ಮಡಿಕೇರಿ ಮೇ 1 NEWS DESK : ಇಂದಿರಾನಗರದ ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ 135ನೇ ವಾರ್ಷಿಕೋತ್ಸವವು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ನಗರದ ಮುಖ್ಯ ಬೀದಿಗಳಲ್ಲಿ ದೇವಿಯ ಮೆರವಣಿಗೆ ನಡೆಯಿತು. ನಂತರ ಮನೆ ಮನೆಯಿಂದ ಪೂಜೆಯನ್ನು ದೇವಾಲಯಕ್ಕೆ ತಂದೊಪ್ಪಿಸಲಾಯಿತು. ರಾತ್ರಿ ಹೂವಿನ ವರ ಬೇಡುವುದು, ಮಹಿಳೆಯರು ಮನೆ, ಮನೆಯಿಂದ ಆರತಿಯನ್ನು ದೇವಾಲಯಕ್ಕೆ ತಂದೊಪ್ಪಿಸಿದರು. ದೇವಿಗೆ ಮಹಾ ಮಂಗಳಾರತಿ ಮತ್ತು ಮಹಾಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು. ಬಳಿಕ ಶ್ರೀ ದೇವಿಗೆ ಹರಕೆ ಮತ್ತು ಕಾಣಿಕೆ ಒಪ್ಪಿಸಲಾಯಿತು. ಇದೇ ಸಂದರ್ಭ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಲೇಖಕ: admin
ಮಡಿಕೇರಿ ಮೇ 1 NEWS DESK : ಕೊಡಗು ಜಿಲ್ಲಾ ಎಐಟಿಯುಸಿ ಕಾರ್ಮಿಕ ಸಂಘಟನೆ ವತಿಯಿಂದ ಬಿಳಿಗೇರಿ ಗ್ರಾಮದಲ್ಲಿ ವಿಶ್ವ ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಟಾಟಾ ಸಂಸ್ಥೆಯ ಜಂಬೂರು ತೋಟದ ಕಾರ್ಮಿಕರ ಸಮ್ಮುಖದಲ್ಲಿ ಎಐಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಕಾರ್ಮಿಕ ವರ್ಗದಿಂದ ದೇಶದ ಪ್ರಗತಿ ಸಾಧ್ಯವಾಗಿದೆ. ಶ್ರಮಿಕ ವರ್ಗದ ಬೇಡಿಕೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈಡೇರಿಸಬೇಕು ಎಂದರು. ನೆರೆದಿದ್ದ ಕಾರ್ಮಿಕರು ಶ್ರಮಿಕ ವರ್ಗ ಕಾರ್ಮಿಕರ ಪರ ಘೋಷಣೆಗಳನ್ನು ಕೂಗಿದರು. ಎಐಟಿಯುಸಿಯ ಕಾರ್ಮಿಕ ನಾಯಕರಾದ ಸಂಜೀವ, ಸೂರಜ್, ಪ್ರಕಾಶ್, ರಾಚಯ್ಯ, ಶಾರದ, ಗಿರಿಜಾ ಮತ್ತಿತರರು ಹಾಜರಿದ್ದರು.
ಮಡಿಕೇರಿ ಮೇ 1 NEWS DESK : ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಯ ಯೋಜನೆ ಇದೇ ಏಪ್ರಿಲ್ ನಲ್ಲಿ ಆರಂಭವಾಗಿದ್ದು, ಕಾಮಗಾರಿ ಭರದಿಂದ ಸಾಗಿದೆ. ಒಟ್ಟು 92 ಕಿಮೀ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ 4 ಪ್ಯಾಕೇಜ್ ಗಳಿದ್ದು, ಪ್ಯಾಕೇಜ್ -5 ಅಂದರೆ ಬಿ ಅಗ್ರಹಾರ( ಶ್ರೀರಂಗಪಟ್ಟಣ) ದಿಂದ ಯಲಚನಹಳ್ಳಿ (ಮೈಸೂರು ತಾಲೂಕು) 19 ಕಿಮೀ ಮತ್ತು ಪ್ಯಾಕೇಜ್-3 (ಹುಣಸೂರು ತಾಲೂಕಿನ ಬೆಳತ್ತೂರುನಿಂದ ಪಿರಿಯಾಪಟ್ಟಣ ತಾಲೂಕಿನ ಹರವೆಮಲ್ಲಿರಾಜಪಟ್ಟಣ ವರೆಗಿನ 24.10 ಕಿಮೀ) ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಪ್ಯಾಕೇಜ್-4 ಸದ್ಯದಲ್ಲೇ ಆರಂಭವಾಗಲಿದ್ದು, ಪ್ಯಾಕೇಜ್-2 ಅರಣ್ಯ ಇಲಾಖೆಯ ಕೃಪೆಗಾಗಿ ಕಾದಿದೆ. ಕುಶಾಲನಗರದಿಂದ ಮಡಿಕೇರಿ ಕಡೆಗೆ ಆರಂಭವಾಗಬೇಕಿರುವ 22 ಕಿಮೀ ಉದ್ಧದ ಪ್ಯಾಕೇಜ್-1 ಅನ್ನು ಪರಿಸರವಾದಿಗಳ ತಕರಾರು ಮತ್ತು ಹೈಕೋರ್ಟ್ ಕೇಸಿನಿಂದಾಗಿ ಕೈಬಿಟ್ಟು ಕುಶಾಲನಗರದವರೆಗೂ ಮಾತ್ರ ಯೋಜನೆ ಕೈಗೆತ್ತಿಕೊಂಡಿದ್ದೆವು. ನೀವೆಲ್ಲ ಯೆಸ್ ಎಂದರೆ ಪ್ಯಾಕೇಜ್-1 ಗೆ ಅನುಮೋದನೆ ಪಡೆಯುವ ಪ್ರಯತ್ನ ಆರಂಭಿಸುತ್ತೇನೆ. ಕೆಲವು ಕೆಲಸ ಮಾಡಲು ಅಧಿಕಾರವೇ ಬೇಕೆಂದಿಲ್ಲ, ನಿಮ್ಮ ಆಶೀರ್ವಾದವೂ ಸಾಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್…
ಮಡಿಕೇರಿ ಮೇ 1 NEWS DESK : ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘ ಹಾಗೂ ಗೋಣಿಕೊಪ್ಪ ಕಾಫಿ ತೋಟಗಳ ಕಾರ್ಮಿಕರ ಯೂನಿಯನ್ ಸಹಯೋಗದಲ್ಲಿ ಗೋಣಿಕೊಪ್ಪಲಿನಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಗೋಣಿಕೊಪ್ಪಲುವಿನ ಹೋಟೆಲ್ ಪ್ರಕಾಶ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾರ್ಮಿಕರೇ ದೇಶದ ಶಕ್ತಿ. ಒಂದು ದೇಶವು ಯಶಸ್ಸು ಸಾಧಿಸಬೇಕೆಂದರೆ ಅದರಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ನಮ್ಮ ಸರಕಾರ ಕಾರ್ಮಿಕರ ಏಳಿಗೆಗೆ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಎಲ್ಲಾ ಕಾರ್ಮಿಕರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಮಿಕರ ಯಾವುದೇ ಸಮಸ್ಯೆ ಇದ್ದರೂ ತನ್ನ ಬಳಿಗೆ ಬಂದು ತಿಳಿಸಬೇಕೆಂದು ಹೇಳಿದರು.
ಮಡಿಕೇರಿ ಮೇ 1 NEWS DESK : ಕೊಡಗಿನಾದ್ಯಂತ ಕ್ರೀಡಾ ಪರ್ವವಾಗಿದ್ದು, ಕ್ರೀಡಾಕೂಟ ಒಗ್ಗಟ್ಟು ಮತ್ತು ಏಳಿಗೆಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ವಿರಾಜಪೇಟೆ ತಾಲ್ಲೂಕು ಅರಮೇರಿಯಲ್ಲಿ, ಬಾಳೆಕುಟ್ಟಿರ ಕುಟುಂಬಸ್ಥರು ಆಯೋಜಿಸಿರುವ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಕೊಡಗು ಜಿಲ್ಲೆ ಹಲವಾರು ವಿಶೇಷತೆಗಳಿಗೆ ಹೆಸರುವಾಸಿಯಾಗಿದ್ದು, ಅದರಲ್ಲಿ ಕ್ರೀಡೆಯೂ ಪ್ರಮುಖವಾಗಿದೆ. ಕ್ರೀಡೆ ಕೇವಲ ದೈಹಿಕವಾಗಿ ಮಾತ್ರ ಅಲ್ಲ ಮಾನಸಿಕವಾಗಿಯೂ ಸದೃಢವಾಗಲು ಸಹಕಾರಿಯಾಗಿದ್ದು, ಎಲ್ಲರೂ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ನಾಡಿನ ಒಗ್ಗಟ್ಟಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು. ಬಳಿಕ ಆಯೋಜಕರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಎಲ್ಲರಿಗೂ ಶುಭ ಕೋರಿದರು. ಈ ಸಂದರ್ಭ ಕಾರ್ಯಕ್ರಮ ಆಯೋಜಕರು ಹಾಗೂ ಪ್ರಮುಖರು ಇದ್ದರು.
ಮಡಿಕೇರಿ NEWS DESK ಮೇ 1 : ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಸಂದರ್ಭ ಮಲಯಾಳಿ ಸಮಾಜಕ್ಕೆ ಸೇರಿದ ಸದಸ್ಯರಾದ ಕೆ.ಎಸ್.ರಮೇಶ್ ಹಾಗೂ ಉಷಾ ಕಾವೇರಪ್ಪ ಅವರನ್ನು ಬಿಜೆಪಿ ಕಡೆಗಣಿಸಿದೆ, ಇದು ಮಲಯಾಳಿ ಸಮುದಾಯಕ್ಕೆ ಅತೀವ ನೋವನ್ನುಂಟು ಮಾಡಿದೆ ಎಂದು ಮಡಿಕೇರಿ ತಾಲ್ಲೂಕು ಹಿಂದೂ ಮಲಯಾಳಿ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಹಿಂದೂ ಮಲಯಾಳಿ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ವಿ.ಧರ್ಮೇಂದ್ರ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಪಕ್ಷದ ಕೆಲವು ನಾಯಕರ ಉದ್ಧಟತನದಿಂದ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿಯಲ್ಲಿದೆ ಎಂದು ಆರೋಪಿಸಿದ್ದಾರೆ. ಹಿಂದೂ ಮಲಯಾಳಿ ಸಂಘದ ಮಡಿಕೇರಿಯ ಹಾಗೂ ಜಿಲ್ಲಾ ಘಟಕದ ಸ್ಥಾಪಕ ಅಧ್ಯಕ್ಷರಾಗಿರುವ ಕೆ.ಎಸ್.ರಮೇಶ್ ಅವರು ಕಳೆದ 25 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ತಮ್ಮನ್ನು ತೊಡಗಿಸಿಕೊಂಡು, ನಗರಸಭೆ ಸದಸ್ಯರಾಗಿ ಸತತ 4 ಬಾರಿ ಆಯ್ಕೆಯಾಗಿದ್ದಾರೆ. ಇಷ್ಟು ಜನಮನ್ನಣೆ ಹೊಂದಿರುವ ನಾಯಕನ ವಿರುದ್ಧ ಈ ರೀತಿಯ ಕುತಂತ್ರ ನಡೆಯುತ್ತಿರುವುದು ಖಂಡನೀಯ. ಯಾರಾದರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ…
ಬೆಂಗಳೂರು ಮೇ 1 NEWS DESK : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು, ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿದರು.
ಮಡಿಕೇರಿ ಮೇ 1 NEWS DESK : ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪಿಎಸ್ಐ ಎಂ.ಸಿ. ಮುತ್ತಣ್ಣ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ಟಿ.ಎನ್.ಶಾಂತಿ ಅವರನ್ನು ಇಲಾಖಾ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.
ಮಡಿಕೇರಿ ಮೇ 1 NEWS DESK : ಕಡಂಗ ಯೂನಿಟ್ ಎಸ್.ಕೆ.ಎಸ್.ಎಸ್.ಎಸ್.ಎಫ್ ಅಧ್ಯಕ್ಷ ಇಸ್ಹಾಕ್ ಗೆ ಕಡಂಗ ಎಸ್.ಕೆ.ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ಯೂನಿಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಳೆದ ಎರಡು ತಿಂಗಳಿನಿಂದ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ವಿಶೇಷ ಪ್ರಯತ್ನ ನಡೆಸಿ ಹಾಗೂ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ರೀತಿಯ ಸಂಪನ್ಮೂಲ ಕ್ರೋಢಿಕರಿಸಲು ಮುಂಚೂಣಿಯಲ್ಲಿದ್ದ ಎಸ್ಕೆಎಸ್ಎಸ್ಎಫ್ ಕಡಂಗ ಯೂನಿಟ್ ಅಧ್ಯಕ್ಷ ಇಸ್ಹಾಕ್ ಅವರನ್ನು ಕಡಂಗದಲ್ಲಿ ನಡೆದ ಬಡಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಹಾಗೂ ಧಾರ್ಮಿಕ ಮತಪ್ರವಚನ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ಕಡಂಗ ಯೂನಿಟ್ ಎಸ್.ಕೆ.ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ಪದಾಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಮೇ 1 NEWS DESK : ಮರಗೋಡು ಗ್ರಾಮದ ಶ್ರೀ ಶಿವ ಪಾರ್ವತಿ ದೇವಾಲಯದಲ್ಲಿ ಪಟ್ಟಣಿ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಗ್ರಾಮದ ತಕ್ಕರ ಕುಟುಂಬಗಳಿಂದ ಎತ್ತು ಪೋರಾಟ ಹಾಗೂ ಕೊಡವ ಸಂಪ್ರದಾಯದಂತೆ ದುಡಿಕೊಟ್ಟು ಹಾಡಿನ ಮೂಲಕ ದೇವರಿಗೆ ದವಸ ಧಾನ್ಯಗಳನ್ನು ಸಮರ್ಪಸಲಾಯಿತು. ಮಧ್ಯಾಹ್ನದ ಮಹಾಪೂಜೆ ಜರುಗಿದ ನಂತರ ದೇವರ ಪ್ರಸಾದವನ್ನು ಭಕ್ತಾದಿಗಳಿಗೆ ವಿತರಿಸಲಾಯಿತು. ಸಂಜೆ ದೇವರ ಉತ್ಸವ ಮೂರ್ತಿ ಹೊರಬಂದು ಸೇರಿದ ಭಕ್ತರಿಗೆ ದರ್ಶನ ನೀಡಿತು. ದೇವಾಲಯದಲ್ಲಿ, ತೆಂಗಿನಕಾಯಿಗೆ ಗುಂಡು ಹೊಡಿಯುವ(ದೇವರ ಕಟ್ಟು ಮುರಿಯುವುದು), ತೆಂಗೆ ಪೂರ್ ಹಾಗೂ ದೇವರ ಮಹಾಪೂಜೆ ಬಳಿಕ ಅನ್ನದಾನ ನಡೆಯಿತು. ಸಂಜೆ 6.30 ಗಂಟೆಗೆ ದೇವರ ಉತ್ಸವಮೂರ್ತಿ ಜಳಕಕ್ಕೆ ತೆರಳಿ ದೇವರ ಮಹಾ ಉತ್ಸವ ನಡೆಯಲಿದೆ.






