ಲೇಖಕ: admin

ಮಡಿಕೇರಿ ಏ.5 NEWS DESK : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಪ್ರಮುಖರ ವಿರುದ್ಧ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಜಿ.ಮೋಹನ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿನಯ್ ಆತ್ಮಹತ್ಯೆ ಪ್ರಕರಣದಲ್ಲಿ ಜಿಲ್ಲೆಯ ಶಾಸಕರಿಬ್ಬರ ಪಾತ್ರ ಇಲ್ಲದಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಬಿಜೆಪಿ ಕಾನೂನಿಗೆ ವಿರುದ್ಧವಾದ ಆರೋಪಗಳನ್ನು ಮಾಡುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನಪ್ರಿಯತೆ ಗಳಿಸುತ್ತಿರುವ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ವ್ಯಕ್ತಿತ್ವಕ್ಕೆ ಚ್ಯುತಿ ತರಬಹುದೆನ್ನುವ ಹಗಲುಗನಸನ್ನು ಬಿಜೆಪಿ ಮಂದಿ ಕಾಣುತ್ತಿದ್ದಾರೆ. ಈಗಾಗಲೇ ವಿನಯ್ ಪ್ರಕರಣದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದ್ದು, ತಪ್ಪು ಯಾರಿಂದ ನಡೆದಿದೆ ಎಂದು ಸಾಬೀತಗಲಿದೆ. ತನಿಖೆಯ ಆರಂಭದಲ್ಲೆ ಶಾಸಕರಿಬ್ಬರನ್ನು ತಪ್ಪಿತಸ್ಥರೆಂದು ಬಿಜೆಪಿ ಪ್ರತಿಬಿಂಬಿಸುತ್ತಿರುವುದು ಸರಿಯಲ್ಲ.…

Read More

ಮಡಿಕೇರಿ ಏ.5 NEWS DESK : ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ (ಮದ್ಯ ಮಾರಾಟಗಾರರ ಒಕ್ಕೂಟ) ಜಿಲ್ಲಾ ಘಕಟದ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಅಸೋಸಿಯೇಷನ್ ಪ್ರಮುಖರು ಹಾಗೂ ಕಾರ್ಯಕರ್ತರು ಬೇಡಿಕೆ ಈಡೇರಿಸುವಂತೆ ಘೋಷಣೆಗಳನ್ನು ಕೂಗಿ ಸರಕಾರವನ್ನು ಒತ್ತಾಯಿಸಿ ಅಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತರ ಸಲ್ಲಿಸಿದರು. ಒಕ್ಕೂಟದ ಜಿಲ್ಲಾಧ್ಯಕ್ಷ ಗುಮ್ಮಟಿರ ಕಿಲನ್ ಗಣಪತಿ ಮಾತನಾಡಿ, ಮದ್ಯ ಸನ್ನದುದಾದರರು ಸಮಸ್ಯೆಯಲ್ಲಿ ಸಿಲುಕಿದ್ದಾರೆ. ರಾಜ್ಯದ ಬೊಕ್ಕಸಕ್ಕೆ ಅತೀ ಹೆಚ್ಚು ಆದಾಯ ನೀಡುವ ಮದ್ಯ ಮಾರಾಟಗಾರರ ಹಿತವನ್ನು ಸರಕಾರ ಕಾಪಾಡಬೇಕಾಗಿದೆ. ಪ್ರಸ್ತುತ ಶೇ.10 ಲಾಭಾಂಶ ಮಾರಾಟಗಾರರಿಗೆ ದೊರೆಯುತ್ತಿದ್ದು, ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಟ ಶೇ. 20 ಲಾಭಾಂಶವನ್ನು ಹೆಚ್ಚಿಸಬೇಕು, ಹೆಚ್ಚುವರಿ ಅಬಕಾರಿ ಶುಲ್ಕ ಕಡಿಮೆಮಾಡಬೇಕು, ಯಾವುದೇ ಕಾರಣಕ್ಕೂ ಸನ್ನದು ಶುಲ್ಕವನ್ನು ಹೆಚ್ಚಿಸಬಾರದು, ಕೆಲವೊಂದು ಸನ್ನದುಗಳನ್ನು ಹರಾಜು ಮಾಡುವ ಪ್ರಸ್ತಾಪ ಸರಕಾರದ ಮುಂದಿದ್ದು, ಇದನ್ನು ಯಾವುದೇ ಕಾರಣಕ್ಕೂ ಮಾಡಬಾರದೆಂದು ಆಗ್ರಹಿಸಿದರು.…

Read More

ಮಡಿಕೇರಿ ಏ.5 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕು ಬಿರುನಾಣಿ ಗ್ರಾ.ಪಂ ಗೆ ಶಾಸಕರ ಅನುದಾನದಲ್ಲಿ ಮಂಜೂರಾದ ನೂತನ ಪಂಚಾಯಿತಿ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಗ್ರಾಮ ಪಂಚಾಯಿತಿಯು ಜನಸಾಮಾನ್ಯರಿಗೆ ನೀಡುವ ಮೊದಲ ಆಡಳಿತದ ತಾಣವಾಗಿದ್ದು, ಆಯ್ಕೆಯಾದ ಪ್ರತಿಯೊಬ್ಬ ಜನಪ್ರತಿನಿಧಿಯು ಭದ್ರತೆಯಿಂದ ಕೆಲಸ ಮಾಡಿದರೆ ದೇಶ ಏಳಿಗೆ ಕಾಣುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು. ನೂತನ ಕಟ್ಟಡದ ವಿನ್ಯಾಸ ಹಾಗೂ ಕಾಮಗಾರಿಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಶಾಸಕರು, ಈ ನೂತನ ಕಟ್ಟಡದಲ್ಲಿ ಆಡಳಿತವು ಜನಸಾಮಾನ್ಯರ ಪರವಾಗಿ ಇರಲಿ ಎಂದು ಶುಭ ಹಾರೈಸಿದರು. ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್  ಮಾಜಿ ಸದಸ್ಯ  ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ  ಪ್ರಶಾಂತ್ ,ಪೊನ್ನಂಪೇಟೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ …

Read More

ಮಡಿಕೇರಿ ಏ.5 NEWS DESK : ಜಿಲ್ಲೆಯ ಪ್ರತಿಷ್ಠಿತ ಯುವಕ ಮಂಡಲದಲ್ಲಿ ಒಂದಾದ  ತಾಳತ್ತಮನೆಯ ನೇತಾಜಿ ಯುವಕ ಮಂಡಲದ ವಾರ್ಷಿಕ ಮಹಾ ಸಭೆಯು ನೇತಾಜಿ ಯುವಕ ಮಂಡಲದ ಸಭಾಂಗಣದಲ್ಲಿ  ನಡೆಯಿತು. ಯುವ ಸಂಘದ ಅಧ್ಯಕ್ಷ ಕೊಂಡಿರ ಪಿ. ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಭಾರಿ ಸಂಘದ ವಾರ್ಷಿಕೋತ್ಸವವನ್ನು ಅಂತರ್‌ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿ ಬಾಲ್‌ ಪಂದ್ಯಾಟದೊಂದಿಗೆ ಯಶಸ್ವಿಯಾಗಿ ನಡೆಸಿರುವುದನ್ನು ಹಿರಿಯ ಸದಸ್ಯರು ಶ್ಲಾಘಿಸಿದರು. ಕಾರ್ಯದರ್ಶಿ ಬಿ.ಬಿ.ದಿವೇಶ್‌ ರೈ ವಾರ್ಷಿಕ ವರದಿಯನ್ನು ವಾಚಿಸಿದರು. ನಂತರ ಸಂಘದ 2024-25 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರಗಳನ್ನು ಮಂಡಿಸಲಾಯಿತು. ಇದೇ ಸಂದರ್ಭ ಕ್ರೀಡಾ ಕೂಟವನ್ನು ನಡೆಸಲು ಸಹಕರಿಸಿದ ಸರ್ವರಿಗೂ ಹಾಗು ಕ್ರೀಡಾ ಕೂಟ ಯಶಸ್ವಿಗೆ ಶ್ರಮಿಸಿದ  ಸದಸ್ಯರಿಗೂ ಅಧ್ಯಕ್ಷರು  ಧನ್ಯವಾದ ಅರ್ಪಿಸಿದರು.  ನೂತನ ಕಾರ್ಯಕಾರಿ ಸಮಿತಿಯ ಆಯ್ಕೆ :: ಸಭೆಯಲ್ಲಿ 2025-26 ಸಾಲಿಗೆ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಕೊಂಡಿರ ಪಿ. ಕಾರ್ಯಪ್ಪ, ಉಪಾಧ್ಯಕ್ಷರಾಗಿ ಸಿ.ಸುರೇಶ್‌ ಕುಮಾರ್, ಕಾರ್ಯದರ್ಶಿಯಾಗಿ ಬಿ.ಬಿ.ದಿವೇಶ್‌…

Read More

ಮಡಿಕೇರಿ ಏ.5 NEWS DESK : ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ತೆರಿಗೆ ಹೊರೆಯನ್ನು ವಿರೋಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ. ದೇಶದ ಜನಸಾಮಾನ್ಯರ ಹಿತ ಕಾಪಾಡಲು ಬೆಲೆ ಏರಿಕೆಯನ್ನು ನಿಯಂತ್ರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಕೇಂದ್ರ ಸರ್ಕಾರ ನಿರಂತರವಾಗಿ ತೆರಿಗೆಯನ್ನು ಏರಿಕೆ ಮಾಡುತ್ತಿದೆ ಮತ್ತು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ದುಬಾರಿಗೊಳಿಸುತ್ತಿದೆ. ದೇಶದ ಜನರು ನೆಮ್ಮದಿ ಕಳೆದುಕೊಂಡಿದ್ದು, ಆರ್ಥಿಕ ಸಂಕಷ್ಟದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ರಾಜ್ಯ ಸರ್ಕಾರ ಮುದ್ರಾಂಕ ಶುಲ್ಕ, ವಾಹನ ನೋಂದಣಿ ಶುಲ್ಕ, ನಂದಿನಿ ಹಾಲಿನ ಬೆಲೆ, ಬಸ್ ಪ್ರಯಾಣ ದರ, ಮದ್ಯದ ಬೆಲೆ, ವಿದ್ಯುತ್ ಶುಲ್ಕ, ವ್ಯಾಸಂಗ ಶುಲ್ಕ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು…

Read More

ಕುಶಾಲನಗರ ಏ.5 NEWS DESK : ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ‌ ಒದಗಿಸಲು ನಮ್ಮ ತಂಡ ವಿದ್ಯಾರ್ಥಿ ನ್ಯಾಯ ಜಾತ್ರೆ ಎಂಬ ಆಂದೋಲನ ಆರಂಭಿಸಿದೆ ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಪ್ರಧಾನ‌ ಕಾರ್ಯದರ್ಶಿ ಅನ್ವಿತ್‌ ಕಟೀಲ್ ಹೇಳಿದರು.ಪಟ್ಟಣದ ಹಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ನ್ಯಾಯ ಯಾತ್ರೆ ಎಂಬ ಆಂದೋಲನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರ ಹಾಗೂ ರಕ್ಷಣೆಗಾಗಿ ಕರ್ನಾಟಕ ವಿದ್ಯಾರ್ಥಿ ಹಿತ ಮಸೂದೆ ಜಾರಿಗೆ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಬದಲಾವಣೆ, ಸಮರ್ಪಕ ವಿದ್ಯಾರ್ಥಿ ವೇತನ ವಿತರಣೆ, ಹಾಸ್ಟೆಲ್ ವ್ಯವಸ್ಥೆಯ ಸುಧಾರಣೆ, ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗಾವಕಾಶಗಳ ಹೆಚ್ಚಳ,ಡ್ರಗ್ಸ್ ಮತ್ತು ರ್ಯಾಗಿಂಗ್ ಪಿಡುಗು ನಿರ್ಮೂಲನೆ, ವಿದ್ಯಾರ್ಥಿ ನಿಯರ ಸುರಕ್ಷತೆ,ಸರ್ಕಾರಿ ವಿದ್ಯಾಸಂಸ್ಥೆಗಳ ಬಲವರ್ಧನೆ ಹಾಗೂ ಪೇಪರ್ ಲೀಕ್ ತಡೆಗಟ್ಟುವಿಕೆ ಇನ್ನಿತರ ಪ್ರಮುಖ ವಿಷಯಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕಾಗಿ ಮನವಿ…

Read More

ಮಡಿಕೇರಿ ಏ.5 NEWS DESK : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿನಾಕಾರಣ ಎಫ್‍ಐಆರ್ ದಾಖಲಿಸಿ ಮಾನಸಿಕ ಕಿರುಕುಳ ನೀಡಿದ ಪರಿಣಾಮ ಅಮಾಯಕ ಯುವಕ ವಿನಯ್ ಸಾವನ್ನಪ್ಪಿದ್ದಾರೆ. ಇದು ವಿಷಾದನೀಯ ಮತ್ತು ಖಂಡನೀಯ. ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಹಿಂದೂ ಮುಖಂಡ ಕುಟ್ಟಪ್ಪ ಹಾಗೂ ಡಿವೈಎಸ್‍ಪಿ ಗಣಪತಿ ಸಾವನ್ನಪ್ಪಿದ್ದರು. ಇದೀಗ ಬಿಜೆಪಿ ಕಾರ್ಯಕರ್ತ ವಿನಯ್ ಸಾವಿಗೆ ಶರಣಾಗಿದ್ದಾರೆ, ಈ ಬೆಳವಣಿಗೆಗಳಿಗೆ ಕಾಂಗ್ರೆಸ್ ಸರ್ಕಾರದ ದುರಾಡಳಿತವೇ ಕಾರಣ ಎಂದು ಆರೋಪಿಸಿದ್ದಾರೆ. ವಿನಯ್ ಕುಟುಂಬಕ್ಕೆ ನ್ಯಾಯ ಸಿಗಬೇಕಾದರೆ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು, ರಾಜ್ಯದ ತನಿಖಾ ಸಂಸ್ಥೆಗಳಿಂದ ನ್ಯಾಯ ಸಿಗುವ ವಿಶ್ವಾವಿಲ್ಲ. ಕೊಡಗು ಜಿಲ್ಲೆಯಲ್ಲಿ ದ್ವೇಷದ ರಾಜಕಾರಣ ಚಿಗುರೊಡೆದಿರುವುದು ಮತ್ತು ರಾಜಕೀಯ ಪ್ರೇರಿತ ಕೇಸ್ ದಾಖಲಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿನಯ್…

Read More

ಮಡಿಕೇರಿ ಏ.5 NEWS DESK : ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 118ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ವಿರಾಜಪೇಟೆಯ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ದಿವಂಗತ ಮಾಜಿ ಉಪ ಪ್ರಧಾನಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಶಾಸಕರು, ಡಾ.ಜಗಜೀವನ್ ರಾಮ್ ರವರು ಬಡವರ, ಹಿಂದುಳಿದ ವರ್ಗದವರ ಹಾಗೂ ದಲಿತರ ಕಲ್ಯಾಣಕ್ಕಾಗಿ ಹೋರಾಡಿದ ಒಬ್ಬ ರಾಷ್ಟ್ರ ನಾಯಕ. ಸ್ವಾತಂತ್ರ ಹೋರಾಟದಲ್ಲೂ ಪ್ರಮುಖ ಪಾತ್ರ ವಹಿಸಿದ್ದ ಇವರು, ದೇಶದಲ್ಲಿ ಹಸಿರು ಕ್ರಾಂತಿ ತರುವ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣವಾಗಬೇಕೆಂದು ಹೋರಾಡಿದ ಮುತ್ಸದಿ ರಾಜಕಾರಣಿ. ಹಲವಾರು ಕ್ರಾಂತಿಕಾರಿ ಯೋಜನೆಗಳೊಂದಿಗೆ ಸಮಾಜಮುಖಿಯಾಗಿ ಕೆಲಸ ಮಾಡಿದ ಇವರು ನಮ್ಮೆಲ್ಲರಿಗೂ ಆದರ್ಶಪ್ರಾಯರು ಎಂದು ಬಣ್ಣಿಸಿದರು.  ಈ ಸಂದರ್ಭ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ,  ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ವಿರಾಜಪೇಟೆ ಪುರಸಭೆ ಅಧ್ಯಕ್ಷೆ ದೇಚಮ್ಮ…

Read More

ಮಡಿಕೇರಿ ಏ.5 NEWS DESK : ಮಕ್ಕಳ ಪೋಷಣೆ ಮತ್ತು ರಕ್ಷಣೆ(ಬಾಲ ನ್ಯಾಯ ಕಾಯ್ದೆ) ಸಂಬಂಧಿಸಿದಂತೆ ಮಾಹಿತಿ ಶಿಕ್ಷಣ, ಮಾರ್ಗದರ್ಶನದ ಮೂಲಕ ಹೆಚ್ಚಿನ ಜಾಗೃತಿ ಮೂಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಹಾಡಿಗಳಲ್ಲಿ, ಲೈನ್ ಮನೆಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಹೆಚ್ಚಿನ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು. ಮಕ್ಕಳ ರಕ್ಷಣೆ ಮತ್ತು ಪೋಷಣೆಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಎಲ್ಲೆಡೆ ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಸಲಹೆ ಮಾಡಿದರು. ಬಾಲನ್ಯಾಯ ಕಾಯ್ದೆಯ ವಿಶೇಷ ಪಾಲನೆಯಡಿ 18 ವರ್ಷದೊಳಗಿನ ಮಕ್ಕಳ ವಿಶೇಷ ಪಾಲನೆ ಯೋಜನೆ ಜಾರಿಗೆ ಬಂದಿದ್ದು, ತಂದೆ ತಾಯಂದಿರು ಎಚ್‍ಐವಿ ರೋಗಕ್ಕೆ ತುತ್ತಾಗಿ ಮರಣ ಹೊಂದಿದ್ದಲ್ಲಿ ಅಥವಾ ಮಕ್ಕಳನ್ನು ನೋಡಿಕೊಳ್ಳಲು ಅಸಕ್ತರಾಗಿದ್ದರೆ ಅಂತಹ ಮಕ್ಕಳ ಪಾಲನೆ ಮತ್ತು ಪೋಷಣೆ…

Read More

ನಾಪೋಕ್ಲು ಏ.5 NEWS DESK : ಇಂದಿರಾ ನಗರದಲ್ಲಿ ಶಾಸಕರ ಅನುದಾನದಿಂದ ಬಿಡುಗಡೆಯಾದ 20 ಲಕ್ಷ ರೂ.ನ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ದೊರೆಯಿತು. ಬೇತು ಮುಖ್ಯ ರಸ್ತೆಯಿಂದ ಇಂದಿರಾನಗರಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಇಂದಿರಾನಗರದಲ್ಲಿ 20 ಲಕ್ಷ ರೂ.ಶಾಸಕರ ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ರಸ್ತೆ ನಿರ್ಮಾಣದಿಂದ ಸ್ಥಳೀಯ ಬಹಳಷ್ಟು ಸಮಸ್ಯೆ ಪರಿಹಾರವಾಗಿ ಪ್ರಯೋಜನವಾಗಲಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಎ.ಇಸ್ಮಾಯಿಲ್ ಮಾತನಾಡಿ, ಇಂದಿರಾ ನಗರದಲ್ಲಿ 150-200 ಮನೆಗಳಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾತರು ವಾಸಿಸುತ್ತಿರುವುದನ್ನು ಮನಗಂಡು ಶಾಸಕರ ಮುತುವರ್ಜಿಯಿಂದ ಕಾಂಕ್ರಿಟ್ ರಸ್ತೆ ನಿರ್ಮಾಣವಾಗಲಿದ್ದು, ನಾಗರಿಕರಿಗೆ ಪ್ರಯೋಜನವಾಗಲಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಶಾಸಕ ಎ.ಎಸ್.ಪೆÇನ್ನಣ್ಣ ಉದ್ಘಾಟಿಸಲಿದ್ದಾರೆ ಎಂದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕಂಗಂಡ ಶಶಿ ಮಂದಣ್ಣ, ಕಾಂಗ್ರೆಸ್ ವಲಯ ಅಧ್ಯಕ್ಷ ಹಾಗೂ…

Read More