ಮಡಿಕೇರಿ ಏ.30 NEWS DESK : ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಮೇ11 ರಿಂದ ಆರಂಭವಾಗಲಿರುವ ಅತಿರುದ್ರ ಜಪಯಜ್ಞ ಕೈಂಕರ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಪಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ರಮೇಶ್ ಹೊಳ್ಳ ತಿಳಿಸಿದ್ದಾರೆ. ಮೇ 21ರಂದು ಜಪಯಜ್ಞ ಸಾಂಗತಗೊಳ್ಳಲಿರುವ ಕಣಿವೆಯ ಶ್ರೀ ರಾಮಲಿಂಗೇಶ್ವರ ಸನ್ನಿಧಿಗೆ ಕೊಡಗು ಜಪಯಜ್ಞ ಸಮಿತಿಯ ನಿಯೋಗದೊಂದಿಗೆ ತೆರಳಿದ ಅವರು ಶ್ರೀ ಚಂಡಿಕಾ ಹೋಮದ ಸಿದ್ಧತೆಗಳ ಕುರಿತು ಪರಿಶೀಲಿಸಿದರು. ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಮೇ 21 ರಂದು ಕಣಿವೆಗೆ ಆಗಮಿಸುವರು. ಅಂದು ಋತ್ವಿಜರಿಂದ ಎರಡು ಆವರ್ತ ಶ್ರೀ ರುದ್ರ ಜಪ ನಡೆಯುವುದು ಎಂದರು. ಮೇ 11 ರಂದು ಬೆಳಿಗ್ಗೆ 6.30 ಗಂಟೆಗೆ ಜಪಯಜ್ಞ ಆರಂಭಗೊಳ್ಳಲಿದ್ದು, ಅಂದು ಅರುಣೋದಯದ ಸಮಯಕ್ಕೆ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ ನಡೆಯಲಿದೆ. ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ.ಪ್ರಶಾಂತ್ ಆಚಾರ್ಯರು ಇದರ ನೇತೃತ್ವವನ್ನು ವಹಿಸಲಿದ್ದಾರೆ ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಹಿಂದೆಂದೂ ನಡೆಯದ ಇಂಥಹ ಜಪಯಜ್ಞದ…
ಲೇಖಕ: admin
ಸುಂಟಿಕೊಪ್ಪ ಏ.30 NEWS DESK : ಐಗೂರು ಗ್ರಾಮದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಮುತ್ತಪ್ಪ ದೇವರ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಬೆಳಿಗ್ಗೆ ಗಣಪತಿ ಹೋಮ ನಡೆಯಿತು. ಸಂಜೆ ಮಲಯರಕಲ್ ಮತ್ತು ಮುತ್ತಪ್ಪನ್ ವೆಳ್ಳಾಟಂ, ಗುಳಿಗಪ್ಪನ ದೇವಾಲಯದಿಂದ ಚಂಡೆ ಮೇಳದೊಂದಿಗೆ ದೈವ ನರ್ತನ ನಡೆಯಿತು. ನಂತರ ತಿರುವಪ್ಪನ್ ವೆಳ್ಳಾಟಂ ಮತ್ತು ಕಳಸ ಆಗಮನದ ನಂತರ ರಾತ್ರಿ ಅನ್ನದಾನ ನೆರವೇರಿತು. ಮರುದಿನ ಮುಂಜಾನೆಯಿಂದಲೇ ಗುಳಿಗನ ಕೋಲ, ಮುತ್ತಪ್ಪ ದೇವರ ಕೋಲ, ಕುಟ್ಟಿಚಾತನ್ ಕೋಲ, ಪೋದಿ ಕೋಲ, ಗುರು ಶ್ರೀ ತರ್ಪಣ ನಡೆಯಿತು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಸಮಿತಿ ಅಧ್ಯಕ್ಷರು ಸದಸ್ಯರು ಹಾಜರಿದ್ದರು.
ಮಡಿಕೇರಿ ಏ.30 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಫಾಕ್ ಪ್ರಚೋದಿತ ಭಯೋತ್ಪಾದಕ ದಾಳಿಯನ್ನು ಉಗ್ರವಾಗಿ ಖಂಡಿಸಿ, ಇದಕ್ಕೆ ದಿಟ್ಟ ಉತ್ತರವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಮೇ1 ರಂದು ಸಂಜೆ ವಿವಿಧ ಸಂಘಟನೆಗಳಿಂದ ನಗರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಕೋದಂಡ ರಾಮೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್, ನ್ಯಾಷನಲ್ ಮೆಡಿಕೋಸ್ ಅಸೊಸಿಯೇಷನ್, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ನೀಮಾ ಸೇರಿದಂತೆ ವಿವಿಧ ಸಂಘಟನೆಗಳು ಒಗ್ಗೂಡಿ ಮೆರವಣಿಗೆಯನ್ನು ಆಯೋಜಿಸುತ್ತಿರುವುದಾಗಿ ತಿಳಿಸಿದರು. ಜಾತಿ, ಮತ, ಧರ್ಮಗಳನ್ನು ಮೀರಿ ನಾವೆಲ್ಲರೂ ಭಾರತೀಯರು ಎನ್ನುವ ಒಂದೇ ಘೋಷವಾಕ್ಯದೊಂದಿಗೆ ಸಂಜೆ 6 ಗಂಟೆಗೆ ನಗರದ ಇಂದಿರಾಗಾಂಧಿ ವೃತ್ತದಿಂದ ಕ್ಯಾಂಡಲ್ ಲೈಟ್ ಮೆರವಣಿಗೆ ಆರಂಭಗೊಳ್ಳಲಿದೆ. ಮೆರವಣಿಗೆ ನಗರದ ಮುಖ್ಯ ಬೀದಿಗಳಿಗಾಗಿ ಹಾದು, ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ. ಈ ಸಂದರ್ಭ ಮಾನವ ಸರಪಳಿಯನ್ನು ರಚಿಸಿ ಭಯೋತ್ಪಾದನೆಯ ವಿರುದ್ಧ ನಾವೆಲ್ಲರು ಸಂಘಟಿತರಾಗಿದ್ದೇವೆ ಎನ್ನುವುದನ್ನು ಸಾರಲಾಗುತ್ತದೆ ಎಂದು ಹೇಳಿದರು. ಪಾಕಿಸ್ತಾನಿ ಪ್ರಚೋದಿತ ಭಯೋತ್ಪಾದಕತೆಯನ್ನು ಪ್ರತಿಯೊಬ್ಬರು ಖಂಡಿಸಬೇಕಾಗಿದೆ. ಏಳೆಂಟು…
ಸೋಮವಾರಪೇಟೆ ಏ.30 NEWS DESK : ಬಸವಣ್ಣನವರ ತತ್ವ, ಆದರ್ಶಗಳು ಪಾಲನೆಯಾಗಲಿ, ಜಾತ್ಯಾತೀತ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು. ಸೋಮವಾರಪೇಟೆ ಬಸವ ಬಳಗ, ತಾಲ್ಲೂಕು ಆಡಳಿತ, ಹಿರಿಯ ನಾಗರಿಕರ ಟ್ರಸ್ಟ್, ಸಾಹಿತ್ಯ ಪರಿಷತ್ತು, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಹಾಗೂ ಪಟ್ಟಣದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಬಸವೇಶ್ವರ ವೃತ್ತದಲ್ಲಿ ಆಯೋಜಿಸಲಾಗಿದ್ದ ಬಸವೇಶ್ವರರ 892 ನೇ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. 12ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತ್ಯಾತೀತ ಸಮಾಜ ನಿರ್ಮಾಣದ ಸಂಕಲ್ಪ ತೊಟ್ಟಿದ್ದರು. ಇಂದು ನಾವು ಅವರ ಜಯಂತಿ ಆಚರಿಸುವುದು ಮಾತ್ರವಲ್ಲ ಅವರ ತತ್ವ, ಆದರ್ಶಗಳನ್ನು ಪಾಲಿಸಬೇಕು, ಜಾತ್ಯಾತೀತ ಮನೋಭಾವನೆ ರೂಡಿಸಿಕೊಳ್ಳಬೇಕು ಎಂದರು. ವಿಶ್ವದಲ್ಲಿ ಮೊದಲ ಭಾರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯ ಹಾಕಿದವರು ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಇರುವ ಏಕೈಕ ಬಸವೇಶ್ವರರ ಪ್ರತಿಮೆ ಇದ್ದಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದರು. ರಸ್ತೆಗೆ ಬಸವೇಶ್ವರರ ನಾಮಕರಣ :: ಬಸವೇಶ್ವರರ ಪ್ರತಿಮೆ ಇರುವ ವೃತ್ತಕ್ಕೆ ಅಧಿಕೃತವಾಗಿ ಬಸವೇಶ್ವರ…
ಮಡಿಕೇರಿ ಏ.30 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮೇ 6 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ ಎಂದು ದೇವಾಲಯದ ಟ್ರಸ್ಟಿ ಜಿ.ಕಿರಣ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6 ಗಂಟೆಗೆ ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. 6.30 ಗಂಟೆಗೆ ಗಣಪತಿ ಹೋಮ, 7.30ಕ್ಕೆ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ ನಡೆಯಲಿದೆ. ಬೆಳಿಗ್ಗೆ 9.20ಕ್ಕೆ ಕಳಶ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ನಡೆಯಲಿದೆ ಎಂದರು. 11.45ಕ್ಕೆ ದೇವಿಯ ರಥೋತ್ಸವ ದೇವಾಲಯದ ಆವರಣದ ಸುತ್ತ ಸಾಗಲಿದೆ. ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಅನ್ನದಾನ, 12.30ಕ್ಕೆ ತಾಯಿಯ ದರ್ಶನ, ಸಂಜೆ 6 ಗಂಟೆಗೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ…
ಮಡಿಕೇರಿ ಏ.30 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ “ಚಳವಳಿ ಮತ್ತು ಸಾಹಿತ್ಯ ಅಂತರ್ ಸಂಬಂಧ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕರ್ನಾಟಕ ಸರ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು, ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ಅಲ್ಲಾರಂಡ ರಂಗಚಾವಡಿ ಸಹಕಾರದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರವನ್ನು ಗಣ್ಯರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ವಿಶೇಷ ಉಪನ್ಯಾಸ ನೀಡಿ, ಕಾಯಕ ಜೀವಿಗಳ ಶ್ರಮಕ್ಕೆ ತಕ್ಕ ಪ್ರತಿಫಲವಿರಲಿಲ್ಲ. ಜಾತಿ ಧರ್ಮದ ಕಾರಣಕ್ಕಾಗಿ ಕೊಲ್ಲುವುದು ಮಹಾಪಾತಕಗಳು ಎಂದು ಶರಣರು ಈ ಹಿಂದೆಯೇ ಹೇಳಿದ್ದಾರೆ ಎಂದರು. ಪಂಪನ “ಮನುಷ್ಯ ಜಾತಿ ತಾನೊಂದೆ ವಲಂ”, ಕನಕದಾಸರ ” ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ?” ಎಂಬ ನುಡಿಗಳನ್ನಾಡುತ್ತಾ, ಅರಿವು ಮತ್ತು ಆಚಾರವನ್ನು ಕುರಿತಂತೆ ಸಮ್ಯಕ್ ಜ್ಞಾನಿಗಳಲ್ಲದವರ ಮುಖ ನೋಡಲಾಗದು, ನಾಮವ ಹೊತ್ತು ತಿರುಗುವ…
ಮಡಿಕೇರಿ ಏ.30 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ನಗರದ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್-ಗೈಡ್ಸ್ ಭವನದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಉಗ್ರರ ದಾಳಿಗೆ ಸಿಲುಕಿ ಹತ್ಯೆಗೀಡಾದ ಅಮಾಯಕರಿಗೆ ಸಂತಾಪ ಸೂಚಿಸಲಾಯಿತು. ಭಯೋತ್ಪಾದಕರು ನಡೆಸಿದ ಅಮಾನುಷ ಕೃತ್ಯವನ್ನು ಸಭೆ ಖಂಡಿಸಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯು ಅವರು ಭಾರತ ದೇಶದಿಂದ ಭಯೋತ್ಪಾದನೆ ಸಂಪೂರ್ಣವಾಗಿ ನಿಮೂರ್ಲನೆಯಾಗಬೇಕು ಮತ್ತು ದೇಶದ ಒಳಿತಿಗಾಗಿ ಸರ್ವರು ಒಗ್ಗಟ್ಟಾಗಿ ಮುನ್ನಡೆಯಬೇಕು ಎಂದು ಕರೆ ನೀಡಿದರು. ಸಭೆಯಲ್ಲಿ ಸಂಸ್ಥೆಯ ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಗೈಡ್ಸ್ ವಿಭಾಗದ ತರಬೇತಿ ಆಯುಕ್ತ ಮೈಥಿಲಿರಾವ್, ಖಜಾಂಚಿ ಟಿ.ಎನ್.ಮುದ್ದಯ್ಯ, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದು, ಭಯೋತ್ಪಾದಕರ…
ಮಡಿಕೇರಿ ಏ.30 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮೇ 12 ರಿಂದ 21ರವರೆಗೆ ಮೂರ್ನಾಡಿನಲ್ಲಿ ಮಕ್ಕಳ ಉಚಿತ “ಚಿನ್ತನೆ – ಚಲನೆ” ಶಿಬಿರ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅವರ ಅಧ್ಯಕ್ಷತೆಯಲ್ಲಿ ಮೂರ್ನಾಡು ಪಂಚಾಯಿತಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ 10 ದಿನಗಳ ಕಾಲ ನಡೆಯುವ ಶಿಬಿರದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಪ್ರತಿದಿನ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಕನ್ನಡದ ಮಹತ್ವವನ್ನು ಹೇಳಿಕೊಡಲಾಗುವುದು. ಕನ್ನಡ ಅಕ್ಷರ ಬರೆಯುವ, ಓದುವ, ಪದಗಳ ಜೋಡಣೆ ಮಾಡುವ ತಿಳುವಳಿಕೆ, ಹಳೆಗನ್ನಡ, ಸಂಸ್ಕೃತಿ, ಸಂಸ್ಕೃತ, ಆಟದ ಜೊತೆಗೆ ಕಲಿಕೆ, ಕವನ ವಾಚನ, ಕಲಿಕೆ, ಸಣ್ಣ ಕಥೆ, ಮಕ್ಕಳ ಕಥೆ, ಕಾದಂಬರಿ ಬರೆಯುವ ಕುರಿತು ತಿಳಿಸಿಕೊಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಜಾನಪದ ಮಹತ್ವ, ಜಾನಪದ ಹಾಡು, ನೃತ್ಯ ಕಲಿಕೆ, ಜಾನಪದ ಕ್ರೀಡೆ, ಸಿನಿಮಾ ಪ್ರಪಂಚಕ್ಕೆ…
ಮಡಿಕೇರಿ ಏ.30 NEWS DESK : ಮಡಿಕೇರಿಯ ಬರಹಗಾರ್ತಿ ಕೆ.ಜಯಲಕ್ಷ್ಮಿ ಅವರು ರಚಿಸಿರುವ ‘ಮತ್ತೆ ವಸಂತ’ ಕಥಾ ಸಂಕಲನಕ್ಕೆ ಮುನಿಗಂಗಮ್ಮ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಮಲ್ಲತಹಳ್ಳಿ ಬಾಲ ಗಂಗಾಧರ ನಗರದ ವಾಸುದೇವ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಹೆಚ್.ತುಕಾರಾಂ ಅವರು ಸಾಹಿತ್ಯ ಕ್ಷೇತ್ರಕ್ಕೆ ಮತ್ತು ಬರಹಗಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಮ್ಮ ತಾಯಿ ದಿ.ಮುನಿಗಂಗಮ್ಮ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡುತ್ತಿದ್ದಾರೆ. ಕೆ.ಜಯಲಕ್ಷ್ಮಿ ಅವರ ‘ಮತ್ತೆ ವಸಂತ’ ಕಥಾ ಸಂಕಲನ 2024 ರಲ್ಲಿ ಪ್ರಕಟಗೊಂಡಿತ್ತು. ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಮೇ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಶಸ್ತಿಯು 5 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಹೊಂದಿರುತ್ತದೆ.
ನಾಪೋಕ್ಲು ಏ.30 NEWS DESK : ಡೆಕ್ಕನ್ ಯೂತ್ ಕ್ಲಬ್ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಆಟದ ಮೈದಾನದಲ್ಲಿ ನಡೆದ ನಾಪೋಕ್ಲು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಫಾತಿಮಾ ಸ್ಟ್ರೈಕರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಅಂತಿಮ ಪಂದ್ಯದಲ್ಲಿ ಕೆ.ಕೆ ಬ್ರದರ್ಸ್ ವಿರುದ್ಧ ಫಾತಿಮಾ ಸ್ಟ್ರೈಕರ್ಸ್ ತಂಡ ಗೆಲುವು ಸಾಧಿಸಿ ಚಾಂಪಿಯನ್ ಪಡೆದುಕೊಂಡರೆ, ಕೆ.ಕೆ.ಬ್ರದರ್ಸ್ ತಂಡ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಮ್ಯಾನ್ ಆಫ್ ದಿ ಮ್ಯಾಚ್ ಆಗಿ ನಾಸಿರ್ ಹೊರಹೊಮ್ಮಿದರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಅಬ್ದುಲ್ ರೆಹಮಾನ್ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವನೆ ಮುಖ್ಯ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಅತಿಥಿಗಳಾಗಿ ಕೆ.ಎ.ಇಸ್ಮಾಯಿಲ್, ಎಂ.ಎ.ಮನ್ಸೂರ್ ಆಲಿ, ಅಬ್ದುಲ್ ಅಜೀಜ್, ರಶೀದ್ ಪಿ.ಎಂ, ಅಬೂಬಕ್ಕರ್ ಎಂ.ಎಂ, ಮಹಮ್ಮದ್ ಅಲಿ ಎಂ.ಎಸ್, ಅಹ್ಮದ್ ಸಿ.ಹೆಚ್, ಅರಫತ್ ಪಿ.ಎಂ, ಆಸಿಫ್ ಆಲಿ ಎಂ.ಎ, ಸಂಶು ಕಾರೆಕ್ಕಾಡು ಇನ್ನಿತರರು ಪಾಲ್ಗೊಂಡಿದ್ದರು. ಸಾನಿದ್ ಸ್ವಾಗತಿಸಿ ವಂದಿಸಿದರು. ವೇದಿಕೆಯಲ್ಲಿದ್ದ…






