ್ಞಾನಿಕ ರೂಪದ ಕನಿಷ್ಟ ವೇತನ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಮತ್ತು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘ(ಸಿಐಟಿಯು ಸಂಯೋಜಿತ) ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ ಸಂಘದ ಸದಸ್ಯರು ಹಾಗೂ ಗ್ರಾ.ಪಂ ನೌಕರರು ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು. ಸಂಘÀಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ನೌಕರರ ಸಂಘದಿಂದ ರಾಜ್ಯದಾದ್ಯಂತ ಆಯೋಜಿತ ಮುಷ್ಕರದ ಭಾಗವಾಗಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಹಲವಾರು ವರ್ಷಗಳಿಂದ ಗ್ರಾಮ ಪಂಚಾಯ್ತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಇಲ್ಲಿಯವರೆಗು ಸರ್ವೋಚ್ಛ ನ್ಯಾಯಾಲಯದ ಸೂಚನೆಗಳಿದ್ದರು ಕನಿಷ್ಟ ವೇತನ ಪಾವತಿಯಾಗುತ್ತಿಲ್ಲ. ಪ್ರಸ್ತುತ ಪಂಚಾಯ್ತಿಗಳಲ್ಲಿ ನೌಕರರು ‘ಜೀತದಾಳು’ಗಳಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ದಿನದಿಂದ ದಿನಕ್ಕೆ ನಿತ್ಯೋಪಯೋಗಿ ವಸ್ತುಗಳ…

Read More

ನವದೆಹಲಿ ಜೂ.24 NEWS DESK : ನಟ-ನಿರ್ದೇಶಕ ಅಮೀರ್ ಖಾನ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಸಂದರ್ಭದಲ್ಲಿ ಬಾಲಿವುಡ್ ನ ಸಂವೇಧನಾಶೀಲ ನಟ-ನಿರ್ದೇಶಕ ಅಮೀರ್ ಖಾನ್ ಮುಖಾಮುಖಿ ಭೇಟಿಯಾಗಿದ್ದು, ಪರಸ್ಪರ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದರು.

Read More

ಮಡಿಕೇರಿ ಜೂ.24 NEWS DESK  : ವಿರಾಜಪೇಟೆಯ ತ್ರಿವೇಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ 11ನೇ ಯೋಗ ದಿನವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಆಪಾಡಂಡ ಕಾರ್ಯಪ್ಪ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ಅರಸು ಅಚ್ಚಮ್ಮ ಮಾತನಾಡಿ, ಪ್ರತಿನಿತ್ಯ ಯೋಗ ಮಾಡುವುದರಿಂದ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಫ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಕಾವೇರಮ್ಮ ದಿನದ ಮಹತ್ವ, ಯೋಗ ಅಂತರಾಷ್ಟ್ರೀಯ ಮಹತ್ವ ಪಡೆದುಕೊಂಡ ಬಗ್ಗೆ ವಿವರಿಸಿದರು. ಶಿಕ್ಷಕರಾದ ಸವೆಂಟಿ ಅಗಸ್ಟಿನ್ ಸ್ವಾಗತಿಸಿದರು. ಜ್ಯೋತಿ ನಿರೂಪಿಸಿ, ವಂದಿಸಿದರು. ಯೋಗ ತರಬೇತುದಾರರಾದ ಬಿಂದು ಮಾರ್ಗದರ್ಶನದಲ್ಲಿ ಮುಖ್ಯಶಿಕ್ಷಕರುಗಳು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಲಾಯಿತು.

Read More

ಮಡಿಕೇರಿ ಜೂ.24 NEWS DESK : ಭಾರತದಲ್ಲಿ ಬ್ಯಾಂಕಿಂಗ್ ವೃತ್ತಿಯನ್ನು ಆರಿಸಿಕೊಳ್ಳುವ ಹೊಸಬರಿಗೆ ಮತ್ತು ಅನುಭವಿ ವೃತ್ತಿಪರರಿಗೆ ಅತ್ಯಂತ ಪ್ರತಿಷ್ಠಿತ ಉದ್ಯೋಗಗಳಲ್ಲಿ ಒಂದಾಗಿದೆ. ಬ್ಯಾಂಕ್‍ಗಳು ತನ್ನ ಉದ್ಯೋಗಿಗಳಿಗೆ ಸುಂದರವಾದ ಪ್ಯಾಕೇಜ್‍ಗಳು, ಆಕರ್ಷಕ ಸಂಬಳ, ಉದ್ಯೋಗ ಭದ್ರತೆಯ ಜೊತೆಗೆ ಇತರ ಸವಲತ್ತುಗಳನ್ನು ನೀಡುತ್ತವೆ ಎಂಬುದು ಬಹಿರಂಗ ಸತ್ಯವಾಗಿದೆ. ಕನ್ನಡ ಓದಲು, ಬರೆಯಲು ಹಾಗೂ ಮಾತನಾಡಲು ಬಲ್ಲ ಅಭ್ಯರ್ಥಿಗಳಿಗೆ ಇವು ಮೀಸಲಾಗಿವೆ. ಉಳಿದ ಹುದ್ದೆಗಳಿಗೂ ಆಯಾ ರಾಜ್ಯಗಳ ಭಾಷಾ ನಿಯಮ ಅನ್ವಯವಾಗಲಿದೆ. ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಾಕಾಂಕ್ಷಿಗಳಿಗೆ, ಈ ಹಿಂದೆ ಮೇ ತಿಂಗಳಲ್ಲಿ ಈ ಕುರಿತು ಅಧಿಸೂಚನೆ ಪ್ರಕಟಿಸಿತ್ತು. ಮೇ ಕೊನೆಯ ವಾರದಲ್ಲಿ ಅರ್ಜಿ ಸಲ್ಲಿಕೆ ಕೊನೆಗೊಳಿಸಿದ್ದರೂ, ಇದೀಗ ಅದೇ ಅಧಿಸೂಚನೆಗೆ ಮತ್ತೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಿದೆ. ಹೊಸ ಪ್ರಕಟಣೆಗಳ ಪ್ರಕಾರ, ಅಭ್ಯರ್ಥಿಗಳು ಜೂನ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯ ವಿರುವುದಿಲ್ಲ,…

Read More

ನಾಪೋಕ್ಲು ಜೂ.24 NEWS DESK : ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಪರದಾಡುವಂತಾಗಿದೆ. ಗ್ರಾಮದಲ್ಲಿ ಕಾಡಾನೆಗಳ ಹಿಂಡು ನಿರಂತರ ದಾಂಧಲೆ ನಡೆಸುತ್ತಿದ್ದು, ಕಾಫಿ, ತೆಂಗು, ಬಾಳೆ ಗಿಡಗಳನ್ನು ನಾಶಪಡಿಸಿವೆ. ಗ್ರಾಮದ ನಿವಾಸಿ ಮರದಾಳು ರಾಮಚಂದ್ರ ಅವರ ಮನೆಯ ಸುತ್ತಮುತ್ತ ದಾಳಿ ನಡೆಸಿರುವ ಕಾಡಾನೆಗಳ ಹಿಂಡು ತೆಂಗು, ಬಾಳೆ ಗಿಡಗಳನ್ನು ಸಂಪೂರ್ಣ ಧ್ವಂಸಗೊಳಿಸಿವೆ. ಅಲ್ಲದೆ ಕೃಷಿ ಪಸಲುಗಳಿಗೆ ಹಾನಿ ಉಂಟು ಮಾಡಿದೆ. ಇತ್ತೀಚೆಗೆ ನೆಟ್ಟ ಹಣ್ಣಿನಗಿಡಗಳೂಧ್ವಂಸವಾಗಿವೆ. ಕಾಡಾನೆಗಳ ಉಪಟಳವನ್ನು ತಡೆಗಟ್ಟಲು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಜೂ.24 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅರಣ್ಯ ಇಲಾಖೆ ಸೋಮವಾರಪೇಟೆ ವಲಯದ  ಜಂಟಿ ಆಶ್ರಯದಲ್ಲಿ ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು. ಶಾಲೆಯ ಅವರಣದಲ್ಲಿ ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದ ಅರಣ್ಯಇಲಾಖೆಯ ಅರಣ್ಯ ಪಾಲಕರಾದ ಚಂದ್ರಶೇಖರ್, ಎಲ್ಲರೂ ಪರಿಸರವನ್ನು ಸಂರಕ್ಷಿಸುವ ಕೆಲಸವನ್ನು ಮಾಡಬೇಕು. ಒಂದು ದಿನದ ಕಾರ್ಯಕ್ರಮವಾಗಿ ಆಚರಿಸದೆ ಪ್ರತಿನಿತ್ಯ ಒಂದೊಂದು ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣಗೆ ಪಣತೊಡಬೇಕು ಎಂದು ಕರೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಒಕ್ಕೂಟದ ಅಧ್ಯಕ್ಷ ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಮುಖ್ಯ ಶಿಕ್ಷಕರಾದ ಸರಳಕುಮಾರಿ, ಕೃಷಿ ಮೇಲ್ವಿಚಾರಕರಾದ ಹರೀಶ್ ಕುಮಾರ್ ಹಾಜರಿದ್ದರು. ಕೃಷಿ ಮೇಲ್ವಿಚಾರಕರಾದ ಹರೀಶ್ ನಿರೂಪಿಸಿದರು, ಸೇವಾಪ್ರತಿನಿಧಿ ಚೆನ್ನಮ್ಮ ರಾಜು ಸ್ವಾಗತಿಸಿದರು. ಶಿಕ್ಷಕಿ…

Read More

ಗೋಣಿಕೊಪ್ಪ ಜೂ.24 NEWS DESK : ಹೆಣ್ಣು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸುವ ಮೂಲಕ ಪೋಷಕರು ಹೆಣ್ಣುಮಕ್ಕಳ ಭದ್ರತೆಯ ಬಗ್ಗೆ ಗಮನ ಹರಿಸಬೇಕು ಎಂದು ಗೋಣಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಕೆ.ಕುಮಾರ್ ಕರೆ ನೀಡಿದರು. ಶಾಲೆಯ ಆವರಣದಲ್ಲಿ ನಡೆದ ಪೋಷಕರ ಸಭೆ ಮತ್ತು ಶಾಲಾಭಿವೃದ್ಧಿ ಸಮಿತಿ ರಚನಾ ಸಭೆಯಲ್ಲಿ ಪೋಷಕರ ಉದ್ದೇಶಿಸಿ ಮಾತನಾಡಿದರು. ಹೆಣ್ಣುಮಕ್ಕಳು ಮನೆಯಲ್ಲಿರುವುದರಿಂದ ಆಘಾತಕಾರಿ ಘಟನೆಗಳು ನಡೆಯುವ ಸಂಭವಗಳು ಹೆಚ್ಚಿರುತ್ತದೆ. ಹೀಗಾಗಿ ಹೆಣ್ಣು ಮಕ್ಕಳ ಸುರಕ್ಷತೆಗೆ ಪೋಷಕರು  ಜಾಗೃತೆ ವಹಿಸಬೇಕು. ಹೆಣ್ಣು ಮಕ್ಕಳನ್ನು ಶಾಲೆಗೆ ಕಳಿಸುವುದರಿಂದ ಪೋಷಕರು ತಮ್ಮ ಮಕ್ಕಳ ಭದ್ರತೆ ಆತಂಕದಿಂದ ದೂರ ಇರಬಹುದು ಎಂದು ಸಲಹೆ ನೀಡಿದರು.  ಶಾಲಾ ಅಭಿವೃದ್ಧಿ ಸಮಿತಿ ರಚನೆ :: ನಂತರ ನಡೆದ ಶಾಲಾ ಅಭಿವೃದ್ಧಿ ಸಮಿತಿ ರಚನೆ ನಡೆಯಿತು. ಸಮಿತಿ ಅಧ್ಯಕ್ಷರಾಗಿ ಕೆ.ಬಿ.ಜಗದೀಶ್, ಉಪಾಧ್ಯಕ್ಷರಾಗಿ ಬಿ.ಆರ್.ದಿವ್ಯ ಮತ್ತು ಸದಸ್ಯರುಗಳಾಗಿ ಪಿಂಟು ಸಿಂಗ್, ರಾಕೇಶ್, ಅರುಣ್ ಕುಮಾರ್ ವಿ, ಸೌಮ್ಯ, ತೇಜಸ್ವಿನಿ, ದೀಪಿಕಾ, ಅನಿತಾ, ಪಿ.ಬಿ.ಮೀನಾ, ಮಂಜುಳಾ, ರೆಜಿಯ ಸುಲ್ತನ್,…

Read More

ಕುಶಾಲನಗರ ಜೂ.23 NEWS DESK : ಕುಶಾಲನಗರ ಲಯನ್ಸ್ ಇಂಟರ್ನ್ಯಾಷನಲ್ ನೂತನ ಅಧ್ಯಕ್ಷರಾಗಿ ಎನ್.ಟಿ.ನಾರಾಯಣ, ಕಾರ್ಯದರ್ಶಿಯಾಗಿ ಎಂ.ಜಿ.ಕಿರಣ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಡಾ.ಶರತ್ ಕುಮಾರ್ ಮ್ಯಾಥ್ಯೂ ನೇಮಕಗೊಂಡಿದ್ದಾರೆ. 2025-26 ರ ಆಡಳಿತ ಮಂಡಳಿಯ ತಂಡದ ಪ್ರತಿಜ್ಞಾವಿಧಿ ಸಮಾರಂಭ ಜೂ.24ರಂದು ಕುಶಾಲನಗರ ಗೌಡ ಸಮಾಜದಲ್ಲಿ ನಡೆಯಲಿದೆ.  ಲಯನ್ಸ್ ಇಂಟರ್ನ್ಯಾಷನಲ್ ಹಿಂದಿನ ಸಾಲಿನ ಜಿಲ್ಲಾ ರಾಜ್ಯಪಾಲ ಎಂ.ಬಿ.ಸದಾಶಿವ ಪ್ರತಿಜ್ಞಾವಿಧಿ ಭೋದಿಸಲಿದ್ದಾರೆ.

Read More