ಲೇಖಕ: admin

ನಾಪೋಕ್ಲು ಏ.5 NEWS DESK : ಇಂದಿರಾ ನಗರದ ವಿವೇಕಾನಂದ ಸಂಘ ಹಾಗೂ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಎಂ.ಪಿ.ಹರಿದಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿರಾನಗರದ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ಕೆ.ಬಿ.ಸುದೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ.ಸುನಿಲ್, ಉಪಾಧ್ಯಕ್ಷರಾಗಿ ಯು.ಕೆ.ಶಶಿ, ಖಜಾಂಚಿಯಾಗಿ ವಿನಿಲ್ ಪಪ್ಪು, ಸಹಕಾರ್ಯದರ್ಶಿಯಾಗಿ ಕೆ.ಎಮ್.ಸಜಿತ್ (ಅನಿಲ್), ಗೌರವಾಧ್ಯಕ್ಷರಾಗಿ ಡಿ.ಪಿ.ರೇಣುಕೇಶ್ ಸಮಿತಿ ಸದಸ್ಯರಾಗಿ ಕೆ.ಬಿ.ಸುಧೀಶ್ , ಕೆ.ಟಿ.ರೋಷನ್, ರವಿ, ವಿಕ್ರಂ, ಕಾರ್ತಿಕ್, ಪ್ರಕಾಶ್, ವಿನಾಯಕ ಟಿ.ಎಂ.ಗಣೇಶ್, ಸಂದೇಶ್, ಜಲೇಂದ್ರ ಆಯ್ಕೆಯಾದರು. ವರದಿ : ದುಗ್ಗಳ ಸದಾನಂದ.

Read More

ವಿರಾಜಪೇಟೆ ಏ.5 NEWSDESK : ವಿರಾಜಪೇಟೆಯ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಜ್ಞಾನಗಂಗಾ ಭವನ’ದಲ್ಲಿ ಏ.6 ರಿಂದ 8 ರವರೆಗೆ ಚಿಣ್ಣರ ಬೇಸಿಗೆ ಸಂಭ್ರಮ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ‘ಜ್ಞಾನಗಂಗಾ ಭವನ’ ಸೇವಾ ಕೇಂದ್ರದ ಮುಖ್ಯ ಸಂಚಾಲಕಿ ಬಿ.ಕೆ.ಕೋಮಲ ತಿಳಿಸಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಶಿಬಿರದಲ್ಲಿ 8 ರಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬುದಾಗಿದೆ.  ಶಿಬಿರವು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ವ್ಯಾಯಾಮ, ದ್ಯಾನ, ಸ್ವಚ್ಚ ಮನಸ್ಸು, ಸ್ವಚ್ಛ ಜೀವನದಿಂದ ಸ್ವಚ್ಚ ಭಾರತ, ಗೇಮ್ಸ್, ವ್ಯಕ್ತಿತ್ವ ವಿಕಸನ, ಆಲೋಚನೆಯ ನೆಲೆ, ಏಕಾಗ್ರತೆಯ ಕಲೆ, ಭಯದ ನಿವಾರಣೆ, ಧ್ಯಾನದ ಮಹತ್ವಿಕೆ, ಕ್ರಿಯೆಯಲ್ಲಿ ಆಲೋಚನೆಗಳು, ಮೌಲ್ಯಗಳು, ಗುಂಪು ಚಟುವಟಿಕೆಗಳು, ಒಳಾಂಗಣ, ಹೊರಾಂಗಣ ಆಟೋಟಗಳು ಸೇರಿದಂತೆ ಇತರ ಚಟುವಟಿಕೆಗಳು ನಡೆಯಲಿದೆ. ಆಸಕ್ತ ಮಕ್ಕಳು ನೋಂದಾವಣೆಗಾಗಿ 8105419822 ಸಂಖ್ಯೆಗೆ ಸಂಪರ್ಕಿಸುವಂತೆ ಕೋರಿದ್ದಾರೆ.

Read More

ಮೈದಾನ 1 :: ಮುಕ್ಕಾಟಿರ (ಬೇತ್ರಿ) ಮತ್ತು ಚೌರೀರ ತಂಡಗಳ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ಚೌರೀರ ತಂಡ ಜಯ ಸಾಧಿಸಿತು. ಚೌರೀರ ತಂಡದ ಪರ ಪ್ರತಾಪ್ ಅಚ್ಚಯ್ಯ ಹ್ಯಾಟ್ರೀಕ್ ಗೋಲು ದಾಖಲಿಸಿದದರೆ, ಪೆಮ್ಮಯ್ಯ 1 ಗೋಲು ಬಾರಿಸಿದರು. ಮುಕ್ಕಾಟಿರ ಉತ್ತಮ್ ಬೋಪಣ್ಣ 1 ಗೋಲು ದಾಖಲಿಸಿ, ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಶಿವಾಚಾಳಿಯಂಡ ಮತ್ತು ಚೆರಿಯಪಂಡ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ತಲಾ 1 ಗೋಲು ದಾಖಲಿಸುವ ಮೂಲಕ ಡ್ರಾ ಆದ ಕಾರಣ ಟೈ ಬ್ರೇಕರ್‍ನಲ್ಲಿ ಚೆರಿಯಪಂಡ ತಂಡ 3 ಗೋಲು ದಾಖಲಿಸಿ ಗೆಲುವಿನ ನಗೆ ಬೀರಿತು. ಚೆರಿಯಪಂಡ ತಂಡದ ಪರ ದೀಪಕ್ ಸೋಮಯ್ಯ 1, ಟೈ ಬ್ರೇಕರ್‍ನಲ್ಲಿ ಜಾಲಿ ಪೊನ್ನಣ್ಣ, ಗಗನ್ ನಂಜಪ್ಪ ಹಾಗೂ ದೀಪಕ್ ಸೋಮಯ್ಯ ತಲಾ 1 ಗೋಲು ದಾಖಲಿಸಿದರು. ಶಿವಾಚಾಳಿಯಂಡ ಪರ ವಿಜು ಪೂಣಚ್ಚ 1 ಗೋಲು ಬಾರಿಸಿದರು. ಶಿವಾಚಾಳಿಯಂಡ ಯಶವಂತ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.…

Read More

ಮಡಿಕೇರಿ ಏ.5 NEWS DESK : ಕೊಡಗು ಜಿಲ್ಲಾ ಕುಲಾಲ(ಕುಂಬಾರ) ಸಂಘದ ವತಿಯಿಂದ ಜಿಲ್ಲಾ ಯುವ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕ ಸಹಯೋಗದೊಂದಿಗೆ ಏ.26 ಮತ್ತು 27 ರಂದು ಮಡಿಕೇರಿಯಲ್ಲಿ ಸಮಾಜ ಬಾಂಧವರ ಸಮ್ಮಿಲನ ಮತ್ತು ಕ್ರೀಡೋತ್ಸವ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಕುಶಾಲಪ್ಪ ಮೂಲ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಬಾರ ಬಾಂಧವರ ಸಂಘಟನೆಗಾಗಿ ಪ್ರಪ್ರಥಮ ಬಾರಿಗೆ ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, 1000ಕ್ಕೂ ಅಧಿಕ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು. ಏ.26 ರಂದು ನಗರದ ಮ್ಯಾನ್ಸ್ ಕಾಂಪೌಡ್‍ನ ಕೆಳಗಿನ ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ನಡೆಯುವ ಕ್ರೀಡೋತ್ಸವಕ್ಕೆ ಗಣ್ಯರು ಚಾಲನೆ ನೀಡಲಿದ್ದಾರೆ. ಏ.27ರಂದು ಸಂಜೆ 4 ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷ ಮುತ್ತಮ್ಮ ಕೋಟಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್‍ಗೌಡ, ಎಂಎಲ್‍ಸಿ ಸುಜಾ ಕುಶಾಲಪ್ಪ, ಮಾಜಿ ಸ್ಪೀಕರ್…

Read More

ಮಡಿಕೇರಿ NEWS DESK ಏ.4 : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೂ ಮೊದಲು ವಿನಯ್ ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿರುವ ಕಾಂಗ್ರೆಸ್ ವಕ್ತಾರನ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತಕ್ಷಣ ಬಂಧಿಸಬೇಕೆದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅತ್ಯಂತ ಸೌಮ್ಯ ವ್ಯಕ್ತಿತ್ವದ ವಿನಯ್ ಅವರ ಸಾವು ಬೇಸರ ಮೂಡಿಸಿದೆ. ಇವರ ಸಾವಿನ ಹಿಂದಿನ ಬೆಳವಣಿಗೆಗಳು ಖಂಡನೀಯ. ಸಾಮಾಜಿಕ ಜಾಲತಾಣದಲ್ಲಿ ವಿರಾಜಪೇಟೆ ಶಾಸಕರನ್ನು ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ ವಿನಾಕಾರಣ ಎಫ್‌ಐಆರ್ ದಾಖಲಿಸಲಾಗಿತ್ತು. ಎಫ್‌ಐಆರ್ ಗೆ ನ್ಯಾಯಾಲಯದಿಂದ ತಡೆ ದೊರೆತ ನಂತರವೂ ಮಾನಸಿಕ ಕಿರುಕುಳ ನೀಡಿದ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಾವಿಗೂ ಮುನ್ನ ವಿನಯ್ ನೀಡಿರುವ ಹೇಳಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ವಿನಯ್ ಅವರು ಕಾಂಗ್ರೆಸ್ ವಕ್ತಾರನ ಹೆಸರನ್ನು ಉಲ್ಲೇಖಿಸಿರುವುದರಿಂದ ಅವರನ್ನು ತಕ್ಷಣ ಬಂಧನಕ್ಕೊಳಪಡಿಸಿ ತನಿಖೆ ನಡೆಸಬೇಕು. ಇವರೊಂದಿಗೆ ಇನ್ನೂ ಕೆಲವರ ಹೆಸರುಗಳನ್ನು…

Read More

ಮಡಿಕೇರಿ ಏ.4 NEWS DESK : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ದಿಢೀರ್ ರಸ್ತೆ ತಡೆ ಪ್ರತಿಭಟನೆ ನಡೆಸಿತು.  ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿನಯ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೊದಲು ನೀಡಿರುವ ಹೇಳಿಕೆಯಲ್ಲಿ ಉಲ್ಲೇಖಿಸಿರುವ ಕಾಂಗ್ರೆಸ್ ಪಕ್ಷದ ವಕ್ತಾರನನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು.  ಈ ಸಂದರ್ಭ ಮಾತನಾಡಿದ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ವಿನಯ್ ವಿರುದ್ಧ ದಾಖಲಾಗಿದ್ದ ಎಫ್‍ಐಆರ್‍ಗೆ ನ್ಯಾಯಾಲಯದಿಂದ ತಡೆ ದೊರೆತ್ತಿದ್ದರು ಪೊಲೀಸರು ಬೇರೆ ಸೆಕ್ಷನ್ ನಡಿ ಪ್ರಕರಣ ದಾಖಲಿಸಲು ಪ್ರಯತ್ನಿಸಿದ್ದಾರೆ. ಅಶುಚಿತ್ವದಿಂದ ಕೂಡಿದ್ದ ನಾಪೋಕ್ಲು ಸಾರ್ವಜನಿಕ ಶೌಚಾಲಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿನಯ್ ಅವರು ವಿಚಾರ ಹಂಚಿಕೊಂಡಿದ್ದೇ ದೊಡ್ಡ ತಪ್ಪು ಎಂದು ಪ್ರತಿಬಿಂಬಿಸಿ ಎಫ್‍ಐಆರ್ ದಾಖಲಿಸಲಾಗಿದೆ. ಶೌಚಾಲಯವನ್ನು ಶುಚಿಗೊಳಿಸಲು…

Read More

ಮಡಿಕೇರಿ NEWS DESK ಏ.4 : ನಗರದ ಹೊಸಬಡಾವಣೆಯ ಸೆಂಟ್ ಮೇರಿ ಮರಿಯ ಮಾಂಟೆಸ್ಸರಿ ಶಿಕ್ಷಕ ತರಬೇತಿ ಸಂಸ್ಥೆಯ ಫ್ಯೂಚರ್ ಸ್ಟಾರ್ ಪ್ರಿ-ಸ್ಕೂಲ್ ಮತ್ತು ನರ್ಸರಿಯಲ್ಲಿ ಏ.15 ರಿಂದ ಮೇ 7 ರವರೆಗೆ ಮಕ್ಕಳ ಬೇಸಿಗೆ ಶಿಬಿರ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯಲಿರುವ ಶಿಬಿರದಲ್ಲಿ ಕಲೆ, ಕರಕುಶಲತೆ, ಮನೋರಂಜನ ಆಟಗಳು, ನೃತ್ಯ, ಚಿತ್ರಕಲೆ ಹಾಗೂ ಒಂದು ದಿನದ ಪ್ರವಾಸವನ್ನು ಕೈಗೊಳ್ಳಲಾಗುವುದು. ಆಸಕ್ತ ವಿದ್ಯಾರ್ಥಿಗಳು ಏ.15ರ ಒಳಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ನೋಂದಾವಣಿಗಾಗಿ 9591945787 ಸಂಪರ್ಕಿಸಬಹುದಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕಿ ಕೆ.ಎಸ್.ರೆಹಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿರಾಜಪೇಟೆ ಏ.4 NEWS DESK : ವಿರಾಜಪೇಟೆ ಗ್ರಾಮಾಂತರ ಠಾಣೆಯ ಪೊಲೀಸ್ ಡಿ.ರಾಜಾ ದೊರೈಪಾಂಡಿಯನ್ ಅವರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದು, ಬೆಂಗಳೂರಿನ ಕೋರಮಂಗಲದ ಪೋಲೀಸ್ ಪೆರೆಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಮುಖ್ಯಮಂತ್ರಿ ಪೊಲೀಸ್ ಪದಕ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಕ ಪ್ರದಾನ ಮಾಡಿದರು. ರಾಜ್ಯದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ನೀಡಲಾಗುತ್ತಿದ್ದು ಈ ಬಾರಿ 2022-23ನೇ ಸಾಲಿನ ಅತ್ಯುತ್ತಮ ಸೇವೆಗಾಗಿ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಡಿ ರಾಜಾ ಅವರಿಗೆ ವಿಶೇಷ ಕರ್ತವ್ಯ ನಿಮಿತ್ತ ಈ ಪ್ರಶಸ್ತಿ ಸಂದಿದೆ. ಉತ್ತಮ ಕರ್ತವ್ಯಕ್ಕಾಗಿ ಹಿರಿಯ ಅಧಿಕಾರಿಗಳಿಂದ ಹಲವು ಬಾರಿ ಪ್ರಶಂಷನೆಗೊಳಗಾಗಿದ್ದು, 2022ನೇ ಸಾಲಿನಲ್ಲಿ ಉತ್ತಮ ಕರ್ತವ್ಯಕ್ಕಾಗಿ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮದುರೈ ಮೂಲದ ದೊರೈಪಾಂಡಿಯನ್ ಮತ್ತು ಪಂಚವರ್ಣಂ ಅವರ ಮಗ ಡಿ ರಾಜಾ ಅವರು ಟಾಟಾ ಕಾಫಿ ಸಂಸ್ಥೆ ಪಾಲಿಬೆಟ್ಟದ ಎಮ್ಮೆಗುಂಡಿ ಕಾಫಿ ತೋಟದಲ್ಲಿ ಹುಟ್ಟಿ ಬೆಳೆದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಮ್ಮೆಗುಂಡಿಯಲ್ಲಿ ಪ್ರಾಥಮಿಕ ಶಿಕ್ಷಣ,…

Read More

ಕುಶಾಲನಗರ NEWS DESK : ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ದಿನಗಳ ಸ್ಕೌಟ್ಸ್, ಗೈಡ್ಸ್ ನ ಮಕ್ಕಳ ಬೇಸಿಗೆ ಶಿಬಿರಕ್ಕೆ  ಚಾಲನೆ ನೀಡಲಾಯಿತು. ಶಾಲಾ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿದ ಸೋಮವಾರಪೇಟೆ ಉಪ ವಿಭಾಗದ ಡಿವೈಎಪ್ಸಿ ಆರ್.ವಿ.ಗಂಗಾಧರಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಉತ್ತಮ ವ್ಯಕ್ತಿತ್ವ ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಲು ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು. ಸಮವಸ್ತ್ರಧಾರಿಗಳಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನ ಇದೆ. ಜೊತೆಗೆ ಜವಾಬ್ದಾರಿ ಕೂಡ ಜಾಸ್ತಿ ಇರುತ್ತದೆ. ಜನರು ಸಮವಸ್ತ್ರಧಾರಿಗಳನ್ನು ಗಮನಿಸುತ್ತಾರೆ. ಆದ್ದರಿಂದ ತಮ್ಮ ನಡವಳಿಕೆ,ರೀತಿ,ನೀತಿ ಜೊತೆಗೆ ಉತ್ತಮ ವರ್ತನೆಯನ್ನು ತೋರಬೇಕು ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಮವಸ್ತ್ರ ಧರಿಸಿರುವ ವಿದ್ಯಾರ್ಥಿಗಳು ಮುಂದೆ ಪೊಲೀಸ್, ಸೈನಿಕರ ಸಮವಸ್ತ್ರ ಧರಿಸುವಂತಾಗಿ ದೇಶ ಸೇವೆಯಲ್ಲಿ…

Read More

ಮಡಿಕೇರಿ ಏ.4 NEWS DESK : ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ತೆರಿಗೆ ಹೊರೆಯನ್ನು ವಿರೋಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ಏ.5 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೆಳಿಗ್ಗೆ 10.30ಗಂಟೆಗೆ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಲಾಗುವುದು ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ನಿರಂತರವಾಗಿ ತೆರಿಗೆಯನ್ನು ಏರಿಕೆ ಮಾಡುತ್ತಿದೆ ಮತ್ತು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ದುಬಾರಿಗೊಳಿಸುತ್ತಿದೆ. ರಾಜ್ಯದ ಜನರು ನೆಮ್ಮದಿ ಕಳೆದುಕೊಂಡಿದ್ದು, ಆರ್ಥಿಕ ಸಂಕಷ್ಟದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ರಾಜ್ಯ ಸರ್ಕಾರ ಮುದ್ರಾಂಕ ಶುಲ್ಕ, ವಾಹನ ನೋಂದಣಿ ಶುಲ್ಕ, ನಂದಿನಿ ಹಾಲಿನ ಬೆಲೆ, ಬಸ್ ಪ್ರಯಾಣ ದರ, ಮದ್ಯದ ಬೆಲೆ, ವಿದ್ಯುತ್ ಶುಲ್ಕ, ವ್ಯಾಸಂಗ ಶುಲ್ಕ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದೆ.…

Read More